Category: Udupi District

  • ಎಸ್ ಡಿ ಪಿ ಐ ಉಡುಪಿ ನಿಯೋಗದಿಂದ ಪೊಲೀಸ್ ವರಿಷ್ಠಾಧಿಕಾರಿಗಳ ಭೇಟಿ

    ಉಡುಪಿ, ಜುಲೈ 1, 2025: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾಧ್ಯಕ್ಷರಾದ ಆಸಿಫ್ ಕೋಟೇಶ್ವರ ರವರ ನೇತೃತ್ವದಲ್ಲಿ ಜಿಲ್ಲಾ ನಿಯೋಗ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ರವರನ್ನು ಭೇಟಿಯಾಗಿ ಕುಂಜಾಲು ಪ್ರಕರಣವನ್ನು ಕಟ್ಟುನಿಟ್ಟಾಗಿ ನಿಭಾಯಿಸಿ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿದಕ್ಕೆ ಅಭಿನಂದನೆ ಸಲ್ಲಿಸಿತು.

    ಮೊನ್ನೆ ಕುಂಜಾಲುವಿನಲ್ಲಿ ದನದ ಕಳೇಬರ ಪತ್ತೆಯಾದ ಸಂದರ್ಭ ಪರಿಸರದಲ್ಲಿ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು ಹಾಗೂ ಕೆಲವು ಕಿಡಿಗೇಡಿಗಳು ಇದನ್ನು ನೆಪವಾಗಿಟ್ಟುಕೊಂಡು ಶಾಂತಿಯನ್ನು ಕದಡುವ ಪ್ರಯತ್ನವನ್ನೂ ಮಾಡಿದ್ದರು.

    ಈ ಬಗ್ಗೆ ಮಸೀದಿ ಕಮಿಟಿಯವರು ಪೊಲೀಸ್ ಠಾಣೆಗೆ ಬೇಟಿ ನೀಡಿ ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವಂತೆ ಮನವಿ ಮಾಡಿದಾಗ ಸರಿಯಾಗಿ ಸ್ಪಂದಿಸಿದ ಪೊಲೀಸರು ಸೂಕ್ತ ಕ್ರಮ ಕೈಗೊಂಡು 4 ತಂಡಗಳನ್ನು ರಚಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರ ಈ ತ್ವರಿತ ಕ್ರಮಕ್ಕೆ ಎಸ್ ಡಿ ಪಿ ಐ ಜಿಲ್ಲಾ ಸಮಿತಿ ಅಭಿನಂದನೆ ಸಲ್ಲಿಸಿತು.

    ಈ ಸಂದರ್ಭದಲ್ಲಿ ಜಿಲ್ಲೆಗೆ ಸಂಬಂಧಿಸಿದ ಇತರ ವಿಷಯಗಳ ಬಗ್ಗೆಯೂ ಚರ್ಚೆ ನಡೆಸಲಾಯಿತು.

    ನಿಯೋಗದಲ್ಲಿ ಎಸ್ ಡಿ ಪಿ ಐ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶಂಶುದ್ದೀನ್ ಹಾಗೂ ರಝಾಕ್ ವೈ ಎಸ್, ಜಿಲ್ಲಾ ಉಪಾಧ್ಯಕ್ಷರಾದ ನಝೀರ್ ಅಹ್ಮದ್, ಜಿಲ್ಲಾ ಸಮಿತಿ ಸದಸ್ಯರಾದ ಮಹಮ್ಮದ್ ಹನೀಫ್ ಹಾಗೂ ಸುಹೇಲ್ ಕಂಡ್ಲೂರ್ ಮತ್ತು ಉಡುಪಿ ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ರಹೀಂ ಅದಿಉಡುಪಿ ಉಪಸ್ಥಿತರಿದ್ದರು.

  • ಉಡುಪಿ: ಬ್ರಹ್ಮಾವರ ಘಟನೆಯಲ್ಲಿ ರಾಜಕೀಯ ಲಾಭ ಪಡೆಯಲು ಹೋದ ಶಾಸಕ ಯಶ್ಪಾಲ್ ಸುವರ್ಣಗೆ ಮುಖಭಂಗ

    ಉಡುಪಿ: ಕಳೆದ ಶನಿವಾರ ರಾತ್ರಿ ಕುಂಜಾಲಿನ ರಸ್ತೆಯಲ್ಲಿ ದನದ ರುಂಡ ಪತ್ತೆ ಪ್ರಕರಣದಲ್ಲಿ ತಾನು ರಾಜಕೀಯದ ಲಾಭ ಪಡೆಯುವ ತರಾತುರಿಯಲ್ಲಿ ಬ್ರಹ್ಮಾವರದಲ್ಲಿ ನಿಂತುಕೊಂಡು 24 ಗಂಟೆಯಲ್ಲಿ ಅಪರಾಧಿಗಳನ್ನು ಬಂಧಿಸಬೇಕು ಎಂದು ಭಾಷಣ ಬಿಗಿದು ಬಂದ ಶಾಸಕ ಯಷ್ಪಾಲ್ ಸುವರ್ಣರಿಗೆ ತೀವ್ರ ಮುಖಭಂಗವಾಗಿದೆ. ಪ್ರಕರಣದಲ್ಲಿ ಯಾರಿಗೋ ಅಪರಾಧಿಯ ಪಟ್ಟ ಕಟ್ಟಲು ಹೋಗಿ ಪ್ರಕರಣದಲ್ಲಿ ಅವರ ಪಕ್ಷದವರೇ ಒಬ್ಬ ಆರೋಪಿ ಶಾಮೀಲಾಗಿರುವುದು ಕಂಡು ಈಗ ಮೌನಕ್ಕೆ ಜಾರಿದ್ದಾರೆ.

    ಪೋಲೀಸ್ ಇಲಾಖೆ ತಮ್ಮ ಕರ್ತವ್ಯವನ್ನು ನಿಷ್ಪಕ್ಷಪಾತವಾಗಿ ತನಿಖೆಯಿಂದ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಬೀಫ್ ತಿನ್ನುವವರು ಕೇವಲ ಅಲ್ಪಸಂಖ್ಯಾತರು ಮಾತ್ರ ಅಲ್ಲ ಬೇರೆಯವರು ಸಹ ತಿನ್ನುತ್ತಾರೆ ಎಂದು ಸಾಬೀತಾಗಿದೆ. ಆರೋಪಿಗಳು ತಿನ್ನಲಿಕ್ಕೆ ಮತ್ತು ವ್ಯಾಪಾರಕ್ಕಾಗಿ ಈ ದಂಧೆ ಮಾಡುತ್ತಿದ್ದರು ಎಂದು ಪೊಲೀಸರ ಎದುರು ಆರೋಪಿಗಳೇ ಒಪ್ಪಿಕೊಂಡಿದ್ದಾರೆ. ಈಗ ಆರೋಪಿಗಳು ಯಾರು ಎಂದು ಬಹಿರಂಗವಾಗಿದೆ ಉಡುಪಿ ಶಾಸಕ ಯಷ್ಪಾಲ್ ಸುವರ್ಣ ಈಗ ಏನನ್ನುತ್ತಾರೆ? ಎಂದು ಪ್ರಶ್ನಿಸಿದ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಡುಪಿ ಜಿಲ್ಲಾಧ್ಯಕ್ಷರಾದ ಶರ್ಫುದ್ದೀನ್ ಶೇಖ್ ರವರು ಈ ಸಂದರ್ಭದಲ್ಲಿ ಪೋಲೀಸ್ ವರಿಷ್ಟಾಧಿಕಾರಿಯವರಿಗೆ ಮತ್ತು ಅವರ ಸಿಬ್ಬಂದಿಗಳಿಗೆ ಅಭಿನಂಧನೆಗಳನ್ನು ಸಲ್ಲಿಸಿದ್ದಾರೆ.

  • ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದಿಂದ ಸರಕಾರಕ್ಕೆ ಮನವಿ: ಕಾನೂನು ಸುವ್ಯವಸ್ಥೆ, ಹಿಜಾಬ್ ನಿಷೇಧ ರದ್ದು ಸೇರಿದಂತೆ ವಿವಿಧ ಬೇಡಿಕೆಗಳು

    ಉಡುಪಿ, ಜುಲೈ 1, 2025: ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟವು ಸಂಸದ ಡಾ. ನಾಸಿರ್ ಹುಸೇನ್ ರವರ ಉಡುಪಿ ಜಿಲ್ಲಾ ನಿಯೋಗದ ಮೂಲಕ ರಾಜ್ಯ ಸರಕಾರಕ್ಕೆ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಸಲ್ಲಿಸಿದೆ. ಮುಸ್ಲಿಂ ಸಮುದಾಯವು ಕಾಂಗ್ರೆಸ್ ಪಕ್ಷವನ್ನು ಸ್ಥಿರವಾಗಿ ಬೆಂಬಲಿಸುತ್ತಿದ್ದು, ದೇಶದ ಬಹುಮುಖಿ ಸಂಸ್ಕೃತಿ, ಅಲ್ಪಸಂಖ್ಯಾತರ ರಕ್ಷಣೆ ಮತ್ತು ಸಮಾಜದ ಎಲ್ಲ ವರ್ಗಗಳನ್ನು ಒಳಗೊಳ್ಳುವ ಸಿದ್ಧಾಂತಕ್ಕಾಗಿ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸಾಮೂಹಿಕ ಮತದಾನ ಮಾಡಿದೆ. ಆದರೆ, ಉಡುಪಿ ಜಿಲ್ಲೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಪ್ರತಿಕೂಲ ಪರಿಸ್ಥಿತಿಗಳು ಎದುರಾಗಿವೆ. ಈ ಹಿನ್ನೆಲೆಯಲ್ಲಿ, ಒಕ್ಕೂಟವು ಈ ಕೆಳಗಿನ ವಿಷಯಗಳಿಗೆ ಪರಿಹಾರ ಕೋರಿದೆ:

    ಪ್ರಮುಖ ಬೇಡಿಕೆಗಳು:

    1. ಕಾನೂನು ಸುವ್ಯವಸ್ಥೆ:
      • ಉಡುಪಿ ನಗರ ಮತ್ತು ಜಿಲ್ಲೆಯಾದ್ಯಂತ ಬಿಜೆಪಿ ಮತ್ತು ಸಂಘಪರಿವಾರದ ನಾಯಕರು ಹಾಗೂ ಅವರ ಬೆಂಬಲಿಗರು ಅಲ್ಪಸಂಖ್ಯಾತರನ್ನು ಗುರಿಯಾಗಿಸಿ ಅಶಾಂತಿ ಸೃಷ್ಟಿಸುತ್ತಿದ್ದಾರೆ. ದುರ್ಗಾ ದೌಡ್‌ನಂತಹ ಕಾರ್ಯಕ್ರಮಗಳಲ್ಲಿ ತಲವಾರು ಪ್ರದರ್ಶನ ಮತ್ತು ದ್ವೇಷ ಭಾಷಣಗಳ ಮೂಲಕ ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡಲಾಗುತ್ತಿದೆ. ಕಾನೂನುಪಾಲಕ ಇಲಾಖೆಗಳು ಇದಕ್ಕೆ ಕ್ರಮ ಕೈಗೊಳ್ಳದಿರುವುದನ್ನು ಒಕ್ಕೂಟ ಖಂಡಿಸಿದೆ. ಇಂತಹ ಘಟನೆಗಳನ್ನು ತಡೆಗಟ್ಟಲು ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.
      • ಕೆಲವು ಸಮಯದಿಂದ ಉಡುಪಿಯಲ್ಲಿ ಸ್ಥಳೀಯ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳ ಸಾಮಾನ್ಯ ಹುಡುಗಾಟವನ್ನು ದ್ವೇಷ ಭಾಷಣಕ್ಕೆ ಬಿಜೆಪಿ ಮಹಿಳಾ ಮೋರ್ಚಾ ಮತ್ತು ಸಂಘಪರಿವಾರದ ನಾಯಕರು ದುರುಪಯೋಗ ಮಾಡಿದ್ದಾರೆ. ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ಖುಷ್ಬು ಸುಂದರ್ ಇದು ಕೇವಲ ಮಕ್ಕಳ ಜಗಳವೆಂದು ಸ್ಪಷ್ಟಪಡಿಸಿದರೂ, ದ್ವೇಷ ಹರಡುವ ಪ್ರಯತ್ನ ಮುಂದುವರಿದಿದೆ. ಇದಕ್ಕೆ ಕಾನೂನು ಕ್ರಮ ಕೈಗೊಳ್ಳಬೇಕು.
      • ಕಾರ್ಕಳದ ಅತ್ಯಾಚಾರ ಪ್ರಕರಣವನ್ನು ಸಂಘಪರಿವಾರವು ಕೋಮು ಗಲಭೆಗೆ ದುರುಪಯೋಗಿಸಿತು, ಆದರೆ ಆರೋಪಿಗಳಲ್ಲಿ ಎಲ್ಲ ಸಮುದಾಯದವರಿದ್ದರೂ ಮುಸ್ಲಿಮರ ವಿರುದ್ಧ ದ್ವೇಷ ಹರಡಲಾಯಿತು. ಶಾಸಕರ ಭಾಗಿದಾರಿಕೆಯೂ ಇದ್ದರೂ ಕಾನೂನು ಕ್ರಮ ಕೈಗೊಳ್ಳಲಿಲ್ಲ.
      • ಕೊಡವೂರಿನ ಯುವಕ-ಯುವತಿಯರ ವಿವಾಹ ಪ್ರಕರಣವನ್ನು ಸಂಘಪರಿವಾರವು ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಕ್ಕೆ ದುರುಪಯೋಗ ಮಾಡಿತು. ಇದಕ್ಕೂ ಕಾನೂನು ಕ್ರಮ ತೆಗೆದುಕೊಂಡಿಲ್ಲ.
      • ಜೂನ್ 28, 2025ರಂದು ಕುಂಜಾಲಿನ ದೇವಸ್ಥಾನದ ಬಳಿ ಸತ್ತ ದನದ ಅವಯವಗಳ ವಿಷಯವನ್ನು ವಿ.ಎಚ್.ಪಿ ಮುಖಂಡ ಶರಣ್ ಪಂಪ್‌ವೆಲ್ ಸೇರಿದಂತೆ ಸಂಘಪರಿವಾರದವರು ಮುಸ್ಲಿಮರ ವಿರುದ್ಧ ದ್ವೇಷಕ್ಕೆ ದುರುಪಯೋಗಿಸಿದರು. ಆದರೆ, ಪೊಲೀಸ್ ತನಿಖೆಯಿಂದ ಯಾವುದೇ ಮುಸ್ಲಿಮರ ಭಾಗಿದಾರಿಕೆ ಇಲ್ಲವೆಂದು ತಿಳಿದುಬಂದಿದೆ. ಈ ದ್ವೇಷಕಾರಕರ ವಿರುದ್ಧ ಕ್ರಮಕ್ಕೆ ಒಕ್ಕೂಟ ಒತ್ತಾಯಿಸಿದೆ. ಗೋಹತ್ಯಾ ನಿಷೇಧ ಕಾಯಿದೆಯ ದುರುಪಯೋಗ ತಡೆಗಟ್ಟಲು ಹಿಂದಿನ ಜಾನುವಾರು ಹಿಂಸೆ ತಡೆ ಕಾಯಿದೆಯನ್ನು ಮರುಸ್ಥಾಪಿಸಬೇಕು.
    2. ಹಿಜಾಬ್ ನಿಷೇಧ ರದ್ದತಿ:
      • ಹಿಂದಿನ ಬಿಜೆಪಿ ಸರಕಾರದ ಸಮಯದಲ್ಲಿ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಲಾಯಿತು, ಇದರಿಂದ ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ಅಡ್ಡಿಯಾಯಿತು. ಸರಕಾರಿ ಶಾಲೆಗಳಲ್ಲಿ ಈ ನಿಷೇಧ ಇನ್ನೂ ಮುಂದುವರಿದಿದ್ದು, ಬಡ ಕುಟುಂಬಗಳಿಗೆ ತೊಂದರೆಯಾಗಿದೆ. ಸರಕಾರವು ಸಂಪುಟ ನಿರ್ಣಯದ ಮೂಲಕ ಈ ನಿಷೇಧವನ್ನು ರದ್ದುಗೊಳಿಸಿ, ಮುಸ್ಲಿಂ ವಿದ್ಯಾರ್ಥಿನಿಯರಿಗೆ ಶಿಕ್ಷಣದ ಅವಕಾಶ ಕಲ್ಪಿಸಬೇಕು.
    3. ಕಲಮತ್ ಮಸೀದಿ ಪ್ರಾರ್ಥನಾ ಮಾರ್ಗ:
      • ಉಡುಪಿ ಕೊಡವೂರಿನ ಐತಿಹಾಸಿಕ ಕಲಮತ್ ಮಸೀದಿಯ ಪ್ರಾರ್ಥನಾ ಮಾರ್ಗವನ್ನು ಮುಚ್ಚಲಾಗಿದ್ದು, ಕಳೆದ ಮೂರು ವರ್ಷಗಳಿಂದ ಪ್ರಾರ್ಥನೆ ಸಾಧ್ಯವಾಗಿಲ್ಲ. ಕಂದಾಯ ಇಲಾಖೆಯ ಮೂಲಕ ಈ ಮಾರ್ಗವನ್ನು ಮರುಕಲ್ಪಿಸಲು ಸರಕಾರ ಕ್ರಮ ಕೈಗೊಳ್ಳಬೇಕು.
    4. ಅಲ್ಪಸಂಖ್ಯಾತ ಪ್ರದೇಶಗಳ ಅಭಿವೃದ್ಧಿ:
      • ಜಿಲ್ಲೆಯ ಜನಪ್ರತಿನಿಧಿಗಳು ಅಲ್ಪಸಂಖ್ಯಾತ ವಿರೋಧಿ ಪಕ್ಷದ ಸದಸ್ಯರಾಗಿರುವ ಕಾರಣ, ಮುಸ್ಲಿಂ ವಾಸದ ಪ್ರದೇಶಗಳಲ್ಲಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ. ಸರಕಾರವು ಈ ಪ್ರದೇಶಗಳಿಗೆ ವ್ಯವಸ್ಥಿತ ಕಾರ್ಯತಂತ್ರದ ಮೂಲಕ ಅಭಿವೃದ್ಧಿ ಕಾಮಗಾರಿಗಳನ್ನು ಖಾತರಿಪಡಿಸಬೇಕು.
    5. ವಿವಾಹ ನೋಂದಣಿ ಪ್ರಮಾಣಪತ್ರ:
      • ಮುಸ್ಲಿಂ ಸಮುದಾಯದ ಧಾರ್ಮಿಕ ವಿಧಾನಗಳಿಂದ ನಡೆದ ವಿವಾಹಗಳಿಗೆ ವಕ್ಫ್ ಮಂಡಳಿಯಿಂದ ದೃಢೀಕೃತ ಪ್ರಮಾಣಪತ್ರವನ್ನು ನೀಡಲಾಗುತ್ತಿತ್ತು. ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಆದೇಶದಂತೆ ಈ ಅಧಿಕಾರವನ್ನು ವಕ್ಫ್ ಮಂಡಳಿಗೆ ನೀಡಲಾಗಿತ್ತು. ಆದರೆ, ಈ ವಿಷಯ ನ್ಯಾಯಾಲಯದಲ್ಲಿದ್ದು, The Karnataka Marriage (Registration and Miscellaneous Provisions) Act 1976ರ ಅಡಿಯಲ್ಲಿ ಜಿಲ್ಲಾ ವಕ್ಫ್ ಅಧಿಕಾರಿಗಳಿಗೆ ವಿವಾಹ ನೋಂದಣಿ ಪ್ರಮಾಣಪತ್ರ ನೀಡಲು ಅಧಿಕಾರ ಕಲ್ಪಿಸುವಂತೆ ಸೂಕ್ತ ಅಧಿಸೂಚನೆ ಹೊರಡಿಸಲು ಒಕ್ಕೂಟ ಒತ್ತಾಯಿಸಿದೆ.

    ಈ ಬೇಡಿಕೆಗಳನ್ನು ಪರಿಹರಿಸಲು ರಾಜ್ಯ ಸರಕಾರ ಮುಸ್ಲಿಮರ ಹಿತಾಸಕ್ತಿಗಾಗಿ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕೆಂದು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ರಾಜ್ಯ ಸರಕಾರವನ್ನು ಒತ್ತಾಯಿಸಿದೆ.

  • ವಿಜಯಪುರ: ಮುಸ್ಲಿಂ ಬಾಂಧವ್ಯ ವೇದಿಕೆ ಸಂಸ್ಥಾಪಕ ಸೈಯದ್ ಮುಷ್ತಾಕ್ ಹೆನ್ನಾಬೈಲ್‌ರ ಕೃತಿ “ಧರ್ಮಾಧರ್ಮ” ಬಿಡುಗಡೆ

    ವಿಜಯಪುರ, ಜುಲೈ 01, 2025: ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕದ ಸಂಸ್ಥಾಪಕ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೈಯದ್ ಮುಷ್ತಾಕ್ ಹೆನ್ನಾಬೈಲ್‌ರ ಕೃತಿ “ಧರ್ಮಾಧರ್ಮ” ವಿಜಯಪುರದಲ್ಲಿ ನಡೆದ ಸಮಾರಂಭದಲ್ಲಿ ಬಿಡುಗಡೆಗೊಂಡಿತು. ಈ ಪುಸ್ತಕವು ಮುಸ್ಲಿಮೇತರ ಸಮುದಾಯದವರ ಮನಸ್ಸಿನಲ್ಲಿ ಕುತೂಹಲ ಮತ್ತು ಪ್ರಶ್ನೆಗಳಿಗೆ ಕಾರಣವಾಗಿರುವ ವಿಷಯಗಳಿಗೆ ಉತ್ತರವಾಗಿ ರಚಿತವಾಗಿದೆ.

    ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅವರು ಪುಸ್ತಕದ ಬೆನ್ನುಡಿಯಲ್ಲಿ ಬರೆದಿದ್ದಾರೆ: ಕುಂದಾಪುರದ ಕ್ರಿಯಾಶೀಲ ಲೇಖಕ ಮುಷ್ತಾಕ್ ಹೆನ್ನಾಬೈಲ್, ರಾಜಕೀಯ ಕಾರಣಗಳಿಂದ ಹದಗೆಡುತ್ತಿರುವ ಹಿಂದೂ-ಮುಸ್ಲಿಂ ಸಂಬಂಧಗಳನ್ನು ಸರಿದಾರಿಗೆ ತರಲು ಸದಾ ಪ್ರಯತ್ನಿಸುತ್ತಿದ್ದಾರೆ. ಈ ಕೃತಿಯ 55 ಲೇಖನಗಳು ಮುಸ್ಲಿಮರ ಬಗೆಗಿನ ಪೂರ್ವಾಗ್ರಹಗಳನ್ನು ತೊಡೆದುಹಾಕುವ ಉದ್ದೇಶ ಹೊಂದಿವೆ.

    ಭಾರತದಲ್ಲಿ ಮುಸ್ಲಿಮರನ್ನು ದಿನನಿತ್ಯ ಅವಮಾನಿಸಲಾಗುತ್ತಿದೆ, ಅವರ ಬಗ್ಗೆ ಸುಳ್ಳುಗಳನ್ನು ಹರಡಲಾಗುತ್ತಿದೆ. ಅವರ ಧಾರ್ಮಿಕ ಸ್ವಾತಂತ್ರ್ಯವನ್ನು ನಿರ್ಬಂಧಿಸುವ, ಹಕ್ಕುಗಳನ್ನು ಕಸಿದುಕೊಳ್ಳುವ ಮಾತುಗಳು ಕೇಳಿಬರುತ್ತಿವೆ. ಮುಸ್ಲಿಮರು ತಮ್ಮದೇ ದೇಶದಲ್ಲಿ ‘ಅನ್ಯ’ರಂತೆ ಬದುಕಬೇಕಾದ ವಾತಾವರಣ ನಿರ್ಮಾಣವಾಗುತ್ತಿದೆ. ಸಾಮಾಜಿಕ-ಶೈಕ್ಷಣಿಕ ಅಭಿವೃದ್ಧಿಗೆ ಸರಕಾರದ ಅನುದಾನವನ್ನು ‘ಹಲಾಲ್ ಬಜೆಟ್’ ಎಂದು ಕರೆಯಲಾಗುತ್ತಿದೆ. ಸಂವಿಧಾನದ ರಕ್ಷಣೆ ಇದ್ದರೂ, ಮುಸ್ಲಿಮರು ತಾರತಮ್ಯ, ಪೂರ್ವಾಗ್ರಹ ಮತ್ತು ಹಿಂಸಾಚಾರವನ್ನು ಎದುರಿಸುತ್ತಿದ್ದಾರೆ.

    ನೂರಾರು ವರ್ಷಗಳಿಂದ ಸಹಬಾಳ್ವೆ ನಡೆಸುತ್ತಿದ್ದ ಸಮುದಾಯಗಳನ್ನು ಪರಸ್ಪರ ವಿರೋಧಕ್ಕೆ ತಳ್ಳುವ ದುಷ್ಟ ಶಕ್ತಿಗಳ ವಿಧಾನಗಳಿಗೆ ಮುಷ್ತಾಕ್ ಈ ಕೃತಿಯಲ್ಲಿ ತಾಳ್ಮೆಯಿಂದ ಉತ್ತರಿಸಿದ್ದಾರೆ. ಮುಸ್ಲಿಮರ ಬಗ್ಗೆ ಪ್ರಚಲಿತ ಸುಳ್ಳುಗಳಿಗೆ ವಿವರಣೆ ನೀಡಿದ್ದು, ಇಂತಹ ಸುಳ್ಳುಗಳನ್ನು ಹುಟ್ಟಿಸುವವರ ಧರ್ಮದಲ್ಲಿರುವ ಒಂದೇ ರೀತಿಯ ನಂಬಿಕೆ-ಆಚರಣೆಗಳ ಕಡೆಗೆ ಗಮನ ಸೆಳೆದಿದ್ದಾರೆ.

    ಈ ಸಕಾಲಿಕ ಮತ್ತು ಉಪಯುಕ್ತ ಪುಸ್ತಕ ಸಾಮಾಜಿಕ ಸೌಹಾರ್ದತೆಗೆ ಮತ್ತು ತಪ್ಪು ಕಲ್ಪನೆಗಳನ್ನು ತೊಡೆದುಹಾಕಲು ಸಹಕಾರಿಯಾಗಲಿದೆ.

  • Udupi: Applications Invited for Overseas Scholarship Program

    Udupi: The Department of Minority Affairs have invited applications from students belonging to minority communities in the state, including Muslim, Christian, Jain, Buddhist, Parsi, and Sikh communities, who are pursuing postgraduate courses at foreign universities during the current academic year. Eligible students can apply for the overseas scholarship scheme through the Seva Sindhu portal at https://sevasindhu.karnataka.gov.in/sevasindhu/DepartmentService.

    The deadline for submitting applications is September 30. For further details, students can contact the Minority Welfare Department’s helpline at 8277799990 or the District Minority Welfare Office at Moulana Azad Bhavan, Alewooru Road, Manipal, at 0820-2573596, according to a press release from the department.

  • ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರೋತ್ಸಾಹಧನ: ಅರ್ಜಿ ಆಹ್ವಾನ

    ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಐ.ಐ.ಟಿ, ಐ.ಐ.ಐ.ಟಿ, ಎನ್.ಐ.ಟಿ, ಐ.ಐ.ಎಮ್, ಐ.ಐ.ಎಸ್.ಇ.ಆರ್, ಎ.ಐ.ಐ.ಎಂ.ಎಸ್, ಎನ್.ಎಲ್.ಯು, ಐ.ಎನ್.ಐ ಮತ್ತು ಐ.ಯು.ಎಸ್.ಎಲ್.ಎ ಇತ್ಯಾದಿ ಸರ್ಕಾರದಿಂದ ಶಾಸನಬದ್ಧ ಅನುಮತಿ ಪಡೆದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ಕೋರ್ಸ್ ಪೂರ್ಣ ಅವಧಿಯಲ್ಲಿ ಒಂದು ಬಾರಿಗೆ  ಪ್ರೋತ್ಸಾಹಧನವನ್ನು ಪಡೆಯಲು ಸೇವಾಸಿಂಧು ತಂತ್ರಾಂಶ https://sevasindhu.karnataka.gov.in/sevasindhu/DepartmentService ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

  • ಕೋಟ: ಕಳ್ಳತನ ಆರೋಪಿಯ ಬಂಧನ, ಸ್ವತ್ತು ವಶ

    ಕೋಟ, ಜೂನ್ 30, 2025: ಶಿರಿಯಾರ ಗ್ರಾಮದ ಶೀರ್ಣ ಕ್ರಾಸ್‌ ಬಳಿಯ ನಂದಿಕೇಶ್ವರ ಫಾಸ್ಟ್‌ ಫುಡ್‌ ಅಂಗಡಿಯ ಮಾಲೀಕ ಚೇತನ್‌ ದೇವಾಡಿಗ ಎಂಬವರು ತಮ್ಮ ಅಂಗಡಿಯಲ್ಲಿ ದಿನಾಂಕ 14.05.2025 ರಂದು ರಾತ್ರಿ 9:30 ಗಂಟೆಗೆ ಬೀಗ ಹಾಕಿ ಮನೆಗೆ ತೆರಳಿದ್ದರು. ಮರುದಿನ ಬೆಳಿಗ್ಗೆ 8:30 ಗಂಟೆಗೆ ಅಂಗಡಿಗೆ ಬಂದಾಗ, ಕಳ್ಳರು ಹಿಂಬದಿಯ ಶೀಟನ್ನು ಕತ್ತರಿಸಿ ಒಳಗಿನ ಸ್ವತ್ತುಗಳನ್ನು ಕಳವು ಮಾಡಿಕೊಂಡಿರುವುದು ಕಂಡುಬಂದಿತು. ಈ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ ಅ.ಕೃ. 97/25, ಕಲಂ 305, 331(4) ಬಿಎನ್‌ಎಸ್‌ ರಂತೆ ಪ್ರಕರಣ ದಾಖಲಾಗಿದೆ.

    ಪೊಲೀಸ್‌ ಉಪಾಧೀಕ್ಷಕ ಶ್ರೀ ಪ್ರಭು ಡಿ.ಟಿ. ಹಾಗೂ ಬ್ರಹ್ಮಾವರ ವೃತ್ತ ನಿರೀಕ್ಷಕ ಶ್ರೀ ಗೋಪಿಕೃಷ್ಣ ರವರ ಮಾರ್ಗದರ್ಶನದಲ್ಲಿ, ಕೋಟಾ ಪೊಲೀಸ್‌ ಠಾಣೆಯ ಪೊಲೀಸ್‌ ಉಪ-ನಿರೀಕ್ಷಕ ರಾಘವೇಂದ್ರ ಸಿ., ಪಿಎಸ್‌ಐ (ಕಾನೂನು ಮತ್ತು ಸುವ್ಯವಸ್ಥೆ) ಸುಧಾಪ್ರಭು, ಪಿಎಸ್‌ಐ (ತನಿಖೆ) ಹಾಗೂ ಸಿಬ್ಬಂದಿಗಳಾದ ಕೃಷ್ಣ ಶೇರೆಗಾರ, ವಿಜಯೇಂದ್ರ, ಮತ್ತು ದುಂಡಪ್ಪ ರವರು ಕಾರ್ಯಾಚರಣೆಯಲ್ಲಿ ಭಾಗವಹಿಸಿ, ಆರೋಪಿ ರಾಕೇಶ್‌ ಎಂಬಾತನನ್ನು ಬಂಧಿಸಿದ್ದಾರೆ. ಆತನಿಂದ ಸುಮಾರು 70,000 ರೂ. ಮೌಲ್ಯದ ಕಳವುಗೊಂಡ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

    ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಉಡುಪಿ ಜಿಲ್ಲಾ ಪೊಲೀಸ್‌ ಅಧೀಕ್ಷಕ ಶ್ರೀ ಹರಿರಾಮ ಶಂಕರ್‌, ಐಪಿಎಸ್‌, ಹೆಚ್ಚುವರಿ ಪೊಲೀಸ್‌ ಅಧೀಕ್ಷಕರಾದ ಶ್ರೀ ಸುಧಾಕರ ನಾಯ್ಕ್‌ ಮತ್ತು ಶ್ರೀ ಪರಮೇಶ್ವರ ಹೆಗಡೆ ರವರು ಅಭಿನಂದಿಸಿದ್ದಾರೆ.

  • ಬ್ರಹ್ಮಾವರ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿ ಆರೋಪಿಗಳ ಬಂಧನ

    ಬ್ರಹ್ಮಾವರ, ಜೂನ್ 30, 2025: ಪೊಲೀಸ್ ಠಾಣಾ ವ್ಯಾಪ್ತಿಯ ಕುಂಜಾಲು ಎಂಬಲ್ಲಿ ದನದ ತಲೆ ಬುರುಡೆ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿ ತಲೆಮರೆಸಿಕೊಂಡಿದ್ದು, ಆತನನ್ನು ಪತ್ತೆಹಚ್ಚುವ ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಸಂಬಂಧ ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ ಶಂಕರ್ ಅವರು ಮಾಹಿತಿ ನೀಡಿದರು.

    ಬಂಧಿತ ಆರೋಪಿಗಳಾದ ರಾಮ (49), ಪ್ರಸಾದ್ (21), ನವೀನ್ (35), ಕೇಶವ ನಾಯ್ಕ್ (50), ಸಂದೇಶ (35), ಮತ್ತು ರಾಜೇಶ್ (28) ಎಲ್ಲರೂ ಕುಂಜಾಲು ಗ್ರಾಮದ ನಿವಾಸಿಗಳಾಗಿದ್ದಾರೆ. ಇವರು ದನವನ್ನು ಖರೀದಿಸಿ ಮಾಂಸ ಮಾಡಿ, ಅದರ ಕಳೆಬರವನ್ನು ವಿಲೇವಾರಿ ಮಾಡಲು ಸ್ಕೂಟರ್‌ನಲ್ಲಿ ಸಾಗಿಸುತ್ತಿದ್ದಾಗ ದನದ ತಲೆ ಬುರುಡೆ ಮತ್ತು ಇತರ ಭಾಗಗಳು ರಸ್ತೆಗೆ ಬಿದ್ದಿರುವುದಾಗಿ ಮಾಹಿತಿ ಲಭ್ಯವಾಗಿದೆ.

    ತನಿಖೆಯಲ್ಲಿ, ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ ಆರೋಪಿಗಳನ್ನು ಪತ್ತೆಹಚ್ಚಲು ಯಶಸ್ವೀಯಾಗಿದ್ದಾರೆ.

  • NNO Community Center Udupi Set to Open Soon with Focus on Education and Empowerment

    UDUPI, June 30, 2025 – The Namma Naada Okkoota (NNO) Community Center in Udupi is gearing up for its grand opening, bringing a range of services aimed at enhancing education, employment, and empowerment to the local community. Located at Court Road, Panchrathna Paradise, Chitpady, Udupi, the center is poised to become a vital hub for residents seeking guidance and support.

    The center will offer a variety of services, including educational and scholarship guidance, career and skill development support, assistance with government schemes and facilities, medical and insurance guidance, as well as public services and data collection. This initiative reflects NNO’s ongoing commitment to community development, building on its previous efforts such as organizing scholarship distributions, awareness programs, and honor ceremonies in Kundapur, Udupi and Kaup.

    The opening, announced with an enthusiastic “Opening Soon” campaign, is expected to provide a significant boost to the region, offering resources and opportunities to empower local individuals and families. Community leaders have expressed excitement about the center’s potential to foster growth and unity.

    Stay tuned for more updates on the official inauguration date and additional services to be introduced by the NNO Community Center Udupi.

  • ಕುಂದಾಪುರ : ನಮ್ಮ ನಾಡ ಒಕ್ಕೂಟ ಕಮ್ಯುನಿಟಿ ಸೆಂಟರ್ ವತಿಯಿಂದ ವಿದ್ಯಾರ್ಥಿ ವೇತನ ಮಾಹಿತಿ ಕಾರ್ಯಾಗಾರ

    ಕುಂದಾಪುರ: ನಮ್ಮ ನಾಡ ಒಕ್ಕೂಟ ಕಮ್ಯುನಿಟಿ ಸೆಂಟರ್ ಕುಂದಾಪುರ ಇವರ ಆಶ್ರಯದಲ್ಲಿ ಪ್ರೌಢಶಾಲಾ, ಕಾಲೇಜು ಹಾಗು ಉನ್ನತ ವ್ಯಾಸಂಗ ಮಾಡುತ್ತಿರುವ ಆಯ್ದು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಹಾಗೂ ಮಾದಕ ದ್ರವ್ಯ ಸೇವೆನೆಯಿಂದ ಆಗುವ ಅನಾಹುತದ ಬಗ್ಗೆ ಮತ್ತು ಮಾನಸಿಕ ಒತ್ತಡದ ಮಾಹಿತಿ ಕಾರ್ಯಾಗಾರ ಮಂಗಳವಾರ ಎನ್.ಎನ್.ಓ ಕಮ್ಯುನಿಟಿ ಸೆಂಟರ್ ಮಿನಿ ಸಭಾಭವನ ಕುಂದಾಪುರ ನಡೆಯಿತು.

    ಇತ್ತೀಚಿಗಷ್ಟೇ ಕರಾಟೆ ಸ್ಪರ್ಧೆಯಲ್ಲಿ 9 ವರ್ಷದೊಳಗಿನ +35 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಹಾಗು ಕಂಚಿನ ಪದಕ ಪಡೆದ ಅಮೈರಾ ಅವರಿಗೆ ಕುಂದಾಪುರ ಎನ್.ಎನ್.ಒ ಕಮ್ಯೂನಿಟಿ ಸೆಂಟರ್ ವತಿಯಿಂದ ಗುರುತಿಸಿ, ಗೌರವಿಸಿ ಸನ್ಮಾನಿಸಲಾಯಿತು.

    ಕುಂದಾಪುರ ಎನ್.ಎನ್.ಒ ಕಮ್ಯೂನಿಟಿ ಸೆಂಟರ್ ಅಧ್ಯಕ್ಷ ಅಬ್ದುಲ್ ಮುನಾಫ್ ಹಂಗಾರಕಟ್ಟೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

    ಮಾತಾ ಆಸ್ಪತ್ರೆಯ ಆಡಳಿತಮಂಡಳಿ ನಿರ್ದೇಶಕರಾದ ಡಾ ಪ್ರಕಾಶ್ ತೋಳಾರ್, ನಮ್ಮ ನಾಡ ಒಕ್ಕೂಟ ಜಿಲ್ಲಾಧ್ಯಕ್ಷ ಮುಸ್ತಾಕ್ ಅಹ್ಮದ್ ಬೆಳ್ವೆ, ನಮ್ಮ ನಾಡ ಒಕ್ಕೂಟ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಝಹಿರ್ ಅಹ್ಮದ್, ಎನ್.ಎನ್.ಓ ಕುಂದಾಪುರ ಘಟಕಾಧ್ಯಕ್ಷ ಎಸ್. ದಸ್ತಗಿರ್ ಸಾಹೇಬ್ ಕಂಡ್ಲೂರು, ಕಾರ್ಯಕ್ರಮದ ಸಂಯೋಜಕರಾದ ಅಬುಮೊಹಮ್ಮದ್ ಕುಂದಾಪುರ, ಮನ್ಸೂರ್ ಇಬ್ರಾಹಿಂ, ಕಮ್ಯೂನಿಟಿ ಸೆಂಟರ್ ನ ಉಪಾಧ್ಯಕ್ಷ ರಾದ ಜಮಾಲ್ ಗುಲ್ವಾಡಿ, ಕೋಶಾಧಿಕಾರಿ ಎಸ್ ಅನ್ವರ್ ಕಂಡ್ಲೂರ್, ನಮ್ಮ ನಾಡ ಒಕ್ಕೂಟ ಕೋಶಾಧಿಕಾರಿ ಪೀರ್ ಸಾಹೇಬ್, ಟಿ ಎಸ್ ಅನ್ಸಾರ್ ಉಡುಪಿ, ಮೊಹಮ್ಮದ್, ಗುಲ್ವಾಡಿ, ಅಬ್ದುಲ್ ಖಾದರ್ ಮೂಡ್ ಗೋಪಾಡಿ, ನಿಹಾರ್ ಅಹ್ಮದ್, ಜಾವದ್ ಅಕ್ಬರ್ ಹಂಗಾರಕಟ್ಟೆ ಉಪಸ್ಥಿತರಿದ್ದರು.

    ಕುಂದಾಪುರ ಎನ್.ಎನ್.ಒ ಕಮ್ಯೂನಿಟಿ ಸೆಂಟರ್ ಪ್ರಧಾನ ಕಾರ್ಯದರ್ಶಿ ಹುಸೈನ್ ಹೈಕಾಡಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ನಮ್ಮ ನಾಡ ಒಕ್ಕೂಟ ಎನ್.ಎನ್.ಒ ಕಮ್ಯೂನಿಟಿ ಸೆಂಟರ್ ಸದಸ್ಯ ಪಳ್ಳಿ ಉಸ್ಮಾನ್ ಗುಲ್ವಾಡಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.