Category: Udupi District

  • ಉಡುಪಿ: ಇಂದಿನಿಂದ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಒಳಮೀಸಲಾತಿ ಸಮೀಕ್ಷೆ

    ಉಡುಪಿ: ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತು ನ್ಯಾ| ಎಚ್.ಎನ್. ನಾಗಮೋಹನ್ ದಾಸ್ ಏಕ ಸದಸ್ಯ ವಿಚಾರಣ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶ ಕ್ರೋಢೀಕರಿಸಲು ಮೇ 5ರಿಂದ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಗಳ ಸಮೀಕ್ಷೆ ನಡೆಯಲಿದೆ.

    ಮೂರು ಹಂತದಲ್ಲಿ ಸಮೀಕ್ಷೆ ನಡೆಯಲಿದ್ದು, ಪರಿಶಿಷ್ಟ ಜಾತಿಯವರ ಮನೆಗಳಿಗೆ ಮಾತ್ರ ಭೇಟಿ ನೀಡಿ ವಿವರ ಪಡೆಯಲಾಗುವುದು. ಮೇ 5ರಿಂದ 17ರವರೆಗೆ ಮನೆ ಮನೆ ಸಮೀಕ್ಷೆ, ಮೇ 19ರಿಂದ 21ರ ವರೆಗೆ ಅಲ್ಲಲ್ಲಿ ಕ್ಯಾಂಪ್ ಮಾಡಿ ದಾಖಲೀಕರಣ ಹಾಗೂ ಮೂರನೇ ಹಂತದಲ್ಲಿ ಆನ್‌ಲೈನ್ ಮೂಲಕ ನಮೂದು ಕಾರ್ಯ ನಡೆಯಲಿದೆ. 2011ರ ಸಮೀಕ್ಷೆ ಪ್ರಕಾರ ಜಿಲ್ಲೆಯಲ್ಲಿ 75 ಸಾವಿರ ಪ.ಜಾತಿ ಜನಸಂಖ್ಯೆಯಿದ್ದು, ನಿರ್ದಿಷ್ಟ ಕಾಲಮಿತಿಯಲ್ಲಿ ಸಮೀಕ್ಷೆ ಪೂರ್ಣಗೊಳಿಸಲು ಯೋಜಿಸಲಾಗಿದೆ.

    ಜಿಲ್ಲೆಯ ಮಾಸ್ಟ‌ರ್ ಟ್ರೈನರ್‌ಗಳಿಂದ 35 ತಾಲೂಕು ಮಟ್ಟದ ಟ್ರೈನರ್‌ಗಳಿಗೆ ತರಬೇತಿ ನೀಡಲಾಗಿದೆ. 1112 ಶಿಕ್ಷಕರು ಹಾಗೂ 112 ಮೇಲ್ವಿಚಾರಕರು ಈ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವರು. ಸಮೀಕ್ಷೆ ಕುರಿತ ಮಾಹಿತಿಗೆ 9480843046, ಸಹಾಯವಾಣಿಗೂ ಕರೆ ಮಾಡಬಹುದು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.

    ಆಧಾರ್ ಕಾರ್ಡ್ ಅಥವಾ ರೇಷನ್ ಕಾರ್ಡ್ ಸಹಿತ ಯಾವುದಾದರೂ ಒಂದು ದಾಖಲೆ ನೀಡಬೇಕು. ರಾಷ್ಟ್ರಪತಿಗಳಿಂದ ಅನುಮೋದನೆ ಪಡೆದಿರುವ 101 ಜಾತಿಗಳ ಪಟ್ಟಿಯನ್ನು ಸಿದ್ಧಪಡಿಸಿ ಸರಕಾರವೇ ನೀಡಿದೆ. ಮೊಬೈಲ್ ಆ್ಯಪ್ ಮೂಲಕ ಸರ್ವೆ ನಡೆಯಲಿದ್ದು ಸಮೀಕ್ಷೆಗೆ ಸಂಬಂಧಿಸಿದ ಎಲ್ಲ ಮಾಹಿತಿ ನೀಡಿದೆ.

  • ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಚೋದನಕಾರಿ ಸಂದೇಶ: ಆರೋಪಿ ಬಂಧನ

    ಉಡುಪಿ: ಮೇ 2ರಂದು ಸಂಪುಸಾಲಿನ್ (ಸಂಪು ಎಸ್ ಸಾಣೂರು) ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ರಾಜಕೀಯ ವೈಷಮ್ಯದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ಪ್ರಚೋದನಕಾರಿ ಸಂದೇಶ ಹಾಕಿದ ಬೆಂಗಳೂರು ಹೋಮ್ಗಾರ್ಡ್ ಕಚೇರಿಯ ಉದ್ಯೋಗಿ ಸಂಪತ್ ಸಾಲಿಯಾನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

    ‘ಸಿಎಂ ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದುಗಳಿಗೆ ನೆಮ್ಮದಿ’ ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿ ರಾಜಕೀಯ ಪಕ್ಷದ ಮುಖಂಡರ ಹಾಗೂ ಹಿಂದುಗಳಿಗೆ ನೆಮ್ಮದಿ ಎಂದು ಪ್ರಚೋದಿಸಿ ವೈರತ್ವವನ್ನು ಬೆಳಸಿ ದ್ಷೇಷ ಭಾವನೆ ಹರಡುವ ಉದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿರುವ ಆರೋಪದ ಮೇಲೆ ಈತನನ್ನು ಬಂಧಿಸಲಾಗಿದೆ.

    ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಸೂರಜ್ ಕುಕ್ಕುಂದೂರು ಎಂಬವರು ದೂರಿನಂತೆ ಅಪರಾಧ ಕ್ರಮಾಂಕ : 68/2025 ಕಲಂ 353(2) ಬಿಎನ್ಎಸ್ನಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

    ತನಿಖೆಯ ಬಳಿಕ ಆರೋಪಿ ಬೆಂಗಳೂರಿನ ಹೋಂಗಾರ್ಡ್ ಕಚೇರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂಪತ್ ಸಾಲಿಯಾನ್ ಎಂಬಾತನನ್ನು ಮೇ 4ರಂದು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ತಿಳಿಸಿದ್ದಾರೆ.

  • ಬೈಂದೂರು: ಕಾರು ಕಳ್ಳತನ ಪ್ರಕರಣ; ಆರೋಪಿ ಹಾಗೂ ಕಾರು ಪತ್ತೆ

    ಬೈಂದೂರು: ತಾಲೂಕಿನ ಕಿರೀಮಂಜೇಶ್ವರ ಗ್ರಾಮದ ನಾಗುರಿನ ಗೋವಿಂದ ರಾವ್ ರವರ ಜಿ ಏನ್ ಕಾಂಪ್ಲೆಕ್ಸ್ ನ ಹೊರಭಾಗದಲ್ಲಿ ಇರಿಸಿದ್ದ KA 20 MF 3378 ಮಾರುತಿ ಸ್ವಿಫ್ಟ್ ಕಾರು (ಅಂದಾಜು ಮೌಲ್ಯ 8 ಲಕ್ಷ) ದಿನಾಂಕ 01.05.2025 ರಂದು ಬೆಳೆಗಿನ ಜಾವ 4:30 ಗಂಟೆಗೆ ಕಳವಾಗಿದ್ದು. ಈ ಬಗ್ಗೆ ಕಾರು ಮಾಲಕ ಗಣೇಶ್ ಆಚಾರ್ಯ ರವರು ನೀಡಿರುವ ದೂರಿನ ಮೇರೆಗೆ ಬೈಂದುರು ಪೊಲೀಸ್ ಠಾಣೆಯೆಲ್ಲಿ ಅ. ಕ್ರ. 83/2025 ಕಲಂ 303(2) ರಂತೆ ಪ್ರಕರಣ ದಾಖಲಾಗಿರುತ್ತದೆ.

    ಈ ಪ್ರಕರಣದ ಪತ್ತೆಗಾಗಿ ಶ್ರೀ ಹೆಚ್ ಡಿ ಕುಲಕರ್ಣಿ ಪೊಲೀಸ್ ಉಪಾಧೀಕ್ಷಕರು ಕುಂದಾಪುರ ಉಪವಿಭಾಗರವರ ಮಾರ್ಗದರ್ಶನದಲ್ಲಿ ಶ್ರೀ ಸಾವೀತ್ರ ತೇಜ ಪೊಲೀಸ್ ವ್ರತ್ತ ನಿರೀಕ್ಷಿಕರು ಬೈಂದೂರು ರವರ ನೇತೃತ್ವ ದಲ್ಲಿ, ಬೈಂದೂರು ಠಾಣೆಯ ಪಿ ಎಸ್ ಐ ರವರಾದ ತಿಮ್ಮೀಶ್ ಬಿ ಏನ್ ಮತ್ತು ನವೀನ ಪಿ ಬೋರಕರ, ಬೈಂದೂರು ಠಾಣೆಯ ಸಿಬ್ಬಂದಿಯವರಾದ ಚಿದಾನಂದ, ಮಾಳಪ್ಪ, ವ್ರತ್ತ ನಿರೀಕ್ಷಿಕರ ಕಚೇರಿಯ ಸಿಬ್ಬಂದಿಯವರಾದ ರವೀಂದ್ರ ವಿಶೇಷ ತಂಡ ರಚಿಸಲಾಯಿತು.

    ವಿಶೇಷ ತಂಡದಲ್ಲಿದ್ದ ಅಧಿಕಾರಿ ಮಟಿಗೂ ಸಿಬ್ಬಂದಿಗಳು ದಿನಾಂಕ 02.05.2025 ರಂದು ಆರೋಪಿ ಪೌಜಾನ್ ಅಹ್ಮದ್ ಸಮೇತ ಕಾರನ್ನು ಪತ್ತೆ ಮಾಡಿ ಕಾರನ್ನು ಸ್ವಧೀನಪಡೆಸಿಕೊಂಡಿದ್ದಾರೆ. ಹಾಗೂ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ.

    ರಕ್ಷಕ್ ನೆಟ್ವರ್ಕ್ ಅಂಡ್ ಸೆಕ್ಯೂರಿಟಿ ಸೊಲ್ಯೂಷನ್ ಅವರು ಕಾರ್ಯಾಚರಣೆಯಲ್ಲಿ ಸಹಕರಿಸಿರುತ್ತಾರೆ.

    ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಾನ್ಯ ಉಡುಪಿ ಜಿಲ್ಲಾ ಪೊಲೀಸ್ ಅಧಿಕ್ಷಕರಾದ ಡಾ. ಅರುಣ್ ಕೆ ಐ ಪಿ ಎಸ್. ರವರು ಹಾಗೂ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧಿಕ್ಷಕರಾದ ಶ್ರೀ ಸುಧಾಕರ್ ನಾಯ್ಕ್ ಮತ್ತು ಪರಮೇಶ್ವರ ಹೆಗಡೆ ರವರು ಅಭಿನಂದಿಸಿರುತ್ತಾರೆ.

  • ಉಡುಪಿ: ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನ

    ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವ ಸ್ಪಂದನ ಕೇಂದ್ರದಲ್ಲಿ ಗೌರವಧನ ಆಧಾರದ ಮೇಲೆ ಯುವ ಪರಿವರ್ತಕರ ಹುದ್ದೆಯ ಕರ್ತವ್ಯ ನಿರ್ವಹಿಸಲು ಯಾವುದೇ ಪದವಿ ಅಥವಾ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ 21 ರಿಂದ 35 ವರ್ಷದೊಳಗಿನ ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    ಕನ್ನಡ ಸ್ಪಷ್ಠವಾಗಿ ಮಾತನಾಡಬಲ್ಲ, ಸಂವಹನ ಕಲೆ ಕೌಶಲ್ಯ ಹೊಂದಿರುವ ಹಾಗೂ ಸಮುದಾಯದಲ್ಲಿ ಕೆಲಸ ಮಾಡಿದವರಿಗೆ ಆದ್ಯತೆ ನೀಡಲಾಗುವುದು.

     ಸ್ವ-ವಿವರ ಹಾಗೂ ಮೂಲ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಲು ಮೇ 15 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಜ್ಜರಕಾಡು, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. 

  • ಕುಂದಾಪುರ: ಕಳೆದುಹೋದ ಮೊಬೈಲ್ ಫೋನ್ CEIR ಪೋರ್ಟಲ್ ಮೂಲಕ ಪತ್ತೆ, ಮಾಲೀಕರಿಗೆ ಹಸ್ತಾಂತರ

    ಕುಂದಾಪುರ, ಮೇ 5: ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದುಹೋದ ಮೊಬೈಲ್ ಫೋನ್ ಒಂದನ್ನು ಕೇಂದ್ರ ಸರ್ಕಾರದ ಸೆಂಟ್ರಲ್ ಇಕ್ವಿಪ್ಮೆಂಟ್ ಐಡೆಂಟಿಟಿ ರಿಜಿಸ್ಟರ್ (CEIR) ಪೋರ್ಟಲ್ ಬಳಸಿ ಪತ್ತೆಹಚ್ಚಿರುವ ಉಡುಪಿ ಪೊಲೀಸರು, ಫೋನ್‌ನ ಮಾಲೀಕರಿಗೆ ಯಶಸ್ವಿಯಾಗಿ ಹಿಂದಿರುಗಿಸಿದ್ದಾರೆ.

    ಏನಿದು ಸಿಇಐಆರ್? ಹೇಗೆ ಕೆಲಸ ಮಾಡುತ್ತದೆ?

    ಸಿಇಐಆರ್ ದೂರು ನೀಡುವ ಕಾರ್ಯವಿಧಾನ ಕದ್ದ ಸಾಧನಗಳನ್ನು ನಿಷ್ಕ್ರಿಯಗೊಳಿಸುತ್ತದೆ. ಅವುಗಳನ್ನು ಬಳಸಲು ಪ್ರಯತ್ನಿಸಿದಾಗ ಪೊಲೀಸರಿಗೆ ಎಚ್ಚರಿಕೆ ನೀಡುತ್ತದೆ. CEIR ಪೋರ್ಟಲ್‌ನಲ್ಲಿ ಸಾಧನ ಮತ್ತು ಅದರ ಮಾಲೀಕರ ಎಲ್ಲಾ ವಿವರಗಳನ್ನು ಒದಗಿಸಿದ ನಂತರ, ಮೊಬೈಲ್ ಸ್ವಯಂಚಾಲಿತವಾಗಿ ನಿರ್ಬಂಧಿಸಲ್ಪಡುತ್ತದೆ. ಹೊಸ ಸಿಮ್ ಕಾರ್ಡ್ ಅನ್ನು ಸೇರಿಸುವ ಮೂಲಕ ಸಾಧನವನ್ನು ಬಳಸುವ ಯಾವುದೇ ಪ್ರಯತ್ನವು ಹೊಸ ಬಳಕೆದಾರರ ಸಂಖ್ಯೆ ಮತ್ತು ಸ್ಥಳ ಮತ್ತು ಇತರ ವಿವರಗಳ ಬಗ್ಗೆ ಎಚ್ಚರಿಕೆಯನ್ನು ನೀಡುತ್ತದೆ.

    ದೂರು ಬಂದ ಬಳಿಕ ಮೊದಲು ಪೊಲೀಸರು ಆ ಸಂಖ್ಯೆಗೆ ಮರಳಿ ಕರೆ ಮಾಡುತ್ತಾರೆ. ಪ್ರತಿಕ್ರಿಯೆ ನೀಡದಿದ್ದಲ್ಲಿ ಮೊಬೈಲ್ ಫೋನ್ ಸಕ್ರಿಯಗೊಳಿಸುತ್ತಾರೆ. ಇದು ಕದ್ದ ಅಥವಾ ಕಳೆದು ಹೋದ ಫೋನ್ ಎಂದು ತಿಳಿಸುತ್ತಾರೆ. ಮತ್ತು ಅದನ್ನು ಹಿಂತಿರುಗಿಸಬೇಕು ಇಲ್ಲಾ ಕಾನೂನು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎನ್ನುವ ಎಚ್ಚರಿಕೆ ನೀಡುತ್ತಾರೆ. ಇದು ರಿಸೀವರ್ ಬಳಸಿದ ಸಿಮ್ ಕಾರ್ಡ್ ಎಲ್ಲಾ ವಿವರಗಳನ್ನು ಒದಗಿಸುತ್ತದೆ ಮತ್ತು ಪೊಲೀಸರು ಫೋನ್‌ ಸಿಕ್ಕ ವ್ಯಕ್ತಿ ಜೊತೆ ಸಂಪರ್ಕದಲ್ಲಿರಲು ಸುಲಭವಾಗುತ್ತದೆ. ಇಂತಹ ಪ್ರಕರಣದಲ್ಲಿ ಖುದ್ದಾಗಿ ಬಂದು ಫೋನ್‌ ನೀಡುವುದಿಲ್ಲ ಬದಲಿಗೆ ಮೊಬೈಲ್‌ಗಳನ್ನು ಕೊರಿಯರ್‌ಗಳ ಮೂಲಕ ಪೊಲೀಸರಿಗೆ ಹಿಂತಿರುಗಿಸುತ್ತಾರೆ.

    ಮೊಬೈಲ್ ಕಳೆದುಹೋದವರು ದೂರು ದಾಖಲಿಸುವುದು ಹೇಗೆ?

    ಕಳೆದುಹೋದ ಅಥವಾ ಕದ್ದ ಮೊಬೈಲ್ ಫೋನ್‌ಗಳ ಬಗ್ಗೆ ದೂರು ದಾಖಲಿಸಲು ನಾಗರಿಕರು ಈ ಕೆಳಗಿನ ಹಂತಗಳನ್ನು ಅನುಸರಿಸಬಹುದು:

    1. CEIR ಪೋರ್ಟಲ್‌ಗೆ ಭೇಟಿ: www.ceir.gov.in ವೆಬ್‌ಸೈಟ್‌ಗೆ ಭೇಟಿ ನೀಡಿ.
    2. ದೂರು ದಾಖಲಾತಿ: “Block/Lost Mobile” ಆಯ್ಕೆಯನ್ನು ಆರಿಸಿ, ಅಗತ್ಯವಿರುವ ಮಾಹಿತಿಯಾದ ಫೋನ್‌ನ IMEI ಸಂಖ್ಯೆ, ಮೊಬೈಲ್ ಸಂಖ್ಯೆ, ಕಳೆದ ಸ್ಥಳದ ವಿವರಗಳು ಮತ್ತು ಆಧಾರ್ ಕಾರ್ಡ್ ವಿವರಗಳನ್ನು ಭರ್ತಿ ಮಾಡಿ.
    3. ಕರ್ನಾಟಕ ರಾಜ್ಯ ಪೊಲೀಸ್ (KSP) ಆ್ಯಪ್: ಕರ್ನಾಟಕದ ನಾಗರಿಕರು KSP ಆ್ಯಪ್‌ನಲ್ಲಿ “e-Lost” ವಿಭಾಗದ ಮೂಲಕ ದೂರು ದಾಖಲಿಸಬಹುದು. ದೂರು ದಾಖಲಾದ ನಂತರ, CEIR ಪೋರ್ಟಲ್ ಮೂಲಕ ಫೋನ್‌ನ IMEI ಸಂಖ್ಯೆಯನ್ನು ತಡೆಯಲಾಗುತ್ತದೆ ಮತ್ತು ಟ್ರ್ಯಾಕಿಂಗ್ ಪ್ರಕ್ರಿಯೆ ಆರಂಭವಾಗುತ್ತದೆ.
    4. ಸ್ಥಳೀಯ ಪೊಲೀಸ್ ಠಾಣೆ: ದೂರನ್ನು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದಾಖಲಿಸಿ, ಇದರಿಂದ ಪೊಲೀಸರು CEIR ವ್ಯವಸ್ಥೆಯ ಮೂಲಕ ಫೋನ್ ಪತ್ತೆಗೆ ಕ್ರಮ ಕೈಗೊಳ್ಳಬಹುದು.

    ಈ ಪೋರ್ಟಲ್‌ ಬಳಸಲು ಸಿಮ್ ಕರ್ನಾಟಕದಲ್ಲಿ ನೋಂದಣಿಯಾಗಿರಬೇಕು

    ಈ ವ್ಯವಸ್ಥೆ ಬಳಸಿಕೊಳ್ಳಲು ಮೊಬೈಲ್ ಮತ್ತು ಸಿಮ್ ಅನ್ನು ಕರ್ನಾಟಕದಲ್ಲಿ ನೋಂದಾಯಿಸಿಕೊಳ್ಳಬೇಕು. ಇದರಿಂದ ಕಳೆದು ಹೋದ ಮೊಬೈಲ್ ಅನ್ನು ದೇಶದ ಯಾವುದೇ ಭಾಗಕ್ಕೆ ತೆಗೆದುಕೊಂಡ ಹೋದರೂ ಪತ್ತೆಹಚ್ಚಬಹುದು. ಹಿಂದೆ ರಾಜ್ಯದಲ್ಲಿ ಕಳೆದು ಹೋದ ಮೊಬೈಲ್ಗಗಳನ್ನು ಪತ್ತೆಹಚ್ಚುವುದು ಕಷ್ಟಕರವಾಗಿತ್ತು. ಈಗ ಅದು ಸುಲಭವಾದ ಮಾರ್ಗವಾಗಿದೆ ಎಂದು ಐಪಿಎಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

  • ಉಪ್ಪುಂದ: ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿಯಾಗಿ ಗಂಭೀರ ಗಾಯ

    ಬೈಂದೂರು: ರಸ್ತೆ ದಾಟುಲು ನಿಂತಿದ್ದ ವ್ಯಕ್ತಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡ ಘಟನೆ ಉಪ್ಪುಂದ ಶಾಲೆಬಾಗಿಲಿನಲ್ಲಿ ಸಂಭವಿಸಿದೆ. ಜಯಶೀಲ ಗಾಯಗೊಂಡ ವ್ಯಕ್ತಿ.

    ಉಪ್ಪುಂದ ಕಡೆಯಿಂದ ಬೈಂದೂರು ಕಡೆಗೆ ಬರುತ್ತಿದ್ದ ಕಾರು ರಸ್ತೆಯ ಬದಿಯಲ್ಲಿ ರಸ್ತೆ ದಾಟಲು ನಿಂತಿದ್ದ ಜಯಶೀಲ ಅವರಿಗೆ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದು ಗಂಭೀರ ‌ ಗಾಯಗೊಂಡಿದ್ದು ಮಣಿಪಾಲ ದಾಖಲಿಸಲಾಗಿದೆ.

    ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • Green Valley International School Secures 100% Results in ICSC & ISC; Pratik Prabhu Tops with 98.4%, Ranks 8th Nationally

    Shiruru: Green Valley International School has once again proven its academic excellence by achieving a 100% pass result for the academic year 2024-2025, with over 50 students securing distinctions across various subjects.

    Leading the cohort is Pratik Prasad Prabhu, who scored an impressive 98.4%, earning the 8th rank at the national level. Pratik is the son of renowned businessman Prasad Prabhu and Jhanvi Prabhu.

    Out of 92 students appeared, 29 students obtained above 90% marks, 30 students obtained above 80% and 33 students obtained above 70%

    Below are the details of students who secured distinction in their respective fields:

  • ಕೊಲ್ಲೂರು ಗಂಗೆ ಕೊರಗ ಮನೆ ಧ್ವಂಸ: ಆರೋಪಿಗಳ ಬಂಧನಕ್ಕೆ ಆಗ್ರಹ

    ಕೊಲ್ಲೂರು: ಯಾವುದೇ ಮಾಹಿತಿ ನೀಡದೇ ಬುಡಕಟ್ಟು ಜನಾಂಗದ ಗಂಗೆ ಕೊರಗ ಎಂಬ ಬಡ ಮಹಿಳೆ 40 ವರ್ಷಗಳಿಂದ ವಾಸವಾಗಿದ್ದ ಮನೆಯನ್ನು ಜೆಸಿಬಿ ತಂದು ನೆಲಸಮ ಮಾಡಿ ಧ್ವಂಸಗೊಳಿಸಿರುವ ಜಗದಾಂಭ ಟ್ರಸ್ಟ್‌ ನ ಮಾಲೀಕರಾದ ಪರಮೇಶ್ವರ ಅಡಿಗ ಅವರನ್ನು ಶೀಘ್ರವಾಗಿ ಬಂಧಿಸಬೇಕು ಎಂದು ಉಡುಪಿ ಜಿಲ್ಲೆಯ ಜಿಲ್ಲಾ ದೌರ್ಜನ್ಯ ತಡೆ ಜಾಗೃತಿ ಉಸ್ತುವಾರಿ ಸಮಿತಿ ಸದಸ್ಯರಾದ ವಾಸುದೇವ ಮುದೂರು ಆಗ್ರಹಿಸಿದ್ದಾರೆ.

    ಮಾನವಿಯತೆ ಇಲ್ಲದೇ ಮೃಗಗಳಂತೆ ವರ್ತಿಸುತ್ತಿರುವ, ಬಡವರ ಬದುಕಿನಲ್ಲಿ ಚೆಲ್ಲಾಟ ಆಡುವ ಪರಮೇಶ್ವರ ಅಡಿಗರಂತಹವರಿಗೆ ಕಾನೂನು ಭಯ ಉಂಟಾಗಬೇಕೆಂದರೆ ಅವರ ಬಂಧನ ಆಗಬೇಕು. ಆಗ ಮಾತ್ರ ಇಂತಹವರನ್ನು ಮಟ್ಟ ಹಾಕಲು ಸಾಧ್ಯ.

    ಹೀಗಾಗಿ ಶೀಘ್ರವಾಗಿ ಅವರನ್ನು ಬಂಧಿಸುವಂತೆ ಉಡುಪಿ ಜಿಲ್ಲೆಯ ಜಿಲ್ಲಾ ದೌರ್ಜನ್ಯ ತಡೆ ಜಾಗೃತಿ ಉಸ್ತುವಾರಿ ಸಮಿತಿ ಸದಸ್ಯರಾದ ವಾಸುದೇವ ಮುದೂರು, ಉಡುಪಿಯ ದಲಿತ ಮುಖಂಡರು ಹಾಗೂ ಜನಪರ ಹೋರಾಟಗಾರರು ಅದ ಜಯ ಮಲ್ಪೆ, ಉಪ್ಪೂರು ಜಿಲ್ಲಾಧ್ಯಕ್ಷರು ಪ.ಜಾತಿ/ ಪ.ಪಂಗಡ ಸಂಘ ಉಡುಪಿ ಗುತ್ತಿಗೆದಾರರರಾದ ಪರಮೇಶ್ವರ, ಅಂಬೇಡ್ಕರ್ ಯುವ ಸೇನೆ ಉಡುಪಿಯ ಜಿಲ್ಲಾಧ್ಯಕ್ಷರಾದ ಗಣೇಶ್ ನೆರ್ಗಿ , ನರಸಿಂಹ ಹಳಗೇರಿ ಕೆಡಿಪಿ ಸದಸ್ಯರು, ಮಾಜಿ ದರ್ಮದರ್ಶಿಗಳು ಕೊಲ್ಲೂರು, ನಾಗರಾಜ್ ಉಪ್ಪುಂದ ಜಿಲ್ಲಾ ಸಂಘಟನಾ ಸಂಚಾಲಕರು, ಲಕ್ಷ್ಮಣ ಸಂಚಾಲಕರು ಬೈಂದೂರು ನಾಗರಾಜ್ ಸಟ್ವಾಡಿ ಕುಂದಾಪುರ ಇವರು ಜಂಟಿ ಪತ್ರೀಕ ಹೇಳಿಯಲ್ಲಿ ಆಗ್ರಹಿಸಿದ್ದಾರೆ.

  • ನಾವುಂದ ಸಬ್‌ಸ್ಟೇಷನ್‌ನ ತಾಂತ್ರಿಕ ದೋಷದಿಂದ ವಿದ್ಯುತ್‌ ಕಡಿತ: ಶೀಘ್ರ ಪರಿಹಾರಕ್ಕೆ ಕ್ರಮ. ಗ್ಯಾರಂಟಿ ಸಭೆಯಲ್ಲಿ ವಿವರಣೆ

    ಬೈಂದೂರು: ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಮೋಹನ್ ಪೂಜಾರಿ ಅವರ ನೇತೃತ್ವದಲ್ಲಿ ಜರುಗಿತು.

    ಸಭೆಯ ಅಧ್ಯಕ್ಷತೆ ವಹಿಸಿದ ಮೋಹನ್ ಪೂಜಾರಿ ಮಾತನಾಡಿ, ವಿದ್ಯುತ್ ಲೋಡ್ ಶೆಡ್ಡಿಂಗ್ ಸಮಸ್ಯೆಗೆ ಕಾರಣವಾದ ಮೆಸ್ಕಾಂ ಉಪಕೇಂದ್ರದ ತಾಂತ್ರಿಕ ತೊಂದರೆಯನ್ನು ಸಾರ್ವಜನಿಕರಿಗೆ ಸ್ಪಷ್ಟವಾಗಿ ತಿಳಿಸುವ ಕೆಲಸವಾಗಬೇಕು. ಜನರಿಗೆ ತೊಂದರೆಯಾಗದಂತೆ, ನಿಗದಿತ ಸಮಯದೊಳಗೆ ಅಧಿಕಾರಿಗಳು ಪರಿಹಾರ ಕಂಡುಕೊಳ್ಳಲು ಶ್ರಮಿಸಬೇಕು. ಇದರಿಂದ ಸರ್ಕಾರದ ಬಗ್ಗೆ ತಪ್ಪು ಗ್ರಹಿಕೆ ಉಂಟಾಗದಂತೆ ಎಚ್ಚರಿಕೆ ವಹಿಸಿ. ಜೊತೆಗೆ, ಜನಪ್ರತಿನಿಧಿಗಳು ವಾಸ್ತವಿಕತೆಯನ್ನು ಅರಿಯದೇ ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದರು.

    ಈ ವಿಷಯದ ಬಗ್ಗೆ ಸಭೆಯಲ್ಲಿ ಸ್ಪಷ್ಟನೆ ನೀಡಿದ ಬೈಂದೂರು ಮೆಸ್ಕಾಂ ಉಪಕೇಂದ್ರದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಹರೀಶ್, ಬೈಂದೂರು ಮತ್ತು ಕೊಲ್ಲೂರು ಮೆಸ್ಕಾಂ ಉಪಕೇಂದ್ರಗಳಿಗೆ ವಿದ್ಯುತ್‌ ಪೂರೈಸುವ ನಾವುಂದದ 110 ಕೆ.ವಿ. ಸಬ್‌ಸ್ಟೇಷನ್‌ನ 20 ಎಂವಿಎ ಟ್ರಾನ್ಸ್‌ಫಾರ್ಮರ್‌ನಲ್ಲಿ ಕಳೆದ ವಾರ ತಾಂತ್ರಿಕ ದೋಷ ಕಂಡುಬಂದಿತು. ಈ ಕಾರಣದಿಂದ ಕುಂದಾಪುರ ಸಬ್‌ಸ್ಟೇಷನ್‌ನಿಂದ ವಿದ್ಯುತ್‌ ಸರಬರಾಜು ಮಾಡಲಾಗುತ್ತಿದೆ. ಹೆಚ್ಚಿನ ಲೋಡ್‌ನಿಂದ ಟ್ರಿಪ್ಪಿಂಗ್ ಸಮಸ್ಯೆ ಉಂಟಾಗಿದ್ದು, ಬೈಂದೂರು ಮತ್ತು ಕೊಲ್ಲೂರು ಪ್ರದೇಶಗಳಲ್ಲಿ ಕೆಲ ದಿನಗಳಿಂದ ವಿದ್ಯುತ್‌ ವ್ಯತ್ಯಯವಾಗುತ್ತಿದೆ. ಈಗಾಗಲೇ ಟ್ರಾನ್ಸ್‌ಫಾರ್ಮರ್ ದುರಸ್ತಿ ಕಾರ್ಯ ಪ್ರಗತಿಯಲ್ಲಿದ್ದು, ಒಂದೆರಡು ದಿನಗಳಲ್ಲಿ ಸಾಮಾನ್ಯ ಸ್ಥಿತಿಗೆ ಮರಳುವ ಸಂಭವವಿದೆ ಎಂದರು.

    ಬೈಂದೂರಿನಲ್ಲಿ ನಿರ್ಮಾಣವಾಗುತ್ತಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಕಾಮಗಾರಿ ಬಹುತೇಕ ಮುಕ್ತಾಯವಾಗಿದ್ದು, ಉಳಿದ ಕೆಲಸವನ್ನು ಪೂರ್ಣಗೊಳಿಸಿ, ಉದ್ಘಾಟನೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಸೂಚಿಸಿದರು. ಜೊತೆಗೆ, ಗ್ರಾಮೀಣ ಪ್ರದೇಶಗಳಿಗೆ ಕೆಎಸ್‌ಆರ್‌ಟಿಸಿ ಬಸ್ ಸೌಲಭ್ಯ ಕಲ್ಪಿಸಲು ವ್ಯವಸ್ಥೆ ಮಾಡಬೇಕೆಂದು ಒತ್ತಾಯಿಸಿದರು.

    ಬೈಂದೂರು ತಾಲೂಕಿನಲ್ಲಿ ಪಂಚ ಗ್ಯಾರಂಟಿಗೆ 182.43 ಕೋಟಿ ರೂ. ವೆಚ್ಚ

    ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಡಿ ಬೈಂದೂರು ತಾಲೂಕಿಗೆ ಇದುವರೆಗೆ ಸುಮಾರು 182.43 ಕೋಟಿ ರೂ. ವೆಚ್ಚವಾಗಿದೆ. ಗೃಹಲಕ್ಷ್ಮಿ ಯೋಜನೆಯಿಂದ ಜನವರಿವರೆಗೆ 96.61 ಕೋಟಿ ರೂ. ಫಲಾನುಭವಿಗಳ ಖಾತೆಗೆ ಜಮಾ ಆಗಿದೆ. 48 ಫಲಾನುಭವಿಗಳಿಗೆ ಆಧಾರ್ ಬ್ಯಾಂಕಿಂಗ್ ಮ್ಯಾಪಿಂಗ್ ಬಾಕಿಯಿದ್ದು, ತಾಂತ್ರಿಕ ಕಾರಣಗಳಿಂದ 479 ಮತ್ತು 71 ಹೊಸ ನೋಂದಣಿಗಳು ಸೇರಿ ಒಟ್ಟು 616 ಫಲಾನುಭವಿಗಳಿಗೆ ಬಾಕಿಯಿದೆ.

    ಗೃಹ ಜ್ಯೋತಿ ಯೋಜನೆಯಿಂದ ಬೈಂದೂರು ಮೆಸ್ಕಾಂ ವ್ಯಾಪ್ತಿಯ 27,942 ಕುಟುಂಬಗಳಿಗೆ 34.54 ಕೋಟಿ ರೂ., ತಲ್ಲೂರು ಮೆಸ್ಕಾಂ ವ್ಯಾಪ್ತಿಯ 1,935 ಕುಟುಂಬಗಳಿಗೆ 2.23 ಕೋಟಿ ರೂ. ಸೇರಿ ಒಟ್ಟು 36.78 ಕೋಟಿ ರೂ. ವೆಚ್ಚವಾಗಿದೆ. ಅನ್ನಭಾಗ್ಯ ಯೋಜನೆಯಡಿ 25,182 ಪಡಿತರ ಚೀಟಿಗಳಿಗೆ 1,89,26,610 ರೂ. ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾವಾಗಿದೆ. ಯುವ ನಿಧಿ ಯೋಜನೆಯಡಿ 340 ಫಲಾನುಭವಿಗಳಿಗೆ 59.34 ಲಕ್ಷ ರೂ. ಜಮಾ ಆಗಿದೆ. ಶಕ್ತಿ ಯೋಜನೆಯಡಿ 1.36 ಕೋಟಿ ಮಹಿಳೆಯರು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸಿದ್ದು, 48.44 ಕೋಟಿ ರೂ. ರಿಯಾಯಿತಿ ಪಡೆದಿದ್ದಾರೆ ಎಂದರು.

    ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ. ರವಿಕುಮಾರ್ ಹುಕ್ಕೇರಿ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರಾದ ಮಾಲತಿ ಶಿವಾನಂದ, ರಾಮ ಪೂಜಾರಿ, ಅನೀಶ್ ಪೂಜಾರಿ, ರಾಘವೇಂದ್ರ ಬಿಲ್ಲವ, ಗುಲಾಬಿ, ಸೂರ್ಯಕಾಂತಿ ಡಿ, ಗಣೇಶ ಗಾಣಿಗ, ಅಣ್ಣಪ್ಪ ಶೆಟ್ಟಿ, ದೇವದಾಸ್ ವಿ.ಜೆ., ಬಾಬು ದೇವಾಡಿಗ, ರಾಮಚಂದ್ರ ಖಾರ್ವಿ, ಮುಕ್ರಿ ಮೊಹಮ್ಮದ್ ಅಲ್ತಾಫ್, ಮೆಸ್ಕಾಂ, ಕೆಎಸ್‌ಆರ್‌ಟಿಸಿ, ಮಹಿಳಾ ಮತ್ತು ಮಕ್ಕಳ ಶಿಶು ಅಭಿವೃದ್ಧಿ ಇಲಾಖೆ, ಆಹಾರ ಇಲಾಖೆ ಹಾಗೂ ಯುವ ಸಬಲೀಕರಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

  • ದಕ್ಷಿಣ ಕನ್ನಡ, ಉಡುಪಿಯೆಲ್ಲಿ anti-communal ಟಾಸ್ಕ್ ಫೋರ್ಸ್ ಸ್ಥಾಪನೆ

    ಮಂಗಳೂರು, ಮೇ 3: ಇತ್ತೀಚಿನ ಕೋಮು ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಶನಿವಾರ ದಕ್ಷಿಣ ಕನ್ನಡ (ಡಿಕೆ) ಮತ್ತು ಉಡುಪಿ ಜಿಲ್ಲೆಗಳಲ್ಲಿ ಶಾಂತಿ ಕಾಪಾಡಲು ಮತ್ತು ಇಂತಹ ಘಟನೆಗಳ ಮರುಕಳಿಕೆ ತಡೆಯಲು ಕೋಮುವಾದ ವಿರೋಧಿ ಟಾಸ್ಕ್ ಫೋರ್ಸ್ (anti-communal task force) ರಚನೆಯನ್ನು ಘೋಷಿಸಿದರು.

    “ಈ ಟಾಸ್ಕ್ ಫೋರ್ಸ್ ಅನ್ನು ನಕ್ಸಲ್ ವಿರೋಧಿ ದಳದ ಮಾದರಿಯಲ್ಲಿ ರೂಪಿಸಲಾಗುವುದು,” ಎಂದು ಸಚಿವರು ತಿಳಿಸಿದ್ದು, ಒಂದು ವಾರದೊಳಗೆ ಇದನ್ನು ಸ್ಥಾಪಿಸಲಾಗುವುದು ಎಂದರು. ಈ ಘಟಕಕ್ಕೆ ಕೋಮುವಾದಿ ಚಟುವಟಿಕೆಗಳಲ್ಲಿ ಭಾಗಿಯಾದವರ ವಿರುದ್ಧ, ಒಳಸಂಚುಕಾರರು ಮತ್ತು ಬೆಂಬಲಿಗರನ್ನು ಒಳಗೊಂಡಂತೆ ಕಾನೂನು ಕ್ರಮ ಕೈಗೊಳ್ಳಲು ಪೂರ್ಣ ಕಾನೂನು ಅಧಿಕಾರ ನೀಡಲಾಗುವುದು.

    “ಕೋಮುವಾದಿ ಹಿಂಸಾಚಾರದಲ್ಲಿ ತೊಡಗುವವರು ಅಥವಾ ಅದನ್ನು ಪ್ರೋತ್ಸಾಹಿಸುವವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಟಾಸ್ಕ್ ಫೋರ್ಸ್‌ಗೆ ಸ್ಪಷ್ಟ ಆದೇಶವಿರುತ್ತದೆ. ಕಾನೂನಿನ ಎಲ್ಲ ಅಧಿಕಾರಗಳನ್ನು ಅವರಿಗೆ ನೀಡಲಾಗುವುದು,” ಎಂದು ಅವರು ಹೇಳಿದರು.

    ಡಾ. ಪರಮೇಶ್ವರ ಅವರು, ಉದ್ವಿಗ್ನ ಭಾಷಣಗಳನ್ನು ಮಾಡುವವರು ಅಥವಾ ಉದ್ದೇಶಪೂರ್ವಕ ಹೇಳಿಕೆಗಳನ್ನು ನೀಡುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಆರಂಭಿಸಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

    “ಇಂತಹ ಅಂಶಗಳನ್ನು ನಾವು ಕಬ್ಬಿಣದ ಕೈಯಿಂದ ಎದುರಿಸುತ್ತೇವೆ,” ಎಂದು ಅವರು ಎಚ್ಚರಿಕೆ ನೀಡಿ, ಸೂಕ್ಷ್ಮವಾದ ಕರಾವಳಿ ಪ್ರದೇಶದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಖಾತರಿಪಡಿಸಲು ಸರ್ಕಾರ ಬದ್ಧವಾಗಿದೆ ಎಂದು ಪುನರುಚ್ಚರಿಸಿದರು.

    ಸರ್ಕಾರವು ಜಾಗರೂಕವಾಗಿದ್ದು, ಶಾಂತಿ ಮತ್ತು ಸೌಹಾರ್ದತೆಗೆ ಭಂಗ ತರುವ ಯಾವುದೇ ಸಾಮುದಾಯಿಕ ಶಕ್ತಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲು ಬದ್ಧವಾಗಿದೆ. “ನಮ್ಮ ಪ್ರಮುಖ ಗುರಿಯು ಈ ಪ್ರದೇಶವು ಶಾಂತಿಯುತವಾಗಿರುವುದು ಮತ್ತು ಎಲ್ಲರನ್ನೂ ಒಳಗೊಳ್ಳುವಂತಿರುವುದು. ಇಂತಹ ಸಾಮುದಾಯಿಕ ಘಟನೆಗಳ ಮರುಕಳಿಕೆಯನ್ನು ತಡೆಯಲು ನಾವು ನಿರ್ಧರಿಸಿದ್ದೇವೆ,” ಎಂದರು.

    ಉದ್ವಿಗ್ನ ಭಾಷಣಗಳಲ್ಲಿ ತೊಡಗಿರುವವರು ಅಥವಾ ವಿಭಜನೆಯ ಚಟುವಟಿಕೆಗಳಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ರಾಜಿಯಿಲ್ಲದೆ ಎತ್ತಿಹಿಡಿಯಲಾಗುವುದು ಎಂದು ಅವರು ಹೇಳಿದರು.

    ರಾಜ್ಯದಲ್ಲಿ ಪ್ರಸ್ತುತ ನಕ್ಸಲ್ ಉಪಸ್ಥಿತಿಯಿಲ್ಲದ ಕಾರಣ, ನಕ್ಸಲ್ ವಿರೋಧಿ ದಳವನ್ನು ಕ್ರಮೇಣ ಕಡಿಮೆಗೊಳಿಸುವ ಬಗ್ಗೆ ಸರ್ಕಾರ ವಿಚಾರಣೆ ನಡೆಸುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.