Category: Society

  • ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕದ ವತಿಯಿಂದ ಸಮುದಾಯ ಸಮ್ಮಿಲನ ಕಾರ್ಯಕ್ರಮ ಮತ್ತು ಪುಸ್ತಕ ಪ್ರದರ್ಶನ

    ವಿಜಯಪುರ: ಶರಣರು ಮತ್ತು ಸೂಫಿ ಸಂತರು ನೆಲೆಸಿದ ವಿಜಯಪುರದಲ್ಲಿ ಕೋಮುವಾದ ತಡೆಯಲು ಮುಸ್ಲಿಂ ಬಾಂಧವ್ಯ ವೇದಿಕೆಯು ಲಿಂಗಾಯತ ಸೇರಿದಂತೆ ವಿವಿಧ ಸಮುದಾಯಗಳೊಂದಿಗೆ ಸೌಹಾರ್ದ ಕೂಡ ಏರ್ಪಡಿಸುತ್ತಿದೆ ಎಂದು ವೇದಿಕೆಯ ಸಂಸ್ಥಾಪಕ ಮುಸ್ತಾಕ್ ಹೊನ್ನಾಬೈಲ್ ತಿಳಿಸಿದರು.

    ಜಗಜ್ಯೋತಿ ಬಸವೇಶ್ವರರ ಜನ್ಮಭೂಮಿಯಾದ ವಿಜಯಪುರದಲ್ಲಿ, ಬಸವೇಶ್ವರರು ಕೇವಲ ಲಿಂಗಾಯತರ ಜ್ಯೋತಿಯಲ್ಲ, ವಿಶ್ವ ಜ್ಯೋತಿಯಾಗಿದ್ದಾರೆ. ಆದರೆ, ಇಂತಹ ಮಹಾತ್ಮರ ನೆಲದಲ್ಲಿ ಕೆಲವರು ಕೋಮುವಾದ ಹರಡುತ್ತಿದ್ದಾರೆ. ಇತಿಹಾಸದಲ್ಲಿ ಮುಸ್ಲಿಮರು ಮತ್ತು ಲಿಂಗಾಯತರು ಅನ್ಯೋನ್ಯವಾಗಿ ಬದುಕಿದ್ದಾರೆ. ಈ ಸಾಮರಸ್ಯವನ್ನು ಕದಡದಿರಲು ರಾಜ್ಯಾದ್ಯಂತ ಸೌಹಾರ್ದ ಕೂಡ ಆಯೋಜಿಸಲಾಗುತ್ತಿದೆ ಎಂದು ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಹೇಳಿದರು.

    ರಾಜ್ಯದಲ್ಲಿ ಸುಮಾರು 10 ಲಿಂಗಾಯತ ನಾಯಕರು ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ್ದಾರೆ. ಯಾವುದೇ ಸರ್ಕಾರ ಬಂದರೂ ಸಚಿವ ಸಂಪುಟದಲ್ಲಿ ಲಿಂಗಾಯತ ಸಮುದಾಯಕ್ಕೆ ಸಿಂಹಪಾಲು ದೊರೆಯುತ್ತದೆ. ಈ ಸ್ಥಾನಗಳನ್ನು ಪಡೆಯಲು ಮುಸ್ಲಿಂ ಸಮುದಾಯ ರಾಜಕೀಯವಾಗಿ ನಿರಂತರ ಬೆಂಬಲ ನೀಡಿದೆ. ಆದರೆ, ಲಿಂಗಾಯತ ಸಮುದಾಯ ಮುಸ್ಲಿಮರಿಗೆ ಇದೇ ರೀತಿಯ ಸಹಕಾರ ನೀಡಿಲ್ಲ ಎಂದು ಮುಸ್ತಾಕ್ ಖೇದ ವ್ಯಕ್ತಪಡಿಸಿದರು.

    ಕೋಮುವಾದಿ ಪಕ್ಷವನ್ನು ಬೆಂಬಲಿಸುವ ಲಿಂಗಾಯತರನ್ನು ಹೊರತುಪಡಿಸಿ, ಇತರ ಪಕ್ಷಗಳ ಲಿಂಗಾಯತರಿಗೆ ಮುಸ್ಲಿಮರು ನಿರಂತರವಾಗಿ ಮತದಾನ ಮಾಡಿದ್ದಾರೆ. ಆದರೆ, ಮುಸ್ಲಿಮರಿಗೆ ಲಿಂಗಾಯತ ಸಮುದಾಯದಿಂದ ಕನಿಷ್ಠ ಪ್ರಮಾಣದಲ್ಲೂ ರಾಜಕೀಯ ಬೆಂಬಲ ದೊರೆಯುತ್ತಿಲ್ಲ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವಧಿಯಲ್ಲಿ ಮುಸ್ಲಿಮರ 4% ಮೀಸಲಾತಿಯನ್ನು ರದ್ದುಗೊಳಿಸಿದ್ದು ದೇಶದ ರಾಜಕಾರಣದಲ್ಲಿ ವಿಲಕ್ಷಣ ಘಟನೆಯಾಗಿದೆ. ಈ ಹಿನ್ನೆಲೆಯಲ್ಲಿ, ಉಭಯ ಸಮುದಾಯಗಳ ನಡುವೆ ಬಾಂಧವ್ಯ ಗಟ್ಟಿಗೊಳಿಸಲು ಸಮಾಜದ ಮುಖಂಡರು, ಚಿಂತಕರು ಮತ್ತು ಧಾರ್ಮಿಕ ಗುರುಗಳನ್ನು ಭೇಟಿಯಾಗಲಾಗುತ್ತಿದೆ ಎಂದರು.

    ಸಮುದಾಯ ಸಮ್ಮಿಲನ ಕಾರ್ಯಕ್ರಮ ಮತ್ತು ಪುಸ್ತಕ ಪ್ರದರ್ಶನ

    ಗುಮ್ಮಟ ನಗರಿ ವಿಜಯಪುರದ ಹೋಟೆಲ್ ಮಧುವನ ಇಂಟರ್‌ನ್ಯಾಷನಲ್‌ನ ಸಭಾಂಗಣದಲ್ಲಿ ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕದ ವತಿಯಿಂದ ಸಮುದಾಯ ಸಮ್ಮಿಲನ ಕಾರ್ಯಕ್ರಮ ಮತ್ತು ಪುಸ್ತಕ ಪ್ರದರ್ಶನ ನಡೆಯಿತು. ಈ ಸಂದರ್ಭದಲ್ಲಿ ಮುಸ್ಲಿಂ ಲೇಖಕರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಖ್ಯಾತ ವಿಮರ್ಶಕ ಮತ್ತು ಬಸವತತ್ವ ಪ್ರಚಾರಕ ಡಾ. ಜೆ.ಎಸ್. ಪಾಟೀಲ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಅವರು, ಭಾರತ ಬಹುಸಂಸ್ಕೃತಿಯ ದೇಶವಾಗಿದ್ದು, ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಏಕಸಂಸ್ಕೃತಿಯನ್ನು ಹೇರಲು ಪ್ರಯತ್ನಿಸುತ್ತಿವೆ. ಮುಸ್ಲಿಮರ ಮೀಸಲಾತಿಯನ್ನು ಕಸಿದು ಲಿಂಗಾಯತರಿಗೆ ನೀಡುವ ಹಿಂದಿನ ಸರ್ಕಾರದ ನಿರ್ಧಾರ ನ್ಯಾಯಾಲಯದ ಮೆಟ್ಟಿಲೇರಿದೆ. ಇದು ಅನುಷ್ಠಾನವಾಗದ ಕಾರಣ ಮುಸ್ಲಿಮರು ಆತಂಕಗೊಳ್ಳುವ ಅಗತ್ಯವಿಲ್ಲ ಎಂದರು.

    ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶ ನಬಿರಸೂಲ್ ಮಮದಾಪುರ ಕೂಡ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. 1994ರಿಂದ 1998ರವರೆಗೆ ಕುಂದಾಪುರ ನ್ಯಾಯಾಲಯದಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದ ಇವರು, ಮೀಸಲಾತಿಯು ಆರ್ಥಿಕತೆಯನ್ನಾಧರಿಸಿದ್ದಲ್ಲ, ಸಾಮಾಜಿಕ ಮತ್ತು ಸಾಂಸ್ಕೃತಿಕ ಆಧಾರದ ಮೇಲೆ ನೀಡಲಾಗಿದೆ. ಈ ಆಧಾರದ ಮೀಸಲಾತಿಯನ್ನು ಕಿತ್ತುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ ಎಂದರು.

    ಮುಸ್ಲಿಂ ಬಾಂಧವ್ಯ ವೇದಿಕೆಯ ಮೂರನೇ ಪದಗ್ರಹಣ ಸಮಾರಂಭ

    ಕಾರ್ಯಕ್ರಮದಲ್ಲಿ ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕದ 2025-26ನೇ ಸಾಲಿನ ಮೂರನೇ ಪದಗ್ರಹಣ ಸಮಾರಂಭ ನಡೆಯಿತು. ಝಾಕಿರ್ ಹುಸೇನ್ ಉಚ್ಚಿಲ ಅಧ್ಯಕ್ಷರಾಗಿ ಮತ್ತು ರಹಮತ್ ದಾವಣಗೆರೆ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದರು. ಗ್ಯಾಲಂಟ್ರಿ ಶೌರ್ಯ ಪದಕ ವಿಜೇತ ಭಾರತೀಯ ಸೇನೆಯ ಬ್ರಿಗೇಡಿಯರ್ ಮುಹಮ್ಮದ್ ಮುಷ್ತಾಕ್ ಹುಸೇನ್ ಪದಪ್ರದಾನ ಮಾಡಿದರು.

    ಬ್ರಿಗೇಡಿಯರ್ ಮುಹಮ್ಮದ್ ಮುಷ್ತಾಕ್ ಹುಸೇನ್ ಪರಿಚಯ

    ಮೂಲತಃ ಕನ್ನಡಿಗರಾದ ಬ್ರಿಗೇಡಿಯರ್ ಮುಹಮ್ಮದ್ ಮುಷ್ತಾಕ್ ಹುಸೇನ್, ರಾಯಚೂರಿನ ಸೈಂಟ್ ಮೆರೀಸ್ ಕಾನ್ವೆಂಟ್‌ನಲ್ಲಿ ಪ್ರಾಥಮಿಕ ಶಿಕ್ಷಣ, ಕಲಬುರ್ಗಿಯ ಸೈಂಟ್ ಜೋಸೆಫ್ ಕಾನ್ವೆಂಟ್‌ನಲ್ಲಿ ಪ್ರೌಢ ಶಿಕ್ಷಣ ಪೂರ್ಣಗೊಳಿಸಿದರು. ಮೈಸೂರಿನ ಯುವರಾಜ ಕಾಲೇಜಿನಿಂದ ವಿಜ್ಞಾನದಲ್ಲಿ ಸ್ನಾತಕ ಪದವಿ, ಪುಣೆಯ ಸಿಂಬಯೋಸಿಸ್ ವಿಶ್ವವಿದ್ಯಾಲಯದಿಂದ ಎಂಬಿಎ, ಇಂದೋರ್ ವಿಶ್ವವಿದ್ಯಾಲಯದಿಂದ ಪಿಜಿಡಿಸಿಎ, ಐಐಎಂ-ಬೆಂಗಳೂರಿನಿಂದ ಮ್ಯಾನೇಜ್‌ಮೆಂಟ್ ಪದವಿ ಮತ್ತು ಮದ್ರಾಸ್ ವಿಶ್ವವಿದ್ಯಾಲಯದಿಂದ ಮನಃಶಾಸ್ತ್ರದಲ್ಲಿ ಎಂಎಸ್ಸಿ ಪದವಿ ಪಡೆದಿದ್ದಾರೆ.

    1981ರಲ್ಲಿ ದೆಹರಾದೂನ್‌ನ ಇಂಡಿಯನ್ ಮಿಲಿಟರಿ ಅಕಾಡೆಮಿಯಲ್ಲಿ ತರಬೇತಿ ಪಡೆದು ಲೆಫ್ಟಿನೆಂಟ್ ಆಗಿ ತೇರ್ಗಡೆಯಾಗಿ, ರೆಜಿಮೆಂಟ್ ಆಫ್ ಆರ್ಟಿಲರಿಯಲ್ಲಿ ಸೇವೆ ಸೇರಿದರು. ಕಾಶ್ಮೀರ ಮತ್ತು ಈಶಾನ್ಯ ಭಾರತದಲ್ಲಿ ಉಗ್ರಗಾಮಿತ್ವ ನಿಗ್ರಹ ಕಾರ್ಯಾಚರಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ ಇವರು, ಕಾರ್ಗಿಲ್ ಯುದ್ಧದಲ್ಲಿ ಬೋಫೋರ್ಸ್ ಗನ್‌ಗಳಿಂದ ಮಲ್ಟಿ ಬ್ಯಾರೆಲ್ ರಾಕೆಟ್ ಲಾಂಚರ್‌ಗಳವರೆಗೆ ನಿರ್ವಹಿಸಿದ್ದಾರೆ. ಕಾರ್ಗಿಲ್ ಯುದ್ಧದಲ್ಲಿನ ಶೌರ್ಯಕ್ಕಾಗಿ ಭಾರತದ ರಾಷ್ಟ್ರಪತಿಗಳಿಂದ ಸೇನಾ ಪದಕ (ಗ್ಯಾಲಂಟ್ರಿ) ಪಡೆದ ಇವರು, ಕರ್ನಾಟಕದ ಇಬ್ಬರು ಪುರಸ್ಕೃತರಲ್ಲಿ ಒಬ್ಬರು. ಸೇನೆಯ ಎಲ್ಲಾ ಪ್ರಮುಖ ಕಾರ್ಯಾಚರಣೆಗಳಲ್ಲಿ ಭಾಗವಹಿಸಿದ ಇವರು, ಸುಮಾರು ನಾಲ್ಕು ದಶಕಗಳ ಕಾಲ ಸೇವೆ ಸಲ್ಲಿಸಿದ್ದಾರೆ.

    ಪಡೆದ ಪದಕಗಳು: ಸೇನಾ ಪದಕ (ಗ್ಯಾಲಂಟ್ರಿ), ಆಪರೇಷನ್ ರೈನೋ, ಪರಾಕ್ರಮ, ವಿಜಯ್, ರಕ್ಷಕ್, ಹೈ ಆಲ್ಟಿಟ್ಯೂಡ್ ಸರ್ವೀಸ್, ನೇಫಾ, ಆಪರೇಷನ್ ಫಾಲ್ಕನ್ ಮತ್ತು ಇತರ ಸೇವಾ ಪದಕಗಳು. ಈಸ್ಟರ್ನ್ ಕಮಾಂಡ್‌ನಿಂದ ವೃತ್ತಿಪರ ದಕ್ಷತೆಗೆ ಪ್ರಶಂಸೆ ಪತ್ರ ಪಡೆದಿದ್ದಾರೆ.

    ನಿವೃತ್ತಿಯ ನಂತರ, ಬೆಂಗಳೂರಿನ ಯುಆರ್‌ಸಿ ಕನ್‌ಸ್ಟ್ರಕ್ಷನ್‌ನ ಅಧ್ಯಕ್ಷರಾಗಿರುವ ಇವರು, ಮೆಟ್ರೋ ಯೋಜನೆಗಳು, ವಿಮಾನ ನಿಲ್ದಾಣಗಳು, ಐಐಎಂ, ಐಐಎಸ್‌ಸಿ, ಅಮೆಜಾನ್ ಡೇಟಾ ಸೆಂಟರ್‌ಗಳು ಸೇರಿದಂತೆ ವಿವಿಧ ಯೋಜನೆಗಳನ್ನು ಮುನ್ನಡೆಸುತ್ತಿದ್ದಾರೆ. ಡಾ. ನೂರ್ ಝಹ್ರಾ ಜಾಫರ್ (ಎಂಎಸ್‌ಸಿ, ಪಿಎಚ್‌ಡಿ) ಜೊತೆ ವಿವಾಹವಾಗಿರುವ ಇವರಿಗೆ ಇಬ್ಬರು ಪುತ್ರಿಯರು.

    ಕಾರ್ಯಕ್ರಮದಲ್ಲಿ ನ್ಯಾಯವಾದಿ ಅನಿಷ ಪಾಶ, ಡಾ. ಮಹ್ಮದ್‌ಶಫಿ ಪಾಟೀಲ, ರೇಖಾ ಪಾಟೀಲ, ಜಮೀರ್ ಅಹ್ಮದ್ ರಶಾದಿ, ಎಸ್.ಎಂ. ಪಾಟೀಲ ಗಣಿಹಾರ, ಎಸ್.ಎಸ್. ಹಿರೇಮಠ ಮತ್ತಿತರರು ಉಪಸ್ಥಿತರಿದ್ದರು.

  • Islam fastest-growing in world, Christianity 2nd, ’Nones’ 3rd largest: Pew report

    New Delhi, June 12, 2025: Islam is the fastest-growing religion in the world, with the Muslim population growing by 347 million in 10 years between 2010 and 2020, a report by the Pew Research Center said. According to the report, Christianity is the second fastest rising religion, followed by ’nones’ or people with no religious affiliation. Hindus place fourth in the world population.

    The Pew’s ’Global Religious Landscape’ report, published on June 9, reveals how population growth has influenced the global religious landscape. It mainly focuses on seven categories: Christians, Muslims, Hindus, Buddhists, Jews, people who belong to other religions, and those who are religiously unaffiliated.

    The report says the rise in the number of Muslims is more than all other religions combined, and the shares of the Muslim population globally rose by 1.8 percentage points to 25.6 per cent.

    Christianity, the world’s biggest religious group, comes second.

    The number of Christians rose by 122 million, reaching 2.3 billion. However, as a share of the world’s population, they fell 1.8 percentage points to 28.8 per cent – placing second to Islam, the report says. This is primarily due to the growth of the non-Christian population and those who left the faith. Most former Christians no longer identify with any religion, but some now identify with a different religion, the survey reveals.

    The decline in Christianity has been recorded in Europe, North America, the Americas, Australia, and New Zealand, according to Pew.

    ’Nones’ rank as the third-largest growing group, with the number of religiously unaffiliated people rising by 270 million to 1.9 billion. The share of ’nones’ in the world population has climbed nearly a full percentage point to 24.2 per cent.

    Hindus, according to the report, grew at about the same rate as the world’s overall population. The religion stands fourth in the fastest-growing list. The report says the number of Hindus has risen by 126 million, reaching 1.2 billion. As a proportion of the global population, Hindus hold steady at 14.9 per cent – a slight drop as compared to 2010 (15 per cent).

    The Jewish population grew by around six per cent in those 10 years – from 14 million to 15 million people, the report said. As of 2020, 45.9 per cent of Jews lived in Israel – the highest Jewish population in any country. This was followed by 41.2 per cent in North America.

    According to the report, Buddhists are the only major religious group that had fewer numbers in 2020 than a decade earlier. The number of Buddhists in the world dropped by 0.8 per cent.

    The age profile

    The study claims that in 2020, Muslims had the highest proportion of children in their population (33 per cent of all Muslims worldwide are under 15). The youthfulness of Muslims is tied to the fact that nearly four-in-ten of the world’s Muslims live in sub-Saharan Africa and the Middle East-North Africa region – places with relatively young populations, it says.

    Jews and Buddhists have the highest proportion of older adults – 36 per cent in each group are ages 50 and older.

    Christians have a large presence in many regions, from the most youthful in sub-Saharan Africa to the least in Europe. Hindus have a larger population between the ages of 15 to 49 (55 per cent), followed by youngsters of 33 per cent.

  • ಹೆನ್ನಾಬೈಲ್‌ನಲ್ಲಿ ಬಕ್ರೀದ್ ಸಂಭ್ರಮಾಚರಣೆ

    ಹೆನ್ನಾಬೈಲ್, ಜೂನ್ 07, 2025: ತ್ಯಾಗ ಮತ್ತು ಬಲಿದಾನದ ಪ್ರತೀಕವಾದ ಬಕ್ರೀದ್ ಹಬ್ಬವನ್ನು ಹೆನ್ನಾಬೈಲ್‌ನ ಜುಮಾ ಮಸೀದಿಯಲ್ಲಿ ಶ್ರದ್ಧೆ-ಭಕ್ತಿಯಿಂದ ಆಚರಿಸಲಾಯಿತು. ಈದುಲ್ ಆಝ್ಹಾ ಪ್ರಾರ್ಥನಾ ಸಭೆಯಲ್ಲಿ ಪ್ರವಾದಿ ಇಬ್ರಾಹಿಮರ ತ್ಯಾಗ ಮತ್ತು ಬಲಿದಾನಗಳನ್ನು ಸ್ಮರಿಸಲಾಯಿತು.

    ಸಭೆಯನ್ನು ಉದ್ದೇಶಿಸಿ ಮಾತನಾಡಿದ ಧರ್ಮಗುರು, “ಪ್ರವಾದಿ ಇಬ್ರಾಹಿಮರು ದೇವನಿಷ್ಠೆ ಮತ್ತು ಶ್ರದ್ಧೆಯ ದೊಡ್ಡ ಸಂಕೇತವಾಗಿ ಲೋಕಕ್ಕೆ ಮೂಡಿಬಂದರು. ಅವರು ಮಾಡಿದ ತ್ಯಾಗ ಮತ್ತು ಬಲಿದಾನಗಳನ್ನು ಸ್ಮರಿಸುವುದರಿಂದ ಮನುಷ್ಯನ ಮನಸ್ಸು ಸಂವೇದನಾಶೀಲವಾಗಿ, ಸಾಮಾಜಿಕ ಸಂಬಂಧಗಳು ಸುಗಮವಾಗಲು ಕಾರಣವಾಗುತ್ತದೆ. ಇಬ್ರಾಹಿಮರು ತಮ್ಮ ಜೀವಮಾನವಿಡೀ ಬಡವ-ಶ್ರೀಮಂತ, ಕರಿಯ-ಬಿಳಿಯ ಮುಂತಾದ ಸಾಮಾಜಿಕ ತಾರತಮ್ಯಗಳನ್ನು ತೊಡೆದುಹಾಕಲು ಶ್ರಮಿಸಿದರು. ಮನುಕುಲಕ್ಕೆ ಅವರು ನೀಡಿದ ಕೊಡುಗೆಯನ್ನು ಸೀಮಿತ ಅವಧಿಯಲ್ಲಿ ವಿವರಿಸಲಾಗದು,” ಎಂದರು.

    ಪ್ರಾರ್ಥನಾ ಸಭೆಯಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ಸೈಯದ್ ರಫೀಕ್, ಉಪಾಧ್ಯಕ್ಷ ಸೈಯದ್ ಆಸೀಫ್, ಕಾರ್ಯದರ್ಶಿ ಮಹಮ್ಮದ್ ಇಕ್ಬಾಲ್, ಮಾಜಿ ಅಧ್ಯಕ್ಷ ಸಯ್ಯದ್ ಅಬ್ಬಾಸ್, ಹಸನ್ ಸಾಹೇಬ್, ಅಲಿಯಬ್ಬ, ನಜಿರ್ ಸಾಹೇಬ್, ಹಯಾತ್ ಭಾಷಾ ಸಾಹೇಬ್, ಯೂಸುಫ್ ಖಾದರ್, ಶಬ್ಬೀರ್ ಸಾಹೇಬ್, ಅಮಾನ್ ಜಮಾಲ್, ಆದಮ್ ಸಾಹೇಬ್, ಅಷ್ಪಾಕ್ ಸಾಬ್ಜನ್, ಖಲೀಲ್ ತವಕ್ಕಲ್, ಮುಹಮ್ಮದ್ ರಫೀಕ್, ಖ್ವಾಜಾ ಸಾಹೇಬ್ ಮುಂತಾದವರು ಉಪಸ್ಥಿತರಿದ್ದರು.

    ಈ ಸಂದರ್ಭದಲ್ಲಿ, ಮಕ್ಕಳು ಮತ್ತು ಹಿರಿಯರು ಹೊಸ ಉಡುಪುಗಳನ್ನು ಧರಿಸಿ, ವಿಶೇಷ ನಮಾಜ್‌ನಲ್ಲಿ ಭಾಗವಹಿಸಿದರು. ಬಕ್ರೀದ್ ಹಬ್ಬವು ಸಾಮಾಜಿಕ ಸಾಮರಸ್ಯ, ತ್ಯಾಗ ಮತ್ತು ಸಮರ್ಪಣೆಯ ಮನೋಭಾವವನ್ನು ಎತ್ತಿಹಿಡಿಯುವ ಮಹತ್ವದ ಆಚರಣೆಯಾಗಿದೆ ಎಂದು ಸಭೆಯಲ್ಲಿ ಒತ್ತಿ ಹೇಳಲಾಯಿತು.

  • ಗಂಗೊಳ್ಳಿ: ಎಸ್‌ಎಸ್‌ಸಿ ವತಿಯಿಂದ ಈದ್ ಕಿಟ್‌ ವಿತರಣೆ

    ಗಂಗೊಳ್ಳಿ, ಜೂನ್ 07, 2025: ಸೋಶಿಯಲ್ ಸ್ಪೋರ್ಟ್ಸ್ ಮತ್ತು ಚಾರಿಟೇಬಲ್ ಅಸೋಸಿಯೇಷನ್ (ಎಸ್‌ಎಸ್‌ಸಿ) ಗಂಗೊಳ್ಳಿಯು ಇವತ್ತು ನಡೆಯಲಿರುವ ಬಕ್ರೀದ್ ಹಬ್ಬದ ಪ್ರಯುಕ್ತ ಈದ್ ಕಿಟ್‌ಗಳನ್ನು ವಿತರಿಸಲಾಯಿತು. ಅಗತ್ಯವಿರುವವರಿಗೆ ಆಹಾರ ಸಾಮಗ್ರಿಗಳನ್ನು ನೀಡಲಾಗಿದ್ದು, ಅವರೂ ಈದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲು ಸಹಾಯವಾಗಿದೆ.

    ಸಂಸ್ಥೆಯ ಮಹಿಳಾ ವಿಭಾಗವು ಈ ಕಾರ್ಯದಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಕಿಟ್‌ಗಳನ್ನುವೈಯಕ್ತಿಕವಾಗಿ ಕಿಟ್‌ಗಳನ್ನು ತಲುಪಿಸುವ ಮೂಲಕ ಮಹತ್ವದ ಕೊಡುಗೆ ನೀಡಿದೆ. ಈ ಸಾಮಾಜಿಕ ಕಾರ್ಯವು ಸಮುದಾಯದಲ್ಲಿ ಒಗ್ಗಟ್ಟು ಮತ್ತು ಸಹಾಯದ ಮನೋಭಾವವನ್ನು ಬಲಪಡಿಸಿದೆ.

  • ಗೃಹರಕ್ಷಕದಳ ಹುದ್ದೆ : ಅರ್ಜಿ ಆಹ್ವಾನ

    ಉಡುಪಿ, ಜೂನ್ 03 : ಜಿಲ್ಲಾ ಗೃಹರಕ್ಷಕದಳ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಆಸಕ್ತಿ ಹೊಂದಿರುವ 19 ರಿಂದ 45 ವರ್ಷದ ಒಳಗಿನ, ಎಸ್.ಎಸ್.ಎಲ್.ಸಿ ಉತ್ತೀರ್ಣ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ ಜಿಲ್ಲಾ ವ್ಯಾಪ್ತಿಯ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸಲು ಜೂನ್ 14 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಗ್ನಿಶಾಮಕ ಕಚೇರಿ ಆವರಣದಲ್ಲಿರುವ ಜಿಲ್ಲಾ ಗೃಹರಕ್ಷಕದಳ ಕಚೇರಿ ದೂರವಾಣಿ ಸಂಖ್ಯೆ 0820-2533650 ಅಥವಾ ತಾಲೂಕು ಘಟಕಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಗೃಹರಕ್ಷಕದಳದ ಜಿಲ್ಲಾ ಕಮಾಂಡೆಂಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಉಪನ್ಯಾಸಕರ ಹುದ್ದೆ : ಅರ್ಜಿ ಆಹ್ವಾನ

    ಉಡುಪಿ, ಜೂನ್ 05, 2025: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಕಾರ್ಕಳ ತಾಲೂಕು ಮಿಯ್ಯಾರು ಕಾಲೇಜಿನಲ್ಲಿ ಖಾಲಿ ಇರುವ ಕನ್ನಡ, ಆಂಗ್ಲಭಾಷೆ, ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರ ಹಾಗೂ ಬ್ರಹ್ಮಾವರ ತಾಲೂಕು ಆರೂರು ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನಲ್ಲಿ ಖಾಲಿ ಇರುವ ಕನ್ನಡ, ಗಣಿತ, ಜೀವಶಾಸ್ತ್ರ ಮತ್ತು ಗಣಕ ವಿಜ್ಞಾನ ವಿಷಯಗಳ ಉಪನ್ಯಾಸಕರ ಹುದ್ದೆಗಳಿಗೆ ಅರ್ಹ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸಲು ಜೂನ್ 6 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಮಿಯ್ಯಾರು ಕಾಲೇಜು ಪ್ರಾಂಶುಪಾಲರು ಮೊ.ನಂ: 7337795963 ಹಾಗೂ ಆರೂರು ಕಾಲೇಜು ಪ್ರಾಂಶುಪಾಲರು ಮೊ.ನಂ: 7012988065 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

  • ಕುಂದಾಪುರ: ಬಕ್ರೀದ್ ಹಬ್ಬಕ್ಕೆ ಮುನ್ನ ಶಾಂತಿ ಸಭೆ; ಸೌಹಾರ್ದತೆಯಿಂದ ಆಚರಿಸಲು ಸೂಚನೆ

    ಕುಂದಾಪುರ, ಜೂನ್ 03, 2025: ಮುಂಬರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಎಲ್ಲಾ ಧಾರ್ಮಿಕ ಮುಖಂಡರನ್ನು ಕರೆಯಿಸಿ ಶಾಂತಿ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಹಬ್ಬದ ಸಂದರ್ಭದಲ್ಲಿ ಸಾಮರಸ್ಯ, ಸೌಹಾರ್ದತೆ, ಮತ್ತು ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆ ಬಾರದಂತೆ ಬಕ್ರೀದ್ ಹಬ್ಬವನ್ನು ಆಚರಿಸುವಂತೆ ಧಾರ್ಮಿಕ ಮುಖಂಡರಿಗೆ ಪೊಲೀಸ್ ಅಧಿಕಾರಿಗಳು ಸೂಚಿಸಿದರು.

    ಸಭೆಯಲ್ಲಿ ಎಲ್ಲಾ ಸಮುದಾಯದ ಮುಖಂಡರು ಭಾಗವಹಿಸಿ, ಶಾಂತಿಯುತವಾಗಿ ಹಬ್ಬ ಆಚರಿಸುವ ಕುರಿತು ಚರ್ಚಿಸಿದರು. ಕಾನೂನು ಉಲ್ಲಂಘನೆಯಾಗದಂತೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಸೌಹಾರ್ದತೆ ಕಾಪಾಡಿಕೊಂಡು ಹಬ್ಬವನ್ನು ಆಚರಿಸಲು ಸಹಕರಿಸುವಂತೆ ಪೊಲೀಸರು ಮನವಿ ಮಾಡಿದರು.

    ಉಡುಪಿ: ನಗರ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಧಾರ್ಮಿಕ ಮುಖಂಡರನ್ನು ಠಾಣೆಗೆ ಕರೆಯಿಸಿ ಶಾಂತಿ ಸಭೆ ನಡೆಸಿ ಹಬ್ಬದ ಸಮಯದಲ್ಲಿ ಸಾಮರಸ್ಯ ಹಾಗೂ ಸೌಹಾರ್ದತೆಯಿಂದ ಹಬ್ಬವನ್ನು ಕಾನೂನು ಸುವ್ಯವಸ್ಥೆಗೆ ದಕ್ಕೆ ಬಾರದಂತೆ ಆಚರಣೆ ಮಾಡುವಂತೆ ತಿಳಿಸಲಾಯಿತು.

  • ದುಸ್ಥಿತಿ: ಶ್ರೀ ದುರ್ಗಾಂಬಾ ಬಸ್ ವಶಪಡಿಸಿಕೊಂಡ ಹಾವೇರಿ ಅಧಿಕಾರಿಗಳು

    ಹಾವೇರಿ, ಜೂನ್ 2, 2025: ದೇರಳಕಟ್ಟೆಯಿಂದ ಸಿರ್ಸಿಗೆ ಸಂಚರಿಸುತ್ತಿದ್ದ ಶ್ರೀ ದುರ್ಗಾಂಬಾ ಬಸ್ (ಬಸ್ ಸಂಖ್ಯೆ: KA51B1068) ಅನ್ನು ಹಾವೇರಿ ಸಾರಿಗೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಬಸ್‌ನ ದುಸ್ಥಿತಿ ಮತ್ತು ಸಿಬ್ಬಂದಿಯ ದುರ್ವರ್ತನೆಯ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ದೂರಿನ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಈ ಘಟನೆ ಮೇ 20, 2025 ರಂದು ನಡೆದಿದ್ದು, ಕರ್ನಾಟಕ ಪೊಲೀಸ್‌ಗೆ ಔಪಚಾರಿಕ ದೂರು ಸಲ್ಲಿಕೆಯಾದ ಬಳಿಕ ತ್ವರಿತ ಕ್ರಮ ಕೈಗೊಳ್ಳಲಾಗಿದೆ.

    ದೂರಿನ ಪ್ರಕಾರ, ಬಸ್‌ನ ಸ್ಥಿತಿ ತುಂಬಾ ಕೆಟ್ಟದಾಗಿತ್ತು. ಭಾರಿ ಮಳೆಯ ಸಂದರ್ಭದಲ್ಲಿ ಬಸ್‌ಗೆ ಬಾಗಿಲೇ ಇರದ ಕಾರಣ ಮತ್ತು ಸರಿಯಾದ ನಿರ್ವಹಣೆಯ ಕೊರತೆಯಿಂದಾಗಿ ಒಳಗೆ ನೀರು ಸೋರಿತು. ಎರಡು ವರ್ಷದ ಮಗು ಸೇರಿದಂತೆ ಪ್ರಯಾಣಿಕರು ಸಂಪೂರ್ಣವಾಗಿ ನೆನೆದು ಭಯಭೀತರಾದರು. ಲಗೇಜ್ ಇಡುವ ಕ್ಯಾಬಿನ್‌ನಲ್ಲಿ ನೀರು ತುಂಬಿತ್ತು, ಇದರಿಂದಾಗಿ ಪ್ರಯಾಣಿಕರು ತಮ್ಮ ಸಾಮಾನುಗಳನ್ನು ಬಸ್‌ನ ಒಳಗೆ ತರಬೇಕಾಯಿತು, ಇದು ಮತ್ತಷ್ಟು ತೊಂದರೆಗೆ ಕಾರಣವಾಯಿತು. ಚಾಲಕನ ಹತ್ತಿರ ಸಹಾಯ ಕೇಳಿದಾಗ ಒರಟಾಗಿ ಮಾತನಾಡಿದರು ಮತ್ತು “ಆಫೀಸ್‌ಗೆ ಸಂಪರ್ಕಿಸಿ” ಎಂದು ಹೇಳಿ ಸಹಾಯ ಮಾಡಲು ನಿರಾಕರಿಸಿದರು. ಕ್ಲೀನರ್ ಸಹ ಯಾವುದೇ ಸಹಾನುಭೂತಿ ತೋರದೆ, ನೀರು ತುಂಬಿದ ಲಗೇಜ್ ಕ್ಯಾಬಿನ್‌ಗೆ ಬೆರಳು ಮಾಡಿ ತೋರಿಸಿದರು.

    ಪ್ರಯಾಣದ ಅರ್ಧ ಗಂಟೆಯ ನಂತರ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿತು. ಮತ್ತೊಮ್ಮೆ ಸಹಾಯ ಕೇಳಲು ಹೋದಾಗ ಒಬ್ಬ ಚಾಲಕ ಸಹಾನುಭೂತಿಯಿಂದ ನಡೆದುಕೊಂಡು ಪ್ರಯಾಣಿಕರನ್ನು ಹೊನ್ನಾವರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು. ಆದರೆ ಚಾಲಕ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲೇ ಅಲ್ಲಿಂದ ಓಡಿ ಹೋಗಲು ಯಶಸ್ವಿಯಾದರು. ಪೊಲೀಸರು ಬಸ್ ಮಾಲಿಕರಿಗೆ ಕರೆ ಮಾಡಿದಾಗ, ಮಾಲಿಕರು ಕರೆ ಸ್ವೀಕರಿಸಿ ಪೊಲೀಸ್ ಠಾಣೆಯಿಂದ ಕರೆ ಎಂದು ತಿಳಿದುಕೊಂಡ ತಕ್ಷಣ ಕರೆ ಕಟ್ ಮಾಡಿ ಫೋನ್ ಸ್ವಿಚ್ ಆಫ್ ಮಾಡಿದರು.
    ಈ ದೂರು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಯಿತು. ಪೋಸ್ಟ್‌ನಲ್ಲಿ ಬಸ್‌ನ ಕಳಪೆ ಸ್ಥಿತಿಯ ಚಿತ್ರಗಳು, ಒಳಗೆ ನೀರು ಸೋರುತ್ತಿರುವ ವೀಡಿಯೊ ಮತ್ತು ಮೇ 23, 2025 ರಂದು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದಾಖಲಾದ FIR (ಸಂಖ್ಯೆ: 202958) ನಕಲನ್ನು ಸೇರಿಸಲಾಗಿತ್ತು.

    ಸಾರ್ವಜನಿಕರ ಆಕ್ರೋಶದ ನಂತರ, ಹಾವೇರಿ ಸಾರಿಗೆ ಅಧಿಕಾರಿಗಳು ಮೇ 21, 2025 ರಂದು ಬಸ್ (KA51B1068) ಅನ್ನು ವಶಪಡಿಸಿಕೊಂಡರು ಮತ್ತು ನಿರ್ಲಕ್ಷ್ಯ ಹಾಗೂ ಸುರಕ್ಷತಾ ಮಾನದಂಡಗಳ ಉಲ್ಲಂಘನೆಗಾಗಿ ಆಪರೇಟರ್ ವಿರುದ್ಧ ಪ್ರಕರಣ ದಾಖಲಿಸಿದರು. ಈ ಘಟನೆಯ ಬಗ್ಗೆ ಸಂಪೂರ್ಣ ತನಿಖೆ ನಡೆಸುವುದಾಗಿ ಮತ್ತು ಈ ಮಾರ್ಗದಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಕಟ್ಟುನಿಟ್ಟಾದ ನಿಯಮಗಳನ್ನು ಜಾರಿಗೊಳಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.

  • ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ, ಗುಟ್ಕಾ ಉಗುಳಿದರೆ ಇನ್ನು ಮುಂದೆ ಎಷ್ಟು ದಂಡ ಗೊತ್ತಾ…?

    ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಗುಟ್ಕಾ, ಪಾನ್ ಪರಾಗ್, ತಂಬಾಕು ಸೇರಿದಂತೆ ಇನ್ನಿತರ ಪದಾರ್ಥಗಳನ್ನು ತಿಂದು ಉಗುಳುವುದನ್ನು ನಿಷೇಧಿಸಿ ರಾಜ್ಯ ಸರಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.

    ಒಂದು ವೇಳೆ ನಿಯಮ ಉಲ್ಲಂಘಿಸಿ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ ಮತ್ತು ಗುಟ್ಕಾ ಉಗುಳಿದರೆ 1 ಸಾವಿರ ರೂ. ದಂಡ ವಿಧಿಸಲು ಅವಕಾಶ ಕಲ್ಪಿಸುವ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ.

    ಈ ಸಂಬಂಧ ರಾಜ್ಯ ಸರಕಾರವು ರೂಪಿಸಿದ್ದ, ‘ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ವಿತರಣೆಯ ವಿನಿಮಯ) (ಕರ್ನಾಟಕ ತಿದ್ದುಪಡಿ) ಮಸೂದೆ-2024’ಕ್ಕೆ ರಾಷ್ಟ್ರಪತಿ ಅಂಕಿತ ಹಾಕಿದ್ದಾರೆ.

    ಇಪ್ಪತ್ತೊಂದು ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಬೀಡಿ-ಸಿಗರೇಟು ಮತ್ತು ತಂಬಾಕಿನ ಉತ್ಪನ್ನಗಳ ಮಾರಾಟವನ್ನು ಈ ಕಾಯ್ದೆ ನಿಷೇಧಿಸುತ್ತದೆ. ಉಲ್ಲಂಘಿಸಿದವರಿಗೆ 1 ಸಾವಿರ ರೂ. ದಂಡ ವಿಧಿಸಬಹುದಾಗಿದೆ. ಉಪಹಾರ ಗೃಹ, ಪಬ್, ಬಾರ್ ಅಥವಾ ರೆಸ್ಟೋರೆಂಟ್‌ಗಳಲ್ಲಿ ಹುಕ್ಕಾ ಸೇವೆನೆಗೆ ಅವಕಾಶ ನೀಡುವುದನ್ನೂ ಈ ಕಾಯ್ದೆ ನಿಷೇಧಿಸುತ್ತದೆ. ಈ ನಿಷೇಧವನ್ನು ಉಲ್ಲಂಘಿಸಿದವರಿಗೆ 50 ಸಾವಿರ ರೂ.ನಿಂದ 1 ಲಕ್ಷ ರೂ.ಗಳವರೆಗೆ ದಂಡ ಮತ್ತು 1 ವರ್ಷದಿಂದ ಮೂರು ವರ್ಷಗಳವರೆಗೆ ಕಾರಾಗೃಹ ಶಿಕ್ಷೆ ವಿಧಿಸಲು ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.

  • ಉಡುಪಿ: ಅರ್ಹ ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

    ಉಡುಪಿ, ಮೇ 30, 2025: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕ್ಯುಲರ್ ಡಿಸ್ಟೊಫಿ, ಪಾರ್ಕಿನ್ಸನ್ ಮತ್ತು ಮಲ್ಟಿಪಲ್ ಸ್ಕ್ಲೆರೋಸಿಸ್, ಆಟಿಸಂ, ಬೌದ್ಧಿಕ ವಿಕಲತೆ ಮತ್ತು ಬಹುವಿಧ ಅಂಗವಿಕಲತೆ (ಶ್ರವಣ ಅಂಧತ್ವ/ ಡೆಫ್ ಬ್ಲೈಂಡ್) ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತೀ ಮಾಹೆ 1,000 ರೂ. ಪ್ರೋತ್ಸಾಹಧನ ನೀಡಲು ಆದೇಶಿಲಾಗಿದ್ದು, ಸದರಿ ಯೋಜನೆಯ ಫಲಾನುಭವಿಗಳನ್ನು ಜಿಲ್ಲಾ ಮಟ್ಟದ ಸಮಿತಿಯಲ್ಲಿ ಆಯ್ಕೆ ಮಾಡಲಾಗುವುದು.

    ಮೇಲ್ಕಂಡ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳು ಕಡ್ಡಾಯವಾಗಿ ವಿಶಿಷ್ಟ ಗುರುತಿನ ಚೀಟಿ ಹೊಂದಿರಬೇಕು ಹಾಗೂ ಅಂಗವಿಕಲತೆಯ ಪ್ರಮಾಣ ಶೇ. 75 ಮತ್ತು ಅದಕ್ಕಿಂತ ಹೆಚ್ಚಿರಬೇಕು. ವಯಸ್ಸಿನ ಹಾಗೂ ಆದಾಯ ಮಿತಿ ಇರುವುದಿಲ್ಲ. ಜಿಲ್ಲಾ ಸಮಿತಿಯಲ್ಲಿ ಆಯ್ಕೆಯಾದ ಫಲಾನುಭವಿಗಳ ಆರೈಕೆದಾರರ ಬ್ಯಾಂಕ್ ಖಾತೆಗೆ ಪ್ರೋತ್ಸಾಹಧನವನ್ನು ಜಮೆ ಮಾಡಲಾಗುವುದು. ಅರ್ಹ ವಿಕಲಚೇತನ ವ್ಯಕ್ತಿಗಳ ಆರೈಕೆದಾರರು ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ.

    ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2574810 ಹಾಗೂ ಜಿಲ್ಲಾ ಕಛೇರಿಯ ಎಂ.ಆರ್. ಡಬ್ಲ್ಯೂ ಅಥವಾ ವಿ.ಆರ್. ಡಬ್ಲ್ಯೂ/ ಯು.ಆರ್. ಡಬ್ಲ್ಯೂ ರವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.