Category: Gangolli

  • ನಾಪತ್ತೆಯಾದ ಮೀನುಗಾರ ಪತ್ತೆಗೆ ತುರ್ತು ಕ್ರಮದ ಜೊತೆಗೆ ತುರ್ತು ಪರಿಹಾರದ ವ್ಯವಸ್ಥೆ-ಶಾಸಕ ಗುರುರಾಜ್ ಗಂಟಿಹೊಳೆ

    ಬೈಂದೂರು,ಜುಲೈ 15, 2025: ಗಂಗೊಳ್ಳಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದ ದೋಣಿ ದುರಂತದಲ್ಲಿ ಒರ್ವ ಮೀನುಗಾರ ಅಪಾಯದಿಂದ ಪಾರಾಗಿದ್ದು ಮೂವರು ಮೀನುಗಾರರು ನಾಪತ್ತೆಯಾಗಿರುವ ಮಾಹಿತಿ ತಿಳಿದು ಬಂದಿದೆ. ಕಾಣೆಯಾಗಿರುವ ಮೀನುಗಾರರ ಪತ್ತೆಗೆ ಅಗತ್ಯ ತುರ್ತು ಕ್ರಮಕ್ಕೆ ಈಗಾಗಲೇ ನಿರ್ದೇಶಿಸಲಾಗಿದೆ ಎಂದು ಶಾಸಕ ಗುರುರಾಜ ಗಂಟಿಹೊಳೆ ತಿಳಿಸಿದ್ದಾರೆ.

    ಮೀನುಗಾರ ಕುಟುಂಬಕ್ಕೆ ಮೀನುಗಾರಿಕೆ ಇಲಾಖೆಯ ಸಂಕಷ್ಟ ಪರಿಹಾರ ನಿಧಿಯಡಿ ಅಗತ್ಯ ಪರಿಹಾರ ಒದಗಿಸಲು ಶಾಸಕರಾದ ಯಶ್ ಪಾಲ್ ಸುವರ್ಣ ಸಹಿತ ಜಿಲ್ಲೆಯ ಶಾಸಕರ ಮೂಲಕ ಮೀನುಗಾರಿಕೆ ಇಲಾಖೆ ಸಚಿವರೊಂದಿಗೆ ಮಾತುಕತೆ ನಡೆಸಲಾಗಿದೆ. ಇಲಾಖೆಯಿಂದ ಕುಟುಂಬಕ್ಕೆ ತಲಾ 10 ಲಕ್ಷ ರೂ.ಗಳ ಪರಿಹಾರವನ್ನು ತುರ್ತಾಗಿ ಒದಗಿಸುವ ವ್ಯವಸ್ಥೆ ಆಗಿದೆ.

    ಮಳೆಗಾಲದಲ್ಲಿ ಸಮುದ್ರದ ಅಲೆಗಳ ಅಬ್ಬರವೂ ಜೋರಾಗಿರುತ್ತದೆ. ಹೀಗಾಗಿ ನಾಡದೋಣಿ, ಟ್ರಾಲ್ ದೋಣಿ ಮೀನುಗಾರರು ವಿಶೇಷ ಎಚ್ಚರಿಕೆ ವಹಿಸಬೇಕು ಮತ್ತು ಲೈಫ್ ಜಾಕೇಟ್ ಬಳಸುವುದನ್ನು ಆದಷ್ಟು ಕಡ್ಡಾಯ ಮಾಡಿಕೊಳ್ಳುವುದು ಉತ್ತಮ. ಲೈಫ್ ಜಾಕೇಟ್ ಬಳಸುವುದರಿಂದ ಜೀವ ಹಾನಿ ತಪ್ಪಿಸಲು ಸಾಧ್ಯವಿದೆ ಎಂದು ಶಾಸಕರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

    ಗಂಗೊಳ್ಳಿ ಬಂದರಿನಿಂದ ಮೀನುಗಾರಿಕೆಗೆ ತೆರಳಿದ ದೋಣಿಯು ಇಂದು ಸಮುದ್ರದ ಅಲೆಗೆ ಸಿಲುಕಿ ಮಗುಚಿ ಬಿದ್ದಿರುವ ಸುದ್ದಿ ಗಮನಕ್ಕೆ ಬಂದಿದ್ದು, ಅಧಿಕಾರಿಗಳಿಂದ ಮಾಹಿತಿ ಪಡೆದು ಅಗತ್ಯ ಕ್ರಮ ವಹಿಸಲು ಸೂಚೊಸಲಾಯಿತು.

    ಅವಘಡದಲ್ಲಿ ಒಬ್ಬ ಮೀನುಗಾರ ಸುರಕ್ಷಿತವಾಗಿ ದಡ ಸೇರಿದ್ದು, ಉಳಿದ ಮೂವರ ರಕ್ಷಣೆಗೆ ಮೀನುಗಾರರು ಸೇರಿದಂತೆ ಜಿಲ್ಲಾಡಳಿತ ಧಾವಿಸಿದ್ದು, ಎಲ್ಲರೂ ಸುರಕ್ಷಿತವಾಗಿ ಮರಳಿ ಬರಲೆಂದು ಪ್ರಾರ್ಥಿಸೋಣ. – ಕಿರಣ್ ಕುಮಾರ್ ಕೊಡ್ಗಿ

    ಗಂಗೊಳ್ಳಿ ಬಂದರಿನಿಂದ ನಾಡ ದೋಣಿ ಮೀನುಗಾರಿಕೆಗೆ ತೆರಳಿದ ದೋಣಿಯು ಇಂದು ಸಮುದ್ರದ ಅಲೆಗೆ ಸಿಲುಕಿ ಮಗುಚಿ ಬಿದ್ದಿರುವ ದುರದೃಷ್ಟಕರ ಘಟನೆ ನಡೆದಿದೆ.

    ಘಟನೆಯ ಬಗ್ಗೆ ಈಗಾಲೇ ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಯವರೊಂದಿಗೆ ಸಮಾಲೋಚನೆ ನಡೆಸಿ ಮೀನುಗಾರಿಕಾ ಸಚಿವರಾದ ಮಂಕಲ್ ಎಸ್ ವೈದ್ಯ ರವರಿಗೂ ಘಟನೆಯ ಬಗ್ಗೆ ಮಾಹಿತಿ ನೀಡಿದ್ದು, ಕಣ್ಮರೆಯಾಗಿರುವ ಮೀನುಗಾರರ ರಕ್ಷಣೆಗೆ ಅಗತ್ಯ ಕ್ರಮ ವಹಿಸಲು, ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೇನೆ.

    ಅವಘಡದಲ್ಲಿ ಒಬ್ಬ ಮೀನುಗಾರ ಸುರಕ್ಷಿತವಾಗಿ ದಡ ಸೇರಿದ್ದು, ಉಳಿದ ಮೂವರ ರಕ್ಷಣೆಗೆ ಮೀನುಗಾರರು ಸೇರಿದಂತೆ ಜಿಲ್ಲಾಡಳಿತ ಧಾವಿಸಿದ್ದು, ಎಲ್ಲರ ಸುರಕ್ಷತೆಗೆ ಪ್ರಾರ್ಥಿಸೋಣ. – ಯಶ್ ಪಾಲ್ ಸುವರ್ಣ

  • ಗಂಗೊಳ್ಳಿ: ಮೀನುಗಾರರು ನಾಪತ್ತೆ ಪ್ರಕರಣ; ಸ್ಥಳಕ್ಕೆ ಮಾಜಿ ಶಾಸಕ ಗೋಪಾಲ ಪೂಜಾರಿ ಭೇಟಿ – ಪರಿಹಾರದ ಭರವಸೆ

    ಗಂಗೊಳ್ಳಿ, ಜುಲೈ 15, 2025:  ನಾಡದೋಣಿ ಮಗುಚಿ ನಾಪತ್ತೆಯಾದ ಮೂವರು ಮೀನುಗಾರರ ಪತ್ತೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮಾಜೀ ಶಾಸಕ ಗೋಪಾಲ ಪೂಜಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ಗಂಗೊಳ್ಳಿಯಲ್ಲಿ ನಡೆದ ಈ ದುರಂತ ತುಂಬಾ ನೋವು ತಂದಿದೆ, ಜಿಲ್ಲಾದ್ಯಂತ ಈ ತರಹದ ಘಟನೆ ಹಿಂದಿನ ದಿನಗಳಲ್ಲಿ ನಡೆದಿದೆ, ಅದರೊ ನಮ್ಮ ಜನ ಎಚ್ಚೆತ್ತುಕೊಳ್ಳದೆ, ಮಳೆಗಾಲ ಸಂದರ್ಭದಲ್ಲಿ ಮೀನುಗಾರಿಕೆಗೆ ಬ್ಯಾನ್ ಇದ್ದರೋ ಸಹ ಧ್ಯರ್ಯ ಮಾಡಿ ಜನ ಹೋಗ್ತಾ ಇದ್ದಾರೆ, ಈ ಬಗ್ಗೆ ಇಲಾಖೆ ಹಾಗು ಜಿಲ್ಲಾಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಬೇಕು , ಎಷ್ಟೇ ಲಾಭಇದ್ರೋ ಜೀವಕ್ಕಿಂದ ದೊಡ್ಡ ಲಾಭ ಮತ್ತೊಂದಿಲ್ಲ, ಪೊಲೀಸ್ ಅಧಿಕಾರಿಗಳ ಹತ್ತಿರ ಮಾತಾಡಿದ್ದೇನೆ, ಶುಕ್ರವಾರ ಮಂತ್ರಿಗಳ ಜೊತೆ ಭೇಟಿ ಕೊಟ್ಟು ನಾಪತ್ತೆಯಾದ ಮೀನುಗಾರರ ಕುಟುಂಬಕ್ಕೆ ಪರಾರಿಹರ ಕೊಡುವ ಪ್ರಯತ್ನ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ.

    ಮೀನುಗಾರರು ನಿಷೇಧದ ಅವಧಿಯನ್ನು ಪಾಲಿಸಬೇಕೆಂದು ಮತ್ತು ಈ ಅವಧಿಯಲ್ಲಿ ಮೀನುಗಾರಿಕೆಗೆ ಹೋಗದಂತೆ ಅವರು ವಿನಂತಿಸಿದ್ದಾರೆ.

    ಇಂದು ಬೆಳಗ್ಗೆ ಗಂಗೊಳ್ಳಿ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಅಲೆಗಳ ಅಬ್ಬರಕ್ಕೆ ಸಿಲುಕಿ ಮಗುಚಿಬಿದ್ದ ಪರಿಣಾಮ ಮೂವರು ಮೀನುಗಾರರು ನಾಪತ್ತೆಯಾಗಿದ್ದಾರೆ.

    ಗಂಗೊಳ್ಳಿ ಸೀವಾಕ್ ಬಳಿ ಈ ದುರ್ಘಟನೆ ನಡೆದಿದ್ದು, ಓರ್ವ ಮೀನುಗಾರನನ್ನು ರಕ್ಷಿಸಲಾಗಿದೆ.

    ಸುರೇಶ್ ಖಾರ್ವಿ, ಜಗನ್ನಾಥ್ ಖಾರ್ವಿ ಮತ್ತು ಲೋಹಿತ್ ಖಾರ್ವಿ ನಾಪತ್ತೆಯಾದ ಮೀನುಗಾರರು. ಸಂತೋಷ್ ಖಾರ್ವಿ ಎನ್ನುವವರನ್ನು ಬೇರೊಂದು ಬೋಟ್ ನವರು ರಕ್ಷಿಸಿದ್ದಾರೆ ಎಂದು ತಿಳಿದುಬಂದಿದೆ.

    ಸುರೇಶ ಖಾರ್ವಿ ಮಾಲಕತ್ವದ ದೋಣಿಯಲ್ಲಿ ಮಂಗಳವಾರ ಬೆಳಗ್ಗೆ ನಾಲ್ವರು ಮೀನುಗಾರರು ಮೀನುಗಾರಿಕೆ ಹೊರಟಿದ್ದರು. ಈ ವೇಳೆ ಅಲೆಗಳ ಅಬ್ಬರಕ್ಕೆ ಸಿಲುಕಿದ ದೋಣಿ ಮಗುಚಿ ಬಿದ್ದಿದೆ. ಈ ವೇಳೆ ಸಂತೋಷ್ ಖಾರ್ವಿ ಈಜಿ ಬೇರೊಂದು ದೋಣಿ ತಲುಪಿದ್ದರೆ, ಉಳಿದ ಮೂವರು ಮೀನುಗಾರರು ಈತನಕ ನಾಪತ್ತೆಯಾಗಿದ್ದಾರೆ. ಅವರ ಪತ್ತೆಗಾಗಿ ಪೊಲೀಸರು, ಕರಾವಳಿ ಕಾವಲು ಪಡೆ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

  • ಗಂಗೊಳ್ಳಿ: ಸಮುದ್ರಪಾಲಾಗಿ ಮೂವರು ನಾಪತ್ತೆ ಪ್ರಕರಣ; ಪತ್ತೆಗೆ ಅಗತ್ಯ ಕ್ರಮ ಕೈಗೊಳ್ಳಲು ಉಸ್ತುವಾರಿ ಸಚಿವೆ ಸೂಚನೆ

    ಗಂಗೊಳ್ಳಿ, ಜುಲೈ 15, 2025: ಇಂದು ನಾಡದೋಣಿ ಮಗುಚಿ ನೀರು ಪಾಲಾಗಿರುವ ಮೂವರು ಮೀನುಗಾರರ ಪತ್ತೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ಘಟನೆ ತಿಳಿದ ತಕ್ಷಣವೇ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದ ಸಚಿವೆ, ಮೀನುಗಾರರ ಪತ್ತೆಗೆ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು. ಮೂವರನ್ನು ಸುರಕ್ಷಿತವಾಗಿ ಕರೆತರಲು ಕಾರ್ಯಾಚರಣೆ ನಡೆಸುವಂತೆ ಕರಾವಳಿ ಕಾವಲು ಪಡೆಗೆ ಸೂಚನೆ ನೀಡಿದ್ದಾರೆ.

    ಹವಾಮಾನ ವೈಪರೀತ್ಯದ ಸಂದರ್ಭದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ವಹಿಸಬೇಕು. ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಸಚಿವೆ ಹೆಬ್ಬಾಳ್ಕರ್ ಸೂಚನೆ ನೀಡಿದ್ದಾರೆ.

    ಇಂದು ಬೆಳಗ್ಗೆ ಗಂಗೊಳ್ಳಿ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಅಲೆಗಳ ಅಬ್ಬರಕ್ಕೆ ಸಿಲುಕಿ ಮಗುಚಿಬಿದ್ದ ಪರಿಣಾಮ ಮೂವರು ಮೀನುಗಾರರು ನಾಪತ್ತೆಯಾಗಿದ್ದಾರೆ.

    ಲಕ್ಷ್ಮೀ ಹೆಬ್ಬಾಳಕರ್

    ಉಡುಪಿಯ ಬೈಂದೂರಿನ ಗಂಗೊಳ್ಳಿಯಲ್ಲಿ ಮೀನುಗಾರಿಕೆಯ ದೋಣಿ ಮುಗುಚಿ ಮೂವರು ಮೀನುಗಾರರು ನೀರಿನಲ್ಲಿ ನಾಪತ್ತೆಯಾಗಿರುವ ಸುದ್ದಿ ತಿಳಿದು ಸಂಕಟವಾಯಿತು. ಆದಷ್ಟು ಬೇಗ ಮೀನುಗಾರರು ಸುರಕ್ಷಿತವಾಗಿ ಹಾಗೂ ಜೀವಂತವಾಗಿ ಮರಳಿ ಬರಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.

    ನಾಪತ್ತೆಯಾದವರ ಪತ್ತೆಗೆ ಚುರುಕಾಗಿ ಕಾರ್ಯಾಚರಣೆ ನಡೆಸುವಂತೆ ಕರಾವಳಿ ಕಾವಲು ಪಡೆಗೆ ಮತ್ತು ಜಿಲ್ಲಾಡಳಿತಕ್ಕೆ ಈಗಾಗಲೇ ಸೂಚನೆ ನೀಡಲಾಗಿದೆ. – ಲಕ್ಷ್ಮೀ ಹೆಬ್ಬಾಳಕರ್

    ಗಂಗೊಳ್ಳಿ ಸೀವಾಕ್ ಬಳಿ ಈ ದುರ್ಘಟನೆ ನಡೆದಿದ್ದು, ಓರ್ವ ಮೀನುಗಾರನನ್ನು ರಕ್ಷಿಸಲಾಗಿದೆ.

    ಸುರೇಶ್ ಖಾರ್ವಿ, ಜಗನ್ನಾಥ್ ಖಾರ್ವಿ ಮತ್ತು ರೋಹಿತ್ ಖಾರ್ವಿ ನಾಪತ್ತೆಯಾದ ಮೀನುಗಾರರು. ಸಂತೋಷ್ ಖಾರ್ವಿ ಎನ್ನುವವರನ್ನು ಬೇರೊಂದು ಬೋಟ್ ನವರು ರಕ್ಷಿಸಿದ್ದಾರೆ ಎಂದು ತಿಳಿದುಬಂದಿದೆ.

    ಸುರೇಶ ಖಾರ್ವಿ ಮಾಲಕತ್ವದ ದೋಣಿಯಲ್ಲಿ ಮಂಗಳವಾರ ಬೆಳಗ್ಗೆ ನಾಲ್ವರು ಮೀನುಗಾರರು ಮೀನುಗಾರಿಕೆ ಹೊರಟಿದ್ದರು. ಈ ವೇಳೆ ಅಲೆಗಳ ಅಬ್ಬರಕ್ಕೆ ಸಿಲುಕಿದ ದೋಣಿ ಮಗುಚಿ ಬಿದ್ದಿದೆ. ಈ ವೇಳೆ ಸಂತೋಷ್ ಖಾರ್ವಿ ಈಜಿ ಬೇರೊಂದು ದೋಣಿ ತಲುಪಿದ್ದರೆ, ಉಳಿದ ಮೂವರು ಮೀನುಗಾರರು ಈತನಕ ನಾಪತ್ತೆಯಾಗಿದ್ದಾರೆ. ಅವರ ಪತ್ತೆಗಾಗಿ ಪೊಲೀಸರು, ಕರಾವಳಿ ಕಾವಲು ಪಡೆ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

  • ಗಂಗೊಳ್ಳಿ: ನಾಡದೋಣಿ ಮಗುಚಿ ಮೂವರು ಮೀನುಗಾರರು ನಾಪತ್ತೆ; ಓರ್ವ ಪಾರು

    ಗಂಗೊಳ್ಳಿ, ಜುಲೈ 15, 2025: ಗಂಗೊಳ್ಳಿ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಅಲೆಗಳ ಅಬ್ಬರಕ್ಕೆ ಸಿಲುಕಿ ಮಗುಚಿಬಿದ್ದ ಪರಿಣಾಮ ಮೂವರು ಮೀನುಗಾರರು ನಾಪತ್ತೆಯಾದ ಘಟನೆ ಇಂದು ಬೆಳಗ್ಗೆ ನಡೆದಿದೆ.

    ಸುರೇಶ್ ಖಾರ್ವಿ (45), ಲೋಹಿತ್ ಖಾರ್ವಿ (38), ಜಗ್ಗು ಯಾನೆ ಜಗದೀಶ್ ಖಾರ್ವಿ (36) ನಾಪತ್ತೆಯಾದ ಮೀನುಗಾರರು. ಸುರೇಶ ಖಾರ್ವಿ ಮಾಲಕತ್ವದ ದೋಣಿಯಲ್ಲಿ ಮಂಗಳವಾರ ಬೆಳಗ್ಗೆ ನಾಲ್ವರು ಮೀನುಗಾರರು ಮೀನುಗಾರಿಕೆ ಹೊರಟಿದ್ದರು. ಈ ವೇಳೆ ಅಲೆಗಳ ಅಬ್ಬರಕ್ಕೆ ಸಿಲುಕಿದ ದೋಣಿ ಮಗುಚಿ ಬಿದ್ದಿದೆ. ಈ ವೇಳೆ ಸಂತೋಷ್ ಖಾರ್ವಿ ಈಜಿ ಬೇರೊಂದು ದೋಣಿ ತಲುಪಿದ್ದರೆ, ಉಳಿದ ಮೂವರು ಮೀನುಗಾರರು ಈತನಕ ನಾಪತ್ತೆಯಾಗಿದ್ದಾರೆ.

    ದೋಣಿ ಮಗುಚಿದ ವೇಳೆ ಓರ್ವ ನೀರಿಗೆ ಬಿದ್ದಿದ್ದಾನೆ. ಆತನನ್ನು ರಕ್ಷಿಸಲು ಮುಂದಾದ ಇನ್ನಿಬ್ಬರು ಕೂಡ ನೀರುಪಾಲಾಗಿದ್ದಾರೆ. ಸದ್ಯ ನಾಪತ್ತೆಯಾದ ಮೀನುಗಾರರಿಗೆ ಸಮುದ್ರದಲ್ಲಿ ಹುಡುಕಾಟ ನಡೆಸಲಾಗುತ್ತಿದೆ.

    ಶೋಧ ಕಾರ್ಯ:
    ನಾಪತ್ತೆಯಾಗಿರುವ ಮೂವರು ಮೀನುಗಾರರ ರಕ್ಷಣೆಗೆ ಶೋಧಕಾರ್ಯ ನಡೆಸಲಾಗುತ್ತಿದೆ. ಕರಾವಳಿ ಕಾವಲು ಪಡೆ ಗಂಗೊಳ್ಳಿ ಠಾಣೆಯ ಸಿಬ್ಬಂದಿಗಳು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಸ್ಥಳೀಯ ಮೀನುಗಾರರು ಹುಡುಕಾಟ ನಡೆಸುತ್ತಿದ್ದಾರೆ. ನಿರಂತರವಾಗಿ ಸುರಿಯುತ್ತಿರುವ ಗಾಳಿಮಳೆ ಕಾರ್ಯಾಚರಣೆಗೆ ಅಡ್ಡಿಯುಂಟುಮಾಡಿದೆ.

  • ಗಂಗೊಳ್ಳಿ: ಕೋಳಿ ಅಂಕ; ಪೊಲೀಸ್ ದಾಳಿ: ಮೂವರ ಬಂಧನ

    ಗಂಗೊಳ್ಳಿ, ಜುಲೈ 14, 2025: ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಪವನ್‌ ನಾಯಕ್‌ ಇವರ ನೇತೃತ್ವದಲ್ಲಿ ಗುಜ್ಜಾಡಿ ಗ್ರಾಮದ ಮಂಕಿ ಬಳಿಯ ದ್ಯಾಸನಮಕ್ಕಿ ಸಾರ್ವಜನಿಕ ಸ್ಥಳದಲ್ಲಿ ಕೋಳಿ ಅಂಕ ಜುಗಾರಿ ಆಟ ನಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯಂತೆ ದಾಳಿ ನಡೆಸಲಾಗಿದೆ. ಈ ದಾಳಿಯಲ್ಲಿ ಆರೋಪಿತರಾದ ರವೀಂದ್ರ ಮತ್ತು ವಿಕ್ರಮ್ ಇವರನ್ನು ವಶಕ್ಕೆ ಪಡೆಯಲಾಗಿದ್ದು, ಘಟನೆಯಿಂದ ಓಡಿ ಹೋದ ಇತರ ಆರೋಪಿತರಾದ ಉಮೇಶ್ ಮತ್ತು ಸುಧಾಕರ್ ಎಂದು ಗುರುತಿಸಲಾಗಿದೆ.

    ಪೊಲೀಸರು ಸ್ಥಳದಲ್ಲಿ ಕೋಳಿ ಜುಗಾರಿ ಆಟಕ್ಕೆ ಬಳಸಿದ 5 ಕೋಳಿ ಹುಂಜಗಳು, 5 ಕತ್ತಿಗಳು, ಕೋಳಿಗಳ ಕಾಲಿಗೆ ಬಾಳನ್ನು ಕಟ್ಟಲು ಉಪಯೋಗಿಸಿದ 5 ಹಗ್ಗಗಳು ಹಾಗೂ ಪಣಕ್ಕಾಗಿ ಕಟ್ಟಲಾಗಿದ್ದ 2,200 ರೂಪಾಯಿ ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ. ಜೊತೆಗೆ, ಆರೋಪಿತರು ಬಳಸಿದ ಮೂರು ಮೋಟಾರು ಸೈಕಲ್‌ಗಳಾದ ಟಿವಿಎಸ್‌ ಕಂಪನಿಯ (KA-20-EW-6343), ಬಜಾಜ್‌ ಡಿಸ್ಕವರ್‌ ಕಂಪನಿಯ (KA-20-EC-3736), ಮತ್ತು ಹೊಂಡಾ ಮ್ಯಾಟ್ರಿಕ್ಸ್‌ ಕಂಪನಿಯ (KA-20-EM-7544) ವಾಹನಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

    ಆರೋಪಿತರು ಕೋಳಿಗಳಿಗೆ ಆಹಾರ ಮತ್ತು ನೀರು ನೀಡದೆ, ಕಾಲಿಗೆ ಕತ್ತಿಗಳನ್ನು ಕಟ್ಟಿ ಹಿಂಸೆ ನೀಡಿ, ಸಾರ್ವಜನಿಕ ಸ್ಥಳದಲ್ಲಿ ಕೋಳಿ ಅಂಕ ಜುಗಾರಿ ಆಟವನ್ನು ನಡೆಸಿರುವುದಾಗಿ ತಿಳಿದುಬಂದಿದೆ. ಈ ಕುರಿತು ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 77/2025ರ ಅಡಿಯಲ್ಲಿ ಕಲಂ 11 (1) (A) The Prevention of Cruelty to Animals Act 1960 ಮತ್ತು ಕೆ.ಪಿ ಆಕ್ಟ್‌ನ ಕಲಂ 87, 93 ರಂತೆ ಪ್ರಕರಣ ದಾಖಲಾಗಿದೆ.

    ಪೊಲೀಸರು ತನಿಖೆಯನ್ನು ಮುಂದುವರೆಸಿದ್ದು, ಓಡಿ ಹೋದ ಆರೋಪಿತರನ್ನು ಶೀಘ್ರದಲ್ಲಿ ವಶಕ್ಕೆ ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

  • ಗಂಗೊಳ್ಳಿ: 4 ದಿನಗಳಿಂದ ನೀರು ಸರಬರಾಜು ಸಮಸ್ಯೆ; ಪರಿಹಾರ

    ಗಂಗೊಳ್ಳಿ, 13-07-2025: ಕಳೆದ 4 ದಿನಗಳಿಂದ ಮುಂದುವರಿದಿರುವ ನೀರು ಸರಬರಾಜು ಸಮಸ್ಯೆಯನ್ನು ಪರಿಹರಿಸಲು ಗಂಗೊಳ್ಳಿ ಗ್ರಾಮ ಪಂಚಾಯತ್ ತಂಡ ಕಾರ್ಯಾಚರಣೆ ನಡೆಸುತ್ತಿದೆ. ಈವರೆಗೆ 75% ಕಾಮಗಾರಿ ಪೂರ್ಣಗೊಂಡಿದ್ದು, 25% ಕಾಮಗಾರಿ ಬಾಕಿ ಇದೆ. ಇಂದು ರಾತ್ರಿ ಟ್ಯಾಂಕ್‌ಗಳಲ್ಲಿ ನೀರನ್ನು ತುಂಬಲಾಗುವುದು ಮತ್ತು ಸೋಮವಾರ ಬೆಳಗ್ಗೆ ಸರಬರಾಜು ಚೇತರಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ಗಂಗೊಳ್ಳಿ ಗ್ರಾಮ ಪಂಚಾಯತ್‌ನ ಉಪಾಧ್ಯಕ್ಷ ತಬ್ರೇಜ್ ತಿಳಿಸಿದ್ದಾರೆ.

  • ಗಂಗೊಳ್ಳಿ: ‘ಮನೆ ಮನೆಗೆ ಪೊಲೀಸ್-2025’ ಕಾರ್ಯಕ್ರಮಕ್ಕೆ ಚಾಲನೆ; ಸೈಬರ್ ಅಪರಾಧ, ಸಹಾಯವಾಣಿ ಬಗ್ಗೆ ಅರಿವು

    ಗಂಗೊಳ್ಳಿ, ಜುಲೈ 13, 2025: ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ‘ಮನೆ ಮನೆಗೆ ಪೊಲೀಸ್-2025’ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು. ಕಾರ್ಯಕ್ರಮ ಆರಂಭದ ಬಳಿಕ ಸೈಬರ್ ಅಪರಾಧದ ಸ್ವರೂಪ, NCRP ಪೋರ್ಟಲ್, 1930 ಮತ್ತು 112 ಸಹಾಯವಾಣಿಗಳು, NDPS ಕಾಯ್ದೆಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.

    ಈ ವಿನೂತನ ಯೋಜನೆಯಡಿ, ಪೊಲೀಸ್ ಸಿಬ್ಬಂದಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲು ಮತ್ತು ದೂರುಗಳನ್ನು ಸ್ವೀಕರಿಸಲು ಮನೆ ಬಾಗಿಲಿಗೆ ತೆರಳುತ್ತಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಈ ಕಾರ್ಯಕ್ರಮ ಶುಕ್ರವಾರ ಆರಂಭಗೊಂಡಿದ್ದು, ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣನವರ್ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಪೊಲೀಸ್ ಸೇವೆ ಎಲ್ಲ ಮನೆಗಳಿಗೂ ತಲುಪಬೇಕು. ಈ ಕಾರ್ಯಕ್ರಮ ಯಶಸ್ವಿಯಾಗಲಿ,” ಎಂದು ಶುಭ ಕೋರಿದರು.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಸುಧಾಕರ್ ಎಸ್. ನಾಯ್ಕ, ಪರಮೇಶ್ವರ ಹೆಗಡೆ, ಡಿವೈಎಸ್‌ಪಿ ಪ್ರಭು ಡಿ. ಟಿ., ಪಿಎಸ್ಐಗಳಾದ ಭರತೇಶ್, ನಾರಾಯಣ, ಪ್ರಕಾಶ್ ಸಾಲಿಯಾನ್, ಹುಸೇನ್ ಸಾಬ್ ಮತ್ತು ಇತರ ಸಿಬ್ಬಂದಿ ಭಾಗವಹಿಸಿದ್ದರು. ಉಡುಪಿ ನಗರ, ಮಣಿಪಾಲ, ಬ್ರಹ್ಮಾವರ ಮತ್ತು ಕೋಟ ಠಾಣೆಗಳಲ್ಲಿ ಈ ಕಾರ್ಯಕ್ರಮ ಆರಂಭಗೊಂಡಿದ್ದು, ‘ಮನೆಮನೆ ಪೊಲೀಸ್’ ಅಭಿಯಾನ ಜಾರಿಗೆ ತಂದಿದೆ.

    ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಗ್ರಾಮಗಳಿಗೆ “ಮನೆಮನೆಗೆ ಪೊಲೀಸ್‌” ಅಭಿಯಾನ ಕಾರ್ಯಕ್ರಮದ ಪ್ರಯುಕ್ತ ಭೇಟಿ ನೀಡಿ ಸೈಬರ್‌ ಅಪರಾಧ ‌,112, ಪೋಕ್ಸೋ ಕಾಯ್ದೆ, ಮನೆ ಕಳ್ಳತನ, ಸರ ಕಳ್ಳತನ, ರಸ್ತೆ ಸಂಚಾರ ನಿಯಮ ಮುಂತಾದ ವಿಷಯಗಳ ಬಗ್ಗೆ ಅರಿವು ಮೂಡಿಸಲಾಯಿತು.
    ಕುಂದಾಪುರ ಪೊಲೀಸ್ ಠಾಣಾ ಸರಹದಿನ ಕಾರ್ವಿ ಕೇರಿ ಶ್ರೀ ಮಹಾಕಾಳಿ ದೇವಸ್ಥಾನ ಬಳಿ “ಮನೆ ಮನೆಗೆ ಪೊಲೀಸ್ ” 2025 ಕಾಯ೯ಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಸಂದಭ೯ದಲ್ಲಿ ಪೊಲೀಸ್ ಉಪಾಧಿಕ್ಷಕರು ಕುಂದಾಪುರ ಉಪ ವಿಭಾಗ, ಪೊಲೀಸ್ ಉಪ ನೀರಿಕ್ಷಕರು (ಕಾ &ಸು ),
    ಪೊಲೀಸ್ ಉಪ ನೀರಿಕ್ಷಕರು (ತನಿಖೆ ) ಹಾಗೂ ಕುಂದಾಪುರ ಪೊಲೀಸ್ ಠಾಣಾ ಅಧಿಕಾರಿ ಸಿಬ್ಬಂದಿಗಳು ಹಾಗೂ ಠಾಣಾ ವ್ಯಾಪ್ತಿಯ ಸಾರ್ವಜನಿಕರು ಉಪಸ್ಥಿತರಿದ್ದರು

    ಈ ಅಭಿಯಾನದಡಿ ಸೈಬರ್ ಅಪರಾಧ, ಮಾದಕ ವಸ್ತು, ಬಾಲಾಪರಾಧ, POCSO ಕಾಯ್ದೆ, ಮನೆಯಿಂದ ಕಳ್ಳತನ, ಸರ ಕಳ್ಳತನ, ರಸ್ತೆ ಸಂಚಾರ ನಿಯಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ. ಮನೆಯಲ್ಲಿರುವವರ ಹೆಸರು, ಮೊಬೈಲ್ ಸಂಖ್ಯೆಯನ್ನು ದಾಖಲಿಸಲಾಗಿದ್ದು, ಸಾರ್ವಜನಿಕರ ದೂರು ಮತ್ತು ಕೋರಿಕೆಗಳನ್ನು ಸ್ವೀಕರಿಸಲಾಗಿದೆ. ಈಗಾಗಲೇ ಉಡುಪಿ ನಗರ ಠಾಣೆಯ 28, ಮಣಿಪಾಲ ಠಾಣೆಯ 45, ಬ್ರಹ್ಮಾವರ ಠಾಣೆಯ 30 ಮತ್ತು ಕೋಟ ಠಾಣೆಯ 25 ಮನೆಗಳಿಗೆ ಭೇಟಿ ನೀಡಲಾಗಿದೆ.

    ಅಮಾಸೆಬೈಲು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ “ಮನೆಮನೆಗೆ ಪೊಲೀಸ್‌” ಅಭಿಯಾನ ಕಾರ್ಯಕ್ರಮದ ಪ್ರಯುಕ್ತ ಮನೆಗಳಿಗೆ ಭೇಟಿ ನೀಡಿ ಸೈಬರ್‌ ಅಪರಾಧ ‌,112, ಪೋಕ್ಸೋ ಕಾಯ್ದೆ, ಮನೆ ಕಳ್ಳತನ, ಸರ ಕಳ್ಳತನ, ರಸ್ತೆ ಸಂಚಾರ ನಿಯಮ ಮುಂತಾದ ವಿಷಯಗಳ ಬಗ್ಗೆ ಮನೆಯವರಿಗೆ ಅರಿವು ಮೂಡಿಸಲಾಯಿತು.

    ಈ ಅರಿವು ಕಾರ್ಯಕ್ರಮವನ್ನು ಜಾರಿಗೆ ತರುವುದಕ್ಕಾಗಿ ಠಾಣೆಯಿಂದ ರಚಿಸಲಾದ ತಂಡದಲ್ಲಿ ಪಿಐ/ಪಿಎಸ್ಐ, ಎಎಸ್ಐ, ಮಹಿಳಾ ಮತ್ತು ಪುರುಷ ಸಿಬ್ಬಂದಿಗಳು ಒಳಗೊಂಡಿದ್ದಾರೆ.

  • Monsoon Football Splash District Level Tournament Shines in Manipal

    Manipal, July 13, 2025: The Students Islamic Organisation (SIO) Udupi District hosted the exhilarating Monsoon Football Splash District Level Tournament on July 13, 2025, at City Arena, Manipal. Building on the success of the Brotherhood Football Match held on July 6, 2025, this event brought together 11 teams from 4 units and 7 circles, showcasing remarkable talent, teamwork, and sportsmanship.

    The tournament, a vibrant celebration of unity and brotherhood, saw enthusiastic participation from young athletes representing circles including Gangolli, Kandlur, Mavinakatte, Shiroor, Uppinakote, Brahmavar, and others. The matches were filled with energy, with players demonstrating their passion for football amidst the monsoon spirit.

    Tournament Highlights

    • Winners: Shiroor
    • Runners-up: Gangolli

    The event fostered a sense of community and healthy competition among the youth, aligning with SIO’s mission to promote unity through sports. The tournament was a testament to the dedication and skill of the participants, who competed with fervor and camaraderie.

    SIO Udupi District extends heartfelt gratitude to all participating units and circles for their spirited involvement and contribution to making the event a grand success.

    Source: SIO Udupi District

  • ಸರಸ್ವತಿ ವಿದ್ಯಾಲಯದಲ್ಲಿ ಸಿ. ಎ ಮತ್ತು ಸಿ.ಎಸ್ ಪರಿಚಯ ಕಾರ್ಯಕ್ರಮ

    ಗಂಗೊಳ್ಳಿ, ಜುಲೈ 12, 2025ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು, ಗಂಗೊಳ್ಳಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು  ವಿ ರೀಚ್ ಅಕಾಡೆಮಿ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಸರಸ್ವತಿ ವಿದ್ಯಾಲಯದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಕಂಪನಿ ಸೆಕ್ರೆಟರಿ ಮತ್ತು ಚಾಟಡ್ ಅಕೌಂಟೆಂಟ್ ಕೋರ್ಸ್ ಗಳ ಕುರಿತಾದ ಪರಿಚಯ  ಕಾರ್ಯಕ್ರಮವು ಇಲ್ಲಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನೆರವೇರಿತು.

    ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಕಂಪನಿ ಸೆಕ್ರೆಟರಿ  ಸಂತೋಷ್  ಪ್ರಭು ಅವರು,  ಕಂಪನಿ ಸೆಕ್ರೆಟರಿ ಕೋರ್ಸಿನ ಬಗ್ಗೆ ಮಾಹಿತಿಯನ್ನು ನೀಡುತ್ತಾ ಕಂಪನಿ ಸೆಕ್ರೆಟರಿ ಕೋರ್ಸ್ ಮಾಡುವುದರ ಮೂಲಕ  ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬಹುದಾಗಿದೆ. ಇದು ಖಚಿತ ಉದ್ಯೋಗ ವನ್ನು ನೀಡುವುದು ಮಾತ್ರವಲ್ಲದೆ ವಾಣಿಜ್ಯ ವಿಭಾಗದಲ್ಲಿನ   ಬದಲಾವಣೆಗಳಿಗೆ ಒಗ್ಗಿಕೊಳ್ಳಲು ನಮ್ಮನ್ನು ಸಜ್ಜುಗೊಳಿಸಿ ಉನ್ನತ ಸ್ಥಾನಮಾನವನ್ನು ಮತ್ತು ಗಳಿಕೆಯನ್ನು ಪಡೆಯುವಂತೆ ಮಾಡುತ್ತದೆ  ಎಂದು ಹೇಳಿದರು.

    ಐಸಿಎಸ್ಐ ನ ಮಂಗಳೂರು ವಿಭಾಗದ ಇಂಚಾರ್ಜ್ ಆಫೀಸರ್ ಶಂಕರ್ ಶುಭ ಹಾರೈಸಿದರು.

    ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ. ಸಿ ಅಧ್ಯಕ್ಷತೆ ವಹಿಸಿದ್ದರು. ಆಂಗ್ಲ ಭಾಷೆ ಉಪನ್ಯಾಸಕ ಥಾಮಸ್ ಪಿ.ಎ ಪ್ರಾಸ್ತಾವಿಕ ಮಾತುಗಳಾಡಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಸುಗುಣ ಆರ್ ಕೆ ಮತ್ತು ಎನ್ಎಸ್ಎಸ್ ವಿದ್ಯಾರ್ಥಿ ಘಟಕದ ನಾಯಕ  ಗಗನ್ ಮೇಸ್ತ  ಉಪಸ್ಥಿತರಿದ್ದರು.  ದಿಯಾ ಜಿ ಪೈ ಪ್ರಾರ್ಥಿಸಿದರು. ಧನ್ಯ ಯು ಅತಿಥಿಗಳನ್ನು ಪರಿಚಯಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಸಹಕರಿಸಿದರು. ವಿದ್ಯಾರ್ಥಿನಿ ಮೆಹಕ್ ಖಾರ್ವಿ ಕಾರ್ಯಕ್ರಮವನ್ನು ನಿರೂಪಿಸಿದರು ಶರ್ವಾನಿ ಪೈ ವಂದಿಸಿದರು.

  • ಕುಂದಾಪುರ: 47 ಸರ್ಕಾರಿ ಶಾಲೆಗಳಲ್ಲಿ 25ಕ್ಕಿಂತ ಕಡಿಮೆ ವಿದ್ಯಾರ್ಥಿಗಳು, ಗಂಗೊಳ್ಳಿಯಲ್ಲಿ 17

    ಕುಂದಾಪುರ, ಜುಲೈ 12, 2025: ಶಿಕ್ಷಣ ಇಲಾಖೆ ಮತ್ತು ಶಿಕ್ಷಕರು ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿಯನ್ನು ಹೆಚ್ಚಿಸಲು ಶ್ರಮಿಸುತ್ತಿದ್ದರೂ, ಕುಂದಾಪುರ ವಲಯದ ಹಲವು ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಕೆಲವು ಶಾಲೆಗಳಲ್ಲಿ ಐದು ತರಗತಿಗಳಿದ್ದರೂ ಕೇವಲ ಮೂರು ಅಥವಾ ನಾಲ್ಕು ವಿದ್ಯಾರ್ಥಿಗಳು ಮಾತ್ರ ದಾಖಲಾಗಿದ್ದಾರೆ. ಮೂಲಭೂತ ಸೌಕರ್ಯಕ್ಕೆ ನಿಧಿ ಮತ್ತು ಶಿಕ್ಷಕರ ನೇಮಕಾತಿಯ ಕೊರತೆಯಿಂದಾಗಿ, ದಾಖಲಾತಿಯನ್ನು ಹೇಗೆ ಸುಧಾರಿಸಬಹುದು ಎಂಬ ಪ್ರಶ್ನೆ ಉಳಿದಿದೆ.

    ಪ್ರಸ್ತುತ, ಕುಂದಾಪುರ ಶಿಕ್ಷಣ ವಲಯದ 47 ಶಾಲೆಗಳಲ್ಲಿ 25ಕ್ಕಿಂತ ಕಡಿಮೆ ವಿದ್ಯಾರ್ಥಿಗಳಿದ್ದಾರೆ. ಸಮೀಕ್ಷೆಗೊಳಗಾದ 58 ಶಾಲೆಗಳಲ್ಲಿ 40 ಶಾಲೆಗಳಲ್ಲಿ 40ಕ್ಕಿಂತ ಕಡಿಮೆ ವಿದ್ಯಾರ್ಥಿಗಳಿದ್ದಾರೆ. ಈ ಶೈಕ್ಷಣಿಕ ವರ್ಷದಲ್ಲಿ, ಕೆಳಗಿನ ಪ್ರಾಥಮಿಕ ವಿಭಾಗದಲ್ಲಿ ಸರ್ಕಾರಿ ಶಾಲೆಗಳಲ್ಲಿ 804 ವಿದ್ಯಾರ್ಥಿಗಳು ಮತ್ತು ಅನುದಾನರಹಿತ ಶಾಲೆಗಳಲ್ಲಿ 43 ವಿದ್ಯಾರ್ಥಿಗಳು, ಒಟ್ಟು 847 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಉನ್ನತ ಪ್ರಾಥಮಿಕ ವಿಭಾಗದಲ್ಲಿ, ಸರ್ಕಾರಿ ಶಾಲೆಗಳಲ್ಲಿ 8,580, ಅನುದಾನಿತ ಶಾಲೆಗಳಲ್ಲಿ 1,116, ಅನುದಾನರಹಿತ ಶಾಲೆಗಳಲ್ಲಿ 580, ಮತ್ತು ವಸತಿ ಶಾಲೆಗಳಲ್ಲಿ 221 ವಿದ್ಯಾರ್ಥಿಗಳಿದ್ದಾರೆ. ಪ್ರೌಢಶಾಲಾ ಮಟ್ಟದಲ್ಲಿ, ಸರ್ಕಾರಿ ಶಾಲೆಗಳಲ್ಲಿ 13,473, ಅನುದಾನಿತ ಶಾಲೆಗಳಲ್ಲಿ 1,987, ಅನುದಾನರಹಿತ ಶಾಲೆಗಳಲ್ಲಿ 12,618, ಮತ್ತು ವಸತಿ ಶಾಲೆಗಳಲ್ಲಿ 624 ವಿದ್ಯಾರ್ಥಿಗಳಿದ್ದಾರೆ — ಒಟ್ಟು 28,702 ವಿದ್ಯಾರ್ಥಿಗಳು.

    ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪ್ರಸ್ತುತ 93 ಶಿಕ್ಷಕರ ಹುದ್ದೆಗಳು ಖಾಲಿಯಿದ್ದು, ಇವುಗಳಲ್ಲಿ 63 ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸಲಾಗಿದೆ. ಉಳಿದ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಸರ್ಕಾರಿ ಪ್ರೌಢಶಾಲೆಗಳಲ್ಲಿ 35 ಹುದ್ದೆಗಳು ಖಾಲಿಯಿದ್ದು, 34 ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸಲಾಗಿದೆ.

    ಇಂಗ್ಲಿಷ್-ಮಾಧ್ಯಮ ಶಿಕ್ಷಣಕ್ಕೆ ಹೆಚ್ಚುತ್ತಿರುವ ಆದ್ಯತೆಯು ಸರ್ಕಾರಿ ಶಾಲೆಗಳ ದಾಖಲಾತಿಯ ಕುಸಿತಕ್ಕೆ ಪ್ರಮುಖ ಕಾರಣವೆಂದು ಕಾಣಲಾಗಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ, ರಾಜ್ಯ ಸರ್ಕಾರವು ಕೆಲವು ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್-ಮಾಧ್ಯಮ ವಿಭಾಗಗಳನ್ನು ಪರಿಚಯಿಸಿದೆ, ಇದು ಕೆಲವು ಶಾಲೆಗಳಲ್ಲಿ ದಾಖಲಾತಿಯ ಸಂಖ್ಯೆಯ ಮೇಲೆ ಸಕಾರಾತ್ಮಕ ಪರಿಣಾಮ ಬೀರಿದೆ. ಈ ಕ್ರಮವು ಸರ್ಕಾರಿ ಶಾಲೆಗಳ ಬದುಕಿಗೆ ವರದಾನವಾಗಿ ಕಾಣಲಾಗಿದೆ.

    ಪ್ರಸ್ತುತ ಯಾವುದೇ ಶಾಲೆಗಳನ್ನು ಮುಚ್ಚುವ ಪ್ರಸ್ತಾಪವಿಲ್ಲವಾದರೂ, ಭವಿಷ್ಯದಲ್ಲಿ ಕಡಿಮೆ ವಿದ್ಯಾರ್ಥಿಗಳಿರುವ ಶಾಲೆಗಳನ್ನು ಸಮೀಪದ ಶಾಲೆಗಳೊಂದಿಗೆ ವಿಲೀನಗೊಳಿಸಬಹುದು ಎಂಬ ಊಹಾಪೋಹಗಳಿವೆ. ಕೇವಲ ಮೂರು ವಿದ್ಯಾರ್ಥಿಗಳಿಗಾಗಿ ಶಾಲೆಯನ್ನು ನಡೆಸುವುದು ಸರ್ಕಾರಕ್ಕೆ ವಾರ್ಷಿಕವಾಗಿ ಲಕ್ಷಗಟ್ಟಲೆ ವೆಚ್ಚವನ್ನು ತರುತ್ತದೆ. ಇದರಲ್ಲಿ ಶಿಕ್ಷಕರಿಗೆ ತಿಂಗಳಿಗೆ 70,000 ರಿಂದ 90,000 ರೂ. ವೇತನ, ಸಿಬ್ಬಂದಿ ವೇತನ, ಆಹಾರ ಸರಬರಾಜು, ಗ್ಯಾಸ್, ಹಾಲು, ಮೊಟ್ಟೆ, ಬಾಳೆಹಣ್ಣು, ಪುಸ್ತಕಗಳು, ಶೂಗಳು, ಸಮವಸ್ತ್ರ, ವಿದ್ಯುತ್, ಮತ್ತು ಇತರ ಅಗತ್ಯ ವಸ್ತುಗಳು ಸೇರಿವೆ. ಇಂತಹ ಪ್ರಕರಣಗಳಲ್ಲಿ ಪ್ರತಿ ವಿದ್ಯಾರ್ಥಿಗೆ ವೆಚ್ಚವು ಎಂಜಿನಿಯರಿಂಗ್ ಶಿಕ್ಷಣದ ವೆಚ್ಚಕ್ಕೆ ಸಮಾನವಾಗಿದೆ ಎಂದು ಹೇಳಲಾಗುತ್ತದೆ.

    ಕಡಿಮೆ ವಿದ್ಯಾರ್ಥಿಗಳಿರುವ ಕೆಲವು ಕೆಳಗಿನ ಪ್ರಾಥಮಿಕ ಶಾಲೆಗಳು: ಬಾಳೆಜೆಡ್ಡು ಹೊಸಂಗಡಿ (3), ಶನ್ ಕಟ್ಟು ಅಂಪಾರು (4), ಬಾಲ್ಮನೆ (6), ಬೆಚ್ಚಾಲಿ (6), ಗುಡ್ಡಟ್ಟು (9), ಬಡ ಬೆಪಾಡೆ ಮಡಮಾಕಿ (11), ಹರ್ಕಾಡಿ-ಹಳ್ಳಾಡಿ ಹರ್ಕಾಡಿ (12), ಕುಂಬಾರಮಾಕಿ ಕುಲೆಂಜಿ (13), ಬಂಟಕೊಡು ಉಳ್ಳೂರು-74 (13), ಕೆಳಸುಂಕ (14), ಹೊಸಮಠ ಕೊರ್ಗಿ (14), ಕರುರು ಹೊಸಂಗಡಿ (14), ಮರಟ್ಟೂರು ಮೊಳಹಳ್ಳಿ (15), ಭಾಗಿಮನೆ ಹೊಸಂಗಡಿ (15), ಹುಂಚರಬೆಟ್ಟು ಕುಂದಾಪುರ (15), ತಾರೆಕೊಡ್ಲು – ಸಿದ್ದಾಪುರ (16), ಮಡಮಾಕಿ ಪಶ್ಚಿಮ (16), ನಡಬೂರು (16), ಹಾಲೆ ಅಮಾಸೆಬೈಲು (17), ಮಣಿಗೇರಿ (17), ಗಂಗೊಳ್ಳಿ (17), ಕ್ರೊಡಬೈಲು (18), ಕೆಳ (20), ಕೊಳನಕಲ್ಲು (20), ಕೊನಿಹಾರ ಮೊಳಹಳ್ಳಿ (20), ವಾರಾಹಿ ಉಳ್ಳೂರು-74 (20), ಐರ್‌ಬೈಲು ಸಿದ್ದಾಪುರ (20), ಗವಾಲಿ – ಹಳ್ಳಾಡಿ ಹರ್ಕಾಡಿ (21), ಮೂಡು ಹಳದಿ (21), ಗೋಪಾಡಿ ಪಡು ಪಶ್ಚಿಮ (21), ಕಾಸಡಿ (24), ಮದ್ದುಗುಡ್ಡೆ ಕುಂದಾಪುರ (25), ಗಂತುಬಿಲು (26), ಕೊಂಜಾಡಿ ಆಲಡಿ (26), ಕೈಲ್ಕೆರೆ (26), ಹಾನೆಜೆಡ್ಡ (26), ಮರುರು (26), ಶೇಡಿಮನೆ (27), ಮತ್ತು ಗೋಳಿಯಂಗಡಿ (28).

    ಕಡಿಮೆ ವಿದ್ಯಾರ್ಥಿಗಳಿರುವ ಉನ್ನತ ಪ್ರಾಥಮಿಕ ಶಾಲೆಗಳು: ಮಲಾಡಿ ತೆಕ್ಕಟ್ಟೆ (10), ಜಂಬೂರು ಉಳ್ಳೂರು-74 (12), ಹೊಳೆ ಬಾಗಿಲು ಮಾಚಟ್ಟು (13), ಮೂಡುವಾಳೂರು ಕವ್ರಾಡಿ (13), ಗುಲ್ಲಾಡಿ (16), ಬಡಬೆಟ್ಟೂ ಬೆಳೂರು (22), ಆಶ್ರಯ ಕಾಲೋನಿ ಟಿಟಿ ರಸ್ತೆ ಕುಂದಾಪುರ (23), ಸೌದ (25), ಬಾಲ್ಕೂರು ಉತ್ತರ (26), ಕೊಲ್ಕೆರೆ ಬಸ್ರೂರು (27), ನೇತಾಜಿ ಹಾಲ್ನಾಡು (28), ಜೈ ಭಾರತ್ ನೆಲ್ಲಿಕಟ್ಟೆ (24), ಚಿಟ್ಟೇರಿ ಸಿದ್ದಾಪುರ (30), ಹಾಲ್ತೂರು (30), ಮಾವಿನಕೊಡ್ಲು (31), ಶ್ರೀ ಮಹಾಲಿಂಗೇಶ್ವರ ಉಳ್ಳೂರು (35), ಅನಗಲ್ಲಿ (37), ಕೊಂಡಾಲಿ (39), ಮತ್ತು ಜೆಡ್ಡಿನಗದ್ದೆ (40).

    “ಪ್ರಸ್ತುತ ಯಾವುದೇ ಶಾಲೆಗಳನ್ನು ಮುಚ್ಚುವ ಪ್ರಸ್ತಾಪವಿಲ್ಲ. ದಾಖಲಾತಿ ಪ್ರಕ್ರಿಯೆ ಇನ್ನೂ ಚಾಲನೆಯಲ್ಲಿದೆ. ಶಿಕ್ಷಕರು ಹೆಚ್ಚಿನ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕರೆತರಲು ವಿಶೇಷ ಪ್ರಯತ್ನ ಮಾಡುತ್ತಿದ್ದಾರೆ. ಕಡಿಮೆ ವಿದ್ಯಾರ್ಥಿಗಳಿದ್ದರೂ ಎಲ್ಲಾ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ,” ಎಂದು ಕುಂದಾಪುರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ ಹೇಳಿದ್ದಾರೆ.