Category: Udupi

  • ಉಡುಪಿ: ಜುಲೈ 12 ರಂದು ಉಚಿತ ಹಣ್ಣು-ಹಂಪಲಿನ ಗಿಡಗಳ ವಿತರಣೆ

    ಉಡುಪಿ, ಜುಲೈ 9, 2025: ಪ್ರಿ ಓನ್ಡ್‌ ವೆಹಿಕಲ್‌ ಅಸೋಸಿಯೇಷನ್‌ ಉಡುಪಿ ಇದರ ವತಿಯಿಂದ ಒಂದು ಸಾವಿರಕ್ಕೂ ಮಿಕ್ಕಿ ಹಣ್ಣು ಹಂಪಲಿನ ಗಿಡಗಳ ಉಚಿತ ವಿತರಣೆ ಮತ್ತು ನೆಡುವ ಕಾರ್ಯಕ್ರಮ ಜುಲೈ 12 ರ ಶನಿವಾರದಂದು ನಡೆಯಲಿದೆ.

    ಈ ಕಾರ್ಯಕ್ರಮವು ಬೆಳಿಗ್ಗೆ 10 ಗಂಟೆಗೆ ಉಡುಪಿ ಭುಜಂಗ ಪಾರ್ಕ್‌ ನ ಬಯಲು ರಂಗಮಂಟಪದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವಂತೆ ಸಂಸ್ಥೆಯ ಅಧ್ಯಕ್ಷರಾದ ಮೊಹಮ್ಮದ್ ಆಶ್ರಫ್ ವಿನಂತಿಸಿದ್ದಾರೆ.

  • ಏಕವಿನ್ಯಾಸ ನಕ್ಷೆ ಹಾಗೂ 9/11 ರ ಹೊಸ ಅಧಿಸೂಚನೆ- ಕೆಲವು ವಿನಾಯಿತಿ ಅಗತ್ಯವಿದೆ: ಕೋಟ

    ಉಡುಪಿ, ಜು.09: ಜಿಲ್ಲೆಯಲ್ಲಿ ಸಾರ್ವಜನಿಕರು ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ಏಕ ವಿನ್ಯಾಸ ನಕ್ಷೆ ಹಾಗೂ ನಮೂನೆ 9/11 ರನ್ನು ಹೊಸ ಅಧಿಸೂಚನೆಯ ಪ್ರಕಾರ ನಗರಾಭಿವೃದ್ಧಿ ಪ್ರಾಧಿಕಾರದಿಂದ ಪಡೆಯಲು ಸಮಸ್ಯೆ ಉಂಟಾಗುತ್ತಿದೆ. ಕರಾವಳಿ ಜಿಲ್ಲೆಗಳಿಗೆ ಕೆಲವೊಂದು ವಿನಾಯಿತಿ ನೀಡಲು ಸರಕಾರದೊಂದಿಗೆ ಚರ್ಚಿಸಲಾಗುವುದು ಎಂದು ಉಡುಪಿ -ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

    ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಏಕ ನಿವೇಶನ ನಕ್ಷೆ ಹಾಗೂ ನಮೂನೆ 9/11 ರಲ್ಲಿ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಏಕ ವಿನ್ಯಾಸ ನಕ್ಷೆ ಹಾಗೂ ನಮೂನೆ 9/11 ಅನ್ನು ಪಡೆಯಲು ಜನಸಾಮಾನ್ಯರು ಸಂಬಂಧಿಸಿದ ಇಲಾಖೆಗಳಿಗೆ ಅರ್ಜಿ ಸಲ್ಲಿಸಿದರೂ ಅವುಗಳನ್ನು ಪಡೆಯಲು ವಿಳಂಬವಾಗುತ್ತಿದೆ. ತಿಂಗಳುಗಟ್ಟಲೇ ಸುತ್ತಾಡಿದರೂ ಅರ್ಜಿಗಳು ವಿಲೇವಾರಿ ಆಗುತ್ತಿಲ್ಲ. ಹೊಸ ಅಧಿಸೂಚನೆಯ ಪ್ರಕಾರ ಎಲ್ಲಾ ಅರ್ಜಿಗಳನ್ನು ಅನುಮೋದನೆ ನೀಡಲೂ ಸಹ ಕಷ್ಟಸಾಧ್ಯವಾಗುತ್ತಿದೆ. ಇದಕ್ಕೆ ಸರಕಾರ ಕೆಲವೊಂದು ವಿನಾಯಿತಿಗಳನ್ನು ಕರಾವಳಿ ಜಿಲ್ಲೆಗಳಿಗೆ ವಿಶೇಷ ಪ್ರಕರಣ ಎಂದು ತಿಳಿದು ನೀಡುವ ಅಗತ್ಯವಿದೆ.

    ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮಾತನಾಡಿ, ಜಿಲ್ಲೆಯ ಜನಸಾಮಾನ್ಯರಿಗೆ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ಏಕ ವಿನ್ಯಾಸ ನಕ್ಷೆ ಹಾಗೂ ಮತ್ತಿತರ ದಾಖಲೆಗಳನ್ನು ಪಡೆಯಲು ಆಗುತ್ತಿರುವ ತೊಂದರೆಯ ಬಗ್ಗೆ ಸರಕಾರದ ಗಮನಕ್ಕೆ ತರಲು ಜಿಲ್ಲೆಯ ಬಾಗೀಧಾರರ ಸಭೆಯನ್ನು ಕರೆದು ಅವರ ಅಹವಾಲುಗಳನ್ನು ಕೇಳಿ, ಸಮಸ್ಯೆಗಳ ಪಟ್ಟಿಯನ್ನು ಕ್ರೂಢೀಕರಣವನ್ನು ಮುಂದಿನ ಐದು ದಿನಗಳ ಒಳಗಾಗಿ ಮಾಡಬೇಕೆಂದು ಸೂಚನೆ ನೀಡಿದ ಅವರು, ಜಿಲ್ಲೆಯ ಜನತೆಗೆ ಆಗುತ್ತಿರುವ ಸಮಸ್ಯೆಗಳನ್ನು ಬಗೆಹರಿಸಲು ಸರಕಾರದ ಗಮನಕ್ಕೆ ತರುವುದಾಗಿ ತಿಳಿಸಿದರು.

    ಶಾಸಕ ಸುನೀಲ್ ಕುಮಾರ್ ಮಾತನಾಡಿ, ಪ್ರಾಧಿಕಾರ ಹೊಸ ಅಧಿಸೂಚನೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಒಂದು ಪಟ್ಟಿಮಾಡಿ ಕೊಡಿ. ಅದನ್ನು ಮತ್ತೊಮ್ಮೆ ಎಲ್ಲರೂ ಸೇರಿ ಅದನ್ನು ಮತ್ತೊಮ್ಮೆ ಚರ್ಚಿಸಿ ಬೆಂಗಳೂರಿನಲ್ಲಿ ಕಾರ್ಯದರ್ಶಿಗಳ ಮಟ್ಟದಲ್ಲಿ ಸಭೆ ಮಾಡಿ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡೋಣಾ ಎಂದರು.
    ಜನಪ್ರತಿನಿಧಿಗಳು ಜನಸಾಮಾನ್ಯರ ಸಮಸ್ಯೆಗಳನ್ನು ಬಗೆಹರಿಸಲು ಸಭೆಗಳನ್ನು ಕರೆದಾಗ ಸಭೆಯ ನಡುವಳಿಯನ್ನು ದಾಖಲಿಸಿದ್ದಲ್ಲಿ ಮುಂದಿನ ಸಭೆಗಳಲ್ಲಿ ನಡುವಳಿ ಆಧಾರದ ಮೇಲೆ ಸಭೆಯನ್ನು ಮುಂದುವರೆಸಲು ಅನುಕೂಲವಾಗುತ್ತದೆ. ಆದರೆ ಕಳೆದ ಸಭೆಯ ನಡುವಳಿಯನ್ನು ದಾಖಲಿಸದೇ ಇರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಕರಾವಳಿ ಭಾಗದ ಜಿಲ್ಲೆಗಳಲ್ಲಿ ಗ್ರಾಮಠಾಣೆಗಳು ಇಲ್ಲದೇ ಇರುವುದರಿಂದ ಸಮಸ್ಯೆಗಳು ಉದ್ಭವವಾಗುತ್ತಿವೆ ಎಂದ ಅವರು, ಲೋಕೋಪಯೋಗಿ ಇಲಾಖೆ ರಸ್ತೆಯ ಅಂಚಿನಿಂದ ಗೃಹ ನಿರ್ಮಾಣಕ್ಕೆ 6 ಮೀ. ಬಿಟ್ಟು ಏಕವಿನ್ಯಾಸ ನಕ್ಷೆಗೆ ಅನುಮೋದನೆ ನೀಡಬೇಕು. ಇದರಿಂದ ಜನರಿಗೆ ಸಮಸ್ಯೆ ಉಂಟಾಗುತ್ತಿದೆ ಎಂದರು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ನಗರ ಯೋಜನಾ ಪ್ರಾಧಿಕಾರದಲ್ಲಿ ನಮ್ಮ ಕೆಲಸಗಳು ಆಗುವುದಿಲ್ಲ ಎಂದು ಜನರ ಮನಸ್ಸಿನಲ್ಲಿ ಇದೆ. ಸಲ್ಲಿಕೆಯಾಗುವ ಅರ್ಜಿಗಳಲ್ಲಿ ಕಂಡು ಬರುವ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಿ, ಪರಿಹಾರ ಕಂಡುಕೊಳ್ಳಬೇಕು ಎಂದು ತಿಳಿಸಿದರು. ಸಭೆಯಲ್ಲಿ ಶಾಸಕರಾದ ಯಶ್‌ಪಾಲ್ ಎ ಸುವರ್ಣ ಹಾಗೂ ಗುರುರಾಜ್ ಶೆಟ್ಟಿ ಗಂಟಿಹೊಳೆ, ನಗರಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ನಗರ ಮತ್ತು ಗ್ರಾಮಾಂತರ ಇಲಾಖೆಯ ಸಹಾಯಕ ನಿರ್ದೇಶಕಿ ರಮ್ಯಾ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

  • ಪತ್ರಕರ್ತರಿಗೆ ಅಧ್ಯಯನ ಶಿಬಿರ: ಅರ್ಜಿ ಆಹ್ವಾನ

    ಉಡುಪಿ: ಕರ್ನಾಟಕ ಸಾಹಿತ್ಯ ಅಕಾಡೆಮಿಯ ವತಿಯಿಂದ “ಪತ್ರಕರ್ತರಿಗೆ ಕನ್ನಡ ಸಾಹಿತ್ಯ” ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ ಶಿಬಿರವನ್ನು ಆಗಸ್ಟ್ 3ನೇ ವಾರ ಅಥವಾ ಕೊನೆಯ ವಾರದಲ್ಲಿ ನಡೆಸಲು ಉದ್ದೇಶಿಸಿದ್ದು, 20 ರಿಂದ 40 ವರ್ಷ ದೊಳಗಿನ, ಈಗಾಗಲೇ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿರುವವರು, ಪತ್ರಿಕೋದ್ಯಮ ಪದವಿ ಪಡೆದವರು ಹಾಗೂ ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಹುದಾಗಿದೆ.

    ಅರ್ಜಿ ಸಲ್ಲಿಸಲು ಜುಲೈ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್‌ಸೈಟ್ https://sahithyaacademy.karnataka.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಉಡುಪಿ ಜಿಲ್ಲಾದ್ಯಂತ ಕಾರ್ಮಿಕರಿಂದ ಸಾರ್ವತ್ರಿಕ ಮುಷ್ಕರ: ವಿವಿಧೆಡೆ ಪ್ರತಿಭಟನೆ

    ಉಡುಪಿ, ಜುಲೈ 9, 2025: ಕೇಂದ್ರ ಸರಕಾರ ನಾಲ್ಕು ಕಾರ್ಮಿಕ ಸಂಹಿತೆಗಳ ಜಾರಿ ಮಾಡದಂತೆ ಆಗ್ರಹಿಸಿ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಹಿನ್ನೆಲೆಯಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ(ಜೆಸಿಟಿಯು) ಉಡುಪಿ ಜಿಲ್ಲೆ ನೇತೃತ್ವದಲ್ಲಿ ಉಡುಪಿ ಜಿಲ್ಲೆಯ ವಿವಿಧ ಕಾರ್ಮಿಕರು ಬುಧವಾರ ಮುಷ್ಕರ ನಡೆಸಿದರು.

    ಕೇಂದ್ರ ಹಾಗೂ ರಾಜ್ಯ ಸರಕಾರದ ನೀತಿಗಳನ್ನು ವಿರೋಧಿಸಿ ಕಟ್ಟಡ, ಅಂಗನವಾಡಿ, ಬಿಸಿಯೂಟ, ಹೆಂಚು, ಬೀಡಿ, ಕೆಲವು ಫ್ಯಾಕ್ಟರಿಗಳ ಕಾರ್ಮಿಕರು, ಬ್ಯಾಂಕ್, ವಿಮಾ ಹಾಗೂ ಅಂಚೆ ನೌಕರರು ಕೆಲಸಕ್ಕೆ ಹೋಗದೆ ಮುಷ್ಕರ ನಡೆಸಿ, ಜೆಸಿಟಿಯ ನೇತೃತ್ವದಲ್ಲಿ ಉಡುಪಿ, ಕುಂದಾಪುರ ಹಾಗೂ ಬೈಂದೂರಿನಲ್ಲಿ ಹಮ್ಮಿಕೊಳ್ಳಲಾದ ಪ್ರತಿಭಟನೆಯಲ್ಲಿ ಪಾಲ್ಗೊಂಡರು.

    ಉಡುಪಿಯ ಹಳೆಯ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ಇರುವ ಸಿಐಟಿಯು ಕಚೇರಿಯಿಂದ ಪ್ರಧಾನ ಅಂಚೆ ಕಚೇರಿಯವರೆಗೆ ಕಾರ್ಮಿಕರು ಮೆರವಣಿಗೆ ನಡೆಸಿದರು. ಬಳಿಕ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಹಲವು ವರ್ಷಗಳ ಕಾಲ ಹೋರಾಟ ಮಾಡಿ ಪಡೆದ 44 ಕಾರ್ಮಿಕ ಕಾನೂನುಗಳ ಪೈಕಿ 15 ಕಾನೂನುಗಳನ್ನು ಕೇಂದ್ರ ಸರಕಾರ ರದ್ದು ಮಾಡಿದೆ. ಉಳಿದ 29 ಕಾನೂನುಗಳನ್ನು ನಾಲ್ಕು ಸಂಹಿತೆಯನ್ನಾಗಿ ಮಾಡುವ ಮೂಲಕ ಕಾರ್ಮಿಕರ ಹಕ್ಕುಗಳನ್ನು ಕಸಿದುಕೊಳ್ಳ ಲಾಗಿದೆ. ಆದುದರಿಂದ ಇದು ಕಾರ್ಮಿಕರ ಅಳಿವು ಉಳಿವಿನ ಹೋರಾಟವಾಗಿದೆ ಎಂದರು.

    ಉಡುಪಿ ಜಿಲ್ಲೆಯಲ್ಲಿ ಕೆಂಪುಕಲ್ಲು, ಶಿಲೆ/ಪಾದೆಕಲ್ಲು ಹಾಗೂ ಮರಳಿನ ಕೊರತೆ ಎದುರಾಗಿದೆ. ಇದರಿಂದ ಕಾರ್ಮಿಕರಿಗೆ ಕೆಲಸವಿಲ್ಲದೆ ತೊಂದರೆ ಉಂಟಾಗಿದೆ. ಮನೆ ಕಟ್ಟುವವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯ ಸರಕಾರ ಮತ್ತು ಜಿಲ್ಲಾಡಳಿತ ಸೂಕ್ತ ಗಮನ ನೀಡಬೇಕೆಂದು ಅವರು ಆಗ್ರಹಿಸಿದರು.

    ಪ್ರತಿಭಟನೆಯಲ್ಲಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ ಉಡುಪಿ ಜಿಲ್ಲಾ ಸಂಚಾಲಕ ಕವಿರಾಜ್ ಎಸ್. ಕಾಂಚನ್, ಎಐಐಇಎ ಮುಖಂಡ ಕೆ.ವಿಶ್ವನಾಥ್, ಎಐಟಿಯುಸಿ ಮುಖಂಡ ಯು.ಶಿವಾನಂದ, ಸಿಐಟಿಯು ಮುಖಂಡರಾದ ಉಮೇಶ್ ಕುಂದರ್, ಶಶಿಧರ್ ಗೊಲ್ಲ, ಸುನೀತಾ ಶೆಟ್ಟಿ, ರಾಮ ಕಾರ್ಕಡ, ಇಂಟಕ್ ಮುಖಂಡ ಕಿರಣ್ ಹೆಗ್ಡೆ, ಎಐಬಿಇಎ ನಾಗೇಶ್ ನಾಯಕ್, ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಭಾರತಿ, ಪ್ರಧಾನ ಕಾರ್ಯದರ್ಶಿ ಸುಶೀಲಾ ನಾಡ, ಖಜಾಂಚಿ ಯಶೋಧಾ, ಉಪಾಧ್ಯಕ್ಷೆ ಪ್ರೇಮಾ ಮೊದಲಾದವರು ಉಪಸ್ಥಿತರಿದ್ದರು.

  • ಉಡುಪಿ: ನರೇಗಾ ಕಾರ್ಮಿಕರಿಗೆ ತಿಂಗಳುಗಳಿಂದ ಸಿಗದ ವೇತನ; ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ

    ಉಡುಪಿ, ಜುಲೈ 9, 2025: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (NREGA) ಯೋಜನೆಯಡಿ ಕಾಂಟ್ರಾಕ್ಟ್ ಆಧಾರಿತ ಕಾರ್ಮಿಕರಿಗೆ ಕಳೆದ ಐದರಿಂದ ಆರು ತಿಂಗಳಿಂದ ಸಂಬಳ ದೊರಕಿಲ್ಲ. ಇದರಿಂದಾಗಿ ಯೋಜನಾ ಚಟುವಟಿಕೆಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡವು ಮತ್ತು ಬಾಧಿತ ನೌಕರರು ಅಸಹಕಾರ ಪ್ರತಿಭಟನೆ ಆರಂಭಿಸಿದ್ದಾರೆ.

    ಈ ಸಮಸ್ಯೆಯು ಸ್ಥಳೀಯ ಮತ್ತು ರಾಜ್ಯ ಅಧಿಕಾರಿಗಳು ಪರಿಹರಿಸಲು ಸಾಧ್ಯವಾಗದ ತಾಂತ್ರಿಕ ದೋಷದಿಂದ ಈ ಸಮಸ್ಯೆ ಉದ್ಭವಿಸಿದೆ. ಇದರಿಂದ ಉಡುಪಿ ಜಿಲ್ಲೆಯ ಸುಮಾರು 40 ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು 65 ಕಾರ್ಮಿಕರು ಸೇರಿದಂತೆ ರಾಜ್ಯಾದ್ಯಂತ ಸುಮಾರು 3,500 ಸಿಬ್ಬಂದಿಗಳು ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದಾರೆ. ಇವರಲ್ಲಿ ಜಿಲ್ಲಾ ಮಟ್ಟದಲ್ಲಿ ಎಡಿಪಿಸಿ, ಡಿಎಂಐಎಸ್, ಡಿಐಇಸಿ, ಖಾತೆ ನಿರ್ವಾಹಕರು ಮತ್ತು ತಾಲೂಕು ಮಟ್ಟದಲ್ಲಿ ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕರು, ಟಿಎಂಐಎಸ್, ಟಿಐಇಸಿ, ಆಡಳಿತ ಸಹಾಯಕರು, ಬಿಎಫ್‌ಟಿಗಳು, ಎನ್‌ಆರ್‌ಇಜಿಎ ಡೇಟಾ ಎಂಟ್ರಿ ಆಪರೇಟರ್‌ಗಳು ಮತ್ತು ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಕಾಯಕ ಮಿತ್ರರು ಸೇರಿದ್ದಾರೆ.

    ಸ್ಥಳೀಯ ಮತ್ತು ರಾಜ್ಯ ಪ್ರಾಧಿಕಾರಗಳಿಗೆ ಸಂಬಳ ವಿತರಣೆಗೆ ಪದೇ ಪದೇ ಮನವಿ ಮಾಡಿದರೂ ಯಾವುದೇ ಕಠಿಣ ಕ್ರಮ ಕೈಗೊಳ್ಳಲಾಗಿಲ್ಲ. ಕರ್ನಾಟಕ ಎನ್‌ಆರ್‌ಇಜಿಎ ಕಾರ್ಮಿಕರ ಕಲ್ಯಾಣ ಸಂಘದ ನಿರ್ಧಾರದ ಪ್ರಕಾರ, ಕಾರ್ಮಿಕರು ಈಗ ಗೈರಸಾಧಾರಣ ಚಳವಳಿ ಆರಂಭಿಸಿದ್ದು, ಬಾಕಿ ಉಳಿದ ಸಂಬಳ ತೀರಿಸುವವರೆಗೆ ಕರ್ತವ್ಯಕ್ಕೆ ಹಿಂತಿರುಗದ ತೀರ್ಮಾನ ಮಾಡಿದ್ದಾರೆ.

    ರಾಜ್ಯಾದ್ಯಂತ NAREGA ಕಾರ್ಯಾಚರಣೆಯು ಸ್ಥಗಿತಗೊಂಡಿದೆ. ವೈಯಕ್ತಿಕ ಮತ್ತು ಸಮುದಾಯ ಆಧಾರಿತ ಎನ್‌ಆರ್‌ಇಜಿಎ ಕಾಮಗಾರಿಗಳು ಈ ಕಾರ್ಮಿಕರ ಸಹಾಯದ ಮೇಲೆ ಅವಲಂಬಿತವಾಗಿದ್ದು, ಅವರ ಅನುಪಸ್ಥಿತಿಯಿಂದ ಯೋಜನೆಯ ಪ್ರಗತಿ ಸಂಪೂರ್ಣವಾಗಿ ನಿಂತಿದೆ. ಮೂಲಗಳ ಪ್ರಕಾರ, ಒಕ್ಕೂಟ ದಕ್ಷಿಣ ಕನ್ನಡ ಮತ್ತು ಇತರ ಜಿಲ್ಲೆಗಳಲ್ಲಿ ಎನ್‌ಆರ್‌ಇಜಿಎ ಅನುಷ್ಠಾನ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.

    ಈ ಸಂಕಷ್ಟ 2024ರ ಡಿಸೆಂಬರ್ ನಂತರ ಕೇಂದ್ರ ಸರ್ಕಾರವು ಸಂಬಳ ವಿತರಣಾ ವ್ಯವಸ್ಥೆಯಲ್ಲಿ ಬದಲಾವಣೆಗಳನ್ನು ಜಾರಿಗೆ ತಂದಾಗ ಪ್ರಾರಂಭವಾಯಿತು. ‘ಸ್ಪರ್ಶ’ ಎಂಬ ಹೊಸ ಸಾಫ್ಟ್‌ವೇರ್ ಪ್ಲಾಟ್‌ಫಾರ್ಮ್ ಅನ್ನು ಪರಿಚಯಿಸಲಾಗಿತ್ತು, ಇದು ಖಜಾನಾ ಸಾಫ್ಟ್‌ವೇರ್ ಮತ್ತು ಎಂಜಿಎನ್‌ಆರ್‌ಇಜಿಎ ವೆಬ್‌ಸೈಟ್‌ನೊಂದಿಗೆ ‘ಎಸ್‌ಎನ್‌ಎ ಸ್ಪರ್ಶ’ ವ್ಯವಸ್ಥೆಯಡಿಯಲ್ಲಿ ಸಂಬಳ ಪಾವತಿಗೆ ಸಹಾಯ ಮಾಡುತ್ತದೆ. ಆದರೆ, ರಾಜ್ಯ ಮಟ್ಟದಲ್ಲಿ ಈ ಎರಡು ವ್ಯವಸ್ಥೆಗಳ ನಡುವೆ ತಾಂತ್ರಿಕ ಅಸಂಗತಿಯಿಂದಾಗಿ ಪಾವತಿಗಳು ತಡೆಗೊಂಡಿವೆ, ಇದಕ್ಕೆ ಕೇಂದ್ರ ಸರ್ಕಾರ ಅಗತ್ಯ ನಿಧಿಯನ್ನು ಬಿಡುಗಡೆ ಮಾಡಿದ್ದರೂ.

    ಕಾರ್ಮಿಕರ ಆಕ್ರೋಶಕ್ಕೆ ಸಿಹಿ, ಬೆಂಗಳೂರಿನ ಕೇಂದ್ರ ಕಚೇರಿಯ ಒಪ್ಪಂದ ಕಾರ್ಮಿಕರು ಹಳೆಯ ವ್ಯವಸ್ಥೆಯಡಿಯಲ್ಲಿ ಸಂಬಳ ಪಡೆದಿದ್ದಾರೆ ಎಂಬ ವರದಿಗಳು ಸೇರಿವೆ. ಆದ್ದರಿಂದ, ಪ್ರತಿಭಟನಾಕಾರರು ಹೊಸ ಸಾಫ್ಟ್‌ವೇರ್ ಸರಿಯಾಗಿ ಕಾರ್ಯನಿರ್ವಹಿಸುವವರೆಗೆ ಸರ್ಕಾರವು ಹಿಂದಿನ ಪಾವತಿ ವ್ಯವಸ್ಥೆಗೆ ಮರಳಬೇಕೆಂದು ಒತ್ತಾಯಿಸುತ್ತಿದ್ದಾರೆ.

  • ಉಡುಪಿ: ಜಿಲ್ಲಾಧಿಕಾರಿಗಳಿಂದ ಕೋಡಿ ಕನ್ಯಾನ ಹೊಳೆ ಮತ್ತು ನಾಡಕಚೇರಿ ಕಾಮಗಾರಿ ಪರಿಶೀಲನೆ

    ಉಡುಪಿ, ಜುಲೈ 8, 2025: ಕುಂದಾಪುರ: ರಾಜ್ಯ ಸರಕಾರದ ಬಜೆಟ್‌ನಲ್ಲಿ ಮುಖ್ಯಮಂತ್ರಿ ಗಳು ಘೋಷಿಸಿದಂತೆ ಸಮುದ್ರತೀರದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಸಿದ್ಧತೆಗಳಾಗುತ್ತಿವೆ. ಆದರೆ ಈಗಾಗಲೇ ಪ್ರವಾಸೋದ್ಯಮ ಪೂರಕ ಚಟುವಟಿಕೆ ನೀಡುತ್ತಿರುವವರು ತಮಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಮನವಿ ಮಾಡಿದ ಹಿನ್ನೆಲೆಯಲ್ಲಿ ಯಾರಿಗೂ ಸಮಸ್ಯೆ ಆಗದಂತೆ ಮುತುವರ್ಜಿ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪಾ ಹೇಳಿದರು.

    ಹೊಸದಾಗಿ ಪ್ರವಾಸೋದ್ಯಮ ಚಟುವಟಿಕೆ ಹಮ್ಮಿಕೊಳ್ಳುವುದರಿಂದ ಈಗಾಗಲೇ ನಿರ್ವಹಿಸುತ್ತಿರುವವರಿಗೆ ತೊಂದರೆ ಕೊಡುವ ಉದ್ದೇಶ ಇಲ್ಲ. ಪ್ರವಾಸ ಪೂರಕ ಚಟುವಟಿಕೆಗಳು ನಡೆದಷ್ಟೂ ಸ್ಥಳೀಯರ ಆದಾಯ ಹೆಚ್ಚಾಗುತ್ತದೆ. ಚಟುವಟಿಕೆಗಳಿಗೆ ಊರು ತೆರೆದುಕೊಳ್ಳುತ್ತದೆ. ಬೇರೆ ಬೇರೆ ಊರುಗಳಿಂದ ಜನ ಆಗಮಿಸುತ್ತಾರೆ. ಡಿಜಿಟಲ್ ಸಾಧನ, ಮಾಧ್ಯಮದ ಮೂಲಕ ತಿಳಿದುಕೊಳ್ಳುತ್ತಾರೆ.

    ಆಗ ಸೌಕರ್ಯಗಳು ಚೆನ್ನಾಗಿದ್ದಷ್ಟು ಅದಕ್ಕೆ ಮಹತ್ವ ಬರುತ್ತದೆ. ಈಗಾಗಲೇ ಇಲ್ಲಿ ಬೋಟಿಂಗ್, ಕಯಾಕಿಂಗ್, ಡಾಲ್ಟಿನ್ ವೀಕ್ಷಣೆ ಇತ್ಯಾದಿ ನಡೆಯುತ್ತಿದೆ. ಅದರ ಜತೆಗೆ ವಾಟರ್ ಗೇಮ್ಸ್ ಮೊದಲಾದ ಚಟುವಟಿಕೆ ಹಮ್ಮಿಕೊಳ್ಳಲಾಗುವುದು ಎಂದರು.

    ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ನಿಧೀಶ್ ಕೆ.ಜೆ., ಅಧಿಕಾರಿ ಭವಿಷ್, ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್, ಕಂದಾಯ ನಿರೀಕ್ಷಕ ದಿನೇಶ್ ಮೊದಲಾದವರು ಇದ್ದರು.

  • ಸುನ್ನಿ ಕೋ-ಒರ್ಡಿನೇಷನ್ ಉಡುಪಿ ಜಿಲ್ಲಾ ಸಮಿತಿಯ ನಿಯೋಗದಿಂದ ಉಡುಪಿ ಜಿಲ್ಲಾಧಿಕಾರಿ ಭೇಟಿ

    ಉಡುಪಿ, ಜುಲೈ 8, 2025: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಸ್ವರೂಪ ಟಿ.ಕೆ. ಅವರನ್ನು ಉಡುಪಿ ಜಿಲ್ಲೆಯ ಪ್ರಮುಖ 10 ಸಂಘಟನೆಗಳ ಒಕ್ಕೂಟವಾದ ಸುನ್ನಿ ಕೋ-ಒರ್ಡಿನೇಷನ್ ಉಡುಪಿ ಜಿಲ್ಲಾ ಸಮಿತಿಯ ನಿಯೋಗ ಭೇಟಿಯಾಗಿ ಅಭಿನಂದಿಸಿತು.

    ಚುನಾವಣೆಯ ಮೊದಲು ಕಾಂಗ್ರೆಸ್ ಸರಕಾರ ಮುಸ್ಲಿಮರಿಗೆ ನೀಡಿದ ಆಶ್ವಾಸನೆಗಳನ್ನು ಪೂರ್ತಿಗೊಳಿಸುವ ಬಗ್ಗೆ ಜಿಲ್ಲಾಧಿಕಾರಿಯ ಮೂಲಕ ಸರಕಾರಕ್ಕೆ ಹಲವು ಬೇಡಿಕೆಗಳ ಜ್ಞಾಪಕ ಪತ್ರವನ್ನು ಜಿಲ್ಲಾಧಿಕಾರಿಯ ಮೂಲಕ ಸರಕಾರಕ್ಕೆ ಸಲ್ಲಿಸಿ ಶೀಘ್ರ ಪರಿಹಾರಕ್ಕಾಗಿ ಒತ್ತಾಯಿಸಲಾಯಿತು.

    2ಬಿ ಮೀಸಲಾತಿ ಮರು ಸ್ಥಾಪಿಸಬೇಕು. ಶಿಕ್ಷಣ ಕೇಂದ್ರಗಳಲ್ಲಿ ಹಿಜಾಬ್ ನಿಷೇಧವನ್ನು ತೆರವುಗೊಳಿಸಬೇಕು. ಉಡುಪಿ ಜಿಲ್ಲೆಯಲ್ಲಿ ಬೇರು ಬಿಡುತ್ತಿರುವ ಕೋಮುವಾದ, ಕೋಮು ಸಂಘರ್ಷಗಳನ್ನು ಹಾಗೂ ಕೋಮುವಾದಿ ಹೇಳಿಕೆಗಳಿಗೆ ಕಡಿವಾಣ ಹಾಕಬೇಕು. ಕೋಮು ಸಂಘರ್ಷಕ್ಕೆ ಎಡೆ ಮಾಡಿ ಕೊಡುವ ಹೇಳಿಕೆಗಳನ್ನು ನೀಡುವವರಿಗೆ ಜಾಮೀನು ರಹಿತ ಕಾಯ್ದೆಗಳ ಮೂಲಕ ಸೂಕ್ತ ಶಿಕ್ಷೆಯನ್ನು ನೀಡಬೇಕು. ಜೈಲಿನಲ್ಲಿರುವ ಅಮಾಯಕ ಯುವಕರನ್ನು ಬಿಡುಗಡೆಗೊಳಿಸಬೇಕು ಎಂದು ಪತ್ರದಲ್ಲಿ ಆಗ್ರಹಿಸಲಾಗಿದೆ.

    ಉಡುಪಿ ಜಿಲ್ಲಾ ಸುನ್ನಿ ಕೋ-ಒರ್ಡಿನೇಷನ್ ಸಮಿತಿಯ ನಿಯೋಗದ ವತಿಯಿಂದ ಉಡುಪಿ ಜಿಲ್ಲಾ ನೂತನ SP ಹರಿರಾಮ್ ಶಂಕರ್ ರವರನ್ನು ತಾರೀಕು 7/07/2025 ರ ಸೋಮವಾರ ಬೇಟಿಯಾಗಿ ಶುಭ ಹಾರೈಸಲಾಯಿತು.

    ನಿಯೋಗದಲ್ಲಿ ಜಿಲ್ಲಾ ಸುನ್ನಿ ಕೋ-ಒರ್ಡಿನೇಷನ್ ಸಮಿತಿಯ ಅಧ್ಯಕ್ಷ ಕೆ.ಎ.ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ, ಪ್ರಧಾನ ಕಾರ್ಯದರ್ಶಿ ಸುಭಾನ್ ಅಹ್ಮದ್ ಹೊನ್ನಾಳ, ಕೋಶಾಧಿಕಾರಿ ವಸೀಮ್ ಭಾಷಾ ಕುಂದಾಪುರ, ಕಾರ್ಯದರ್ಶಿ ಗಳಾದ ಇಲಿಯಾಸ್ ಕಟಪಾಡಿ, ಕಾನೂನು ಸಲಹೆಗಾರ ಹಬೀಬ್ ಸಂತೋಷ್ ನಗರ, ನಿರ್ದೇಶಕರಾದ ಸೈಯ್ಯದ್ ಫರೀದ್ ಸಾಹೇಬ್ ಉಡುಪಿ, ಹನೀಫ್ ಅಂಬಾಗಿಲು ಮೊದಲಾದವರು ಉಪಸ್ಥಿತರಿದ್ದರು

  • ಮೃತ ವ್ಯಕ್ತಿಯ ವಾರಸುದಾರರಿಗೆ ಸೂಚನೆ

    ಉಡುಪಿ, ಜುಲೈ 8, 2025: ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಸಿಟಿ ಬಸ್ ನಿಲ್ದಾಣದ ಉಡುಪಿ-ಮಣಿಪಾಲ ಕಡೆ ಹೋಗುವ ಬಸ್ ನಿಲ್ದಾಣದಲ್ಲಿ ಅಸ್ವಸ್ಥರಾಗಿದ್ದ ಶಿರ್ವ ಮಂಚ್ಕಲ್ ನಿವಾಸಿ ರಮೇಶ್ ಶೆಟ್ಟಿ (57) ಎಂಬ ವ್ಯಕ್ತಿಯನ್ನು ಚಿಕಿತ್ಸೆಗಾಗಿ ನಗರದ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಜುಲೈ 2 ರಂದು ಮೃತಪಟ್ಟಿರುತ್ತಾರೆ.

    ಮೃತಶರೀರವನ್ನು ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಸಂರಕ್ಷಿಸಿ ಇಡಲಾಗಿದ್ದು, ಸದ್ರಿ ಮೃತವ್ಯಕ್ತಿಯ ವಾರಸುದಾರರು ಯಾರಾದರೂ ಇದ್ದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ ಪಿ.ಎಸ್.ಐ ಮೊ.ನಂ: 9480805445, ಪಿ.ಐ ಮೊ.ನಂ: 9480805408, ಜಿಲ್ಲಾ ನಿಸ್ತಂತು ಕಚೇರಿ ದೂ.ಸಂಖ್ಯೆ: 0820-2526444 ಹಾಗೂ ಉಡುಪಿ ನಗರ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2520444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. 

  • ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ

    ಉಡುಪಿ, ಜುಲೈ 8, 2025: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ, ಬ್ರಹ್ಮಾವರ ಮತ್ತು ಕಾಪು ತಾಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ  ಹಾಗೂ ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳಿಗೆ ವಿದ್ಯಾರ್ಥಿವೇತನ ಮಂಜೂರಾತಿಗಾಗಿ ಸಂಬಂಧಪಟ್ಟ ಶಾಲಾ ಮುಖ್ಯೋಪಾಧ್ಯಾಯರುಗಳು ವಿದ್ಯಾರ್ಥಿಗಳ ದಾಖಲೆಗಳೊಂದಿಗೆ ನೇರವಾಗಿ ಇಲಾಖೆಯ ವೆಬ್‌ಸೈಟ್ http://ssp.postmatric.karnataka.gov.in ಅಥವಾ www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

    ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದ ಪ್ರತಿ ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ವಿದ್ಯಾರ್ಥಿಯ ಆಧಾರ್ ಸಂಖ್ಯೆ ಎನ್.ಪಿ.ಸಿ.ಐ ಸೀಡಿಂಗ್ ಮಾಡುವುದು ಕಡ್ಡಾಯವಾಗಿರುತ್ತದೆ. ಪರಿಶಿಷ್ಟ ಪಂಗಡದ 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳು ಎನ್.ಎಸ್.ಪಿ ಓ.ಟಿ.ಆರ್ ರಿಜಿಸ್ಟ್ರೇಷನ್ ಮಾಡುವುದು ಕಡ್ಡಾಯವಾಗಿರುತ್ತದೆ.

    ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2528884, ಮೊ.ನಂ: 9480843209 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

  • ಬೈಂದೂರು: ಪೊಲೀಸರಿಂದ ಜಾಗೃತಿ ಕಾರ್ಯಕ್ರಮ

    ಬೈಂದೂರು, ಜುಲೈ 8, 2025: ಬೈಂದೂರು ತಾಲೂಕು ಕಛೇರಿಯಲ್ಲಿ ನಡೆದ “ಲಿಂಗತ್ವಾಧಾರಿತ ದೌರ್ಜನ್ಯ ವಿರುದ್ಧ ರಾಷ್ಟ್ರೀಯ ಅಭಿಯಾನ” ಕಾರ್ಯಕ್ರಮದಲ್ಲಿ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (PSI) ರವರು ಮಾತನಾಡಿ, ಸಾಮಾಜಿಕ ಜಾಲತಾಣಗಳ ಬಳಕೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳು ಮತ್ತು ಸಂಚಾರ ನಿಯಮಗಳ ಸಹಿತ ಇತರ ಮಾಹಿತಿಯನ್ನು ನೀಡಿದರು. ಈ ಕಾರ್ಯಕ್ರಮ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶವನ್ನು ಹೊಂದಿತ್ತು.

    ಶಿರ್ವ

    ಅದೇ ರೀತಿ, ಶಿರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳಪು ಪಾಲಿ ಟೆಕ್ನಿಕ್‌ನ ವಿದ್ಯಾರ್ಥಿಗಳಿಗೆ ಒಂದು ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಇದರಲ್ಲಿ ಮಾದಕ ದ್ರವ್ಯ ಸೇವನೆಯಿಂದ ಉಂಟಾಗುವ ದುಷ್ಟ ಪರಿಣಾಮಗಳು, ಸೈಬರ್ ಕ್ರೈಂ, ಮತ್ತು ರಸ್ತೆ ಸುರಕ್ಷತೆ ನಿಯಮಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಈ ಕಾರ್ಯಕ್ರಮಗಳು ಯುವ ಜನಾಂಗದಲ್ಲಿ ಜವಾಬ್ದಾರಿಯ ಚಟುವಟಿಕೆಗಳನ್ನು ಉತ್ತೇಜಿಸುವ ಉದ್ದೇಶವನ್ನು ಹೊಂದಿವೆ.