Category: Udupi District

  • Udupi: ICAI Hosts Session on Income Tax Bill 2025

    Udupi, May 24, 2025: The Udupi Branch of the Southern India Regional Council (SIRC) of the Institute of Chartered Accountants of India (ICAI), under the aegis of the Direct Taxes Committee, organized a public outreach program on the Income Tax Bill 2025 at ICAI Bhawan, Kunjibettu, on May 24, 2025.

    The session featured Mr. Robert Castelino, Assistant Commissioner of Income Tax, as the chief guest, and CA. Prashanth G S as the speaker, addressing key aspects of the proposed legislation.

  • ಗುಲ್ವಾಡಿ: ಕೌಂಜೂರು ಕೆತ್ತಮಕ್ಕಿ ಎಸ್‍ಸಿ ಕಾಲೋನಿಗೆ ಹೋಗುವ ರಸ್ತೆಯ ಅಭಿವೃದ್ಧಿ; ಸುಮಾರು 50 ಲಕ್ಷ ರೂ. ವೆಚ್ಚದ ಕಾಮಗಾರಿಗೆ ಚಾಲನೆ

    ಕುಂದಾಪುರ, ಮೇ 24, 2025: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಕೇಂದ್ರ ಸರಕಾರ ಅನುದಾನ ಮೀಸಲಿಟ್ಟಿದೆ. ಈ ಅನುದಾನದ ಮೂಲಕ ಕೊರಗರ ಕಾಲೋನಿ ರಸ್ತೆ ಅಭಿವೃದ್ಧಿಗೆ ಪ್ರಯತ್ನಗಳು ನಡೆಯುತ್ತಿವೆ. ಸೌಕೂರು ದೇವಸ್ಥಾನದಿಂದ ಭಟ್ರಹಾಡಿವರೆಗೆ ರಸ್ತೆ ನಿರ್ಮಾಣವಾಗಬೇಕು ಎಂಬುದು ಸ್ಥಳೀಯರ ಬಹುದಿನದ ಬೇಡಿಕೆ. ಪ್ರತಿ ಗ್ರಾಮಕ್ಕೆ ಒಂದೊಂದು ರಸ್ತೆ ನಿರ್ಮಾಣವಾದರೆ ಆ ಊರು ಅಭಿವೃದ್ಧಿಯತ್ತ ಸಾಗುತ್ತದೆ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.

    ಅವರು ಶನಿವಾರ ಬೈಂದೂರು ವಿಧಾನಸಭಾ ಕ್ಷೇತ್ರದ ಗುಲ್ವಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೌಂಜೂರು ಕೆತ್ತಮಕ್ಕಿ ಎಸ್‍ಸಿ ಕಾಲೋನಿಗೆ ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ಈ ಭಾಗದ ಜನರ ಬೇಡಿಕೆಯಂತೆ ರಸ್ತೆ ನಿರ್ಮಾಣಕ್ಕೆ ಸಾಧ್ಯವಾದಷ್ಟು ಪ್ರಯತ್ನ ಮಾಡುವುದಾಗಿ ಅವರು ಭರವಸೆ ನೀಡಿದರು.

    ಕಾರ್ಯಕ್ರಮದಲ್ಲಿ ಗುಲ್ವಾಡಿ ಗ್ರಾಮ ಪಂಚಾಯತ್ ಸದಸ್ಯ ರಾಮಕೃಷ್ಣ ಹೆಬ್ಬಾರ್, ತಾಪಂ ಮಾಜಿ ಸದಸ್ಯ ಕರಣ್ ಪೂಜಾರಿ, ದಿವ್ಯಾನಂದ ಶೆಟ್ಟಿ, ರಾಮ ಅಡಿಗ ಮತ್ತು ಸ್ಥಳೀಯರು ಉಪಸ್ಥಿತರಿದ್ದರು. ಸಂತೋಷ ಪೂಜಾರಿ ಸ್ವಾಗತಿಸಿದರೆ, ಸುರೇಂದ್ರ ಗುಲ್ವಾಡಿ ವಂದನೆ ಸಲ್ಲಿಸಿದರು.

  • CET Results: Amulya Shetty Secures 209th Rank in State-Level Engineering

    Kundapura, May 24, 2025: Amulya Shetty, a student of Sri Venkataramana Pre-University College, has achieved an impressive 209th rank in the engineering category at the state level in the 2025 Common Entrance Test (CET) conducted by the Karnataka Examinations Authority for admissions to various professional courses, including engineering.

    The college provides daily training for competitive exams, and Amulya has made remarkable use of this opportunity to excel in the examination.

    The college management, principal, teaching, and non-teaching staff have extended their heartfelt congratulations to the student for her outstanding achievement.

  • Udupi Student Nuzha Fathima Sarfaraz Scores 95% in CBSE Class 10 Exams

    Udupi: Nuzha Fathima Sarfaraz, a student of G.M. Vidyaniketan Public School in Brahmavar, Udupi, has achieved an outstanding 95% in the CBSE Class 10 board examinations, the results of which were declared on May 13.

    Daughter of Sarfaraz T.S. and Farzana Sarfaraz, and granddaughter of the late T.S. Ismail Saheb and Sabeera Ismail of Kodi Bengre, Nuzha’s accomplishment has earned her praise and admiration from teachers, family, and peers alike. Her dedication, focus, and perseverance have been widely appreciated as the foundation of her academic success.

    Her performance stands as an inspiration for fellow students in the region, showcasing the possibilities that hard work and determination can bring.

  • ಅನಿತಾ ಡಿ’ಸೋಜಾ ಕರ್ನಾಟಕ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ

    ಕಾರ್ಕಳ, ಮೇ 24, 2025: ಬೆಳ್ಮನ್‌ನ ಅನಿತಾ ಡಿ’ಸೋಜಾ ಅವರು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಅವರ ಆದೇಶದಂತೆ, ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಅಲ್ಕಾ ಲಂಬಾ ಅವರ ಅನುಮೋದನೆಯೊಂದಿಗೆ ಈ ನೇಮಕಾತಿ ನಡೆದಿದೆ.

    ಅನಿತಾ ಡಿ’ಸೋಜಾ ಬೆಳ್ಮನ್ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತೆಯಾಗಿದ್ದು, ಗ್ರಾಮ ಪಂಚಾಯಿತಿ ಸದಸ್ಯೆಯಾಗಿ ಮತ್ತು ಕಾರ್ಕಳ ಬ್ಲಾಕ್ ಮಹಿಳಾ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಮತ್ತು ಸಾಮಾಜಿಕ ಸೇವೆಯಲ್ಲಿ ಅವರ ಕಾರ್ಯಕ್ಷಮತೆಯನ್ನು ಗುರುತಿಸಿ, ಪಕ್ಷವು ಅವರಿಗೆ ಈ ಹುದ್ದೆಯನ್ನು ನೀಡಿದ್ದು, ತಕ್ಷಣವೇ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಸೂಚಿಸಿದೆ.

  • ಜಿಲ್ಲೆಯಲ್ಲಿ ಅಕ್ಕ ಸಂಜೀವಿನಿ ಅಂಗಡಿ ಪ್ರಾರಂಭ

    ಉಡುಪಿ, ಮೇ 24, 2025 : ಜಿಲ್ಲೆಯ ಸಂಜೀವಿನಿ ಯೋಜನೆ ವಿನೂತನ ಕಾರ್ಯಕ್ರಮಗಳಿಂದ ಪರಿಚಿತವಾಗಿದ್ದು, ಇಲ್ಲಿ ನಡೆಯುವ ಕಾರ್ಯಕ್ರಮಗಳು, ಚಟುವಟಿಕೆಗಳು ಮಹಿಳಾ ಸಬಲೀಕರಣಕ್ಕೆ ಪೂರಕವಾಗಿದೆ. ವಿವಿಧ ನವೀನ ಯೋಜನೆಗಳನ್ನು ಜಿಲ್ಲೆಯಲ್ಲಿ ಅನುಷ್ಠಾನ ಮಾಡುವುದರೊಂದಿಗೆ ರಾಜ್ಯಕ್ಕೆ ಮಾದರಿಯಾಗಿದೆ. 

    ಜಿಲ್ಲೆಯಲ್ಲಿ ಸಂಜೀವಿನಿ ಸ್ವಸಹಾಯ ಗುಂಪಿನ ಮಹಿಳೆಯರು ತಯಾರಿಸುತ್ತಿರುವ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸುವ ನಿಟ್ಟಿನಲ್ಲಿ ಹಾಗೂ ಅವರು ಉದ್ಯಮಕ್ಕೆ ಇನ್ನಷ್ಟು ಪ್ರೋತ್ಸಾಹ ನೀಡುವ ಉದ್ದೇಶದಿಂದ ಸಂಜೀವಿನಿ ಮಾರಾಟ ಮಳಿಗೆಯನ್ನು ಸಂಜೀವಿನಿ ಮಹಿಳೆಯರಿಂದ ಸ್ಥಾಪಿಸಿ ಅದನ್ನು ನಿರ್ವಹಣೆ ಮಾಡಿ ಈ ಮಹಿಳೆಯರು ಉದ್ಯಮಿಗಳಾಗುವುದರ ಜೊತೆಗೆ ಇತರ ಮಹಿಳಾ ಉದ್ಯಮಿಗಳ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಮಾರಾಟ ಮಳಿಗೆಗಳನ್ನು ಸ್ಥಾಪಿಸುವ ಉದ್ದೇಶ ಹೊಂದಲಾಗಿದ್ದು, ಮೊದಲ ಹಂತದಲ್ಲಿ ಕಾಪು ತಾಲೂಕಿನ ಶಿರ್ವ ಹಾಗೂ ಕಟಪಾಡಿ ಗ್ರಾಮ ಪಂಚಾಯತ್ ಅನ್ನು ಮಾದರಿಯಾಗಿ ಗುರುತಿಸಿ, ಈ ಎರಡು ಗ್ರಾಮ ಪಂಚಾಯತ್ನಲ್ಲಿ ಮಳಿಗೆಗಳನ್ನು ನಿರ್ಮಿಸಿ ಅಕ್ಕ ಸಂಜೀವಿನಿ ಅಂಗಡಿ ಎಂಬ ಹೆಸರಿನೊಂದಿಗೆ, ಸಾರ್ವಜನಿಕರಿಗೆ ಸಂಜೀವಿನಿ ಮಹಿಳೆಯರು ತಯಾರಿಸಿದ ಉತ್ಪನ್ನಗಳನ್ನು ಪರಿಚಯಿಸಲು ನಿರ್ಧರಿಸಲಾಗಿದ್ದು, ಗುರುವಾರ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಶಿರ್ವ ಹಾಗೂ ಕಟಪಾಡಿಯಲ್ಲಿ ನೂತನವಾಗಿ ನಿರ್ಮಿಸಿದ ಅಕ್ಕ ಸಂಜೀವಿನಿ ಅಂಗಡಿಯನ್ನು ಉದ್ಘಾಟಿಸಿದರು.

     ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಹಿಳೆಯರು ಇಂದು ಮನೆ ಕೆಲಸಗಳಿಗಷ್ಟೇ ಮಾತ್ರ ಸೀಮಿತವಾಗಿಲ್ಲದೆ ಉದ್ಯಮಿಗಳಾಗಿ ಹೊರ ಹೋಮ್ಮತ್ತಿದ್ದಾರೆ. ಎಲ್ಲಾ ಕ್ಷೇತ್ರದಲ್ಲಿಯೂ ಮಹಿಳೆಯರು ಪ್ರತಿನಿದಿಸುವುದರೊಂದಿಗೆ ಪುರುಷ ಪ್ರಧಾನ ಸಮಾಜ ಬದಲು ಮಹಿಳಾ ಪ್ರಧಾನ ಸಮಾಜ ನಿರ್ಮಾಣವಾಗುತ್ತಿದೆ. ಮಹಿಳೆಯರು ಮನೆಗಷ್ಟೇ ನಾಯಕರಲ್ಲ ಸಮುದಾಯದ ನಾಯಕರಾಗಿ ಸಂಜೀವಿನಿ ಯೋಜನೆಯಿಂದ ಗುರುತಿಸಿ ಕೊಳ್ಳುತ್ತಿದ್ದಾರೆ. ಇದೆ ಮಾದರಿಯಲ್ಲಿ ಬೇರೆ ಬೇರೆ ಸ್ಥಳದಲ್ಲಿ ಅಕ್ಕ ಸಂಜೀವಿನಿ ಅಂಗಡಿ ಪ್ರಾರಂಭಗೊಳ್ಳಲಿ ಎಂದು ಮಹಿಳಾ ಉದ್ಯಮಿದಾರರಿಗೆ ಶುಭ ಹಾರೈಸಿದರು.

     ಈ ಸಂದರ್ಭದಲ್ಲಿ ಶಿರ್ವ ಹಾಗೂ ಕಟಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಶ್ರೀನಿವಾಸ್ ರಾವ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿಯವರು, ಜಿಲ್ಲಾ ಹಾಗೂ ತಾಲೂಕು ಅಭಿಯಾನ ನಿರ್ವಹಣಾ ಘಟಕದ ಸಿಬ್ಬಂದಿಗಳು, ಸಂಜೀವಿನಿ ಯೋಜನೆಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

  • ಮಿಲಾಗ್ರೇಸ್ ಕಾಲೇಜ್ ಕಲಿಯನ್‌ಪುರದ ವಾಣಿಜ್ಯ ವಿಭಾಗದಿಂದ ಐತಿಹಾಸಿಕ ಕಾರ್ಯಕ್ರಮ

    ಕಲಿಯನ್‌ಪುರ, ಮೇ 24, 2025: ಮಿಲಾಗ್ರೇಸ್ ಕಾಲೇಜ್ ಕಲಿಯನ್‌ಪುರದ ವಾಣಿಜ್ಯ ವಿಭಾಗವು ಮೇ 23, 2025 ರಂದು ಒಂದು ಐತಿಹಾಸಿಕ ಕಾರ್ಯಕ್ರಮವನ್ನು ಆಯೋಜಿಸಿತು, ಇದು ವಿಭಾಗದ ಇತಿಹಾಸದಲ್ಲಿ ಪ್ರಮುಖ ಮೈಲಿಗಲ್ಲಾಗಿದೆ. ಈ ಕಾರ್ಯಕ್ರಮದಲ್ಲಿ ಕೈಗಾರಿಕಾ ಭೇಟಿಯ ವರದಿಯ ಬಿಡುಗಡೆ ಮತ್ತು “ಬೇಸಿಕ್ಸ್ ಟು ಅಕೌಂಟಿಂಗ್” ಎಂಬ ಸಂಕ್ಷಿಪ್ತ ಕೋರ್ಸ್‌ನ ಪ್ರಮಾಣಪತ್ರ ವಿತರಣೆಯನ್ನು ಒಳಗೊಂಡಿತ್ತು.

    ಏಪ್ರಿಲ್ 12, 2025 ರಂದು ನಡೆದ ಕೈಗಾರಿಕಾ ಭೇಟಿಯಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳು ಮಂಗಳೂರಿನ ಗುರುಚರಣ್ ಇಂಡಸ್ಟ್ರೀಸ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘದ ಒಕ್ಕೂಟಕ್ಕೆ ಭೇಟಿ ನೀಡಿದರು. ವಿದ್ಯಾರ್ಥಿಗಳು ಮಾರ್ಗದರ್ಶಕರೊಂದಿಗೆ ಸಂವಾದ ನಡೆಸಿ, ವಿವಿಧ ವಿಭಾಗಗಳು ಮತ್ತು ಉತ್ಪಾದನಾ ಘಟಕಗಳಿಂದ ಮಾಹಿತಿಯನ್ನು ಸಂಗ್ರಹಿಸಿ, ಕೈಗಾರಿಕಾ ಆಚರಣೆಗಳ ಬಗ್ಗೆ ಮೌಲ್ಯಯುತ ಒಳನೋಟಗಳನ್ನು ಪಡೆದರು.

    ಅಂತಿಮ ವರ್ಷದ ಬಿ.ಕಾಂ. ವಿದ್ಯಾರ್ಥಿನಿಯರಾದ ಕು. ಕಾವ್ಯ ಶೆಟ್ಟಿ ಮತ್ತು ಕು. ಪೂನಂ ಎನ್. ಪೂಜಾರಿ ಅವರು ತಮ್ಮ ಅನುಭವಗಳ ಆಧಾರದ ಮೇಲೆ ಸಮಗ್ರ ವರದಿಗಳನ್ನು ಸಿದ್ಧಪಡಿಸಿದ್ದರು. ಕಾರ್ಯಕ್ರಮದಲ್ಲಿ, ಅವರು ತಮ್ಮ ಫಲಿತಾಂಶಗಳನ್ನು ಪ್ರಸ್ತುತಪಡಿಸಿ, ತಮ್ಮ ಅನುಭವಾತ್ಮಕ ಕಲಿಕೆಯ ಅನುಭವಗಳನ್ನು ಹಂಚಿಕೊಂಡರು ಮತ್ತು ಪ್ರಾಯೋಗಿಕ ಜ್ಞಾನವನ್ನು ಪಡೆಯಲು ಒದಗಿದ ಅವಕಾಶಕ್ಕಾಗಿ ಕೃತಜ್ಞತೆ ವ್ಯಕ್ತಪಡಿಸಿದರು.

    ಉಪಪ್ರಾಂಶುಪಾಲರಾದ ಶ್ರೀಮತಿ ಸೋಫಿಯಾ ಡಯಾಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಕೈಗಾರಿಕಾ ಭೇಟಿಯ ವರದಿಯನ್ನು ಅಧಿಕೃತವಾಗಿ ಬಿಡುಗಡೆಗೊಳಿಸಿದರು. ವಿಶೇಷ ಆಹ್ವಾನಿತರಾದ ಡಾ. ಜಯರಾಮ್ ಶೆಟ್ಟಿಗಾರ್, ಗುರುಚರಣ್ ಇಂಡಸ್ಟ್ರೀಸ್‌ನ ಸಂಸ್ಥಾಪಕ ಶ್ರೀ ಜಯಕರ್ ಶೆಟ್ಟಿಗಾರ್ ಅವರ ಸಾಧನೆಗಳನ್ನು ಎತ್ತಿ ತೋರಿಸಿದರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ದೇಶದ ಹಾಲಿನ ಕ್ರಾಂತಿಗೆ ನೀಡಿದ ಕೊಡುಗೆಯನ್ನು ಶ್ಲಾಘಿಸಿದರು.

    ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಯೋಜಕರಾದ ಶ್ರೀಮತಿ ಶೈಲತ್ ಮಥಾಯಾಸ್, ವಿದ್ಯಾರ್ಥಿಗಳ ಕಠಿಣ ಪರಿಶ್ರಮ ಮತ್ತು ಶಿಸ್ತನ್ನು ಕೊಂಡಾಡಿದರು, ಜೊತೆಗೆ ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶ್ರೀಮತಿ ಚೈತ್ರಾ ಮತ್ತು ಶ್ರೀ ಗಣೇಶ್ ನಾಯಕ್ ಅವರ ಪ್ರಯತ್ನಗಳನ್ನು ಗುರುತಿಸಿದರು. ವಾಣಿಜ್ಯ ವಿಭಾಗವು ಆಯೋಜಿಸಿದ “ಬೇಸಿಕ್ಸ್ ಟು ಅಕೌಂಟಿಂಗ್” ಕೋರ್ಸ್‌ನ ಪ್ರಮಾಣಪತ್ರಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

    ಕಾರ್ಯಕ್ರಮವನ್ನು ಅಂತಿಮ ವರ್ಷದ ಬಿ.ಕಾಂ. ವಿದ್ಯಾರ್ಥಿನಿ ಕು. ವರ್ಷಿಣಿ ನಿರೂಪಿಸಿದರು, ಕಾರ್ಯಕ್ರಮದ ಸುಗಮ ನಿರ್ವಹಣೆಯನ್ನು ಖಾತರಿಪಡಿಸಿದರು. ಈ ಮೈಲಿಗಲ್ಲು ಕಾರ್ಯಕ್ರಮವು ವಾಣಿಜ್ಯ ವಿಭಾಗದ ಪ್ರಾಯೋಗಿಕ ಕಲಿಕೆಯ ಅನುಭವಗಳನ್ನು ಒದಗಿಸುವ ಮತ್ತು ಶೈಕ್ಷಣಿಕ ಉತ्कೃಷ್ಟತೆಯನ್ನು ಬೆಳೆಸುವ ಬದ್ಧತೆಯನ್ನು ತೋರಿಸುತ್ತದೆ, ಜೊತೆಗೆ ವಿದ್ಯಾರ್ಥಿಗಳ ಮತ್ತು ಶಿಕ್ಷಕರ ಸಮರ್ಪಣೆಯನ್ನು ಪ್ರದರ್ಶಿಸುತ್ತದೆ.

  • ಪಂಚಗಂಗಾವಳಿ ಶಾಶ್ವತ ಮೊಹರು; ಅಂಚೆ ಇಲಾಖೆಯಿಂದ ಬಿಡುಗಡೆ

    ಕುಂದಾಪುರ, ಮೇ 24, 2025: ಕುಂದಾಪುರದ ಪ್ರಧಾನ ಅಂಚೆ ಕಚೇರಿಯಲ್ಲಿ ‘ಪಂಚಗಂಗಾವಳಿ’ ಶಾಶ್ವತ ಅಂಚೆ ಮೊಹರು ಶುಕ್ರವಾರ ಬಿಡುಗಡೆಗೊಂಡಿತು. ಉಡುಪಿ ವಿಭಾಗದ ಅಂಚೆ ಇಲಾಖೆಯ ಅಧೀಕ್ಷಕ ರಮೇಶ ಪ್ರಭು ಅವರು ಅತಿಥಿಗಳ ಸಮ್ಮುಖದಲ್ಲಿ ಈ ಮೊಹರನ್ನು ಅಧಿಕೃತವಾಗಿ ಬಿಡುಗಡೆ ಮಾಡಿದರು.

    ರಮೇಶ ಪ್ರಭು ಮಾತನಾಡಿ, “ಕರ್ನಾಟಕ ಅಂಚೆ ವೃತ್ತದ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಎಸ್. ರಾಜೇಂದ್ರ ಕುಮಾರ್ ಅವರು ‘ಪಂಚಗಂಗಾವಳಿ’ ಬಗ್ಗೆ ತೀವ್ರ ಆಸಕ್ತಿ ತೋರಿದ್ದರು. ಕುಂದಾಪುರದ ಮಹತ್ವವನ್ನು ಎತ್ತಿ ತೋರಿಸುವ ಸಲುವಾಗಿ ಈ ಮೊಹರನ್ನು ರಚಿಸುವ ಆಶಯ ನಮ್ಮದಾಗಿತ್ತು. ಕುಂದಾಪುರ ತಾಲೂಕಿನಲ್ಲಿ ಹರಿಯುವ ‘ಪಂಚಗಂಗಾವಳಿ’ ನದಿಗಳು ದೇಶದಲ್ಲೇ ವಿಶಿಷ್ಟ ಸ್ಥಾನವನ್ನು ಪಡೆದಿವೆ ಎಂಬುದನ್ನು ಗಮನಿಸಿದ ಬಳಿಕ ಇಲಾಖೆಯ ಒಪ್ಪಿಗೆ ದೊರೆಯಿತು. ಈ ಮೊಹರು ಅಂಚೆ ಚೀಟಿ ಸಂಗ್ರಾಹಕರಿಗೂ ಆನಂದ ತಂದಿದೆ. ಈ ಮೊಹರನ್ನು ಅಂಚೆ ಕಾರ್ಡು ಮತ್ತು ಕವರ್‌ಗಳಿಗೆ ಬಳಸುವ ಮೂಲಕ ಜನಪ್ರಿಯಗೊಳಿಸಬಹುದು,” ಎಂದರು.

    ಮೊಹರಿನ ರಚನೆಗೆ ಸಹಕಾರ ನೀಡಿದ ಪಂಚಗಂಗಾವಳಿ ಸಮಿತಿಯ ಸಂಚಾಲಕ ಯು. ಎಸ್. ಶೆಣೈ ಹಾಗೂ ಹಿರಿಯ ಅಂಚೆ ಚೀಟಿ ಸಂಗ್ರಾಹಕ ಕೃಷ್ಣಯ್ಯ ಉಡುಪಿಯವರನ್ನು ರಮೇಶ ಪ್ರಭು ಅಭಿನಂದಿಸಿದರು. “ಜಿಲ್ಲೆಯಲ್ಲಿ ಒಂಬತ್ತು ಪ್ರಮುಖ ಕೇಂದ್ರಗಳಿಗೆ ಸಂಬಂಧಿಸಿದ ಮೊಹರುಗಳನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ‘ಪಂಚಗಂಗಾವಳಿ’ 10ನೇ ಮೊಹರಾಗಿದೆ. ಮುಂದಿನ ದಿನಗಳಲ್ಲಿ ಪಂಚಗಂಗಾವಳಿಯ ಚಿತ್ರವಿರುವ ಅಂಚೆ ಕಾರ್ಡನ್ನೂ ಬಿಡುಗಡೆ ಮಾಡಲಿದ್ದೇವೆ. ಕುಂದಾಪುರ ಅಂಚೆ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉತ್ತಮ ಸೇವೆಯನ್ನು ನೀಡುತ್ತಿದ್ದು, ಈ ಮೊಹರು ಸಾರ್ವಜನಿಕರಿಗೆ ತಲುಪುವಂತೆ ಮಾಡಲಿದ್ದಾರೆ,” ಎಂದು ತಿಳಿಸಿ ಅತಿಥಿಗಳಿಗೆ ಧನ್ಯವಾದ ಅರ್ಪಿಸಿದರು.

    ಹಿರಿಯ ವಕೀಲ ಹಾಗೂ ಉಡುಪಿ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಎ. ಎಸ್. ಎನ್. ಹೆಬ್ಬಾರ್ ಮಾತನಾಡಿ, “ಅಂಚೆ ಇಲಾಖೆಯ ಸೇವೆ ಶ್ಲಾಘನೀಯವಾಗಿದೆ. ಸಾರ್ವಜನಿಕರ ಹಿತಾಸಕ್ತಿಗೆ ತಕ್ಷಣವೇ ಸ್ಪಂದಿಸುವ ಈ ಇಲಾಖೆಯು ಕುಂದಾಪುರಕ್ಕೆ ಮಹತ್ವ ನೀಡಿ ‘ಪಂಚಗಂಗಾವಳಿ’ ಮೊಹರನ್ನು ಬಿಡುಗಡೆಗೊಳಿಸಿರುವುದು ಪ್ರಶಂಸನೀಯ. ಇದು ಈ ಪರಿಸರದ ಅಭಿವೃದ್ಧಿಗೆ ಪ್ರೇರಣೆಯಾಗಲಿ,” ಎಂದರು. ವಿದೇಶದಲ್ಲಿಯೂ ಭಾರತೀಯ ಅಂಚೆ ಚೀಟಿಗಳಿಗೆ ಇರುವ ಗೌರವವನ್ನು ಅವರು ವಿವರಿಸಿದರು.

    ಯು. ಎಸ್. ಶೆಣೈ ಮಾತನಾಡಿ, “ವಿದೇಶಿ ಮತ್ತು ಸ್ವದೇಶಿ ಸಂಶೋಧಕರು, ಇತಿಹಾಸಗಾರರು ಪಂಚಗಂಗಾವಳಿ ನದಿಗಳ ವೈಶಿಷ್ಟ್ಯವನ್ನು ದಾಖಲಿಸಿದ್ದಾರೆ. ಮುಂದಿನ ಪೀಳಿಗೆಗೆ ನಮ್ಮ ಪರಿಸರದ ಬಗ್ಗೆ ಅರಿವು ಮೂಡಿಸುವುದು ಅಗತ್ಯವಾಗಿದೆ. ಈ ಕಾರಣದಿಂದ 15 ವರ್ಷಗಳಿಂದ ಪಂಚಗಂಗಾವಳಿ ಅಭಿಯಾನ ನಡೆಸುತ್ತಿದ್ದೇವೆ. ಅಂಚೆ ಇಲಾಖೆಯು ಸೂಕ್ತ ಸಮಯದಲ್ಲಿ ಈ ಮೊಹರನ್ನು ಬಿಡುಗಡೆಗೊಳಿಸಿರುವುದು ಸಂತೋಷ ತಂದಿದೆ. ಈ ವಿನ್ಯಾಸಕ್ಕೆ ಸಹಕರಿಸಿದ ಕಲಾವಿದ ಕೇಶವ ಸಸಿಹಿತ್ಲು, ಪ್ರೇರಣೆ ನೀಡಿದ ಕೃಷ್ಣಯ್ಯ, ಮತ್ತು ಅಂಚೆ ಅಧೀಕ್ಷಕ ರಮೇಶ ಪ್ರಭು ಅವರಿಗೆ ಅಭಿನಂದನೆಗಳು. ಅಂಚೆ ಚೀಟಿ ಸಂಗ್ರಹದ ಹವ್ಯಾಸವನ್ನು ವಿದ್ಯಾರ್ಥಿಗಳಿಗೆ ಪ್ರತಿಭಾ ಕಾರಂಜಿಯ ರೀತಿಯಲ್ಲಿ ಪ್ರೇರೇಪಿಸಬೇಕು,” ಎಂದರು.

    ಹಿರಿಯ ಅಂಚೆ ಚೀಟಿ ಸಂಗ್ರಾಹಕ ಕೃಷ್ಣಯ್ಯ ಮಾತನಾಡಿ, “ಉಡುಪಿ ಜಿಲ್ಲೆಯ ಪ್ರಮುಖ ಸ್ಥಳಗಳಿಗೆ ಸಂಬಂಧಿಸಿದ ಮೊಹರುಗಳು ಮತ್ತು ಅಂಚೆ ಚೀಟಿಗಳು ಬಿಡುಗಡೆಯಾಗುವಂತೆ ಮಾಡಲು ನಿರಂತರ ಪ್ರಯತ್ನಗಳು ನಡೆಯುತ್ತಿವೆ. ಕೆಲವೊಮ್ಮೆ ಕಾರಣಾಂತರಗಳಿಂದ ವಿಳಂಬವಾಗುತ್ತದೆ, ಅಥವಾ ನಿರೀಕ್ಷಿತ ವಿನ್ಯಾಸ ಬಿಡುಗಡೆಯಾಗದಿರಬಹುದು. ಆದರೆ ಈ ಪ್ರಕ್ರಿಯೆಯಲ್ಲಿ ಭಾಗವಹಿಸುವುದು ಸಂತೋಷ ತರುತ್ತದೆ. ‘ಪಂಚಗಂಗಾವಳಿ’ ಮೊಹರಿನ ಬಿಡುಗಡೆ ತೃಪ್ತಿಕರವಾಗಿದೆ,” ಎಂದರು.

    ಕುಂದಾಪುರ ಪ್ರಧಾನ ಅಂಚೆ ಪಾಲಕ ಜಿ. ಎಸ್. ಮರಕಾಲ ಅತಿಥಿಗಳನ್ನು ಸನ್ಮಾನಿಸಿದರು. ಉಡುಪಿ ಜಿಲ್ಲಾ ಸಹಾಯಕ ಅಂಚೆ ಅಧೀಕ್ಷಕ ಕೃಷ್ಣರಾಜ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪ ಪ್ರಧಾನ ಅಂಚೆ ಪಾಲಕಿ ಸೌಮ್ಯಶ್ರೀ ಸ್ವಾಗತಿಸಿದರು. ಪೂರ್ಣಿಮಾ ಜನಾರ್ಧನ ಕಾರ್ಯಕ್ರಮ ನಿರೂಪಿಸಿದರು, ಮತ್ತು ಸಹಾಯಕ ಅಂಚೆ ಅಧೀಕ್ಷಕ ದಯಾನಂದ ವಂದನೆ ಸಲ್ಲಿಸಿದರು.

  • ಕುಂದಾಪುರ ಬಸ್ ನಿಲ್ದಾಣ: ವ್ಯಕ್ತಿಯೊಬ್ಬರ ಮೃತ್ಯು, ಪ್ರಕರಣ ದಾಖಲು

    ಕುಂದಾಪುರ, ಮೇ 23, 2025: ಕಳೆದ ಮೂರು ವರ್ಷಗಳಿಂದ ಕುಂದಾಪುರದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು, ತಮ್ಮ ಪತ್ನಿಯೊಂದಿಗೆ ಕುಂದಾಪುರದ ಹೊಸ ಬಸ್ ನಿಲ್ದಾಣದಲ್ಲಿ ವಾಸವಾಗಿದ್ದರು. ಆದರೆ, ವಿಪರೀತ ಮದ್ಯಸೇವನೆಯಿಂದಾಗಿ ಕಳೆದ ಮೂರು ತಿಂಗಳಿಂದ ಆರೋಗ್ಯ ಸಮಸ್ಯೆಯಿಂದ ಕೆಲಸಕ್ಕೆ ಹೋಗದೇ, ಬಸ್ ನಿಲ್ದಾಣದಲ್ಲಿಯೇ ಮಲಗುತ್ತಿದ್ದರು.

    ದಿನಾಂಕ 22/05/2025ರ ಸಂಜೆ 6:00 ಗಂಟೆಯಿಂದ 23/05/2025ರ ಬೆಳಿಗ್ಗೆ 6:15 ಗಂಟೆಯ ನಡುವೆ, ಈ ವ್ಯಕ್ತಿ ಕುಂದಾಪುರದ ಹೊಸ ಬಸ್ ನಿಲ್ದಾಣದಲ್ಲಿ ಮಲಗಿರುವಾಗ ಅನಾರೋಗ್ಯ ಅಥವಾ ಇನ್ನಿತರ ಕಾರಣದಿಂದ ಮೃತಪಟ್ಟಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಕ್ರಮಾಂಕ 28/2025, ಕಲಂ 194 BNSS ರಂತೆ ಪ್ರಕರಣ ದಾಖಲಿಸಲಾಗಿದೆ.

  • ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ; ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ

    ಉಡುಪಿ, ಮೇ 22 : ಜಿಲ್ಲಾದ್ಯಂತ ರಸ್ತೆ ಬದಿಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಎಸೆದಿರುವುದು ಕಂಡು ಬರುತ್ತಿದ್ದು, ಈ ತಿಂಗಳ ಅಂತ್ಯದಿಂದ ಮಳೆ ಪ್ರಾರಂಭವಾಗುವ ಸಾಧ್ಯತೆ ಇದ್ದು, ತ್ಯಾಜ್ಯ ವಿಲೇವಾರಿ ಮಾಡದೇ ಇದ್ದಲ್ಲಿ ತ್ಯಾಜ್ಯವು ನದಿ, ಕೆರೆ, ಸರೋವರ, ಸಮುದ್ರಕ್ಕೆ ಸೇರಿ ನೀರು ಕಲುಷಿತಗೊಳ್ಳುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾದ್ಯಂತ ಮೇ 24 ರಂದು ಬೆಳಗ್ಗೆ 7 ಗಂಟೆಗೆ ಅಸ್ಪತ್ರೆ ಆವರಣ, ಪ್ರಾಥಮಿಕ ಆರೋಗ್ಯ ಕೇಂದ್ರ, ಅಂಗನವಾಡಿ, ಸರ್ಕಾರಿ ಶಾಲಾ-ಕಾಲೇಜುಗಳು ಹಾಗೂ ಸಾರ್ವಜನಿಕ ಸ್ಥಳಗಳಾದ ಕೆರೆ, ಉದ್ಯಾನವನ, ಬಸ್ ಸ್ಟ್ಯಾಂಡ್, ರಸ್ತೆ ಬೀದಿಗಳ ಸ್ವಚ್ಛತೆಯನ್ನು ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್ಗಳು, ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರು ಸ್ವಚ್ಛತಾ ಕಾರ್ಯಕ್ರಮಗಳಲ್ಲಿ ಜಿಲ್ಲಾಡಳಿತದೊಂದಿಗೆ ಸಹಕರಿಸುವುದರೊಂದಿಗೆ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.