Category: Udupi District

  • ಸುನ್ನಿ ಕೋ-ಒರ್ಡಿನೇಷನ್ ಉಡುಪಿ ಜಿಲ್ಲಾ ಸಮಿತಿಯ ನಿಯೋಗದಿಂದ ಉಡುಪಿ ಜಿಲ್ಲಾಧಿಕಾರಿ ಭೇಟಿ

    ಉಡುಪಿ, ಜುಲೈ 8, 2025: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಸ್ವರೂಪ ಟಿ.ಕೆ. ಅವರನ್ನು ಉಡುಪಿ ಜಿಲ್ಲೆಯ ಪ್ರಮುಖ 10 ಸಂಘಟನೆಗಳ ಒಕ್ಕೂಟವಾದ ಸುನ್ನಿ ಕೋ-ಒರ್ಡಿನೇಷನ್ ಉಡುಪಿ ಜಿಲ್ಲಾ ಸಮಿತಿಯ ನಿಯೋಗ ಭೇಟಿಯಾಗಿ ಅಭಿನಂದಿಸಿತು.

    ಚುನಾವಣೆಯ ಮೊದಲು ಕಾಂಗ್ರೆಸ್ ಸರಕಾರ ಮುಸ್ಲಿಮರಿಗೆ ನೀಡಿದ ಆಶ್ವಾಸನೆಗಳನ್ನು ಪೂರ್ತಿಗೊಳಿಸುವ ಬಗ್ಗೆ ಜಿಲ್ಲಾಧಿಕಾರಿಯ ಮೂಲಕ ಸರಕಾರಕ್ಕೆ ಹಲವು ಬೇಡಿಕೆಗಳ ಜ್ಞಾಪಕ ಪತ್ರವನ್ನು ಜಿಲ್ಲಾಧಿಕಾರಿಯ ಮೂಲಕ ಸರಕಾರಕ್ಕೆ ಸಲ್ಲಿಸಿ ಶೀಘ್ರ ಪರಿಹಾರಕ್ಕಾಗಿ ಒತ್ತಾಯಿಸಲಾಯಿತು.

    2ಬಿ ಮೀಸಲಾತಿ ಮರು ಸ್ಥಾಪಿಸಬೇಕು. ಶಿಕ್ಷಣ ಕೇಂದ್ರಗಳಲ್ಲಿ ಹಿಜಾಬ್ ನಿಷೇಧವನ್ನು ತೆರವುಗೊಳಿಸಬೇಕು. ಉಡುಪಿ ಜಿಲ್ಲೆಯಲ್ಲಿ ಬೇರು ಬಿಡುತ್ತಿರುವ ಕೋಮುವಾದ, ಕೋಮು ಸಂಘರ್ಷಗಳನ್ನು ಹಾಗೂ ಕೋಮುವಾದಿ ಹೇಳಿಕೆಗಳಿಗೆ ಕಡಿವಾಣ ಹಾಕಬೇಕು. ಕೋಮು ಸಂಘರ್ಷಕ್ಕೆ ಎಡೆ ಮಾಡಿ ಕೊಡುವ ಹೇಳಿಕೆಗಳನ್ನು ನೀಡುವವರಿಗೆ ಜಾಮೀನು ರಹಿತ ಕಾಯ್ದೆಗಳ ಮೂಲಕ ಸೂಕ್ತ ಶಿಕ್ಷೆಯನ್ನು ನೀಡಬೇಕು. ಜೈಲಿನಲ್ಲಿರುವ ಅಮಾಯಕ ಯುವಕರನ್ನು ಬಿಡುಗಡೆಗೊಳಿಸಬೇಕು ಎಂದು ಪತ್ರದಲ್ಲಿ ಆಗ್ರಹಿಸಲಾಗಿದೆ.

    ಉಡುಪಿ ಜಿಲ್ಲಾ ಸುನ್ನಿ ಕೋ-ಒರ್ಡಿನೇಷನ್ ಸಮಿತಿಯ ನಿಯೋಗದ ವತಿಯಿಂದ ಉಡುಪಿ ಜಿಲ್ಲಾ ನೂತನ SP ಹರಿರಾಮ್ ಶಂಕರ್ ರವರನ್ನು ತಾರೀಕು 7/07/2025 ರ ಸೋಮವಾರ ಬೇಟಿಯಾಗಿ ಶುಭ ಹಾರೈಸಲಾಯಿತು.

    ನಿಯೋಗದಲ್ಲಿ ಜಿಲ್ಲಾ ಸುನ್ನಿ ಕೋ-ಒರ್ಡಿನೇಷನ್ ಸಮಿತಿಯ ಅಧ್ಯಕ್ಷ ಕೆ.ಎ.ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ, ಪ್ರಧಾನ ಕಾರ್ಯದರ್ಶಿ ಸುಭಾನ್ ಅಹ್ಮದ್ ಹೊನ್ನಾಳ, ಕೋಶಾಧಿಕಾರಿ ವಸೀಮ್ ಭಾಷಾ ಕುಂದಾಪುರ, ಕಾರ್ಯದರ್ಶಿ ಗಳಾದ ಇಲಿಯಾಸ್ ಕಟಪಾಡಿ, ಕಾನೂನು ಸಲಹೆಗಾರ ಹಬೀಬ್ ಸಂತೋಷ್ ನಗರ, ನಿರ್ದೇಶಕರಾದ ಸೈಯ್ಯದ್ ಫರೀದ್ ಸಾಹೇಬ್ ಉಡುಪಿ, ಹನೀಫ್ ಅಂಬಾಗಿಲು ಮೊದಲಾದವರು ಉಪಸ್ಥಿತರಿದ್ದರು

  • ಮೃತ ವ್ಯಕ್ತಿಯ ವಾರಸುದಾರರಿಗೆ ಸೂಚನೆ

    ಉಡುಪಿ, ಜುಲೈ 8, 2025: ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಸಿಟಿ ಬಸ್ ನಿಲ್ದಾಣದ ಉಡುಪಿ-ಮಣಿಪಾಲ ಕಡೆ ಹೋಗುವ ಬಸ್ ನಿಲ್ದಾಣದಲ್ಲಿ ಅಸ್ವಸ್ಥರಾಗಿದ್ದ ಶಿರ್ವ ಮಂಚ್ಕಲ್ ನಿವಾಸಿ ರಮೇಶ್ ಶೆಟ್ಟಿ (57) ಎಂಬ ವ್ಯಕ್ತಿಯನ್ನು ಚಿಕಿತ್ಸೆಗಾಗಿ ನಗರದ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಜುಲೈ 2 ರಂದು ಮೃತಪಟ್ಟಿರುತ್ತಾರೆ.

    ಮೃತಶರೀರವನ್ನು ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಸಂರಕ್ಷಿಸಿ ಇಡಲಾಗಿದ್ದು, ಸದ್ರಿ ಮೃತವ್ಯಕ್ತಿಯ ವಾರಸುದಾರರು ಯಾರಾದರೂ ಇದ್ದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ ಪಿ.ಎಸ್.ಐ ಮೊ.ನಂ: 9480805445, ಪಿ.ಐ ಮೊ.ನಂ: 9480805408, ಜಿಲ್ಲಾ ನಿಸ್ತಂತು ಕಚೇರಿ ದೂ.ಸಂಖ್ಯೆ: 0820-2526444 ಹಾಗೂ ಉಡುಪಿ ನಗರ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2520444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. 

  • ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ

    ಉಡುಪಿ, ಜುಲೈ 8, 2025: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ, ಬ್ರಹ್ಮಾವರ ಮತ್ತು ಕಾಪು ತಾಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ  ಹಾಗೂ ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳಿಗೆ ವಿದ್ಯಾರ್ಥಿವೇತನ ಮಂಜೂರಾತಿಗಾಗಿ ಸಂಬಂಧಪಟ್ಟ ಶಾಲಾ ಮುಖ್ಯೋಪಾಧ್ಯಾಯರುಗಳು ವಿದ್ಯಾರ್ಥಿಗಳ ದಾಖಲೆಗಳೊಂದಿಗೆ ನೇರವಾಗಿ ಇಲಾಖೆಯ ವೆಬ್‌ಸೈಟ್ http://ssp.postmatric.karnataka.gov.in ಅಥವಾ www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

    ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದ ಪ್ರತಿ ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ವಿದ್ಯಾರ್ಥಿಯ ಆಧಾರ್ ಸಂಖ್ಯೆ ಎನ್.ಪಿ.ಸಿ.ಐ ಸೀಡಿಂಗ್ ಮಾಡುವುದು ಕಡ್ಡಾಯವಾಗಿರುತ್ತದೆ. ಪರಿಶಿಷ್ಟ ಪಂಗಡದ 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳು ಎನ್.ಎಸ್.ಪಿ ಓ.ಟಿ.ಆರ್ ರಿಜಿಸ್ಟ್ರೇಷನ್ ಮಾಡುವುದು ಕಡ್ಡಾಯವಾಗಿರುತ್ತದೆ.

    ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2528884, ಮೊ.ನಂ: 9480843209 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

  • ಗೃಹ ಬಂಧನದಲ್ಲಿದ್ದ ಮಾನಸಿಕ ಅಸ್ವಸ್ಥ ಮಹಿಳೆಯ ರಕ್ಷಣೆ

    ಉಡುಪಿ, ಜುಲೈ 8 , 2025: ಹೆಬ್ರಿ ಠಾಣಾ ವ್ಯಾಪ್ತಿಯಲ್ಲಿ ಕಳೆದ ಎರಡು ವರ್ಷದಿಂದ ಭದ್ರ ಕೊಠಡಿಯೊಂದರಲ್ಲಿ ಗೃಹಬಂಧನದಲ್ಲಿದ್ದ ಮನೋರೋಗಿ ಮಹಿಳೆಯನ್ನು ಖಚಿತ ಮಾಹಿತಿಯ ಆಧಾರದ ಮೇಲೆ ವಿಶು ಶೆಟ್ಟಿ ಅಂಬಲಪಾಡಿ ಸಖಿ ಸೆಂಟರಿನ ಸಿಬ್ಬಂದಿ ಹಾಗೂ ಪೊಲೀಸರ ಸಹಾಯದಿಂದ ರಕ್ಷಿಸಿ ಬಾಳಿಗಾ ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಬೇಬಿ(38) ಅಮಾನವೀಯ ಗೃಹ ಬಂಧನದಿಂದ ರಕ್ಷಿಸಲ್ಪಟ್ಟ ಮಹಿಳೆ. ಇವರು ವಿವಾಹಿತರಾಗಿದ್ದು ಸಣ್ಣ ಇಬ್ಬರು ಮಕ್ಕಳಿದ್ದಾರೆ. ಮನೋರೋಗಿಯಾದ ಮಹಿಳೆಯನ್ನು ವರುಷದಿಂದ ಗೃಹಬಂಧನದಲ್ಲಿ ಇಟ್ಟಿದ್ದು, ಇದರಿಂದ ಅವರು ಸರಿಯಾದ ಚಿಕಿತ್ಸೆಯಿಂದ ವಂಚಿತರಾಗಿದ್ದಾರೆ.

    ‘ಘಟನಾ ಸ್ಥಳಕ್ಕೆ ತೆರಳಿದಾಗ ಕಿಟಕಿಯಲ್ಲಿ ಮಹಿಳೆ ತನ್ನನ್ನು ರಕ್ಷಿಸಿ ಬದುಕಲು ಆಗುತ್ತಿಲ್ಲ ಹಿಂಸೆಯಿಂದ ಕಂಗಾಲಾಗಿದ್ದೇನೆ. ಮಾನಸಿಕ ಹಾಗೂ ದೈಹಿಕ ಹಿಂಸೆಯಿಂದ ನನ್ನನ್ನು ಪಾರು ಮಾಡಿ ಎಂದು ಅಂಗ ಲಾಚಿ ಬೊಬ್ಬಿಡುತ್ತಿದ್ದರು. ಭದ್ರವಾದ ಬಾಗಿಲು ಹಾಗೂ ಬೀಗ ಇದ್ದು ಸಣ್ಣ ಕಿಟಕಿಯಿಂದ ಆಹಾರ ನೀಡುತ್ತಿ ದ್ದರು. ಮಳೆ ಗಾಳಿಗೆ ನನ್ನ ಮೇಲೆ ದಯೆ ತೋರದೆ ನಾಯಿಯ ಬದುಕಿಗಿಂತ ಕಡೆಯಾಗಿದೆ ರಕ್ಷಿಸಿ ಎಂದು ಗೋಗರೆಯುತ್ತಿದ್ದರು ಎಂದು ವಿಶು ಶೆಟ್ಟಿ ತಿಳಿಸಿದ್ದಾರೆ.

    ಮಹಿಳೆಯನ್ನು ವಿಶು ಶೆಟ್ಟಿ ಅಂಬಲಪಾಡಿ ಬಂಧ ಮುಕ್ತಗೊಳಿಸಿ, ಮಹಿಳೆಯನ್ನು ಸಂತೈಸಿ, ಬಾಳಿಗಾ ಆಸ್ಪತ್ರೆಗೆ ದಾಖಲಿಸಲಾಗಿದೆ.

  • ಬೈಂದೂರು: ಪೊಲೀಸರಿಂದ ಜಾಗೃತಿ ಕಾರ್ಯಕ್ರಮ

    ಬೈಂದೂರು, ಜುಲೈ 8, 2025: ಬೈಂದೂರು ತಾಲೂಕು ಕಛೇರಿಯಲ್ಲಿ ನಡೆದ “ಲಿಂಗತ್ವಾಧಾರಿತ ದೌರ್ಜನ್ಯ ವಿರುದ್ಧ ರಾಷ್ಟ್ರೀಯ ಅಭಿಯಾನ” ಕಾರ್ಯಕ್ರಮದಲ್ಲಿ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (PSI) ರವರು ಮಾತನಾಡಿ, ಸಾಮಾಜಿಕ ಜಾಲತಾಣಗಳ ಬಳಕೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳು ಮತ್ತು ಸಂಚಾರ ನಿಯಮಗಳ ಸಹಿತ ಇತರ ಮಾಹಿತಿಯನ್ನು ನೀಡಿದರು. ಈ ಕಾರ್ಯಕ್ರಮ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶವನ್ನು ಹೊಂದಿತ್ತು.

    ಶಿರ್ವ

    ಅದೇ ರೀತಿ, ಶಿರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳಪು ಪಾಲಿ ಟೆಕ್ನಿಕ್‌ನ ವಿದ್ಯಾರ್ಥಿಗಳಿಗೆ ಒಂದು ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಇದರಲ್ಲಿ ಮಾದಕ ದ್ರವ್ಯ ಸೇವನೆಯಿಂದ ಉಂಟಾಗುವ ದುಷ್ಟ ಪರಿಣಾಮಗಳು, ಸೈಬರ್ ಕ್ರೈಂ, ಮತ್ತು ರಸ್ತೆ ಸುರಕ್ಷತೆ ನಿಯಮಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಈ ಕಾರ್ಯಕ್ರಮಗಳು ಯುವ ಜನಾಂಗದಲ್ಲಿ ಜವಾಬ್ದಾರಿಯ ಚಟುವಟಿಕೆಗಳನ್ನು ಉತ್ತೇಜಿಸುವ ಉದ್ದೇಶವನ್ನು ಹೊಂದಿವೆ.

  • Udupi: ‘Namma Nada Okkoota Community Center’ Inauguration Set for July 20

    Udupi, July 8, 2025: The inauguration of the ‘Namma Nada Okkoota Community Center’ in Udupi is scheduled for Sunday, July 20, 2025, to be held in the morning in the presence of distinguished guests. This event marks a significant step toward community service and social development in the region.

    Located at Adi Udupi Masjid Complex, Udupi, the center is designed to offer a range of services aimed at enhancing education, employment, and empowerment. These include educational and scholarship guidance, career and skill development support, assistance with government schemes, medical and insurance guidance, as well as public services and data collection. Building on its previous initiatives—such as scholarship distributions, awareness programs, and honor ceremonies in Kundapura, Udupi, and Kaup—the center is poised to become a vital hub for the local community.

    The inauguration reflects NNO’s ongoing commitment to fostering growth and unity, with community leaders expressing optimism about its potential impact. Stay tuned for more details on additional services to be introduced at the center.

  • ಬೈಂದೂರು: ಮಳೆಗಾಲದಲ್ಲಿ ಕಳ್ಳತನ ತಡೆಗಟ್ಟಲು ಪೊಲೀಸರಿಂದ ಸುರಕ್ಷತಾ ಮಾರ್ಗಸೂಚಿಗಳು

    ಬೈಂದೂರು, ಜುಲೈ 8, 2025: ಮಳೆಗಾಲದಲ್ಲಿ ಕಳ್ಳತನದ ಸಂಭಾವ್ಯತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಬೈಂದೂರು ಪೊಲೀಸ್ ಠಾಣೆಯು ಸಾರ್ವಜನಿಕರಿಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಿದೆ. ಈ ಸಂದರ್ಭದಲ್ಲಿ ಪೊಲೀಸರು ನೀಡಿರುವ ಮಾರ್ಗಸೂಚಿಗಳು ಈ ಕೆಳಗಿನಂತಿವೆ:

    • ಮನೆಯ ಮುಖ್ಯ ಬಾಗಿಲಿಗೆ ಸೆಂಟರ್ ಲಾಕ್ ಅಳವಡಿಸಿ ಭದ್ರತೆಯನ್ನು ಖಚಿತಪಡಿಸಿಕೊಳ್ಳಿ.
    • ಮನೆಯ ಮುಂಭಾಗ ಮತ್ತು ಹಿಂಭಾಗದ ಬಾಗಿಲುಗಳಿಗೆ ಒಳಗಡೆಯಿಂದ ಕಬ್ಬಿಣದ ಅಡ್ಡ ಪಟ್ಟಿಗಳನ್ನು ಅಳವಡಿಸಿ.
    • ಕಾರ್ಯಕ್ರಮ ಅಥವಾ ಜಾತ್ರೆಗೆ ಹೋಗುವಾಗ ಮನೆಯಲ್ಲಿ ಕನಿಷ್ಠ ಒಬ್ಬರನ್ನಾದರೂ ಉಳಿಸಿಕೊಳ್ಳಿ.
    • ಗುಜರಿ, ಹಾಸಿಗೆ, ಬೆಡ್ ಸೆಟ್, ಸ್ಟವ್ ರಿಪೇರಿ ಸೇರಿದಂತೆ ಮನೆಗೆ ಬರುವವರಿಂದ ಆಧಾರ ಕಾರ್ಡ್‌ನ ಫೋಟೋ ಮತ್ತು ಅವರ ಫೋಟೋವನ್ನು ಮೊಬೈಲ್‌ನಲ್ಲಿ ತೆಗೆದಿಡಿ.
    • ಗ್ಯಾಸ್ ಸಿಲಿಂಡರ್ ಬದಲಾಯಿಸುವಾಗ ರಸ್ತೆ ಬದಿಯಲ್ಲಿ ಬಿಟ್ಟು ಹೋಗಬೇಡಿ.
    • ಹಗಲು ಅಥವಾ ರಾತ್ರಿ ಸಂದರ್ಭದಲ್ಲಿ ಸಂಶಯಾಸ್ಪದ ವಾಹನಗಳು ನಿಂತಿದ್ದರೆ, ನೋಂದಣಿ ಸಂಖ್ಯೆಯು ಕಾಣಿಸುವಂತೆ ಫೋಟೋ ತೆಗೆದಿಡಿ.
    • ರಸ್ತೆಗೆ ಕಾಣುವಂತೆ ಬಾಗಿಲು ಅಥವಾ ಗೇಟ್‌ಗೆ ಬೀಗ ಹಾಕಬೇಡಿ.
    • ಮನೆಯಲ್ಲಿ ಒಂಟಿಯಾಗಿರುವಾಗ ಮುಂಬಾಗಿಲನ್ನು ಲಾಕ್ ಮಾಡಿಕೊಂಡು ಕೆಲಸ ಮಾಡಿ.
    • ಮುಂಭಾಗ ಮತ್ತು ಹಿಂಭಾಗದ ಬಾಗಿಲುಗಳಿಗೆ ಸಮಾನ ಗಮನ ನೀಡಿ.
    • ಬಾಗಿಲು ತಟ್ಟಿದಾಗ ಅಥವಾ ಬೆಲ್ ಮೊದಲಿದಾಗ ತಕ್ಷಣ ತೆರೆಯದೆ, ಕಿಟಕಿಯಿಂದ ಖಚಿತಪಡಿಸಿಕೊಂಡು ವ್ಯವಹರಿಸಿ.
    • ಅಪರಿಚಿತರು ನೀರು ಅಥವಾ ವಿಳಾಸ ಕೇಳಲು ಬಂದಾಗ ಜಾಗ್ರತೆಯಿಂದ ವರ್ತಿಸಿ.
    • ನೆರೆಹೊರೆಯವರೊಂದಿಗೆ ಮಾತನಾಡಲು ಹೋಗುವಾಗ ಮನೆ ಮತ್ತು ಗೇಟ್‌ಗೆ ಬೀಗ ಹಾಕುವುದನ್ನು ಮರೆಯಬೇಡಿ.
    • ಮನೆಯಲ್ಲಿ ಅಪ್ರಾಪ್ತ ವಯಸ್ಸಿನವರನ್ನು ಅಥವಾ ವಯೋವೃದ್ಧರನ್ನು ಒಣಗುವಂತೆ ಬಿಡಬೇಡಿ.
    • ಅಂಚೆ, ಕೊರಿಯರ್, ಪಾರ್ಸೆಲ್ ಅಥವಾ ಉಡುಗೊರೆ ಪಡೆಯುವಾಗ ಖಚಿತಪಡಿಸಿಕೊಂಡು ವ್ಯವಹರಿಸಿ.
    • ಕಿಟಕಿಗೆ ಹತ್ತಿರದಲ್ಲಿ ಮೊಬೈಲ್ ಫೋನ್‌ಗಳು ಅಥವಾ ಬೆಲೆಬಾಳುವ ವಸ್ತುಗಳನ್ನು ಇಡಬೇಡಿ.
    • ಬೆಲೆಬಾಳುವ ವಸ್ತುಗಳನ್ನು ಬ್ಯಾಂಕ್ ಲಾಕರ್‌ಗಳಲ್ಲಿ ಇಡುವುದು ಉತ್ತಮ.
    • ಮನೆ ಬಾಗಿಲುಗಳಿಗೆ ಮ್ಯಾಜಿಕ್ ಅಲಾರ್ಮ್ ಸಿಸ್ಟಮ್‌ಗಳಂತಹ ಸುರಕ್ಷಾ ಸಾಧನಗಳನ್ನು ಅಳವಡಿಸಿ.
    • ಮಲಗುವ ಸಮಯದಲ್ಲಿ ಬಾಗಿಲು ಮತ್ತು ಕಿಟಕಿಗಳನ್ನು ಲಾಕ್ ಮಾಡಿರುವುದನ್ನು ಪರೀಕ್ಷಿಸಿ.
    • ಮನೆ ಬೀಗ ಹಾಕಿ ಪ್ರಯಾಣಿಸುವಾಗ ಅಕ್ಕಪಕ್ಕದವರಿಗೆ ಮತ್ತು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿ.
    • ಬಾಡಿಗೆಗೆ ಇರುವವರ ಅಥವಾ ಮನೆ ಕೆಲಸದವರ ಬಗ್ಗೆ ಆಧಾರ ಕಾರ್ಡ್, ಫೋಟೋ, ರಕ್ತ ಸಂಬಂಧಿಗಳ ಮೊಬೈಲ್ ಸಂಖ್ಯೆಗಳನ್ನು ದಾಖಲಿಸಿ.
    • ಸಂಶಯಾಸ್ಪದ ವ್ಯಕ್ತಿ ಅಥವಾ ವಾಹನ ಕಂಡರೆ ತಕ್ಷಣ ಹತ್ತಿರದ ಪೊಲೀಸ್ ಠಾಣೆಗೆ ತಿಳಿಸಿ.
    • ಚಿನ್ನದ ಒಡವೆಗಳನ್ನು ಪಾಲಿಶ್ ಮಾಡುತ್ತೇವೆ ಎಂದು ಮನೆ ಬಳಿ ಬರುವವರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ.
    • ಜನರಿಲ್ಲದ ಪ್ರದೇಶದಲ್ಲಿ ಮಹಿಳೆಯರು ಒಣಗಿ ಓಡಾಡಬೇಕು ಎಂದು ತಪ್ಪಿಸಿ.
    • ಒಣಗಿ ಓಡಾಡುವಾಗ ಅಪರಿಚಿತರು ವಿಳಾಸ ಕೇಳಿದಾಗ ಎಚ್ಚರಿಕೆಯಿಂದ ವರ್ತಿಸಿ.
    • ಬ್ಯಾಂಕ್, ಅಂಗಡಿ, ಪೋಸ್ಟ್ ಆಫಿಸ್ ಬಳಿ ಅಪರಿಚಿತರು ಹಣ ಬಿದ್ದಿದೆ ಎಂದು ತಿಳಿಸಿದಾಗ ಮೊದಲು ನಿಮ್ಮ ಹಣದ ಸುರಕ್ಷತೆ ಖಚಿತಪಡಿಸಿ.
    • ಮೋಹಕ್ಕೆ ಒಳಗಾಗಿ ಸುಲಿಗೆಗೆ ಒಳಗಾಗದಿರಲು ಎಚ್ಚರಿಕೆ ತೆಗೆದುಕೊಳ್ಳಿ; ದ್ವಿಚಕ್ರ ವಾಹನದಲ್ಲಿ ಸಮೀಪಿಸುವವರಿಂದ ದೂರ ಇರಿ.
    • ಜನನಿಬಿಡ ಪ್ರದೇಶದಲ್ಲಿ ಪಾರ್ಕ್ ಮಾಡಿ ಕುಳಿತುಕೊಳ್ಳುವ ಅಥವಾ ಕತ್ತಲೆಯಲ್ಲಿ ಇರುವ ಹವ್ಯಾಸ ತಪ್ಪಿಸಿ.
    • ಅಪರಿಚಿತರು ಅತೀಂದ್ರ ಶಕ್ತಿಗಳು ಅಥವಾ ಮಹಾನ್ ಪುರುಷರ ಬಗ್ಗೆ ಹೇಳಿ ಮೋಸ ಮಾಡುವ ಪ್ರಯತ್ನ ಮಾಡಿದಾಗ ಎಚ್ಚರಿಕೆ ಇರಿಸಿ.
    • ಸಂಶಯಾಸ್ಪದ ವ್ಯಕ್ತಿ ಕಂಡರೆ ಜೋರಾಗಿ ಕೂಗಿ ಅಕ್ಕಪಕ್ಕದವರನ್ನು ಕರೆಯಿರಿ.
    • ವಾಯುವಿಹಾರಕ್ಕೆ ಹೋಗುವಾಗ ಚಿನ್ನದ ಸರಗಳನ್ನು ಬಟ್ಟೆಯಿಂದ ಮರೆಮಾಡಿಕೊಳ್ಳಿ.
    • ಅಗತ್ಯವಿಲ್ಲದೆ ಆಭರಣಗಳನ್ನು ಧರಿಸಿ ಪ್ರದರ್ಶಿಸಬೇಡಿ.
    • ಆನ್‌ಲೈನ್ ವಂಚನೆಯಿಂದ ರಕ್ಷಿಸಿಕೊಳ್ಳಲು ಎಚ್ಚರಿಕೆ ಇರಿಸಿ.
    • ಅವಶ್ಯಕತೆಯಿದ್ದಾಗ 112 ಗೆ ಕರೆ ಮಾಡಿ ಸಹಾಯ ಆರಾಯಿಸಿ.

    ಪೊಲೀಸರು ಜನರ ಸಹಕಾರದೊಂದಿಗೆ ಮಳೆಗಾಲದಲ್ಲಿ ಸುರಕ್ಷತೆಯನ್ನು ಕಾಪಾಡಲು ಆರಾಮದಿಂದ ಇರಲು ಈ ಮಾರ್ಗಸೂಚಿಗಳನ್ನು ಪಾಲಿಸುವಂತೆ ಒತ್ತಾಯಿಸಿದ್ದಾರೆ.

  • ಕುಂದಾಪುರ: ಸುಳ್ಗೋಡು ಸ.ಹಿ.ಪ್ರಾ ಶಾಲಾ ಶಿಕ್ಷಕ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ  

    ಕುಂದಾಪುರ, ಜುಲೈ 7, 2025ಇಲ್ಲಿನ ಹಳ್ಳಿಹೊಳೆ ಗ್ರಾಮದ ಸುಳ್ಳೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ  ಕುಬೇರಪ್ಪ (49) ಸೋಮವಾರ ಬೆಳಿಗ್ಗೆ ಶಾಲೆಗೆ ಹೋಗುವಾಗ ಕಮಲಶಿಲೆ ಎಂಬಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಮೂಲತಃ ಅವರು ಚಿತ್ರದುರ್ಗದ ನಿವಾಸಿಯಾಗಿದ್ದು, ಹೊಸಂಗಡಿ ಕೆಪಿಸಿ ಕಾಲನಿಯ ಸರಕಾರಿ ಕ್ವಾರ್ಟಸ್‌ನಲ್ಲಿ ವಾಸವಾಗಿದ್ದರು. ಸೋಮವಾರ ತಮ್ಮ ಬೈಕ್‌ನಲ್ಲಿ ಸುಳ್ಳೋಡು ಶಾಲೆಗೆ ಹೊರಟಿದ್ದ ಅವರು ಕಮಲಶಿಲೆಯ ಪಾರೆ ಬಳಿ ಬೈಕನ್ನು ರಸ್ತೆಯ ಬದಿಯಲ್ಲಿಟ್ಟು ರೈನ್ ಕೋಟ್ ಸಮೇತ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 22 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಕಳೆದ 4 ವರ್ಷಗಳಿಂದ ಮುಖ್ಯ ಶಿಕ್ಷಕರಾಗಿ ಮುಂಭಡ್ತಿ ಹೊಂದಿ ಸುಳ್ಳೋಡು ಶಾಲೆಗೆ ವರ್ಗಾವಣೆಗೊಂಡಿದ್ದರು.

    ಕುಬೇರಪ್ಪ ಅವರು ಹೊಸಂಗಡಿಯ ಕೆಪಿಸಿ ಕಾಲನಿಯಲ್ಲಿ ಹಿಟ್ಟಿನ ಗಿರಣಿ ಮಾಡಿಕೊಂಡಿದ್ದರು.  ಅವರು ಸಂಬಂಧಿಕರ ಮದುವೆಗೆ ಮತ್ತು ಇನ್ನಿತರ  ಸಾಕಷ್ಟು ಸಾಲ ಮಾಡಿಕೊಂಡಿದ್ದು, ಹಲವು ಸಾಲಗಾರರಿಗೆ ಜಾಮೀನು ಹಾಕಿದ್ದರು. ಸಾಂಸಾರಿಕ ಜೀವನಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

    ಘಟನಾ ಸ್ಥಳಕ್ಕೆ ಬೈಂದೂರು ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯ್ಕ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶೇಖರ ಪೂಜಾರಿ, ಕ್ಷೇತ್ರ ಸಮನ್ವಯಾಧಿಕಾರಿ ಪ್ರದೀಪ್ ಶೆಟ್ಟಿ, ಡಿವೈಎಸ್‌ಪಿ ಕುಲಕರ್ಣಿ, ಪೊಲೀಸ್ ವೃತ್ತ ನಿರೀಕ್ಷಕ ಜಯರಾಮ ಗೌಡ, ಪಿಎಸ್‌ಐ ನಾಸೀರ್ ಹುಸೇನ್ ಭೇಟಿ ನೀಡಿದರು.ಮೃತರ ಗೌರವಾರ್ಥ ಶಾಲೆಗೆ ರಜೆ ನೀಡಲಾಗಿದೆ.

  • ಪ್ರಜಾಪ್ರಭುತ್ವದ ಕಗ್ಗೊಲೆ – ಶರಣ್ ಪಂಪುವೆಲ್ ಮೇಲೆ ಕೇಸ್ ಖಂಡನೀಯ: ವಿಎಚ್‌ಪಿ

    ಉಡುಪಿ, ಜುಲೈ 7, 2025: ಗೋ ಹತ್ಯೆ ಮಾಡಿ ಗೋವಿನ ರುಂಡವನ್ನು ಎಸೆದಿರುವ ಕೃತ್ಯವನ್ನು ಖಂಡಿಸಿ ಪತ್ರಿಕಾ ಹೇಳಿಕೆಗೆ ಶರಣ್ ಪಂಪವೆಲ್ ರವರ ಮೇಲೆ ಕೇಸ್ ದಾಖಲಿಸಿರುದನ್ನು ವಿಶ್ವ ಹಿಂದೂ ಪರಿಷದ್ ಬಲವಾಗಿ ಖಂಡಿಸುತ್ತದೆ. ಕಳೆದ ಕೆಲವು ದಶಕಗಳಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿದ್ದ ಗೋಕಳ್ಳತನ /ಗೋಹತ್ಯೆ / ಅಕ್ರಮ ಗೋಸಾಗಾಟದ ಹಿಂದೆ ವ್ಯವಸ್ಥಿತ ದೊಡ್ಡ ಜಾಲ ಕಾರ್ಯನಿರ್ವಹಿಸುತ್ತಿದ್ದು ಇಡೀ ಕರಾವಳಿಯ ಜನತೆಗೆ ತಿಳಿದಿರುವ ವಿಷಯ, ಆದರೆ ಯಾರದು ಒತ್ತಡಕ್ಕೆ ಮಣಿದು ಅಥವಾ ರಾಜಕೀಯ ತುಷ್ಟಿಕರಣಕ್ಕಾಗಿ ಆ ಹೇಳಿಕೆಯನ್ನು ಕಾರಣವಾಗಿಟ್ಟು ಕೊಂಡು ಕೇಸು ದಾಖಲಿಸಿರುವುದು ಅತ್ಯಂತ ಖಂಡನೀಯ, ಇದರಿಂದ ಅಭಿವ್ಯಕ್ತ ಸ್ವಾತಂತ್ರ್ಯಕ್ಕೆ ದಕ್ಕೆಯಾವುದರ ಜೊತೆಗೆ, ಇದರಿಂದ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ, ಆದುದರಿಂದ ತಕ್ಷಣ ಪೊಲೀಸ್ ಇಲಾಖೆ ಹಾಕಿರುವ ಕೇಸನ್ನು ಹಿಂಪಡೆಯಬೇಕೆಂದು ಆಗ್ರಹಿಸುತ್ತೇವೆ.

    ಶರಣ್ ಪಂಪವೆಲ್ ರವರಿಗೆ ಚಿಕ್ಕಮಗಳೂರು ಜಿಲ್ಲೆ ನಿರ್ಬಂಧ – ಆದೇಶ ಹಿಂಪಡೆಯಲು ಆಗ್ರಹ

    ಸಂಘಟನಾ ಕಾರ್ಯಕ್ಕೆ ಮತ್ತು ಕಾರ್ಯಕ್ರಮ ದೃಷ್ಟಿಯಿಂದ ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹ ಕಾರ್ಯದರ್ಶಿ ಚಿಕ್ಕಮಗಳೂರು ಪ್ರವಾಸಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿದ್ದು ಖಂಡನೀಯ, ಓಲೈಕೆ ರಾಜಕಾರಣಕೋಸ್ಕರ ಹಿಂದೂ ನಾಯಕರನ್ನು ಧಮನಿಸುವ ಕೃತ್ಯವನ್ನು ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರ ಮಾಡುತ್ತಿದ್ದು, ವಿಶ್ವ ಹಿಂದೂ ಪರಿಷದ್ ಖಂಡಿಸುತ್ತದೆ ಮತ್ತು ತಕ್ಷಣ ಈ ಆದೇಶವನ್ನು ಹಿಂದೆ ಪಡೆಯುವಂತೆ ಆಗ್ರಹಿಸುತ್ತದೆ ಎಂದು ವಿಶ್ವ ಹಿಂದೂ ಪರಿಷದ್ ಪ್ರಾಂತ ಗೋರಕ್ಷಾ ಪ್ರಮುಖ್ ಸುನೀಲ್ ಕೆ ಆರ್ ಪ್ರಕಟಣೆಯಲ್ಲಿ ತಿಳಿಸಿದರು.

  • ಉಡುಪಿ: ಗಾಳಿಗೆ ಕಾರ್ಕಳ, ಕುಂದಾಪುರದಲ್ಲಿ ಅಡಿಕೆ ತೋಟಕ್ಕೆ ಹಾನಿ

    ಉಡುಪಿ, ಜುಲೈ 7, 2025: ಭಾರೀ ಮಳೆ, ಗಾಳಿಗೆ ಕಾರ್ಕಳ, ಕುಂದಾಪುರದಲ್ಲಿ ಅಡಿಕೆ ತೋಟಕ್ಕೆ ಹಾನಿಕಳೆದ 24 ಗಂಟೆಗಳಲ್ಲಿ ಮಳೆಯ ಪ್ರಮಾಣದಲ್ಲಿ ಗಣನೀಯ ಇಳಿಮುಖ ಕಂಡು ಬಂದಿದ್ದರೂ, ಆಗಾಗ ಮಳೆಯೊಂದಿಗೆ ಬೀಸುವ ಗಾಳಿಗೆ ಜಿಲ್ಲೆಯಲ್ಲಿ ಮನೆಗಳಿಗೆ ಹಾಗೂ ಸೊತ್ತುಗಳಿಗೆ ಆಗುವ ಹಾನಿ ಹೆಚ್ಚುತ್ತಿದೆ.

    ರವಿವಾರ ಬೀಸಿದ ಗಾಳಿಗೆ ಕಾರ್ಕಳ ಹಾಗೂ ಕುಂದಾಪುರ ತಾಲೂಕುಗಳಲ್ಲಿ ಅನೇಕ ತೋಟಗಾರಿಕಾ ಬೆಳೆಗಳಿಗೆ 3 ಹಾನಿಯುಂಟಾಗಿದ್ದರೆ, ಉಳಿದಂತೆ ಕನಿಷ್ಠ ಆರು ಮನೆಗಳಿಗೆ ಹಾನಿಯುಂಟಾಗಿದ್ದು 3.5 ಲಕ್ಷ ರೂ.ಗಳಿಗೂ ಅಧಿಕ ನಷ್ಟದ ವರದಿಗಳು ಬಂದಿವೆ.ಕಾರ್ಕಳ ತಾಲೂಕು ಈದು ಗ್ರಾಮದ ದಿನೇಶ್ ಹಾಗೂ ಕುಂದಾಪುರ ತಾಲೂಕು ಸೇನಾಪುರದ ಶ್ರೀಧರ ಶೆಟ್ಟಿ ಎಂಬವರ ತೋಟಗಳಿಗೆ ಗಾಳಿಯಿಂದ ಅಪಾರ ಹಾನಿಯಾಗಿದೆ. ತೋಟದ ಅಡಿಕೆ ಮರಗಳು ಧರಾಶಾಯಿಯಾಗಿದ್ದು 50ಸಾವಿರ ರೂ.ಗಳಿಗೂ ಅಧಿಕ ನಷ್ಟದ ಅಂದಾಜು ಮಾಡಲಾಗಿದೆ.