ಮಂಗಳೂರು: ಬಿಜೆಪಿ ಶಾಸಕ ಹರೀಶ್ ಪೂಂಜಾ ಕಾಂಗ್ರೆಸ್ ನಾಯಕರ ವಿರುದ್ಧ ಇಲ್ಲಸಲ್ಲದ ಸುಳ್ಳಾರೋಪ ಹೊರಿಸಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಕೋಮುವಾದಕ್ಕೆ ಪ್ರಯತ್ನಿಸುತ್ತಿದ್ದು, ಇದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸ್ ಆಯಕ್ತರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಪರವಾಗಿ NSUI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಅವರು ಮನವಿ ಸಲ್ಲಿಸಿದರು.
Category: Politics
-
ರೌಡಿಶೀಟರ್ ಗಳನ್ನು ಬಿಜೆಪಿಗರು ಮಹಾನ್ ದೇಶಭಕ್ತರು ಎಂಬಂತೆ ಬಿಂಬಿಸುವುದೇಕೆ?: ಮಂಜುನಾಥ ಭಂಡಾರಿ
ಮಂಗಳೂರು: ”ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೌಡಿಶೀಟರ್ ಗಳನ್ನು ಕೊಂದರೆ ಬಿಜೆಪಿಯವರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಾರೆ. ಕೊಲೆ ಕೊಲೆಯತ್ನ ದರೋಡೆಯಲ್ಲಿ ಭಾಗಿಯಾದ ರೌಡಿಗಳು ಜೈಲಿನಿಂದ ಬಿಡುಗಡೆಯಾಗುವಾಗ ಹಾರ ತುರಾಯಿ ಹಾಕಿ ಸ್ವಾಗತಿಸುತ್ತಾರೆ.
ಒಂದು ವೇಳೆ ವೈಯಕ್ತಿಕ ವೈಷಮ್ಯಕ್ಕೆ ಅಥವಾ ವಿರೋಧಿ ರೌಡಿ ಪಡೆಯಿಂದ ಸಾವಿಗೀಡಾದರೆ ಅವರನ್ನು ಹಿಂದೂನಾಯಕ, ಮಹಾನ್ ದೇಶಭಕ್ತ ಎಂಬಂತೆ ಬಿಂಬಿಸುವುದೇಕೆ?“ ಎಂದು ವಿಧಾನ ಪರಿಷತ್ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಪ್ರಶ್ನಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತಾಡಿದ ಅವರು, ”ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ವೈಷಮ್ಯ, ಘರ್ಷಣೆಯಿಂದಾಗಿ ಮಂಗಳೂರಿನ ಮಾನ ಮರ್ಯಾದೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಾಜಾಗಿದೆ. ಈ ಹಿಂದೆ ಪಬ್ ದಾಳಿ, ಚರ್ಚ್ ದಾಳಿ, ಬರ್ತ್ ಡೇ ಪಾರ್ಟಿ ದಾಳಿಯಿಂದ ಪ್ರವಾಸೋದ್ಯಮಕ್ಕೆ ಕಪ್ಪು ಚುಕ್ಕೆಯಾಗಿದೆ. ಮಂಗಳೂರು ಬದಲಾವಣೆಯತ್ತ ತೆರೆದುಕೊಳ್ಳುತ್ತಿರುವ ಈ ವೇಳೆಯಲ್ಲಿ ಇಂತಹ ಘಟನೆಗಳು ಸಾಮಾಜಿಕ ಸ್ವಾಸ್ಥ್ಯಕ್ಕೆ ಮಾರಕವಾಗಿದೆ“ ಎಂದರು.
ಬಿಜೆಪಿಯವರು ಕೆಲವು ತಿಂಗಳ ಹಿಂದೆ ಬಂಟ್ವಾಳದಲ್ಲಿ ಬಾಲಕನೊಬ್ಬ ನಾಪತ್ತೆಯಾದಾಗ ಅದರಲ್ಲಿ ಅನ್ಯಕೋಮಿನ ಕೈವಾಡ ಎಂದು ಹಿರಿಕಿರಿಯ ನಾಯಕರೆಲ್ಲರೂ ಮನೆಗೆ ಭೇಟಿಕೊಟ್ಟು ಪ್ರಕಾರಣದ ದಿಕ್ಕು ತಪ್ಪಿಸಲು ಯತ್ನಿಸಿ ವಿಫಲರಾದರು. ನಾಪತ್ತೆಯಾದ ಬಾಲಕ ವಾಪಸ್ ಮನೆಗೆ ಬಂದಾಗ ಇವರ್ಯಾರು ಕೂಡಾ ಇರಲಿಲ್ಲ. ಈಗ ರೌಡಿಯ ಕೊಲೆ ಪ್ರಕರಣ ಮುಂದಿಟ್ಟು ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆ ಕೆಡಿಸಲು ಮುಂದಾಗಿದ್ದಾರೆ. ಇವರು ತಮ್ಮ ಮನೋಸ್ಥಿತಿಯ ಕುರಿತು ಆತ್ಮವಿಮರ್ಶೆ ಮಾಡಿಕೊಳ್ಳಬೇಕು“ ಎಂದರು.
”ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವ ಅಗತ್ಯತೆ ಎಲ್ಲಾ ಪಕ್ಷದವರಿಗೂ ಇದೆ. ಜನಪ್ರತಿನಿಧಿಗಳ ಜವಾಬ್ದಾರಿ ಇದೇ ಆಗಿದೆ. ಕಾನೂನಿನ ಅಲ್ಪ ಜ್ಞಾನವೂ ಇಲ್ಲದೆ ಮಾತಾಡುವುದು ಬಿಜೆಪಿ ನಾಯಕರಿಗೆ ಶೋಭೆ ತರುವುದಿಲ್ಲ. ಇನ್ನಾದರೂ ಜಿಲ್ಲೆಯ ಅಭಿವೃದ್ಧಿಯ ದೃಷ್ಟಿಯಲ್ಲಿ ಯೋಚಿಸಬೇಕಾಗಿದೆ. ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಈಗಾಗಲೇ ಉಪಮುಖ್ಯಮಂತ್ರಿ ಅವರು ಸರ್ವಪಕ್ಷಗಳ ನಾಯಕರ ಸಭೆ ಕರೆಯುವುದಾಗಿ ಹೇಳಿದ್ದಾರೆ. ಹೀಗಿರುವಾಗ ಹಿಂದೂ ಯುವಕರ ಸಾವಿನಲ್ಲಿ ರಾಜಕೀಯ ಮಾಡುವುದನ್ನು ಬಿಡಲಿ“ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಮಿಥುನ್ ರೈ, ಇನಾಯತ್ ಅಲಿ, ಹರೀಶ್ ಕುಮಾರ್, ಶಾಲೆಟ್ ಪಿಂಟೋ, ಜಿ ಎ ಬಾವ, ಲಾರೆನ್ಸ್ ಡಿಸೋಜ, ಸುಹಾನ್ ಆಳ್ವ, ಪದ್ಮರಾಜ್ ಆರ್., ಶಾಹುಲ್ ಹಮೀದ್, ವಿಕಾಸ್, ಶುಭೋದ್ ಆಳ್ವ, ಕೃಷ್ಣ ಶೆಟ್ಟಿ, ಬಶೀರ್ ಮತ್ತಿತರರು ಉಪಸ್ಥಿತರಿದ್ದರು.
-
ನಾವುಂದ ಸಬ್ಸ್ಟೇಷನ್ನ ತಾಂತ್ರಿಕ ದೋಷದಿಂದ ವಿದ್ಯುತ್ ಕಡಿತ: ಶೀಘ್ರ ಪರಿಹಾರಕ್ಕೆ ಕ್ರಮ. ಗ್ಯಾರಂಟಿ ಸಭೆಯಲ್ಲಿ ವಿವರಣೆ
ಬೈಂದೂರು: ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಮೋಹನ್ ಪೂಜಾರಿ ಅವರ ನೇತೃತ್ವದಲ್ಲಿ ಜರುಗಿತು.
ಸಭೆಯ ಅಧ್ಯಕ್ಷತೆ ವಹಿಸಿದ ಮೋಹನ್ ಪೂಜಾರಿ ಮಾತನಾಡಿ, ವಿದ್ಯುತ್ ಲೋಡ್ ಶೆಡ್ಡಿಂಗ್ ಸಮಸ್ಯೆಗೆ ಕಾರಣವಾದ ಮೆಸ್ಕಾಂ ಉಪಕೇಂದ್ರದ ತಾಂತ್ರಿಕ ತೊಂದರೆಯನ್ನು ಸಾರ್ವಜನಿಕರಿಗೆ ಸ್ಪಷ್ಟವಾಗಿ ತಿಳಿಸುವ ಕೆಲಸವಾಗಬೇಕು. ಜನರಿಗೆ ತೊಂದರೆಯಾಗದಂತೆ, ನಿಗದಿತ ಸಮಯದೊಳಗೆ ಅಧಿಕಾರಿಗಳು ಪರಿಹಾರ ಕಂಡುಕೊಳ್ಳಲು ಶ್ರಮಿಸಬೇಕು. ಇದರಿಂದ ಸರ್ಕಾರದ ಬಗ್ಗೆ ತಪ್ಪು ಗ್ರಹಿಕೆ ಉಂಟಾಗದಂತೆ ಎಚ್ಚರಿಕೆ ವಹಿಸಿ. ಜೊತೆಗೆ, ಜನಪ್ರತಿನಿಧಿಗಳು ವಾಸ್ತವಿಕತೆಯನ್ನು ಅರಿಯದೇ ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದರು.

ಈ ವಿಷಯದ ಬಗ್ಗೆ ಸಭೆಯಲ್ಲಿ ಸ್ಪಷ್ಟನೆ ನೀಡಿದ ಬೈಂದೂರು ಮೆಸ್ಕಾಂ ಉಪಕೇಂದ್ರದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಹರೀಶ್, ಬೈಂದೂರು ಮತ್ತು ಕೊಲ್ಲೂರು ಮೆಸ್ಕಾಂ ಉಪಕೇಂದ್ರಗಳಿಗೆ ವಿದ್ಯುತ್ ಪೂರೈಸುವ ನಾವುಂದದ 110 ಕೆ.ವಿ. ಸಬ್ಸ್ಟೇಷನ್ನ 20 ಎಂವಿಎ ಟ್ರಾನ್ಸ್ಫಾರ್ಮರ್ನಲ್ಲಿ ಕಳೆದ ವಾರ ತಾಂತ್ರಿಕ ದೋಷ ಕಂಡುಬಂದಿತು. ಈ ಕಾರಣದಿಂದ ಕುಂದಾಪುರ ಸಬ್ಸ್ಟೇಷನ್ನಿಂದ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಹೆಚ್ಚಿನ ಲೋಡ್ನಿಂದ ಟ್ರಿಪ್ಪಿಂಗ್ ಸಮಸ್ಯೆ ಉಂಟಾಗಿದ್ದು, ಬೈಂದೂರು ಮತ್ತು ಕೊಲ್ಲೂರು ಪ್ರದೇಶಗಳಲ್ಲಿ ಕೆಲ ದಿನಗಳಿಂದ ವಿದ್ಯುತ್ ವ್ಯತ್ಯಯವಾಗುತ್ತಿದೆ. ಈಗಾಗಲೇ ಟ್ರಾನ್ಸ್ಫಾರ್ಮರ್ ದುರಸ್ತಿ ಕಾರ್ಯ ಪ್ರಗತಿಯಲ್ಲಿದ್ದು, ಒಂದೆರಡು ದಿನಗಳಲ್ಲಿ ಸಾಮಾನ್ಯ ಸ್ಥಿತಿಗೆ ಮರಳುವ ಸಂಭವವಿದೆ ಎಂದರು.
ಬೈಂದೂರಿನಲ್ಲಿ ನಿರ್ಮಾಣವಾಗುತ್ತಿರುವ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಕಾಮಗಾರಿ ಬಹುತೇಕ ಮುಕ್ತಾಯವಾಗಿದ್ದು, ಉಳಿದ ಕೆಲಸವನ್ನು ಪೂರ್ಣಗೊಳಿಸಿ, ಉದ್ಘಾಟನೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೆಎಸ್ಆರ್ಟಿಸಿ ಅಧಿಕಾರಿಗಳಿಗೆ ಸೂಚಿಸಿದರು. ಜೊತೆಗೆ, ಗ್ರಾಮೀಣ ಪ್ರದೇಶಗಳಿಗೆ ಕೆಎಸ್ಆರ್ಟಿಸಿ ಬಸ್ ಸೌಲಭ್ಯ ಕಲ್ಪಿಸಲು ವ್ಯವಸ್ಥೆ ಮಾಡಬೇಕೆಂದು ಒತ್ತಾಯಿಸಿದರು.
ಬೈಂದೂರು ತಾಲೂಕಿನಲ್ಲಿ ಪಂಚ ಗ್ಯಾರಂಟಿಗೆ 182.43 ಕೋಟಿ ರೂ. ವೆಚ್ಚ
ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಡಿ ಬೈಂದೂರು ತಾಲೂಕಿಗೆ ಇದುವರೆಗೆ ಸುಮಾರು 182.43 ಕೋಟಿ ರೂ. ವೆಚ್ಚವಾಗಿದೆ. ಗೃಹಲಕ್ಷ್ಮಿ ಯೋಜನೆಯಿಂದ ಜನವರಿವರೆಗೆ 96.61 ಕೋಟಿ ರೂ. ಫಲಾನುಭವಿಗಳ ಖಾತೆಗೆ ಜಮಾ ಆಗಿದೆ. 48 ಫಲಾನುಭವಿಗಳಿಗೆ ಆಧಾರ್ ಬ್ಯಾಂಕಿಂಗ್ ಮ್ಯಾಪಿಂಗ್ ಬಾಕಿಯಿದ್ದು, ತಾಂತ್ರಿಕ ಕಾರಣಗಳಿಂದ 479 ಮತ್ತು 71 ಹೊಸ ನೋಂದಣಿಗಳು ಸೇರಿ ಒಟ್ಟು 616 ಫಲಾನುಭವಿಗಳಿಗೆ ಬಾಕಿಯಿದೆ.
ಗೃಹ ಜ್ಯೋತಿ ಯೋಜನೆಯಿಂದ ಬೈಂದೂರು ಮೆಸ್ಕಾಂ ವ್ಯಾಪ್ತಿಯ 27,942 ಕುಟುಂಬಗಳಿಗೆ 34.54 ಕೋಟಿ ರೂ., ತಲ್ಲೂರು ಮೆಸ್ಕಾಂ ವ್ಯಾಪ್ತಿಯ 1,935 ಕುಟುಂಬಗಳಿಗೆ 2.23 ಕೋಟಿ ರೂ. ಸೇರಿ ಒಟ್ಟು 36.78 ಕೋಟಿ ರೂ. ವೆಚ್ಚವಾಗಿದೆ. ಅನ್ನಭಾಗ್ಯ ಯೋಜನೆಯಡಿ 25,182 ಪಡಿತರ ಚೀಟಿಗಳಿಗೆ 1,89,26,610 ರೂ. ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾವಾಗಿದೆ. ಯುವ ನಿಧಿ ಯೋಜನೆಯಡಿ 340 ಫಲಾನುಭವಿಗಳಿಗೆ 59.34 ಲಕ್ಷ ರೂ. ಜಮಾ ಆಗಿದೆ. ಶಕ್ತಿ ಯೋಜನೆಯಡಿ 1.36 ಕೋಟಿ ಮಹಿಳೆಯರು ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸಿದ್ದು, 48.44 ಕೋಟಿ ರೂ. ರಿಯಾಯಿತಿ ಪಡೆದಿದ್ದಾರೆ ಎಂದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ. ರವಿಕುಮಾರ್ ಹುಕ್ಕೇರಿ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರಾದ ಮಾಲತಿ ಶಿವಾನಂದ, ರಾಮ ಪೂಜಾರಿ, ಅನೀಶ್ ಪೂಜಾರಿ, ರಾಘವೇಂದ್ರ ಬಿಲ್ಲವ, ಗುಲಾಬಿ, ಸೂರ್ಯಕಾಂತಿ ಡಿ, ಗಣೇಶ ಗಾಣಿಗ, ಅಣ್ಣಪ್ಪ ಶೆಟ್ಟಿ, ದೇವದಾಸ್ ವಿ.ಜೆ., ಬಾಬು ದೇವಾಡಿಗ, ರಾಮಚಂದ್ರ ಖಾರ್ವಿ, ಮುಕ್ರಿ ಮೊಹಮ್ಮದ್ ಅಲ್ತಾಫ್, ಮೆಸ್ಕಾಂ, ಕೆಎಸ್ಆರ್ಟಿಸಿ, ಮಹಿಳಾ ಮತ್ತು ಮಕ್ಕಳ ಶಿಶು ಅಭಿವೃದ್ಧಿ ಇಲಾಖೆ, ಆಹಾರ ಇಲಾಖೆ ಹಾಗೂ ಯುವ ಸಬಲೀಕರಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
-
RBI revises ATM transaction charges: From today, cash withdrawals to cost more
The Reserve Bank of India (RBI) has announced a hike in ATM transaction charges, effective from May 1, 2025. Customers exceeding the free monthly transaction limit will now be charged up to Rs 23 per transaction, an increase from the earlier cap of Rs 21.
Key Highlights
- Free transactions limit:Charges beyond free limit
- Own bank ATMs: 5 free transactions (financial + non-financial) per month.
- Other bank ATMs:
- Metro cities: 3 free transactions.
- Non-metro cities: 5 free transactions.
- Maximum Rs 23 per transaction, applicable to both financial (e.g., withdrawals, deposits) and non-financial (e.g., balance enquiry, PIN change) services.
- This also applies to transactions at Cash Recycler Machines (CRMs), except for cash deposits.
- The new rule is applicable to all commercial banks, including regional rural banks (RRBs), co-operative banks, authorised ATM network operators, card payment network operators, and white-label ATM operators.
ATM Interchange Fee
The interchange fee—a charge banks pay each other for ATM usage by non-customers—remains unchanged:
- Rs 19 per financial transaction.
- Rs 7 per non-financial transaction.
For instance, if you’re an HDFC customer withdrawing money from an SBI ATM in Kochi and exceed your free limit, HDFC may charge you the applicable Rs 23 fee for that transaction.
- Free transactions limit:Charges beyond free limit
-
ಕಾರ್ಕಳದಲ್ಲಿ ಮತ್ತೆರಡು ಕಲ್ಲು ತೂರಾಟ ಪ್ರಕರಣಗಳು ವರದಿ
ಕಾರ್ಕಳ, ಮೇ 03: ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಬಳಿಕ ಕಾರ್ಕಳ ತಾಲೂಕಿನಲ್ಲಿ ಮತ್ತೆರಡು ಕಲ್ಲು ತೂರಾಟ ಪ್ರಕರಣಗಳು ವರದಿಯಾಗಿವೆ.
ಮೊದಲ ಘಟನೆಯಲ್ಲಿ, ಇಬ್ಬರು ಮುಸುಕುಧಾರಿ ವ್ಯಕ್ತಿಗಳು ತಮಿಳುನಾಡು ನೋಂದಾಯಿತ ಮೀನುಗಾರಿಕಾ ಟ್ರಕ್ನ ಮುಂಭಾಗದ ಗಾಜಿಗೆ ಕಲ್ಲು ತೂರಿದ್ದಾರೆ. ಈ ಟ್ರಕ್ ಮಲ್ಪೆಯಿಂದ ಮೀನು ತುಂಬಿಸಿಕೊಂಡು ತಮಿಳುನಾಡಿಗೆ ತೆರಳುತ್ತಿತ್ತು. ಕೆಮರು ಪರ್ಪಲೆ ಬಳಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಸುಮಾರು 15,000 ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
ಇನ್ನೊಂದು ಘಟನೆಯಲ್ಲಿ, ಕಾರ್ಕಳದಿಂದ ಬೆಳ್ಮಣ್ಗೆ ತೆರಳುತ್ತಿದ್ದ ಖಾಸಗಿ ಬಸ್ಸಿನ ಮುಂಭಾಗದ ಗಾಜಿಗೆ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಕಲ್ಲು ತೂರಿ ಹಾನಿಗೊಳಿಸಿದ್ದಾರೆ. ಈ ಘಟನೆಯಲ್ಲಿ ಸುಮಾರು 45,000 ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಈ ಸಂಬಂಧ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
-
ಬಿಜೆಪಿ ಮತ್ತು ಆರ್ಎಸ್ಎಸ್ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಿಜೆಪಿ ಮತ್ತು ಆರ್ಎಸ್ಎಸ್ ಸಂಘಟನೆಗಳು ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಅಥವಾ ಬದ್ಧತೆಯನ್ನು ಹೊಂದಿಲ್ಲ ಎಂದು ತಿಳಿಸಿದ್ದಾರೆ.
ಮೈಸೂರಿನ ಸಮೀಪ ಶ್ರೀರಂಗಪಟ್ಟಣ ತಾಲೂಕಿನ ತುಬಿನಕೆರೆ ಹೆಲಿಪ್ಯಾಡ್ನಲ್ಲಿ ಮೇ 2 ರಂದು ಪತ್ರಕರ್ತರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಆರ್ಎಸ್ಎಸ್ ತನ್ನ 100 ವರ್ಷಗಳ ಇತಿಹಾಸದಲ್ಲಿ ಸಾಮಾಜಿಕ ನ್ಯಾಯವನ್ನು ಸತತವಾಗಿ ವಿರೋಧಿಸಿದೆ ಎಂದರು. “ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಆರಂಭಿಸಿದ ಮಿಲ್ಲರ್ ಆಯೋಗದಿಂದ ಹಿಡಿದು, ಆರ್ಎಸ್ಎಸ್ ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತಲೇ ಬಂದಿದೆ,” ಎಂದು ಅವರು ಹೇಳಿದರು.
1925 ರಲ್ಲಿ ಸ್ಥಾಪನೆಯಾದ ಆರ್ಎಸ್ಎಸ್ ತನ್ನ 100 ವರ್ಷಗಳ ಇತಿಹಾಸದಲ್ಲಿ ಮೀಸಲಾತಿಯನ್ನು ಎಂದಿಗೂ ಸ್ವೀಕರಿಸಿಲ್ಲ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಕಾಂಗ್ರೆಸ್ ನಾಯಕರ ನಿರಂತರ ಒತ್ತಡದಿಂದಾಗಿ ಬಿಜೆಪಿ ಸರ್ಕಾರ ಜಾತಿ ಗಣತಿಯನ್ನು ಘೋಷಿಸಿತು ಎಂದು ಸಿದ್ದರಾಮಯ್ಯ ಹೇಳಿದರು. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕಳೆದ ಎರಡು ವರ್ಷಗಳಿಂದ ಜಾತಿ ಸಮೀಕ್ಷೆಯನ್ನು ಬಲವಾಗಿ ಒತ್ತಾಯಿಸುತ್ತಿದ್ದಾರೆ, ಜೊತೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಈ ವಿಷಯದ ಬಗ್ಗೆ ಪತ್ರ ಬರೆದಿದ್ದಾರೆ ಎಂದು ಅವರು ತಿಳಿಸಿದರು.
ಕೇಂದ್ರ ಸರ್ಕಾರವು ಸಾಮಾನ್ಯ ಜನಗಣತಿಯ ಜೊತೆಗೆ ಜಾತಿ ಗಣತಿಯನ್ನು ಘೋಷಿಸಿದ್ದರೂ, ಈ ಕಾರ್ಯಕ್ಕೆ ಸಮಯಮಿತಿಯನ್ನು ನಿಗದಿಪಡಿಸದಿರುವ ಬಗ್ಗೆ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು. ಜಾತಿ ಗಣತಿಯ ಜೊತೆಗೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸಹ ನಡೆಸಬೇಕು ಎಂದು ಅವರು ಒತ್ತಾಯಿಸಿದರು.
ಮೀಸಲಾತಿಯ ಮೇಲಿನ ಶೇ.50ರ ಮಿತಿಯನ್ನು ತೆಗೆದುಹಾಕಬೇಕು ಎಂದು ಮುಖ್ಯಮಂತ್ರಿ ವಾದಿಸಿದರು. ಈ ಮಿತಿಯಿಂದಾಗಿ, ಜನಸಂಖ್ಯೆಗೆ ಅನುಗುಣವಾಗಿ ಅರ್ಹ ವರ್ಗಗಳಿಗೆ ಮೀಸಲಾತಿ ಒದಗಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು. ಸಮಾನ ಸಮಾಜವನ್ನು ನಿರ್ಮಿಸಲು, ಎಲ್ಲರನ್ನೂ ಸಾಮಾಜಿಕವಾಗಿ, ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಸಬಲೀಕರಣಗೊಳಿಸುವ ಅಗತ್ಯವಿದೆ ಎಂದರು.
ಖಾಸಗಿ ವಲಯಕ್ಕೂ ಮೀಸಲಾತಿ ವಿಸ್ತರಣೆ
ಸಿದ್ದರಾಮಯ್ಯ ಅವರು, ಪ್ರಧಾನಮಂತ್ರಿ ಮೋದಿಯವರಿಗೆ ಜಾತಿ ಗಣತಿಗೆ ಸಮಯಮಿತಿ ನಿಗದಿಪಡಿಸುವುದು, ಶೇ.50ರ ಮೀಸಲಾತಿ ಮಿತಿಯನ್ನು ತೆಗೆದುಹಾಕಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು ಮತ್ತು ಖಾಸಗಿ ವಲಯಕ್ಕೆ ಮೀಸಲಾತಿಯನ್ನು ವಿಸ್ತರಿಸುವಂತೆ ಮನವಿ ಮಾಡುವುದಾಗಿ ತಿಳಿಸಿದರು.
ಒಬಿಸಿ ಉಪವಿಭಾಗೀಕರಣದ ವಿಷಯವನ್ನು ಪರಿಶೀಲಿಸಿ, ಮೀಸಲಾತಿ ಪ್ರಯೋಜನಗಳ ಸಮಾನ ವಿತರಣೆಗೆ ಸಂಬಂಧಿಸಿದಂತೆ ರೋಹಿಣಿ ಆಯೋಗವು ಎರಡು ವರ್ಷಗಳ ಹಿಂದೆ ರಾಷ್ಟ್ರಪತಿಗಳಿಗೆ ವರದಿ ಸಲ್ಲಿಸಿದೆ. ಈ ಶಿಫಾರಸುಗಳನ್ನು ಜಾರಿಗೊಳಿಸಬೇಕೆಂದು ಅವರು ಕೇಂದ್ರಕ್ಕೆ ಒತ್ತಾಯಿಸಿದರು.
ಮಂಗಳೂರಿನ ಕೊಲೆ ಪ್ರಕರಣದಲ್ಲಿ ಅಸ್ತವ್ಯಸ್ತತೆ
ಮಂಗಳೂರಿನಲ್ಲಿ ಮೇ 1 ರ ರಾತ್ರಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ ಅವರು ಆರೋಪಿಗಳನ್ನು ತಕ್ಷಣವೇ ಪತ್ತೆಹಚ್ಚಿ, ಬಂಧಿಸಿ, ಕಾನೂನಿನಂತೆ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದರು.
ಮೇ 1 ರಂದು ಪೊಲೀಸರೊಂದಿಗೆ ಮಾತನಾಡಿದ್ದೇನೆ ಮತ್ತು ಸರ್ಕಾರವು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಅವರನ್ನು ಮಂಗಳೂರಿಗೆ ಕಳುಹಿಸಿದೆ ಎಂದು ಅವರು ತಿಳಿಸಿದರು. ಕೊಲೆಯಾದ ವ್ಯಕ್ತಿ ರೌಡಿಶೀಟರ್ ಆಗಿದ್ದ ಎಂದು ತಿಳಿದುಬಂದಿದ್ದು, ಕೊಲೆಯ ತನಿಖೆ ಪ್ರಗತಿಯಲ್ಲಿದೆ ಎಂದರು. ಯಾವುದೇ ಮಾನವ ಜೀವವು ಮೌಲ್ಯಯುತವಾಗಿದೆ ಎಂದು ಅವರು ಹೇಳಿದರು.
ಮಂಗಳೂರಿನ ಸುಹಾಸ್ ಶೆಟ್ಟಿ ಕೊಲೆಯ ಸ್ಥಳಕ್ಕೆ ಬಿಜೆಪಿಯ ಭೇಟಿಯ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿ ಯಾವಾಗಲೂ ಇಂತಹ ಘಟನೆಗಳನ್ನು ರಾಜಕೀಯಗೊಳಿಸಲು ಅವಕಾಶಗಳನ್ನು ಹುಡುಕುತ್ತದೆ ಎಂದು ಆರೋಪಿಸಿದರು.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ಕಳವಳ
ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ, ಭದ್ರತಾ ವೈಫಲ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಪ್ರಧಾನಮಂತ್ರಿಗಳು ಆ ಸ್ಥಳಕ್ಕೆ ಭೇಟಿ ನೀಡದಿರುವುದೇಕೆ ಎಂದು ಪ್ರಶ್ನಿಸಿದರು. ಪಹಲ್ಗಾಮ್ಗೆ ಭೇಟಿ ನೀಡಿದ ಒಬ್ಬ ಪಕ್ಷದ ನಾಯಕರಿಂದ ತಿಳಿದಂತೆ, ಅಲ್ಲಿ ಪೊಲೀಸ್ ಅಥವಾ ಭದ್ರತಾ ಸಿಬ್ಬಂದಿ ಇರಲಿಲ್ಲ ಎಂದು ಅವರು ಹೇಳಿದರು. “ಇಷ್ಟೊಂದು ಪ್ರವಾಸಿಗರು ಭೇಟಿ ನೀಡುವ ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಬಾರದೇ?” ಎಂದು ಪ್ರಶ್ನಿಸಿದರು.
ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಬೆದರಿಕೆ ಕರೆಗಳು ಬಂದಿರುವ ಬಗ್ಗೆ ಪತ್ರಕರ್ತರು ಗಮನ ಸೆಳೆದಾಗ, ಸಿದ್ದರಾಮಯ್ಯ ಅವರೂ ಸಹ ಬೆದರಿಕೆ ಕರೆಗಳನ್ನು ಸ್ವೀಕರಿಸಿದ್ದೇವೆ ಎಂದರು. ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದ್ದು, ಕರೆ ಮಾಡಿದವರನ್ನು ಪತ್ತೆಹಚ್ಚಿ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
-
ದ್ವೇಷ ಭಾಷಣ; ಆರ್ಎಸ್ಎಸ್ ನಾಯಕ ಕಲ್ಲಟ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲಿಸುವಂತೆ ಮುಸ್ಲಿಂ ಯೂತ್ ಲೀಗ್ ದೂರು
ಮಂಜೇಶ್ವರ: ವೊರ್ಕ್ಕಾಡಿಯಲ್ಲಿರುವ ಶ್ರೀಮಾತಾ ಸೇವಾ ಆಶ್ರಮದಲ್ಲಿ ಕಾಸರಗೋಡಿನ ಶಾಂತಿಯುತ ವಾತಾವರಣದ ಮೇಲೆ ಕರಿ ನೆರಳು ಬೀರಿದ ದ್ವೇಷ ಭಾಷಣಕ್ಕಾಗಿ ಆರ್ಎಸ್ಎಸ್ ನಾಯಕ ಕಲ್ಲಟ್ಕ ಪ್ರಭಾಕರ ಭಟ್ ಅವರ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿ ಮುಸ್ಲಿಂ ಯೂತ್ ಲೀಗ್ ಮಂಜೇಶ್ವರ ಕ್ಷೇತ್ರ ಸಮಿತಿ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.
ಪ್ರಭಾಕರ್ ಭಟ್ ಯಾವುದೇ ಪ್ರಚೋದನೆಯಿಲ್ಲದೆ ಧಾರ್ಮಿಕ ದ್ವೇಷವನ್ನು ಪ್ರಚೋದಿಸುವ ಭಾಷಣ ಮಾಡಿದರು. ಗಲಭೆಗಳಿಗೆ ಕರೆ ನೀಡುವ ಮೂಲಕ, ಧಾರ್ಮಿಕ ಸಾಮರಸ್ಯ ಮತ್ತು ಏಕತೆಯನ್ನು ನಾಶಪಡಿಸುವುದು ಮತ್ತು ದೇಶ ಮತ್ತು ಸಮಾಜದಲ್ಲಿ ವಿಭಜನೆಯನ್ನು ಸೃಷ್ಟಿಸುವುದು ಗುರಿಯಾಗಿದೆ. ಮಂಜೇಶ್ವರದ ಜಾತ್ಯತೀತ ಮನಸ್ಸಿನಲ್ಲಿ ಕೋಮುವಾದದ ಹೊಸ ಆವೃತ್ತಿಯನ್ನು ಪ್ರಾರಂಭಿಸುವುದು ಆರ್ಎಸ್ಎಸ್ನ ನಡೆ, ಅಲ್ಲಿ ಕೋಮುವಾದದ ಬೀಜಗಳು ಎಂದಿಗೂ ಹುರಿಯಲ್ಪಟ್ಟಿಲ್ಲ. ಮುಸ್ಲಿಂ ಲೀಗ್ ಇರುವವರೆಗೆ, ಯಾವುದೇ ಕೋಮುವಾದಿ ಶಕ್ತಿಗಳು ಮಂಜೇಶ್ವರದ ಶಾಂತಿಯುತ ವಾತಾವರಣವನ್ನು ಕದಡಲು ಸಾಧ್ಯವಾಗುವುದಿಲ್ಲ ಎಂದು ಯೂತ್ ಲೀಗ್ ಹೇಳಿದೆ.
ಮುಸ್ಲಿಂ ಯೂತ್ ಲೀಗ್ ಮಂಡಲ ಅಧ್ಯಕ್ಷ ಬಿ.ಎಂ. ಮುಸ್ತಫಾ, ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ದಂಡಗೋಳಿ, ಮಜೀದ್ ಪಚ್ಚಮಾಬ ಮತ್ತು ರಿಯಾಜ್ ಉದ್ಯಾವರ್ ಅವರು, ಪೊಲೀಸರು ಇಂತಹ ಕೋಮು ವಿಷವನ್ನು ಕಾರುವ ಜನರನ್ನು ಆದಷ್ಟು ಬೇಗ ಬಂಧಿಸಿ ಜೈಲಿಗೆ ಹಾಕಬೇಕೆಂದು ಒತ್ತಾಯಿಸಿದರು.
-
ಕಾಶ್ಮೀರ ಭಯೋತ್ಪಾದಕ ದಾಳಿ ಖಂಡಿಸಿ ಬೈಂದೂರು ಯುವ ಕಾಂಗ್ರೆಸ್ ಪ್ರತಿಭಟನೆ
ಬೈಂದೂರು: ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಪ್ರತಿಭಟನೆ ಹಾಗೂ ಸಂತಾಪ ಸಭೆ ಬೈಂದೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಕ್ಷಯ್ ಶೆಟ್ಟಿ ಅವರ ನೇತೃತ್ವದಲ್ಲಿ ನಡೆಯಿತು.

ಮಾಜಿ ಶಾಸಕರಾದ ಕೆ. ಗೋಪಾಲ್ ಪೂಜಾರಿ, ಹಿರಿಯ ಕಾಂಗ್ರೆಸ್ ನಾಯಕರಾದ ಪ್ರಕಾಶ್ಚಂದ್ರ ಶೆಟ್ಟಿ, ಬೈಂದೂರು ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಮೋಹನ್ ಪೂಜಾರಿ, ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೂರಜ್ ಜಿ. ಪೂಜಾರಿ, ಬೈಂದೂರು ಪಪಂ ನಾಮನಿರ್ದೇಶಿತ ಸದಸ್ಯ ನಾಗರಾಜ ಗಾಣಿಗ, ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರರಾದ ವಿಕಾಸ್ ಹೆಗ್ಡೆ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ, ಬೈಂದೂರು ಬ್ಲಾಕ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶಬ್ಬೀರ್ ಬೈಂದೂರು, ಕಿಸಾನ್ ಘಟಕದ ಅಧ್ಯಕ್ಷ ವೀರಭದ್ರ ಗಾಣಿಗ, ಸುಬ್ರಹ್ಮಣ್ಯ ಪೂಜಾರಿ ಯಡ್ತರೆ, ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗ ಉಪಾಧ್ಯಕ್ಷರಾದ ಕೆ. ಚಂದ್ರಶೇಖರ್ ಶೆಟ್ಟಿ, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಪ್ರಮೋದ್ ಪೂಜಾರಿ ನಾವುಂದ, ಉಡುಪಿ ಜಿಲ್ಲಾ ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷ ರೋಶನ್ ಶೆಟ್ಟಿ ಹಾಗೂ ವಿವಿಧ ನಾಯಕರು ಉಪಸ್ಥಿತರಿದ್ದರು.
-
ಹಿರಿಯಡ್ಕ: ರಿಕ್ಷಾ ಚಾಲಕನ ಹತ್ಯೆಗೆ ಯತ್ನ- ಇಬ್ಬರ ಬಂಧನ
ಹಿರಿಯಡ್ಕ: ಆಟೋ ರಿಕ್ಷಾ ಚಾಲಕನೋರ್ವರಿಗೆ ಕರೆ ಮಾಡಿ ಬಾಡಿಗೆ ಇದೆ ಕರೆಯಿಸಿಕೊಂಡು ದುಷ್ಕರ್ಮಿಗಳು ಕೊಲೆ ಮಾಡಲು ಯತ್ನಿಸಿರುವ ಘಟನೆ ಆತ್ರಾಡಿ ಗ್ಯಾಸ್ ಪೆಟ್ರೋಲ್ ಬಂಕ್ ಬಳಿ ಗುರುವಾರ ರಾತ್ರಿ ನಡೆದಿದೆ.
ಆಟೋ ರಿಕ್ಷಾ ಚಾಲಕ ಬಡಗಬೆಟ್ಟು ನಿವಾಸಿ ಅಬುಬಕ್ಕರ್ (50), ಎನ್ನುವರರಿಗೆ ಅವರ ಪರಿಚಯದ ದಿನೇಶ್ ಎನ್ನುವವರು ಕರೆ ಮಾಡಿ ಮದಗದಿಂದ ಆತ್ರಾಡಿಗೆ ಬಾಡಿಗೆ ಬರಲು ತಿಳಿಸಿದ್ದಾರೆ. ಈ ಹಿನ್ನೆಲೆ ಅಬುಬಕ್ಕರ್ ರಿಕ್ಷಾದಲ್ಲಿ ಆತ್ರಾಡಿ ಪೆಟ್ರೋಲ್ ಬಂಕ್ ಬಳಿ ಮೋಟಾರ್ ಸೈಕಲ್ ನಲ್ಲಿ ಹಿಂದಿನಿಂದ ಬಂದ ಇಬ್ಬರು ದುಷ್ಕರ್ಮಿಗಳು ರಿಕ್ಷಾ ಹಿಂಬಾಲಿಸಿಕೊಂಡು ಬಂದು ಗಾಡಿಯನ್ನು ನಿಲ್ಲಿಸುವಂತೆ ಅವ್ಯಾಚ್ಯ ಶಬ್ದಗಳಿಂದ ಬೈದಿದ್ದಾರೆ.
ಈ ವೇಳೆ ಅಬುಬಕ್ಕರ್ ಗಾಡಿಯನ್ನು ನಿಲ್ಲಿಸದೇ ಮುಂದೆ ಬಂದು ಶೇಡಿಗುಡ್ಡೆ ಬಳಿ ರಸ್ತೆಯಲ್ಲಿ ಆಟೋವನ್ನು ನಿಲ್ಲಿಸಿ ಓಡಲು ಪ್ರಯತ್ನಿಸಿದ್ದಾರೆ. ಈ ವೇಳೆ ಮೋಟಾರ್ ಸೈಕಲ್ನಲ್ಲಿದ್ದ ಓರ್ವ ವ್ಯಕ್ತಿ ತನ್ನ ಕೈಯಲ್ಲಿದ್ದ ತಲವಾರಿನಿಂದ ಅಬುಬಕ್ಕರ್ ತಲೆಗೆ ಬೀಸಿದ್ದು, ತಲವಾರಿನ ಹೊಡೆತದಿಂದ ಅಬುಬಕ್ಕರ್ ತಪ್ಪಿಸಿಕೊಂಡಿದ್ದಾರೆ.
ಬೈಕ್ನಲ್ಲಿದ್ದ ಇನ್ನೋರ್ವ ವ್ಯಕ್ತಿ ಬಾಟಲಿಯನ್ನು ಕೈಯಲ್ಲಿ ಹಿಡಿದು ಆಟೋ ರಿಕ್ಷಾದ ಮುಂಭಾಗ ಗ್ಲಾಸಿಗೆ ಹೊಡೆದಿದ್ದಾನೆ. ಕೊಲೆ ಮಾಡುವ ಉದ್ದೇಶದಿಂದ ಅವರು ಹೀಗೆ ಮಾಡಿದ್ದಾರೆಂಬುದನ್ನು ಅರಿತ ಅಬುಬಕ್ಕರ್ ಅಲ್ಲೇ ಪಕ್ಕದಲ್ಲಿದ್ದ ಕಂಪೌಡನ್ನು ಜಿಗಿದು ಓಡಿ ಹೋಗಿದ್ದಾರೆ.
ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲು ಪ್ರಕರಣ ದಾಖಲಾಗಿದ್ದು, ಅಬುಬಕ್ಕರ್ ನೀಡಿದ ದೂರಿನ ಅನ್ವಯ ಆರೋಪಿಗಳಾದ ಹಿರಿಯಡ್ಕದ ಬೊಮ್ಮರಬೆಟ್ಟುವಿನ ಸಂದೇಶ್(31), ಹಿರಿಯಡ್ಕ ಧರ್ಕಸ್ನ ಸುಶಾಂತ್(32) ಅವರನ್ನು ಬಂಧಿಸಲಾಗಿದೆ.