Category: Kundapura

  • ಧರ್ಮಗಳ ಅಂತರ ತೊರೆದು ಸೌಹಾರ್ದತೆ ಸ್ಥಾಪಿಸುವುದು ಅಗತ್ಯ: ಶ್ರೀ ವಸಂತನಾಥ ಗುರೂಜಿ

    ಕುಂದಾಪುರ: ಭಾರತದಲ್ಲಿ ಹುಟ್ಟಿದ ಪ್ರತಿಯೊಬ್ಬರೂ ನಾನು ಭಾರತೀಯ ಎನ್ನುವ ಧ್ಯೇಯವನ್ನು ಅರ್ಥ ಮಾಡಿಕೊಳ್ಳಬೇಕು. ಎಲ್ಲಾ ಧರ್ಮಗಳೂ ಒಂದೇ ಎಂಬ ಸೌಹಾರ್ದತೆಯನ್ನು ಸಾರುವ ನಿಟ್ಟಿನಲ್ಲಿ ನಾವೆಲ್ಲ ಕೈಜೋಡಿಸಬೇಕಾಗಿದೆ. ಜಾತಿ, ಮತ, ಪಂಥಗಳ ಅಂತರಗಳನ್ನು ತೊರೆದು ಸೌಹಾರ್ದತೆಯೊಂದಿಗೆ ಸಾಗಬೇಕು ಎಂದು ಹಲಗೇರಿ ಜೋಗಿ ಮನೆಯ ಶ್ರೀ ವಸಂತನಾಥ ಗುರೂಜಿ ಹೇಳಿದ್ದಾರೆ.

    ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘವು ಕರಾವಳಿ ಕರ್ನಾಟಕದಲ್ಲಿ ಕೋಮು ಸೌಹಾರ್ದವನ್ನು ಬಲಪಡಿಸುವ ಉದ್ದೇಶದಿಂದ ಹೃದಯ ಹೃದಯಗಳನ್ನು ಬೆಸೆಯೋಣ ಎಂಬ ಧೈಯವಾಕ್ಯದೊಂದಿಗೆ ಹಮ್ಮಿಕೊಳ್ಳಲಾದ ’ಸೌಹಾರ್ದ ಸಂಚಾರ’ವನ್ನು ಸೋಮವಾರ ಕುಂದಾಪುರದಲ್ಲಿ ಉದ್ಘಾಟಿಸಿ ಅವರು ಮಾತನಾಡುತಿದ್ದರು.

    ಸೌಹಾರ್ದ ಸಂಚಾರಕ್ಕೆ ಚಾಲನೆ ನೀಡಿದ ಕರ್ನಾಟಕ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷ ಮೌಲಾನಾ ಶಾಫಿ ಸಅದಿ ಮಾತನಾಡಿ, ಪವಿತ್ರ ಕುರಾನ್ ಹಿಂಸೆಯನ್ನು ಆರಾಧಿಸುವುದಿಲ್ಲ. ಪೈಗಂಬರ್ ಜೀವನ ಚರಿತ್ರೆ ಯನ್ನು ಸರಿಯಾಗಿ ಅಧ್ಯಯನ ಮಾಡಿದ ಯಾವ ವ್ಯಕ್ತಿಯೂ ಧರ್ಮದ್ವೇಷ ಮಾಡಲು ಸಾಧ್ಯವಿಲ್ಲ. ಜಗತ್ತಿನ ಯಾವ ಧರ್ಮವೂ ಇನ್ನೊಂದು ಧರ್ಮವನ್ನು ಪ್ರೀತಿಸು ಎನ್ನುತ್ತದೆಯೇ ಹೊರತು ದ್ವೇಷಿಸಲು ಉಪದೇಶಿ ಸುವುದಿಲ್ಲ. ಎಲ್ಲಾ ಧರ್ಮದ ಸಾರ ಶಾಂತಿ ಸಾರುವುದೇ ಆಗಿದೆ ಎಂದು ಹೇಳಿದರು.

    “ಪ್ರಸ್ತುತ ಕಾಲಘಟ್ಟದಲ್ಲಿ ಸೌಹಾರ್ದ ಸಂಚಾರ ಆರಂಭಿಸುವ ಸ್ಥಿತಿಗೆ ತಲುಪಿದ್ದು ಈ ಬಗ್ಗೆ ಗಂಭೀರವಾಗಿ ಚಿಂತನೆ ನಡೆಯಬೇಕು. ಕುಂದಾಪುರ ತಾಲೂಕಿನ ಮಂದಿ ನೂರಾರು ವರ್ಷಗಳಿಂದ ಸೌಹಾದರ್ಯುತ ಜೀವನ ನಡೆಸುತ್ತಿದ್ದಾರೆ. ಎಲ್ಲಾ ಧರ್ಮದ ಹಬ್ಬ, ಹರಿದಿನಗಳಲ್ಲಿ, ಆಚರಣೆಗಳಲ್ಲಿ ಜನರು ಪರಸ್ಪರ ಬೆರೆ ಯುತ್ತಿದ್ದಾರೆ. ಕೇವಲ ಸಾಮಾಜಿಕ ಜಾಲತಾಣಗಳಲ್ಲಿ ಬಂದು ನೆಮ್ಮದಿ ಹಾಳಾಗಿದ್ದರೂ ಕೂಡ ನೈಜ್ಯ ಪರಂಪರೆಗೆ ಯಾವುದೇ ಸಮಸ್ಯೆಯಾಗಿಲ್ಲ” – ಶಶಿಧರ್ ಹೆಮ್ಮಾಡಿ, ಪ್ರಗತಿಪರ ಚಿಂತಕ

    ಧರ್ಮಗುರು ರೆ.ಫಾ.ನೋವೆಲ್ ಬ್ರಹ್ಮಾವರ ಮಾತನಾಡಿ, ಕ್ರೈಸ್ತ ಮೆಷಿನರಿಗಳು ಕರಾವಳಿಯಲ್ಲಿ ಇಂದಿಗೂ ಯಾವುದೇ ಧರ್ಮ ಬೇದ ಮಾಡದೇ ಸಾಮಾಜಿಕ ಸೇವೆ ನೀಡುತ್ತಿದೆ. ಫಾದರ್ ಮುಲ್ಲರ್ ಆಸ್ಪತ್ರೆ, ಬಾಸೆಲ್ ಮಿಷನ್ ಹೆಂಚಿನ ಕಾರ್ಖಾನೆಗಳು, ಶಿಕ್ಷಣ ಸಂಸ್ಥೆಗಳು ಇಂದಿಗೂ ಕೊಡುಗೆಯಾಗಿ ಉಳಿದಿಲ್ಲ, ಅವು ಸಹೋದರತೆ, ನಂಬಿಕೆ, ವಿಶ್ವಾಸಗಳನ್ನು ಗಟ್ಟಿಗೊಳಿಸುವಲ್ಲಿ ತಮ್ಮದೇ ಕೊಡುಗೆ ನೀಡುತ್ತಿವೆ. ಯಾವ ರಾಜಕೀಯ ಪಕ್ಷಗಳು, ನಾಯಕರು ನಮ್ಮನ್ನು ಒಂದುಗೂಡಿಸಬೇಕಿತ್ತೋ ಅವೇ ನಮ್ಮನ್ನು ವಿಭಜಿಸಲು ಹುನ್ನಾರ ನಡೆಸುತ್ತಿರುವುದನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕಿದೆ ಎಂದರು.

    ಕಾರ್ಯಕ್ರಮಕ್ಕೆ ಮುನ್ನ ಕುಂದಾಪುರದ ಮುಖ್ಯ ಪೇಟೆಯಲ್ಲಿ ಶಾಂತಿ ಮೆರವಣಿಗೆ ನಡೆಯಿತು. ಮುಖ್ಯ ಅತಿಥಿಯಾಗಿ ಪತ್ರಕರ್ತ ಶಶಿಧರ ಹೆಮ್ಮಾಡಿ ಮಾತನಾಡಿದರು. ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘದ ಅಧ್ಯಕ್ಷ ಬಶೀರ್ ಸಅದಿ ಬೆಂಗಳೂರು ಅಧ್ಯಕ್ಷತೆ ವಹಿಸಿದ್ದರು.

    ಉಳ್ಳಾಲ ದರ್ಗಾ ಸಮಿತಿ ಅಧ್ಯಕ್ಷ ಹನೀಫ್ ಹಾಜಿ, ಸಹಬಾಳ್ವೆ ಕುಂದಾಪುರದ ರಾಮಕೃಷ್ಣ ಹೇರ್ಳೆ, ಸಿಪಿಐಎಂ ಪಕ್ಷದ ಮುಖಂಡರಾದ ಚಂದ್ರಶೇಖರ ದೇವಾಡಿಗ, ಮಹಾಬಲ, ಕುಂದಾಪುರ ಕ್ಯಾಥೋಲಿಕ್ ಸಭಾ ಅಧ್ಯಕ್ಷ ವಿಲ್ಸನ್ ಡಿ ಅಲ್ಮೇಡಾ, ನಗರ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ತಾ, ಜಿಲ್ಲಾ ಕಾಂಗ್ರೆಸ್ ವಕ್ತಾರ ವಿಕಾಸ್ ಹೆಗ್ಡೆ, ಕಾಂಗ್ರೆಸ್ ಜಿಲ್ಲಾ ಐಟಿ ಸೆಲ್ ಅಧ್ಯಕ್ಷ ರೋಷನ್ ಶೆಟ್ಟಿ, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ಎಸ್ವೈಎಸ್ ಸಂಘಟನೆಯ ಕುಂದಾಪುರ ತಾಲೂಕು ಉಪಾಧ್ಯಕ್ಷ ಅಬ್ದುಲ್ ಸಲಾಂ ಚಿತ್ತೂರು, ವಕ್ಫ್ ಸಲಹಾ ಸಮಿತಿ ಜಿಲ್ಲಾ ಅಧ್ಯಕ್ಷ ಅಬ್ದುಲ್ ಮುತಾಲಿ ವಂಡ್ಸೆ, ನಾವುಂದ ಜುಮ್ಮಾ ಮಸೀದಿ ಖತೀಬರಾದ ಅಬ್ದುಲ್ ಲತೀಫ್ ಫಾಲೆಲಿ, ಕುಂದಾಪುರ ಜುಮ್ಮಾ ಮಸೀದಿ ಅಧ್ಯಕ್ಷ ವಸೀಂ ಬಾಷಾ, ಸಾಮಾಜಿಕ ಕಾರ್ಯಕರ್ತ ಮನ್ಸೂರ್ ಮರವಂತೆ ಉಪಸ್ಥಿತರಿದ್ದರು.

    ಎಸ್‌ವೈಎಸ್ ರಾಜ್ಯ ಸಮಿತಿಯ ಸದಸ್ಯ ಕೆ.ಎಂ.ಇಲಿಯಾಸ್ ಸ್ವಾಗತಿಸಿದರು. ಎಸ್‌ವೈಎಸ್ ಸಮಿತಿಯ ರಾಜ್ಯಾಧ್ಯಕ್ಷ ಬಶಿರ್ ಸಅದಿ ಬೆಂಗಳೂರು ಪ್ರಾಸ್ತಾವಿಕ ವಾಗಿ ಮಾತನಾಡಿದರು. ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಅಬು ಅಹಮ್ಮದ್ ವಂದಿಸಿದರು.

  • ಜುಲೈ 20ರಂದು ಕುಂದಾಪುರದಲ್ಲಿ “ಲಗೋರಿ” ಗ್ರಾಮೀಣ ಕ್ರೀಡಾಕೂಟ

    ಕುಂದಾಪುರ, ಜುಲೈ 14, 2025: ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯ ಪ್ರಯುಕ್ತ ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ಇದರ ಆಶ್ರಯದಲ್ಲಿ “ಲಗೋರಿ” ಗ್ರಾಮೀಣ ಕ್ರೀಡಾಕೂಟವನ್ನು ಇದೇ ಜುಲೈ 20ರಂದು ಕುಂದಾಪುರ ಬೋರ್ಡ್ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ನ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದರು.

    ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ನಮ್ಮ ಸಂಸ್ಥೆಯು ಕಳೆದ ಎರಡು ವರ್ಷಗಳಿಂದ ಭಾಷೆಯ ಹೆಸರಿನಲ್ಲಿ ಲಗೋರಿ ಎಂಬ ಕ್ರೀಡಾಕೂಟವನ್ನು ಆಯೋಜಿಸುತ್ತಿದೆ. ಇಂದಿನ ಜನಾಂಗ ನೋಡದ ಮತ್ತು‌ ಆಡದ ಆಟಗಳನ್ನು ಪರಿಚಯಿಸುವ ಉದ್ದೇಶದಿಂದ ಈ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 9ಗಂಟೆಯಿಂದ ಸಂಜೆ 7ಗಂಟೆಯವರೆಗೆ ಕ್ರೀಡಾಕೂಟ ನಡೆಯಲಿದೆ ಎಂದರು.

    ಈ ಕ್ರೀಡಾಕೂಟವು ವೈಯಕ್ತಿಕ ಮತ್ತು ಮುಕ್ತ ವಿಭಾಗದಲ್ಲಿ ನಡೆಯಲಿದೆ. ವೈಯಕ್ತಿಕ ವಿಭಾಗದಲ್ಲಿ 12 ವರ್ಷದೊಳಗಿನ ಬಾಲಕ ಬಾಲಕಿಯರಿಗೆ ‘ಗುರಿ ಇಟ್ಟು ಹೊಡೆಯುವುದು, ಚಕ್ರವ್ಯೂಹ, ಗೋಣಿ ಚೀಲ ಓಟ, ಸೈಕಲ್ ಟಯರ್ ಓಟ, ನಿಮ್ಮ ಕಾಲ್ಗುಣ’ ಸ್ಪರ್ಧೆಗಳು ನಡೆಯಲಿವೆ.

    17 ವರ್ಷದೊಳಗಿನ ಬಾಲಕ ಬಾಲಕಿಯರಿಗೆ ‘ಉಪ್ಪು ಮುಡಿ, ಗೋಣಿ ಚೀಲ ಓಟ, ಗೂಟ ಸುತ್ತಿ ಓಟ, ಸೈಕಲ್ ಟಯರ್ ಓಟ ಮತ್ತು ಕಂಬಳ’ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಮುಕ್ತ ವಿಭಾಗದಲ್ಲಿ 65 ವರ್ಷದೊಳಗಿನ ಮಹಿಳೆಯರು ಹಾಗೂ ಪುರುಷರಿಗೆ ಗೋಣಿಚೀಲ ಓಟ, ಕಂಬಳ, ಸೈಕಲ್ ಟಯರ್ ಓಟ, ಗೂಟ ಸುತ್ತಿ ಓಟ, ಉಪ್ಪು ಮುಡಿ ಹಾಗೂ ಕಣ್ಣು ಕಟ್ಟಿ ಮಡಿಕೆ ಒಡೆಯುವ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

    ಗುಂಪು ಆಟಗಳು ಮುಕ್ತ ವಿಭಾಗದಲ್ಲಿ ನಡೆಯಲಿದೆ. ಪುರುಷರಿಗೆ ಲಗೋರಿ, ಚೆಂಡಾನ್ ಚೆಂಡು, ಹಗ್ಗ ಜಗ್ಗಾಟ (9ಜನರ ತಂಡ) ಆಯೋಜಿಸಿದ್ದು, ಪ್ರಥಮ 12 ಸಾವಿರ ನಗದು ಬಹುಮಾನ ಹಾಗೂ ಟ್ರೋಫಿ, ದ್ವಿತೀಯ 8ಸಾವಿರ ನಗದು ಮತ್ತು ಟ್ರೋಫಿ ನೀಡಲಾಗುವುದು. ಮಹಿಳೆಯರಿಗೆ ಬೆನ್ಚೆಂಡು, ಡೊಂಕಾಲು, ಥ್ರೋ ಬಾಲ್ ಸ್ಪರ್ಧೆ ಆಯೋಜಿಸಿದ್ದು, ಪ್ರಥಮ 5 ಸಾವಿರ ನಗದು ಮತ್ತು ಟ್ರೋಫಿ, ದ್ವಿತೀಯ 3 ಸಾವಿರ ನಗದು ಮತ್ತು ಟ್ರೋಫಿ ನೀಡಲಾಗುವುದು.

    ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ವಿಜೇತರಿಗೆ ಪ್ರಥಮ 8 ಸಾವಿರ ನಗದು ಮತ್ತು ಟ್ರೋಫಿ, ದ್ವಿತೀಯ 5 ಸಾವಿರ ನಗದು ಮತ್ತು ಟ್ರೋಫಿ ನೀಡಲಾಗುವುದು. ಎಲ್ಲ ಕ್ರೀಡೆಗಳಿಗೂ ಮುಕ್ತ ಪ್ರವೇಶ ಇರಲಿದ್ದು, ಯಾವುದೇ ಪ್ರವೇಶ ಶುಲ್ಕ ಇಲ್ಲ. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 98447 83053 ಸಂಪರ್ಕಿಸಬಹುದು ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಟ್ರಸ್ಟಿಗಳಾದ ರಾಜೇಶ್ ಕಾವೇರಿ, ಶ್ರೀಧರ್ ಸುವರ್ಣ, ರಾಮಚಂದ್ರ, ಕೆ.ಆರ್. ನಾಯಕ್ ಇದ್ದರು.

  • ಕುಂದಾಪುರ: ‘ಶಕ್ತಿ’ ಯೋಜನೆಯಡಿ 500 ಕೋಟಿ ಉಚಿತ ಪ್ರಯಾಣ; ಆಚರಣೆ

    ಕುಂದಾಪುರ, ಜುಲೈ 14, 2025: ಜಾಗತಿಕ ಮಟ್ಟದಲ್ಲಿ ಮೊತ್ತ ಮೊದಲಬಾರಿಗೆ ಕರ್ನಾಟಕದಲ್ಲಿ ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿದ್ದು, ಫಲಾನುಭವಿಗಳ ಸಂಖ್ಯೆ 500 ಕೋಟಿ ದಾಟಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕುಂದಾಪುರದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ ಮಾಡಿದ್ದಾರೆ.

    ಈ ಸಂದರ್ಭ ಕಾಂಗ್ರೆಸ್ ಮುಖಂಡ, ಜಿಲ್ಲಾ ಗ್ಯಾರಂಟಿ ಸಮಿತಿ ಉಪಾಧ್ಯಕ್ಷ ಮೊಳಹಳ್ಳಿ ದಿನೇಶ್ ಹೆಗ್ಡೆ ಮಾತನಾಡಿ, ರಾಜ್ಯ ಸರ್ಕಾರವು ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ನೀಡುವ ಮೂಲಕ ಮಹಿಳಾ ಸಬಲೀಕರಣಕ್ಕೆ ಮುನ್ನುಡಿ ಬರೆದಿದೆ. ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಸರಕಾರ ಕರ್ನಾಟಕದಲ್ಲಿ ಯಶಸ್ವಿಯಾಗಿ ಪಂಚ ಗ್ಯಾರಂಟಿಗಳನ್ನು ಅನುಷ್ಠಾನ ಮಾಡಿದ್ದು, ಯಾವುದೇ ಕಾರಣಕ್ಕೆ ಈ ಯೋಜನೆಗಳು ನಿಲ್ಲುವುದಿಲ್ಲ ಎಂದರು.

    ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್ ಮಾತನಾಡಿ, ಸರಕಾರದ ಗ್ಯಾರಂಟಿ ಯೋಜನೆಗಳ ಮೂಲಕವಾಗಿ ಮಹಿಳೆಯು ಹಣಕ್ಕಾಗಿ ಪತಿ, ತಂದೆ, ಮಕ್ಕಳನ್ನು ಆಶ್ರಯಿಸಬೇಕಾದ ಅನಿವಾರ್ಯವನ್ನು ತಪ್ಪಿಸಿದೆ. ಮಹಿಳೆಯರು ಸಬಲೀಕರಣಗೊಳ್ಳಲು ಸರಕಾರದ ಈ ನಡೆ ಅನುಕರಣೀಯ ಎಂದರು.

    ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಮಾತನಾಡಿ, ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿತ್ತು. ಅಂತಹ ಮಹತ್ವಾಕಾಂಕ್ಷೆಯ ಯೋಜನೆ, ಈಡೇರಿದ ಆಶ್ವಾಸನೆಯಿಂದಾಗಿ ಅಪಪ್ರಚಾರಕ್ಕೆ ಸಡ್ಡು ಹೊಡೆದು ಜನಸಾಮಾನ್ಯರಿಗೆ ಸಹಾಯ ಆಗಿದೆ. ಶಕ್ತಿ ಯೋಜನೆ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸಿದೆ ಎಂದು ಹೇಳಿದರು.

    ಉಡುಪಿಯಿಂದ ಕೆ.ಎಸ್.ಆರ್.ಟಿ.ಸಿ ಬಸ್ ಮೂಲಕವಾಗಿ ಕೊಲ್ಲೂರಿಗೆ ಪ್ರಯಾಣಿಸುತ್ತಿದ್ದ ಕಾರ್ಯಕರ್ತರನ್ನು ಕುಂದಾಪುರದಲ್ಲಿ ಬರಮಾಡಿಕೊಂಡು ಹೂ ನೀಡಿ ಸಿಹಿ ತಿಂಡಿ ವಿತರಿಸಿ ಸಂಭ್ರಮಿಸಲಾಯಿತು. ಕೆಎಸ್ಆರ್ಟಿಸಿ ಡಿಪೊ ಮೆನೆಜರ್ ಉದಯ ಕುಮಾರ್ ಶೆಟ್ಟಿ, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ದೇವಕಿ ಸಣ್ಣಯ್ಯ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ಟೊ, ಜಿಲ್ಲಾ ಗ್ಯಾರಂಟಿ ಸಮಿತಿ ಉಪಾಧ್ಯಕ್ಷೆ ಗೀತಾ ವಾಗ್ಳೆ, ಗ್ಯಾರಂಟಿ ಸಮಿತಿಯ ಸದಸ್ಯರಾದ ಅಭಿಜಿತ್ ಪೂಜಾರಿ, ವಾಣಿ ಶೆಟ್ಟಿ, ಆಶಾ ಕರ್ವಾಲೊ, ನಾರಾಯಣ ಆಚಾರ್ ಕೋಣಿ, ಜಹೀರ್ ಅಹ್ಮದ್ ಗಂಗೊಳ್ಳಿ, ಪ್ರಾಧಿಕಾರದ ಸದಸ್ಯ ಚಂದ್ರ ಅಮೀನ್, ಕೆಡಿಪಿ ಸದಸ್ಯ ರಮೇಶ್ ಶೆಟ್ಟಿ ವಕ್ವಾಡಿ, ಕಾಂಗ್ರೆಸ್ ಮುಖಂಡರಾದ ವಿಕಾಸ್ ಹೆಗ್ಡೆ, ಸರಸು ಬಂಗೇರ, ಶೋಭಾ ಪುತ್ರನ್, ಜಾನಕಿ ಬಿಲ್ಲವ ಕೋಟೇಶ್ವರ, ರೋಶನ್ ಕುಮಾರ್ ಶೆಟ್ಟಿ, ಅಶೋಕ್ ಸುವರ್ಣ ಮೊದಲಾದವರು ಇದ್ದರು.

  • ನಮ್ಮ ನಾಡ ಒಕ್ಕೂಟ ಉಡುಪಿ ಜಿಲ್ಲೆಯ ವತಿಯಿಂದ ಶೌಚಾಲಯಕ್ಕೆ ಧನಸಹಾಯ

    ಕುಂದಾಪುರ, ಜುಲೈ 14, 2025: ನಮ್ಮ ನಾಡ ಒಕ್ಕೂಟ (ರಿ) ಉಡುಪಿ ಜಿಲ್ಲೆಯ ವತಿಯಿಂದ ಕುಂದಾಪುರದ ನಿವಾಸಿಗೆ ಅಗತ್ಯವಿರುವ ಶೌಚಾಲಯಕ್ಕೆ ಬೇಕಾಗಿರುವ ರೂ. 50,000/- ಧನಸಹಾಯವನ್ನು ಕುಂದಾಪುರದ ಅಬು ಮೊಹಮ್ಮದ್ ರವರು ದಾನಿಗಳಿಂದ ಸ್ವೀಕರಿಸಿದ ರೂ.40,000/- ಹಾಗೂ ನಮ್ಮ ನಾಡ ಒಕ್ಕೂಟ ಉಡುಪಿ ಜಿಲ್ಲೆಯ ವತಿಯಿಂದ ರೂ.10,000/- ನಗದನ್ನು ಹಸ್ತಾಂತರಿಸಲಾಯಿತು.

    ಈ ಸಂದರ್ಭದಲ್ಲಿ ನಮ್ಮ ನಾಡ ಒಕ್ಕೂಟ (ರಿ) ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಝಹೀರ್ ನಾಖುದಾ ಗಂಗೊಳ್ಳಿ ಹಾಗೂ ಉಪಾಧ್ಯಕ್ಷರಾದ ಅಬು ಮೊಹಮ್ಮದ್ ಕುಂದಾಪುರ ಉಪಸ್ಥಿತರಿದ್ದರು.

  • ಬೀಜಾಡಿ: ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

    ಕುಂದಾಪುರ: ಬ್ಲಾಕ್ ಕಾಂಗ್ರೆಸ್ ಸಮಿತಿ ಕುಂದಾಪುರ ವತಿಯಿಂದ ಬೀಜಾಡಿ ಗ್ರಾಮ ಪಂಚಾಯತ್ ಮುಂದೆ ಬಿಜೆಪಿಯ ವಿರುದ್ಧ ಸತ್ಯದರ್ಶನ ಪ್ರತಿಭಟನೆ ನಡೆಯಿತು.

    ಪ್ರತಿಭಟನಾ ಸಭೆಯಲ್ಲಿ ಪಿ‌ಎಲ್ ಡಿ ಬ್ಯಾಂಕಿನ ಅಧ್ಯಕ್ಷರಾದ ಶಿವರಾಮ ಶೆಟ್ಟಿ, ಪಕ್ಷದ ನಾಯಕರಾದ ಅಶೋಕ್ ಪೂಜಾರಿ ಬೀಜಾಡಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ವಿನೋದ್ ಕ್ರಾಸ್ಟೊ, ಹಿರಿಯರಾದ ಬಿ ಹಿರಿಯಣ್ಣ, ತಾಲೂಕು ಕೆ.ಡಿ.ಪಿ ಸದಸ್ಯರಾದ ರಮೇಶ್ ಶೆಟ್ಟಿ, ಪಂಚಾಯತ್ ಸದಸ್ಯರಾದ ಶೇಖರ ಚಾತ್ರಬೆಟ್ಟು, ಜೆಸಿಂತಾ ಡಿಮೆಲ್ಲೊ, ಗುಲಾಬಿಯಮ್ಮ, ಅನಿಲ್, ಆನಂದ ಬಂಗೇರ, ಅಲ್ಪಸಂಖ್ಯಾತ ಘಟಕದ ಬ್ಲಾಕ್ ಅಧ್ಯಕ್ಷ ಮುನಾಫ್ ಕೋಡಿ, ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ನೌಫಲ್, ಕಾರ್ಯದರ್ಶಿ ಪೈಸಲ್, ಅನಿಶ್, ರೇಣುಕಾ, ಸುರೇಶ್, ಶಂಕರ್ ಚಾತ್ರಬೆಟ್ಟು ಅಶೋಕ್ ಪೂಜಾರಿ ಚಾತ್ರಬೆಟ್ಟು , ಪ್ರಕಾಶ್, ಮಹೇಶ್ ಕುಂದರ್, ಉದಯ, ಉಷಾ, ನಾಗರತ್ನ, ಭಾರತಿ, ಶಾರದಾ , ರಮೇಶ್ ಕುಂದರ್, ನಾರಾಯಣ ಗಾಣಿಗ, ಮುತ್ತಾ, ಬಸವ , ನಾರಾಯಣ ಮೊಗವೀರ ಇನ್ನಿತರ ಉಪಸ್ಥಿತರಿದ್ದರು.

  • ಕುಂದಾಪುರ: ಹೋಟೆಲ್‌ನಲ್ಲಿ ಓರ್ವ ವ್ಯಕ್ತಿಗೆ ಹಲ್ಲೆ , ಪ್ರಕರಣ ದಾಖಲು

    ಕುಂದಾಪುರ: ಹೊಟೇಲ್‌ ವೊಂದರಲ್ಲಿ ಸಿಗರೇಟ್ ಗಾಗಿ ರಂಪಾಟ ನಡೆಸುತ್ತಿದ್ದಾಗ ಓರ್ವ ವ್ಯಕ್ತಿ ನೋಡಿದ ಎಂಬ ಕಾರಣಕ್ಕೆ ಗಾಜಿನ ಬಾಟಲಿಯಿಂದ ಹಲ್ಲೆ ನಡೆಸಿದ ಘಟನೆ ಇಲ್ಲಿನ ಹಟ್ಟಿಯಂಗಡಿಯಲ್ಲಿ ನಡೆದಿದೆ.

    ಉತ್ತರ ಕನ್ನಡ ಜಿಲ್ಲೆಯ ಗಣೇಶ ಎಂಬವರು ಹಲ್ಲೆಗೊಳಗಾದವರು.

    ಪ್ರಸಾದ ಯಾನೆ ರಬಡ ಎಂಬಾತ ಹಲ್ಲೆ ನಡೆಸಿದವನು. ಈತ ಹೊಟೇಲ್ ಮಾಲಿಕರಲ್ಲಿ ಸಿಗರೇಟು ಕೇಳಿದ್ದು ಆಗ ಮಾಲಿಕ ನಾವು ಇಲ್ಲಿ ಸಿಗರೇಟು ಮಾರುವುದಿಲ್ಲ ಎಂದಿದ್ದಾರೆ.

    ಆದರೂ ತಂದುಕೊಡುವಂತೆ ಗಲಾಟೆ ಮಾಡಿದಾಗ ಗಣೇಶ್ ಅವರು ನೋಡಿದರು ಎಂಬ ಕಾರಣಕ್ಕೆ ಅವರನ್ನು ಹಿಡಿದು ಬೈದು ಗಾಜಿನ ಬಾಟಲಿಯಿಂದ ಹಲ್ಲೆ ನಡೆಸಿದ್ದಾನೆ.ಈ ಬಗ್ಗೆ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಕುಂದಾಪುರ ಪುರಸಭೆ ವಿಶೇಷ ಸಾಮಾನ್ಯ ಸಭೆ: ಯುಜಿಡಿ, ಪಾರ್ಕಿಂಗ್‌, ಜಲಸಿರಿ ಸಮಸ್ಯೆ ಬಗ್ಗೆ ಚರ್ಚೆ

    ಕುಂದಾಪುರ, ಜುಲೈ 9, 2025: ಯುಜಿಡಿ ಯೋಜನೆಯ ಬಾಕಿ ಉಳಿದ ಕಾಮಗಾರಿಗೆ ಒಂದು ಸ್ಪಷ್ಟ ಯೋಜನೆ ರೂಪಿಸಿ, ಏಕಕಾಲಕ್ಕೆ ಅದನ್ನು ಪೂರ್ಣಗೊಳಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಶಾಸಕ ಕಿರಣ್ ಕುಮಾರ ಕೊಡ್ಗಿ ಒತ್ತಾಯಿಸಿದರು. ಅವರು ಮಂಗಳವಾರ ಕುಂದಾಪುರ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿದರು.

    ಶಾಸಕ ಕೊಡ್ಗಿ ತಿಳಿಸಿದಂತೆ, ಸರಿಯಾದ ಯೋಜನೆ ಇಲ್ಲದೆ ಯುಜಿಡಿ ಪೂರ್ಣಗೊಳ್ಳುತ್ತಿಲ್ಲ. ಈಗಾಗಲೇ ಯೋಜನೆಗೆ 33 ಕೋಟಿ ರೂಪಾಯಿ ವೆಚ್ಚವಾಗಿದ್ದು, 13 ಕೋಟಿ ರೂಪಾಯಿ ಉಳಿದಿದೆ. ಆದರೆ ಯೋಜನೆ ಮುಗಿಸಲು ಇನ್ನೂ 33 ಕೋಟಿ ಬೇಕಾಗುತ್ತದೆ. ಉಳಿದ ಹಣದಲ್ಲಿ ಸೀಮಿತ ಕಾಮಗಾರಿ ಮಾತ್ರ ಮಾಡುವ ಅಗತ್ಯವಿಲ್ಲ ಎಂದು ಅವರು ತಿಳಿಸಿದರು.

    ಸದಸ್ಯ ಗಿರೀಶ್ ಜಿ.ಕೆ. ಆಶ್ಚರ್ಯ ವ್ಯಕ್ತಪಡಿಸಿ, ಯುಜಿಡಿ ಯೋಜನೆಯಲ್ಲಿ ಈಗಾಗಲೇ ಸಂಭವಿಸಿರುವ ತಪ್ಪುಗಳು ಮುಂದೆ ತಪ್ಪಿಸಬೇಕು. ಯೋಜನೆಯನ್ನು ಶೀಘ್ರ ಪೂರ್ಣಗೊಳಿಸಲು ಇಲಾಖೆಯ ಅಧಿಕಾರಿಗಳು ಮತ್ತು ಎಂಜಿನಿಯರ್‌ಗಳು ಸಹಕರಿಸಬೇಕು ಎಂದರು. ಸದಸ್ಯ ಶ್ರೀಧರ ಶೇರೆಗಾರ್ ಯೋಜನೆಯನ್ನು “ಬಿಳಿ ಆನೆ” ಎಂದು ಟೀಕಿಸಿದರು ಮತ್ತು ಇದುವರೆಗೆ ಎಂಜಿನಿಯರ್‌ಗಳ ವಿವಿಧ ಕಥೆಗಳನ್ನು ಕೇಳುವುದಕ್ಕೆ ತಿಳಿಯಾಗಿದೆ. ಈಗ ಯೋಜನೆ ಪೂರ್ಣಗೊಳ್ಳಬೇಕು ಎಂದು ಒತ್ತಾಯಿಸಿದರು. ಚಂದ್ರಶೇಖರ ಖಾರ್ವಿ ಈ ಆರೋಪಕ್ಕೆ ಬೆಂಬಲ ನೀಡಿದರು.

    ಹುಂಚಾರಬೆಟ್ಟುವಿನಲ್ಲಿ ಯುಜಿಡಿ ಯೋಜನೆಯಡಿ ಎಸ್‌ಟಿಪಿ ಸ್ಥಾಪನೆಗೆ ಸದಸ್ಯ ಶೇಖರ ಪೂಜಾರಿ ವಿರೋಧ ವ್ಯಕ್ತಪಡಿಸಿದರು. ಗ್ರಾಮಸ್ಥರು ಈಗಾಗಲೇ ಪ್ರತಿಭಟನೆ ಮತ್ತು ಮನವಿ ಸಲ್ಲಿಸಿದ್ದು, ಅಧಿಕಾರಿಗಳು ಇದನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. ಸದಸ್ಯೆ ಆಶ್ವಿನಿ ಪ್ರದೀಪ್ ಯುಜಿಡಿ ಕಾರಣದಿಂದ ಕುಂದಾಪುರದ ರಸ್ತೆಗಳು ನಾಶವಾಗಿವೆ ಎಂದು ಆರೋಪಿಸಿದರು. ವೆಂಕಟರಮಣ ಶಾಲೆ ರಸ್ತೆಯ ದುರಸ್ತಿಗೆ ಕಳೆದ 3 ವರ್ಷಗಳಿಂದ ಮನವಿ ಮಾಡಿದರೂ ಸ್ಪಂದನೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಜಲಸಿರಿ ಯೋಜನೆಯಡಿ 24 ಗಂಟೆ ನೀರು ಪೂರೈಕೆ ಭರವಸೆಗೆ ಎದುರಾಗಿ ಕೆಲವು ವಾರ್ಡ್‌ಗಳಲ್ಲಿ ನೀರು ಸರಿಯಾಗಿ ಇಲ್ಲ ಎಂದು ಚಂದ್ರಶೇಖರ ಖಾರ್ವಿ ಆರೋಪಿಸಿದರು. ಅಧಿಕಾರಿಗಳು ದೂರಿಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ತಿಳಿಸಿದರು. ಶಾಸಕ ಕೊಡ್ಗಿ ಪ್ರತಿಕ್ರಿಯಿಸಿ, ಕುಡಿಯುವ ನೀರಿನ ಸರಬರಾಜುಗೆ ಪುರಸಭೆಯಲ್ಲಿ ಮೊದಲ ಆದ್ಯತೆ ನೀಡಬೇಕು ಎಂದು ಸೂಚಿಸಿದರು. ಗಿರೀಶ್ ಜಿ.ಕೆ., ಸಂತೋಷ್ ಶೆಟ್ಟಿ ರಾಘವೇಂದ್ರ ಖಾರ್ವಿ ಜಲಸಿರಿ ಯೋಜನೆಯ ತೀವ್ರತರ ನ್ಯೂನತೆಗಳನ್ನು ಎತ್ತಿ ತೋರಿಸಿದರು.

    ಪಾರ್ಕಿಂಗ್ ಸಮಸ್ಯೆಗೆ ಒಮ್ಮತ:
    ಕುಂದಾಪುರದ ಪಾರ್ಕಿಂಗ್ ಸಮಸ್ಯೆ ಪರಿಹಾರಕ್ಕೆ ಶಾಸಕ ಕೊಡ್ಗಿ ಒಮ್ಮತದ ನಿರ್ಣಯ ಕರೆ ನೀಡಿದರು. ಫ್ಲೈಓವರ್‌ನಡಿ ದ್ವಿಚಕ್ರ ವಾಹನ ನಿಲುಗಡೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅನುಮತಿ ನೀಡದ ಕಾರಣ, 250ಕ್ಕೂ ಅಧಿಕ ಬೈಕ್‌ಗಳನ್ನು ನಿಲ್ಲಿಸಬಹುದಾದ ಸ್ಥಳವನ್ನು ಗುರುತಿಸಿ ಚರ್ಚಿಸಬೇಕು ಎಂದು ಸಲಹೆ ನೀಡಿದರು. ಶ್ರೀಧರ ಶೇರೆಗಾರ್ ಫ್ಲೈಓವರ್ ಸುಂದರೀಕರಣಕ್ಕೆ ಲಯನ್ಸ್ ಸಂಸ್ಥೆ 45 ಲಕ್ಷ ರೂ. ಖರ್ಚು ಮಾಡಿದ್ದು, ಪುರಸಭೆಗೆ ಆದಾಯ ತಂದಿದೆ ಎಂದರು. ಶಾಸಕ ಕೊಡ್ಗಿ ವಾಹನ ನಿಲುಗಡೆಗೆ ಅವಕಾಶ ಸಿಕ್ಕರೆ ಆದಾಯ ಹೆಚ್ಚುತ್ತದೆ ಎಂದು ತಿಳಿಸಿದರು.

    ಪಾರ್ಕಿಂಗ್‌ಗೆ ಮಾರ್ಕಿಂಗ್ ಮಾಡುವ ನಿರ್ಣಯ ಮೇ ಸಭೆಯಲ್ಲಿ ಆಗಿದ್ದರೂ, ಇಲಾಖೆಗೆ ಕೊರಿಯರ್ ನಿನ್ನೆಯಷ್ಟೇ ತಲುಪಿದೆ ಎಂದು ಸಂಚಾರ ಠಾಣೆ ಎಸ್‌ಐ ನೂತನ್ ತಿಳಿಸಿದರು. ಇದಕ್ಕೆ ಎಸ್‌ಪಿ ಮತ್ತು ಡಿಸಿ ಮೂಲಕ ಗಜೆಟ್ ನೋಟಿಫಿಕೇಶನ್ ಬೇಕು ಎಂದು ವಿವರಿಸಿದರು. ಗಿರೀಶ್ ಜಿ.ಕೆ. 2022ರಿಂದ ಚರ್ಚೆಯಾಗಿದ್ದರೂ ಮೂರು ಡಿವೈಎಸ್‌ಪಿಗಳು ಬದಲಾದರೂ ಯೋಜನೆ ಜಾರಿಯಾಗಿಲ್ಲ ಎಂದು ಆರೋಪಿಸಿದರು. ಭಂಡಾರ್‌ಕಾರ್ಸ್ ಕಾಲೇಜು ರಸ್ತೆಯ ಪಾರ್ಕಿಂಗ್ ವ್ಯವಸ್ಥೆ ಸರಿಪಡಿಸಬೇಕು ಎಂದು ರೋಹಿಣಿ ಉದಯ್ ಕುಮಾರ್ ಒತ್ತಾಯಿಸಿದರು. ಬಸ್ರೂರು, ಹಾಲಾಡಿ ಕೋಟೇಶ್ವರ ಸೇರಿದಂತೆ ದಂಡ ವಿಧಿಸಲು ಫಲಕ ಅಳವಡಿಸಲಾಗುವುದು ಎಂದು ಎಸ್‌ಐ ತಿಳಿಸಿದರು. ಸಂಚಾರ ಸೂಚನಾ ಫಲಕಗಳಿಗೆ ಅನುದಾನ ಮಂಗೆ ಮನವಿ ಮಾಡಲಾಯಿತು.

    ಸಭೆಯ ಅಧ್ಯಕ್ಷತೆಯನ್ನು ಪುರಸಭೆ ಅಧ್ಯಕ್ಷೆ ಕೆ.ಮೋಹನದಾಸ ಶೆಣೈ ವಹಿಸಿದ್ದರು. ಉಪಾಧ್ಯಕ್ಷೆ ವನಿತಾ ಬಿಲ್ಲವ, ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಪ್ರಭಾಕರ್, ಮುಖ್ಯಾಧಿಕಾರಿ ಆನಂದ್ ಉಪಸ್ಥಿತರಿದ್ದರು.

  • ಕುಂದಾಪುರ: ಸುಳ್ಗೋಡು ಸ.ಹಿ.ಪ್ರಾ ಶಾಲಾ ಶಿಕ್ಷಕ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ  

    ಕುಂದಾಪುರ, ಜುಲೈ 7, 2025ಇಲ್ಲಿನ ಹಳ್ಳಿಹೊಳೆ ಗ್ರಾಮದ ಸುಳ್ಳೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ  ಕುಬೇರಪ್ಪ (49) ಸೋಮವಾರ ಬೆಳಿಗ್ಗೆ ಶಾಲೆಗೆ ಹೋಗುವಾಗ ಕಮಲಶಿಲೆ ಎಂಬಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಮೂಲತಃ ಅವರು ಚಿತ್ರದುರ್ಗದ ನಿವಾಸಿಯಾಗಿದ್ದು, ಹೊಸಂಗಡಿ ಕೆಪಿಸಿ ಕಾಲನಿಯ ಸರಕಾರಿ ಕ್ವಾರ್ಟಸ್‌ನಲ್ಲಿ ವಾಸವಾಗಿದ್ದರು. ಸೋಮವಾರ ತಮ್ಮ ಬೈಕ್‌ನಲ್ಲಿ ಸುಳ್ಳೋಡು ಶಾಲೆಗೆ ಹೊರಟಿದ್ದ ಅವರು ಕಮಲಶಿಲೆಯ ಪಾರೆ ಬಳಿ ಬೈಕನ್ನು ರಸ್ತೆಯ ಬದಿಯಲ್ಲಿಟ್ಟು ರೈನ್ ಕೋಟ್ ಸಮೇತ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 22 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಕಳೆದ 4 ವರ್ಷಗಳಿಂದ ಮುಖ್ಯ ಶಿಕ್ಷಕರಾಗಿ ಮುಂಭಡ್ತಿ ಹೊಂದಿ ಸುಳ್ಳೋಡು ಶಾಲೆಗೆ ವರ್ಗಾವಣೆಗೊಂಡಿದ್ದರು.

    ಕುಬೇರಪ್ಪ ಅವರು ಹೊಸಂಗಡಿಯ ಕೆಪಿಸಿ ಕಾಲನಿಯಲ್ಲಿ ಹಿಟ್ಟಿನ ಗಿರಣಿ ಮಾಡಿಕೊಂಡಿದ್ದರು.  ಅವರು ಸಂಬಂಧಿಕರ ಮದುವೆಗೆ ಮತ್ತು ಇನ್ನಿತರ  ಸಾಕಷ್ಟು ಸಾಲ ಮಾಡಿಕೊಂಡಿದ್ದು, ಹಲವು ಸಾಲಗಾರರಿಗೆ ಜಾಮೀನು ಹಾಕಿದ್ದರು. ಸಾಂಸಾರಿಕ ಜೀವನಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

    ಘಟನಾ ಸ್ಥಳಕ್ಕೆ ಬೈಂದೂರು ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯ್ಕ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶೇಖರ ಪೂಜಾರಿ, ಕ್ಷೇತ್ರ ಸಮನ್ವಯಾಧಿಕಾರಿ ಪ್ರದೀಪ್ ಶೆಟ್ಟಿ, ಡಿವೈಎಸ್‌ಪಿ ಕುಲಕರ್ಣಿ, ಪೊಲೀಸ್ ವೃತ್ತ ನಿರೀಕ್ಷಕ ಜಯರಾಮ ಗೌಡ, ಪಿಎಸ್‌ಐ ನಾಸೀರ್ ಹುಸೇನ್ ಭೇಟಿ ನೀಡಿದರು.ಮೃತರ ಗೌರವಾರ್ಥ ಶಾಲೆಗೆ ರಜೆ ನೀಡಲಾಗಿದೆ.

  • ಉಡುಪಿ: ಗಾಳಿಗೆ ಕಾರ್ಕಳ, ಕುಂದಾಪುರದಲ್ಲಿ ಅಡಿಕೆ ತೋಟಕ್ಕೆ ಹಾನಿ

    ಉಡುಪಿ, ಜುಲೈ 7, 2025: ಭಾರೀ ಮಳೆ, ಗಾಳಿಗೆ ಕಾರ್ಕಳ, ಕುಂದಾಪುರದಲ್ಲಿ ಅಡಿಕೆ ತೋಟಕ್ಕೆ ಹಾನಿಕಳೆದ 24 ಗಂಟೆಗಳಲ್ಲಿ ಮಳೆಯ ಪ್ರಮಾಣದಲ್ಲಿ ಗಣನೀಯ ಇಳಿಮುಖ ಕಂಡು ಬಂದಿದ್ದರೂ, ಆಗಾಗ ಮಳೆಯೊಂದಿಗೆ ಬೀಸುವ ಗಾಳಿಗೆ ಜಿಲ್ಲೆಯಲ್ಲಿ ಮನೆಗಳಿಗೆ ಹಾಗೂ ಸೊತ್ತುಗಳಿಗೆ ಆಗುವ ಹಾನಿ ಹೆಚ್ಚುತ್ತಿದೆ.

    ರವಿವಾರ ಬೀಸಿದ ಗಾಳಿಗೆ ಕಾರ್ಕಳ ಹಾಗೂ ಕುಂದಾಪುರ ತಾಲೂಕುಗಳಲ್ಲಿ ಅನೇಕ ತೋಟಗಾರಿಕಾ ಬೆಳೆಗಳಿಗೆ 3 ಹಾನಿಯುಂಟಾಗಿದ್ದರೆ, ಉಳಿದಂತೆ ಕನಿಷ್ಠ ಆರು ಮನೆಗಳಿಗೆ ಹಾನಿಯುಂಟಾಗಿದ್ದು 3.5 ಲಕ್ಷ ರೂ.ಗಳಿಗೂ ಅಧಿಕ ನಷ್ಟದ ವರದಿಗಳು ಬಂದಿವೆ.ಕಾರ್ಕಳ ತಾಲೂಕು ಈದು ಗ್ರಾಮದ ದಿನೇಶ್ ಹಾಗೂ ಕುಂದಾಪುರ ತಾಲೂಕು ಸೇನಾಪುರದ ಶ್ರೀಧರ ಶೆಟ್ಟಿ ಎಂಬವರ ತೋಟಗಳಿಗೆ ಗಾಳಿಯಿಂದ ಅಪಾರ ಹಾನಿಯಾಗಿದೆ. ತೋಟದ ಅಡಿಕೆ ಮರಗಳು ಧರಾಶಾಯಿಯಾಗಿದ್ದು 50ಸಾವಿರ ರೂ.ಗಳಿಗೂ ಅಧಿಕ ನಷ್ಟದ ಅಂದಾಜು ಮಾಡಲಾಗಿದೆ.

  • Kundapura: SIO Udupi District Hosts Brotherhood Football Match to Foster Unity

    Kundapura, July 7, 2025: The Students Islamic Organisation (SIO) Udupi District organized a vibrant Brotherhood Football Match on Sunday, July 6, 2025, at Sahana Sports, Kundapura, as a continuation of the Qur’anic Youth Camp organised in Bhatkal. The event brought together young athletes aged 15–18 from the Muslim communities of Gangolli, Kandlur, Mavinakatte, Shiroor, Uppinakote, and Brahmavar circles, promoting unity, brotherhood, and healthy competition.

    The football match, which commenced at 1:00 PM, featured teams of 5+1 players, either formed by participants or organized by event coordinators. Open to students in 9th, 10th, 1st PUC, 2nd PUC, and recent 2nd PUC graduates, the event saw enthusiastic participation. Teams were selected during the match to represent their respective circles at the upcoming District Level Football Tournament.

    The Brotherhood Football Match showcased the talent and spirit of the youth, reinforcing SIO’s commitment to fostering community bonds through sports.

    More Photos: