Category: Udupi District

  • ಕುಂದಾಪುರ: ಯುವತಿ ಕಾಣೆಯಾದ ಪ್ರಕರಣ; ಪೊಲೀಸ್ ಠಾಣೆಯಲ್ಲಿ ದೂರು ದಾಖಲು

    ಕುಂದಾಪುರ, ಜೂನ್ 14: ವಡೇರಹೋಬಳಿ ಗ್ರಾಮದ ರವಿ (38) ಎಂಬವರ 21 ವರ್ಷದ ಮಗಳು, ಮಾಬುಕಳದ ಫಾರ್ಚುನ್ ಅಕ್ಯಾಡಮಿ ಆಫ್ ಹೆಲ್ತ್ ಸೈನ್ಸ್ ಕಾಲೇಜಿನ ಎರಡನೇ ವರ್ಷದ ನರ್ಸಿಂಗ್ ವಿದ್ಯಾರ್ಥಿನಿ, ದಿನಾಂಕ 13/06/2025ರಂದು ಬೆಳಿಗ್ಗೆ 8 ಗಂಟೆಗೆ ಮಂಗಳೂರಿನಲ್ಲಿ ನಡೆಯುವ ಕ್ಯಾಂಪ್‌ಗೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದಾರೆ. ಆದರೆ, ಅವರು ಇದುವರೆಗೂ ಮನೆಗೆ ವಾಪಸ್ಸಾಗಿಲ್ಲ.

    ಕಾಲೇಜಿನಲ್ಲಿ ವಿಚಾರಿಸಿದಾಗ, ಯಾವುದೇ ಕ್ಯಾಂಪ್ ಆಯೋಜನೆಯಾಗಿರಲಿಲ್ಲ ಎಂದು ತಿಳಿದುಬಂದಿದೆ. ಈ ಸಂಬಂಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 79/2025ರಡಿ, ಕಾಣೆಯಾದ ಯುವತಿಯ ಬಗ್ಗೆ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.

  • ಮದುವೆಯಾಗುವುದಾಗಿ ನಂಬಿಸಿ, ಮೋಸ: ಯುವತಿ ಆತ್ಮಹತ್ಯೆಗೆ ಯತ್ನ

    ಶಂಕರನಾರಾಯಣ: ಮದುವೆಯಾಗುವುದಾಗಿ ನಂಬಿಸಿ ಪ್ರಿಯಕರ ಮೋಸ ಮಾಡಿರುವ ಹಿನ್ನೆಲೆ ಯುವತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕುಂದಾಫುರ ತಾಲೂಕಿನ ಸಿದ್ಧಾಪುರ ಗ್ರಾಮದಲ್ಲಿ ನಡೆದಿದೆ.
    ಆತ್ಮಹತ್ಯೆಗೆ ಯತ್ನಿಸಿದ ಯುವತಿಯನ್ನು ಕುಂದಾಪುರ ತಾಲೂಕಿನ ಸಿದ್ಧಾಪುರ ಗ್ರಾಮದ ಅನುಷಾ(23) ಎಂದು ಗುರುತಿಸಲಾಗಿದೆ.
    ಅನುಷಾ ಅವರ ಅಣ್ಣ ಅರುಣ ಎನ್ನುವವರ ಪಿಕಪ್‌ ವಾಹನಕ್ಕೆ ಸುಮಾರು ಆರು ತಿಂಗಳ ಡ್ರೈವರ್‌ ಆಗಿ ಸೇರಿಕೊಂಡಿದ್ದ ಹಳ್ಳಿಹೊಳೆಯ ಭರತ್‌ ಎಂಬಾತ ಅನುಷಾಳನ್ನು ಪ್ರೀತಿಯ ಬಲೆಗೆ ಬೀಳಿಸಿದ್ದ. ಈ ವಿಚಾರ ಅನುಷಾಳ ಮನೆಯವರಿಗೆ ಎರಡು ತಿಂಗಳ ಹಿಂದೆ ತಿಳಿದುಬಂದಿದ್ದು, ಈ ಬಗ್ಗೆ ಅನುಷಾಳ ಬಳಿ ವಿಚಾರಿಸಿದಾಗ ಆತನು ತನ್ನನ್ನ ಮದುವೆಯಾಗುವುದಾಗಿ ಹೇಳಿದ್ದಾನೆ ಎಂದು ಹೇಳಿದ್ದಾಳೆ. ಆಕೆ ಪರಿಶಿಷ್ಟ ಜಾತಿಯವಳು ಎಂದು ತಿಳಿದಿದ್ದರೂ ಕೂಡ ಆಕೆಯನ್ನು ಪ್ರೀತಿ ಮಾಡುತ್ತಿದ್ದ ಆತ, ಕೆಲವೊಮ್ಮೆ ಅನುಷಾಳನ್ನು ಸಿದ್ಧಾಪುರದಿಂದ ಆತನ ಬೈಕ್ ನಲ್ಲಿ ತಾರೆಕೊಡ್ಲು ಬಸ್ ನಿಲ್ದಾಣಕ್ಕೆ ತಂದು ಬಿಟ್ಟು ಹೋಗುತ್ತಿದ್ದನು.
    ಭರತ್‌ ನ ಬಳಿ ಮದುವೆ ವಿಚಾರ ಪ್ರಸ್ತಾಪಿಸಿದಾಗ ಆತ ತಾನು ನಿನ್ನನ್ನು ಮದುವೆ ಆಗುವುದಿಲ್ಲ ಎಂದು ತಿಳಿಸಿದ್ದಾನೆ. ಇದರಿಂದ ಮನನೊಂದ ಯುವತಿ ಇಲಿ ಪಾಷಾಣವನ್ನು ಸೇವಿಸಿದ್ದು,ಕೂಡಲೇ ಆಕೆಯನ್ನು ಚಿಕಿತ್ಸೆಗಾಗಿ ಕುಂದಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ಯುವತಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅನುಷಾ ಪರಿಶಿಷ್ಟ ಜಾತಿಗೆ ಸೇರಿದವಳು ಎನ್ನುವ ಕಾರಣಕ್ಕೆ ಭರತ್‌ ಆಕೆಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾನೆ ಎನ್ನಲಾಗಿದೆ.
    ಈ ಬಗ್ಗೆ ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

  • NNO Kundapur Community Center Hosts Drug Abuse Awareness Workshop and Scholarship Distribution

    Kundapur, June 13, 2025: Highlighting the dangers of drug abuse among children and adolescents, Sub-Inspector Nanja Naik of Kundapur Police Station emphasized that young individuals, due to their impressionable age and lack of decision-making maturity, are highly vulnerable to addictions such as substance abuse. Speaking at an awareness workshop organized by Namma Nada Okkoota Community Center, Kundapur, he noted that drug consumption impairs brain function, severely impacts health, and in some cases, can lead to tragic outcomes like suicide.

    The event, held on Thursday at the Mini Auditorium of Namma Nada Okkoota Community Center, combined a felicitation ceremony with an informative session on the adverse effects of drug abuse. The workshop aimed to educate the community about the growing issue of substance abuse among youth.

    Mou. Zameer Ahmad Rashadi, General Secretary of the Namma Nada Okkoota Central Committee, delivered a contextual address. The program was chaired by Abdul Munaf Hangarakatte, President of the Namma Nada Okkoota Community Center, Kundapur.

    During the event, scholarships were distributed to 40 students pursuing high school, college, and higher education. Additionally, Ilhan Javed was honored for securing gold and bronze medals in a karate competition. Sub-Inspector Nanja Naik was also felicitated for his contributions.

    The event was attended by key members of the Namma Nada Okkoota Community Center, including Treasurer S. Anwar Kandluru, program coordinators G. Mohammad Gulvadi, Mansoor Ibrahim, Nihar Ahmad, and others. Hussein Haikady, General Secretary of the Community Center, welcomed the attendees and anchored the program.

  • ಕುಂದಾಪುರ: ಸಾರ್ವಜನಿಕ ಸ್ಥಳದಲ್ಲಿ ಜೂಜಾಟ; 10 ಮಂದಿಯ ಬಂಧನ

    ಕುಂದಾಪುರ: ಸಿದ್ದಾಪುರ ಗ್ರಾಮದ ಮಂಜುನಾಥ್ ಕಾಂಪ್ಲೆಕ್ಸ್ ಕಟ್ಟಡದ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ಸಂಘಟಿತರಾಗಿ ಹಣವನ್ನು ಪಣವಾಗಿರಿಸಿ ಅಂದರ್ ಬಾಹರ್ ಜೂಜಾಟ ಆಟ ಆಡುತ್ತಿದ್ದ 10 ಮಂದಿ ಆರೋಪಿಗಳನ್ನು ಬಂಧಿಸಿದ ಘಟನೆ ನಡೆದಿದೆ.

    ಬಂಧಿತ ಆರೋಪಿಗಳನ್ನು ಬಂಧಿತರನ್ನು ಸುಬ್ರಹ್ಮಣ್ಯ, ಅಶ್ರಫ್, ಸುನೀಲ್, ಧೀರಜ್, ಶಂಕರ, ಸುಧೀರ್ ಕುಮಾರ್, ಮಧುಕರ, ಮನೋಹರ, ಗಣೇಶ್, ರಾಮ್ ಎಂದು ಗುರುತಿಸಲಾಗಿದೆ.

    ಬಂಧಿತರಿಂದ 8,810 ರೂ ನಗದು, 10 ಮೊಬೈಲ್ ಫೋನ್, ಜೂಜಾಟ ಆಡಲು ಬಂದಿದ್ದ 3 ಮೋಟಾರು ಸೈಕಲ್ ಸೇರಿದಂತೆ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ದೊಂಬೆ; ಗುಡ್ಡ ಕುಸಿದ ಪ್ರದೇಶಕ್ಕೆ ಅಧಿಕಾರಿಗಳ ಬೇಟಿ

    ಬೈಂದೂರು: ಇಲ್ಲಿನ ಪಡುವರಿ ಗ್ರಾಮದ ದೊಂಬೆ ಪುಂಡನಮನೆ ತ್ರಿಶೂಲ ಜಟ್ಟಿಗೇಶ್ವರ ದೇವಸ್ಥಾನದ ಬಳಿ ಗುಡ್ಡ ಕುಸಿದ ಸ್ಥಳಕ್ಕೆ ಶುಕ್ರವಾರ ವಿವಿಧ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಭಾಗದಲ್ಲಿ ಗುಡ್ಡ ಕುಸಿದಿರುವ ಬಗ್ಗೆ ಪತ್ರಿಕೆ ಬೆಳಕು ಚೆಲ್ಲಿತ್ತು.

    ವರದಿಗೆ ಸ್ಪಂಧಿಸಿ ಬೇಟಿ ನೀಡಿದ ಅಧಿಕಾರಿಗಳು ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮಕೈಗೊಳ್ಳುವ ಜೊತೆಗೆ ಈಗಾಗಲೇ ರಸ್ತೆಗೆ ಬಾಗಿಕೊಂಡ ಮರಗಳನ್ನು ಕಡಿಯಲಾಗಿದ್ದು.ಮುಂದೆ ಗುಡ್ಡ ಕುಸಿತ ಉಂಟಾದಲ್ಲಿ ಹಿಟಾಚಿ ಮೂಲಕ ಗುಡ್ಡದ ಮಣ್ಣನ್ನು ತೆರವುಗೊಳಿಸಲಾಗುವುದು.

    ಸಂಚಾರದ ಸುರಕ್ಷತೆಗಾಗಿ ಗುಡ್ಡದ ಕುಸಿತದ ಭಾಗದಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿದ್ದು  ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.ಕಳೆದ ವರ್ಷ ಸೋಮೇಶ್ವರ ಗುಡ್ಡ ಕುಸಿದು ಬಹಳಷ್ಟು ಸಮಸ್ಯೆ ಆಗಿದ್ದು ಈ ವರ್ಷ ಸಾಕಷ್ಟು ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

    ಸ್ಥಳಕ್ಕೆ ಬೈಂದೂರು ತಹಶೀಲ್ದಾರ ಭೀಮಸೇನ ಕುಲಕರ್ಣಿ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅಜಯ್ ಭಂಡಾರ್‌ಕರ್,ಬೈಂದೂರು ವಲಯ ಅರಣ್ಯಾಧಿಕಾರಿ ಸಂದೇಶ ಕುಮಾರ್,ಬೈಂದೂರು ಮೆಸ್ಕಾಂ ಇಲಾಖೆಯ ಉಪವಿಭಾಗಾಧಿಕಾರಿ ಹರೀಶ್,ಕರಾವಳಿ ಕಾವಲು ಪಡೆಯ ಪಿ.ಎಸ್.ಐ  ಸುಬ್ರಹ್ಮಣ್ಯ,ಉಪವಲಯ ಅರಣ್ಯಾಧಿಕಾರಿ ಹರ್ಷ ವಿ,ಮಾಜಿ ಗ್ರಾ.ಪಂ ಸದಸ್ಯ ಸಂಜೀವ ಮೊಗವೀರ,ಅರಣ್ಯ ವೀಕ್ಷಕ ಶಂಕರ,ಅರಣ್ಯ ಇಲಾಖೆಯ ಸಿಬಂದಿಗಳು,ಪಟ್ಟಣ ಪಂಚಾಯತ್ ಸಿಬಂದಿಗಳು,ಕರಾವಳಿ ಕಾವಲು ಪಡೆಯ ಸಿಬಂದಿಗಳು ಹಾಗೂ ಮೆಸ್ಕಾಂ ಇಲಾಖೆಯ ಸಿಬಂದಿಗಳು ಹಾಜರಿದ್ದರು.

  • ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳಿಗೆ ನಿರ್ಬಂಧ: ಉಡುಪಿ ಜಿಲ್ಲಾಡಳಿತ

    ಉಡುಪಿ, ಜೂನ್ 13, 2025: ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯಲ್ಲಿ ಭಾರಿ ಮಳೆ ಮತ್ತು ಭಾರಿ ವಾಹನಗಳ ಓಡಾಟದಿಂದ ರಸ್ತೆ ಬದಿಯಲ್ಲಿ ಭೂಕುಸಿತದ ಸಂಭವ ಇರುವ ಹಿನ್ನೆಲೆಯಲ್ಲಿ, ಉಡುಪಿ ಜಿಲ್ಲಾಡಳಿತವು ಜೂನ್ 15, 2025 ರಿಂದ ಸೆಪ್ಟೆಂಬರ್ 30, 2025 ರವರೆಗೆ ಈ ಮಾರ್ಗದಲ್ಲಿ ಭಾರಿ ವಾಹನಗಳ (Heavy Vehicles) ಸಂಚಾರವನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.

    ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಅವರ ನೇತೃತ್ವದಲ್ಲಿ ಹೊರಡಿಸಲಾದ ಅಧಿಕೃತ ಅಧಿಸೂಚನೆಯ ಪ್ರಕಾರ, ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಮತ್ತು ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳ 1989ರ ಕಲಂ 221(ಎ)(2) ಹಾಗೂ (5) ಅನ್ವಯ ಈ ನಿರ್ಬಂಧವನ್ನು ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿ ಆಗುಂಬೆ ಘಾಟಿಯಲ್ಲಿ ಕೇವಲ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶವಿರುತ್ತದೆ. ಮರಳು ಮತ್ತು ಸರಕು ಸಾಗಾಣಿಕೆ ವಾಹನಗಳ ಸೇರಿದಂತೆ ಭಾರಿ ವಾಹನಗಳು ಬದಲಿ ಮಾರ್ಗವನ್ನು ಬಳಸಬೇಕು.

    ಈ ಆದೇಶವು ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಇಂಜಿನಿಯರ್‌ ಅವರ ಪತ್ರ (ದಿನಾಂಕ: 11-06-2025) ಮತ್ತು ಉಡುಪಿ ಜಿಲ್ಲಾ ಪೊಲೀಸ್‌ ಅಧೀಕ್ಷಕರ ವರದಿ (ದಿನಾಂಕ: 12-06-2025) ಆಧಾರದ ಮೇಲೆ ಹೊರಡಿಸಲಾಗಿದೆ. ಭಾರಿ ಮಳೆಯಿಂದ ರಸ್ತೆಯಲ್ಲಿ ಭೂಕುಸಿತದ ಸಾಧ್ಯತೆ ಇರುವುದರಿಂದ ಈ ಕ್ರಮ ಅನಿವಾರ್ಯವಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

    ಭಾರಿ ವಾಹನಗಳ ಚಾಲಕರು ಬದಲಿ ಮಾರ್ಗದಲ್ಲಿ ಸಂಚರಿಸಬೇಕು. ಈ ಆದೇಶದ ಉಲ್ಲಂಘನೆಯಿಂದ ಉಂಟಾಗುವ ಅಡಚಣೆಗಳನ್ನು ತಪ್ಪಿಸಲು ಸಾರ್ವಜನಿಕರಿಗೆ ಸಹಕಾರ ನೀಡುವಂತೆ ಜಿಲ್ಲಾಡಳಿತ ಕೋರಿದೆ.

    ಪರ್ಯಾಯ ಮಾರ್ಗ

    ಕ್ರ.ಸಂಸಂಚಾರ ಮಾರ್ಗಬದಲಿ ಮಾರ್ಗ
    1ಉಡುಪಿ – ತೀರ್ಥಹಳ್ಳಿಉಡುಪಿ – ಕುಂದಾಪುರ – ಸಿದ್ಧಾಪುರ – ಮಾಸ್ತಿಕಟ್ಟೆ – ತೀರ್ಥಹಳ್ಳಿ
    2ಉಡುಪಿ – ತೀರ್ಥಹಳ್ಳಿಉಡುಪಿ – ಕಾರ್ಕಳ – ಮಾಳ ಘಾಟಿ – ಶೃಂಗೇರಿ – ತೀರ್ಥಹಳ್ಳಿ

    ಈ ಆದೇಶದ ಪ್ರತಿಯನ್ನು ಶಿವಮೊಗ್ಗ ಜಿಲ್ಲಾಧಿಕಾರಿಗಳು ಮತ್ತು ಶಿವಮೊಗ್ಗ ಜಿಲ್ಲಾ ಪೊಲೀಸ್‌ ಅಧೀಕ್ಷಕರಿಗೆ ಸೂಕ್ತ ಕ್ರಮಕ್ಕಾಗಿ ಕಳುಹಿಸಲಾಗಿದೆ.

  • ಉಡುಪಿ: ಅನರ್ಹ ಪಡಿತರ ಚೀಟಿದಾರರಿಗೆ ಎಚ್ಚರಿಕೆ; ಚೀಟಿ ಒಪ್ಪಿಸಿ ಅಥವಾ ರದ್ದತಿಗೆ ಸಿದ್ಧರಾಗಿ

    ಉಡುಪಿ, ಜೂನ್ 13, 2025: ಉಡುಪಿ ಜಿಲ್ಲಾಡಳಿತವು ಅಂತ್ಯೋದಯ, ಅನ್ನಯೋಜನೆ ಮತ್ತು ಆದ್ಯತಾ ಪಡಿತರ ಚೀಟಿದಾರರಿಗೆ (BPL) ಮಹತ್ವದ ಎಚ್ಚರಿಕೆಯೊಂದನ್ನು ನೀಡಿದೆ. ಸರ್ಕಾರದ ಮಾನದಂಡಗಳಿಗೆ ವಿರುದ್ಧವಾಗಿ ಪಡಿತರ ಚೀಟಿ ಪಡೆದಿರುವವರು ತಕ್ಷಣವೇ ತಮ್ಮ ಚೀಟಿಯನ್ನು ಸಂಬಂಧಿತ ತಾಲೂಕು ಕಚೇರಿಯ ಆಹಾರ ಶಾಖೆಯ ಅಧಿಕಾರಿಗಳಿಗೆ ಒಪ್ಪಿಸಿ ರದ್ದುಗೊಳಿಸಿಕೊಳ್ಳಬೇಕೆಂದು (Surrender) ಸೂಚಿಸಲಾಗಿದೆ.

    ಜಿಲ್ಲಾಡಳಿತದ ಪ್ರಕಾರ, ಕೆಲವು ಪಡಿತರ ಚೀಟಿದಾರರು ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಚೀಟಿಗಳನ್ನು ಹೊಂದಿದ್ದಾರೆ, ಇದು ಸರ್ಕಾರಿ ನಿಯಮಾವಳಿಗಳ ಉಲ್ಲಂಘನೆಯಾಗಿದೆ. ಅಂತಹವರು ತಮ್ಮ ಹೆಚ್ಚುವರಿ ಚೀಟಿಗಳನ್ನು ರದ್ದುಗೊಳಿಸಲು ಆಹಾರ ಶಾಖೆಗೆ ಮಾಹಿತಿ ನೀಡಬೇಕು. ಇದಲ್ಲದೆ, ಅನ್ನಭಾಗ್ಯ ಯೋಜನೆಯಡಿ ಉಚಿತವಾಗಿ ಒದಗಿಸಲಾದ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವ ಕೆಲವು ಕುಟುಂಬಗಳ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ಬಂದಿದೆ. ಇದು ಕಾನೂನುಬಾಹಿರವಾಗಿದ್ದು, ಇಂತಹ ಚಟುವಟಿಕೆಯಲ್ಲಿ ತೊಡಗಿರುವವರ ಪಡಿತರ ಚೀಟಿಯನ್ನು ತಕ್ಷಣ ರದ್ದುಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

    ಅನರ್ಹರ ವಿವರ:
    ಸರ್ಕಾರಿ ಮಾನದಂಡಗಳ ಪ್ರಕಾರ, ಈ ಕೆಳಗಿನ ಕುಟುಂಬಗಳು ಆದ್ಯತಾ ಪಡಿತರ ಚೀಟಿಗೆ ಅನರ್ಹವಾಗಿವೆ:

    1. ಸರ್ಕಾರಿ/ಸರ್ಕಾರಿ ಸಂಸ್ಥೆಯ ಖಾಯಂ ನೌಕರರು: ಆದಾಯ ತೆರಿಗೆ, ಸೇವಾ ತೆರಿಗೆ, ವ್ಯಾಟ್ ಅಥವಾ ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು.
    2. ಭೂಮಿ ಮತ್ತು ಆಸ್ತಿ: ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ, ಅಥವಾ ನಗರ ಪ್ರದೇಶದಲ್ಲಿ 1000 ಚದರ ಅಡಿಗಿಂತ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆ ಹೊಂದಿರುವ ಕುಟುಂಬಗಳು.
    3. ವಾಹನ ಮಾಲೀಕತ್ವ: ಟ್ರಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಮುಂತಾದ ಒಂದು ವಾಣಿಜ್ಯ ವಾಹನವನ್ನು ಜೀವನೋಪಾಯಕ್ಕಾಗಿ ಒಡಿಸುವ ಕುಟುಂಬಗಳನ್ನು ಹೊರತುಪಡಿಸಿ, ನಾಲ್ಕು ಚಕ್ರದ ವಾಹನ ಹೊಂದಿರುವ ಕುಟುಂಬಗಳು.
    4. ಆದಾಯ ಮಿತಿ: ವಾರ್ಷಿಕ ಆದಾಯವು 1.20 ಲಕ್ಷ ರೂ.ಗಿಂತ ಹೆಚ್ಚಿರುವ ಕುಟುಂಬಗಳು.

    ಜಿಲ್ಲಾಡಳಿತವು ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತದೆ ಮತ್ತು ಅನರ್ಹ ಕುಟುಂಬಗಳು ತಮ್ಮ ಪಡಿತರ ಚೀಟಿಗಳನ್ನು ಒಪ್ಪಿಸದಿದ್ದರೆ, ಅವರು ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಲಾಗಿದೆ.

  • ಅಹಮದಾಬಾದ್ ವಿಮಾನ ಪತನ: ಜಮಾಅತ್ ಇಸ್ಲಾಮಿ ಹಿಂದ್ ಸಂತಾಪ

    ಅಹಮದಾಬಾದ್‌ನಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದ ಸುದ್ದಿ ಕೇಳಿ ನಮಗೆ ತೀವ್ರ ಆಘಾತ ಮತ್ತು ಅತೀವ ದುಃಖವಾಗಿದೆ. ಈ ಘೋರ ದುರ್ಘಟನೆಯಲ್ಲಿ ವಿವಿಧ ದೇಶಗಳ ಪ್ರಯಾಣಿಕರು, ಕಾಲೇಜಿನ ಹಲವಾರು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಸೇರಿದಂತೆ ಅನೇಕ ಅಮಾಯಕ ಜೀವಗಳು ಬಲಿಯಾಗಿರುವುದು ಅತ್ಯಂತ ನೋವಿನ ಸಂಗತಿ. ಭಾರತದಲ್ಲಿ ಮತ್ತು ವಿದೇಶದಲ್ಲಿರುವ ಎಲ್ಲಾ ಮೃತರ ಕುಟುಂಬಗಳಿಗೆ ನಮ್ಮ ಅತೀವ ಸಂತಾಪವನ್ನು ವ್ಯಕ್ತಪಡಿಸುತ್ತೇವೆ. ಈ ಅಪಾರ ದುಃಖದ ಸಮಯದಲ್ಲಿ ದೇವನು ಅವರಿಗೆ ಶಕ್ತಿ ಮತ್ತು ಸಹನೆಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಜಮಾಅತೆ ಇಸ್ಲಾಮಿ ಹಿಂದ್ ಅಧ್ಯಕ್ಷರಾದ ಸೈಯದ್ ಸಾದತುಲ್ಲಾ ಹುಸೈನಿಯವರು ಹೇಳಿದ್ದಾರೆ.

    ದುರಂತ ಸ್ಥಳದಿಂದ ಹೊರಹೊಮ್ಮುತ್ತಿರುವ ದೃಶ್ಯಗಳು ನಿಜಕ್ಕೂ ಹೃದಯ ಕಲಕುವಂತಿವೆ. ತಮ್ಮ ಪ್ರೀತಿಪಾತ್ರರ ಗುರುತು ಮತ್ತು ಸುದ್ದಿಗಾಗಿ ಕಾಯುತ್ತಿರುವ ಕುಟುಂಬಗಳ ನೋವನ್ನ ವಿವರಿಸಲು ಪದಗಳಿಲ್ಲ. ರಕ್ಷಣಾ ಮತ್ತು ಪುನರ್ವಸತಿ ಕಾರ್ಯಾಚರಣೆಯಲ್ಲಿ ಅವಿರತವಾಗಿ ಶ್ರಮಿಸಿದ ಸ್ಥಳೀಯ ಅಧಿಕಾರಿಗಳು, ಪ್ರಥಮ ಪ್ರತಿಸ್ಪಂದಕರು ಮತ್ತು ಸ್ವಯಂಸೇವಕರ ಕಾರ್ಯವನ್ನು ನಾವು ತುಂಬು ಹೃದಯದಿಂದ ಶ್ಲಾಘಿಸುತ್ತೇವೆ.

    ಈ ದುರಂತ ಘಟನೆಗೆ ಕಾರಣಗಳನ್ನು ನಿರ್ಧರಿಸಲು ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು, ಸರ್ಕಾರವು ಸಮಗ್ರ ತನಿಖೆ ನಡೆಸಿ, ಹೊಣೆಗಾರಿಕೆ ಮತ್ತು ಸುರಕ್ಷತೆಯ ಕುರಿತು ಶೀಘ್ರ ಕ್ರಮಗಳನ್ನು ಕೈಗೊಳ್ಳಬೇಕೆಂದು ಈ ಮೂಲಕ ನಾವು ಒತ್ತಾಯಿಸುತ್ತೇವೆ.

    ಜಮಾಅತೆ ಇಸ್ಲಾಮಿ ಹಿಂದ್ ಈ ದುರ್ಘಟನೆಯಿಂದ ಬಾಧಿತರಾದ ಎಲ್ಲಾ ಕುಟುಂಬಗಳಿಗ ಸಂತಾಪವನ್ನು ಸೂಚಿಸುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಉಡುಪಿ ಜಿಲ್ಲೆ: ಪೊಲೀಸ್ ಠಾಣೆಗಳಲ್ಲಿ ವಿಶ್ವ ಬಾಲ ಕಾರ್ಮಿಕರ ವಿರೋಧಿ ದಿನದಂದು ಬಾಲ ಕಾರ್ಮಿಕರ ಸೇವೆಯನ್ನು ತಡೆಗಟ್ಟುವ ಪ್ರತಿಜ್ಞೆ

    ಉಡುಪಿ, ಜೂನ್ 12, 2025: ವಿಶ್ವ ಬಾಲ ಕಾರ್ಮಿಕರ ವಿರೋಧಿ ದಿನದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಬಾಲ ಕಾರ್ಮಿಕರ ಸೇವೆಯನ್ನು ಪಡೆಯದಿರುವ ಬಗ್ಗೆ ಪ್ರತಿಜ್ಞೆ ಸ್ವೀಕರಿಸಲಾಯಿತು. ಈ ಕಾರ್ಯಕ್ರಮವು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ನಡೆಯಿತು.

    ಪೊಲೀಸ್ ಠಾಣೆಗಳಲ್ಲಿ ಈ ಸಂದರ್ಭದಲ್ಲಿ ಬಾಲ ಕಾರ್ಮಿಕರ ಶೋಷಣೆಯನ್ನು ತಡೆಗಟ್ಟುವ ಮತ್ತು ಅವರ ಶಿಕ್ಷಣ ಹಾಗೂ ಯೋಗಕ್ಷೇಮವನ್ನು ಖಾತ್ರಿಪಡಿಸುವ ಬಗ್ಗೆ ಒತ್ತು ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಪೊಲೀಸ್ ಸಿಬ್ಬಂದಿ, ಸ್ಥಳೀಯ ಅಧಿಕಾರಿಗಳು ಮತ್ತು ಸಮುದಾಯದ ಪ್ರಮುಖರು ಭಾಗವಹಿಸಿದ್ದರು.

  • One killed, three injured in bus-autorickshaw collision on Karkala-Padubidri Highway

    Karkala: In a tragic incident, one person was killed in a head-on collision between a autorickshaw and a bus on the Karkala-Padubidri highway on Thursday, June 12 morning.

    An accident occurred between a private bus coming from Mangaluru to Karkala and an auto rickshaw near Adve, Kanjarkatte junction. As a result, One died on the spot and two were severely injured in the incident.

    Pratap, a native of North India, died on the spot. The rickshaw driver is seriously injured.

    The victims were immediately rushed to the hospital.