Category: Karnataka Politics

  • Udupi: Election Commission Issues Notice to Bharatiya Janashakti Congress for Inactivity

    Udupi, August 13, 2025: The Election Commission of India (ECI) has issued a show-cause notice to the Bharatiya Janashakti Congress, an unregistered political party based in Udupi, on August 12, 2025. The ECI cited the party’s failure to contest any elections since 2019, rendering it inactive for six years, as the basis for proposing the cancellation of its registration under Section 29A of the Representation of the People Act, 1951.

    The party, registered at D.No. 4-148/A, Paniyoor Road, Uchila, Udupi, is required to submit a certified written response from its president or general secretary by September 1, 2025, and mandatorily participate in a hearing. Failure to comply will result in the party’s deregistration without further notice.

  • Mallikarjun Kharge Alleges Vote Theft Led to His First Electoral Defeat in 2019

    Bengaluru, August 8, 2025: Congress President Mallikarjun Kharge, known for his undefeated record in elections, alleged on Friday that his first-ever defeat in the 2019 Lok Sabha elections was due to widespread electoral fraud orchestrated by the Bharatiya Janata Party (BJP).

    Speaking at a massive Congress protest against alleged vote theft at Freedom Park in Bengaluru, Kharge claimed, “In my over 50 years of political life, I won more than 12 elections. However, in the 2019 Lok Sabha elections, I faced my first defeat due to electoral rigging.”

    Kharge accused the BJP of engaging in “fake voting” across five Assembly segments within the Gulbarga Lok Sabha constituency, where he contested in 2019. He alleged that the BJP secured approximately 20,000 votes per segment through fraudulent means.

    Targeting the Modi government, Kharge further claimed that the BJP has misused agencies like the Enforcement Directorate (ED), Central Bureau of Investigation (CBI), and Income Tax Department to intimidate opponents and cling to power.

    Citing Karnataka as an example, he said, “Despite lacking a clear majority, the BJP toppled the then-ruling coalition government by inducing defections of several MLAs. The same tactics were used in Goa, Maharashtra, and Manipur. They didn’t win elections but bought governments with money.”

    Kharge also alleged that the BJP’s victory in the 2024 Lok Sabha elections was not legitimate. “The secret behind BJP’s win has now been exposed. They secured victory through vote theft,” he stated, adding that the Congress would take this issue to the people across the country.

  • Rahul Gandhi exposed widespread vote theft in LS polls with evidence: Siddaramaiah

    Bengaluru, August 8, 2025: Karnataka Chief Minister Siddaramaiah has backed Congress Leader of Opposition in Lok Sabha, Rahul Gandhi, in alleging widespread electoral fraud in the recent Lok Sabha elections. Siddaramaiah claimed that Gandhi presented “hard evidence” on Thursday, revealing systematic vote theft across India, enabling Prime Minister Narendra Modi to retain power.

    In a media statement, Siddaramaiah asserted, “Despite massive public discontent, Narendra Modi secured power through electoral fraud. The documents released by Rahul Gandhi provide undeniable proof.” He further demanded Modi’s resignation, stating, “Modi has no moral right to remain in office. He must resign and dissolve the government immediately.”

    The Congress Party, under Gandhi’s leadership, conducted a six-month investigation into voter records in the Mahadevapura Assembly segment of Bengaluru Central Lok Sabha constituency. The probe allegedly uncovered evidence of systematic vote theft, with the Bharatiya Janata Party (BJP) accused of illegally securing 1,00,250 votes in a constituency of approximately 3.25 lakh voters.

    Siddaramaiah highlighted five methods of alleged electoral malpractice in Mahadevapura:

    1. Fake Voters: Approximately 11,965 fake voters reportedly cast votes, with some individuals voting in multiple polling booths and even outside Karnataka, indicating deliberate misuse of the electoral process.
    2. Voters with Fake Addresses: Around 40,009 voters were registered with non-existent addresses, including “House Number 0” or random, invalid entries for names and addresses.
    3. Multiple Voters at Single Addresses: A total of 10,452 voters were registered under a few addresses, including 80 voter IDs linked to a single-bedroom house and 68 to a private club, with none of the listed voters residing at these locations.
    4. Unidentifiable Voter Photographs: About 4,132 voter ID cards had missing or unclear photos, yet these voters were allowed to cast ballots, breaching electoral protocols.
    5. Elderly “First-Time Voters”: An astonishing 33,692 voters aged 60 to 90 were registered as first-time voters via Form 6, including individuals as old as 89 and 98, raising suspicions of fraudulent registrations.

    Siddaramaiah accused the Election Commission of complicity, alleging it altered rules to suppress information and withhold electronic data and CCTV footage requested by Gandhi. “Had the Election Commission acted impartially, this scam could have been exposed within days,” he said, adding that similar tactics were likely employed nationwide by the BJP to retain power.

    The Congress Party vowed to escalate its campaign, promising to raise awareness of the alleged fraud across the country.

  • ಮಾದಕದ್ರವ್ಯ ಸಾಗಾಟ ಆರೋಪ; ಲಿಂಗರಾಜ ಕಣ್ಣಿ ಕಾಂಗ್ರೆಸ್‌ನಿಂದ ಉಚ್ಚಾಟನೆ

    ಲಬುರಗಿ, ಜುಲೈ 14, 2025: ಮಾದಕದ್ರವ್ಯ ಸಾಗಾಟ ಆರೋಪದಲ್ಲಿ ಮಹಾರಾಷ್ಟ್ರದ ಕಲ್ಯಾಣ ಪೊಲೀಸರಿಂದ ಬಂಧನಗೊಂಡ ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ್ ಕಣ್ಣಿರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. 2023ರಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮಾಜಿ ಸದಸ್ಯರಾಗಿದ್ದ ಲಿಂಗರಾಜ್ ಕಣ್ಣಿ ಕಾಂಗ್ರೆಸ್‌ಗೆ ಸೇರಿದ್ದರು.

    ಈ ಬಗ್ಗೆ ಕಲಬುರಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮತ್ತು ಎಂಎಲ್ಸಿ ಜಗದೇವ್ ಗುತ್ತೇದಾರ್ ಅವರು ಆದೇಶ ಹೊರಡಿಸಿದ್ದು, ಲಿಂಗರಾಜ್ ಕಣ್ಣಿ ಮಾದಕದ್ರವ್ಯ ಸಾಗಾಟದಲ್ಲಿ ಭಾಗವಹಿಸಿದ ಆರೋಪದ ಕಾರಣದಿಂದ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತೆಗೆದುಹಾಕಲಾಗಿದೆ ಎಂದು ತಿಳಿಸಿದ್ದಾರೆ.

    ಮಹಾರಾಷ್ಟ್ರದ ಥಾಣೆ ನಗರದಲ್ಲಿ ಮಾದಕದ್ರವ್ಯ ಮಾರಾಟ ಮಾಡುವ ವೇಳೆ ಲಿಂಗರಾಜ ಕಣ್ಣಿ ಸಿಕ್ಕಿ ಬಿದ್ದಿದ್ದರು. ಅವರ ಬಳಿ ನಿಷೇಧಿತ 120 ಕೊಡೆನೈನ್ ಸಿರಪ್ ಪತ್ತೆಯಾಗಿದ್ದು, ಈ ಆರೋಪದಡಿ ಬಂಧನಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಸಂಬಂಧ ಕಲ್ಯಾಣ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.

  • ಬೀಜಾಡಿ: ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

    ಕುಂದಾಪುರ: ಬ್ಲಾಕ್ ಕಾಂಗ್ರೆಸ್ ಸಮಿತಿ ಕುಂದಾಪುರ ವತಿಯಿಂದ ಬೀಜಾಡಿ ಗ್ರಾಮ ಪಂಚಾಯತ್ ಮುಂದೆ ಬಿಜೆಪಿಯ ವಿರುದ್ಧ ಸತ್ಯದರ್ಶನ ಪ್ರತಿಭಟನೆ ನಡೆಯಿತು.

    ಪ್ರತಿಭಟನಾ ಸಭೆಯಲ್ಲಿ ಪಿ‌ಎಲ್ ಡಿ ಬ್ಯಾಂಕಿನ ಅಧ್ಯಕ್ಷರಾದ ಶಿವರಾಮ ಶೆಟ್ಟಿ, ಪಕ್ಷದ ನಾಯಕರಾದ ಅಶೋಕ್ ಪೂಜಾರಿ ಬೀಜಾಡಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ವಿನೋದ್ ಕ್ರಾಸ್ಟೊ, ಹಿರಿಯರಾದ ಬಿ ಹಿರಿಯಣ್ಣ, ತಾಲೂಕು ಕೆ.ಡಿ.ಪಿ ಸದಸ್ಯರಾದ ರಮೇಶ್ ಶೆಟ್ಟಿ, ಪಂಚಾಯತ್ ಸದಸ್ಯರಾದ ಶೇಖರ ಚಾತ್ರಬೆಟ್ಟು, ಜೆಸಿಂತಾ ಡಿಮೆಲ್ಲೊ, ಗುಲಾಬಿಯಮ್ಮ, ಅನಿಲ್, ಆನಂದ ಬಂಗೇರ, ಅಲ್ಪಸಂಖ್ಯಾತ ಘಟಕದ ಬ್ಲಾಕ್ ಅಧ್ಯಕ್ಷ ಮುನಾಫ್ ಕೋಡಿ, ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ನೌಫಲ್, ಕಾರ್ಯದರ್ಶಿ ಪೈಸಲ್, ಅನಿಶ್, ರೇಣುಕಾ, ಸುರೇಶ್, ಶಂಕರ್ ಚಾತ್ರಬೆಟ್ಟು ಅಶೋಕ್ ಪೂಜಾರಿ ಚಾತ್ರಬೆಟ್ಟು , ಪ್ರಕಾಶ್, ಮಹೇಶ್ ಕುಂದರ್, ಉದಯ, ಉಷಾ, ನಾಗರತ್ನ, ಭಾರತಿ, ಶಾರದಾ , ರಮೇಶ್ ಕುಂದರ್, ನಾರಾಯಣ ಗಾಣಿಗ, ಮುತ್ತಾ, ಬಸವ , ನಾರಾಯಣ ಮೊಗವೀರ ಇನ್ನಿತರ ಉಪಸ್ಥಿತರಿದ್ದರು.

  • ಅನಿತಾ ಬಾಬು ಪೂಜಾರಿ ಬ್ರಹ್ಮಾವರ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆ

    ಬ್ರಹ್ಮಾವರ, ಜುಲೈ 10, 2025: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಬ್ಲಾಕ್ ಮಹಿಳಾ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಅನಿತಾ ಬಾಬು ಪೂಜಾರಿ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮಹಿಳಾ ಮಂಡಳಿಯ ಸದಸ್ಯರು ಅನಿತಾ ಪೂಜಾರಿಗೆ ಶುಭ ಕೋರಿದ್ದಾರೆ.

  • ಶಿರೂರು: ಕಾಂಗ್ರೆಸ್‌ ಸತ್ಯದರ್ಶನ ಪ್ರತಿಭಟನೆ,ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಪಕ್ಷದ ಕುರಿತು ಮಾತನಾಡುವ ನೈತಿಕತೆ ಇಲ್ಲಾ – ಕೆ.ಗೋಪಾಲ ಪೂಜಾರಿ

    ಶಿರೂರು: ಬ್ಲಾಕ್ ಕಾಂಗ್ರೆಸ್ ಬೈಂದೂರು ಇದರ ವತಿಯಿಂದ 9/11, ಆಕ್ರಮ -ಸಕ್ರಮ ಅರ್ಜಿ ತಿರಸ್ಕಾರ,ಪಿಂಚಣಿ ರದ್ದತಿ,ವಿದ್ಯುತ್ ದರ ಏರಿಕೆ ಕುರಿತು ಬಿಜೆಪಿ ಸುಳ್ಳಿನ ಪ್ರತಿಭಟನೆಗೆ ಕಾಂಗ್ರೆಸ್‌ ಸತ್ಯದರ್ಶನ ಪ್ರತಿಭಟನೆ ಸೋಮವಾರ ಶಿರೂರು ಗ್ರಾಮ ಪಂಚಾಯತ್ ಎದುರು ನಡೆಯಿತು.

    ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ ಕೇಂದ್ರದಲ್ಲಿ ಬಿಜೆಪಿ ಸರಕಾರ ದೇಶವನ್ನು ಕೊಳ್ಳೆ ಹೊಡೆಯುತ್ತಿದೆ.ಹಿಂದೂತ್ವದ ಹೆಸರಿನಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಬಿಜೆಪಿಗರ ನಿಜ ಬಣ್ಣ ಕರಾವಳಿ ಜನರಿಗೆ ಸತ್ಯದರ್ಶನವಾಗಿದೆ.ಆಕ್ರಮ ಗೋ ಸಾಗಾಟದಲ್ಲಿ ಬಿಜೆಪಿ ನಾಯಕರು ಶಾಮೀಲಾಗುವ ಜೊತೆಗೆ ಬಿಜೆಪಿ ಮುಖಂಡರ ನಂಗಾನಾಚ್ ಬಗ್ಗೆ ತುಟಿಬಿಚ್ಚುತ್ತಿಲ್ಲ. ಅಭಿವೃದ್ದಿ ಕಾರ್ಯಗಳಿಗೆ ಕಾಂಗ್ರೆಸ್ ಹಸ್ತಕ್ಷೇಪ ಮಾಡಿಲ್ಲ.ಜಿ.ಎಸ್.ಟಿ ತೆರಿಗೆ ಮೂಲಕ ರಾಜ್ಯವನ್ನು ಕೊಳ್ಳೆ ಹೊಡೆಯಲಾಗಿದೆ.ಬಡವರ ಪರ ಇರುವ ಆಶ್ರಯ ಯೋಜನೆ,ಆರಾಧನ,ಆಕ್ರಮ -ಸಕ್ರಮ,94/c, ಪಿಂಚಣಿ  ಮುಂತಾದ ಯೋಜನೆಗಳು ಕಾಂಗ್ರೆಸ್ ಅವಧಿಯಲ್ಲಿ ಜಾರಿಗೆ ಬಂದಿದೆ.ಬಿಜೆಪಿ ನಾಯಕರು ಕಾಂಗ್ರೆಸ್ ಕುರಿತು ಮಾತನಾಡುವ ನೈತಿಕತೆ ಇಲ್ಲಾ ಎಂದು ಹೇಳಿದರು.

    ಶಾಸಕರ ನಡೆ ವಿರುದ್ದ ಶೀಘ್ರದಲ್ಲಿ ಪ್ರತಿಭಟನೆ: ಬೈಂದೂರು ಕ್ಷೇತ್ರಕ್ಕೆ ಆಘಾದವಾದ ರಾಜಕೀಯ ಹಿನ್ನೆಲೆಯಿದೆ.ಈ ಕ್ಷೇತ್ರವನ್ನು ಪ್ರತಿನಿಧಿಸಿದ ಪ್ರತಿ ಶಾಸಕರು ಒಂದಿಷ್ಟು ಬದ್ದತೆಯಲ್ಲಿ ಕಾರ್ಯನಿರ್ವಹಿಸಿದ್ದಾರೆ.ಆದರೆ ಈ ಬಾರಿಯ ಬಿಜೆಪಿ ಶಾಸಕರು ಮಾತ್ರ ನಿಯಮಗಳನ್ನು ಗಾಳಿಗೆ ತೂರಿದ್ದಾರೆ.ಕ್ಷೇತ್ರದ ಜನರಿಗೆ ಅನುಕೂಲವಾಗಲು ಶಾಸಕರ ಕಛೇರಿಯನ್ನು ಬೈಂದೂರಿನಲ್ಲಿ ಸ್ಥಾಪಿಸಲಾಗಿದೆ.ಆದರೆ ಶಾಸಕರು ಮಾತ್ರ ಉಪ್ಪುಂದದ ಪಕ್ಷದ ಕಛೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸುತ್ತಾರೆ.ಖಾಸಗಿ ಕಛೇರಿಯಲ್ಲಿ ಸಂಜೀವಿನಿ ಸೇರಿದಂತೆ ಸರಕಾರಿ ಅಧಿಕಾರಿಗಳ ಸಭೆ ನಡೆಸುವುದು ಸರಿಯಲ್ಲ.ಇದು ಮುಂದುವರಿದರೆ ಶಾಸಕರ ನಡೆ ವಿರುದ್ದ ಶೀಘ್ರ ಪ್ರತಿಭಟನೆ ಮಾಡಲಾಗುತ್ತದೆ ಎಂದು ಮಾಜಿ ಶಾಸಕರು ಹೇಳಿದರು.

    ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ ಸದಸ್ಯರಾದ ಪ್ರಕಾಶ್ಚಂದ್ರ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಎಸ್.ರಾಜು ಪೂಜಾರಿ,ಶೇಖರ ಪೂಜಾರಿ ಉಪ್ಪುಂದ,ಶಿರೂರು ಗ್ರಾ.ಪಂ ಅಧ್ಯಕ್ಷೆ ನಾಗರತ್ನ ಆಚಾರ್ಯ,ಉಪಾಧ್ಯಕ್ಷ ಕಾಪ್ಸಿ ನೂರ್‌ಮಹ್ಮದ್,ಗೌರಿ ದೇವಾಡಿಗ,ಯುವ ಕಾಂಗ್ರೆಸ್‌ಅಧ್ಯಕ್ಷ ಭರತ್ ದೇವಾಡಿಗ,ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮೋಹನ ಪೂಜಾರಿ,ಮುಖಂಡರಾದ ರಘುರಾಮ ಶೆಟ್ಟಿ,ಮುಖಂಡರಾದ ರಘುರಾಮ ಕೆ.ಪೂಜಾರಿ,ಉದಯ ಪೂಜಾರಿ,ಪ್ರಸನ್ನ ಕುಮಾರ್ ಶೆಟ್ಟಿ,ಮುಕ್ರಿ ಅಲ್ತಾಫ್,ಮಹ್ಮದ್ ಗೌಸ್,ದಿಲ್‌ಶಾದ ಬೇಗಂ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಜರಿದ್ದರು.

    ಬೈಂದೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮದನ್ ಕುಮಾರ್ ಉಪ್ಪುಂದ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬೈಂದೂರು ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಅರವಿಂದ ಪೂಜಾರಿ ನಾಡ ಕಾರ್ಯಕ್ರಮ ನಿರೂಪಿಸಿದರು.ಜಗದೀಶ ದೇವಾಡಿಗ ವಂದಿಸಿದರು.

  • ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಿಗೆ ಬಹಿರಂಗ ಪತ್ರ ಬರೆದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್

    ಉಡುಪಿ: ರಾಜ್ಯದ ಮಹಿಳಾ ಕಾಂಗ್ರೆಸ್ ನ ರಾಜಾಧ್ಯಕ್ಷೆ ಆಗಿರುವ ಸೌಮ್ಯ ರೆಡ್ಡಿ ಅವರನ್ನು ಟೀಕಿಸಿರುವ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಸಂಧ್ಯಾ ರಮೇಶ್ ಅವರಿಗೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಜ್ಯೋತಿ ಹೆಬ್ಬಾರ್ ಅವರು ಬಹಿರಂಗ ಪತ್ರ ಬರೆದಿದ್ದಾರೆ.

    ಸಂಧ್ಯಾ ರಮೇಶ್ ಅವರಿಗೆ ಬರೆದ ಬಹಿರಂಗ ಪತ್ರದ ವಿವರ

    1. ತಮ್ಮ ಪಕ್ಷದವರಾದ ಶ್ರೀ.ಸಿ.ಟಿ. ರವಿ ಹಾಗೂ ಶ್ರೀ ರವಿಕುಮಾರ್ ಮಹಿಳೆಯರ ಬಗ್ಗೆ ಮಾತನಾಡುವ ಅಸಹ್ಯಕರ, ಅಪಾರ್ಥ ಮಾತುಗಳು ಮಾತ್ರ ಉಪದೇಶವಾಗಿ ತಾವು ಸ್ವೀಕರಿಸುತ್ತೀರಾ? ಅಭಿಪ್ರಾಯ ಕೋರಲಾಗಿದೆ.
    2. ತಮ್ಮ‌ ನಾಯಕರುಗಳ ಮಾತುಗಳಿಗೆ ಯಾವುದೇ ಅನಗತ್ಯ ಆಕ್ಷೇಪ‌, ತಕರಾರು ಇಲ್ಲವೇ?
    3. ರಾಜ್ಯದ ಮಹಿಳಾ ಕಾಂಗ್ರೆಸ್ ನ ಅಧ್ಯಕ್ಷರಾಗಿರುವ ಸೌಮ್ಯ ರೆಡ್ಡಿ ಮೇಡಂ ಅವರು ಮಾತನಾಡಿದರೆ, ಅದು  ಉಪದೇಶ, ಅದು ತಮಗೆ ಅನಗತ್ಯವೆಂದಾದರೇ, ಮಹಿಳೆಯರ ಬಗೆಗಿನ ತಮ್ಮ‌ ನಿಲುವೇನು?
    4. ರಾಜಕೀಯದಲ್ಲಿ ಸೋಲು‌ ಗೆಲುವು‌ ಸಾಮಾನ್ಯ ,  ಘಟಾನುಘಟಿ‌ನಾಯಕರುಗಳೇ , ಒಂದಲ್ಲ‌ ಎರೆಡೆರಡು ಬಾರಿ‌ ಸೋತು ಗೆದ್ದಿದ್ದಾರೆ, ( ಮಾಜಿ ಪ್ರಧಾನಮಂತ್ರಿಗಳಾದ ಶ್ರೀ‌.ಹೆಚ್.ಡಿ ದೇವೇಗೌಡರು, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್ ಯಡಿಯೂರಪ್ಪ, ಶ್ರೀ ಜಗದೀಶ್ ಶೆಟ್ಟರ್, ಪ್ರಸ್ತುತ ತಮ್ಮ ಕೇಂದ್ರ ಸರ್ಕಾರದಲ್ಲಿ ಮಂತ್ರಿಗಳಾಗಿರುವ ಶ್ರೀ ಹೆಚ್.ಡಿ. ಕುಮಾರಸ್ವಾಮಿ, ಶ್ರೀ ವಿ.ಸೋಮಣ್ಣ, ಕು. ಶೋಭ ಕಾರದ್ಲಾಂಜೆ, ಇನ್ನು ಹೆಸರುಗಳು ಬೇಕಿದ್ದರೆ ತಿಳಿಸುತ್ತೇವೆ.
    5. ಇದೆಲ್ಲ ದೊಡ್ಡ ವಿಷಯ ಬಿಡಿ, ನೀವು ಎಂದಾದರೂ ಚುನಾವಣೆಯಲ್ಲಿ‌‌ ನಿಂತು ಜನಾಭಿಪ್ರಾಯ ‌ಪಡೆದು‌ ಯಾವುದೇ ಶಾಸಕ‌ ಸ್ಥಾನಮಾನ ಅಲಂಕರಿಸಿದ್ದೀರಾ? ಅದು ಬೇಡ ಗ್ರಾಮ ಪಂಚಾಯಿತಿ ಚುನಾವಣೆಗಾದರೂ ನಿಂತಿದ್ದೀರಾ ? ಸೌಮ್ಯ ರೆಡ್ಡಿ‌ ಮೇಡಂ ಅವರು ಸೋತಿದ್ದಾರೆ ಎಂದು ಹೇಳುವ ಯಾವ‌ ನೈತಿಕತೆ‌‌ ತಮಗಿದೆ ?
    6. ಸೋತಿರಬಹುದು ಆದರೂ ಮತ್ತೊಮ್ಮೆ ಪುಟಿದೇಳಬೇಕು ಎನ್ನುವ ಛಲವಿರುವ, ಆತ್ಮ ವಿಶ್ವಾಸ ತೋರುವ ಹೆಣ್ಣುಮಕ್ಕಳನ್ನು ಗೌರವಿಸುವ ಸೌಜನ್ಯ ಬೇಡವೇ? ‌ಇದೇ ತಾವು ತಮ್ಮ ಪಕ್ಷದವರಿಂದ ಕಲಿತಿರುವ ಉಪದೇಶವೇ? ನಿಮ್ಮಂತಹವರಿಂದ ಮತ್ತೇನು ‌ನಿರೀಕ್ಷಿಸಲು ಸಾಧ್ಯ? 
    7. ಸಾರಿಗೆ ಸಂಸ್ಥೆಯಲ್ಲಿ  ತಮ್ಮ ಪಕ್ಷದ ಅವಧಿಯಲ್ಲಿ ರೂ.5900 ಕೋಟಿ ಸಾಲ ಬಿಟ್ಟು ಹೋಗಿದ್ದರು ಇದು ತಮಗೆ ತಿಳಿದಿಲ್ಲವಾದರೇ , ತಮ್ಮ‌ ಪಕ್ಷದವರಿಂದ ಉಪದೇಶ ಕೇಳಿ‌ ತಿಳಿದುಕೊಳ್ಳಬಹುದು.
    8. ಸಾರಿಗೆ ಸಂಸ್ಥೆಗಳಲ್ಲಿ ಕಳೆದ 8 ವರುಷಗಳಿಂದ ಒಂದೇ ಒಂದು‌ ನೇಮಕಾತಿ ಆಗಿರಲಿಲ್ಲ, ಸೌಮ್ಯ ರೆಡ್ಡಿ ‌ಮೇಡಂ ಅವರ  ತಂದೆಯವರ ಬಗ್ಗೆ ಮಾತನಾಡಿದ್ದೀರೋ, ಅದೇ  ಸಾರಿಗೆ ಸಚಿವರು ಅಧಿಕಾರವಹಿಸಿಕೊಂಡ‌ ನಂತರ 9000 ನೇರ ನೇಮಕಾತಿಗೆ ಅನುಮತಿ ನೀಡಿ‌, ಈಗಾಗಲೇ 7500 ನೇಮಕಾತಿ ಪೂರ್ಣಗೊಂಡಿದೆ.
    9. ಇದರೊಂದಿಗೆ ಮೃತಪಟ್ಟ ಸಾರಿಗೆ ಸಿಬ್ಬಂದಿಗಳ ಅವಲಂಬಿತರಿಗೆ ಕಳೆದ‌ ಎರಡು ವರ್ಷದಲ್ಲಿ 1000 ಅನುಕಂಪದ ಆಧಾರದ ನೌಕರಿ ನೀಡಿರುವುದು ಇದೇ ಸಾರಿಗೆ ಸಚಿವರು ಅಧಿಕಾರ ವಹಿಸಿಕೊಂಡ‌‌ ನಂತರ.
    10. ತಾವು ಸತ್ಯವನ್ನೇ ‌ನುಡಿದ್ದೀರಾ, ಸತ್ಯ ಬೆಂಕಿ‌ ಕೆಂಡವಿದ್ದಂತೆ ತುಂಬಾ ಹೊತ್ತು ಮುಚ್ಚಿಟ್ಟುಕೊಳ್ಳಲು ಸಾಧ್ಯವಿಲ್ಲ. ಧನ್ಯವಾದಗಳು. 
    11. ತಮ್ಮ‌ ಪಕ್ಷದ ಅಧಿಕಾರಾವಧಿಯಲ್ಲಿ ಒಂದೇ ಒಂದು ಹೊಸ‌ ಬಸ್ ಸೇರ್ಪಡೆಯಾಗಿರಲಿಲ್ಲ, ಡಕೋಟ ಬಸ್ ಕಲ್ಪಿಸಿದ ಕೀರ್ತಿ ತಮ್ಮ‌ ಪಕ್ಷಕ್ಕೆ ಸಲ್ಲಬೇಕು. ಡೀಸೆಲ್ ಪಾವತಿ ಬಾಕಿ ಇತ್ತು, ಶೂನ್ಯ  ನೇಮಕಾತಿ ಎಲ್ಲವೂ ತಮ್ಮ ಪಕ್ಷದ  ಕಾಲದಲ್ಲಿ.  ಆಗ ಉಡುಪಿ ‌ಭಾಗಕ್ಕೆ ಬಸ್ ಬೇಕು ಎಂದು ಕೇಳುವ ತಾಕತ್ತು‌‌ ತಮ್ಮಲ್ಲಿ ಇರಲಿಲ್ಲವೇ?
    12. ಇದೇ ಸಾರಿಗೆ ಸಚಿವರು‌ ಬಂದ ಮೇಲೆ‌  5800 ಹೊಸ ಬಸ್ಸುಗಳ ಸೇರ್ಪಡೆಗೆ ಅನುಮತಿ‌ ನೀಡಿದ್ದು ಈಗಾಗಲೇ 4987 ಬಸ್ಸುಗಳು ಸೇರ್ಪಡೆಯಾಗಿವೆ.
    13. ಉಡುಪಿ, ಮಂಗಳೂರು ,ಪುತ್ತೂರು ವ್ಯಾಪ್ತಿಯ ಘಟಕಗಳಿಗೆ ಚಾಲಕ ನಿರ್ವಾಹಕರಿಲ್ಲದೆ‌‌ ಬಸ್ಸುಗಳ‌ನ್ನು ಓಡಿಸಲು ಸಾಧ್ಯವಾಗದೇ, ಟ್ರಿಪ್ ಗಳನ್ನು ಕಡಿತಗೊಳಿಸಿದ್ದು ತಮ್ಮ‌‌‌ ಪಕ್ಷದ ಅಧಿಕಾರದ ಅವಧಿಯಲ್ಲಿ ಈ ಬಗ್ಗೆಯೂ ಉಪದೇಶ ಕೇಳಿ‌ ತಿಳಿದುಕೊಳ್ಳಬಹುದು.
    14. ಇದೇ ಸಾರಿಗೆ ಸಚಿವರು ಅಧಿಕಾರಕ್ಕೆ ಬಂದ‌ ಮೇಲೆ ಉಡುಪಿ, ಕುಂದಾಪುರ,ಮಂಗಳೂರು, ಪುತ್ತೂರು ಗೆ 800 ಹೊಸ ಚಾಲಕ/ನಿರ್ವಾಹಕರನ್ನು ನೇಮಕ ಮಾಡಿ‌ ಒದಗಿಸಿರುವುದು.
    15. 14. ಮುಜರಾಯಿ‌ ಇಲಾಖೆ‌‌ಯಲ್ಲಿ ಈವರೆಗೂ ಯಾವೊಬ್ಬ ಮಂತ್ರಿಯೂ ಮಾಡಿರದಂತಹ ಕ್ರಾಂತಿಕಾರಿ‌ ಕೆಲಸಗಳನ್ನು ಮಾಡಿ ಅರ್ಚಕರ‌‌‌ ಕಣ್ಮಣಿ ಎಂದೇ ಹೆಸರು‌ ಮಾಡಿರುವರು ಬೇರಾರು ಅಲ್ಲ, ,ಇದೇ ಸೌಮ್ಯ ರೆಡ್ಡಿ‌ಮೇಡಂ ರವರ ತಂದೆಯವರು.  
    16. ದೇವಸ್ಥಾನಗಳ ಅಭಿವೃದ್ಧಿಗೆ ಪ್ರಾಧಿಕಾರಗಳ ರಚನೆ:  ಚಾಮುಂಡಿ ಬೆಟ್ಟ ಮೈಸೂರು, ಘಾಟಿ ಸುಬ್ರಮಣ್ಯ ಸ್ವಾಮಿ ದೇವಸ್ಥಾನ, ಹುಲಿಗೆಮ್ಮ ದೇವಾಲಯ ಕೊಪ್ಪಳ, ಸವದತ್ತಿ ಯಲ್ಲಮ್ಮ ದೇವಾಲಯ
    17. DBT ಮೊಬೈಲ್  ಮೂಲಕ ತಸ್ತೀಕ್ ವರ್ಷಾಸನ ಜಮಾ
    18. ಅರ್ಚಕರು / ನೌಕರರು ಮತ್ತು ಅವರ ಕುಟುಂಬದವರಿಗೆ ಉಚಿತ ಕಾಶಿ-ಗಯಾ ಯಾತ್ರೆ ಹಾಗೂ ದಕ್ಷಿಣ ಯಾತ್ರೆ
    19. ಅರ್ಚಕರ / ನೌಕರರ ಮೃತ ಕುಟುಂಬಕ್ಕೆ ಪರಿಹಾರ ಧನ ರೂ. 30,000 ರಿಂದ ರೂ. 2.ಲಕ್ಷಕ್ಕೆ ಹೆಚ್ಚಿಸಲಾಗಿದೆ
    20. ಸಾಮೂಹಿಕ ಮದುವೆಗಳಿಗೆ ಉತ್ತೇಜನ: ʼಮಾಂಗಲ್ಯ ಭಾಗ್ಯʼ ಯೋಜನೆಯಡಿ ರೂ. 63,000/-ಗಳ ಪ್ರೋತ್ಸಾಹ ಧನ
    21. ಅರ್ಚಕರ / ನೌಕರರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಪ್ರೋತ್ಸಾಹ ಧನ‌‌ ನೀಡಿಕೆ ಪ್ರಾರಂಭ
    22. ಶ್ರೀ ಕುಕ್ಕೆ‌ಸುಬ್ರಹ್ಮಣ್ಯ ದೇವಸ್ಥಾನ ಸಮಗ್ರ ಅಭಿವೃದ್ಧಿ ಗೆ ಕ್ರಿಯಾಯೋಜನೆಗೆ ಅನುಮತಿ. ಈ ಯೋಜನೆಯಡಿ ಸರ್ಪ ಸಂಸ್ಕಾರ ಯಾಗ ಶಾಲೆ‌ ನಿರ್ಮಾಣ,‌ಅನ್ನ ದಾಸೋಹ ಭವನ ನಿರ್ಮಾಣ, ಪಾರಂಪರಿಕ‌ ರಥ ಬೀದಿ ನಿರ್ಮಾಣ, ವಸತಿ ಗೃಹಗಳ‌ ನವೀಕರಣ, ಶೌಚಾಲಯ, ಸ್ನಾನಗೃಹಗಳ ನಿರ್ಮಾಣ, ತ್ಯಾಜ್ಯವಿಲೇವಾರಿ ಘಟಕ, ನೀರಿನ ಶುದ್ದೀಕರಣ ಘಟಕ‌ ಹತ್ತು ಹಲವು ಅಭಿವೃದ್ಧಿ ಕಾರ್ಯಗಳಿಗೆ ಮಂಜೂರಾತಿ ನೀಡಿದ್ದಾರೆ.
    23. ಕನ್ನಡಿಗರ ಬಹುದಿನಗಳ‌ ಕನಸು‌‌ ತಿರುಪತಿಯಲ್ಲಿ ವಸತಿಗೃಹಗಳಾದ ಐಹೊಳೆ, ಹಂಪಿ‌ ಬ್ಲಾಕ್‌ಗಳ ಉದ್ಘಾಟನೆ
    24. ರೂ.500 ಕೋಟಿ‌ ಮೊತ್ತದ ದೇವಸ್ಥಾನಗಳ‌ ಆಸ್ತಿಯನ್ನು ಸಂರಕ್ಷಿಸಿ ದೇವಸ್ಥಾನಗಳ‌ ಸುಪರ್ದಿಗೆ ವಹಿಸಲಾಗಿದೆ.
    25. ಬೆಂಗಳೂರಿನಲ್ಲಿ ಧಾರ್ಮಿಕ ಸೌಧ‌‌ ನಿರ್ಮಾಣ, ಇ – ಪ್ರಸಾದ ಯೋಜನೆ ಜಾರಿ
    26. 25551 ದೇವಸ್ಥಾನಗಳಲ್ಲಿರುವ ಅರ್ಚಕರುಗಳಿಗೆ ನೀಡಲಾಗುತ್ತಿದ್ದ ತಸ್ತಿಕ್ ಹಣ ರೂ.60,000 ಗಳಿಂದ ರೂ.72,000 ಕ್ಕೆ ಹೆಚ್ಚಳ

    ಸಂಧ್ಯಾ ರಮೇಶ್ ಅವರೇ, ಸೌಮ್ಯ ರೆಡ್ಡಿ ಮೇಡಂ‌ ಅವರ ತಂದೆಯವರು ಯಾರು?  ಅವರ ಕಾರ್ಯವೈಖರಿ ಏನು ? ಎಂದು ತಿಳಿದುಕೊಳ್ಳಲು ಸಾವಿರಾರು ಉಪದೇಶ ಕೇಳಿದರೂ ನಿಮಗೆ ಸಾಲದು, ಅವರ ಬಗ್ಗೆ ಮಾತನಾಡಲು ಒಂದಷ್ಟು ಯೋಗ್ಯತೆಯಂತೂ ಹೊಂದಿರಲೇಬೇಕು ಎಂದು ನಾನಂತೂ ಭಾವಿಸಿದ್ದೇನೆ. ಕಳೆದ ಎಂಟು ವಿಧಾನಸಭಾ ಚುನಾವಣೆಗಳಲ್ಲಿ ನಿರಂತರವಾಗಿ ಗೆಲ್ಲುತ್ತಿರುವ ಸೋಲಿಲ್ಲದ ಸರದಾರ ಅಂದರೆ ಅದು ಸನ್ಮಾನ್ಯ ಶ್ರೀ ರಾಮಲಿಂಗಾ ರೆಡ್ಡಿ ‌ಅವರು, ಸೌಮ್ಯ ರೆಡ್ಡಿ ಮೇಡಂ ರವರ ತಂದೆಯವರು.

    ಸೌಮ್ಯ ರೆಡ್ಡಿ ಮೇಡಂ ಅವರ  ತಂದೆ ಹಾಗೂ ಮಾನ್ಯ ಸಾರಿಗೆ ಹಾಗೂ ಮುಜರಾಯಿ ಸಚಿವರು ತಮ್ಮ ಹಾಗೂ ತಮ್ಮ‌‌ ಪಕ್ಷದವರ ರೀತಿ ಬಡಾಯಿ ಕೊಚ್ಚಿಕೊಳ್ಳುವುದಿಲ್ಲ. ಬರೀ ಮಾತಿನಲ್ಲಿ‌ ಕೆಲಸ‌ ಮಾಡಿ ತೋರಿಸುವ ಸಾಮಾನ್ಯರಲ್ಲ, ಅವರ ಕೆಲಸವೇ ಮಾತನಾಡುವಂತಿರುತ್ತದೆ.

    ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಮಹಿಳಾ ಸಬಲೀಕರಣದ ಗ್ಯಾರೆಂಟಿ‌ಯಾದ ಶಕ್ತಿ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೆ ತಂದು, 500 ಕೋಟಿ‌ ಮಹಿಳಾ‌‌ ಪ್ರಯಾಣಿಕರ ಪ್ರಯಾಣಕ್ಕೆ ಇನ್ನೇನು‌‌ ಕೆಲವೇ‌‌ ದಿನಗಳು ಬಾಕಿ ಇರುವ ಈ ಸಂದರ್ಭದಲ್ಲಿ ಶಕ್ತಿ ಯೋಜನೆ ಯಶಸ್ವಿನ ರೂವಾರಿ ಆದವರು ಇದೇ ಸಾರಿಗೆ ಸಚಿವರು. ಸಂಧ್ಯಾ ರಮೇಶ್‌ ಅವರೇ,

    ನೀವು ಸೇರಿ‌‌ ನಿಮ್ಮ ಬಿ.ಜೆ.ಪಿ‌ ಪಕ್ಷದ‌‌ ಮಹಿಳಾ ಪದಾಧಿಕಾರಿಗಳು ಮತ್ತು ತಮ್ಮ ಪಕ್ಷಕ್ಕೆ ವೋಟು ಹಾಕುವ ಮಹಿಳೆಯರು ಸಹ ಶಕ್ತಿ ಯೋಜ‌ನೆಯ ಫಲಾನುಭವಿಗಳೇ‌‌ ಎಂಬುದನ್ನು ಆಗಾಗ ನೆನಪು ಮಾಡಿಕೊಳ್ಳಿ.

    ಪಾಪ ಬಿಡಿ.. ತಮ್ಮನ್ನು ದೂಷಿಸಿ ಪ್ರಯೋಜನವಿಲ್ಲ, ತಮ್ಮ ಪಕ್ಷದಲ್ಲಿ ತಮಗೆ ದೊರಕಿರುವ ತರಬೇತಿ , ಉಪದೇಶ ಆ ರೀತಿ ಇದೆ.‌ 

    ತಮ್ಮ ಜಿಲ್ಲೆಗೆ ಇತರರ ಉಪದೇಶ ಅನಗತ್ಯವೆಂದಲ್ಲಿ,‌ ತಮ್ಮ‌ ಪಕ್ಷದವರ ಯಾವ ಘನಂದಾರಿ‌ ಕೆಲಸಗಳು ತಮಗೆ ಅಲ್ಲಿ ಅಧಿಕಾರ ತಂದುಕೊಟ್ಟಿದೆ ಎಂದು ದಯವಿಟ್ಟು ಹೇಳುತ್ತಿರಾ?

    1. ಸಾವಿನ ಮೇಲೆ‌ ರಾಜಕೀಯ ಮಾಡಿದರೆ ಅಷ್ಟೇ ತಮ್ಮ‌ಪಕ್ಷ ಅಧಿಕಾರಕ್ಕೆ ಬರುವುದು.
    2. ನೈತಿಕ ಪೊಲೀಸ್ ಗಿರಿ ಹೆಸರಿನಲ್ಲಿ ರಾಜಕೀಯ ಮಾಡಿದರಷ್ಟೇ‌ ತಮಗೆ ಅಧಿಕಾರ ಸಿಗುವುದು
    3. ಧರ್ಮ ಧರ್ಮಗಳ ನಡುವೆ ಬೆಂಕಿ ಹಚ್ಚಿದರಷ್ಟೇ‌‌ ತಮ್ಮ ಪಕ್ಷದ ರಾಜಕೀಯ ಬೇಳೆ ಬೇಯವುದು
    4. ಒಂದರ‌ ನಂತರ ಒಂದು ಕೊಲೆ ,ತಂದೆ ತಾಯಿಯನ್ನು, ಹೆಂಡತಿ‌ ಮಕ್ಕಳನ್ನು ಅನಾಥರನ್ನಾಗಿ ಮಾಡಿಸಿ ರಾಜಕೀಯ ಮಾಡುವುದು‌ ತಮ್ಮ ಪಕ್ಷಕ್ಕೆ ಕರಗತವಾಗಿರುವ ಕಲೆ.

    ಈ  ಪಟ್ಟಿ ಹೀಗೆಯೇ ಮುಂದುವರೆಯುತ್ತಾ ಹೋದಷ್ಷು‌ ತಮ್ಮ ‌ಪಕ್ಷ ಅಧಿಕಾರ ಮಾಡುತ್ತಾ ಹೋಗುತ್ತದೆ. ತಮ್ಮ ಮನಸ್ಥಿತಿಗೆ ಹಿಡಿದ ಕೈಗನ್ನಡಿ ತಮ್ಮ‌ ಹೇಳಿಕೆ ಎಂಬುದು ಜನಸಾಮಾನ್ಯರಿಗೆ ಈಗಾಗಲೇ ಅರಿವಿಗೆ ಬಂದಿದೆ.

    ದೊಡ್ಡ ಮನುಷ್ಯರ ಮೇಲೆ ಹೇಳಿಕೆಗಳನ್ನು ನೀಡಿ ತಾವು ದೊಡ್ಡವರಾಗಿ ಬಿಡಬಹುದು ಎಂಬ ಭ್ರಮೆಯಿಂದ ಹೊರಬನ್ನಿ, ಈ ಹೇಳಿಕೆಯಿಂದ ಇನ್ನೂ ಪಾತಾಳಕ್ಕೆ ಇಳಿದಿದ್ದೀರಾ ನೀವು ಎಂದು ಗೊತ್ತಾಗಲು ತುಂಬಾ ಸಮಯ ಬೇಕಾಗುವುದಿಲ್ಲ ಎಂದು ಪತ್ರದಲ್ಲಿ ಜ್ಯೋತಿ ಹೆಬ್ಬಾರ್ ತಿಳಿಸಿದ್ದಾರೆ

  • Aishwarya Mahadev is new KPCC social media chief

    Bengaluru: Congress’ National Media Panelist Aishwarya Mahadev was on Sunday appointed as the chairperson of KPCC’s Social Media Department.

    “The AICC has approved the proposal for the appointment of Ms Aishwarya Mahadev as the Chairperson of the Social Media Department of the Karnataka Pradesh Congress Committee, with immediate effect,” a press release by AICC General Secretary (Organisation) K C Venugopal stated.

    Daughter of late Congress leader

    Aishwarya is the daughter of the late Congress leader and former MLA Manchanahalli Mahadev.

  • ಎಸ್ ಡಿ ಪಿ ಐ ದಕ್ಷಿಣ ಕರ್ನಾಟಕ ಭಾಗದ ಜಿಲ್ಲಾಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳ ಸಭೆ

    ಬೆಂಗಳೂರು, ಜೂನ್ 30, 2025: ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕರ್ನಾಟಕ ಭಾಗದ ಜಿಲ್ಲಾಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳ ವಿಶೇಷ ಸಭೆಯು,ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ರವರ ಅಧ್ಯಕ್ಷತೆಯಲ್ಲಿ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಮುಜಾಹಿದ್ ಪಾಷಾ ಮತ್ತು ರಾಜ್ಯ ಕಾರ್ಯದರ್ಶಿ ಅಪ್ಸರ್ ಕೆ ಆರ್ ನಗರ ರವರುಗಳ ಉಪಸ್ಥಿತಿಯಲ್ಲಿ ಬೆಂಗಳೂರಿನಲ್ಲಿ ನಡೆಯಿತು.

    ಪ್ರಾಸ್ತಾವಿಕವಾಗಿ ಮಾತನಾಡಿದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ರವರು, ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅಲ್ಪಸಂಖ್ಯಾತ ಮುಸ್ಲಿಮರ ವಿರೋಧಿ ಹೇಳಿಕೆ ನೀಡಿದ್ದು, ಇದನ್ನು ವಿರೋಧಿಸಿ ಪಕ್ಷದ ವತಿಯಿಂದ ರಾಜ್ಯಾದ್ಯಂತ ಹೋರಾಟ ಪ್ರತಿಭಟನೆ ಮಾಡಿದರೂ ಸಹ, ಮುಸ್ಲಿಮರ ವೋಟು ಪಡೆದು ಬೀಗುತ್ತಿರುವ ಕಾಂಗ್ರೆಸ್ ಸರ್ಕಾರ ಮತ್ತು ಕಾಂಗ್ರೆಸ್ ನಾಯಕರು ಕನಿಷ್ಠ ಖಂಡಿಸಿಲ್ಲ ಮತ್ತು ಶಾಸಕನ ವಿರುದ್ಧ ಯಾವುದೇ ರೀತಿಯ ಕ್ರಮ ಜರುಗಿಸಿಲ್ಲ, ಇದು ಅಲ್ಪಸಂಖ್ಯಾತ ಸಮುದಾಯಕ್ಕೆ ಕಾಂಗ್ರೆಸ್ ಮಾಡಿದ ದ್ರೋಹವಾಗಿದೆ.

    ಅಲ್ಪಸಂಖ್ಯಾತರು, ದಲಿತರು ಮತ್ತು ಹಿಂದುಳಿದ ವರ್ಗಗಳು ಒಂದಾಗಿ ರಾಜಕೀಯ ಅಧಿಕಾರ ಪಡೆದರೆ ಮಾತ್ರ ಗೌರವಯುತವಾಗಿ ಜೀವಿಸಲು ಸಾಧ್ಯವಾಗಿದೆ. ಇದಕ್ಕಾಗಿ ಅವಿರತ ಶ್ರಮದ ಅಗತ್ಯವಿದೆ. .

    ಹಸಿವು ಮುಕ್ತ ಸ್ವಾತಂತ್ರ, ಭಯ ಮುಕ್ತ ಸ್ವಾತಂತ್ರ ದ್ಯೇಯದೊಂದಿಗೆ ಕಾರ್ಯನಿರ್ವಹಿಸುವ ನಾವು ಜನಪರ ಹೋರಾಟ,ಪ್ರತಿಭಟನೆ, ಆಂದೋಲನಗಳ ಜೊತೆಗೆ ಚುನಾವಣೆಗಳು ಕೂಡ ನಮ್ಮ ಮುಖ್ಯ ಧ್ಯೇಯವಾಗಿರಬೇಕು. ಹೋರಾಟ, ಪ್ರತಿಭಟನೆ, ಮತ್ತು ಜನಾಂದೋಲನ ಮೂಲಕ ವಂಚಿತರ ಹಕ್ಕುಗಳನ್ನು ತಕ್ಕಮಟ್ಟಿಗೆ ಕೊಡಿಸಬಹುದಾಗಿದೆ ಆದರೆ ರಾಜಕೀಯ ಪ್ರತಿನಿಧಿತ್ವದಿಂದ ಅದನ್ನು ಸುಲಭಗೊಳಿಸಬಹುದಾಗಿದೆ. ಆದ್ದರಿಂದ

    ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಸ್ಥಳೀಯ ನಗರಡಾಳಿತಗಳ ಚುನಾವಣೆಗಳು ನಮ್ಮ ಗುರಿಯಾಗಿರಬೇಕು. ಈ ನಿಟ್ಟಿನಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಸಿದ್ಧತೆ ನಡೆಯಬೇಕು, ಪಕ್ಷದ ನಾಯಕರು ತಳಮಟ್ಟದಲ್ಲಿ ಮತ್ತು ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಬೇಕು ಈ ಎಂದು ಕರೆ ಕೊಟ್ಟರು.

    ದಕ್ಷಿಣ ಕರ್ನಾಟಕ ಭಾಗದ ಎಲ್ಲಾ ಜಿಲ್ಲೆಗಳ ಜಿಲ್ಲಾಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.