Category: Udupi

  • ಮಣಿಪಾಲ: ಗಾಂಜಾ ಸೇವನೆ ಆರೋಪ; ಒಬ್ಬನ ಬಂಧನ

    ಮಣಿಪಾಲ, ಮೇ 01, 2025: ಮಣಿಪಾಲ ಪೊಲೀಸ್ ಠಾಣೆಯ ಉಪನಿರೀಕ್ಷಕ ಅನಿಲ್ ಕುಮಾರ್ ನೇತೃತ್ವದಲ್ಲಿ ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ಸಿಬ್ಬಂದಿ, ಉಡುಪಿ ತಾಲೂಕಿನ 80 ಬಡಗುಬೆಟ್ಟು ಗ್ರಾಮದ ಟ್ಯಾಪ್ಮಿ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಶಂಕಾಸ್ಪದವಾಗಿ ಕಂಡ ಶ್ರೇಯಾಂಕ್ ಸಂಜಯ್ (21) ಎಂಬ ಯುವಕನನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯು ಮಾದಕ ವಸ್ತು ಗಾಂಜಾ ಸೇವಿಸಿರುವ ಶಂಕೆಯ ಮೇರೆಗೆ, ಅವನನ್ನು ಮಣಿಪಾಲದ ಕೆ.ಎಂ.ಸಿ. ಫೊರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯರ ಮುಂದೆ ತಪಾಸಣೆಗೆ ಹಾಜರುಪಡಿಸಲಾಯಿತು. ವೈದ್ಯಕೀಯ ವರದಿಯಲ್ಲಿ ಆರೋಪಿಯು ಗಾಂಜಾ ಸೇವಿಸಿರುವುದು ದೃಢಪಟ್ಟಿದೆ.

    ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 78/2025ರ ಅಡಿಯಲ್ಲಿ ಕಲಂ 27(b) NDPS ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರಿದಿದೆ.

  • ಉಡುಪಿ: ಗಾಂಜಾ ಸೇವನೆ ಪ್ರಕರಣ; ಯುವಕನ ವಿರುದ್ಧ ಕೇಸ್

    ಉಡುಪಿ, ಮೇ 07, 2025: ಉಡುಪಿ ತಾಲೂಕಿನ ನೇಜಾರು ತೃಪ್ತಿ ಲೇಔಟ್‌ನ ಪೆಟ್ರೋಲ್ ಪಂಪ್ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿರುವ ಶಂಕೆಯ ಮೇಲೆ ಮಹಮ್ಮದ್ ಸಾಲಿಕ್ (19) ಎಂಬ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ, ಗಾಂಜಾ ಸೇವನೆಯ ದೃಢೀಕರಣವಾಗಿದೆ ಎಂದು ವೈದ್ಯಕೀಯ ವರದಿ ತಿಳಿಸಿದೆ.

    ಈ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 16/2025ರ ಅಡಿಯಲ್ಲಿ ಕಲಂ 27(b) NDPS ಕಾಯ್ದೆಯಂತೆ ಪ್ರಕರಣ ದಾಖಲಿಸಲಾಗಿದೆ. ಮುಂದಿನ ತನಿಖೆ ನಡೆಯುತ್ತಿದೆ.

  • Udupi: Podar International School Organises Spectrum Pulse – An Evening with Podar

    Udupi, May 6, 2025: Podar International School, Udupi, extends its heartfelt gratitude to parents, children, and the entire school community for their enthusiastic participation and unwavering support during Spectrum Pulse – An Evening with Podar. The event, held recently, was a delightful evening filled with engaging games for children and parents, coloring and drawing competitions, and a host of other activities that brought the community together.

    The overwhelming presence and vibrant energy of the attendees made the occasion truly special and unforgettable. The school acknowledges the continued trust placed in them, which fuels their commitment to fostering a joyful and enriching environment for nurturing young minds.

    A special shoutout was given to the dedicated teachers, administrative team, and support staff whose tireless efforts ensured the event’s success. The school also expressed deep appreciation for their respected Principal, Ms. Netra, for her constant guidance and encouragement throughout the planning and execution of the event.

    Podar International School remains dedicated to providing the best educational experience and looks forward to more such community-driven initiatives that strengthen their bond with students, parents, and staff.

  • ಮಲ್ಪೆ: ಮೀನು ವ್ಯವಹಾರದಲ್ಲಿ 90 ಲಕ್ಷ ರೂ. ವಂಚನೆ; ಆರೋಪಿಯ ವಿರುದ್ಧ ಪ್ರಕರಣ ದಾಖಲು

    ಮಲ್ಪೆ, ಮೇ 06, 2025: ಉಡುಪಿಯ ಮಲ್ಪೆಯಲ್ಲಿ ನಡೆಯುತ್ತಿರುವ ಹೋಲ್‌ಸೇಲ್ ಮೀನು ವ್ಯವಹಾರದಲ್ಲಿ 90 ಲಕ್ಷ ರೂಪಾಯಿಗಳ ವಂಚನೆ ನಡೆದಿರುವ ಘಟನೆ ಬೆಳಕಿಗೆ ಬಂದಿದ್ದು, ಆರೋಪಿಯ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಿರ್ಯಾದಿದಾರರಾದ ಅಬ್ದುಲ್ ರೆಹಮಾನ್ (52), ಉಡುಪಿಯ ಮಲ್ಪೆಯ ಹಾರ್ಬರ್‌ನ ಯಾಂತ್ರಿಕ ಭವನದಲ್ಲಿ ಶರ್ಫುನ್ನೀಸ ಫಿಶ್ ಅಸೋಸಿಯೇಟ್ಸ್ ಎಂಬ ಸಂಸ್ಥೆಯ ಮೂಲಕ ಮಹಾರಾಷ್ಟ್ರ ಮತ್ತು ದಕ್ಷಿಣ ಭಾರತದ ವಿವಿಧ ಭಾಗಗಳಿಗೆ ಹೋಲ್‌ಸೇಲ್ ಮೀನು ಮಾರಾಟ ವ್ಯವಹಾರ ನಡೆಸುತ್ತಿದ್ದಾರೆ. ಕೆಲವು ವರ್ಷಗಳ ಹಿಂದೆ ಆರೋಪಿ ಪ್ರಶಾಂತ ಎಂಬಾತ ಸಂಸ್ಥೆಯನ್ನು ಸಂಪರ್ಕಿಸಿ, ಮಾರ್ಕೆಟಿಂಗ್ ವ್ಯವಹಾರವನ್ನು ನಿರ್ವಹಿಸುವ ಜವಾಬ್ದಾರಿಯನ್ನು ವಹಿಸಿಕೊಂಡಿದ್ದ. ಆತ ಕಮಿಷನ್ ಆಧಾರದ ಮೇಲೆ ಗ್ರಾಹಕರಿಂದ ಮೀನು ವ್ಯವಹಾರದ ಹಣವನ್ನು ಸಂಗ್ರಹಿಸಿ ಸಂಸ್ಥೆಗೆ ಜಮಾ ಮಾಡುತ್ತಿದ್ದ.

    ಆದರೆ, ಇತ್ತೀಚೆಗೆ ಸಂಸ್ಥೆಯ ಖಾತೆಯನ್ನು ಪರಿಶೀಲಿಸಿದಾಗ, ವ್ಯವಹಾರದಿಂದ ಬರಬೇಕಾದ ಹಣ ಸರಿಯಾಗಿ ಜಮಾ ಆಗಿಲ್ಲ ಎಂಬುದು ಕಂಡುಬಂದಿದೆ. ಈ ಬಗ್ಗೆ ಗ್ರಾಹಕರನ್ನು ವಿಚಾರಿಸಿದಾಗ, ಅವರು ಮೀನು ಖರೀದಿಯ ಹಣವನ್ನು ಪ್ರಶಾಂತಗೆ ನೀಡಿರುವುದಾಗಿ ತಿಳಿಸಿದ್ದಾರೆ. ಮತ್ತಷ್ಟು ಪರಿಶೀಲನೆಯಲ್ಲಿ, ಒಟ್ಟು 90,00,000 ರೂಪಾಯಿಗಳ ಹಣವನ್ನು ಪ್ರಶಾಂತ ಸಂಸ್ಥೆಗೆ ಜಮಾ ಮಾಡದೆ, ಸ್ವಂತಕ್ಕೆ ಬಳಸಿಕೊಂಡಿರುವುದು ದೃಢಪಟ್ಟಿದೆ.

    ಈ ವಂಚನೆ ಮತ್ತು ನಂಬಿಕೆ ದ್ರೋಹಕ್ಕೆ ಸಂಬಂಧಿಸಿದಂತೆ, ಪಿರ್ಯಾದಿದಾರರು ನ್ಯಾಯಾಲಯದಲ್ಲಿ ಸಲ್ಲಿಸಿದ ಖಾಸಗಿ ದೂರಿನ ಆಧಾರದ ಮೇಲೆ, ಮಲ್ಪೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 53/2025, ಕಲಂ 316(1), 316(2), 316(4), 318(1), 318(2), 318(4) BNS ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಮಲ್ಪೆ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ.

  • ಮಣಿಪಾಲ: ಇಂಡಸ್ ಮೊಬೈಲ್ ಟವರ್‌ನ ಬ್ಯಾಟರಿಗಳ ಕಳ್ಳತನ; 60,000 ರೂ. ಮೌಲ್ಯದ ಆಸ್ತಿ ಕಳವು

    ಮಣಿಪಾಲ, ಮೇ 06, 2025: ಉಡುಪಿ ತಾಲೂಕಿನ 80 ಬಡಗುಬೆಟ್ಟು ಗ್ರಾಮದ ಸಾಲು ಮರದ ತಿಮ್ಮಕ್ಕ ಉದ್ಯಾನವನದ ಎದುರುಗಡೆ ಇರುವ ಇಂಡಸ್ ಮೊಬೈಲ್ ಟವರ್‌ನಿಂದ 60,000 ರೂಪಾಯಿ ಮೌಲ್ಯದ ಬ್ಯಾಟರಿಗಳನ್ನು ಅಪರಿಚಿತ ಕಳ್ಳರು ಕಳವು ಮಾಡಿರುವ ಘಟನೆ ನಡೆದಿದೆ.

    ಶಿವಳ್ಳಿ ಗ್ರಾಮದ ಪ್ರದೀಪ (38), ಇಂಡಸ್ ಮೊಬೈಲ್ ಟವರ್‌ನ ಸೆಕ್ಯೂರಿಟಿ ಸೂಪರ್‌ವೈಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಮೇ 01, 2025 ರಾತ್ರಿ 10:00 ಗಂಟೆಯಿಂದ ಮೇ 04, 2025 ಮಧ್ಯಾಹ್ನ 1:00 ಗಂಟೆಯ ನಡುವೆ, ಟವರಿನ ಕಪಾಟಿನ ಬೀಗವನ್ನು ಮುರಿದು, ಒಳಗೆ ಅಳವಡಿಸಲಾಗಿದ್ದ ಬ್ಯಾಟರಿ ಬ್ಯಾಂಕಿನ 24 ಸೆಲ್‌ಗಳನ್ನು (ಇಂಡಸ್ ಐಡಿ: 1274432, ಸೈಟ್ ಐಡಿ: MAN055) ಕಳ್ಳರು ಕದ್ದಿರುವುದಾಗಿ ದೂರು ನೀಡಿದ್ದಾರೆ.

    ಕಳವಾದ ಬ್ಯಾಟರಿಗಳ ಅಂದಾಜು ಮೌಲ್ಯ 60,000 ರೂಪಾಯಿಗಳಾಗಿದ್ದು, ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 77/2025, ಕಲಂ 331(3), 331(4), 305(a) BNS ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಮಣಿಪಾಲ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ.

  • ಬ್ರಹ್ಮಾವರ: ಅರಿವು ಕೇಂದ್ರ – ಹಾರಾಡಿಯೆಲ್ಲಿ ಬೇಸಿಗೆ ಶಿಬಿರ

    ಬ್ರಹ್ಮಾವರ: ಇಲ್ಲಿನ ಹಾರಾಡಿಯೆಲ್ಲಿನ ಅರಿವು ಕೇಂದ್ರದಲ್ಲಿ ಮಕ್ಕಳಿಗೆ ಬೀಗೆ ಶಿಬಿರ ಆರಂಭವಾಗಿದ್ದು, ಮಕ್ಕಳಿಗೆ ವಿವಿಧ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

    ಬೇಸಿಗೆ ಶಿಬಿರದ ಮೊದಲನೇ ದಿನದ ಚಟುವಟಿಕೆಎಲ್ಲಿ ಗಟ್ಟಿ ಓದು, ಫನ್ನಿ ಗೇಮ್ಸ್ ಹಾಗೂ ಡ್ರಾಯಿಂಗ್ ಮಾಡಿಸಲಾಯಿತು.

    ಅರಿವು ಕೇಂದ್ರದಲ್ಲಿ ವರ್ಷ ಉದ್ದಕ್ಕೋ ಬೇರೆ ಬೇರೆ ತರಬೇತಿ ನೀಡಲಾಗುತಿತ್ತು, ಈ ವರ್ಷ ಪಕ್ಷಿಗಳ ಮಾಯಾಲೋಕ ತರಬೇತಿ ಕಾರ್ಯಕರಮ ವೀಕ್ಷಣೆ , ಚೆಸ್ ಆಟ, ಪರೀಕ್ಷೆಯ ತಯಾರಿ, ಇಂಗ್ಲಿಷ್ ಟೈಪಿಂಗ್, ಗಟ್ಟಿ ಓದು ಕಾರ್ಯಕ್ರಮ ನಡಿಯಿತು.

  • ಉಡುಪಿ: ವಕ್ಫ್‌ ತಿದ್ದುಪಡಿ ಕಾಯ್ದೆ ವಿರೋಧಿಸಿ ಮೇ 13ರಂದು ಪ್ರತಿಭಟನೆ

    ಉಡುಪಿ: ವಕ್ಫ್‌ ತಿದ್ದುಪಡಿ ಕಾಯ್ದೆ ವಿರೋಧಿಸಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ನೇತೃತ್ವದಲ್ಲಿ ದಲಿತ ಸಂಘರ್ಷ ಸಮಿತಿ ಮತ್ತು ಅಹಿಂದ ಸಂಘಟನೆಗಳ ಸಹಯೋಗದಲ್ಲಿ ಮೇ 8ರಂದು ಸಾವಿರಾರು ಸಂಖ್ಯೆಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು “ವಾಕ್ಫ್ ಉಳಿಸಿ ಸಂವಿಧಾನ ರಕ್ಷಿಸಿ” ಹೋರಾಟ ಸಮಿತಿ ಉಡುಪಿ ಜಿಲ್ಲೆ ಪ್ರಕಟಣೆಯೆಲ್ಲಿ ತಿಳಿಸಿದೆ.

    ಈ ಪ್ರತಿಭಟನೆಯು ಮಂಗಳವಾರ 13ನೇ ಮೇ ಸಂಜೆ 4:00 ಗಂಟೆಗೆ ಉಡುಪಿಯ ಮಿಷನ್ ಕಾಂಪೌಂಡ್ನಲ್ಲಿರುವ ಕ್ರಿಶ್ಚಿಯನ್ ಕಾಲೇಜು ಮೈದಾನದಲ್ಲಿ ನಡೆಯಲಿದೆ.

  • ಮೃತ ವ್ಯಕ್ತಿಯ ವಾರಸುದಾರರಿಗೆ ಸೂಚನೆ

    ಉಡುಪಿ, ಮೇ 05 : ಇಂದ್ರಾಳಿ ರೈಲ್ವೆ ಪೊಲೀಸ್ ಸ್ಟೇಷನ್ನ ಉಡುಪಿಯಿಂದ ಬಾರ್ಕೂರು ರೈಲ್ವೆ ಹಳಿಯ ಮೇಲೆ ಏಪ್ರಿಲ್ 26 ರಂದು ಅಸ್ವಸ್ಥರಾಗಿ ಬಿದ್ದದ್ದ ಸುಮಾರು 25 ರಿಂದ 30 ವರ್ಷ ಪ್ರಾಯದ ಅಪರಿಚಿತ ಗಂಡಸನ್ನು ಚಿಕಿತ್ಸೆಗಾಗಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.

    ಮೃತ ವ್ಯಕ್ತಿಯ ವಾರಸುದಾರರು ಯಾರಾದರೂ ಇದ್ದಲ್ಲಿ ಮಣಿಪಾಲ ಪೊಲೀಸ್ ಠಾಣೆಯ ಪಿ.ಐ ಮೊ.ನಂ: 9480805448, ಪಿ.ಎಸ್.ಐ ಮೊ.ನಂ: 9480805475 ಹಾಗೂ ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಣಿಪಾಲ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. 

  • ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ನೂತನ ಪದಾಧಿಕಾರಿಗಳ ಆಯ್ಕೆ

    ಉಡುಪಿ :  ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ  ನೂತನ ಪದಾಧಿಕಾರಿಗಳ ಆಯ್ಕೆ ಅನ್ಸಾರ್ ಅಹಮದ್ ರವರ ಅಧ್ಯಕ್ಷತೆಯಲ್ಲಿ ನೂತನವಾಗಿ ಆಯ್ಕೆಯಾದ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ ಮಹಿಳಾ ಜಿಲ್ಲಾಧ್ಯಕ್ಷರಾದ ಜ್ಯೋತಿ ಸೇರಿಗಾರ್ತಿ ರವರ ನೇತೃತ್ವದಲ್ಲಿ ಇಂದು ನಡೆಯಿತು. ಇದೇ ಸಂದರ್ಭದಲ್ಲಿ ಜಿಲ್ಲಾ ಸಮಿತಿ ರಚನೆಯಾಗಿ ಘೋಷಿಸಲಾಯಿತು.

    ಕರವೇ ನೂತನ ಜಿಲ್ಲಾ ಉಪಾಧ್ಯಕ್ಷರಾಗಿ ಸಯ್ಯದ್ ನಿಜಾಮ್, ಅಲ್ಫೋನ್ಸ್  ಮಿನೇಜಸ್, ಸುಧೀರ್ ಪೂಜಾರಿ ಅವರನ್ನು ಆಯ್ಕೆ ಮಾಡಲಾಯಿತು.

    ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಪೂಜಾರಿ ಕಾರ್ಯದರ್ಶಿಯಾಗಿ ಸಂತೋಷ ಕುಲಾಲ ಸಂಘಟನಾ ಕಾರ್ಯದರ್ಶಿಯಾಗಿ ಗೋಪಾಲ್ ದೊರೆಯವರನ್ನು ಆಯ್ಕೆ ಮಾಡಲಾಯಿತು.

    ಜಿಲ್ಲಾ ಸಮಿತಿಯ ಸದಸ್ಯರಾಗಿ ಪ್ರಶಾಂತ್ ಸಾಲಿಯಾನ್  ಪಡುಬಿದ್ರೆ, ರತ್ನಾಕರ್ ಪೂಜಾರಿ, ರಾಘವೇಂದ್ರ ಪೂಜಾರಿ, ಪ್ರಕಾಶ್ ದೇವಾಡಿಗ, ನಾಗರಾಜ್ ಹಾಗೂ ರಾಜು ರವರನ್ನು ಆಯ್ಕೆ ಮಾಡಲಾಯಿತು.

    ಮಹಿಳಾ ಜಿಲ್ಲಾ ಉಪಾಧ್ಯಕ್ಷರಾಗಿ ದೇವಕಿ ಬಾರ್ಕೂರು, ಕಿರಣ್ ಪ್ರತಾಪ್ ರವರನ್ನು ಆಯ್ಕೆ ಮಾಡಲಾಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಅನುಷಾ ಆಚಾರ್ ಪಳ್ಳಿ, ಕಾರ್ಯದರ್ಶಿಯಾಗಿ ಡಾ.ಶಶಿಕಲಾ, ಸಂಘಟನಾ ಕಾರ್ಯದರ್ಶಿಯಾಗಿ ವಿಶಾಲಾಕ್ಷಿಯವರನ್ನು ಆಯ್ಕೆ ಮಾಡಲಾಯಿತು.

    ಉಡುಪಿ ತಾಲೂಕು ಅಧ್ಯಕ್ಷರಾಗಿ ಯತೀಶ್, ಬ್ರಹ್ಮಾವರ ತಾಲೂಕು ಅಧ್ಯಕ್ಷರಾಗಿ  ಸ್ಟ್ಯಾನಿ ಡಿಸೋಜ, ಕಾಪು ತಾಲೂಕು ಅಧ್ಯಕ್ಷರಾಗಿ ಚೇತನ್ ಪಡುಬಿದ್ರೆ, ಕಾರ್ಕಳ ತಾಲೂಕು ಅಧ್ಯಕ್ಷರಾಗಿ ಹನೀಫ್ ಕಾರ್ಕಳ, ಹೆಬ್ರಿ ತಾಲೂಕು ಅಧ್ಯಕ್ಷರಾಗಿ ವಿಜಯೇಂದ್ರ ಹೆಬ್ರಿ,  ಬೈಂದೂರು ತಾಲೂಕು ಅಧ್ಯಕ್ಷರಾಗಿ ನಾಗೇಶ್ ರವರು ಆಯ್ಕೆಯಾದರು.

    ಈ ಸಂದರ್ಭದಲ್ಲಿ ನೂರಾರು ಸಂಖ್ಯೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ಉಪಸ್ಥಿತರಿದ್ದರು.

  • ಉಡುಪಿ: ಉದ್ಯೋಗ ಮೇಳ

    ಉಡುಪಿ, ಮೇ 5: ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಯಲ್ಲಿ ಮೇ 8ರಂದು ಬೆಳಗ್ಗೆ 10:30 ರಿಂದ ಮಿನಿ ಉದ್ಯೋಗ ಮೇಳ ನಡೆಯಲಿದೆ.

    ಎಸೆಸೆಲ್ಸಿ, ಪಿಯುಸಿ, ಐಟಿಐ, ಬಿಕಾಂ, ಬಿಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

    ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ, 8105618291, 8105774936, 9901472710 ಹಾಗೂ 9945856670 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಪ್ರಕಟಣೆ ತಿಳಿಸಿದೆ.