ಕುಂದಾಪುರ, ಮೇ 16: ಜಪ್ತಿ ಗ್ರಾಮದ ಸಾರ್ವಜನಿಕ ರಸ್ತೆಯ ಮೇಲೆ ಪಾಕಿಸ್ತಾನ ರಾಷ್ಟ್ರದ ಧ್ವಜದ ಪ್ಲಾಸ್ಟಿಕ್ ಬ್ಯಾನರ್ಗಳನ್ನು ಹಾಸಿರುವ ಘಟನೆ ಶುಕ್ರವಾರ ಬೆಳಿಗ್ಗೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಿರ್ಯಾದಿದಾರರಾದ ಸಚಿನ್ (29), ಜಪ್ತಿ ಗ್ರಾಮದ ನಿವಾಸಿ, 2025ರ ಮೇ 16ರಂದು ಬೆಳಿಗ್ಗೆ 8 ಗಂಟೆಗೆ ಕಾಳಾವಾರದಿಂದ ಜಪ್ತಿ ಕಡೆಗೆ ತನ್ನ ಮೋಟಾರು ಸೈಕಲಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಅವರು ದಬ್ಬೆ ಕಟ್ಟೆ ಎಂಬ ಸ್ಥಳ ತಲುಪಿದಾಗ, ಸಾರ್ವಜನಿಕ ರಸ್ತೆಯ ಮೇಲೆ ಪಾಕಿಸ್ತಾನದ ಧ್ವಜದ ಪ್ಲಾಸ್ಟಿಕ್ ಬ್ಯಾನರ್ ಒಂದನ್ನು ರಸ್ತೆ ಮೇಲೆ ಹಾಸಿರುವುದನ್ನು ಗಮನಿಸಿದರು.
ಸಚಿನ್ ಅವರು ತಕ್ಷಣವೇ ತಮ್ಮ ವಾಹನವನ್ನು ರಸ್ತೆಯ ಬದಿಗೆ ನಿಲ್ಲಿಸಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಅಲ್ಲಿಂದ ಸುಮಾರು 300 ಮೀಟರ್ ದೂರದಲ್ಲಿಯೂ ಇದೇ ರೀತಿಯ ಮತ್ತೊಂದು ಬ್ಯಾನರ್ ರಸ್ತೆ ಮಧ್ಯೆ ಬಿದ್ದಿರುವುದು ಕಂಡುಬಂದಿದ್ದು, ಇದು ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ ಎಂಬುದು ಸ್ಪಷ್ಟವಾಗಿದ್ದು.
ಯಾರೋ ಕಿಡಿಗೇಡಿಗಳು ಸಾರ್ವಜನಿಕ ರಸ್ತೆಯ ಮೇಲೆ ದ್ವಜದ ಪ್ಲಾಸ್ಟಿಕ್ ಬ್ಯಾನರ್ ನ್ನು ಹಾಸಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿರುವುದು ಕಂಡು ಬಂದಿದ್ದು.
ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 33/2025 ಅಡಿಯಲ್ಲಿ BNS ಸೆಕ್ಷನ್ 285 ಮತ್ತು 292 ರಂತೆ ಪ್ರಕರಣ ದಾಖಲಾಗಿದೆ. ಪೊಲೀಸರು ಇದರ ಹಿಂದಿರುವ ದುರುದ್ದೇಶ ಅಥವಾ ಸಂಚುಗಳ ಬಗ್ಗೆ ತನಿಖೆ ಆರಂಭಿಸಿದ್ದಾರೆ.
ಶಿರ್ವ, ಮೇ 16: ಕಾಪು ತಾಲೂಕಿನ ಬೆಳಪು ಗ್ರಾಮದ ನಿವಾಸಿ ಶ್ರೀಮತಿ ಸೀಮಾ (32) ಎಂಬ ಮಹಿಳೆಯ ಮನೆಯಲ್ಲಿ ಶಿಶು ಅಪಹರಣದ ಪ್ರಯತ್ನ ನಡೆದಿರುವ ಘಟನೆ ದಿನಾಂಕ 16/05/2025 ರಂದು ಮಧ್ಯಾಹ್ನ ಸುಮಾರು 1:40 ಗಂಟೆಗೆ ನಡೆದಿದೆ. ಈ ಸಂಬಂಧ ಶಿರ್ವ ಪೊಲೀಸ್ ಠಾಣೆಯಲ್ಲಿ ಇಬ್ಬರು ಅಪರಿಚಿತ ಆರೋಪಿತರ ವಿರುದ್ಧ ಪ್ರಕರಣ ದಾಖಲಾಗಿದೆ.
ಪಿರ್ಯಾದಿದಾರೆ ಶ್ರೀಮತಿ ಸೀಮಾ ಅವರು ಕಾರ್ಯಕ್ರಮವೊಂದಕ್ಕಾಗಿ ಮಜೂರಿಗೆ ಹೋಗಿದ್ದ ವೇಳೆ, ಮನೆಯಲ್ಲಿ ತಫೀಮಾ ಹಾಗೂ ಆಕೆಯ ಮಗ ಅಸ್ಲಾನ್ ಇದ್ದರು. ಮನೆಯಿಂದ ಹೊರಡುವಾಗ ಸೀಮಾ ಅವರು ಬಾಗಿಲಿಗೆ ಹೊರಗಡೆಯಿಂದ ಚಿಲಕ ಹಾಕಿದ್ದರು. ಕಾರ್ಯಕ್ರಮದಲ್ಲಿದ್ದಾಗ ಘಟನೆಯ ವಿಚಾರ ತಿಳಿದು ತಕ್ಷಣ ಮನೆಗೆ ಬಂದ ಸೀಮಾ, ತಫೀಮಾಳಿಂದ ವಿವರ ಕೇಳಿದಾಗ ಆಘಾತಕಾರಿ ಮಾಹಿತಿ ಬಹಿರಂಗವಾಯಿತು.
ತಫೀಮಾ ಅವರ ಹೇಳಿಕೆಯ ಪ್ರಕಾರ, ಮಧ್ಯಾಹ್ನ 1:50 ಗಂಟೆ ಸುಮಾರಿಗೆ ಆಕೆ ಮಗುವನ್ನು ಹಾಲ್ನಲ್ಲಿರುವ ಜೋಳಿಗೆಯಲ್ಲಿ ಮಲಗಿಸಿ ವಾಷ್ರೂಮ್ಗೆ ಹೋಗಿದ್ದರು. ವಾಪಸ್ ಬಂದಾಗ ಕಪ್ಪು ಬುರ್ಕಾ ಧರಿಸಿದ ಇಬ್ಬರು ವ್ಯಕ್ತಿಗಳು ಮನೆಯೊಳಗೆ ಅಕ್ರಮವಾಗಿ ಪ್ರವೇಶಿಸಿದ್ದರು. ಇವರಲ್ಲಿ ಒಬ್ಬ ಗಿಡ್ಡ ವ್ಯಕ್ತಿಯು ಜೋಳಿಗೆಯಲ್ಲಿದ್ದ ಮಗುವನ್ನು ಎತ್ತಲು ಯತ್ನಿಸಿದ್ದಾನೆ. ಇದನ್ನು ಕಂಡ ತಫೀಮಾ ಜೋರಾಗಿ ಕಿರುಚಿ, ಮಗುವನ್ನು ರಕ್ಷಿಸಲು ಮುಂದಾದಾಗ, ಆರೋಪಿತನು ಮಗುವನ್ನು ಜೋಳಿಗೆಗೆ ಹಾಕಿದನು. ಈ ವೇಳೆ ಮಗು ಜೋರಾಗಿ ಕಿರುಚಿತು.
ತಫೀಮಾ ದೊಡ್ಡ ವ್ಯಕ್ತಿಯ ಕೈಯನ್ನು ಬಿಗಿಯಾಗಿ ಹಿಡಿದಾಗ, ಗಿಡ್ಡ ವ್ಯಕ್ತಿಯು ಯಾವುದೋ ಸಾಧನದಿಂದ ಆಕೆಯ ಬಲಗೈಗೆ ಗೀಚಿ, ತರಚಿದ ಗಾಯವಾಗುವಂತೆ ಮಾಡಿದ್ದಾನೆ. ಬಳಿಕ ಆತ ತಫೀಮಾಳ ತಲೆಯನ್ನು ಗೋಡೆಗೆ ಬಲವಾಗಿ ತಳ್ಳಿದ್ದಾನೆ. ತಫೀಮಾ ಜೋರಾಗಿ ಬೊಬ್ಬೆ ಹೊಡೆದುದನ್ನು ಗಮನಿಸಿ, ಇಬ್ಬರು ಆರೋಪಿತರು ಮನೆಯಿಂದ ಪರಾರಿಯಾಗಿದ್ದಾರೆ.
ಗಾಯಗೊಂಡ ತಫೀಮಾಳನ್ನು ಶಿರ್ವಾ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ. ವೈದ್ಯರು ಆಕೆಯನ್ನು ಪರೀಕ್ಷಿಸಿ, ಹೊರರೋಗಿಯಾಗಿ ಚಿಕಿತ್ಸೆಗೆ ಒಳಪಡಿಸಿದ್ದಾರೆ.
ಈ ಘಟನೆಯಲ್ಲಿ ಅಪರಿಚಿತ ಇಬ್ಬರು ವ್ಯಕ್ತಿಗಳು ಬುರ್ಕಾ ಧರಿಸಿ ಮನೆಯೊಳಗೆ ಅಕ್ರಮವಾಗಿ ಪ್ರವೇಶಿಸಿ, ಶಿಶುವನ್ನು ಅಪಹರಣ ಮಾಡಲು ಯತ್ನಿಸಿದ್ದಲ್ಲದೇ, ತಫೀಮಾಳಿಗೆ ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಶಿರ್ವ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 33/2025 ರಂತೆ ಕಲಂ 137(2), 62, 329(4), 118(1), 3(5) BNS 2023 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪೊಲೀಸರು ಆರೋಪಿತರಿಗಾಗಿ ತನಿಖೆ ಆರಂಭಿಸಿದ್ದಾರೆ.
ಉಡುಪಿ, ಮೇ 15 : ಜಿಲ್ಲೆಯ ಶಾಲಾ ಕಾಲೇಜುಗಳ ನೂರು ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧವಿದೆ. ಈ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡುವ ಅಂಗಡಿ, ಮುಂಗಟ್ಟುಗಳ ಪರವಾನಿಗೆ ರದ್ದುಪಡಿಸಲು ಸ್ಥಳೀಯ ಸಂಸ್ಥೆಗಳು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾ ಕುಮಾರಿ ಸೂಚನೆ ನೀಡಿದರು.
ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಕೋಟ್ಪಾ-2003 ಕಾಯಿದೆಯ ಕುರಿತ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಕೋಟ್ಪಾ ಕಾಯಿದೆ ಅನ್ವಯ ಶಾಲಾ-ಕಾಲೇಜುಗಳ ನೂರು ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಬಾರದು ಎಂಬ ನಿಯಮವಿದ್ದರೂ ಸಹ ಜಿಲ್ಲೆಯ 38 ಶಾಲಾ-ಕಾಲೇಜುಗಳ ನಿಷೇಧಿತ ವ್ಯಾಪ್ತಿಯಲ್ಲಿಯೇ ಇವುಗಳ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳೂ ಕೇಳಿ ಬಂದಿವೆ. ಈ ಬಗ್ಗೆ ಕೂಡಲೇ ಕ್ರಮವಹಿಸಬೇಕು. ಈಗಾಗಲೇ ಮಣಿಪಾಲದ 11, ಬೈಂದೂರಿನ ತಾಲೂಕಿನ 1 ಕಡೆ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿರುವ ಅಂಗಡಿಗಳ ಲೈಸೆನ್ಸ್ಗಳನ್ನು ರದ್ದುಪಡಿಸಲಾಗಿದೆ. ಬಾಕಿ ಉಳಿದ ಅಂಗಡಿಗಳ ಪರವಾನಿಗೆಯನ್ನು ರದ್ದುಪಡಿಸಲು ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ಈಗಾಗಲೆ ಕೋಡಿಬೆಂಗ್ರೆ ಗ್ರಾಮವನ್ನು ತಂಬಾಕು ಮುಕ್ತ ಗ್ರಾಮವನ್ನಾಗಿ ಘೋಷಿಸಲಾಗಿದೆ. ಜಿಲ್ಲೆಯ ಉಳಿದ ಗ್ರಾಮಗಳಲ್ಲಿಯೂ ಸಹ ತಂಬಾಕು ಮುಕ್ತ ಗ್ರಾಮಗಳನ್ನಾಗಿಸಲು ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯತಿಯ ಜನಪ್ರತಿನಿಧಿಗಳು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸಹಕರಿಸಬೇಕು ಎಂದ ಅವರು, ಜಿಲ್ಲೆಯ ಬಹುಮಹಡಿ ಕಟ್ಟಡಗಳಲ್ಲಿ ಹೆಚ್ಚು ಮನೆಗಳಿದ್ದು, ಅವುಗಳನ್ನು ತಂಬಾಕು ಮುಕ್ತ ಅಪಾರ್ಟ್ಮೆಂಟ್ಗಳೆಂದು ಘೋಷಿಸಲಾಗುತ್ತಿದೆ. ಈಗಾಗಲೇ ಉಡುಪಿ ತಾಲೂಕಿನ ಕ್ಲಾಸಿಕಲ್ ನೆಸ್ಟ್, ಕಾರ್ಕಳದ ಪಂಚಮಿ ರೆಸಿಡೆನ್ಸಿ ಮತ್ತು ಗಂಗಾ ಪ್ಯಾರಡೈಸ್ಗಳನ್ನು ತಂಬಾಕು ಮುಕ್ತ ಅಪಾರ್ಟ್ಮೆಂಟ್ಗಳೆಂದು ಘೋಷಿಸಿ, ಪ್ರಮಾಣಪತ್ರ ನೀಡಲಾಗಿದೆ ಎಂದರು.
ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿಗಳು ಪ್ರತ್ಯೇಕ ಪರವಾನಿಗೆಯನ್ನು ಹೊಂದಿರಬೇಕು. ತಂಬಾಕಿನಂತಹ ಉತ್ಪನ್ನಗಳ ಬಳಕೆಯು ಮಕ್ಕಳ ಜೀವನವನ್ನೇ ಹಾಳುಮಾಡುವುದರಿಂದ ಇವುಗಳ ಬಳಸದಂತೆ ಪೋಷಕರು ತಮ್ಮ ಮಕ್ಕಳ ಮೇಲೆ ನಿಗಾ ವಹಿಸಬೇಕು ಎಂದ ಅವರು, ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲು ಅರಿವು ಕಾರ್ಯಕ್ರಮಗಳನ್ನು ಏರ್ಪಡಿಸಬೇಕು ಎಂದರು.
ಜಿಲ್ಲೆಯಲ್ಲಿ 2025 ರ ಏಪ್ರಿಲ್ ಮಾಹೆಯಲ್ಲಿ 5 ಕ್ಕೂ ಹೆಚ್ಚು ಧಿಡೀರ್ ದಾಳಿಗಳನ್ನು ನಡೆಸಿ, ಸೆಕ್ಷನ್ 4, ಸೆಕ್ಷನ್ 6(ಎ), 6(ಬಿ) ಅಡಿಯಲ್ಲಿ 71 ಕ್ಕೂ ಹೆಚ್ಚು ಪ್ರಕರಣವನ್ನು ದಾಖಲಿಸಿಕೊಂಡು 11,400 ರೂ ದಂಡ ವಸೂಲಿ ಮಾಡಲಾಗಿದೆ. ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿಯೂ ಸಹ ಕೋಟ್ಪಾ ಕಾಯಿದೆಯನ್ನು ಉಲ್ಲಂಘಿಸಿದ 11 ಪ್ರಕರಣಗಳಿಂದ 1100 ರೂ. ದಂಡ ವಸೂಲಿ ಮಾಡಲಾಗಿದೆ ಎಂದ ಅವರು, ದಾಳಿಗಳನ್ನು ನಿರಂತರವಾಗಿ ಆಗಿಂದಾಗ್ಗೆ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ, ಎ.ಎಸ್.ಪಿ ಪಿ.ಎ ಹೆಗಡೆ, ಡಿ.ಎಫ್.ಓ ಗಣಪತಿ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ: ಸಂಚಾರ ಪೊಲೀಸ್ ಠಾಣೆಯ ವತಿಯಿಂದ ಉಡುಪಿ ಮಹಿಳಾ ಕಾಲೇಜಿಗೆ ಭೇಟಿ ನೀಡಿ ಸಂಚಾರ ಮತ್ತು ಸುರಕ್ಷತೆ. ಮಾದಕ ದ್ರವ್ಯ ವ್ಯಸನಗಳಿಂದ ಆಗುವ ಪರಿಣಾಮಗಳ ಬಗ್ಗೆ, ಮಕ್ಕಳ ಸಹಾಯವಾಣಿ 1098 ಕುರಿತು ಹಾಗೂ ತುರ್ತು ಸಂದರ್ಭದಲ್ಲಿ 112 ಸಂಖ್ಯೆಗೆ ಕರೆಮಾಡುವಂತೆ ತಿಳಿಸಲಾಯಿತು.
ಹಿರಿಯಡ್ಕ:
ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಬಿಸಿಎಂ ಹಾಸ್ಟೆಲ್ ಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಸೈಬರ್ ಕ್ರೈಂ, ಲೋನ್ ಆಪ್, ಪೋಕ್ಸೋ ಕಾಯ್ದೆ ಮುಂತಾದ ವಿಚಾರಗಳ ಕುರಿತು ಅರಿವು ಮೂಡಿಸಲಾಯಿತು.
ಕಾರ್ಕಳ, ಮೇ 15, 2025: ಕಾರ್ಕಳದ ಖಾಸಗಿ ಆಸ್ಪತ್ರೆಯೊಂದರಲ್ಲಿ ಹೊಟ್ಟೆಯಲ್ಲಿ ಗಂಟು ತೆಗೆಯಲು ನಡೆದ ಶಸ್ತ್ರಚಿಕಿತ್ಸೆ ವೇಳೆ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಈ ಘಟನೆಯಿಂದ ಕುಪಿತಗೊಂಡ ಮೃತರ ಸಂಬಂಧಿಕರು ಆಸ್ಪತ್ರೆಯ ಎದುರು ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರ ಮಧ್ಯಪ್ರವೇಶಕ್ಕೆ ಕಾರಣವಾಯಿತು.
ಈ ಘಟನೆ ಬುಧವಾರ ಸಂಜೆ ನಡೆದಿದೆ. ಮೃತ ಮಹಿಳೆಯನ್ನು ಸಾನೂರಿನ ನಿವಾಸಿ ಜುಬೇದಾ (54) ಎಂದು ಗುರುತಿಸಲಾಗಿದೆ.
ಆಸ್ಪತ್ರೆಯ ಸಮೀಪದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಜುಬೇದಾ ಅವರು ತೀವ್ರವಾದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ವೈದ್ಯರು ಅವರ ಹೊಟ್ಟೆಯಲ್ಲಿ ಗಂಟು ರೂಪುಗೊಂಡಿರುವ ಶಂಕೆ ವ್ಯಕ್ತಪಡಿಸಿದ್ದರು. ಈ ಗಂಟು ತೆಗೆಯಲು ನಡೆಸಿದ ಶಸ್ತ್ರಚಿಕಿತ್ಸೆಯ ವೇಳೆ ಜುಬೇದಾ ಮೃತಪಟ್ಟಿದ್ದಾರೆ.
ಜುಬೇದಾ ಅವರ ಸಾವಿನ ಬಳಿಕ, ಕೋಪಗೊಂಡ ಸಂಬಂಧಿಕರು ಮತ್ತು ಸ್ಥಳೀಯ ನಿವಾಸಿಗಳು ಆಸ್ಪತ್ರೆಯ ಎದುರು ಪ್ರತಿಭಟನೆ ನಡೆಸಿ, ಆಸ್ಪತ್ರೆ ಆಡಳಿತದಿಂದ ಉತ್ತರ ಕೋರಿದ್ದಾರೆ.
ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ, ಕಾರ್ಕಳ ಟೌನ್ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ಕುಂದಾಪುರ: ತಾಲೂಕಿನ ತೆಕ್ಕಟ್ಟೆ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನಿಸಿದ ಆಘಾತಕಾರಿ ಘಟನೆ ನಡೆದಿದೆ. ಈ ಘಟನೆಯಲ್ಲಿ ತಂದೆ ಮತ್ತು ಮಗ ಮೃತಪಟ್ಟಿದ್ದು, ತಾಯಿಯ ಸ್ಥಿತಿ ಗಂಭೀರವಾಗಿದೆ.
ಸಾಲಬಾಧೆಯಿಂದ ಕಂಗೆಟ್ಟಿದ್ದ ಕುಟುಂಬ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದೆ. ಮೃತರನ್ನು ಕಂಚುಗಾರುಬೆಟ್ಟು ನಿವಾಸಿಗಳಾದ ಮಾಧವ ದೇವಾಡಿಗ (56) ಮತ್ತು ಅವರ ಮಗ ಪ್ರಸಾದ್ ದೇವಾಡಿಗ (22) ಎಂದು ಗುರುತಿಸಲಾಗಿದೆ. ಗಂಭೀರವಾಗಿರುವ ತಾರಾ ದೇವಾಡಿಗ ಅವರನ್ನು ಕೋಟೇಶ್ವರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಂದೆ ಮತ್ತು ಮಗ ಬಾವಿಗೆ ಹಾರಿರುವುದನ್ನು ತಿಳಿದ ತಾಯಿ ತಾರಾ ದೇವಾಡಿಗ ಕೂಡ ಬಾವಿಗೆ ಧುಮುಕಿದ್ದಾರೆ. ಅವರ ಕೂಗು ಕೇಳಿ ಸ್ಥಳೀಯರಾದ ಸಂತೋಷ್ ಶೆಟ್ಟಿ, ಶ್ರೀನಾಥ್ ಶೆಟ್ಟಿ ಸೇರಿದಂತೆ ಇತರರು ರಕ್ಷಣೆಗೆ ಧಾವಿಸಿದ್ದಾರೆ. ಮನೆಯಲ್ಲಿ ದೊರೆತ ಡೆತ್ ನೋಟ್ನಲ್ಲಿ, ಸಾಲಬಾಧೆಯಿಂದ ಬಡ ಕುಟುಂಬ ಮಾನ-ಮರ್ಯಾದೆಗಾಗಿ ಆತ್ಮಹತ್ಯೆಗೆ ಮುಂದಾಗಿದೆ ಎಂದು ತಿಳಿದುಬಂದಿದೆ. ಮಾಧವ ದೇವಾಡಿಗ ಅವರು ಅಂಕದಕಟ್ಟೆಯ ಪೆಟ್ರೋಲ್ ಬಂಕ್ನಲ್ಲಿ ಕೆಲಸ ಮಾಡುತ್ತಿದ್ದರು.
ಕುಂದಾಪುರ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮೃತದೇಹಗಳನ್ನು ಮೇಲಕ್ಕೆತ್ತಿದ್ದಾರೆ. ಕೋಟ ಪೊಲೀಸ್ ಠಾಣೆಯ ಠಾಣಾಧಿಕಾರಿ ರಾಘವೇಂದ್ರ ನೇತೃತ್ವದಲ್ಲಿ ಸಿಬ್ಬಂದಿಗಳು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾರ್ಕಳ, ಮೇ 14, 2025: ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮುಂಡ್ಕೂರು ಗ್ರಾಮದ ಜಾರಿಗೆಕಟ್ಟೆ ಚೆಕ್ಪೋಸ್ಟ್ನಲ್ಲಿ ದಿನಾಂಕ 13/05/2025 ರಂದು ರಾತ್ರಿ 11:30 ಗಂಟೆಗೆ ಅಕ್ರಮ ಮರಳು ಸಾಗಾಟ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪಿರ್ಯಾದಿದಾರರಾದ ಸುಂದರ್ ಪಿ.ಎಸ್.ಐ., ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ, ಕಾರ್ಕಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರ ಮಾಹಿತಿಯಂತೆ ಕರ್ತವ್ಯದಲ್ಲಿದ್ದಾಗ ಈ ಘಟನೆ ನಡೆದಿದೆ.
ಪೊಲೀಸ್ ಸಿಬ್ಬಂದಿ ಸೋಮಶೇಖರ್ ಅವರೊಂದಿಗೆ ರೌಂಡ್ಸ್ನಲ್ಲಿದ್ದ ವೇಳೆ, ಪಟ್ಟೆಕ್ರಾಸ್ನಿಂದ ಶಿರ್ವ ಕಡೆಗೆ ಎರಡು ಟಿಪ್ಪರ್ ಲಾರಿಗಳಲ್ಲಿ (KA-19-AE-3583 ಮತ್ತು KA-05-AB-6460) ಅಕ್ರಮವಾಗಿ ಮರಳು ಸಾಗಿಸುತ್ತಿರುವುದನ್ನು ಪತ್ತೆಹಚ್ಚಲಾಗಿದೆ. ಈ ಟಿಪ್ಪರ್ಗಳ ಚಾಲಕರಾದ ಕಲ್ಲಪ್ಪ ಹಡಪದ್, ಫಿರೋಜ್ ಸಿರಾಜ್ ಸಾಹೇಬ್ ಹಾಗೂ ಒಂದು ಟಿಪ್ಪರ್ನ ಮಾಲೀಕ ಶೇಖ್ ಅಲ್ಪಾಝ್ ಅಹಮ್ಮದ್ ಇವರು ಸಂಘಟಿತವಾಗಿ, ಸಂಬಂಧಿತ ಇಲಾಖೆಯಿಂದ ಪರವಾನಗಿ ಪಡೆಯದೆ ಉಳೆಪ್ಪಾಡಿಯ ಪಟ್ಟೆಕ್ರಾಸ್ನಿಂದ ಅಂದಾಜು ₹16,000 ಮೌಲ್ಯದ 2½ ಯುನಿಟ್ ಮರಳನ್ನು ಕಳವು ಮಾಡಿ ಸಾಗಾಟ ಮಾಡುತ್ತಿದ್ದರು.
ಪೊಲೀಸರು ಆರೋಪಿಗಳಾದ ಕಲ್ಲಪ್ಪ ಹಡಪದ್, ಫಿರೋಜ್ ಸಿರಾಜ್ ಸಾಹೇಬ್ ಮತ್ತು ಶೇಖ್ ಅಲ್ಪಾಝ್ ಅಹಮ್ಮದ್ ಅವರನ್ನು ವಶಕ್ಕೆ ಪಡೆದಿದ್ದು, ಎರಡು ಟಿಪ್ಪರ್ ಲಾರಿಗಳು ಹಾಗೂ ಅವುಗಳಲ್ಲಿದ್ದ ಮರಳನ್ನು ಜಪ್ತಿ ಮಾಡಿದ್ದಾರೆ.
ಈ ಸಂಬಂಧ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 66/2025ರಡಿ ಕಲಂ 303(2), 112(1) R/w 3(5) ಭಾರತೀಯ ನ್ಯಾಯ ಸಂಹಿತೆ 2023, ಕಲಂ 166 R/W 192(A) IMV ಆಕ್ಟ್, ಕಲಂ 4(1-A), 21(4) Mines and Minerals Regulation Act 1957 ರಂತೆ ಪ್ರಕರಣ ದಾಖಲಾಗಿದೆ.
We would like to inform you that our recent report concerning an incident related to a local educational institution has been temporarily unpublished.
Although the report was based on verified sources and supporting evidence, we are currently awaiting an official statement from the institution to ensure all viewpoints are fairly represented.
We remain committed to responsible and balanced journalism. The report may be updated once the institution provides its official response.
ಕುಂದಾಪುರ: ಬೀಜಾಡಿ ಗ್ರಾಮದ ಸಫಾ (21) ಎಂಬ ವಿವಾಹಿತ ಮಹಿಳೆಯು ತನ್ನ ಗಂಡ ಹಾಗೂ ಇತರ ಇಬ್ಬರು ವ್ಯಕ್ತಿಗಳ ವಿರುದ್ಧ ಮಾನಸಿಕ ಹಿಂಸೆ ಮತ್ತು ದೌರ್ಜನ್ಯ ಆರೋಪಿಸಿ ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪಿರ್ಯಾದಿದಾರರಾದ ಸಫಾ ಅವರು 10/11/2024 ರಂದು ಮುಸ್ಲಿಂ ಸಂಪ್ರದಾಯದಂತೆ ಭಟ್ಕಳದ ಡೊಂಗರ್ ಪಲ್ಲಿ ಎಂಬಲ್ಲಿ ಆರೋಪಿ 1 ಮಹಮ್ಮದ್ ನಬೀಲ್ ಜೊತೆ ವಿವಾಹವಾಗಿದ್ದರು. ವಿವಾಹದ ನಂತರ ಭಟ್ಕಳದಲ್ಲಿ ಗಂಡನೊಂದಿಗೆ ವಾಸವಾಗಿದ್ದ ಸಫಾ ಅವರಿಗೆ 20/11/2024 ರಂದು ಸಂಜೆ 5:00 ಗಂಟೆಗೆ ಆರೋಪಿ 2 ಇಸ್ಮಾಯಿಲ್ ಮತ್ತು ಆರೋಪಿ 3 ಶರ್ಫುನ್ನಿಸ ಇವರು ಅವಾಚ್ಯ ಶಬ್ದಗಳಿಂದ ಬೈದು, ಕೈಯಿಂದ ಹೊಡೆದು “ನಿನ್ನ ಮನೆಗೆ ಹೋಗು” ಎಂದು ಗದರಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ನಂತರ, 20/12/2024 ರಂದು ಸಫಾ ತನ್ನ ಗಂಡನೊಂದಿಗೆ ಬೀಜಾಡಿಯ ತಂದೆಯ ಮನೆಗೆ ಬಂದಿದ್ದ ವೇಳೆ ಸಂಜೆ 8:00 ಗಂಟೆಗೆ ಮತ್ತೆ ಅವಾಚ್ಯವಾಗಿ ಬೈದಿದ್ದಾರೆ. ಈ ವೇಳೆ ಸಫಾ ಅವರ ತಂದೆ ಬುದ್ಧಿವಾದ ಹೇಳಿದ್ದಾರೆ. 02/01/2025 ರಂದು ಆರೋಪಿ 1 ಮಹಮ್ಮದ್ ನಬೀಲ್, ಸಫಾ ಅವರನ್ನು ಭಟ್ಕಳದ ತನ್ನ ಮನೆಯಲ್ಲಿ ಬಿಟ್ಟು ವಿದೇಶಕ್ಕೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ಆರೋಪಿ 2 ಮತ್ತು 3 ರವರು ಅವಾಚ್ಯ ಶಬ್ದಗಳಿಂದ ಬೈದು ಹಿಂಸೆ ನೀಡಿದ್ದಾರೆ.
ಮತ್ತೊಂದೆಡೆ, 30/01/2025 ರಂದು ಸಫಾ ತನ್ನ ಗಂಡನೊಂದಿಗೆ ವಿದೇಶಕ್ಕೆ ತೆರಳಿದ್ದಾಗಲೂ, ಆರೋಪಿ 1 ಮಹಮ್ಮದ್ ನೆಭಿಲ್ ಪದೇ-ಪದೇ ಅವಾಚ್ಯ ಶಬ್ದಗಳಿಂದ ಬೈದು ಮಾನಸಿಕ ಹಿಂಸೆ ನೀಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಈ ಸಂಬಂಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 58/2025ರಡಿ ಕಲಂ 85, 352, 115(2) R/W 3(5) BNS ರಂತೆ ಪ್ರಕರಣ ದಾಖಲಾಗಿದೆ.
ಕಾಪು, ಮೇ 12, 2025: ಮೇ 11, ಭಾನುವಾರ ನಡೆದ ಮದುವೆ ಸಮಾರಂಭದಲ್ಲಿ ನಂದಿಕೂರಿನ ದೇವಸ್ಥಾನದ ಕೆರೆಯಲ್ಲಿ ಆಕಸ್ಮಿಕವಾಗಿ ಮುಳುಗಿ ನಾಲ್ಕು ವರ್ಷದ ಬಾಲಕ ಸಾವನ್ನಪ್ಪಿದ್ದಾನೆ
ಮೃತ ಬಾಲಕ ಕಾಪು ತಾಲೂಕಿನ ಕುರ್ಕಾಲುವಿನ ಸತ್ಯನಾರಾಯಣ ಮತ್ತು ಸೌಮ್ಯ ದಂಪತಿಯ ಪುತ್ರ ವಾಸುದೇವ (4). ಕುಟುಂಬವು ನಂದಿಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮದುವೆ ಸಮಾರಂಭಕ್ಕೆ ತೆರಳಿತ್ತು. ಸೌಮ್ಯ ತಮ್ಮ ಒಂದು ವರ್ಷದ ಕಿರಿಯ ಮಗುವಿಗೆ ಊಟ ಹಾಕುವಾಗ ವಾಸುದೇವ ಸಹ ಅವರ ಪಕ್ಕದಲ್ಲೇ ಇದ್ದ. ಆದರೆ, ಸೌಮ್ಯ ಕೈ ತೊಳೆಯಲು ಹೋಗಿ ವಾಪಸ್ ಬಂದಾಗ ವಾಸುದೇವ ಕಾಣೆಯಾಗಿದ್ದಾನೆ ಎಂದು ತಿಳಿದು ಕುಟುಂಬಸ್ಥರು ಆತಂಕದಿಂದ ಹುಡುಕಾಟ ಆರಂಭಿಸಿದರು. ನಂತರ ಬಾಲಕನ ದೇಹ ದೇವಸ್ಥಾನದ ಕೆರೆಯಲ್ಲಿ ತೇಲುತ್ತಿರುವುದು ಕಂಡುಬಂದಿತು. ಕೂಡಲೇ ಮಗುವನ್ನು ಕೆರೆಯಿಂದ ಮೇಲಕ್ಕೆತ್ತಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ವೈದ್ಯರು ಬಾಲಕನನ್ನು ಮೃತಪಟ್ಟಿರುವುದಾಗಿ ಘೋಷಿಸಿದರು.
ಈ ಘಟನೆ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.