Tag: Bantwal

  • ಅಮಾಯಕ ಮುಸ್ಲಿಂ ಯುವಕನ ಬಾಡಿಗೆಗೆ ಕರೆಸಿ ವಂಚನೆ ಮೂಲಕ ಹತ್ಯೆ, ಜಿಲ್ಲೆ ಯಾದ್ಯಂತ ತೀವ್ರ ಆಕ್ರೋಶ.. ನಾಳೆ ಬಂದ್ ಗೆ ಕರೆ ಸಾಧ್ಯತೆ?

    ಬಂಟ್ವಾಳ :ಅಮಾಯಕ ಮುಸ್ಲಿಂ ಯುವಕನ ಬಾಡಿಗೆಗೆ ಕರೆಸಿ ವಂಚನೆ ಮೂಲಕ ಹತ್ಯೆನಡೆದಿದ್ದು, ಜಿಲ್ಲೆ ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ನಾಳೆ ಮುಸ್ಲಿಂ ಸಂಘಟನೆ ಗಳು ಬಂದ್ ಗೆ ಕರೆ ನೀಡುವ ಸಾಧ್ಯತೆಇದೆ ಎನ್ನಲಾಗುತಿದೆ

    ಘಟನೆ ನಡೆದ ತಕ್ಷಣ ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆ ಯಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿರುವ ಖಲಂದರ್ ಶಾಫಿಯ ಆರೋಗ್ಯ ವಿಚಾರಿಸಲು ಬಂದ ಮುಸ್ಲಿಂ ಮುಖಂಡರನ್ನು ಯುವಕರು ಅಡ್ಡ ಗಟ್ಟಿ ತರಾಟೆಗೆ ತೆಗೆದ ಪ್ರಸಂಗ ನಡೆಯಿತು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದು ಮುಸ್ಲಿಂ ಸಮುದಾಯಕ್ಕೆ ರಕ್ಷಣೆ ಇಲ್ಲದಂತಾಗಿದೆ ಮೊನ್ನೆ ನಡೆದ ಹಿಂದೂ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದವರ ವಿರುದ್ಧ ಕ್ರಮ ಜಿಲ್ಲಾ ಆಡಳಿತ ಕೈಗೊಂಡಿದ್ದರೆ ಇಂತಹ ಘಟನೆಗಳು ಮರುಕಳಿಸುತ್ತಿರಲಿಲ್ಲ ಎಂದು ನಾಯಕರ ಮುಂದೆ ಆಕ್ರೋಶ ವ್ಯಕ್ತಪಡಿಸಿದ್ದರು ಸಮುದಾಯಕ್ಕೆ ನಿಮ್ಮ ನಾಯಕತ್ವದ ಅವಶ್ಯಕತೆ ಇಲ್ಲ ಎಂದು ಈ ಸಂದರ್ಭದಲ್ಲಿ ಗುಡುಗಿದರು.

  • ಮಂಗಳೂರಿನ ಕೊಳತ್ತಮಜಲುವಿನಲ್ಲಿ ಯುವಕನ ಕೊಲೆ: ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಖಂಡನೆ

    ಮಂಗಳೂರು, 27 ಮೇ 2025: ಬಂಟ್ವಾಳದ ಕೊಳತ್ತಮಜಲು ಸಮೀಪದಲ್ಲಿ ಯುವಕ ಅಬ್ದುಲ್ ರಹಿಮಾನ್‌ನ ಹತ್ಯೆಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.

    ಈ ಘಟನೆಯ ಹಿನ್ನೆಲೆಯಲ್ಲಿ ಸಚಿವರು DG & IGP ಮತ್ತು ಕಾನೂನು ಸುವ್ಯವಸ್ಥೆ ADGP ಯವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಕಟ್ಟುನಿಟ್ಟಾದ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

    ಜೊತೆಗೆ, ಮಂಗಳೂರು ಜಿಲ್ಲಾಧಿಕಾರಿ ಮತ್ತು ಎಸ್‌ಪಿಯವರೊಂದಿಗೆ ಚರ್ಚಿಸಿದ ಸಚಿವರು, ಮಂಗಳೂರಿನಲ್ಲಿ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮತ್ತು ಸೂಕ್ಷ್ಮ ಪ್ರದೇಶಗಳಲ್ಲಿ ವಿಶೇಷ ನಿಗಾವಹಿಸಿ ಕಾನೂನು ಸುವ್ಯವಸ್ಥೆ ಕಾಪಾಡಲು ಕಠಿಣ ಕ್ರಮಗಳನ್ನು ಜಾರಿಗೊಳಿಸುವಂತೆ ಆದೇಶಿಸಿದ್ದಾರೆ.

  • ಬಂಟ್ವಾಳ: ಇಬ್ಬರು ಯುವಕರ ಮೇಲೆ ತಲ್ವಾರ್ ದಾಳಿ: ಓರ್ವ ಮೃತ್ಯು

    ಬಂಟ್ವಾಳ 27 ಮೇ 2025: ಇರಕೊಡಿಯೆಲ್ಲಿಯ ಕೋಲ್ತಮಜಲು ನಿವಾಸಿ ಅಬ್ದುಲ್ ಖಾದರ್ ಎಂಬವರ ಮಗ ರಹೀಮ್ ಮೇಲೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ.

    ಮರಳು ಅನ್ಲೋಡ್ ಮಾಡುತ್ತಿರುವಾಗ ಈ ದಾಳಿ ನಡೆದಿದೆ. ರಹೀಮ್ ಜೊತೆಗಿದ್ದ ಯುವಕ ಇಮ್ತಿಯಾಜ್ ಕೂಡ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿದ್ದಾರೆ.

    ರಹೀಮ್ ಪಿಕಪ್ ಚಾಲಕನಾಗಿ ಕೆಲಸ ಮಾಡುತ್ತಿದ್ದು, ಕೋಲ್ತಮಜಲು ಮಸೀದಿಯ ಕಾರ್ಯದರ್ಶಿ ಎಂದು ಹೇಳಲಾಗುತ್ತಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

  • ಬಂಟ್ವಾಳ: ಮದ್ಯಪಾನ ಮಾಡಿ ಯುವಕರು ಪೆಟ್ರೋಲ್‌ಗೆ ಹಣ ಪಾವತಿಸದೆ ಪರಾರಿ, ಎರಡು ವಾಹನಗಳಿಗೆ ಡಿಕ್ಕಿ

    ಬಂಟ್ವಾಳ, ಮೇ 21: ಮದ್ಯದ ಅಮಲಿನಲ್ಲಿದ್ದ ಇಬ್ಬರು ಯುವಕರು ಬಿ.ಸಿ. ರೋಡ್‌ನಲ್ಲಿರುವ ಪೆಟ್ರೋಲ್ ಪಂಪ್‌ನಲ್ಲಿ ತಮ್ಮ ಆಲ್ಟೋ ಕಾರಿಗೆ ಪೆಟ್ರೋಲ್ ತುಂಬಿಸಿ, ಹಣ ಪಾವತಿಸದೆ ಪರಾರಿಯಾದ ಘಟನೆ ಮಂಗಳವಾರ, ಮೇ 20 ರಂದು ನಡೆದಿದೆ. ಸಲೆತ್ತೂರಿನ ಮೂಲಕ ವೇಗವಾಗಿ ಓಡಿಸಿಕೊಂಡು ಹೋಗುವಾಗ ಪಾಲ್ತಾಜೆಯಲ್ಲಿ ಅವರ ಕಾರು ಆಕ್ಟಿವಾ ಸ್ಕೂಟರ್ ಮತ್ತು ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದಿದೆ.

    ಕಟ್ಟತ್ತಿಲ ಎಂಬಲ್ಲಿನ ನಿವಾಸಿ ಅಬೂಬಕ್ಕರ್ ಎಂಬಾತ ಆಕ್ಟಿವಾ ಸ್ಕೂಟರ್ ಸವಾರನಾಗಿದ್ದು, ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.

    112 ತುರ್ತು ಸೇವೆಯ ಪೊಲೀಸ್ ಸಿಬ್ಬಂದಿ ಮತ್ತು ವಿಟ್ಲಾ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಕಾರನ್ನು ಮತ್ತು ಮದ್ಯದ ಅಮಲಿನಲ್ಲಿದ್ದ ಇಬ್ಬರು ಯುವಕರನ್ನು ವಶಕ್ಕೆ ಪಡೆದಿದ್ದಾರೆ.

    ಹಿಂದಿಯಲ್ಲಿ ಮಾತನಾಡಿದ ಈ ಇಬ್ಬರು ಯುವಕರು ರಾಜ್ಯದ ಹೊರಗಿನವರೆಂದು ಶಂಕಿಸಲಾಗಿದೆ.