Category: Brahmavara

  • Udupi: Criminal Prosecution Approved Against Brahmavar Sugar Factory Board for ₹13.92 Crore Loss in Machinery Sale

    Udupi, August 18, 2025 – The Karnataka government has granted permission for criminal prosecution against the management board, tender-cum-auction technical committee members, and former managing directors Praveen B. Nayak and G.N. Lakshminarayana of the South Kanara Cooperative Sugar Factory in Brahmavar, Udupi district, following a ₹13.92 crore loss in the sale of old machinery. Minister for Textiles, Sugarcane Development, Sugar, and Agricultural Marketing, Shivanand Patil, announced the decision, citing an investigation report that held the board and former directors responsible for the financial loss due to negligence and irregularities in the tender process.

    The factory, operational from 1985 until 2002-03, ceased sugarcane crushing due to a shortage of cane and working capital. After 17 years of disuse, the machinery and buildings deteriorated, prompting the board to seek government approval for their sale through a tender-cum-auction process. The board sold the assets to New Royal Traders, Chennai, but allegations of irregularities led to complaints from Legislative Council member Manjunath Bhandari and the Udupi District Raitha Sangha, triggering an investigation by retired district judge K. Radhakrishna Holla.

    The investigation revealed violations in the tender process, including the board’s decision to sell scrap on a lot basis instead of per kilogram, as initially stipulated, following a request from New Royal Traders. This breached tender rules, which required a ₹50 lakh security deposit and a ₹5 crore bank guarantee. Records showed discrepancies in the quantity of scrap transported, with New Royal Traders claiming 1,139.37 metric tonnes in 46 truckloads, while 2,245.65 metric tonnes were moved in 83 loads. An outstanding ₹12.63 crore remains unpaid, and building materials worth ₹1.28 crore were also removed. The government has directed the recovery of the loss from those responsible and recommended a departmental inquiry against Nayak and Lakshminarayana.

  • Brahmavara: Udupi District Farmers’ Association-Backed Group Secures Full Majority in Dakshina Kannada Cooperative Sugar Factory Board Election

    Brahmavara, August 17, 2025 – In the election held on August 17, 2025, for the new board of directors of the Dakshina Kannada Cooperative Sugar Factory, Brahmavara, the group supported by the Udupi District Farmers’ Association secured a full majority. The election, conducted under the supervision of Assistant Development Officer Sunil Kumar C.M. from the Deputy Registrar of Cooperative Societies’ office, saw robust participation and oversight by Deputy Registrar Smt. Lavanya K.R.

    From the general category, Bhujanga Shetty (Brahmavara), Sanjeeva Shetty (Sampigedi), Satish Kini (Belve), K. Doru Sadananda Shetty, and H. Hariprasad Shetty were elected with a majority. Manjunath Giliyar was elected from the Primary Agricultural Credit Cooperative Societies category. Additionally, seven candidates were elected unopposed: Ranganayak (Scheduled Tribe reserved seat), Shivaram Haladi (Scheduled Caste reserved seat), Bhoja Kulal (Belanje, Backward Class), Uday Kumar Shetty (Adikodlu, Backward Class B), Chaitra Adapa (Women’s reserved seat), and Girija Poojarthi (Amasebailu, Women’s reserved seat).

    K. Pratapchandra Shetty, president of the Udupi District Farmers’ Association, congratulated all elected candidates, emphasizing the victory as a testament to the farmers’ collective strength and commitment to revitalizing the cooperative sugar factory. This outcome follows the association’s prolonged protests against alleged corruption in the factory, including a 50-day dharna that ended in April 2025 after government assurances of action.

  • ಬ್ರಹ್ಮಾವರ: ಅಕ್ರಮ ಮದ್ಯ ಮಾರಾಟ – ಓರ್ವನ ಬಂಧನ

    ಬ್ರಹ್ಮಾವರ,ಜು. 11: ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಾರಂಬಳ್ಳಿ ಗ್ರಾಮದ ಕುಂಜಾಲ್ ಜಂಕ್ಷನ್‌ನಲ್ಲಿರುವ ಪ್ರವಾಸಿ ಟೆಂಪೋ ಸ್ಟ್ಯಾಂಡ್ ಬಳಿ ದಾಳಿ ನಡೆಸಿ ಬಂಧಿಸಲಾಗಿದೆ.

    ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಮದ್ಯ ಮಾರಾಟದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬ್ರಹ್ಮಾವರ ಪೊಲೀಸ್ ಠಾಣೆಯ ಪಿಎಸ್ಐ ಅಶೋಕ್ ಮಲಬಾಗಿ ಅವರ ತಂಡ ಕಾರ್ಯಾಚರಣೆ ನಡೆಸಿದ್ದಾರೆ.

    ಕಾರ್ಯಾಚರಣೆಯ ಸಂದರ್ಭದಲ್ಲಿ, ಬ್ರಹ್ಮಾವರದ ಹಂದಾಡಿ ಗ್ರಾಮದ ನಿವಾಸಿ ಉಮೇಶ್ ಪೂಜಾರಿ (49) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಯಾವುದೇ ಪರವಾನಗಿ ಇಲ್ಲದೆ KA-19-X-9055 ನೋಂದಣಿ ಸಂಖ್ಯೆಯ ಸ್ಕೂಟರ್‌ನಿಂದ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ. ತನಿಖೆಯಿಂದ ಆತ ಬ್ರಹ್ಮಾವರದ ವೈನ್ ಅಂಗಡಿಯಿಂದ ಮದ್ಯವನ್ನು ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

    ಪೊಲೀಸರು ಚೀಲವನ್ನು ವಶಪಡಿಸಿಕೊಂಡಿದ್ದು, ಅದರಲ್ಲಿ ಪ್ರೆಸ್ಟೀಜ್ ಫೈನ್ ವಿಸ್ಕಿ, ಹೇವರ್ಡ್ಸ್ ಚಿಯರ್ಸ್, ಒರಿಜಿನಲ್ ಚಾಯ್ಸ್, ಮೈಸೂರು ಲ್ಯಾನ್ಸರ್ ಡಿಲಕ್ಸ್, ಬ್ಯಾಗ್‌ಪೈಪರ್ ಡಿಲಕ್ಸ್ ಮತ್ತು ಓಲ್ಡ್ ಗ್ರೇನ್‌ನಂತಹ ವಿವಿಧ ಬ್ರಾಂಡ್‌ಗಳು ಸೇರಿದಂತೆ ಒಟ್ಟು 30 ಮದ್ಯ ತುಂಬಿದ ಟೆಟ್ರಾ ಪ್ಯಾಕ್‌ಗಳಿದ್ದು, ಇದರ ಅಂದಾಜು ಮೌಲ್ಯ ರೂ. 1,700. ಇದರ ಜೊತೆಗೆ, ಮಾರಾಟದಿಂದ ಬಂದ ಹಣ ಎಂದು ನಂಬಲಾದ 280 ರೂ. ನಗದು ಮತ್ತು ಸಾಗಣೆಗೆ ಬಳಸಲಾಗಿದ್ದ ಸ್ಕೂಟರ್ ಅನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಸುನ್ನಿ ಕೋ-ಒರ್ಡಿನೇಷನ್ ಉಡುಪಿ ಜಿಲ್ಲಾ ಸಮಿತಿಯ ನಿಯೋಗದಿಂದ ಉಡುಪಿ ಜಿಲ್ಲಾಧಿಕಾರಿ ಭೇಟಿ

    ಉಡುಪಿ, ಜುಲೈ 8, 2025: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಸ್ವರೂಪ ಟಿ.ಕೆ. ಅವರನ್ನು ಉಡುಪಿ ಜಿಲ್ಲೆಯ ಪ್ರಮುಖ 10 ಸಂಘಟನೆಗಳ ಒಕ್ಕೂಟವಾದ ಸುನ್ನಿ ಕೋ-ಒರ್ಡಿನೇಷನ್ ಉಡುಪಿ ಜಿಲ್ಲಾ ಸಮಿತಿಯ ನಿಯೋಗ ಭೇಟಿಯಾಗಿ ಅಭಿನಂದಿಸಿತು.

    ಚುನಾವಣೆಯ ಮೊದಲು ಕಾಂಗ್ರೆಸ್ ಸರಕಾರ ಮುಸ್ಲಿಮರಿಗೆ ನೀಡಿದ ಆಶ್ವಾಸನೆಗಳನ್ನು ಪೂರ್ತಿಗೊಳಿಸುವ ಬಗ್ಗೆ ಜಿಲ್ಲಾಧಿಕಾರಿಯ ಮೂಲಕ ಸರಕಾರಕ್ಕೆ ಹಲವು ಬೇಡಿಕೆಗಳ ಜ್ಞಾಪಕ ಪತ್ರವನ್ನು ಜಿಲ್ಲಾಧಿಕಾರಿಯ ಮೂಲಕ ಸರಕಾರಕ್ಕೆ ಸಲ್ಲಿಸಿ ಶೀಘ್ರ ಪರಿಹಾರಕ್ಕಾಗಿ ಒತ್ತಾಯಿಸಲಾಯಿತು.

    2ಬಿ ಮೀಸಲಾತಿ ಮರು ಸ್ಥಾಪಿಸಬೇಕು. ಶಿಕ್ಷಣ ಕೇಂದ್ರಗಳಲ್ಲಿ ಹಿಜಾಬ್ ನಿಷೇಧವನ್ನು ತೆರವುಗೊಳಿಸಬೇಕು. ಉಡುಪಿ ಜಿಲ್ಲೆಯಲ್ಲಿ ಬೇರು ಬಿಡುತ್ತಿರುವ ಕೋಮುವಾದ, ಕೋಮು ಸಂಘರ್ಷಗಳನ್ನು ಹಾಗೂ ಕೋಮುವಾದಿ ಹೇಳಿಕೆಗಳಿಗೆ ಕಡಿವಾಣ ಹಾಕಬೇಕು. ಕೋಮು ಸಂಘರ್ಷಕ್ಕೆ ಎಡೆ ಮಾಡಿ ಕೊಡುವ ಹೇಳಿಕೆಗಳನ್ನು ನೀಡುವವರಿಗೆ ಜಾಮೀನು ರಹಿತ ಕಾಯ್ದೆಗಳ ಮೂಲಕ ಸೂಕ್ತ ಶಿಕ್ಷೆಯನ್ನು ನೀಡಬೇಕು. ಜೈಲಿನಲ್ಲಿರುವ ಅಮಾಯಕ ಯುವಕರನ್ನು ಬಿಡುಗಡೆಗೊಳಿಸಬೇಕು ಎಂದು ಪತ್ರದಲ್ಲಿ ಆಗ್ರಹಿಸಲಾಗಿದೆ.

    ಉಡುಪಿ ಜಿಲ್ಲಾ ಸುನ್ನಿ ಕೋ-ಒರ್ಡಿನೇಷನ್ ಸಮಿತಿಯ ನಿಯೋಗದ ವತಿಯಿಂದ ಉಡುಪಿ ಜಿಲ್ಲಾ ನೂತನ SP ಹರಿರಾಮ್ ಶಂಕರ್ ರವರನ್ನು ತಾರೀಕು 7/07/2025 ರ ಸೋಮವಾರ ಬೇಟಿಯಾಗಿ ಶುಭ ಹಾರೈಸಲಾಯಿತು.

    ನಿಯೋಗದಲ್ಲಿ ಜಿಲ್ಲಾ ಸುನ್ನಿ ಕೋ-ಒರ್ಡಿನೇಷನ್ ಸಮಿತಿಯ ಅಧ್ಯಕ್ಷ ಕೆ.ಎ.ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ, ಪ್ರಧಾನ ಕಾರ್ಯದರ್ಶಿ ಸುಭಾನ್ ಅಹ್ಮದ್ ಹೊನ್ನಾಳ, ಕೋಶಾಧಿಕಾರಿ ವಸೀಮ್ ಭಾಷಾ ಕುಂದಾಪುರ, ಕಾರ್ಯದರ್ಶಿ ಗಳಾದ ಇಲಿಯಾಸ್ ಕಟಪಾಡಿ, ಕಾನೂನು ಸಲಹೆಗಾರ ಹಬೀಬ್ ಸಂತೋಷ್ ನಗರ, ನಿರ್ದೇಶಕರಾದ ಸೈಯ್ಯದ್ ಫರೀದ್ ಸಾಹೇಬ್ ಉಡುಪಿ, ಹನೀಫ್ ಅಂಬಾಗಿಲು ಮೊದಲಾದವರು ಉಪಸ್ಥಿತರಿದ್ದರು

  • ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ

    ಉಡುಪಿ, ಜುಲೈ 8, 2025: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ, ಬ್ರಹ್ಮಾವರ ಮತ್ತು ಕಾಪು ತಾಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ  ಹಾಗೂ ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳಿಗೆ ವಿದ್ಯಾರ್ಥಿವೇತನ ಮಂಜೂರಾತಿಗಾಗಿ ಸಂಬಂಧಪಟ್ಟ ಶಾಲಾ ಮುಖ್ಯೋಪಾಧ್ಯಾಯರುಗಳು ವಿದ್ಯಾರ್ಥಿಗಳ ದಾಖಲೆಗಳೊಂದಿಗೆ ನೇರವಾಗಿ ಇಲಾಖೆಯ ವೆಬ್‌ಸೈಟ್ http://ssp.postmatric.karnataka.gov.in ಅಥವಾ www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

    ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದ ಪ್ರತಿ ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ವಿದ್ಯಾರ್ಥಿಯ ಆಧಾರ್ ಸಂಖ್ಯೆ ಎನ್.ಪಿ.ಸಿ.ಐ ಸೀಡಿಂಗ್ ಮಾಡುವುದು ಕಡ್ಡಾಯವಾಗಿರುತ್ತದೆ. ಪರಿಶಿಷ್ಟ ಪಂಗಡದ 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳು ಎನ್.ಎಸ್.ಪಿ ಓ.ಟಿ.ಆರ್ ರಿಜಿಸ್ಟ್ರೇಷನ್ ಮಾಡುವುದು ಕಡ್ಡಾಯವಾಗಿರುತ್ತದೆ.

    ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2528884, ಮೊ.ನಂ: 9480843209 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

  • ಸಂಘಪರಿವಾರ ಹಾಗೂ ಬಿಜೆಪಿಗೆ ಕರಾವಳಿ ಹಿಂದುತ್ವದ ಪ್ರಯೋಗಾಲಯಗಳಾಗಿವೆ: ಪ್ರೊ.ಫಣಿರಾಜ್

    ಉಡುಪಿ, ಜುಲೈ 6, 2025: ಸಂಘಪರಿವಾರ ಹಾಗೂ ಬಿಜೆಪಿಗೆ ಕರಾವಳಿ ಜಿಲ್ಲೆಗಳು ಹಿಂದುತ್ವದ ಪ್ರಯೋಗಾಲಯಗಳಾಗಿವೆ. ಕೋಮು ಹಿಂಸೆಯನ್ನು ನಿರಂತರವಾಗಿ ಚಾಲನೆಯಲ್ಲಿ ಇಟ್ಟುಕೊಳ್ಳುವ ಇಂಡಸ್ಟ್ರೀ ಆಗಿದೆ. ಇದಕ್ಕೆ ಹಣ ಹೂಡಿಕೆ ಮಾಡುತ್ತಾರೆ ಮತ್ತು ಅದರ ಲಾಭದ ನಿರೀಕ್ಷೆಯಲ್ಲೂ ಇರುತ್ತಾರೆ ಎಂದು ಹಿರಿಯ ಚಿಂತಕ ಪ್ರೊ.ಫಣಿರಾಜ್ ಹೇಳಿದ್ದಾರೆ.

    ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ, ಸಹಬಾಳ್ವೆ ಮತ್ತು ಮಾನವ ಬಂಧುತ್ವ ಉಡುಪಿ ವಲಯ ಹಾಗೂ ಸಮಾನ ಮನಸ್ಕ ಸಂಘಟನೆಗಳ ಆಶ್ರಯದಲ್ಲಿ ಇಂದು ನೀಲಾವರದಲ್ಲಿ ಹಮ್ಮಿಕೊಳ್ಳಲಾದ ಸಾಮರಸ್ಯ ನಡಿಗೆ -ಸೌಹಾರ್ದ ಸಭೆಯನ್ನುದ್ದೇಶಿಸಿ ಅವರು ಮಾತನಾಡುತಿದ್ದರು.

    ಸಮಾಜದಲ್ಲಿ ಉದ್ರೇಕ ಎಬ್ಬಿಸಿ ಕೋಮು ಹಿಂಸೆಯನ್ನು ಜ್ವಲಂತವಾಗಿರಿಸುವ ಪ್ರಯತ್ನ ನಡೆಯುತ್ತಿದೆ. ಇದು 2000ರಿಂದ ಉಡುಪಿ ಜಿಲ್ಲೆಯಲ್ಲಿ ಮುಂದುವರೆಯುತ್ತಿದೆ. ಇವರೇ ದಾಳಿ ಮಾಡಿ, ಇವರೇ ಬೀದಿಗೆ ಬಂದು ಪ್ರತಿಭಟನೆ ನಡೆಸುತ್ತಾರೆ ಎಂದ ಅವರು, ಕರಾವಳಿಯ ಹಿಂದುಳಿದ ಜಾತಿಯ ಯುವಕರನ್ನು ಸಂಘಪರಿವಾರ ಹಿಂಸೆಗೆ ಇಳಿಸುತ್ತದೆ ಮತ್ತು ಜೈಲುಪಾಲಾಗಿಸುತ್ತದೆ. ಮತ್ತೆ ಅವರಿಗೂ ಅವರ ಕುಟುಂಬಕ್ಕೂ ಹಣ ನೀಡುತ್ತದೆ. ಅವರ ಕೇಸ್ ನಡೆಸಲು ಕ್ರಿಮಿನಲ್ ವಕೀಲರನ್ನು ನಿಯೋಜಿಸಲಾಗುತ್ತದೆ. ಹೀಗೆ ಇದೊಂದು ಉದ್ಯಮವಾಗಿ ಬಿಟ್ಟಿದೆ ಎಂದರು.

    ನಾವು ಇಂತಹ ಘಟನೆ ನಡೆದಾಗ ಕೇವಲ ಸೌಹಾರ್ದ ಮಾತನಾಡಿದರೆ ಸಾಕಾಗುವುದಿಲ್ಲ. ತಳ ಸಮುದಾಯದ ಯುವಕರು ಆ ಕಡೆ ಹೋಗದಂತೆ ತಡೆಯಬೇಕು. ಅವರೆಲ್ಲ ಜೀವನ ಹಾಗೂ ವಿದ್ಯೆ ಇಲ್ಲದ ಕಾರಣಕ್ಕೆ ಹರಣಕ್ಕಾಗಿ ಅತ್ತ ಹೋಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಅವರ ಕೇರಿಗಳಿಗೆ ಭೇಟಿ ನೀಡಿ ಅವರ ಸ್ಥಿತಿ ಗತಿಗಳನ್ನು ಅರ್ಥ ಮಾಡಿಕೊಳ್ಳಬೇಕು. ಆಗ ಮಾತ್ರ ಸಂಘ ಪರಿವಾರದ ಕೋಮು ಹಿಂಸೆಯ ಇಂಡಸ್ಟ್ರೀಯನ್ನು ತಡೆಯಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.

    ಸೌಹಾರ್ದ ಎಂಬುದು ಸಾಮಾಜಿಕ ರಾಜಕೀಯವಾಗಿದೆ. ಅದನ್ನು ಕಾಂಗ್ರೆಸ್ ಹಿಂದಿನಿಂದಲೂ ಮಾಡಿಕೊಂಡು ಬಂದಿದೆ. ಅದನ್ನು ಮರೆತರೆ ಆ ಸೌಹಾರ್ದವನ್ನು ಸಂಘಪರಿವಾರ ಸಾರ್ವಕರ್ ಹಾಗೂ ಗೊಲ್ವಕರ್ ರಾಜಕೀಯವನ್ನು ಬಳಸಿಕೊಂಡು ನಿಮ್ಮ ಕಣ್ಣೇದುರೇ ನಾಶ ಮಾಡುತ್ತದೆ. ಅದನ್ನು ಎದುರಿ ಸಲು ಸಿದ್ಧರಾಗಬೇಕು. ಸುಧಾರಣ ವಾದಿಯಿಂದ ಸಮಾಜವನ್ನು ತಲುಪುವ ಕಾರ್ಯ ಮಾಡಬೇಕೆ ಹೊರತು ಕೇವಲ ಭಾಷಣದಿಂದ ಅದನ್ನು ತಡೆಯಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದರು.

    ಚಿಂತಕ ಎಂ.ಜಿ.ಹೆಗ್ಡೆ ಮಾತನಾಡಿ, ಶಾಲಾ ವಾರ್ಷಿಕೋತ್ಸವ, ಸಾಹಿತ್ಯ, ದೇವಸ್ಥಾನದ ಕಾರ್ಯಕ್ರಮಗಳಲ್ಲಿಯೂ ಧ್ವೇಷ ಭಾಷಣ ಮಾಡುವುದು ಸಾಮಾನ್ಯವಾಗಿದೆ ಮತ್ತು ಭಾಷಣದ ವ್ಯಾಖ್ಯಾನ ಕೂಡ ಆಗಿದೆ. ಧರ್ಮವನ್ನು ನಿಜವಾಗಿ ಅರ್ಥಮಾಡಿಕೊಂಡು ಪಾಲನೆ ಮಾಡುವವರಿಗೆ ಬೇರೆ ಧರ್ಮದವರನ್ನು ನೋಡಿದಾಗ ಅಸಹನೆ ಹುಟ್ಟಲು ಸಾಧ್ಯವೇ ಇಲ್ಲ ಎಂದು ಹೇಳಿದರು.

    ಧರ್ಮದ ಅರ್ಥ ಗೊತ್ತಿಲ್ಲದ ಹಿಂದು ಚಳವಳಿಗಳು ಹುಟ್ಟಿರುವುದೇ ಇದಕ್ಕೆಲ್ಲ ಕಾರಣವಾಗಿದೆ.ಧರ್ಮಗಳಲ್ಲಿ ವೇದಾಂತ ಯಾರಿಗೂ ಬೇಡವಾಗಿದೆ. ಅದರಲ್ಲಿ ಅಸಮಾನತೆ, ಹಿಂಸೆ ಅಸ್ಪಸೃಶ್ಯ ಅಸಹನೆ ಯಾವುದು ಇಲ್ಲ. ಆದರೆ ನಾವು ಆ ವೇದಾಂತವನ್ನು ಬಿಟ್ಟು ಜಗಳ ಕಾರಣವಾಗುವ ಆಚರಣೆಗಳನ್ನೇ ಧರ್ಮ ಎಂಂದು ನಂಬಿಕೊಂಡಿದ್ದೇವೆ. ಆಚರಣೆಗಳು ಮತಗಳ ಒಂದು ಭಾಗವಾಗಿವೇ ಹೊರತು ಅದುವೇ ಧರ್ಮ ಅಲ್ಲ ಎಂದರು.

    ಅಧ್ಯಕ್ಷತೆಯನ್ನು ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ವಹಿಸಿದ್ದರು. ವೇದಿಕೆಯಲ್ಲಿ ದಸಂಸ ಮುಖಂಡರಾದ ಶ್ಯಾಮ್‌ರಾಜ್ ಬಿರ್ತಿ, ಸುಂದರ್ ಮಾಸ್ತರ್, ಸ್ಟಿವನ್ ವಿಕ್ಟರ್ ಲೂವೀಸ್, ಧರ್ಮಗುರು ಮುಹಮ್ಮದ್ ರಶೀದ್ ಕಣ್ಣಂಗಾರ್, ಕಾಂಗ್ರೆಸ್ ಮುಖಂಡರಾದ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್, ಎಂ.ಎ.ಗಫೂರ್, ಅಶೋಕ್ ಕುಮಾರ್ ಕೊಡವೂರು, ಪ್ರಸಾದ್‌ರಾಜ್ ಕಾಂಚನ್, ರಾಘವೇಂದ್ರ ಶೆಟ್ಟಿ ಕರ್ಜೆ, ಜ್ಯೋತಿ ಹೆಬ್ಬಾರ್, ಶರ್ಫುದ್ದೀನ್ ಶೇಖ್ ಭಾಗವಹಿಸಿದ್ದರು.

    ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ವಂದಿಸಿದರು. ಸತೀಶ್ ಕೊಡವೂರು ಕಾರ್ಯ ಕ್ರಮ ನಿರೂಪಿಸಿದರು. ಇದಕ್ಕೂ ಮೊದಲು ಬ್ರಹ್ಮಾವಾರದ ಕುಂಜಾಲು ಕೇಳಪೇಟೆಯಿಂದ ನೀಲಾವರ ಕ್ರಾಸ್‌ವರೆಗೆ ಸಾಮರಸ್ಯ ನಡಿಗೆ ಜರಗಿತು.

    ಅವಿಭಜಿತ ದ.ಕ. ಜಿಲ್ಲೆಯಲ್ಲಿ ಗೊಡ್ಡದ ಹಸುವನ್ನು ರೈತರು ಮಾರಾಟ ಮಾಡುತ್ತಾರೆ. ಅದು ಮಾಂಸಕ್ಕೆ ಹೋಗುತ್ತದೆ ಎಂಬುದು ಕೂಡ ಅವರಿಗೆ ತಿಳಿದು ಇರುತ್ತದೆ. ಆದರೆ ಇಂತಹ ವಿಚಾರಗಳನ್ನು ಇಟ್ಟು ಕೊಂಡು ಯಶ್‌ಪಾಲ್ ಸುವರ್ಣಗೆ ಬೆಂಕಿ ಹಚ್ಚಲು ಐದು ನಿಮಿಷ ಸಾಕಾಗುತ್ತದೆ, ಆದರೆ ಆ ಬೆಂಕಿಯನ್ನು ಆರಿಸಲು 10 ದಿನ ಬೇಕಾಗುತ್ತದೆ’ಪ್ರೊ.ಫಣಿರಾಜ್, ಹಿರಿಯ ಚಿಂತಕರು

  • Brotherhood Football Match to Kick Off on July 6

    Kundapura, July 1, 2025: An exhilarating football showdown is on the horizon as the Brotherhood Football Match, organized by SIO, is scheduled for Sunday, July 6, 2025, at 1:00 PM at Sahana Sports, Kundapura. This event is exclusively open to boys aged 15-18 from the Muslim communities of Shiroor, Mavinkatte, Kandlur, Brahmavara, Uppinkote, and Gangolli.

    The thrilling competition will see participants forming teams of 5+1 or joining squads organized by the event coordinators. Registration is open for students in 9th, 10th, 1st PUC, 2nd PUC, or those who recently completed 2nd PUC, with the last date to sign up set for July 4, 2025, before 4:00 PM.

    Interested players can register by visiting the link https://forms.gle/zn2WvCLAeUFZCGT7A or contacting +919916753525 for further details.

    Event Details:

    • Date: Sunday, July 6, 2025
    • Time: 1:00 PM
    • Place: Sahana Sports, Kundapura
    • Registration Deadline: July 4, 2025, before 4:00 PM
    • Contact: +919916753525

    Don’t miss this exciting display of talent and unity at Sahana Sports, Kundapura!

  • ಬ್ರಹ್ಮಾವರ: ಲಂಚ ಸ್ವೀಕರಿಸುತಿದ್ದ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಲೋಕಾಯುಕ್ತ ಬಲೆಗೆ

    ಬ್ರಹ್ಮಾವರ, ಜೂನ್ 07, 2025: ಕರ್ನಾಟಕ ಲೋಕಾಯುಕ್ತರು ನಡೆಸಿದ ಸುಸಂಘಟಿತ ಕಾರ್ಯಾಚರಣೆಯಲ್ಲಿ, ಬ್ರಹ್ಮಾವರದ ಮೆಸ್ಕಾಂ ಕಚೇರಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅಶೋಕ್ ಪೂಜಾರಿ ಅವರು ಜೂನ್ 6 ರ ಶುಕ್ರವಾರ ಬೆಳಿಗ್ಗೆ ಸಾರ್ವಜನಿಕರೊಬ್ಬರಿಂದ 20,000 ರೂ. ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

    ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸುಮಾರು ಎರಡು ತಿಂಗಳಿನಿಂದ ದೂರುದಾರರಿಗೆ ಕಿರುಕುಳ ನೀಡುತ್ತಿದ್ದರು, ಅವರ ಮನೆಗೆ ವಿದ್ಯುತ್ ಸಂಪರ್ಕ ನೀಡುವುದನ್ನು ವಿಳಂಬ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ. ಕೆಲವು ಅವರ ಅಧಿಕೃತ ಕರ್ತವ್ಯದ ಭಾಗವಾಗಿದ್ದರೂ, ಮುಂದುವರಿಯಲು ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

    ಆದರೆ ಕಾನೂನು ಬದ್ಧವಾಗಿ ಮಾಡಬೇಕಾದ ಸರ್ಕಾರಿ ಕೆಲಸಕ್ಕೆ ಲಂಚ ನೀಡಿ ಕೆಲಸ ಮಾಡಿಸಿಕೊಳ್ಳಲು ಇಚ್ಛೆ ಇಲ್ಲದ ಕಾರಣ ದೂರುದಾರರು ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಈ ದೂರಿನ ಆಧಾರದ ಮೇಲೆ ಬಲೆ ಬೀಸಲಾಗಿದ್ದು, ಅಶೋಕ್ ಪೂಜಾರಿ ಬ್ರಹ್ಮಾವರದ ಮೆಸ್ಕಾಂ ಕಚೇರಿಯೊಳಗೆ ಲಂಚ ಸ್ವೀಕರಿಸುತ್ತಿದ್ದಾಗ ಬಂಧಿಸಲಾಗಿದೆ.

    ಅಶೋಕ್ ಪೂಜಾರಿ ಈ ಹಿಂದೆ ಕುಂದಾಪುರದಲ್ಲಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಆಗಿ ಸೇವೆ ಸಲ್ಲಿಸಿದ್ದರು ಮತ್ತು ಕಳೆದ ಮೂರ್ನಾಲ್ಕು ವರ್ಷಗಳಿಂದ ಬ್ರಹ್ಮಾವರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

    ಈ ಕಾರ್ಯಾಚರಣೆಯನ್ನು ಕರ್ನಾಟಕ ಲೋಕಾಯುಕ್ತ ಮಂಗಳೂರು ಪೊಲೀಸ್ ವರಿಷ್ಠಾಧಿಕಾರಿ (ಪ್ರಭಾರ) ಕುಮಾರಚಂದ್ರ ಅವರ ಮಾರ್ಗದರ್ಶನದಲ್ಲಿ ನಡೆಸಲಾಯಿತು. ಉಡುಪಿ ಕರ್ನಾಟಕ ಲೋಕಾಯುಕ್ತ ಉಪ ಪೊಲೀಸ್ ವರಿಷ್ಠಾಧಿಕಾರಿ (ಪ್ರಭಾರ) ಮಂಜುನಾಥ ಅವರು ನೇತೃತ್ವ ವಹಿಸಿದ್ದರು ಮತ್ತು ಪೊಲೀಸ್ ನಿರೀಕ್ಷಕರಾದ ರಾಜೇಂದ್ರ ನಾಯ್ಕ (ಉಡುಪಿ) ಮತ್ತು ಭಾರತಿ ಜಿ (ಮಂಗಳೂರು) ಹಾಗೂ ಉಡುಪಿ ಮತ್ತು ಮಂಗಳೂರು ಘಟಕಗಳ ಲೋಕಾಯುಕ್ತ ಸಿಬ್ಬಂದಿ ಇದ್ದರು. ಅಶೋಕ್ ಪೂಜಾರಿಯನ್ನು ವಶಕ್ಕೆ ಪಡೆಯಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

  • ಬ್ರಹ್ಮಾವರ: ಆಂಬ್ಯುಲೆನ್ಸ್ ಕೊಠಡಿ, 4 ಆಕ್ಸಿಜನ್ ಕಾನ್ಸೆಂಟ್ರೇಟರ್ ಹಸ್ತಾಂತರ

    ಬ್ರಹ್ಮಾವರ: ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಮತ್ತು ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಇದರ ಆಶ್ರಯದಲ್ಲಿ ಜನೌಷಧಿ ಕೇಂದ್ರದ ಬಳಿ ನೂತನವಾಗಿ ನಿರ್ಮಿಸಿರುವ ಅಂಬುಲೆನ್ಸ್‌ ಕೊಠಡಿ ಮತ್ತು 4 ಆಕ್ಸಿಜನ್ ಕಾನ್ಸೆಂಟ್ರೇಟರ್ ಹಸ್ತಾಂತರ ಸಮಾರಂಭ ಮೇ 31 ರಂದು ಶನಿವಾರ ಸಿಟಿ ಸೆಂಟರ್ ಬ್ರಹ್ಮಾವರದಲ್ಲಿ ನಡೆಯಿತು.

    ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ, ನಮ್ಮೊಳಗಿನ ನಮ್ಮತನ ಕಳೆದುಕೊಳ್ಳದೆ ಸದಾ ಕಾಲ ಜನಪಯೋಗಿಯಾಗಿ ಬದುಕು ಸಾಗಿಸಿದರೆ ನಮ್ಮ ಜೀವನ ಸಾರ್ಥಕವಾಗಲು ಸಾಧ್ಯ. ಶಾಲೆಯಲ್ಲಿ ಶಿಕ್ಷಣ ನೀಡಿದರೆ, ಮನೆಯಲ್ಲಿ ಸಂಸ್ಕಾರ ನೀಡುವ ಕಾಯ೯ ನಡೆಯಬೇಕು ನಮ್ಮ ವಾತಾವರಣ ತಿಳಿಮಾಡುವ ಕೆಲಸ ನಿತ್ಯ ನಿರಂತವಾಗಿರಬೇಕು ಎಂದರು.

    ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ, ಜಯಂಟ್ಸ್ ಸಂಸ್ಥೆಯು ಪರಿಸರದ ಜನರಿಗೆ ಅನೇಕ ಜನೋಪಯೋಗಿ ಕಾರ್ಯಕ್ರಮವನ್ನು ನಡೆಸುತ್ತಿರುವುದು ಅಭಿನಂದನೀಯ ಎಂದರು.

    ಜಯಂಟ್ಸ್ ಕೇಂದ್ರ ಸಮಿತಿ ಸದಸ್ಯ ದಿನಕರ ಅಮೀನ್, ಸ್ವಚ್ಚ ಭಾರತ ಮತ್ತು ವನಮಹೋತ್ಸವ ಕಾರ್ಯಕ್ರಮಗಳು ರಾಷ್ಟ್ರಮಟ್ಟದ ಕಾರ್ಯಕ್ರಮ ಗಳಾಗಿದ್ದು, ಅದನ್ನು ಮುಂದಿನ ದಿನಗಳಲ್ಲಿ ಪರಿಣಾಮಕಾರಿಯಾಗಿ ಮಾಡಲಾಗುವುದು ಎಂದರು.

    ಜಯಂಟ್ಸ್ ಫೆಡರೇಶನ್ ಅಧ್ಯಕ್ಷ ತೇಜೇಶ್ವರ್ ರಾವ್, ತಾ.ಪಂ ಇಒ ಹೆಚ್.ವಿ ಇಬ್ರಾಹಿಂಪುರ ಶುಭ ಹಾರೈಸಿದರು.

    ಈ ಸಂದಭ೯ದಲ್ಲಿ ಅಮೇರಿಕ ಅನಿವಾಸಿ ಭಾರತೀಯ ಹಲವಾರು ಸಂಸ್ಥೆಗಳಿಗೆ ದಾನ ನೀಡಿದ ಡಾ.ಜೀವನ್ ಪ್ರಕಾಶಿನಿ ಮೂತಿ೯ ಮತ್ತು ಎನ್.ಸಿ ಮೂತಿ೯ ದಂಪತಿಗಳನ್ನು ಸನ್ಮಾನಿಸಲಾಯಿತು. ಈ ಸಂದಭ೯ದಲ್ಲಿ ಅವರು ಸಂಸ್ಥೆಯ ಕಾರ್ಯವೈಖರಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಯಂಟ್ಸ್ ಗ್ರೂಪ್ ಅಧ್ಯಕ್ಷ ಅಣ್ಣಯ್ಯ ದಾಸ್ ವಹಿಸಿ ಅತಿಥಿಗಳನ್ನು ಸ್ವಾಗತಿಸಿದರು. ವಾರಂಬಳ್ಳಿ ಗ್ರಾ.ಪಂ ಅಧ್ಯಕ್ಷ ನಿತ್ಯಾನಂದ ಬಿ. ಆರ್ ರವರನ್ನು ಗೌರವಿಸಲಾಯಿತು. ನಾಯ್ಕನಕಟ್ಟೆ ಶಾಲೆಗೆ ನೋಟ್ ಪುಸ್ತಕಗಳನ್ನು ಕೊಡುಗೆಯಾಗಿ ನೀಡಲಾಯಿತು.

    ವೇದಿಕೆಯಲ್ಲಿ ಸಮುದಾಯ ಆರೋಗ್ಯ ಕೇಂದ್ರ ಆಡಳಿತ ವೈದ್ಯಾಧಿಕಾರಿ ಮಹೇಶ್ ಐತಾಳ, ವಿವೇಕಾನಂದ ಕಾಮತ್, ನಿಕಟಪೂರ್ವ ಅಧ್ಯಕ್ಷ ಸುಂದರ ಪೂಜಾರಿ ಮೂಡುಕುಕ್ಕುಡೆ ಮುಂತಾದವರಿದ್ದರು. ಕಾರ್ಯದರ್ಶಿ ಮಿಲ್ಟನ್ ಒಲಿವರ್ ವರದಿ ವಾಚಿಸಿದರು. ಫೆಡರೇಶನ್ ಮಾಜಿ ಅಧ್ಯಕ್ಷ ಮಧುಸೂಧನ್ ಹೇರೂರು ಪ್ರಸ್ತಾವನೆಗೈದು, ಅತಿಥಿಗಳಿಗೆ ಸಿಂದೂರ ವಿಶೇಷ ಗಿಡವನ್ನು ನೀಡಿ ಗೌರವಿಸಿದರು. ದಿವ್ಯ ಪೂಜಾರಿ, ಶ್ರೀನಾಥ ಕೋಟ, ಪ್ರಸನ್ನ ಕಾರಂತ, ರೊನಾಲ್ಡ್ ಡಯಾಸ್ ಪರಿಚಯಿಸಿದರು. ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿ, ವಂದಿಸಿದರು. ಈ ಸಂದರ್ಭದಲ್ಲಿ ಜನೌಷಧಿ ಸಿಬ್ಬಂದಿಗಳು ಮತ್ತು ಜಯಂಟ್ಸ್ ಹಿರಿಯ ಸದಸ್ಯರನ್ನು ಗೌರವಿಸಲಾಯಿತು.

    ಜಯಂಟ್ಸ್ ನಿರ್ದೇಶಕ ಪ್ರದೀಪ್ ಶೆಟ್ಟಿ ಪ್ರತಿಮಾ ಡೋರಿಸ್ ಸಹಕರಿಸಿದರು.

  • ಬ್ರಹ್ಮಾವರ: ಆನ್‌ಲೈನ್ ವಂಚನೆಗೆ ಒಳಗಾದ ವ್ಯಕ್ತಿ – 1.47 ಲಕ್ಷ ರೂ. ಕಳೆದುಕೊಂಡ ಘಟನೆ

    ಬ್ರಹ್ಮಾವರ, ಜೂನ್ 01, 2025: ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮದ 40 ವರ್ಷದ ಯೋಗೇಶ್ ಎಂಬುವರು ಆನ್‌ಲೈನ್ ವಂಚನೆಗೆ ಒಳಗಾಗಿ 1,47,692 ರೂಪಾಯಿಗಳನ್ನು ಕಳೆದುಕೊಂಡಿರುವ ಘಟನೆ ನಡೆದಿದೆ.

    ದಿನಾಂಕ 23.05.2025ರಂದು ಸಂಜೆ 4:16 ಗಂಟೆಗೆ ಅಪರಿಚಿತ ವ್ಯಕ್ತಿಯೊಬ್ಬರು ಯೋಗೇಶ್ ಅವರ ಮೊಬೈಲ್‌ಗೆ ಕಳುಹಿಸಿದ ಸಂದೇಶದಲ್ಲಿ ಕೊಟ್ಟಿರುವ ವೆಬ್‌ಸೈಟ್ ಲಿಂಕ್‌ ಮೂಲಕ ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್‌ಗೆ ಸಂಬಂಧಿಸಿದ ಪರದೆಯನ್ನು ತೋರಿಸಲಾಗಿದೆ. ಈ ಲಿಂಕ್‌ಗೆ ಲಾಗಿನ್‌ ಆದ ಯೋಗೇಶ್, ಆರೋಪಿತರ ಸೂಚನೆಯಂತೆ ತಮ್ಮ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ದಾಖಲೆಗಳನ್ನು ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡಿದ್ದಾರೆ.

    ನಂತರ, ಆರೋಪಿತರ ಸೂಚನೆಯಂತೆ ದಿನಾಂಕ 23.05.2025ರಂದು 5,000 ರೂ. ಮತ್ತು 26.05.2025ರಂದು 25,800 ರೂ. ಸೇರಿದಂತೆ, ವಿವಿಧ ದಿನಾಂಕಗಳಲ್ಲಿ ಒಟ್ಟು 1,47,692 ರೂಪಾಯಿಗಳನ್ನು ಆನ್‌ಲೈನ್ ಮೂಲಕ ವರ್ಗಾವಣೆ ಮಾಡಲಾಗಿದೆ. ಆದರೆ, ಆರೋಪಿತರು ಯೋಗೇಶ್ ಅವರನ್ನು ವಂಚಿಸಿದ್ದಾರೆ ಎಂದು ದೂರು ದಾಖಲಾಗಿದೆ.

    ಈ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 122/2025ರ ಅಡಿಯಲ್ಲಿ ಐಟಿ ಕಾಯ್ದೆಯ ಕಲಂ 66(C) ಮತ್ತು 66(D) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸಾರ್ವಜನಿಕರು ಅಪರಿಚಿತ ಲಿಂಕ್‌ಗಳನ್ನು ಕ್ಲಿಕ್ ಮಾಡುವಾಗ ಅಥವಾ ವೈಯಕ್ತಿಕ ಮಾಹಿತಿಯನ್ನು ಹಂಚಿಕೊಳ್ಳುವಾಗ ಎಚ್ಚರಿಕೆ ವಹಿಸುವಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

    (ಗಮನಿಸಿ: ಸಾರ್ವಜನಿಕ ಜಾಗೃತಿಗಾಗಿ ಈ ವರದಿಯನ್ನು ತಯಾರಿಸಲಾಗಿದ್ದು, ನಕಲಿ ಲಿಂಕ್‌ಗಳು ತೆಗೆದುಹಾಕಲಾಗಿದೆ.)