Category: Byndoor

  • ಬೈಂದೂರು: ಕಾಂಗ್ರೆಸ್‌ನಿಂದ ಸತ್ಯದರ್ಶನ ಪ್ರತಿಭಟನೆ; ಬಿಜೆಪಿ ವಿರುದ್ಧ ಆಕ್ರೋಶ

    ಬೈಂದೂರು, ಜುಲೈ 7, 2025: ಬೈಂದೂರು ಬ್ಲಾಕ್ ಕಾಂಗ್ರೆಸ್‌ನಿಂದ ಪಟ್ಟಣ ಪಂಚಾಯಿತಿ ಎದುರಿಗೆ ಸೋಮವಾರ, ಜುಲೈ 7 ರಂದು ಬೃಹತ್ ಪ್ರತಿಭಟನೆಯನ್ನು ಆಯೋಜಿಸಲಾಯಿತು. ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ ನೇತೃತ್ವದಲ್ಲಿ ಮತ್ತು ಕಾಂಗ್ರೆಸ್ ನಾಯಕ ಕೆ. ಗೋಪಾಲ್ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪಕ್ಷದ ಎಲ್ಲಾ ನಾಯಕರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

    ಬೈಂದೂರು ಕ್ಷೇತ್ರಕ್ಕೆ ಆಘಾದವಾದ ರಾಜಕೀಯ ಹಿನ್ನೆಲೆಯಿದೆ.ಈ ಕ್ಷೇತ್ರವನ್ನು ಪ್ರತಿನಿಧಿಸಿದ ಪ್ರತಿ ಶಾಸಕರು ಒಂದಿಷ್ಟು ಬದ್ದತೆಯಲ್ಲಿ ಕಾರ್ಯನಿರ್ವಹಿಸಿದ್ದಾರೆ.ಆದರೆ ಈ ಬಾರಿಯ ಬಿಜೆಪಿ ಶಾಸಕರು ಮಾತ್ರ ನಿಯಮಗಳನ್ನು ಗಾಳಿಗೆ ತೂರಿದ್ದಾರೆ.ಕ್ಷೇತ್ರದ ಜನರಿಗೆ ಅನುಕೂಲವಾಗಲು ಶಾಸಕರ ಕಛೇರಿಯನ್ನು ಬೈಂದೂರಿನಲ್ಲಿ ಸ್ಥಾಪಿಸಲಾಗಿದೆ.ಆದರೆ ಶಾಸಕರು ಮಾತ್ರ ಉಪ್ಪುಂದದ ಪಕ್ಷದ ಕಛೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸುತ್ತಾರೆ.ಖಾಸಗಿ ಕಛೇರಿಯಲ್ಲಿ ಸಂಜೀವಿನಿ ಸೇರಿದಂತೆ ಸರಕಾರಿ ಅಧಿಕಾರಿಗಳ ಸಭೆ ನಡೆಸುವುದು ಸರಿಯಲ್ಲ.ಇದು ಮುಂದುವರಿದರೆ ಶಾಸಕರ ನಡೆ ವಿರುದ್ದ ಶೀಘ್ರ ಪ್ರತಿಭಟನೆ ಮಾಡಲಾಗುತ್ತದೆ ಎಂದು ಮಾಜಿ ಶಾಸಕರು ಹೇಳಿದರು.

    ಕಾಂಗ್ರೆಸ್ ನಾಯಕರು ಮಾತನಾಡಿ, “ಸತ್ಯವನ್ನು ಮರೆಮಾಚಿ, ಜನರನ್ನು ದಾರಿತಪ್ಪಿಸುವ ಪ್ರಯತ್ನಗಳನ್ನು ಬಿಜೆಪಿ ನಡೆಸುತ್ತಿದೆ. ಇದಕ್ಕೆ ಜನತೆಯೇ ಉತ್ತರ ನೀಡಲಿದ್ದಾರೆ,” ಎಂದು ಆಕ್ರೋಶ ವ್ಯಕ್ತಪಡಿಸಿದರು.

  • ‘ಸರ್ಕಾರಿ ಕೆಲಸ’ಕ್ಕಾಗಿ 30 ವರ್ಷದ ಹಿಂದೆ 200 ರೂ. ಪಡೆದು ವಂಚಿಸಿದ್ದ ವ್ಯಕ್ತಿ ಸೆರೆ

    ಬೈಂದೂರು: ಸರಕಾರಿ ಕೆಲಸ ಕೊಡಿಸುತ್ತೇನೆ ಎಂದು ಭರವಸೆ ನೀಡಿ 30 ವರ್ಷಗಳ ಹಿಂದೆ 200 ರೂ. ಪಡೆದು ಮೋಸ ಮಾಡಿದ್ದ ಆರೋಪಿ ಬೈಂದೂರಿನ ಮಯ್ಯಾಡಿಯ ಬಿ.ಕೆ. ರಾಮಚಂದ್ರ ರಾವ್‌ ಎಂಬಾತನನ್ನು ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

    ಶಿರಸಿಯ ಬಿಳಿಗಿರಿ ಕೊಪ್ಪದ ವೆಂಕಟೇಶ ಅವರಿಗೆ ಪದವಿ ಓದುತ್ತಿರುವಾಗ ರಾಮಚಂದ್ರನ ಪರಿಚಯವಾಗಿತ್ತು. ಆತ ಸರಕಾರಿ ನೌಕರಿ ಕೊಡಿಸುವುದಾಗಿ 200 ರೂ. ಪಡೆದು ಕೆಲಸ ಕೊಡಿಸದೆ ವಂಚಿಸಿರುವ ಕುರಿತು ಪ್ರಕರಣ ದಾಖಲಾಗಿತ್ತು.

    ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ 30 ವರ್ಷದಿಂದ ತಲೆಮರೆಸಿಕೊಂಡಿದ್ದ. ಡಿಎಸ್ಪಿ ಗೀತಾ ಪಾಟೀಲ್‌ ಹಾಗೂ ಶಿರಸಿ ಗ್ರಾಮೀಣ ಠಾಣೆ ಪಿಐ ಮಂಜುನಾಥ್‌ ಎಂ., ಪಿಎಸ್‌ಐ ಸಂತೋಷ ಕುಮಾರ್‌ ಎಂ., ಅಶೋಕ್‌ ರಾಠೊಡ್‌ ಮಾರ್ಗದರ್ಶನದಂತೆ ಠಾಣೆಯ ರಾಘವೇಂದ್ರ ಜಿ. ಮತ್ತು ಮಾರುತಿ ಗೌಡ ಬೆಂಗಳೂರಿನ ಬಳೆಪೇಟೆಯಲ್ಲಿದ್ದ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿ ಕರೆ ತಂದಿದ್ದಾರೆ.

  • ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಸಂಘಟನಾತ್ಮಕ ಸಭೆ: ಶ್ರೀಮತಿ ಅನಿತಾ ಆರ್. ಕೆ. ನೇತೃತ್ವ

    ಬೈಂದೂರು, ಜುಲೈ 1, 2025: ಬೈಂದೂರು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮಂಡಲ ಅಧ್ಯಕ್ಷರಾದ ಶ್ರೀಮತಿ ಅನಿತಾ ಆರ್. ಕೆ. ಅವರ ಉಪಸ್ಥಿತಿಯಲ್ಲಿ ಜಿಲ್ಲಾ ಮತ್ತು ಮಂಡಲ ಪದಾಧಿಕಾರಿಗಳು ಹಾಗೂ ವಿವಿಧ ಮೋರ್ಚಾಗಳ ಪದಾಧಿಕಾರಿಗಳೊಂದಿಗೆ ಪಕ್ಷದ ಸಂಘಟನಾತ್ಮಕ ವಿಚಾರಗಳ ಕುರಿತು ಪ್ರಮುಖ ಸಭೆ ನಡೆಯಿತು.

    ಸಭೆಯಲ್ಲಿ ಜಿಲ್ಲಾ ಮತ್ತು ಮಂಡಲ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದ್ದರು. ಬಿಜೆಪಿಯ ಸಂಘಟನಾತ್ಮಕ ಚಟುವಟಿಕೆಗಳನ್ನು ಬಲಪಡಿಸುವ ಉದ್ದೇಶದಿಂದ ಮಹತ್ವದ ಚರ್ಚೆಗಳು ನಡೆದವು.

  • ಭಾರೀ ಗಾಳಿಮಳೆ: ತಾರಾಪತಿಯಲ್ಲಿ ಹಾರಿಹೋದ ಮನೆಯ ಮೇಲ್ಛಾವಣಿ

    ಬೈಂದೂರು: ರವಿವಾರ ರಾತ್ರಿ ಬೀಸಿದ ಭೀಕರ ಗಾಳಿಗೆ ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಡುವರಿ ಸಮೀಪದ ತಾರಾಪತಿ ತುಂಡ್ಲಿತ್ತು ದಿ.ಗಂಗೆ ಪೂಜಾರಿ ಅವರ ಮನೆಯ ಮೇಲ್ಛಾವಣಿ ಹಾರಿ ಹೋಗಿದೆ.

    ರಾತ್ರಿ ಊಟ ಮಾಡಿ ಮಲಗಿದ ಸಂದರ್ಭ ಮಳೆಯೊಂದಿಗೆ ಬೀಸಿದ ಭಾರೀ ಗಾಳಿಗೆ ಮನೆಯ ಮೇಲ್ಛಾವಣಿ ಸೀಟುಗಳು ಹಾರಿ ಹೋಗಿ ದೂರ ಬಿದ್ದಿದೆ. ಮಳೆಯ ನೀರು ಮನೆಯ ಒಳಗೆ ಬರುತ್ತಿದೆ. ದೊಡ್ಡ ಪ್ರಮಾಣದ ಹಾನಿಯಾಗಿದ್ದು ಸಾಕಷ್ಟು ನಷ್ಟ ಸಂಭವಿಸಿದೆ.

  • ದೊಂಬೆ; ಗುಡ್ಡ ಕುಸಿದ ಪ್ರದೇಶಕ್ಕೆ ಅಧಿಕಾರಿಗಳ ಬೇಟಿ

    ಬೈಂದೂರು: ಇಲ್ಲಿನ ಪಡುವರಿ ಗ್ರಾಮದ ದೊಂಬೆ ಪುಂಡನಮನೆ ತ್ರಿಶೂಲ ಜಟ್ಟಿಗೇಶ್ವರ ದೇವಸ್ಥಾನದ ಬಳಿ ಗುಡ್ಡ ಕುಸಿದ ಸ್ಥಳಕ್ಕೆ ಶುಕ್ರವಾರ ವಿವಿಧ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಭಾಗದಲ್ಲಿ ಗುಡ್ಡ ಕುಸಿದಿರುವ ಬಗ್ಗೆ ಪತ್ರಿಕೆ ಬೆಳಕು ಚೆಲ್ಲಿತ್ತು.

    ವರದಿಗೆ ಸ್ಪಂಧಿಸಿ ಬೇಟಿ ನೀಡಿದ ಅಧಿಕಾರಿಗಳು ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮಕೈಗೊಳ್ಳುವ ಜೊತೆಗೆ ಈಗಾಗಲೇ ರಸ್ತೆಗೆ ಬಾಗಿಕೊಂಡ ಮರಗಳನ್ನು ಕಡಿಯಲಾಗಿದ್ದು.ಮುಂದೆ ಗುಡ್ಡ ಕುಸಿತ ಉಂಟಾದಲ್ಲಿ ಹಿಟಾಚಿ ಮೂಲಕ ಗುಡ್ಡದ ಮಣ್ಣನ್ನು ತೆರವುಗೊಳಿಸಲಾಗುವುದು.

    ಸಂಚಾರದ ಸುರಕ್ಷತೆಗಾಗಿ ಗುಡ್ಡದ ಕುಸಿತದ ಭಾಗದಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿದ್ದು  ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.ಕಳೆದ ವರ್ಷ ಸೋಮೇಶ್ವರ ಗುಡ್ಡ ಕುಸಿದು ಬಹಳಷ್ಟು ಸಮಸ್ಯೆ ಆಗಿದ್ದು ಈ ವರ್ಷ ಸಾಕಷ್ಟು ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

    ಸ್ಥಳಕ್ಕೆ ಬೈಂದೂರು ತಹಶೀಲ್ದಾರ ಭೀಮಸೇನ ಕುಲಕರ್ಣಿ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅಜಯ್ ಭಂಡಾರ್‌ಕರ್,ಬೈಂದೂರು ವಲಯ ಅರಣ್ಯಾಧಿಕಾರಿ ಸಂದೇಶ ಕುಮಾರ್,ಬೈಂದೂರು ಮೆಸ್ಕಾಂ ಇಲಾಖೆಯ ಉಪವಿಭಾಗಾಧಿಕಾರಿ ಹರೀಶ್,ಕರಾವಳಿ ಕಾವಲು ಪಡೆಯ ಪಿ.ಎಸ್.ಐ  ಸುಬ್ರಹ್ಮಣ್ಯ,ಉಪವಲಯ ಅರಣ್ಯಾಧಿಕಾರಿ ಹರ್ಷ ವಿ,ಮಾಜಿ ಗ್ರಾ.ಪಂ ಸದಸ್ಯ ಸಂಜೀವ ಮೊಗವೀರ,ಅರಣ್ಯ ವೀಕ್ಷಕ ಶಂಕರ,ಅರಣ್ಯ ಇಲಾಖೆಯ ಸಿಬಂದಿಗಳು,ಪಟ್ಟಣ ಪಂಚಾಯತ್ ಸಿಬಂದಿಗಳು,ಕರಾವಳಿ ಕಾವಲು ಪಡೆಯ ಸಿಬಂದಿಗಳು ಹಾಗೂ ಮೆಸ್ಕಾಂ ಇಲಾಖೆಯ ಸಿಬಂದಿಗಳು ಹಾಜರಿದ್ದರು.

  • ಬೈಂದೂರು: ಜಮೀನು ಕ್ರಯ ವಿಷಯದಲ್ಲಿ ಕೋಟಿಗಟ್ಟಲೆ ವಂಚನೆ ಆರೋಪ – ಪ್ರಕರಣ ದಾಖಲು

    ಬೈಂದೂರು, ಜೂನ್ 9, 2025: ತೆಗ್ಗರ್ಸೆ ಗ್ರಾಮದ ಸುಭಾಶ (32) ಎಂಬವರು ಗುತ್ತಿಗೆ ವ್ಯವಹಾರದಲ್ಲಿ ತೊಡಗಿದ್ದು, ತಮ್ಮ ವಾಹನಗಳನ್ನು ನಿಲ್ಲಿಸಲು ಯಡ್ತರೆ ಗ್ರಾಮದಲ್ಲಿ ಸೂಕ್ತ ಜಾಗವನ್ನು ಹುಡುಕುತ್ತಿದ್ದ ವೇಳೆ ದೊಡ್ಡಪ್ಪನ ಮಗನಾದ ಶಂಕರ (2ನೇ ಆರೋಪಿ) ಜಮೀನು ಒಡಮಾಡಿಕೊಡುವುದಾಗಿ ಭರವಸೆ ನೀಡಿ, ರೊಕಿ ಡಯಾಸ್ (1ನೇ ಆರೋಪಿ) ಎಂಬಾತನನ್ನು ಪರಿಚಯಿಸಿದ್ದಾನೆ. ರೊಕಿ ಡಯಾಸ್, ಯಡ್ತರೆ ಗ್ರಾಮದ ಸರ್ವೆ ನಂಬರ್ 30/3 A1 ರಲ್ಲಿ 0.40 ಎಕ್ರೆ, 30/3A2 ರಲ್ಲಿ 0.14 ಎಕ್ರೆ ಮತ್ತು 30/9 ರಲ್ಲಿ 0.26 ಎಕ್ರೆ ಜಮೀನನ್ನು ತೋರಿಸಿ, ಸೆಂಟ್‌ಗೆ 3.5 ಲಕ್ಷ ರೂ. ದರದಂತೆ ಒಟ್ಟು 2.66 ಕೋಟಿ ರೂ.ಗೆ ಕರಾರು ಪತ್ರ ಮಾಡಿಕೊಂಡಿದ್ದಾನೆ.

    ಸುಭಾಶ ಅವರು 1.80 ಕೋಟಿ ರೂ. ಬ್ಯಾಂಕ್ ಖಾತೆ ಮೂಲಕ ಮತ್ತು 1 ಲಕ್ಷ ರೂ. ನಗದಾಗಿ ಆರೋಪಿಗೆ ಪಾವತಿಸಿದ್ದು, ಉಳಿದ ಮೊತ್ತವನ್ನು ಕ್ರಯಪತ್ರದ ವೇಳೆ ನೀಡಲು ಒಪ್ಪಿಗೆ ಮಾಡಿಕೊಂಡಿದ್ದರು. ಆದರೆ, 15 ದಿನಗಳ ಬಳಿಕ ಶಂಕರ, ಜಮೀನಿನ ದಾಖಲೆಗಳಲ್ಲಿ ದೋಷಗಳಿರುವುದಾಗಿ ತಿಳಿಸಿ, ಅವುಗಳನ್ನು ಸರಿಪಡಿಸಿ ಕ್ರಯಪತ್ರ ಮಾಡಿಕೊಡುವುದಾಗಿ ಭರವಸೆ ನೀಡಿದ್ದಾನೆ.

    ದಾಖಲೆ ಪರಿಶೀಲನೆಯಲ್ಲಿ 0.14 ಎಕ್ರೆ ಮತ್ತು 0.26 ಎಕ್ರೆ ಜಮೀನು ಪ್ರಾನ್ಸಿಸ್ ಪೀಟರ್ ರೆಬೆಲ್ಲೋ ಹೆಸರಿನಲ್ಲಿರುವುದು ಕಂಡುಬಂದಿದೆ. ಈ ಬಗ್ಗೆ ವಿಚಾರಿಸಿದಾಗ, ಆರೋಪಿಗಳು ಜಮೀನನ್ನು 1ನೇ ಆರೋಪಿಯ ಹೆಸರಿಗೆ ನೊಂದಣಿ ಮಾಡಿ ಕ್ರಯಪತ್ರ ನೀಡುವುದಾಗಿ ನಂಬಿಸಿದ್ದಾರೆ. ಆದರೆ, ನಂತರ ಕರಾರು ಪತ್ರವನ್ನು ರದ್ದುಗೊಳಿಸಿ ಸುಭಾಶ ಅವರಿಗೆ ನೋಟೀಸ್ ನೀಡಿದ್ದಾರೆ.

    ಮತ್ತೊಮ್ಮೆ ದಾಖಲೆಗಳನ್ನು ಸರಿಪಡಿಸಿ ಕ್ರಯಪತ್ರ ಮಾಡಿಕೊಡುವುದಾಗಿ ಆರೋಪಿಗಳು ಭರವಸೆ ನೀಡಿದರೂ, ಜಮೀನಿನ ಸರ್ವೆ ನಂಬರ್ 30/3 A1 ರಲ್ಲಿ ಬೈಂದೂರು ಸಾಗರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಿಂದ 1 ಕೋಟಿ ರೂ. ಸಾಲ ಪಡೆದಿರುವುದು ಬೆಳಕಿಗೆ ಬಂದಿದೆ. ಜೂನ್ 7, 2025 ರಂದು ಈ ಬಗ್ಗೆ ವಿಚಾರಿಸಿದಾಗ, ಆರೋಪಿಗಳು ಸುಭಾಶ ಅವರಿಗೆ ಬೆದರಿಕೆ ಹಾಕಿ, ವಂಚಿಸಿರುವುದಾಗಿ ದೂರು ದಾಖಲಾಗಿದೆ.

    ಈ ಸಂಬಂಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 118/2025ರಡಿ ಕಲಂ 316(2), 318(2),

  • ಬೈಂದೂರಿನಲ್ಲಿ ಕೋಳಿ ಅಂಕಕ್ಕೆ ಪೊಲೀಸ್ ದಾಳಿ: 5 ವಶಕ್ಕೆ, ಕೋಳಿಗಳು ಮತ್ತು ಹಣ ಜಪ್ತಿ

    ಬೈಂದೂರು, ಜೂನ್ 07, 2025: ಬಿಜೂರು ಗ್ರಾಮದ ಬಲವಾಡಿ ನವೋದಯ ಕಾಲೋನಿ ಸಮೀಪದ ಸರಕಾರಿ ಹಾದಿಯ ಸಾರ್ವಜನಿಕ ಸ್ಥಳದಲ್ಲಿ ಕೋಳಿ ಅಂಕ ನಡೆಸುತ್ತಿದ್ದ ಆರೋಪದಡಿ ಬೈಂದೂರು ಪೊಲೀಸರು ದಾಳಿ ನಡೆಸಿ, ಐವರನ್ನು ವಶಕ್ಕೆ ಪಡೆದಿದ್ದಾರೆ.

    ದಿನಾಂಕ 06-06-2025ರಂದು ಮಧ್ಯಾಹ್ನ 4:45 ಗಂಟೆಗೆ, ಬೈಂದೂರು ಪೊಲೀಸ್ ಠಾಣೆಯ ಪಿಎಸ್‌ಐ ತಿಮ್ಮೇಶ್ ಬಿ.ಎನ್. ರವರಿಗೆ ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ಮಾಹಿತಿ ದೊರೆತು, ಸಿಬ್ಬಂದಿ ಮತ್ತು ಪಂಚರೊಂದಿಗೆ ದಾಳಿ ನಡೆಸಿದಾಗ, ಜಯದೀಪ (29, ಕಿರಿಮಂಜೇಶ್ವರ), ಮಧುಕರ (34, ಬಿಜೂರು), ಹೆರಿಯಣ್ಣ (42, ಬಿಜೂರು), ರಾಘವೇಂದ್ರ ದಾಸ್ (30, ಕಾಲ್ತೋಡು), ಕೃಷ್ಣದಾಸ್ (ಉಪ್ಪುಂದ), ಚಂದ್ರ (ಮರವಂತೆ), ಅಶೋಕ (ಉಪ್ಪುಂದ), ರಾಘವೇಂದ್ರ (ಹರಿಕೆರೆ), ಮಹೇಶ್ (ಬಿಜೂರು), ಮತ್ತು ಪಾಂಡುರಂಗ ನದಿಕಂಠ (ಉಪ್ಪುಂದ) ಈ ಕೃತ್ಯದಲ್ಲಿ ಭಾಗಿಯಾಗಿದ್ದರು. ಇವರ ಪೈಕಿ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ದಾಳಿಯ ವೇಳೆ, 5 ಕೋಳಿ ಹುಂಜಗಳು, ಕೋಳಿ ಅಂಕಕ್ಕೆ ಪಣವಾಗಿಟ್ಟ 1,490 ರೂಪಾಯಿ, ಎರಡು ಹರಿತವಾದ ಕೋಳಿ ಬಾಳುಗಳು ಮತ್ತು ಎರಡು ದಾರಗಳನ್ನು ಮಹಜರು ಮೂಲಕ ಸ್ವಾಧೀನಪಡಿಸಿಕೊಳ್ಳಲಾಗಿದೆ.

    ಈ ಸಂಬಂಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಕಲಂ 11(1)A, ಪ್ರಾಣಿ ಹಿಂಸೆ ನಿಷೇಧ ಕಾಯಿದೆ ಹಾಗೂ ಕರ್ನಾಟಕ ಪೊಲೀಸ್ ಕಾಯಿದೆಯ ಕಲಂ 87 ಮತ್ತು 93ರ ಅಡಿಯಲ್ಲಿ

  • ಬೈಂದೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ: ಲಾರಿ ಮತ್ತು ಕಾರು ವಶ

    ಬೈಂದೂರು: ದಿನಾಂಕ 05.06.2025 ರಂದು ಬೈಂದೂರು ಠಾಣೆಯ ಪಿಎಸ್‌ಐ ತಿಮ್ಮೇಶ್‌ ಮತ್ತು ಸಿಬ್ಬಂದಿಗಳು ರಾತ್ರಿ ರೌಂಡ್ಸ್‌ ಕರ್ತವ್ಯದಲ್ಲಿದ್ದಾಗ, ಬೆಳಗ್ಗೆ 3:30 ಗಂಟೆ ಸುಮಾರಿಗೆ ಕೊಲ್ಲೂರಿನಿಂದ ಅಕ್ರಮವಾಗಿ ಜಾನುವಾರುಗಳನ್ನು ತುಂಬಿಕೊಂಡ ಇಚರ್‌ ಲಾರಿಯೊಂದಿಗೆ ಕಾರೊಂದು ಬೈಂದೂರು ಕಡೆಗೆ ಬರುತ್ತಿರುವ ಬಗ್ಗೆ ಮಾಹಿತಿ ದೊರೆಯಿತು. ಯಡ್ತರೆ ಜಂಕ್ಷನ್‌ನಲ್ಲಿ ವಾಹನ ತಪಾಸಣೆ ನಡೆಸುವ ವೇಳೆ, ಅತಿವೇಗದಲ್ಲಿ ಬಂದ ಲಾರಿ ಮತ್ತು ಕಾರು ನಿಲ್ಲಿಸಲು ಸೂಚಿಸಿದರೂ ಪರಾರಿಯಾದವು.

    ಪೊಲೀಸರು ಲಾರಿಯನ್ನು ಮತ್ತು ಕಾರನ್ನು ಬೆನ್ನಟ್ಟಿ, 9 ಗಂಡು ಎತ್ತುಗಳು ಮತ್ತು 2 ಹೋರಿಗಳನ್ನು ಅಕ್ರಮವಾಗಿ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ಲಾರಿಯನ್ನು ಹಾಗೂ ಅದನ್ನು ಹಿಂಬಾಲಿಸುತ್ತಿದ್ದ ಕಾರನ್ನು ವಶಪಡಿಸಿಕೊಂಡರು. ಈ ಸಂಬಂಧ ಬೈಂದೂರು ಪೊಲೀಸ್‌ ಠಾಣೆಯಲ್ಲಿ ಅಪರಾಧ ಕ್ರಮಾಂಕ 116/2025ರಂತೆ ಕರ್ನಾಟಕ ಗೋವು ವಧೆ ನಿಷೇಧ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ 2020, ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ 1960 ಮತ್ತು IMV ಕಾಯ್ದೆಯ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ.

  • ಬೈಂದೂರು: ಬಕ್ರೀದ್ ಹಬ್ಬ ಪ್ತಯುಕ್ತ ಶಾಂತಿ ಸಭೆ

    ಬೈಂದೂರು, ಜೂ.02,2025: ಮುಂಬರುವ ಬಕ್ರೀದ್ ಹಬ್ಬದ ಪ್ರಯುಕ್ತ ಬೈಂದೂರು ಪೊಲೀಸ್ ಠಾಣೆಯಲ್ಲಿ ದಿನಾಂಕ 02/06/2025ರಂದು ಧಾರ್ಮಿಕ ಮುಖಂಡರೊಂದಿಗೆ ಶಾಂತಿ ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯಲ್ಲಿ ಬಕ್ರೀದ್ ಹಬ್ಬವನ್ನು ಸಾಮರಸ್ಯ ಮತ್ತು ಸೌಹಾರ್ದತೆಯಿಂದ ಆಚರಿಸುವಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ದಕ್ಕೆ ಬಾರದಂತೆ ಕ್ರಮ ಕೈಗೊಳ್ಳುವಂತೆ ಧಾರ್ಮಿಕ ಮುಖಂಡರಿಗೆ ಸೂಕ್ತ ಸಲಹೆ-ಸೂಚನೆಗಳನ್ನು ನೀಡಲಾಯಿತು.

    ಸ್ಥಳೀಯ ಧಾರ್ಮಿಕ ಮುಖಂಡರು ಈ ಕಾರ್ಯಕ್ರಮವನ್ನು ಸ್ವಾಗತಿಸಿದ್ದು, ಶಾಂತಿಯುತವಾಗಿ ಹಬ್ಬವನ್ನು ಆಚರಿಸಲು ಸಹಕರಿಸುವ ಭರವಸೆ ನೀಡಿದ್ದಾರೆ.

  • ಅಂದರ್ ಬಾಹರ್: ಪೊಲೀಸ್ ದಾಳಿ; ಮೂವರು ಅಂದರ್ 6 ಜನ ಪರಾರಿ

    ಭಟ್ಕಳ 31 ಮೇ 2025: ಅರಣ್ಯ ಪ್ರದೇಶದಲ್ಲಿ ಇಸ್ಪೀಟ್ ಜುಗಾರಾಟ ಅಂದರ್-ಬಾಹರ್ ಆಡುತ್ತಿದ್ದ ವೇಳೆ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ದಾಳಿ ನಡೆಸಿ 9 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ದಾಳಿ ವೇಳೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

    ಬೈಂದೂರು ತಾಲೂಕಿನ ಉಪ್ಪುಂದ ನಿವಾಸಿ ಗೋಪಾಲ ಲಕ್ಷ್ಮಣ ಖಾರ್ವಿ (೪೨), ಭಟ್ಕಳ ತಾಲೂಕಿನ ಉತ್ತರಕೊಪ್ಪದ ನಾಗರಾಜ ನಾರಾಯಣ ನಾಯ್ಕ (೩೪), ಸಿದ್ದಾಪುರ ತಾಲೂಕಿನ ಜಬ್ದಾರ ಅಬ್ದುಲ್ ಖಾದರ ಸಾಬ್ (೩೩) ಬಂಧಿತರು. ಇನ್ನುಳಿದ ಆರೋಪಿಗಳಾದ ಮುರುಡೇಶ್ವರದ ಜಯಂತ ನಾರಾಯಣ ನಾಯ್ಕ, ಇರ್ಫಾನ್, ಶಿರಾಲಿ ಕೋಟೆಬಾಗಿಲು ನಿವಾಸಿಗಳಾದ ಬಾಬು ಅಣ್ಣಪ್ಪ ನಾಯ್ಕ, ದತ್ತಾ ಮಾದೇವ ನಾಯ್ಕ, ಉತ್ತರಕೊಪ್ಪದ ಕುಮಾರ ಗೌಡ, ಬೈಂದೂರಿನ ರಾಜೇಶ ಮತ್ತಿತರರು ನಾಪತ್ತೆಯಾಗಿದ್ದಾರೆ.

    ಭಟ್ಕಳ ತಾಲೂಕಿನ ನೂಜ್ ಗ್ರಾಮದ ಅರಣ್ಯ ಪ್ರದೇಶ ಬಳಿ ಮೇ ೩೧ರಂದು ಅಂದರ್-ಬಾಹರ್ ಜೂಗಾರಾಟ ಆಡುತ್ತಿದ್ದಾಗ ದಾಳಿ ನಡೆದಿತ್ತು. ದಾಳಿ ವೇಳೆ ೯೭೦೦ ರೂ. ನಗದು, ೪ ಮೊಬೈಲ್ ಸೇರಿದಂತೆ ಇನ್ನೂ ಉಳಿದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಪಿ.ಎಸ್.ಐ. ಭರಮಪ್ಪ ಬೆಳಗಲಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.