Category: Udupi District

  • ನಾಳೆ ಎಸ್ ಡಿ ಪಿ ಐ ಕಾಪು ಕ್ಷೇತ್ರ ಸಮಿತಿ ವತಿಯಿಂದ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ

    ಕಾಪು ಮೇ 31, 2025: ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ರಕ್ತ ಸಂಗ್ರಹ ನಿಧಿಗಳಲ್ಲಿ ತೀವ್ರ ರಕ್ತದ ಕೊರತೆ ಇರುವುದನ್ನು ಮನಗಂಡು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾಪು ಕ್ಷೇತ್ರ ಸಮಿತಿ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆ ರಕ್ತ ಸಂಗ್ರಹ ನಿಧಿಯ ಸಹಯೋಗದೊಂದಿಗೆ ದಿನಾಂಕ 01/06/2025 ರ ಆದಿತ್ಯವಾರ ಬೆಳಿಗ್ಗೆ 9:00 ಗಂಟೆಯಿಂದ ಮಧ್ಯಾಹ್ನ 1:30 ರ ವರೆಗೆ ಕಾಪುವಿನ ಮಜೂರ್ ಪಂಚಾಯತ್ ಸಭಾಂಗಣದಲ್ಲಿ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿದ್ದೇವೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಾಮಾನ್ಯವಾಗಿ ಉಡುಪಿ ಜಿಲ್ಲೆಯಲ್ಲಿ ಬೇಡಿಕೆಗೆ ತಕ್ಕಹಾಗೆ ರಕ್ತದ ಪೂರೈಕೆಯಾಗುತ್ತಿತ್ತು, ಆದರೆ ಇತ್ತೀಚಿನ ದಿನಗಳಲ್ಲಿ ರಕ್ತದಾನಿಗಳ ಕೊರತೆಯಿಂದಾಗಿ ಬೇಡಿಕೆಯಷ್ಟು ರಕ್ತ ಪೂರೈಕೆಯಾಗುತ್ತಿಲ್ಲ. ಉಡುಪಿ ಜಿಲ್ಲೆಯಲ್ಲಿ ದಿನಂಪ್ರತಿ 40-60 ಯೂನಿಟ್ ರಕ್ತದ ಅವಶ್ಯಕತೆ ಇದ್ದು ಆದರೆ ರಕ್ತಸಂಗ್ರಹ ನಿಧಿಯಲ್ಲಿ ಅಷ್ಟು ಪ್ರಮಾಣದ ರಕ್ತದ ಸಂಗ್ರಹವಿಲ್ಲ. ಇದನ್ನು ಗಮನದಲ್ಲಿಟ್ಟುಕೊಂಡು ಎಸ್ ಡಿ ಪಿ ಐ ಕಾಪು ಕ್ಷೇತ್ರ ಸಮಿತಿ ವತಿಯಿಂದ ನಾಳೆ ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿದ್ದೇವೆ. ಸಾರ್ವಜನಿಕರು ಈ ರಕ್ತದಾನ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ರಕ್ತದ ಕೊರತೆಯನ್ನು ನೀಗಿಸಲು ಕೈಜೋಡಿಸಬೇಕೆಂದು ಎಸ್ ಡಿ ಪಿ ಐ ಕಾಪು ಕ್ಷೇತ್ರ ಸಮಿತಿ ಅಧ್ಯಕ್ಷರಾದ ಸಾದಿಕ್ ಕೆ ಪಿ ಯವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ

  • ಉಡುಪಿ: ಅರ್ಹ ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

    ಉಡುಪಿ, ಮೇ 30, 2025: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕ್ಯುಲರ್ ಡಿಸ್ಟೊಫಿ, ಪಾರ್ಕಿನ್ಸನ್ ಮತ್ತು ಮಲ್ಟಿಪಲ್ ಸ್ಕ್ಲೆರೋಸಿಸ್, ಆಟಿಸಂ, ಬೌದ್ಧಿಕ ವಿಕಲತೆ ಮತ್ತು ಬಹುವಿಧ ಅಂಗವಿಕಲತೆ (ಶ್ರವಣ ಅಂಧತ್ವ/ ಡೆಫ್ ಬ್ಲೈಂಡ್) ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತೀ ಮಾಹೆ 1,000 ರೂ. ಪ್ರೋತ್ಸಾಹಧನ ನೀಡಲು ಆದೇಶಿಲಾಗಿದ್ದು, ಸದರಿ ಯೋಜನೆಯ ಫಲಾನುಭವಿಗಳನ್ನು ಜಿಲ್ಲಾ ಮಟ್ಟದ ಸಮಿತಿಯಲ್ಲಿ ಆಯ್ಕೆ ಮಾಡಲಾಗುವುದು.

    ಮೇಲ್ಕಂಡ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳು ಕಡ್ಡಾಯವಾಗಿ ವಿಶಿಷ್ಟ ಗುರುತಿನ ಚೀಟಿ ಹೊಂದಿರಬೇಕು ಹಾಗೂ ಅಂಗವಿಕಲತೆಯ ಪ್ರಮಾಣ ಶೇ. 75 ಮತ್ತು ಅದಕ್ಕಿಂತ ಹೆಚ್ಚಿರಬೇಕು. ವಯಸ್ಸಿನ ಹಾಗೂ ಆದಾಯ ಮಿತಿ ಇರುವುದಿಲ್ಲ. ಜಿಲ್ಲಾ ಸಮಿತಿಯಲ್ಲಿ ಆಯ್ಕೆಯಾದ ಫಲಾನುಭವಿಗಳ ಆರೈಕೆದಾರರ ಬ್ಯಾಂಕ್ ಖಾತೆಗೆ ಪ್ರೋತ್ಸಾಹಧನವನ್ನು ಜಮೆ ಮಾಡಲಾಗುವುದು. ಅರ್ಹ ವಿಕಲಚೇತನ ವ್ಯಕ್ತಿಗಳ ಆರೈಕೆದಾರರು ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ.

    ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2574810 ಹಾಗೂ ಜಿಲ್ಲಾ ಕಛೇರಿಯ ಎಂ.ಆರ್. ಡಬ್ಲ್ಯೂ ಅಥವಾ ವಿ.ಆರ್. ಡಬ್ಲ್ಯೂ/ ಯು.ಆರ್. ಡಬ್ಲ್ಯೂ ರವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

  • ವಿಕಲಚೇತನರ ರಾಷ್ಟ್ರ ಪ್ರಶಸ್ತಿ : ಅರ್ಜಿ ಆಹ್ವಾನ

    ಉಡುಪಿ, ಮೇ 30 : ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ನವದೆಹಲಿ ಇವರ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ ಮತ್ತು ಸಂಸ್ಥೆಗಳಿಂದ ವಿವಿಧ ವಿಭಾಗಗಳಲ್ಲಿ ರಾಷ್ಟ್ರ ಪ್ರಶಸ್ತಿಗಾಗಿ ಆನ್ಲೈನ್ ಮೂಲಕ ಪ್ರಸ್ತಾವನೆಯನ್ನು ಆಹ್ವಾನಿಸಲಾಗಿದೆ.     

     ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.depwd.gov.in ಮತ್ತು www.award.gov.in ಅಥವಾ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2574810 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

  • Admissions Open for Udupi District Social Welfare Hostels; Apply Online by August 31

    Udupi, May 30,2025: The Department of Social Welfare has invited fresh applications from eligible students for admission to the 15 pre-matric and 8 post-matric boys and girls hostels currently functioning under the Department.

    Applications are invited online at https://swdhmis.karnataka.gov.in/.
    The last date to apply is August 31 this year. For more information, visit Udupi. Phone: 0820-2528884 No: 9480843209, Kundapur. Phone: 08254-230609, 298089. 9480843208 and Ph: 08258-298134, 232133. The office of the Deputy Director of Social Welfare Department can be contacted at 9480843207.

  • ಕನ್ನಡ ಕಲಿಕಾ ತರಬೇತಿ: ಅರ್ಜಿ ಆಹ್ವಾನ

    ಉಡುಪಿ, ಮೇ 30, 2025: ಜಿಲ್ಲೆಯಲ್ಲಿರುವ ಕೇಂದ್ರೋದ್ಯಮಗಳು, ಬ್ಯಾಂಕ್ಗಳು, ಕೇಂದ್ರ ಸರ್ಕಾರಿ ಕಚೇರಿಗಳು ಹಾಗೂ ವಸತಿ ಸಮುಚ್ಚಯಗಳಲ್ಲಿರುವ ಕನ್ನಡೇತರರು, ಅನ್ಯಭಾಷಿಕರಿಗೆ ಕನ್ನಡ ಕಲಿಸುವ ತರಬೇತಿ ನೀಡಲಾಗುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಬಹುದಾಗಿದೆ.  

    ಕನ್ನಡ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಕನ್ನಡೇತರರಿಗೆ ಕನ್ನಡ ಕಲಿಸುವ ಪ್ರಯತ್ನವನ್ನು ಹಲವು ವರ್ಷಗಳಿಂದ ನಿರಂತರವಾಗಿ ಕೈಗೊಳ್ಳುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಇನ್ನಷ್ಟು ವ್ಯಾಪಕಗೊಳಿಸಲು ಪ್ರಾಧಿಕಾರವು ವೈಜ್ಞಾನಿಕ ಪಠ್ಯಕ್ರಮವನ್ನು ರೂಪಿಸಿ, ತರಬೇತಿ ಹೊಂದಿದ ಶಿಕ್ಷಕರನ್ನು ಆಯೋಜಿಸುವ ಮೂಲಕ ವೃತ್ತಿಪರತೆಯನ್ನು ಒದಗಿಸಲಿದೆ.

    ಕನ್ನಡ ಕಲಿಸುವ ತರಬೇತಿಯನ್ನು 3 ತಿಂಗಳ ಅವಧಿಯಲ್ಲಿ ವಾರಕ್ಕೆ 3 ದಿನದಂತೆ ಪ್ರತಿದಿನ 01 ಗಂಟೆ ತರಬೇತಿಯನ್ನು ನೀಡಲಾಗುವುದು. ಆಸಕ್ತ ಕನ್ನಡೇತರರು ತಮ್ಮ ಸ್ವ-ವಿವರದೊಂದಿಗೆ ಜೂನ್ 7 ರ ಒಳಗಾಗಿ ಅರ್ಜಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಹಾಯಕ ನಿರ್ದೇಶಕರ ಕಛೇರಿ, ಡಾ.ಶಿವರಾಮ ಕಾರಂತ ಕಲಾಗ್ರಾಮ, ಪ್ರಗತಿ ನಗರ, ಅಲೆವೂರು ಗ್ರಾಮ, ಮಣಿಪಾಲ, ಉಡುಪಿ ಇಲ್ಲಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂ.ಸಂಖ್ಯೆ: 0820-2986168, ಮೊ.ನಂ:7026506627 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ. 

  • ಉಡುಪಿ: ಕನ್ನಡ ಭಾಷೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ವಿರುದ್ಧ ಕರವೇ ಪ್ರತಿಭಟನೆ

    ಉಡುಪಿ: ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದ್ದು ಅನ್ನೋ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ಅವರು ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಕಳೆದ 2 ದಿನಗಳಿಂದ ಕಮಲ್ ಹಾಸನ್ ವಿರುದ್ಧ ಕನ್ನಡಿಗರು ಪ್ರತಿಭಟನೆ ನಡೆಸಿ ಕ್ಷಮೆಯಾಚಿಸಲು ಪಟ್ಟು ಹಿಡಿದಿದ್ದಾರೆ.

    ಉಡುಪಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡ ಬಣದ ವತಿಯಿಂದ ಪ್ರತಿಭಟನೆ ನಡೆಯಿತು. ನಗರದ ಅಜ್ಜರಕಾಡಿನ ಹುತಾತ್ಮರ ಸ್ಮಾರಕದ ಮುಂಭಾಗದಲ್ಲಿ ಸೇರಿದ್ದ ಕರವೇ ಕಾರ್ಯಕರ್ತರು ಕಮಲ್ ಹಾಸನ್ ವಿರುದ್ಧ ದಿಕ್ಕಾರ ಕೂಗಿದರು. ಕಮಲ್ ಹಾಸನ್ ತಕ್ಷಣವೇ ಕನ್ನಡಿಗರ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಅವರು ನಟಿಸಿರುವ “ಥಗ್ ಲೈಫ್” ಸಿನಿಮಾವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

    ಕರವೇ ಜಿಲ್ಲಾಧ್ಯಕ್ಷ ಪ್ರಭಾಕರ ಪೂಜಾರಿ ಮಾತನಾಡಿ, ತಮಿಳು ನಟ ಕಮಲ್ ಹಾಸನ್ ಕನ್ನಡ ಭಾಷೆಯ ಬಗ್ಗೆ ಅವಹೇಳಕಾರಿಯಾಗಿ ಮಾತನಾಡಿದ್ದು, ಇದು ಅತ್ಯಂತ ಖಂಡನೀಯ. ಈ ಆಧಾರರಹಿತ ಹೇಳಿಕೆಯು ಕನ್ನಡ ಭಾಷೆಯ ಶ್ರೀಮಂತ ಇತಿಹಾಸ, ಸಂಸ್ಕೃತಿ ಮತ್ತು ಸ್ವಾಭಿಮಾನಕ್ಕೆ ತೀವ್ರ ಆಘಾತವನ್ನುಂಟು ಮಾಡಿದೆ. ಕನ್ನಡಿಗರಿಂದ ತೀವ್ರ ಖಂಡನೆ ಮತ್ತು ವಿರೋಧ ವ್ಯಕ್ತವಾದರೂ, ಕಮಲ್ ಹಾಸನ್ ಅವರು ತಮ್ಮ ತಪ್ಪನ್ನು ಒಪ್ಪಿಕೊಂಡು ಕ್ಷಮೆಯಾಚಿಸದೆ ಉದ್ಧಟತನ ಪ್ರದರ್ಶಿಸುತ್ತಿದ್ದಾರೆ‌ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಕಮಲ್ ಹಾಸನ್ ಕೂಡಲೇ ಕನ್ನಡಿಗರ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಜೂನ್ 5ರಂದು ಬಿಡುಗಡೆ ಸಿದ್ದವಾಗಿರುವ ಅವರ “ತಗ್ ಲೈಫ್’ ಚಿತ್ರವನ್ನು ರಾಜ್ಯದಲ್ಲಿ ಬಿಡುಗಡೆ ಮಾಡಲು ಬಿಡುವುದಿಲ್ಲ. ಈ ಚಿತ್ರದ ವಿತರಕರು ತಮ್ಮ ಹೂಡಿಕೆಯನ್ನು ರಕ್ಷಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.

  • ಕುಂದಾಪುರ: ಏಣಿಯಿಂದ ಬಿದ್ದು ಕಾರ್ಮಿಕ ಸಾವು

    ಕುಂದಾಪುರ ತಾಲೂಕಿನ ಹಾಲಾಡಿ ಗ್ರಾಮದ ಚೋರಾಡಿಯಲ್ಲಿ ದುರ್ಘಟನೆಯೊಂದರಲ್ಲಿ ಕಾರ್ಮಿಕರೊಬ್ಬರು ಸಾವನ್ನಪ್ಪಿದ ಘಟನೆ ದಿನಾಂಕ 30-05-2025ರಂದು ನಡೆದಿದೆ. ಬಿಹಾರ ರಾಜ್ಯದ ನಿವಾಸಿಯಾದ ಎಂ.ಡಿ. ಇಸ್ರೈಲ್ (37) ಎಂಬುವವರು ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ದೂರಿನ ವಿವರಗಳ ಪ್ರಕಾರ, ಚೋರಾಡಿಯಲ್ಲಿ ಕಳೆದ 2-3 ವರ್ಷಗಳಿಂದ ಎಸ್‌ಎನ್‌ಸಿ ಕಂಪನಿಯ ವಾಟರ್ ಸಪ್ಲೈ ಕಾಮಗಾರಿ ನಡೆಯುತ್ತಿದೆ. ಈ ಕಾಮಗಾರಿಯಲ್ಲಿ ದೂರುದಾರರ ಸಹೋದ್ಯೋಗಿ ಸಫರಾಜ್ ಆಲಂ ಎಂಬ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಘಟನೆಯ ದಿನ ಬೆಳಿಗ್ಗೆ 9:30ರ ಸುಮಾರಿಗೆ ಸಫರಾಜ್ ಆಲಂ ಅವರು 6 ಅಡಿ ಎತ್ತರದ ಏಣಿಯ ಮೇಲೆ ನಿಂತು ಫಿಲ್ಟರ್ ಹೌಸ್‌ನ ಗೋಡೆಯ ಲಿಕೇಜ್ ಪ್ಯಾಚ್ ಮಾಡುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ.

    ತಕ್ಷಣವೇ ಸ್ಥಳದಲ್ಲಿದ್ದ ಇಂಜಿನಿಯರ್ ಶಿವರಾಜ್ ಹಾಗೂ ಇತರ ಕೆಲಸಗಾರರು ಸೇರಿ ಸಫರಾಜ್ ಅವರನ್ನು ಎತ್ತಿ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ನಂತರ ಅವರನ್ನು ವಾಹನದಲ್ಲಿ ಹಾಲಾಡಿಯ ದುರ್ಗಾ ಆಸ್ಪತ್ರೆಗೆ ಕರೆದೊಯ್ದಾಗ, ವೈದ್ಯಾಧಿಕಾರಿಗಳು ಪರೀಕ್ಷಿಸಿ ಸಫರಾಜ್ ಆಲಂ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.

    ಈ ಘಟನೆಯ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಕ್ರಮಾಂಕ 21/2025ರ ಅಡಿಯಲ್ಲಿ ಕಲಂ 194 BNSS ರಂತೆ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.

  • Udupi Theft Case: Karnataka High Court Acquits Reshma Hegde

    Bengaluru, May 30, 2025: The Karnataka High Court has acquitted Reshma Hegde in a 2011 theft case from Udupi, overturning the convictions of lower courts. Justice S. Rachaiah delivered the verdict on May 22, 2025, setting aside the earlier judgments that had found her guilty of housebreaking and theft.

    Reshma Hegde (32), a resident of Vinanthi House, Lakshmindra Nagar, Shivalli Village, Udupi, was accused of breaking into a house and stealing gold ornaments weighing approximately 20½ pauns on May 1, 2011, at around 1:30 p.m. The prosecution alleged that Hegde, along with another accused, broke the lock of the complainants’ house while they were away and committed the theft. A case was registered by the Kaup Circle Police under Crime No. 66/2011, charging the accused under Sections 454 (housebreaking) and 380 (theft) of the Indian Penal Code (IPC), followed by the submission of a charge sheet.

    The Principal Civil Judge and JMFC, Karkala, convicted Hegde on November 10, 2016, in C.C. No. 437/2011. This judgment was upheld by the Principal Sessions Judge, Udupi, on April 26, 2018, in Criminal Appeal No. 74/2016. Challenging these concurrent findings, Hegde filed a Criminal Revision Petition (No. 704/2018) in the Karnataka High Court.

    During the hearing, Hegde’s counsel, Nishit Kumar Shetty, argued that the lower courts’ findings were flawed. He contended that the recovery of the stolen items, allegedly made under Section 27 of the Indian Evidence Act, was not properly conducted and did not establish Hegde’s exclusive possession. Additionally, he claimed that documents produced by the manager of Bhima Jewellers were fabricated. The prosecution’s case stated that gold ornaments were stolen, but the recovered items were in the form of gold ingots, casting doubt on their identity.

    The State’s counsel, K. Nageshwarappa, defended the lower courts’ rulings, citing the testimonies of prosecution witnesses (PWs 1, 2, 4, and 6) and documents (Exs. P.13 to P.16) from Bhima Jewellers, which indicated that the accused had sold the stolen gold and purchased new ornaments. However, the court noted that the manager of Bhima Jewellers (PW.6) stated the gold was recovered as ingots, not ornaments, raising doubts about the evidence’s reliability.

    Justice S. Rachaiah observed that the testimony of PW.6 lacked credibility and that the recovery of gold ingots was insufficient to prove Hegde’s guilt. The lower courts had erred in evaluating the evidence, leading to an incorrect conviction. Consequently, the High Court allowed the petition, set aside the convictions dated November 10, 2016, and April 26, 2018, and acquitted Hegde of the charges under IPC Sections 454 and 380. Any bail bonds executed were also canceled.

  • ಬೈಂದೂರು: ಸರ್ಕಾರಿ ಭೂಮಿ ಒತ್ತುವರಿ; ಕರ್ನಾಟಕ ಹೈಕೋರ್ಟ್‌ನಿಂದ 10 ಜನರ ವಿರುದ್ಧದ ಚಾರ್ಜ್‌ಶೀಟ್ ರದ್ದತಿ ಅರ್ಜಿ ವಜಾ

    ಬೆಂಗಳೂರು, ಮೇ 27, 2025: ಉಡುಪಿ ಜಿಲ್ಲೆಯ ಬೈಂದೂರಿನ ಶಿರೂರು ಗ್ರಾಮದ ಸರ್ಕಾರಿ ಭೂಮಿಯ ಒತ್ತುವರಿ ಆರೋಪದ ಮೇಲೆ 10 ಜನರ ವಿರುದ್ಧ ದಾಖಲಾಗಿದ್ದ ಚಾರ್ಜ್‌ಶೀಟ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಏಕಸದಸ್ಯ ಪೀಠವು ಈ ತೀರ್ಪನ್ನು ಮೇ 27, 2025ರಂದು ಪ್ರಕಟಿಸಿದೆ.

    ಬೈಂದೂರು ತಾಲೂಕಿನ ಶಿರೂರು ಗ್ರಾಮದ ನೆತ್ರಾವತಿ, ನಾರಾಯಣ, ನಾಗರತ್ನ ಮಾಳ್ಯ, ದೇವರಾಜ್ ಮಾಳ್ಯ, ಲಕ್ಷ್ಮೀ ಮಾಳ್ಯ, ಗಣೇಶ್ ಮಾಳ್ಯ, ಸುಬ್ರಮಣ್ಯ, ಜ್ಯೋತಿ, ಸುನೀತಾ, ಮತ್ತು ಕನಕ ಎಂಬ 10 ಜನರು ಸರ್ಕಾರಿ ಭೂಮಿಯಾದ ಸರ್ವೇ ಸಂಖ್ಯೆ 72ರಲ್ಲಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಬೈಂದೂರು ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 143, 147, 447 ಜೊತೆಗೆ ಸೆಕ್ಷನ್ 149ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಚಾರ್ಜ್‌ಶೀಟ್ (ಸಿ.ಸಿ.ನಂ.179/2025, ಕ್ರೈಂ ನಂ.142/2024) ರದ್ದುಗೊಳಿಸುವಂತೆ ಕೋರಿ ಈ 10 ಜನರು ಕರ್ನಾಟಕ ಹೈಕೋರ್ಟ್‌ನಲ್ಲಿ ಕ್ರಿಮಿನಲ್ ಅರ್ಜಿ ಸಂಖ್ಯೆ 7330/2025 ಸಲ್ಲಿಸಿದ್ದರು.

    ವಿಚಾರಣೆಯ ವೇಳೆ, ಅರ್ಜಿದಾರರ ಪರ ವಕೀಲರು ಸರ್ವೇ ಸಂಖ್ಯೆ 72ರ ಭೂಮಿಯಲ್ಲಿ ಅರ್ಜಿದಾರರು ಮನೆ ಕಟ್ಟಿಕೊಂಡು ವಾಸಿಸುತ್ತಿರುವುದಾಗಿ ವಾದಿಸಿದರೂ, ಆ ಭೂಮಿಗೆ ಸಂಬಂಧಿಸಿದ ಯಾವುದೇ ಕಾನೂನುಬದ್ಧ ದಾಖಲೆಗಳನ್ನು ಒದಗಿಸಲು ಸಾಧ್ಯವಾಗಲಿಲ್ಲ. ಎರಡೂ ಪಕ್ಷದ ವಕೀಲರು ಆ ಭೂಮಿಯು ಸರ್ಕಾರಕ್ಕೆ ಸೇರಿದ್ದು ಎಂದು ಒಪ್ಪಿಕೊಂಡಿದ್ದಾರೆ. ಸರ್ಕಾರದ ಅನುಮತಿಯಿಲ್ಲದೆ ಯಾರೂ ಈ ಭೂಮಿಯನ್ನು ಒತ್ತುವರಿ ಮಾಡಿಕೊಳ್ಳಲು ಅಥವಾ ಬಳಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿತು.

    ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರು, ಅರ್ಜಿಯಲ್ಲಿ ಯಾವುದೇ ಯೋಗ್ಯತೆ ಕಂಡುಬಂದಿಲ್ಲ ಎಂದು ತೀರ್ಪು ನೀಡಿ, ಅರ್ಜಿಯನ್ನು ವಜಾಗೊಳಿಸಿದರು. ಜೊತೆಗೆ, ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿರುವ ಯಾವುದೇ ವ್ಯಕ್ತಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರದ ಪರ ವಕೀಲರು ತಿಳಿಸಿದ್ದನ್ನು ನ್ಯಾಯಾಲಯ ದಾಖಲಿಸಿಕೊಂಡಿತು.

  • ಬೈಂದೂರು: ಖಾಸಗಿ ಬಸ್ ಚಾಲಕ ನಾಪತ್ತೆ: ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

    ಬೈಂದೂರು, ಮೇ 30, 2025: ಉಡುಪಿ ಜಿಲ್ಲೆಯ ಬೈಂದೂರಿನ ಉಪ್ಪುಂದದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಖಾಸಗಿ ಬಸ್ ಚಾಲಕನೊಬ್ಬ ಕಾಣೆಯಾದ ಘಟನೆಯ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಉಪ್ಪುಂದ ನಿವಾಸಿ ನಾಗರಾಜ್, ಖಾಸಗಿ ಬಸ್ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಮೇ 19, 2025ರಂದು ಬೆಳಿಗ್ಗೆ 11:00 ಗಂಟೆಗೆ ಡ್ಯೂಟಿಗೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದ ಅವರು, ನಂತರ ಮನೆಗೆ ಮರಳಿ ಬಾರದೆ ಕಾಣೆಯಾಗಿದ್ದಾರೆ ಎಂದು ಪಿರ್ಯಾದಿದಾರರಾದ ಹೇಮ ಅವರು ತಿಳಿಸಿದ್ದಾರೆ.

    ಈ ಸಂಬಂಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 113/2025ರ ಅಡಿಯಲ್ಲಿ ಮನುಷ್ಯ ಕಾಣೆಯಾದ ಬಗ್ಗೆ ಪ್ರಕರಣ ದಾಖಲಾಗಿದೆ. ಪೊಲೀಸರು ನಾಪತ್ತೆಯಾದ ವ್ಯಕ್ತಿಯ ಹುಡುಕಾಟಕ್ಕೆ ಕ್ರಮ ಕೈಗೊಂಡಿದ್ದಾರೆ.