Category: Udupi

  • ಸಂಘಪರಿವಾರ ಹಾಗೂ ಬಿಜೆಪಿಗೆ ಕರಾವಳಿ ಹಿಂದುತ್ವದ ಪ್ರಯೋಗಾಲಯಗಳಾಗಿವೆ: ಪ್ರೊ.ಫಣಿರಾಜ್

    ಉಡುಪಿ, ಜುಲೈ 6, 2025: ಸಂಘಪರಿವಾರ ಹಾಗೂ ಬಿಜೆಪಿಗೆ ಕರಾವಳಿ ಜಿಲ್ಲೆಗಳು ಹಿಂದುತ್ವದ ಪ್ರಯೋಗಾಲಯಗಳಾಗಿವೆ. ಕೋಮು ಹಿಂಸೆಯನ್ನು ನಿರಂತರವಾಗಿ ಚಾಲನೆಯಲ್ಲಿ ಇಟ್ಟುಕೊಳ್ಳುವ ಇಂಡಸ್ಟ್ರೀ ಆಗಿದೆ. ಇದಕ್ಕೆ ಹಣ ಹೂಡಿಕೆ ಮಾಡುತ್ತಾರೆ ಮತ್ತು ಅದರ ಲಾಭದ ನಿರೀಕ್ಷೆಯಲ್ಲೂ ಇರುತ್ತಾರೆ ಎಂದು ಹಿರಿಯ ಚಿಂತಕ ಪ್ರೊ.ಫಣಿರಾಜ್ ಹೇಳಿದ್ದಾರೆ.

    ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ, ಸಹಬಾಳ್ವೆ ಮತ್ತು ಮಾನವ ಬಂಧುತ್ವ ಉಡುಪಿ ವಲಯ ಹಾಗೂ ಸಮಾನ ಮನಸ್ಕ ಸಂಘಟನೆಗಳ ಆಶ್ರಯದಲ್ಲಿ ಇಂದು ನೀಲಾವರದಲ್ಲಿ ಹಮ್ಮಿಕೊಳ್ಳಲಾದ ಸಾಮರಸ್ಯ ನಡಿಗೆ -ಸೌಹಾರ್ದ ಸಭೆಯನ್ನುದ್ದೇಶಿಸಿ ಅವರು ಮಾತನಾಡುತಿದ್ದರು.

    ಸಮಾಜದಲ್ಲಿ ಉದ್ರೇಕ ಎಬ್ಬಿಸಿ ಕೋಮು ಹಿಂಸೆಯನ್ನು ಜ್ವಲಂತವಾಗಿರಿಸುವ ಪ್ರಯತ್ನ ನಡೆಯುತ್ತಿದೆ. ಇದು 2000ರಿಂದ ಉಡುಪಿ ಜಿಲ್ಲೆಯಲ್ಲಿ ಮುಂದುವರೆಯುತ್ತಿದೆ. ಇವರೇ ದಾಳಿ ಮಾಡಿ, ಇವರೇ ಬೀದಿಗೆ ಬಂದು ಪ್ರತಿಭಟನೆ ನಡೆಸುತ್ತಾರೆ ಎಂದ ಅವರು, ಕರಾವಳಿಯ ಹಿಂದುಳಿದ ಜಾತಿಯ ಯುವಕರನ್ನು ಸಂಘಪರಿವಾರ ಹಿಂಸೆಗೆ ಇಳಿಸುತ್ತದೆ ಮತ್ತು ಜೈಲುಪಾಲಾಗಿಸುತ್ತದೆ. ಮತ್ತೆ ಅವರಿಗೂ ಅವರ ಕುಟುಂಬಕ್ಕೂ ಹಣ ನೀಡುತ್ತದೆ. ಅವರ ಕೇಸ್ ನಡೆಸಲು ಕ್ರಿಮಿನಲ್ ವಕೀಲರನ್ನು ನಿಯೋಜಿಸಲಾಗುತ್ತದೆ. ಹೀಗೆ ಇದೊಂದು ಉದ್ಯಮವಾಗಿ ಬಿಟ್ಟಿದೆ ಎಂದರು.

    ನಾವು ಇಂತಹ ಘಟನೆ ನಡೆದಾಗ ಕೇವಲ ಸೌಹಾರ್ದ ಮಾತನಾಡಿದರೆ ಸಾಕಾಗುವುದಿಲ್ಲ. ತಳ ಸಮುದಾಯದ ಯುವಕರು ಆ ಕಡೆ ಹೋಗದಂತೆ ತಡೆಯಬೇಕು. ಅವರೆಲ್ಲ ಜೀವನ ಹಾಗೂ ವಿದ್ಯೆ ಇಲ್ಲದ ಕಾರಣಕ್ಕೆ ಹರಣಕ್ಕಾಗಿ ಅತ್ತ ಹೋಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಅವರ ಕೇರಿಗಳಿಗೆ ಭೇಟಿ ನೀಡಿ ಅವರ ಸ್ಥಿತಿ ಗತಿಗಳನ್ನು ಅರ್ಥ ಮಾಡಿಕೊಳ್ಳಬೇಕು. ಆಗ ಮಾತ್ರ ಸಂಘ ಪರಿವಾರದ ಕೋಮು ಹಿಂಸೆಯ ಇಂಡಸ್ಟ್ರೀಯನ್ನು ತಡೆಯಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.

    ಸೌಹಾರ್ದ ಎಂಬುದು ಸಾಮಾಜಿಕ ರಾಜಕೀಯವಾಗಿದೆ. ಅದನ್ನು ಕಾಂಗ್ರೆಸ್ ಹಿಂದಿನಿಂದಲೂ ಮಾಡಿಕೊಂಡು ಬಂದಿದೆ. ಅದನ್ನು ಮರೆತರೆ ಆ ಸೌಹಾರ್ದವನ್ನು ಸಂಘಪರಿವಾರ ಸಾರ್ವಕರ್ ಹಾಗೂ ಗೊಲ್ವಕರ್ ರಾಜಕೀಯವನ್ನು ಬಳಸಿಕೊಂಡು ನಿಮ್ಮ ಕಣ್ಣೇದುರೇ ನಾಶ ಮಾಡುತ್ತದೆ. ಅದನ್ನು ಎದುರಿ ಸಲು ಸಿದ್ಧರಾಗಬೇಕು. ಸುಧಾರಣ ವಾದಿಯಿಂದ ಸಮಾಜವನ್ನು ತಲುಪುವ ಕಾರ್ಯ ಮಾಡಬೇಕೆ ಹೊರತು ಕೇವಲ ಭಾಷಣದಿಂದ ಅದನ್ನು ತಡೆಯಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದರು.

    ಚಿಂತಕ ಎಂ.ಜಿ.ಹೆಗ್ಡೆ ಮಾತನಾಡಿ, ಶಾಲಾ ವಾರ್ಷಿಕೋತ್ಸವ, ಸಾಹಿತ್ಯ, ದೇವಸ್ಥಾನದ ಕಾರ್ಯಕ್ರಮಗಳಲ್ಲಿಯೂ ಧ್ವೇಷ ಭಾಷಣ ಮಾಡುವುದು ಸಾಮಾನ್ಯವಾಗಿದೆ ಮತ್ತು ಭಾಷಣದ ವ್ಯಾಖ್ಯಾನ ಕೂಡ ಆಗಿದೆ. ಧರ್ಮವನ್ನು ನಿಜವಾಗಿ ಅರ್ಥಮಾಡಿಕೊಂಡು ಪಾಲನೆ ಮಾಡುವವರಿಗೆ ಬೇರೆ ಧರ್ಮದವರನ್ನು ನೋಡಿದಾಗ ಅಸಹನೆ ಹುಟ್ಟಲು ಸಾಧ್ಯವೇ ಇಲ್ಲ ಎಂದು ಹೇಳಿದರು.

    ಧರ್ಮದ ಅರ್ಥ ಗೊತ್ತಿಲ್ಲದ ಹಿಂದು ಚಳವಳಿಗಳು ಹುಟ್ಟಿರುವುದೇ ಇದಕ್ಕೆಲ್ಲ ಕಾರಣವಾಗಿದೆ.ಧರ್ಮಗಳಲ್ಲಿ ವೇದಾಂತ ಯಾರಿಗೂ ಬೇಡವಾಗಿದೆ. ಅದರಲ್ಲಿ ಅಸಮಾನತೆ, ಹಿಂಸೆ ಅಸ್ಪಸೃಶ್ಯ ಅಸಹನೆ ಯಾವುದು ಇಲ್ಲ. ಆದರೆ ನಾವು ಆ ವೇದಾಂತವನ್ನು ಬಿಟ್ಟು ಜಗಳ ಕಾರಣವಾಗುವ ಆಚರಣೆಗಳನ್ನೇ ಧರ್ಮ ಎಂಂದು ನಂಬಿಕೊಂಡಿದ್ದೇವೆ. ಆಚರಣೆಗಳು ಮತಗಳ ಒಂದು ಭಾಗವಾಗಿವೇ ಹೊರತು ಅದುವೇ ಧರ್ಮ ಅಲ್ಲ ಎಂದರು.

    ಅಧ್ಯಕ್ಷತೆಯನ್ನು ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ವಹಿಸಿದ್ದರು. ವೇದಿಕೆಯಲ್ಲಿ ದಸಂಸ ಮುಖಂಡರಾದ ಶ್ಯಾಮ್‌ರಾಜ್ ಬಿರ್ತಿ, ಸುಂದರ್ ಮಾಸ್ತರ್, ಸ್ಟಿವನ್ ವಿಕ್ಟರ್ ಲೂವೀಸ್, ಧರ್ಮಗುರು ಮುಹಮ್ಮದ್ ರಶೀದ್ ಕಣ್ಣಂಗಾರ್, ಕಾಂಗ್ರೆಸ್ ಮುಖಂಡರಾದ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್, ಎಂ.ಎ.ಗಫೂರ್, ಅಶೋಕ್ ಕುಮಾರ್ ಕೊಡವೂರು, ಪ್ರಸಾದ್‌ರಾಜ್ ಕಾಂಚನ್, ರಾಘವೇಂದ್ರ ಶೆಟ್ಟಿ ಕರ್ಜೆ, ಜ್ಯೋತಿ ಹೆಬ್ಬಾರ್, ಶರ್ಫುದ್ದೀನ್ ಶೇಖ್ ಭಾಗವಹಿಸಿದ್ದರು.

    ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ವಂದಿಸಿದರು. ಸತೀಶ್ ಕೊಡವೂರು ಕಾರ್ಯ ಕ್ರಮ ನಿರೂಪಿಸಿದರು. ಇದಕ್ಕೂ ಮೊದಲು ಬ್ರಹ್ಮಾವಾರದ ಕುಂಜಾಲು ಕೇಳಪೇಟೆಯಿಂದ ನೀಲಾವರ ಕ್ರಾಸ್‌ವರೆಗೆ ಸಾಮರಸ್ಯ ನಡಿಗೆ ಜರಗಿತು.

    ಅವಿಭಜಿತ ದ.ಕ. ಜಿಲ್ಲೆಯಲ್ಲಿ ಗೊಡ್ಡದ ಹಸುವನ್ನು ರೈತರು ಮಾರಾಟ ಮಾಡುತ್ತಾರೆ. ಅದು ಮಾಂಸಕ್ಕೆ ಹೋಗುತ್ತದೆ ಎಂಬುದು ಕೂಡ ಅವರಿಗೆ ತಿಳಿದು ಇರುತ್ತದೆ. ಆದರೆ ಇಂತಹ ವಿಚಾರಗಳನ್ನು ಇಟ್ಟು ಕೊಂಡು ಯಶ್‌ಪಾಲ್ ಸುವರ್ಣಗೆ ಬೆಂಕಿ ಹಚ್ಚಲು ಐದು ನಿಮಿಷ ಸಾಕಾಗುತ್ತದೆ, ಆದರೆ ಆ ಬೆಂಕಿಯನ್ನು ಆರಿಸಲು 10 ದಿನ ಬೇಕಾಗುತ್ತದೆ’ಪ್ರೊ.ಫಣಿರಾಜ್, ಹಿರಿಯ ಚಿಂತಕರು

  • Udupi records highest rainfall in India for June, surpasses Cherrapunji, Agumbe

    Udupi, July 6, 2025: Udupi district has surpassed Meghalaya’s Cherrapunji and Karnataka’s Agumbe — both known for their heavy rainfall — by recording the highest rainfall in the country during June. According to the India Meteorological Department (IMD), this marks an all-time record for the district.

    As per rainfall statistics for June, Udupi district topped the country with 1,140 mm of rain in just one month. With an annual average rainfall of 4,300 mm, this year is likely to set a new record for Udupi if the trend continues.

    The coastal district has been witnessing intense and consistent rainfall for over a month and a half. IMD data confirms that this year has seen the highest rainfall in the district over the past two decades. As of June 27, Udupi emerged as the wettest district in the country.

    Cherrapunji, long recognised as the wettest place in India, and Agumbe, often called the ‘Cherrapunji of the South’, were both outpaced by Udupi this year. For three consecutive days in June, Udupi recorded over 150 mm of rainfall daily — a rare and significant occurrence.

    Udupi district consists of three taluks bordering the Western Ghats and five taluks along the coast, creating ideal conditions for heavy monsoon rains. Since May 15, pre-monsoon showers followed by cyclonic activity led to severe rainfall, which seamlessly transitioned into the full monsoon spell.

    Rainfall comparison across regions in June:

    • Udupi (Karnataka): 1,140 mm
    • Dakshina Kannada (Karnataka): 980 mm
    • Kannur (Kerala): 902 mm
    • South West Khasi Hills (Meghalaya): 880 mm
    • Dadra and Nagar Haveli: 858 mm

    Due to the persistent heavy rains, Udupi district was under red alert for over 15 days in the past six weeks. Orange and yellow alerts were also issued for several days. As a result, tourism activities in river and coastal regions were completely banned, and fishing operations were suspended for nearly a month.

    The exceptional rainfall in Udupi has set a new benchmark in the country’s monsoon history and has drawn attention to the district’s changing weather patterns and the need for heightened preparedness.

  • ಉಡುಪಿ: ಮದುವೆಯ ನೆಪದಲ್ಲಿ ಅತ್ಯಾಚಾರ ಆರೋಪ; ಆರೋಪಿಯ ಬಂಧನ

    ಉಡುಪಿ, ಜುಲೈ 6, 2025: ಕೊಲಾಲಗಿರಿಯ ಯುವತಿಯೊಬ್ಬರನ್ನು ಮದುವೆಯ ಆಮಿಷದೊಡ್ಡಿ ಅತ್ಯಾಚಾರ ಮಾಡಿದ ಆರೋಪದ ಮೇಲೆ ಉಡುಪಿ ಮಹಿಳಾ ಪೊಲೀಸರು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿಯು ಬಳಿಕ ಮತ್ತೊಬ್ಬ ಮಹಿಳೆಯನ್ನು ಮದುವೆಯಾಗಲು ತಯಾರಿ ನಡೆಸಿದ್ದ ಎಂದು ತಿಳಿದುಬಂದಿದೆ.

    ಆರೋಪಿಯನ್ನು ಕೊಲಾಲಗಿರಿ ಗ್ರಾಮದ ಲಕ್ಷ್ಮೀನಗರದ ನಾರ್ನದುಗುಡ್ಡೆಯ ನಿವಾಸಿ ಸಂಜಯ್ ಕಾರ್ಕೇರ (28) ಎಂದು ಗುರುತಿಸಲಾಗಿದೆ. ಅವನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅವನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

    ಪ್ರಕರಣದ ವಿವರ: ಬಾಧಿತೆ ಸಲ್ಲಿಸಿದ ದೂರಿನ ಪ್ರಕಾರ, ಆರೋಪಿಯೊಂದಿಗೆ ಕಳೆದ ಎರಡು ವರ್ಷಗಳಿಂದ ಸಂಬಂಧದಲ್ಲಿದ್ದಳು. 2024ರ ಜುಲೈ 11ರಂದು ಆಕೆ ಆರೋಪಿಯೊಂದಿಗೆ ಕಲ್ಲಾಸೆಗೆ ಟ್ರಕ್ಕಿಂಗ್‌ಗೆ ತೆರಳಿದ್ದಳು. ಟ್ರಕ್ಕಿಂಗ್ ಬಳಿಕ ಆರೋಪಿಯು ಆಕೆಗೆ ಜ್ಯೂಸ್ ನೀಡಿದ್ದು, ಅದರಿಂದ ಆಕೆ ಅರ್ಧಪ್ರಜ್ಞೆಯ ಸ್ಥಿತಿಗೆ ತಲುಪಿದ್ದಳು. ಬಳಿಕ ಆರೋಪಿಯು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

    ಆರೋಪಿಯು ಬಳಿಕ ಆಕೆಯನ್ನು ಶೃಂಗೇರಿಯ ದೇವಸ್ಥಾನಕ್ಕೆ ಕರೆದೊಯ್ದು, ಕುಂಕುಮ ಇಟ್ಟು ಹೂವಿನ ಹಾರವನ್ನು ಹಾಕಿ ಮದುವೆಯಾದಂತೆ ತೋರಿಸಿದ್ದಾನೆ. ತನ್ನ ಕುಟುಂಬವನ್ನು ಮನವೊಲಿಸಿ ಔಪಚಾರಿಕವಾಗಿ ಮದುವೆಯಾಗುವುದಾಗಿ ಭರವಸೆ ನೀಡಿದ್ದಾನೆ. ಆದರೆ, ಮದುವೆಯ ಆಮಿಷದೊಡ್ಡಿ ಆರೋಪಿಯು ಆಕೆಯ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

    ಮಹಿಳಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

  • ದಕ್ಷಿಣ ಕನ್ನಡ, ಉಡುಪಿಯ 21,000ಕ್ಕೂ ಹೆಚ್ಚು ರೇಷನ್ ಕಾರ್ಡ್‌ದಾರರಿಂದ ಇ-ಕೆವೈಸಿ ಬಾಕಿ

    ಉಡುಪಿ, ಜುಲೈ 6, 2025: ಬಿಪಿಎಲ್ ಮತ್ತು ಅಂತ್ಯೋದಯ ರೇಷನ್ ಕಾರ್ಡ್‌ದಾರರಿಗೆ ಇ-ಕೆವೈಸಿ ಪೂರ್ಣಗೊಳಿಸಲು ಸರ್ಕಾರ ನಿಗದಿಪಡಿಸಿದ ಗಡುವು ಮುಕ್ತಾಯಗೊಂಡಿದೆ. ಇ-ಕೆವೈಸಿ ಮಾಡದವರಿಗೆ ರೇಷನ್ ಸರಬರಾಜು ನಿಲ್ಲಿಸುವುದಾಗಿ ಘೋಷಿಸಲಾಗಿತ್ತಾದರೂ, ಮುಂದಿನ ಆದೇಶದವರೆಗೆ ವಿತರಣೆ ಮುಂದುವರಿಯಲಿದೆ.

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 17,778 ಫಲಾನುಭವಿಗಳು ಮತ್ತು ಉಡುಪಿಯಲ್ಲಿ 3,301 ಜನರು ಇ-ಕೆವೈಸಿ ಪೂರ್ಣಗೊಳಿಸಬೇಕಿದೆ. ದಕ್ಷಿಣ ಕನ್ನಡದಲ್ಲಿ 22,871 ಅಂತ್ಯೋದಯ ಮತ್ತು 2,58,910 ಬಿಪಿಎಲ್ ಕಾರ್ಡ್‌ದಾರರಿದ್ದಾರೆ. ಉಡುಪಿಯಲ್ಲಿ 1,98,265 ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್‌ದಾರರಿದ್ದಾರೆ. ಜೊತೆಗೆ, 673 ಅನರ್ಹ ಕಾರ್ಡ್‌ಗಳನ್ನು ಗುರುತಿಸಲಾಗಿದೆ.

    ಫಲಾನುಭವಿಗಳು ರೇಷನ್ ಅಂಗಡಿಗಳಲ್ಲಿ ಉಚಿತವಾಗಿ ಇ-ಕೆವೈಸಿ ಮಾಡಬಹುದು. ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಕೇಂದ್ರಗಳಲ್ಲೂ ಈ ಸೇವೆ ಲಭ್ಯವಿದೆ.

    ಬಂಟ್ವಾಳ ತಾಲೂಕಿನಲ್ಲಿ 4,552 ಇ-ಕೆವೈಸಿ ನೋಂದಣಿ ಬಾಕಿಯಿದ್ದು, ಉಡುಪಿಯ ಬೈಂದೂರು ತಾಲೂಕಿನಲ್ಲಿ 2,242 ನೋಂದಣಿಗಳು ಬಾಕಿಯಿವೆ. ಸುಳ್ಯದಲ್ಲಿ 78 ಮತ್ತು ಕುಂದಾಪುರದಲ್ಲಿ 28 ನೋಂದಣಿಗಳು ಬಾಕಿಯಿವೆ. ಕೆಲವರು ಕೆಲಸ ಅಥವಾ ಇತರ ಕಾರಣಗಳಿಂದ ಜಿಲ್ಲೆ/ರಾಜ್ಯದಿಂದ ಹೊರಗಿರುವುದರಿಂದ ಇ-ಕೆವೈಸಿ ಮಾಡಿಲ್ಲ. ಸಮೀಪದ ರೇಷನ್ ಅಂಗಡಿಗಳಲ್ಲಿ ದಾಖಲೆ ಸಲ್ಲಿಸಿ ಪ್ರಕ್ರಿಯೆ ಪೂರ್ಣಗೊಳಿಸಬಹುದು.

    10,128 ಜನರು, ಒಳಗೊಂಡಂತೆ ಹಾಸಿಗೆಯಲ್ಲಿರುವ ರೋಗಿಗಳು ಮತ್ತು ಬಯೋಮೆಟ್ರಿಕ್ ಪರಿಶೀಲನೆಗೆ ಆಗದವರು, ವಿನಾಯಿತಿ ಕೋರಿದ್ದಾರೆ. ಇವರಿಗೆ ಇಲಾಖೆಯಿಂದ ವಿನಾಯಿತಿ ಪತ್ರಗಳನ್ನು ನೀಡಲಾಗಿದೆ. ಅವರು ಹಂತಹಂತವಾಗಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ರೇಷನ್ ಕಾರ್ಡ್‌ನಲ್ಲಿ ದಾಖಲಾದ ಎಲ್ಲಾ ಸದಸ್ಯರು ಇ-ಕೆವೈಸಿ ಮಾಡಿದಾಗ ಮಾತ್ರ ಪ್ರಕ್ರಿಯೆ ಪೂರ್ಣವೆನಿಸಲಿದೆ. ಕುಟುಂಬದ ಯಾವುದೇ ಸದಸ್ಯರು ಮರಣ ಹೊಂದಿದ್ದರೆ, ಅವರ ಹೆಸರನ್ನು ಕಾರ್ಡ್‌ನಿಂದ ಅಧಿಕೃತವಾಗಿ ತೆಗೆಯಬೇಕು.

    ಗಡುವು ಮುಗಿದಿದ್ದರೂ, ವಿಸ್ತರಣೆಯ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆರೋಗ್ಯ ಕಾರಣಗಳಿಂದ ಬೆರಳಚ್ಚು ನೀಡಲಾಗದವರು ರೇಷನ್ ಅಂಗಡಿಗಳಲ್ಲಿ ಕಣ್ಣಿನ ಸ್ಕ್ಯಾನ್ ಮೂಲಕ ಇ-ಕೆವೈಸಿ ಪೂರ್ಣಗೊಳಿಸಬಹುದು. ದಕ್ಷಿಣ ಕನ್ನಡದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಈ ಸೇವೆ ಉಚಿತವಾಗಿದೆ ಎಂದು ಪುನರುಚ್ಚರಿಸಿದೆ.

  • ಉಡುಪಿ: ಆನ್‌ಲೈನ್ ಮೋಸದಿಂದ 1.59 ಲಕ್ಷ ರೂ. ಕಳೆದುಕೊಂಡ ವಿದ್ಯಾರ್ಥಿ

    ಉಡುಪಿ: ಕಿನ್ನಿಮುಲ್ಕಿಯ ಸಂದೇಶ್ (25) ಐರ್ಲೆಂಡ್‌ನ ಡಬ್ಲಿನ್‌ನಲ್ಲಿ ಎಂ.ಎಸ್. ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ದಿನಾಂಕ 30/06/2025ರಂದು ಸಂಜೆ 6:05ಕ್ಕೆ ಅಪರಿಚಿತ ವ್ಯಕ್ತಿಯೊಬ್ಬ +3530120***** ಸಂಖ್ಯೆಯಿಂದ ಸಂದೇಶ್‌ಗೆ ಕರೆ ಮಾಡಿ, “ನಾನು ಭಾರತೀಯ ರಾಯಭಾರಿ ಕಚೇರಿಯಿಂದ ಮಾತನಾಡುತ್ತಿದ್ದೇನೆ. ನೀವು ಐರ್ಲೆಂಡ್‌ನಲ್ಲಿ ಸಲ್ಲಿಸಿದ IRP ಅರ್ಜಿಯಲ್ಲಿ ಜನ್ಮ ದಿನಾಂಕ ತಪ್ಪಾಗಿದೆ. ತಕ್ಷಣ ಸರಿಪಡಿಸದಿದ್ದರೆ, ನಿಮ್ಮ ಪಾಸ್‌ಪೋರ್ಟ್‌ನ್ನು YELLOW ಗ್ರೂಪ್‌ಗೆ ಸೇರಿಸಿ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಸಿದ್ದಾನೆ.

    ಆರೋಪಿಯು ನೀಡಿದ rakeshcons.dublin@***.***.** ಇ-ಮೇಲ್‌ಗೆ ಸಂದೇಶ್ ತಮ್ಮ ಆಧಾರ್ ಕಾರ್ಡ್, ಜನ್ಮ ದಿನಾಂಕ ಪ್ರಮಾಣಪತ್ರ ಹಾಗೂ ಮತದಾರರ ಗುರುತಿನ ಚೀಟಿಯ ನಕಲುಗಳನ್ನು ಕಳುಹಿಸಿದ್ದಾರೆ. ಬಳಿಕ ಆರೋಪಿಯು, ಭದ್ರತೆಗಾಗಿ ಹಣವನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಲು ತಿಳಿಸಿ, “ಜನ್ಮ ದಿನಾಂಕ ಪರಿಶೀಲನೆಯ ನಂತರ ಹಣ ಹಿಂದಿರುಗಿಸಲಾಗುವುದು” ಎಂದು ನಂಬಿಸಿದ್ದಾನೆ. ಇದನ್ನು ನಂಬಿದ ಸಂದೇಶ್ ತಮ್ಮ ಪೇಟಿಎಂ ಖಾತೆಯಿಂದ ಆಕ್ಸಿಸ್ ಬ್ಯಾಂಕ್ ಖಾತೆಗೆ 58,533.07 ರೂ. ವರ್ಗಾಯಿಸಿದ್ದಾರೆ.

    ಪೇಟಿಎಂ ಖಾತೆಯ ವರ್ಗಾವಣೆ ಮಿತಿ ಮುಗಿದ ಕಾರಣ, ಸಂದೇಶ್ ತಮ್ಮ ತಂದೆ ಶ್ರೀಕಾಂತ್‌ಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಶ್ರೀಕಾಂತ್ ಕಿನ್ನಿಮುಲ್ಕಿಯ ವೀರಭದ್ರೇಶ್ವರ ದೇವಾಸ್ಥಾನದ ಹಿಂಭಾಗದ ನಿವಾಸಿಯಾಗಿದ್ದು, ತಮ್ಮ ಪೇಟಿಎಂ ಮತ್ತು ಗೂಗಲ್ ಪೇ ಖಾತೆಗಳಿಂದ ಆರೋಪಿಯ ಖಾತೆಗಳಿಗೆ ಕ್ರಮವಾಗಿ 33,588.11 ರೂ. ಮತ್ತು 67,075.64 ರೂ. ಸೇರಿ ಒಟ್ಟು 1,00,663.75 ರೂ. ವರ್ಗಾಯಿಸಿದ್ದಾರೆ.

    ಆನಂತರ ಆರೋಪಿಯು ಮತ್ತೆ ಹೆಚ್ಚಿನ ಹಣ ಕೇಳಿದಾಗ, ಸಂದೇಶ್‌ಗೆ ಮೋಸದ ಅನುಮಾನ ಬಂದಿದೆ. ಆರೋಪಿಯು ಆನ್‌ಲೈನ್ ಮೂಲಕ ಹಣ ವರ್ಗಾಯಿಸಿಕೊಂಡು ಮೋಸ ಮಾಡಿರುವುದು ದೃಢಪಟ್ಟಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 124/2025, ಕಲಂ 318(2) BNS, 66(D) IT ಆಕ್ಟ್‌ನಡಿ ಪ್ರಕರಣ ದಾಖಲಾಗಿದೆ.

  • ಸಂಘ ಪರಿವಾರದ ಒತ್ತಡಕ್ಕೆ ಮಣಿದು ರಿಯಾಜ್ ಕಡಂಬು ವಿರುದ್ಧ ಪ್ರಕರಣ ದಾಖಲು: ಆಸಿಫ್ ಕೋಟೇಶ್ವರ

    ಉಡುಪಿ: ಮೊನ್ನೆ ಉಡುಪಿ ಜಿಲ್ಲೆಯ ಕುಂಜಾಲುವಿನಲ್ಲಿ ದನದ ರುಂಡ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನೈಜ ಆರೋಪಿಗಳನ್ನು ಬಂಧಿಸಿದ ಹೊರತಾಗಿಯೂ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಉಡುಪಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮುಸ್ಲಿಮರ ವಿರುದ್ಧ ದ್ವೇಷವನ್ನು ಹರಡುವ ಹೇಳಿಕೆಯನ್ನು ನೀಡಿ ಗೊಂದಲವನ್ನು ನಿರ್ಮಿಸಿದ್ದರು.

    ಇದರ ವಿರುದ್ಧ ಎಸ್ ಡಿ ಪಿ ಐ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಪತ್ರಿಕಾಗೋಷ್ಠಿಯನ್ನು ಕರೆಯಲಾಗಿತ್ತು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬು ಕುಂಜಾಲುವಿನ ಘಟನೆ ನಡೆದು ಪೊಲೀಸರು ತನಿಖೆ ಆರಂಭಿಸುವುದಕ್ಕಿಂತ ಮುಂಚೆ ಇಲ್ಲಿಯ ಶಾಸಕರು ಅದನ್ನು ಒಂದು ಸಮುದಾಯದವರ ತಲೆಗೆ ಕಟ್ಟುವ ರೀತಿಯ ಹೇಳಿಕೆಯನ್ನು ನೀಡಿದ್ದರು ಹಾಗೂ ನಂತರ ಪೊಲೀಸರು ನೈಜ ಆರೋಪಿಗಳನ್ನು ಬಂಧಿಸಿದ ಮೇಲೂ ಸಂಘ ಪರಿವಾರದ ನಾಯಕ ಇದನ್ನು ಮುಸ್ಲಿಮರ ತಲೆಗೆ ಕಟ್ಟಲು ಪ್ರಯತ್ನಿಸಿದರು.

    ಈ ಎಲ್ಲ ಬೆಳವಣಿಗೆಯನ್ನು ಗಮನಿಸುವಾಗ ಇದರ ಹಿಂದೆ ಬಿಜೆಪಿ ಹಾಗೂ ಸಂಘ ಪರಿವಾರ ಇರುವ ಶಂಕೆ ಇದೆ ಆದ್ದರಿಂದ ಪೊಲೀಸರು ಕೂಲಂಕುಶ ತನಿಖೆ ನಡೆಸಬೇಕು ಎಂದಷ್ಟೇ ಹೇಳಿದ್ದರು, ಇಲ್ಲಿ ಅವರು ಯಾವುದೇ ಧರ್ಮದ ವಿರುದ್ಧ ಹೇಳಿಕೆಯನ್ನು ನೀಡಿಲ್ಲ. ಕೇವಲ ಸಂಘ ಪರಿವಾರ ಹಾಗೂ ಬಿಜೆಪಿಯ ವಿರುದ್ಧ ಮಾತನಾಡಿದ್ದಾರೆ ಎನ್ನುವ ಒಂದೇ ಕಾರಣಕ್ಕೆ ಸಂಘ ಪರಿವಾರದ ಒತ್ತಡಕ್ಕೆ ಮಣಿದು ಸರಕಾರ ರಿಯಾಜ್ ಕಡಂಬು ವಿರುದ್ಧ ಪ್ರಕರಣವನ್ನು ದಾಖಲಿಸಿದೆ ನಾವು ಇದರ ವಿರುದ್ಧ ಕಾನೂನು ಹೋರಾಟವನ್ನು ನಡೆಸಲಿದ್ದೇವೆ ಎಂದು ಎಸ್ ಡಿ ಪಿ ಐ ಉಡುಪಿ ಜಿಲ್ಲಾಧ್ಯಕ್ಷರಾದ ಆಸಿಫ್ ಕೋಟೇಶ್ವರ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಪೆರಂಪಳ್ಳಿ ಚರ್ಚಿಗೆ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಸೌಹಾರ್ದ ಭೇಟಿ

    ಮಣಿಪಾಲ, ಜುಲೈ 6, 2025: ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರು ಶನಿವಾರ ಪೆರಂಪಳ್ಳಿ ಫಾತಿಮಾ ಮಾತೆ ಚರ್ಚಿಗೆ ಸೌಹಾರ್ದ ಭೇಟಿ ನೀಡಿ ಚರ್ಚಿನ ಧರ್ಮಗುರುಗಳೊಂದಿಗೆ ಮಾಹಿತಿ ಪಡೆದರು.

    ಚರ್ಚಿನ ಇತಿಹಾಸ, ಕ್ರೈಸ್ತ ಸಮುದಾಯದ ವಿವರ ಹಾಗೂ ಚರ್ಚ್ ಕಟ್ಟಡದ ಐತಿಹಾಸಿಕ ವಿನ್ಯಾಸದ ಕುರಿತು ಮಾಹಿತಿ ಪಡೆದ ವರಿಷ್ಠಾಧಿಕಾರಿಗಳು ಕ್ರೈಸ್ತ ಸಮುದಾಯಕ್ಕೆ ಅಗತ್ಯವಿರುವ ಎಲ್ಲಾ ಕಾನೂನಾತ್ಮಕ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

    ಈ ವೇಳೆ ಚರ್ಚಿನ ಪ್ರಧಾನ ಧರ್ಮಗುರು ವಂ|ವಿಶಾಲ್ ಲೋಬೊ, ಮಣಿಪಾಲ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಉಪಸ್ಥಿತರಿದ್ದರು. 

  • ಉಡುಪಿ ಜಾಮಿಯ ಮಸೀದಿಗೆ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಸೌಹಾರ್ದ ಭೇಟಿ

    ಉಡುಪಿ, ಜುಲೈ 5, 2025: ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರು ಶನಿವಾರ ಉಡುಪಿ ಜಾಮಿಯ ಮಸೀದಿಗೆ ಸೌಹಾರ್ದ ಭೇಟಿ ನೀಡಿ, ಉಡುಪಿ ಜಿಲ್ಲಾ ಮುಸ್ಲಿ ಒಕ್ಕೂಟದ ಮತ್ತು ಜಾಮಿಯಾ ಮಸೀದಿಯ ಪದಾಧಿಕಾರಿಗಳು ಮತ್ತು  ಮುಸ್ಲಿಂ ಸಮಾಜದ ಮುಖಂಡರ ಜೊತೆ ಮಾತುಕತೆ ನಡೆಸಿ ಜಿಲ್ಲೆಯಲ್ಲಿ ಸೌಹಾರ್ದ, ಸಾಮರಸ್ಯ ಕಾಪಾಡಲು ಮತ್ತು ಕಾನೂನಾತ್ಮಕವಾಗಿ ಎಲ್ಲಾ ರೀತಿಯ ಸಮಸ್ಯೆಗೆ ಸ್ಪಂದಿಸುವ ಬಗ್ಗೆ ತಿಳಿಸಿದರು.

    ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷರಾದ ಮೊಹಮ್ಮದ್ ಮೌಲಾ,ಜಾಮಿಯ ಮಸೀದಿಯ ಅಧ್ಯಕ್ಷರಾದ ಮಹಮ್ಮದ್ ರಿಯಾಝ್,  ಮುಸ್ಲಿಂ ಸಮಾಜದ ಗಣ್ಯರಾದ, ಇಸ್ಮಾಯಿಲ್ ಕಟಪಾಡಿ, ಪೀರು ಸಾಹೇಬ್, ಶಾಹಿದ್ ಅಲಿ, ಖಾಲಿದ್, ಅಝೀಜ್ ಮುಂತಾದವರು ಉಪಸ್ಥಿತರಿದ್ದರು.

  • ಬ್ರಹ್ಮಾವರ:ಕುಂಜಾಲು ದನದ ರುಂಡ ಪತ್ತೆ ಪ್ರಕರಣ ಪೂರ್ವಯೋಜಿತವೇ ಎಂದು ತನಿಖೆಯಾಗಬೇಕು : SDPI

    ಬ್ರಹ್ಮಾವರ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಬ್ರಹ್ಮಾವರದ ಕುಂಜಾಲುವಿನಲ್ಲಿ ನಡೆದ ದನದ ರುಂಡ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಉಡುಪಿಯ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಲಾಯಿತು.

    ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಎಸ್ ಡಿ ಪಿ ಐ ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬು ಮಾತನಾಡಿ ಕುಂಜಾಲು ಪ್ರಕರಣದ ಹಿಂದೆ ಬಿಜೆಪಿ ಹಾಗೂ ಸಂಘ ಪರಿವಾರ ಇರುವ ಶಂಕೆ ಇದೆ ಏಕೆಂದರೆ ಈ ಘಟನೆ ನಡೆದಂತಹ ಸಂದರ್ಭದಲ್ಲಿ ಪೊಲೀಸರು ತನಿಖೆ ನಡೆಸುವುದಕ್ಕಿಂತ ಮುಂಚೆಯೇ ಇದನ್ನು ಒಂದು ಸಮುದಾಯದವರೇ ಮಾಡಿರುವುದು ಎನ್ನುವಂತಹ ರೀತಿಯಲ್ಲಿ ಉಡುಪಿಯ ಶಾಸಕರು ಅಲ್ಲಿಗೆ ಹೋಗಿ ಹೇಳಿಕೆ ನೀಡಿ ಸೌಹಾರ್ದತೆಯನ್ನು ಕೆಡಿಸುವ ಪ್ರಯತ್ನವನ್ನು ಮಾಡಿದ್ದರು , ಇದಲ್ಲದೆ ಪೊಲೀಸರು ನೈಜ ಆರೋಪಿಗಳನ್ನು ಬಂಧಿಸಿದ ನಂತರವೂ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಉಡುಪಿಗೆ ಬಂದು ಇದರ ಹಿಂದೆ ಮುಸ್ಲಿಮರಿದ್ದಾರೆ ಎಂಬ ಹೇಳಿಕೆಯನ್ನು ನೀಡಿ ಮುಸ್ಲಿಂ ಸಮುದಾಯವನ್ನು ಎತ್ತಿ ಕಟ್ಟುವ ಪ್ರಯತ್ನವನ್ನು ಮಾಡಿದ್ದರು.
    ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡದೆ ಇಂತಹ ಘಟನೆಗಳನ್ನು ನಡೆಸುವ ಮೂಲಕ ಸೌಹಾರ್ದತೆಯನ್ನು ಕೆಡಿಸಿ
    ರಾಜಕೀಯ ಲಾಭವನ್ನು ಪಡೆಯುವ ಷಡ್ಯಂತರವೂ ಈ ಘಟನೆ ಹಿಂದೆ ಇರುವಂತೆ ಕಾಣುತ್ತಿದೆ. ಆದ್ದರಿಂದ ಪೊಲೀಸರು ಈ ಘಟನೆ ಪೂರ್ವ ನಿಯೋಜಿತವೇ ಎಂಬ ಬಗ್ಗೆ
    ಕೂಲಂಕುಶ ತನಿಖೆ ನಡೆಸಿ ಇದರ ಹಿಂದಿರುವ ಕಾಣದ ಕೈಗಳನ್ನು ಬಂಧಿಸಬೇಕು ಎಂದು ಅವರು ಒತ್ತಾಯಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಎಸ್ ಡಿ ಪಿ ಐ ಉಡುಪಿ ಜಿಲ್ಲಾಧ್ಯಕ್ಷರಾದ ಆಸಿಫ್ ಕೋಟೇಶ್ವರ ಜಿಲ್ಲಾ ಉಪಾಧ್ಯಕ್ಷರಾದ ಹನೀಫ್ ಮುಳೂರು ಉಡುಪಿ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಶ್ರಫ್ ಭಾವ ಹಾಗೂ ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ರಹೀಮ್ ಆದಿ ಉಡುಪಿ ಉಪಸ್ಥಿತರಿದ್ದರು

  • ಉಡುಪಿ: ವಿಹಿಂಪ ನಾಯಕ ಶರಣ್ ಪಂಪ್‌ವೆಲ್ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ಉಡುಪಿ, ಜುಲೈ 4, 2025: ಕುಂಜಾಲು ಗ್ರಾಮದಲ್ಲಿ ಇತ್ತೀಚೆಗೆ ವರದಿಯಾದ ಗೋವು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮುದಾಯಿಕ ಕಲಹವನ್ನು ಪ್ರಚೋದಿಸುವ ರೀತಿಯಲ್ಲಿ ಭಡಕವಾದ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ವಿಶ್ವ ಹಿಂದೂ ಪರಿಷತ್ (ವಿಹಿಂಪ) ನಾಯಕ ಶರಣ್ ಪಂಪ್‌ವೆಲ್ ವಿರುದ್ಧ ಉಡುಪಿ ಟೌನ್ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಾಗಿದೆ.

    ದೂರಿನ ಪ್ರಕಾರ, ಆರೋಪಿ ಶರಣ್ ಪಂಪ್‌ವೆಲ್ ಅವರು ತನಿಖೆ ಪೂರ್ಣಗೊಳ್ಳುವ ಮೊದಲೇ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ, ಸಾಮುದಾಯಿಕ ಸೌಹಾರ್ದತೆಗೆ ಧಕ್ಕೆ ತರುವಂತಹ ಭಾವನಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ. ಅವರು ತಪ್ಪು ಮಾಹಿತಿಯನ್ನು ಹರಡಿದ್ದಾರೆ ಎಂದು ಆರೋಪಿಸಲಾಗಿದ್ದು, ಇದು ಸಾರ್ವಜನಿಕ ಶಾಂತಿಗೆ ಭಂಗ ತಂದು ಅಶಾಂತಿಯನ್ನು ಸೃಷ್ಟಿಸುವ ಸಾಧ್ಯತೆಯಿದೆ. ಅವರ ಹೇಳಿಕೆಗಳು ವಿವಿಧ ಧಾರ್ಮಿಕ ಸಮುದಾಯಗಳ ನಡುವೆ ವೈಮನಸ್ಸನ್ನು ಪ್ರಚೋದಿಸುವ ಉದ್ದೇಶದಿಂದ ಕೂಡಿದ್ದವು ಎಂದು ದೂರಿನಲ್ಲಿ ತಿಳಿಸಲಾಗಿದೆ.

    ತನಿಖೆಯ ಸೂಕ್ಷ್ಮ ಹಂತದಲ್ಲಿ ಇಂತಹ ಹೇಳಿಕೆಗಳು ಜವಾಬ್ದಾರಿಯಿಲ್ಲದವು ಮಾತ್ರವಲ್ಲ, ವಿವಿಧ ಸಮುದಾಯಗಳ ನಡುವೆ ಒಡಕು ಮೂಡಿಸುವ ಸಾಮರ್ಥ್ಯವನ್ನು ಹೊಂದಿರುವುದರಿಂದ ಅಪಾಯಕಾರಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರು ಈ ವಿಷಯದ ಬಗ್ಗೆ ಮತ್ತಷ್ಟು ತನಿಖೆ ನಡೆಸುತ್ತಿದ್ದಾರೆ.

    ಈ ಆರೋಪಗಳ ಆಧಾರದ ಮೇಲೆ, ಉಡುಪಿ ಟೌನ್ ಪೊಲೀಸರು ಶರಣ್ ಪಂಪ್‌ವೆಲ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 353(2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.