Category: Society

  • ಮೃತ ವ್ಯಕ್ತಿಯ ವಾರಸುದಾರರಿಗೆ ಸೂಚನೆ

    ಉಡುಪಿ, ಮೇ 05 : ಇಂದ್ರಾಳಿ ರೈಲ್ವೆ ಪೊಲೀಸ್ ಸ್ಟೇಷನ್ನ ಉಡುಪಿಯಿಂದ ಬಾರ್ಕೂರು ರೈಲ್ವೆ ಹಳಿಯ ಮೇಲೆ ಏಪ್ರಿಲ್ 26 ರಂದು ಅಸ್ವಸ್ಥರಾಗಿ ಬಿದ್ದದ್ದ ಸುಮಾರು 25 ರಿಂದ 30 ವರ್ಷ ಪ್ರಾಯದ ಅಪರಿಚಿತ ಗಂಡಸನ್ನು ಚಿಕಿತ್ಸೆಗಾಗಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.

    ಮೃತ ವ್ಯಕ್ತಿಯ ವಾರಸುದಾರರು ಯಾರಾದರೂ ಇದ್ದಲ್ಲಿ ಮಣಿಪಾಲ ಪೊಲೀಸ್ ಠಾಣೆಯ ಪಿ.ಐ ಮೊ.ನಂ: 9480805448, ಪಿ.ಎಸ್.ಐ ಮೊ.ನಂ: 9480805475 ಹಾಗೂ ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಣಿಪಾಲ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. 

  • ಉಡುಪಿ: ಉದ್ಯೋಗ ಮೇಳ

    ಉಡುಪಿ, ಮೇ 5: ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಯಲ್ಲಿ ಮೇ 8ರಂದು ಬೆಳಗ್ಗೆ 10:30 ರಿಂದ ಮಿನಿ ಉದ್ಯೋಗ ಮೇಳ ನಡೆಯಲಿದೆ.

    ಎಸೆಸೆಲ್ಸಿ, ಪಿಯುಸಿ, ಐಟಿಐ, ಬಿಕಾಂ, ಬಿಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

    ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ, 8105618291, 8105774936, 9901472710 ಹಾಗೂ 9945856670 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

  • ಶ್ರೀನಿವಾಸಪುರ ಮಾವಿನ ರಾಜಧಾನಿ ಮತ್ತೆ ಸಜ್ಜು – ಮೇ 15 ರಿಂದ ಭರ್ಜರಿ ಆರಂಭವಾಗಲಿದೆ ಮಾವಿನ ಮಾರುಕಟ್ಟೆ

    ಶ್ರೀನಿವಾಸಪುರ: ದೇಶದ ಅತಿ ದೊಡ್ಡ ಮಾವು ಉತ್ಪಾದನಾ ಕ್ಷೇತ್ರವಾಗಿ ಪ್ರಸಿದ್ಧಿ ಪಡೆದಿರುವ ಶ್ರೀನಿವಾಸಪುರದಲ್ಲಿನ ಮಾವಿನ ಮಾರುಕಟ್ಟೆ ಈ ವರ್ಷದ ಮೇ 15ರಿಂದ ಅಧಿಕೃತವಾಗಿ ಆರಂಭಗೊಳ್ಳಲಿದೆ. ಈಗಾಗಲೇ ತಯಾರಿ ಕಾರ್ಯಗಳು ತೀವ್ರಗೊಂಡಿದ್ದು, ಎಪಿಎಂಸಿ ಹಾಗೂ ಖಾಸಗಿ ಮಾರುಕಟ್ಟೆಗಳ ಮಾಲೀಕರು, ರೈತರು ಮತ್ತು ವ್ಯಾಪಾರಸ್ಥರು ಸಜ್ಜಾಗುತ್ತಿದ್ದಾರೆ.

    ತಾಲೂಕಿನಲ್ಲಿ ಸುಮಾರು 57 ಸಾವಿರ ಎಕರೆ ಭಾಗದಲ್ಲಿ ಮಾವು ಬೆಳೆಯಲಾಗುತ್ತಿದೆ. ಈ ಹಿನ್ನೆಲೆ ಶ್ರೀನಿವಾಸಪುರ ‘ಮಾವಿನ ನಾಡು’, ‘ಮಾವಿನ ರಾಜಧಾನಿ’ ಎಂಬ ಹೆಸರನ್ನು ಸಂಪೂರ್ಣವಾಗಿ ಸ್ಥಾಪಿಸಿಕೊಂಡಿದೆ. ಇಲ್ಲಿನ ಮಾವಿಗೆ ರಾಜ್ಯದಷ್ಟೇ ಅಲ್ಲದೆ ದೇಶದಾದ್ಯಂತ ಭಾರೀ ಬೇಡಿಕೆ ಉಂಟಾಗಿದೆ.

  • ಉಡುಪಿಯ ಗಾಂಧಿ ಆಸ್ಪತ್ರೆಗೆ 30ರ ಸಡಗರ; ಸ್ವಯಂಪ್ರೇರಿತ ರಕ್ತದಾನ ಶಿಬಿರ

    ಉಡುಪಿ: ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿಯ ಗಾಂಧಿ ಆಸ್ಪತ್ರೆಗೆ 30ವರ್ಷ ಸಂಭ್ರಮದ ಹಿನ್ನೆಲೆಯಲ್ಲಿ ಅಜ್ಜರಕಾಡು​ಜಿಲ್ಲಾ ಸರಕಾರಿ ಆಸ್ಪತ್ರೆಯ ​ಜಿಲ್ಲಾ  ರಕ್ತ ನಿಧಿ ಕೇಂದ್ರದ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ಆಸ್ಪತ್ರೆಯ ಲಹರಿ ಸಭಾಂಗಣದಲ್ಲಿ ಭಾನುವಾರ ನಡೆಯಿತು.

    ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂ​ಜಾರಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ, ಸಮಾಜದಿಂದ​ ಪಡೆದುದನ್ನು  ಸಮಾಜಕ್ಕೆ ​ಹಂಚುವ ಕೆಲಸವನ್ನು ​ಗಾಂಧಿ ಆಸ್ಪತ್ರೆ ಮಾಡುತ್ತಿದೆ . ನಗರಸಭೆ ಜತೆ ಗಾಂಧಿ ಆಸ್ಪತ್ರೆ ಕೈ​ಜೋಡಿಸಿದ್ದು​, ಎಂ.ಹರಿಶ್ಚಂದ್ರರ​ ಸಾಮಾಜಿಕ ಕಳಕಳಿ ಶ್ಲಾಘನೀಯ ಎಂದರು.

    ಉಡುಪಿ ನಗರಸಭೆ ಪೌರಾಯುಕ್ತ ಡಾ. ಉದಯ ಕುಮಾರ್ ಶೆಟ್ಟಿ ಮಾತನಾಡಿ, ಆರೋಗ್ಯ, ಶಿಕ್ಷಣ, ಆದಾಯದ ಆಧಾರದಲ್ಲಿ ಮಾನವ ಅಭಿವೃದ್ಧಿ ಅಳತೆಗೋಲಾಗಿದ್ದು ಮಡಾಮಕ್ಕಿಯಂತಹ ಕುಗ್ರಾಮದಿಂದ ಬಂದ ಎಂ.ಹರಿಶ್ಚಂದ್ರರ ಸಾಧನೆ  ಅನ್ಯರಿಗೆ ಮಾದರಿ ಎಂದು ಹೇಳಿದರು.

    30ವರ್ಷಗಳ ಹಿಂದೆ ಗೆಳೆಯನ ಜತೆ 25 ಬೆಡ್‍ಗಳಿಂದ ​ಎಂ ಹರಿಶ್ಚಂದ್ರರು ಆರಂಭಿಸಿದ ಆಸ್ಪತ್ರೆ  2002ರಲ್ಲಿ ಸ್ವಂತ ಕಟ್ಟಡ ಹೊಂದಿ, ಐದು ಡಯಾಲಿಸಿಸ್ ಯಂತ್ರ ಅಳವಡಿಸಿದೆ.​  25  ವರುಷಗಳಿಂದ  ಪಂಚಮಿ ಟ್ರಸ್ಟ್ ಮೂಲಕ ಸಮಾಜ ಮುಖಿ ಸೇವೆ, ಸಿಟಿ ಬಸ್ ನಿಲ್ದಾಣದಿಂದ ಕಲ್ಸಂಕ ತನಕದ ಮುಖ್ಯರಸ್ತೆಯನ್ನು  ​ಹತ್ತು ವರ್ಷದಿಂದ  ಪ್ರತಿ ಭಾನುವಾರ ಸ್ವಚ್ಚತೆ ಕಾರ್ಯ, ಗಾರ್ಡನ್ ನಿರ್ವಹಣೆ ಮಾಡಲಾಗುತ್ತಿದೆ  ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ  ಡಾ. ವ್ಯಾಸರಾಜ ತಂತ್ರಿ ಹೇಳಿದರು.

    ಉಡುಪಿ ಟೌನ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಎಚ್. ಜಯಪ್ರಕಾಶ್ ಕೆದ್ಲಾಯ ಮಾತನಾಡಿದರು. ​ ಗಾಂಧಿ ಆಸ್ಪತ್ರೆ ಸ್ಥಾಪಕ ಹಾಗೂ ಆಡಳಿತ ನಿರ್ದೇಶಕ ಎಂ.ಹರಿಶ್ಚಂದ್ರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗಾಂಧಿ ಆಸ್ಪತ್ರೆಯಲ್ಲಿ ಜನಿಸಿದ, ನಾನಾ ಕ್ಷೇತ್ರದ ಸಾಧಕರು ಹಾಗೂ ಆಸ್ಪತ್ರೆಯ ಸಿಬ್ಬಂದಿಯನ್ನು ಗೌರವಿಸಲಾಯಿತು.

    ಕರ್ನಾಟಕ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಚೇರಿಯ  ಎಜಿಎಂ ವಾದಿರಾಜ ಭ​ಟ್,  ಲಕ್ಷ್ಮೀ ಹರಿಶ್ಚಂದ್ರ, ಡಾ. ಪಂಚಮಿ​, ಡಾ. ವಿದ್ಯಾ ವಿ ತಂತ್ರಿ ಉಪಸ್ಥಿತರಿದ್ದರು. ​ ವಿಜಯಲಕ್ಷ್ಮಿ ಪ್ರಾರ್ಥಿಸಿದರು. ಗಾಂಧಿ ಆಸ್ಪತ್ರೆ ವೈದ್ಯಕೀಯ ನಿರ್ದೇಶಕ ಡಾ. ವ್ಯಾಸರಾಜ ತಂತ್ರಿ ಪ್ರಾಸ್ತಾವಿಕ ಮಾತನಾಡಿದರು. ಶ್ವೇತಾ ಕಾರ್ಯಕ್ರಮ ನಿರೂಪಿಸಿ, ಸುಮಾ ವಂದಿಸಿದರು.

  • ಉಡುಪಿ: ಇಂದಿನಿಂದ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಒಳಮೀಸಲಾತಿ ಸಮೀಕ್ಷೆ

    ಉಡುಪಿ: ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತು ನ್ಯಾ| ಎಚ್.ಎನ್. ನಾಗಮೋಹನ್ ದಾಸ್ ಏಕ ಸದಸ್ಯ ವಿಚಾರಣ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶ ಕ್ರೋಢೀಕರಿಸಲು ಮೇ 5ರಿಂದ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಗಳ ಸಮೀಕ್ಷೆ ನಡೆಯಲಿದೆ.

    ಮೂರು ಹಂತದಲ್ಲಿ ಸಮೀಕ್ಷೆ ನಡೆಯಲಿದ್ದು, ಪರಿಶಿಷ್ಟ ಜಾತಿಯವರ ಮನೆಗಳಿಗೆ ಮಾತ್ರ ಭೇಟಿ ನೀಡಿ ವಿವರ ಪಡೆಯಲಾಗುವುದು. ಮೇ 5ರಿಂದ 17ರವರೆಗೆ ಮನೆ ಮನೆ ಸಮೀಕ್ಷೆ, ಮೇ 19ರಿಂದ 21ರ ವರೆಗೆ ಅಲ್ಲಲ್ಲಿ ಕ್ಯಾಂಪ್ ಮಾಡಿ ದಾಖಲೀಕರಣ ಹಾಗೂ ಮೂರನೇ ಹಂತದಲ್ಲಿ ಆನ್‌ಲೈನ್ ಮೂಲಕ ನಮೂದು ಕಾರ್ಯ ನಡೆಯಲಿದೆ. 2011ರ ಸಮೀಕ್ಷೆ ಪ್ರಕಾರ ಜಿಲ್ಲೆಯಲ್ಲಿ 75 ಸಾವಿರ ಪ.ಜಾತಿ ಜನಸಂಖ್ಯೆಯಿದ್ದು, ನಿರ್ದಿಷ್ಟ ಕಾಲಮಿತಿಯಲ್ಲಿ ಸಮೀಕ್ಷೆ ಪೂರ್ಣಗೊಳಿಸಲು ಯೋಜಿಸಲಾಗಿದೆ.

    ಜಿಲ್ಲೆಯ ಮಾಸ್ಟ‌ರ್ ಟ್ರೈನರ್‌ಗಳಿಂದ 35 ತಾಲೂಕು ಮಟ್ಟದ ಟ್ರೈನರ್‌ಗಳಿಗೆ ತರಬೇತಿ ನೀಡಲಾಗಿದೆ. 1112 ಶಿಕ್ಷಕರು ಹಾಗೂ 112 ಮೇಲ್ವಿಚಾರಕರು ಈ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವರು. ಸಮೀಕ್ಷೆ ಕುರಿತ ಮಾಹಿತಿಗೆ 9480843046, ಸಹಾಯವಾಣಿಗೂ ಕರೆ ಮಾಡಬಹುದು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.

    ಆಧಾರ್ ಕಾರ್ಡ್ ಅಥವಾ ರೇಷನ್ ಕಾರ್ಡ್ ಸಹಿತ ಯಾವುದಾದರೂ ಒಂದು ದಾಖಲೆ ನೀಡಬೇಕು. ರಾಷ್ಟ್ರಪತಿಗಳಿಂದ ಅನುಮೋದನೆ ಪಡೆದಿರುವ 101 ಜಾತಿಗಳ ಪಟ್ಟಿಯನ್ನು ಸಿದ್ಧಪಡಿಸಿ ಸರಕಾರವೇ ನೀಡಿದೆ. ಮೊಬೈಲ್ ಆ್ಯಪ್ ಮೂಲಕ ಸರ್ವೆ ನಡೆಯಲಿದ್ದು ಸಮೀಕ್ಷೆಗೆ ಸಂಬಂಧಿಸಿದ ಎಲ್ಲ ಮಾಹಿತಿ ನೀಡಿದೆ.

  • ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪೊಲೀಸ್ ಆಯಕ್ತರಿಗೆ ಕಾಂಗ್ರೆಸ್ ನಿಂದ ಮನವಿ

    ಮಂಗಳೂರು: ಬಿಜೆಪಿ ಶಾಸಕ ಹರೀಶ್ ಪೂಂಜಾ ಕಾಂಗ್ರೆಸ್ ನಾಯಕರ ವಿರುದ್ಧ ಇಲ್ಲಸಲ್ಲದ ಸುಳ್ಳಾರೋಪ ಹೊರಿಸಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಕೋಮುವಾದಕ್ಕೆ ಪ್ರಯತ್ನಿಸುತ್ತಿದ್ದು, ಇದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸ್ ಆಯಕ್ತರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಪರವಾಗಿ NSUI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಅವರು ಮನವಿ ಸಲ್ಲಿಸಿದರು.

  • ತಿದ್ದುಪಡಿ ವಿರೋಧಿಸಿ ಬೃಹತ್ ಪ್ರತಿಭಟನೆ, “ವಕ್ಫ್ ಆಸ್ತಿಗೂ ಅಮಿತ್ ಷಾ ಗೂ ಮೋದಿಗೂ ಏನ್ ಸಂಬಂಧ? “

    ಶಿವಮೊಗ್ಗ (ಮೇ.4): ಕಳೆದ 10 ವರ್ಷಗಳಿಂದ ಈ ದೇಶದಲ್ಲಿ ಒಂದು ಧರ್ಮವನ್ನು ಗುರಿಯಾಗಿರಿಸಿ ದಬ್ಬಾಳಿಕೆ ನಡೆಸಲಾಗುತ್ತಿದೆ ಎಂದು ಮುಸ್ಲಿಂ ಧಾರ್ಮಿಕ ಮುಖಂಡ ಶಾಹುಲ್ ಹಮೀದ್ ಮುಕ್ತಿಯಾರ್ ಆರೋಪಿಸಿದರು.

    ವಕ್ಫ್ ಕಾಯ್ದೆ(ತಿದ್ದುಪಡಿ) 2025 ಅನ್ನು ತಕ್ಷಣ ರದ್ದುಗೊಳಿಸಲು ಆಗ್ರಹಿಸಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯಿಂದ ನಗರದ ಸರ್ ಎಂ.ವಿಶ್ವೇಶ್ವರಯ್ಯ ರಸ್ತೆಯಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದರು.

    ನಾವೆಲ್ಲಾ ಭಾರತೀಯರೇ. ಈ ಮಣ್ಣಲ್ಲೇ ಹುಟ್ಟಿದವರು. ನಮಗೂ ಈ ದೇಶದಲ್ಲಿ ಸಂವಿಧಾನದ ಪ್ರಕಾರ ಎಲ್ಲಾ ಹಕ್ಕು ಇದೆ. ವಕ್ಪ್ ಕಾಯ್ದೆ ತಿದ್ದುಪಡಿ ನಮ್ಮ ಶರಿಯತ್‌ಗೆ ವಿರುದ್ಧವಾಗಿದೆ. ವಕ್ಫ್ ಆಸ್ತಿ ಒಬ್ಬ ವ್ಯಕ್ತಿಗೆ ಸಂಬಂಧಿಸಿದ್ದಲ್ಲ. ಅದು ಭಗವಂತನಿಗೆ ಸೇರಿದ್ದು ಇದನ್ನು ಎಲ್ಲಾ ಧರ್ಮೀಯರು ಲೂಟಿ ಮಾಡಿದ್ದಾರೆ. ವಕ್ಪ್ ಆಸ್ತಿಯನ್ನು ಯಾರೇ ಒತ್ತುವರಿ ಮಾಡಿದ್ದರೂ ಅದನ್ನು ಹಿಂದಿರುಗಿಸಲೇಬೇಕು. ಮುಸ್ಲಿಮರ ಆಸ್ತಿಗೆ ಬೇರೆ ಯಾರೂ ಕೈಹಾಕಲು ಸಾಧ್ಯವಿಲ್ಲ. ಈಗಿನ ಕಾನೂನಿನಂತೆ 20-30 ವರ್ಷಗಳ ಕಾಲ ಆತ ವಕ್ಪ್ ಆಸ್ತಿ ಬಳಸಿಕೊಂಡಿದ್ದರೆ ಅದು ಅವನಿಗೇ ನೀಡಬೇಕಾಗುತ್ತದೆ ಎಂದಿದೆ ಎಂದರು.

    ಚಿಂತಕ ಸುಧೀರ್ ಕುಮಾರ್ ಮರೊಳ್ಳಿ ಮಾತನಾಡಿ, ಪ್ರಧಾನಿ ಮೋದಿಯುವರು ದೇಶವನ್ನು ಕಟ್ಟುವ ಕೆಲಸ ಮಾಡುತ್ತಿಲ್ಲ, ಕೋಮುಗಳ ನಡುವೆ ಹೊಡೆದಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಈ ದೇಶ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಜನರ ಭಾವನೆಗಳನ್ನು ನಾಶ ಮಾಡಲಾಗುತ್ತಿದೆ. ವಕ್ಫ್ ಕಾಯ್ದೆ ಜಾರಿಗೆ ತರುವ ಹಿಂದೆ ರಾಜಕೀಯ ಷಂಡ್ಯತ್ರ ಇದೆ. ಈ ವಕ್ಫ್ ಕಾಯಿದೆ ಸಂವಿಧಾನದ ವಿರೋಧಿಯಾಗಿದೆ ಎಂದರು.

    ವಕ್ಫ್ ಆಸ್ತಿ ಯಾರ ವೈಯುಕ್ತಿಕ ಆಸ್ತಿ ಅಲ್ಲ, ಅದು ಪರಮಾತ್ಮನ ಆಸ್ತಿ. ವಕ್ಫ್ ಆಸ್ತಿಗೂ ಅಮಿತ್ ಷಾ ಗೂ ಮೋದಿಗೂ ಏನ್ ಸಂಬಂಧ ಎಂದು ಪ್ರಶ್ನಿಸಿದ ಅವರು, ಮತ ರಾಜಕಾರಣ ಕೈಬಿಡುವಂತೆ ಆಗ್ರಹಿಸಿದರು.

    ಭಾರತದ ಮುಸ್ಲಿಮರ ಧ್ವನಿಯಾಗಿ ವಕ್ಪ್ ತಿದ್ದುಪಡಿ ಕಾಯ್ದೆ ಇಲ್ಲ. ಇದರಿಂದ ವಕ್ಫ್ ಆಸ್ತಿಗಳ ಸ್ವಾಯತ್ತತೆ ಕಸಿದುಕೊಳ್ಳುತ್ತದೆ. ಸಂವಿಧಾನದ ಗ್ಯಾರಂಟಿಗಳನ್ನು ಉಲ್ಲಂಘಿಸುತ್ತದೆ. ಭಾರತದ ಜಾತ್ಯತೀತ ರಚನೆಗೆ ಧಕ್ಕೆ ತರುತ್ತದೆ ಎಂದು ಮುಸ್ಲಿಂ ಮುಖಂಡರು ಆರೋಪಿಸಿದರು.
    ಕೇಂದ್ರ ಹಾಗೂ ರಾಜ್ಯ ವಕ್ಪ್ ಮಂಡಳಿಗಳಿಗೆ ಮುಸ್ಲಿಮೇತರರನ್ನು ಕಡ್ಡಾಯವಾಗಿ ಸೇರಿಸುವುದು ಸಂವಿಧಾನದ ೨೬ನೇ ವಿಧಿಯ ಅನ್ವಯ ಉಲ್ಲಂಘನೆಯಾಗುತ್ತದೆ. ಇದು ಮುಸ್ಲಿಮರಿಗೆ ತಮ್ಮ ಧಾರ್ಮಿಕ ಸಂಸ್ಥೆಗಳನ್ನು ನಿರ್ಮಿಸುವ ಹಕ್ಕನ್ನು ಕಸಿದುಕೊಳ್ಳುತ್ತದೆ. ಹಿಂದೂ, ಸಿಖ್ ಅಥವಾ ಇತರ ಧಾರ್ಮಿಕ ಆಸ್ತಿಗಳಿಗೆ ಇಂತರ ನಿಯಮ ಇಲ್ಲ ಎಂದರು.

    ದಾಖಲೆ ಇಲ್ಲದ ಮಸೀದಿಗಳು, ಖಬರಸ್ಥಾನಗಳು ಮತ್ತು ದರ್ಗಾಗಳಿಗೆ ಅಪಾಯವನ್ನೊಡ್ಡುತ್ತದೆ. ಸರ್ಕಾರದ ಕೈವಶವಾಗಬಹುದು ಎಂಬ ಆತಂಕವನ್ನು ಪ್ರತಿಭಟನಾಕಾರರು ವ್ಯಕ್ತಪಡಿಸಿದರು.
    ವಕ್ಪ್ ಆಸ್ತಿಯ ಮಾಲೀಕತ್ವವನ್ನು ಜಿಲ್ಲಾಧಿಕಾರಿಗಳೇ ನಿರ್ಧರಿಸುವ ಅಧಿಕಾರ ನೀಡುವುದು ನ್ಯಾಯಾಲಯದ ಮೇಲ್ವಿಚಾರಣೆ ಇಲ್ಲದೇ ಸ್ವೇಚ್ಛಾಚಾರ ತೀರ್ಮಾನಕ್ಕೆ ದಾರಿ ಮಾಡುತ್ತದೆ. ಅಲ್ಲದೇ, ಇದು ವಕ್ಫ್ ಮಂಡಳಿಗಳ ಸ್ವಾಯತ್ತತೆಗೆ ಧಕ್ಕೆ ತರುತ್ತದೆ ಎಂದರು.

    ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು, ಮೊಹಮ್ಮದ್ ಇರ್ಫಾನ್ ಖಾನ್, ಏಜಾಜ್ ಪಾಶಾ, ಮುಫ್ತಿ ಸೈಯದ್ ಮುಜೀಬುಲ್ಲಾ, ಮುಫ್ತಿ ಮೊಹಮ್ಮದ್ ಶಫೀವುಲ್ಲಾ ಕಾಸ್ಮಿ, ಶೇಖ್ ಅಲಿ, ಮೌಲಾನಾ ಆಮಿದ್ ಉಮರಿ, ಮೌಲಾನಾ ಅಬ್ದುಲ್ ಜಬ್ಬಾರ್ ಸಾಧಿಕ್, ಅಫ್ತರ್ ಕೋಡಿಬೇಂದ್ರೆ, ಮೌಲಾನಾ ಜಬೀವುಲ್ಲಾ ಸಾಬ್, ಮುಫ್ತಿ ಇಫ್ತಾಬ್ ಸಾಹೇಬ್, ಜಾಮಿಲ್ ಉಮ್ರಿ ಇದ್ದರು.

    ಬೃಹತ್ ಪ್ರತಿಭಟನೆ: ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ವತಿಯಿಂದ ಜಿಲ್ಲಾ ವಕ್ಪ್(ಮುಸ್ಲಿಂ ಹಾಸ್ಟೆಲ್ )ಕಛೇರಿಯಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಬೃಹತ್ ಪ್ರತಿಭಟನೆ ನಡೆಸಲಾಯಿತು. ಮಹಿಳೆಯರು,ಯುವಕರು, ಪುರುಷರು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು. ವಕ್ಫ್ ಬಚಾನೆ ಚಲೇ ಹೈ- ಆವೋ ಹಮಾರೆ ಸಾಥ್ ಚಲೋ, ದಸ್ತೂರ್ ಬಚಾನೆ ನಿಕ್ಲೆ ಹೈ – ಆವೋ ಹಮಾರೆ ಸಾಥ್ ಚಲೋ ಘೋಷಣೆ ಕೂಗಿದರು. ಮೆರವಣಿಗೆಯುದ್ದಕ್ಕೂ ಬಿಗಿ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

    ಪೊಲೀಸರು ಹೈಅಲರ್ಟ್: ಮುಸ್ಲಿಮರು ನಗರದಲ್ಲಿ ಭಾರೀ ಪ್ರತಿಭಟನೆಯ ಮೂಲಕ ಮೆರವಣಿಗೆ ನಡೆಸುತ್ತಾರೆ ಎಂಬ ಸುದ್ದಿ ತಿಳಿದ ಕೂಡಲೇ ಪೊಲೀಸರು ಅಲರ್ಟ್ ಆಗಿದ್ದರು. ಪ್ರತಿಭಟನೆ, ಯಾವುದೇ ಕ್ಷಣದಲ್ಲಿ ಏನಾದರೂ ತಿರುವು ತೆಗೆದುಕೊಳ್ಳಬಹುದೆಂಬ ಅನುಮಾನವಿದ್ದುದರಿಂದ ನಗರದಾದ್ಯಂತ ಬಿಗಿ ಪೊಲೀಸ್ ಭದ್ರತೆಯನ್ನು ಕೈಗೊಳ್ಳಲಾಗಿತ್ತು. ನಗರವಲ್ಲದೇ ಸುತ್ತಮುತ್ತಲ ಜಿಲ್ಲೆಗಳಿಂದಲೂ ಹೆಚ್ಚುವರಿ ಪೊಲೀಸರನ್ನು ಕರೆಸಿಕೊಳ್ಳಲಾಗಿತ್ತು. ಪ್ರತಿಭಟನೆ ನಡೆಯುವ ಮುಖ್ಯ ರಸ್ತೆಯಲ್ಲಿ ಭಾರೀ ಭದ್ರತೆ ಹಾಕಿದ್ದು, ಸಂಪರ್ಕ ರಸ್ತೆಗಳನ್ನು ಬಂದ್ ಮಾಡಲಾಗಿತ್ತು.ಎಸ್ಪಿ ಜಿ.ಕೆ. ಮಿಥುನ್ ಕುಮಾರ್ ಮತ್ತು ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಸ್ಥಳದಲ್ಲೇ ಇದ್ದು, ಬಂದೋಬಸ್ತ್ ಮೇಲ್ವಿಚಾರಣೆ ವಹಿಸಿದ್ದರು. ಪ್ರತಿಭಟನೆಯಲ್ಲಿ 5 ಸಾವಿರಕ್ಕೂ ಮುಸ್ಲಿಂ ಸಮುದಾಯದವರು ಭಾಗವಹಿಸಿದ್ದರು.

  • ಉಡುಪಿ: ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನ

    ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವ ಸ್ಪಂದನ ಕೇಂದ್ರದಲ್ಲಿ ಗೌರವಧನ ಆಧಾರದ ಮೇಲೆ ಯುವ ಪರಿವರ್ತಕರ ಹುದ್ದೆಯ ಕರ್ತವ್ಯ ನಿರ್ವಹಿಸಲು ಯಾವುದೇ ಪದವಿ ಅಥವಾ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ 21 ರಿಂದ 35 ವರ್ಷದೊಳಗಿನ ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    ಕನ್ನಡ ಸ್ಪಷ್ಠವಾಗಿ ಮಾತನಾಡಬಲ್ಲ, ಸಂವಹನ ಕಲೆ ಕೌಶಲ್ಯ ಹೊಂದಿರುವ ಹಾಗೂ ಸಮುದಾಯದಲ್ಲಿ ಕೆಲಸ ಮಾಡಿದವರಿಗೆ ಆದ್ಯತೆ ನೀಡಲಾಗುವುದು.

     ಸ್ವ-ವಿವರ ಹಾಗೂ ಮೂಲ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಲು ಮೇ 15 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಜ್ಜರಕಾಡು, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. 

  • ಕೋಮುದ್ವೇಷ ಭಾಷಣ ಆರೋಪ – ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

    ಮಂಗಳೂರು: ಮುಸ್ಲಿಂ ಧರ್ಮದವಿರುದ್ಧ ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಭಾಷಣ ಆರೋಪದಡಿ ಬೆಳ್ತಂಗಡಿ ವಿಧಾನಸಭಾ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

    ಶನಿವಾರ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಕೋಮು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ತೆಕ್ಕಾರು ನಿವಾಸಿ ಇಬ್ರಾಹಿಂ.ಎಸ್.ಬಿ ದೂರು ದಾಖಲಿಸಿದ್ದಾರೆ.

  • ಕಾರ್ಕಳ: ಕಸಬಾ ಗ್ರಾಮದಲ್ಲಿ ಸೈಬರ್ ಕ್ರೈಂ, ಬಾಲ್ಯ ವಿವಾಹದ ಬಗ್ಗೆ ಅರಿವು ಕಾರ್ಯಕ್ರಮ

    ಕಾರ್ಕಳ: ಕಾರ್ಕಳ ನಗರ ಪೊಲೀಸ್ ಠಾಣಾ ಸರಹದ್ದಿನ ಕಸಬಾ ಗ್ರಾಮದ ಕಲ್ಲೊಟ್ಟೆಗೆ ಭೇಟಿ ನೀಡಿ ಸಾರ್ವಜನಿಕರಿಗೆ ಸೈಬರ್ ಕ್ರೈಂ, ಫೇಸ್ಬುಕ್, ವಾಟ್ಸಾಪ್ ಬಳಕೆ, ಬಾಲ್ಯ ವಿವಾಹ, ಪೋಕ್ಸೋ ಸಂಬಂಧಿತ ಮಾಹಿತಿ, ಬಗ್ಗೆ ಅರಿವು ಮೂಡಿಸಲಾಯಿತು