Tag: BJP

  • BJP Expels Rajasthan Spokesperson Krishna Kumar Janu Over Controversial Remarks

    Jaipur, August 10, 2025: The Rajasthan unit of the Bharatiya Janata Party (BJP) has expelled its state spokesperson, Krishna Kumar Janu, for six years, following his public criticism of the party’s leadership. The decision, announced on August 8, 2025, by BJP state disciplinary committee chairperson Onkar Singh Lakhawat, was officially attributed to Janu’s failure to adequately respond to a show-cause notice issued on June 20 regarding his opposition to the appointment of Harshini Kulhari as the Jhunjhunu district president.

    However, the expulsion closely follows the circulation of a viral video in which Janu lambasted the BJP for its alleged “humiliating” treatment of prominent Jat leaders, including former Jammu and Kashmir Governor Satya Pal Malik and former Vice President Jagdeep Dhankhar. In the video, Janu expressed dismay over the lack of a state funeral for Malik, who passed away recently at age 79, describing it as a sign of “tiraskar” (disdain) by the party. He also criticized the absence of a formal farewell for Dhankhar, who resigned from the Vice Presidency last month citing health reasons, calling it a breach of Jat cultural values and an act of “arrogance” by the government.

    Janu accused the BJP leadership of sidelining veteran figures such as L.K. Advani, Murli Manohar Joshi, Yashwant Sinha, Praveen Togadia, Sanjay Joshi, and Vasundhara Raje, while alleging that former Madhya Pradesh Chief Minister Shivraj Singh Chouhan had been reduced to a “puppet.” He urged Jat leaders within the BJP to speak out against the party’s direction, invoking the community’s historical resistance to injustice, referencing figures like Guru Nanak Dev, Jambhoji Maharaj, and Dayanand Saraswati.

    The BJP’s disciplinary committee deemed Janu’s remarks damaging to the party’s image and internal discipline, particularly ahead of key political activities in Rajasthan. The expulsion highlights the party’s strict stance against public dissent, especially concerning high-profile figures. Janu, however, remained defiant, vowing to continue opposing “whatever is wrong in the party” and reaffirming his commitment to his ideological path.

    The move has sparked discussions in Rajasthan’s political circles, with some viewing it as a necessary measure to maintain party discipline, while others see it as an attempt to suppress dissent within the influential Jat community ahead of upcoming elections.

    Krishna Kumar Janu (In Middle) | Photo Credit: Facebook
  • Mallikarjun Kharge Alleges Vote Theft Led to His First Electoral Defeat in 2019

    Bengaluru, August 8, 2025: Congress President Mallikarjun Kharge, known for his undefeated record in elections, alleged on Friday that his first-ever defeat in the 2019 Lok Sabha elections was due to widespread electoral fraud orchestrated by the Bharatiya Janata Party (BJP).

    Speaking at a massive Congress protest against alleged vote theft at Freedom Park in Bengaluru, Kharge claimed, “In my over 50 years of political life, I won more than 12 elections. However, in the 2019 Lok Sabha elections, I faced my first defeat due to electoral rigging.”

    Kharge accused the BJP of engaging in “fake voting” across five Assembly segments within the Gulbarga Lok Sabha constituency, where he contested in 2019. He alleged that the BJP secured approximately 20,000 votes per segment through fraudulent means.

    Targeting the Modi government, Kharge further claimed that the BJP has misused agencies like the Enforcement Directorate (ED), Central Bureau of Investigation (CBI), and Income Tax Department to intimidate opponents and cling to power.

    Citing Karnataka as an example, he said, “Despite lacking a clear majority, the BJP toppled the then-ruling coalition government by inducing defections of several MLAs. The same tactics were used in Goa, Maharashtra, and Manipur. They didn’t win elections but bought governments with money.”

    Kharge also alleged that the BJP’s victory in the 2024 Lok Sabha elections was not legitimate. “The secret behind BJP’s win has now been exposed. They secured victory through vote theft,” he stated, adding that the Congress would take this issue to the people across the country.

  • Rahul Gandhi exposed widespread vote theft in LS polls with evidence: Siddaramaiah

    Bengaluru, August 8, 2025: Karnataka Chief Minister Siddaramaiah has backed Congress Leader of Opposition in Lok Sabha, Rahul Gandhi, in alleging widespread electoral fraud in the recent Lok Sabha elections. Siddaramaiah claimed that Gandhi presented “hard evidence” on Thursday, revealing systematic vote theft across India, enabling Prime Minister Narendra Modi to retain power.

    In a media statement, Siddaramaiah asserted, “Despite massive public discontent, Narendra Modi secured power through electoral fraud. The documents released by Rahul Gandhi provide undeniable proof.” He further demanded Modi’s resignation, stating, “Modi has no moral right to remain in office. He must resign and dissolve the government immediately.”

    The Congress Party, under Gandhi’s leadership, conducted a six-month investigation into voter records in the Mahadevapura Assembly segment of Bengaluru Central Lok Sabha constituency. The probe allegedly uncovered evidence of systematic vote theft, with the Bharatiya Janata Party (BJP) accused of illegally securing 1,00,250 votes in a constituency of approximately 3.25 lakh voters.

    Siddaramaiah highlighted five methods of alleged electoral malpractice in Mahadevapura:

    1. Fake Voters: Approximately 11,965 fake voters reportedly cast votes, with some individuals voting in multiple polling booths and even outside Karnataka, indicating deliberate misuse of the electoral process.
    2. Voters with Fake Addresses: Around 40,009 voters were registered with non-existent addresses, including “House Number 0” or random, invalid entries for names and addresses.
    3. Multiple Voters at Single Addresses: A total of 10,452 voters were registered under a few addresses, including 80 voter IDs linked to a single-bedroom house and 68 to a private club, with none of the listed voters residing at these locations.
    4. Unidentifiable Voter Photographs: About 4,132 voter ID cards had missing or unclear photos, yet these voters were allowed to cast ballots, breaching electoral protocols.
    5. Elderly “First-Time Voters”: An astonishing 33,692 voters aged 60 to 90 were registered as first-time voters via Form 6, including individuals as old as 89 and 98, raising suspicions of fraudulent registrations.

    Siddaramaiah accused the Election Commission of complicity, alleging it altered rules to suppress information and withhold electronic data and CCTV footage requested by Gandhi. “Had the Election Commission acted impartially, this scam could have been exposed within days,” he said, adding that similar tactics were likely employed nationwide by the BJP to retain power.

    The Congress Party vowed to escalate its campaign, promising to raise awareness of the alleged fraud across the country.

  • ಕೇಂದ್ರ ಸರ್ಕಾರದಿಂದ ಮಂಗಳೂರಿಗೆ 100 ಹೊಸ ಇಲೆಕ್ಟ್ರಿಕ್‌ ಬಸ್‌ಗಳ ಮಂಜೂರು : ಸಂಸದ ಕ್ಯಾ. ಬ್ರಿಜೇಶ್‌ ಚೌಟ

    ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಇ-ಬಸ್ ಸೇವಾ ಯೋಜನೆಯಡಿ ಮಂಗಳೂರಿಗೆ ಒಟ್ಟು 100 ಹೊಸ ಇಲೆಕ್ಟ್ರಿಕ್‌ ಬಸ್‌ಗಳನ್ನು ಮಂಜೂರು ಮಾಡಿರುವುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ  ಇಂದು ತಿಳಿಸಿದ್ದಾರೆ.

    ಮುಡಿಪು ಕಂಬಳಪದವಿನಲ್ಲಿ ನಿರ್ಮಾಣಗೊಂಡ ವಿದ್ಯುನ್ಮಾನ ವಾಹನ ಚಾಲನಾ ಪರೀಕ್ಷಾ ಪಥಗಳ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು , ದೇಶದಲ್ಲಿ ವಾಹನಗಳಿಂದಾಗುವ ವಾಯುಮಾಲಿನ್ಯ ತಡೆಗಟ್ಟುವುದಕ್ಕೆ ಕೇಂದ್ರ ಸರ್ಕಾರವು ದೇಶದೆಲ್ಲೆಡೆ ಎಲೆಕ್ಟ್ರಿಕ್‌ ಬಸ್‌ಗಳ ಬಳಕೆಯನ್ನು ಹೆಚ್ಚು ಜನಪ್ರಿಯಗೊಳಿಸುತ್ತಿದೆ. ಅದರಂತೆ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದಿಂದ ಕರ್ನಾಟಕಕ್ಕೆ ಒಟ್ಟು 750 ಎಲೆಕ್ಟ್ರಿಕಲ್‌ ಬಸ್‌ಗಳು ಮಂಜೂರಾಗಿದ್ದು, ಆ ಪೈಕಿ ಮಂಗಳೂರು ನಗರಕ್ಕೆ 100 ಬಸ್‌ಗಳನ್ನು ಮಂಜೂರುಗೊಳಿಸಲಾಗಿದೆ. 

    ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಕಲಬುರ್ಗಿ, ಮೈಸೂರು, ಶಿವಮೊಗ್ಗ ಸೇರಿದಂತೆ ಒಟ್ಟು 10 ನಗರಗಳಿಗೆ ತಲಾ 100 ಎಲೆಕ್ಟ್ರಿಕಲ್‌ ಬಸ್‌ಗಳನ್ನು ಮಂಜೂರು ಮಾಡಲಾಗಿದೆ. ಪರಿಸರ ಸ್ನೇಹಿಯಾದ ಈ ಬಸ್‌ಗಳು ಶೀಘ್ರದಲ್ಲೇ ಮಂಗಳೂರು ನಗರದ ವಿವಿಧ ರೂಟ್‌ಗಳಲ್ಲಿ ರಸ್ತೆಗಿಳಿಯಲಿದೆ ಎಂದು ಕ್ಯಾ. ಚೌಟ ಹೇಳಿದ್ದಾರೆ.

    ವಿದ್ಯುತ್‌ ಚಾಲಿತ ಈ ಎಲೆಕ್ಟ್ರಿಕ್‌ ಬಸ್‌ಗಳಿಗೆ ಸೂಕ್ತ ಚಾರ್ಜಿಂಗ್‌ ಸ್ಟೇಷನ್‌, ಬಸ್‌ ಡಿಪೋಗಳು ಹಾಗೂ ವಾಹನಗಳ ನಿರ್ವಹಣಾ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಕರ್ಯದ ಅಗತ್ಯವಿದೆ. ಹೀಗಿರುವಾಗ, ಕೆಎಸ್‌ಆರ್‌ಟಿಸಿ ಕೂಡಲೇ ಈ 100 ಎಲೆಕ್ಟ್ರಿಕಲ್‌ ಬಸ್‌ಗಳ ನಿರ್ವಹಣೆಗೆ ಮಂಗಳೂರಿನಲ್ಲಿ ಸೂಕ್ತ ಜಾಗ ಕೂಡ ಗುರುತಿಸಬೇಕಿದೆ. 

    ಇತ್ತೀಚೆಗೆ ನಡೆದಿರುವ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯಲ್ಲಿಯೂ ಈ ಬಗ್ಗೆ ಪ್ರಸ್ತಾಪಿಸಿದ್ದು, ಮಂಗಳೂರಿನಲ್ಲಿ ಎಲೆಕ್ಟ್ರಿಕ್‌ ಬಸ್‌ಗಳ ನಿರ್ವಹಣೆಗೆ ಜಾಗ ಸೇರಿದಂತೆ ಸೂಕ್ತ ಮೂಲಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೂ ಸೂಚಿಸಿದ್ದೇನೆ. ಅಲ್ಲದೇ ನಿಟ್ಟಿನಲ್ಲಿ ರಾಜ್ಯ ಸಾರಿಗೆ ಇಲಾಖೆಯು ಹೆಚ್ಚಿನ ಮುತುವರ್ಜಿ ವಹಿಸಿ ಅಗತ್ಯ ಮೂಲಸೌಕರ್ಯ ಒದಗಿಸುವಲ್ಲಿ ಸೂಕ್ತ ಕ್ರಮ ಜರುಗಿಸಬೇಕೆಂದು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ , ಸಚಿವ ರಾಮಲಿಂಗಾ ರೆಡ್ಡಿ ಅವರಿಗೂ  ಇದೇ ಸಂದರ್ಭದಲ್ಲಿ ಕ್ಯಾ. ಚೌಟ ಅವರು ಮನವಿ ಮಾಡಿದ್ದು, ಇದಕ್ಕೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದರು.

    ಕೇಂದ್ರ ಸರ್ಕಾರಕ್ಕೆ ಧನ್ಯವಾದ ಮಂಗಳೂರಿಗೆ ಕೇಂದ್ರ ಸರ್ಕಾರವು 100 ಬಸ್‌ಗಳನ್ನು ಮಂಜೂರು ಮಾಡಿರುವುದಕ್ಕೆ ಕ್ಯಾ. ಚೌಟ ಅವರು ವಸತಿ ಹಾಗೂ ನಗರಾಭಿವೃದ್ಧಿ ಸಚಿವಾಲಯದ ಸಚಿವರಾದ ಮನೋಹರ್‌ ಲಾಲ್‌ ಖಟ್ಟರ್‌, ಇಲಾಖೆ ಅಧಿಕಾರಿಗಳು ಹಾಗೂ ಪರಿಸರ ಸ್ನೇಹಿ ಬಸ್‌ಗಳ ಸಂಚಾರಕ್ಕೆ ಒತ್ತು ನೀಡುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೂ ಕ್ಯಾ. ಚೌಟ ಅವರು ಜಿಲ್ಲೆಯ ಜನರ ಪರವಾಗಿ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.

  • ನಗರಸಭಾ ಸದಸ್ಯ ಪಿ.ಜಿ. ಜಗನ್ನಿವಾಸ ರಾವ್‌ಗೆ ನೋಟಿಸ್ ಜಾರಿ ಮಾಡಿದ ಬಿಜೆಪಿ

    ಪುತ್ತೂರು, ಜುಲೈ 8, 2025: ಮದುವೆಯಾಗುವುದಾಗಿ ಯುವತಿಗೆ ವಂಚನೆ ಮಾಡಿದ ಪ್ರಕರಣದಲ್ಲಿ ಆರೋಪಿಯಾಗಿರುವ ಪುತ್ರನಿಂದ ಪಕ್ಷಕ್ಕೆ ತೀವ್ರ ಮುಜುಗರ ಉಂಟಾದ ಹಿನ್ನೆಲೆಯಲ್ಲಿ ಪುತ್ತೂರು ಬಿಜೆಪಿ ನಗರಮಂಡಲದ ಮಾಜಿ ಅಧ್ಯಕ್ಷ ಪಿ.ಜಿ. ಜಗನ್ನಿವಾಸ ರಾವ್ ಅವರಿಗೆ ಶಿಸ್ತು ಕ್ರಮದ ಎಚ್ಚರಿಕೆ ನೀಡಲಾಗಿದ್ದು, “ನಿಮ್ಮ ಮೇಲೆ ಶಿಸ್ತು ಕ್ರಮವನ್ನೇಕೆ ಜರುಗಿಸಬಾರದು?” ಎಂದು ಪ್ರಶ್ನಿಸಿ ಪಕ್ಷದ ಸ್ಥಳೀಯ ಘಟಕವು ಶೋಕಾಸ್ ನೋಟಿಸ್ ಜಾರಿ ಮಾಡಿದೆ ಎಂದು ತಿಳಿದು ಬಂದಿದೆ.

    ಶ್ರೀಕೃಷ್ಣ, ಯುವತಿಯನ್ನು ನಂಬಿಸಿ ವಂಚಿಸಿದ ಬಗ್ಗೆ ಮಾದ್ಯಮಗಳಲ್ಲಿ ಹಾಗೂ ಸಾರ್ವಜನಿಕವಾಗಿ ಆಗುತ್ತಿರುವ ಪ್ರಚಾರದಿಂದ ಪಕ್ಷಕ್ಕೆ ಮುಜುಗರ ಉಂಟಾಗಿದ್ದು ಈ ಘಟನೆ ಬಗ್ಗೆ ಈಗಾಗಲೇ ಸಂತ್ರಸ್ಥೆಯ ಕುಟುಂಬದವರು ನೀವು ನ್ಯಾಯ ಸಮ್ಮತವಾಗಿ ನಡೆದುಕೊಳ್ಳುತ್ತಿಲ್ಲ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪಿ ಜಿ ಜಗನ್ನಿವಾಸ ರಾವ್ ಪಕ್ಷದಲ್ಲಿ ಜವಾಬ್ದಾರಿಯುತವಾಗಿ ನ್ಯಾಯಯುತವಾಗಿ ನಡೆದುಕೊಳ್ಳಬೇಕಾಗಿದ್ದು, ಸಂತ್ರಸ್ಥ ಯುವತಿಗೆ ನ್ಯಾಯ ಒದಗಿಸಿ ಕೊಡಬೇಕಾಗಿದೆ. ಇಲ್ಲದಿದ್ದಲ್ಲಿ ಪಕ್ಷದ ಹಿತದೃಷ್ಟಿಯಿಂದ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ. ಈ ಬಗ್ಗೆ ತಾವು ಉತ್ತರಿಸಬೇಕು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷರ ಸೂಚನೆಯಂತೆ ನಗರ ಮಂಡಲದ ಅಧ್ಯಕ್ಷ ಶಿವಕುಮಾರ್ ಅವರು ಪಿ ಜಿ ಜಗನ್ನಿವಾಸ ರಾವ್ ಅವರಿಗೆ ನೋಟೀಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

  • ಪುತ್ತೂರು: ಅತ್ಯಾಚಾರ, ವಂಚನೆ ಪ್ರಕರಣ- ಆರೋಪಿಗೆ ಸಹಕರಿಸಿದ ಬಿಜೆಪಿ ಮುಖಂಡ ಬಂಧನ

    ಪುತ್ತೂರು: ವಿದ್ಯಾರ್ಥಿನಿಯನ್ನು ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿಯಾಗಿಸಿ, ಬಳಿಕ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡನ ಪುತ್ರ, ಆರೋಪಿ ಶ್ರೀಕೃಷ್ಣ ಜೆ ರಾವ್ ನನ್ನು ಪೊಲೀಸರು ಜು.4ರಂದು ರಾತ್ರಿ ಮೈಸೂರಿನಲ್ಲಿ ಬಂಧಿಸಿದ್ದು, ಜು.5ರಂದು ಸಂಜೆ ಪುತ್ತೂರು ನ್ಯಾಯಾಲಯಕ್ಕೆ ಹಾಜರು ಪಡಿಸಿ, ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

    ಆರೋಪಿ ಪರಾರಿಯಾಗಲು ಸಹಕರಿಸಿದ ಹಿನ್ನಲೆಯಲ್ಲಿ ಆರೋಪಿಯ ತಂದೆ ಪಿಜಿ ಜಗನ್ನಿವಾಸ ರಾವ್ ಎಂಬವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ, ಬಂಧಿಸಿದ್ದರು. ಸಂಜೆ ಮಗನೊಂದಿಗೆ ತಂದೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯ ಪಿ ಜಿ ಜಗನ್ನಿವಾಸ ರಾವ್ ಗೆ ಜಾಮೀನು ಮಂಜೂರು ಮಾಡಿದೆ.

  • ಪುತ್ತೂರು: ಬಿಜೆಪಿ ನಾಯಕನ ಮಗ ಯುವತಿಯ ಗರ್ಭಧಾರಣೆಯ ನಂತರ ನಾಪತ್ತೆ; ತಾಯಿಯಿಂದ ನ್ಯಾಯಕ್ಕಾಗಿ ಮನವಿ

    ಪುತ್ತೂರು, ಜೂನ್ 30, 2025: ಮದುವೆಯ ಭರವಸೆಯೊಂದಿಗೆ ಬಿಜೆಪಿ ನಾಯಕನ ಮಗನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಯುವತಿಯೊಬ್ಬಳು ಇತ್ತೀಚೆಗೆ ಮಗುವಿಗೆ ಜನ್ಮ ನೀಡಿದ ನಂತರ, ಆರೋಪಿಯ ತಂದೆಯಿಂದ ಒತ್ತಡ ಮತ್ತು ಪೊಲೀಸರ ನಿಷ್ಕ್ರಿಯತೆಯ ಆರೋಪದ ಮಧ್ಯೆ ಆರೋಪಿಯು ಪರಾರಿಯಾಗಿದ್ದಾನೆ. ಯುವತಿಯ ತಾಯಿ ತನ್ನ ಮಗಳಿಗೆ ಮತ್ತು ನವಜಾತ ಶಿಶುವಿಗೆ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.

    ಆರೋಪಿ ಕೃಷ್ಣ ಜೆ ರಾವ್, ಬಿಜೆಪಿ ನಾಯಕ ಪಿ ಜಿ ಜಗನ್ನಿವಾಸ ರಾವ್ ಅವರ ಮಗ, ಈಗಲೂ ತಲೆಮರೆಸಿಕೊಂಡಿದ್ದಾನೆ. ಪುತ್ತೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಯುವತಿಯ ತಾಯಿ, ತಮ್ಮ ಮಗಳು ವಿದ್ಯಾರ್ಥಿನಿಯಾಗಿದ್ದಾಗಿನಿಂದ ಕೃಷ್ಣನೊಂದಿಗೆ ಸಂಬಂಧದಲ್ಲಿದ್ದಳು ಎಂದು ಹೇಳಿದ್ದಾರೆ. ಈ ಸಂಬಂಧವು ಮದುವೆಯ ಭರವಸೆಯೊಂದಿಗೆ ದೈಹಿಕವಾಗಿ ಮುಂದುವರೆದಿದೆ. ಆದರೆ, ಯುವತಿಗೆ ಏಳನೇ ತಿಂಗಳ ಗರ್ಭಧಾರಣೆಯಾಗಿದ್ದು ಕುಟುಂಬಕ್ಕೆ ತಿಳಿಯಿತು.

    “ನಾನು ಕೃಷ್ಣನ ತಂದೆಯನ್ನು ಭೇಟಿಯಾದಾಗ, ಅವರು ಮದುವೆಯ ಭರವಸೆ ನೀಡಿದ್ದರು,” ಎಂದು ತಾಯಿ ಹೇಳಿದ್ದಾರೆ. “ಆದರೆ, ಕೃಷ್ಣನೇ ನೇರವಾಗಿ ಕರೆ ಮಾಡಿ, ಮದುವೆಗೆ ಒತ್ತಾಯಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ.”

    ಕುಟುಂಬವು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಮುಂದಾದಾಗ, ಆರೋಪಿಯ ತಂದೆ ಶಾಸಕ ಅಶೋಕ್ ಕುಮಾರ್ ರೈ ಅವರನ್ನು ಫೋನ್ ಮೂಲಕ ಸಂಪರ್ಕಿಸಿದ್ದಾರೆ. ಶಾಸಕರು ದೂರು ದಾಖಲಿಸದಂತೆ ಮನವೊಲಿಸಿದ್ದಾರೆ ಎಂದು ಯುವತಿಯ ತಾಯಿ ಆರೋಪಿಸಿದ್ದಾರೆ. ಮದುವೆ ಆಗಲಿದೆ ಎಂದು ಭರವಸೆ ನೀಡಿ, ಯುವಕನ ಭವಿಷ್ಯದ ಚಿಂತೆಯನ್ನು ಒತ್ತಿಹೇಳಿದ್ದಾರೆ.

    ಜಗನ್ನಿವಾಸ ರಾವ್ ಅವರು ಠಾಣೆಯಲ್ಲಿ ಮದುವೆಗೆ ಒಪ್ಪಿಗೆಯ ಲಿಖಿತ ಭರವಸೆ ನೀಡಿದ್ದಾರೆ. ಆದರೆ, ಜೂನ್ 22 ರಂದು, ಕೃಷ್ಣ 21 ವರ್ಷ ತುಂಬುವ ಒಂದು ದಿನ ಮೊದಲು, ಅವನು ಮದುವೆಯನ್ನು ನಿರಾಕರಿಸಿದ್ದಾನೆ. ಆತನ ತಾಯಿ, “ಮದುವೆ ಎಂದಿಗೂ ಆಗದು, ಕನಸಿನಲ್ಲೂ ಸಹ” ಎಂದು ಹೇಳಿದ್ದಾರೆ ಎಂದು ಆರೋಪಿಸಲಾಗಿದೆ. ಕುಟುಂಬಕ್ಕೆ ಮಗುವಿನ ಗರ್ಭಪಾತಕ್ಕೆ ಹಣವನ್ನೂ ಒಡ್ಡಲಾಗಿತ್ತು, ಆದರೆ ಅವರು ನಿರಾಕರಿಸಿದ್ದಾರೆ.

    ಯುವತಿಯು ಮಗುವಿಗೆ ಜನ್ಮ ನೀಡಿದ್ದಾಳೆ. ಕೃಷ್ಣನೇ ತಂದೆ ಎಂದು ಕುಟುಂಬವು ಸ್ಥಿರವಾಗಿ ನಂಬಿದ್ದು, ಡಿಎನ್‌ಎ ಪರೀಕ್ಷೆಗೆ ಸಿದ್ಧವಾಗಿದೆ. ಆದರೆ, ಜಗನ್ನಿವಾಸ ರಾವ್ ಡಿಎನ್‌ಎ ಪರೀಕ್ಷೆಗೆ ವಿರೋಧ ವ್ಯಕ್ತಪಡಿಸಿ, ಕೃಷ್ಣನು ಮಹಾಲಿಂಗೇಶ್ವರ ದೇವಸ್ಥಾನದ ಮುಂದೆ ಮಗು ತನ್ನದಲ್ಲ ಎಂದು ಪ್ರಮಾಣ ಮಾಡಲಿ ಎಂದು ಸಲಹೆ ನೀಡಿದ್ದಾರೆ. ಮಗುವಿಗೆ ಮೂರು ತಿಂಗಳಾದ ನಂತರ ಕುಟುಂಬವು ಡಿಎನ್‌ಎ ಪರೀಕ್ಷೆಗೆ ಮುಂದಾಗಲಿದೆ.

    ‘ಶಾಸಕ ಅಶೋಕ್ ರೈ, ಬಲಪಂಥೀಯ ನಾಯಕರು ಯಾವುದೇ ಬೆಂಬಲ ನೀಡಲಿಲ್ಲ’

    ಯುವತಿಯ ತಾಯಿ, ಕಾನೂನು ಕ್ರಮಕ್ಕೆ ಮೊದಲು ಪ್ರಯತ್ನಿಸಿದಾಗ ಶಾಸಕ ಅಶೋಕ್ ರೈ ತಡೆದಿದ್ದಾರೆ ಎಂದು ಹೇಳಿದ್ದಾರೆ. ಹಿಂದೂ ನಾಯಕರಾದ ಅರುಣ್ ಕುಮಾರ್ ಪುತಿಲ, ಮುರಳಿಕೃಷ್ಣ ಹಸಂತಡ್ಕ, ಮತ್ತು ಶರಣ್ ಪಂಪ್‌ವೆಲ್ ಅವರಿಂದಲೂ ಯಾವುದೇ ಬೆಂಬಲ ಸಿಗಲಿಲ್ಲ. “ಅರುಣ್ ಪುತಿಲ ಒಡ್ಡಗೊಡ್ಡಲಿಲ್ಲ, ಮುರಳಿಕೃಷ್ಣ ಯುವಕ ಒಪ್ಪುವುದಿಲ್ಲ ಎಂದು ಹೇಳಿದರು, ನಂತರ 10 ಲಕ್ಷ ರೂ.ಗೆ ಗರ್ಭಪಾತಕ್ಕೆ ಸಲಹೆ ನೀಡಿದರು,” ಎಂದು ತಾಯಿ ಆರೋಪಿಸಿದ್ದಾರೆ.

    “ನನ್ನ ಮಗಳು ಬೇರೆ ಸಮುದಾಯದವಳಾಗಿದ್ದರೆ, ಈ ಮದುವೆ ಈಗಾಗಲೇ ಆಗಿರುತ್ತಿತ್ತು,” ಎಂದು ತಾಯಿ, ಯುವತಿಯ ಜಾತಿ ಮತ್ತು ಹಿನ್ನೆಲೆಯಿಂದಾಗಿ ಸ್ಥಳೀಯ ನಾಯಕರು ನಿರಾಸಕ್ತಿ ತೋರಿದ್ದಾರೆ ಎಂದು ಆರೋಪಿಸಿದ್ದಾರೆ.

    ಕೃಷ್ಣ ನಾಪತ್ತೆಯಾಗಿ ಐದು ದಿನಗಳಾದರೂ, ಪೊಲೀಸರು ಇನ್ನೂ ಅವನನ್ನು ಬಂಧಿಸಿಲ್ಲ. ಕುಟುಂಬವು ಪೊಲೀಸ್ ಅಧೀಕ್ಷಕರನ್ನು ಭೇಟಿಯಾಗಿದೆ, ಆದರೆ ಪೊಲೀಸ್ ಇಲಾಖೆ ಮೌನವಾಗಿದೆ ಎಂದು ಅವರ ನಿರಾಶೆಯನ್ನು ವ್ಯಕ್ತಪಡಿಸಿದ್ದಾರೆ.

    ಯುವತಿಯ ತಾಯಿ, ತಮ್ಮ ಮಗಳಿಗೆ ಮತ್ತು ನವಜಾತ ಶಿಶುವಿಗೆ ನ್ಯಾಯಕ್ಕಾಗಿ ಅಧಿಕಾರಿಗಳಿಗೆ ಮತ್ತು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

  • ಬಿಜೆಪಿಯಿಂದ ಶಾಸಕ್ ಶಿವರಾಮ್ ಹೆಬ್ಬಾರ್ ಹಾಗೂ ಎಸ್​ಟಿ ಸೋಮಶೇಖರ್ ಉಚ್ಚಾಟನೆ

    ಬೆಂಗಳೂರು, ಮೇ 27,2025: ಶಾಸಕರಾದ ಶಿವರಾಮ್ ಹೆಬ್ಬಾರ್ ಹಾಗೂ ಎಸ್​ಟಿ ಸೋಮಶೇಖರ್​ಗೆ ಬಿಜೆಪಿ ಹೈಕಮಾಂಡ್ ಶಾಕ್ ನೀಡಿದೆ. ಇಬ್ಬರನ್ನೂ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ. ಇವರು ಬಿಜೆಪಿಯಲ್ಲಿ ಇದ್ದುಕೊಂಡು ಕಾಂಗ್ರೆಸ್ ಜೊತೆ ಹೆಚ್ಚು ಗುರುತಿಸಿಕೊಂಡಿದ್ದರು. ಹೀಗಾಗಿ, ಅವರನ್ನು ಉಚ್ಚಾಟನೆ ಮಾಡುವ ನಿರ್ಧಾರವನ್ನು ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ತೆಗೆದುಕೊಂಡಿದೆ.

    ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರವನ್ನು ಶಿವರಾಮ್ ಹೆಬ್ಬಾರ್ ಪ್ರತಿನಿಧಿಸುತ್ತಿದ್ದಾರೆ. ಬೆಂಗಳೂರಿನ ಯಶವಂತಪುರ ಕ್ಷೇತ್ರದಿಂದ ಎಸ್.ಟಿ.ಸೋಮಶೇಖರ್ ಮೂರನೇ ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ. ಈ ಮೊದಲು ಇಬ್ಬರೂ ಕಾಂಗ್ರೆಸ್​ನಲ್ಲಿ ಗುರುತಿಸಿಕೊಂಡಿದ್ದರು. ಈ ಹಿಂದೆ ಇಬ್ಬರೂ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಿವರಾಮ್ ಹೆಬ್ಬಾರ್ ಅವರು ಕಾರ್ಮಿಕ ಸಚಿವರಾದರೆ, ಸೋಮಶೇಖರ್ ಅವರು ಸಹಕಾರ ಸಚಿವರಾಗಿದ್ದರು.

    2023ರಲ್ಲಿ ಇಬ್ಬರೂ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದು ಬಂದರು. ಆದರೆ, ಈಗ ಶಿವರಾಮ್ ಹೆಬ್ಬಾರ್ ಹಾಗೂ ಸೋಮಶೇಖರ್ ಕಾಂಗ್ರೆಸ್ ಪಕ್ಷದ ಜೊತೆ ಹೆಚ್ಚು ಗುರುತಿಸಿಕೊಳ್ಳುತ್ತಿದ್ದರು. ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಕ್ಕಾಗಿ ಇಬ್ಬರೂ ಉಚ್ಚಾಟನೆ ಮಾಡಿ ಹೈ ಕಮಾಂಡ್ ಆದೇಶ ಹೊರಡಿಸಿದೆ.

  • ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪೊಲೀಸ್ ಆಯಕ್ತರಿಗೆ ಕಾಂಗ್ರೆಸ್ ನಿಂದ ಮನವಿ

    ಮಂಗಳೂರು: ಬಿಜೆಪಿ ಶಾಸಕ ಹರೀಶ್ ಪೂಂಜಾ ಕಾಂಗ್ರೆಸ್ ನಾಯಕರ ವಿರುದ್ಧ ಇಲ್ಲಸಲ್ಲದ ಸುಳ್ಳಾರೋಪ ಹೊರಿಸಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಕೋಮುವಾದಕ್ಕೆ ಪ್ರಯತ್ನಿಸುತ್ತಿದ್ದು, ಇದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸ್ ಆಯಕ್ತರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಪರವಾಗಿ NSUI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಅವರು ಮನವಿ ಸಲ್ಲಿಸಿದರು.

  • ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

    ಮೈಸೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಸಂಘಟನೆಗಳು ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಅಥವಾ ಬದ್ಧತೆಯನ್ನು ಹೊಂದಿಲ್ಲ ಎಂದು ತಿಳಿಸಿದ್ದಾರೆ.

    ಮೈಸೂರಿನ ಸಮೀಪ ಶ್ರೀರಂಗಪಟ್ಟಣ ತಾಲೂಕಿನ ತುಬಿನಕೆರೆ ಹೆಲಿಪ್ಯಾಡ್‌ನಲ್ಲಿ ಮೇ 2 ರಂದು ಪತ್ರಕರ್ತರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಆರ್‌ಎಸ್‌ಎಸ್ ತನ್ನ 100 ವರ್ಷಗಳ ಇತಿಹಾಸದಲ್ಲಿ ಸಾಮಾಜಿಕ ನ್ಯಾಯವನ್ನು ಸತತವಾಗಿ ವಿರೋಧಿಸಿದೆ ಎಂದರು. “ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಆರಂಭಿಸಿದ ಮಿಲ್ಲರ್ ಆಯೋಗದಿಂದ ಹಿಡಿದು, ಆರ್‌ಎಸ್‌ಎಸ್ ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತಲೇ ಬಂದಿದೆ,” ಎಂದು ಅವರು ಹೇಳಿದರು.

    1925 ರಲ್ಲಿ ಸ್ಥಾಪನೆಯಾದ ಆರ್‌ಎಸ್‌ಎಸ್ ತನ್ನ 100 ವರ್ಷಗಳ ಇತಿಹಾಸದಲ್ಲಿ ಮೀಸಲಾತಿಯನ್ನು ಎಂದಿಗೂ ಸ್ವೀಕರಿಸಿಲ್ಲ ಎಂದು ಮುಖ್ಯಮಂತ್ರಿ ಆರೋಪಿಸಿದರು.

    ಕಾಂಗ್ರೆಸ್ ನಾಯಕರ ನಿರಂತರ ಒತ್ತಡದಿಂದಾಗಿ ಬಿಜೆಪಿ ಸರ್ಕಾರ ಜಾತಿ ಗಣತಿಯನ್ನು ಘೋಷಿಸಿತು ಎಂದು ಸಿದ್ದರಾಮಯ್ಯ ಹೇಳಿದರು. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕಳೆದ ಎರಡು ವರ್ಷಗಳಿಂದ ಜಾತಿ ಸಮೀಕ್ಷೆಯನ್ನು ಬಲವಾಗಿ ಒತ್ತಾಯಿಸುತ್ತಿದ್ದಾರೆ, ಜೊತೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಈ ವಿಷಯದ ಬಗ್ಗೆ ಪತ್ರ ಬರೆದಿದ್ದಾರೆ ಎಂದು ಅವರು ತಿಳಿಸಿದರು.

    ಕೇಂದ್ರ ಸರ್ಕಾರವು ಸಾಮಾನ್ಯ ಜನಗಣತಿಯ ಜೊತೆಗೆ ಜಾತಿ ಗಣತಿಯನ್ನು ಘೋಷಿಸಿದ್ದರೂ, ಈ ಕಾರ್ಯಕ್ಕೆ ಸಮಯಮಿತಿಯನ್ನು ನಿಗದಿಪಡಿಸದಿರುವ ಬಗ್ಗೆ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು. ಜಾತಿ ಗಣತಿಯ ಜೊತೆಗೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸಹ ನಡೆಸಬೇಕು ಎಂದು ಅವರು ಒತ್ತಾಯಿಸಿದರು.

    ಮೀಸಲಾತಿಯ ಮೇಲಿನ ಶೇ.50ರ ಮಿತಿಯನ್ನು ತೆಗೆದುಹಾಕಬೇಕು ಎಂದು ಮುಖ್ಯಮಂತ್ರಿ ವಾದಿಸಿದರು. ಈ ಮಿತಿಯಿಂದಾಗಿ, ಜನಸಂಖ್ಯೆಗೆ ಅನುಗುಣವಾಗಿ ಅರ್ಹ ವರ್ಗಗಳಿಗೆ ಮೀಸಲಾತಿ ಒದಗಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು. ಸಮಾನ ಸಮಾಜವನ್ನು ನಿರ್ಮಿಸಲು, ಎಲ್ಲರನ್ನೂ ಸಾಮಾಜಿಕವಾಗಿ, ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಸಬಲೀಕರಣಗೊಳಿಸುವ ಅಗತ್ಯವಿದೆ ಎಂದರು.

    ಖಾಸಗಿ ವಲಯಕ್ಕೂ ಮೀಸಲಾತಿ ವಿಸ್ತರಣೆ

    ಸಿದ್ದರಾಮಯ್ಯ ಅವರು, ಪ್ರಧಾನಮಂತ್ರಿ ಮೋದಿಯವರಿಗೆ ಜಾತಿ ಗಣತಿಗೆ ಸಮಯಮಿತಿ ನಿಗದಿಪಡಿಸುವುದು, ಶೇ.50ರ ಮೀಸಲಾತಿ ಮಿತಿಯನ್ನು ತೆಗೆದುಹಾಕಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು ಮತ್ತು ಖಾಸಗಿ ವಲಯಕ್ಕೆ ಮೀಸಲಾತಿಯನ್ನು ವಿಸ್ತರಿಸುವಂತೆ ಮನವಿ ಮಾಡುವುದಾಗಿ ತಿಳಿಸಿದರು.

    ಒಬಿಸಿ ಉಪವಿಭಾಗೀಕರಣದ ವಿಷಯವನ್ನು ಪರಿಶೀಲಿಸಿ, ಮೀಸಲಾತಿ ಪ್ರಯೋಜನಗಳ ಸಮಾನ ವಿತರಣೆಗೆ ಸಂಬಂಧಿಸಿದಂತೆ ರೋಹಿಣಿ ಆಯೋಗವು ಎರಡು ವರ್ಷಗಳ ಹಿಂದೆ ರಾಷ್ಟ್ರಪತಿಗಳಿಗೆ ವರದಿ ಸಲ್ಲಿಸಿದೆ. ಈ ಶಿಫಾರಸುಗಳನ್ನು ಜಾರಿಗೊಳಿಸಬೇಕೆಂದು ಅವರು ಕೇಂದ್ರಕ್ಕೆ ಒತ್ತಾಯಿಸಿದರು.

    ಮಂಗಳೂರಿನ ಕೊಲೆ ಪ್ರಕರಣದಲ್ಲಿ ಅಸ್ತವ್ಯಸ್ತತೆ

    ಮಂಗಳೂರಿನಲ್ಲಿ ಮೇ 1 ರ ರಾತ್ರಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ ಅವರು ಆರೋಪಿಗಳನ್ನು ತಕ್ಷಣವೇ ಪತ್ತೆಹಚ್ಚಿ, ಬಂಧಿಸಿ, ಕಾನೂನಿನಂತೆ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದರು.

    ಮೇ 1 ರಂದು ಪೊಲೀಸರೊಂದಿಗೆ ಮಾತನಾಡಿದ್ದೇನೆ ಮತ್ತು ಸರ್ಕಾರವು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಅವರನ್ನು ಮಂಗಳೂರಿಗೆ ಕಳುಹಿಸಿದೆ ಎಂದು ಅವರು ತಿಳಿಸಿದರು. ಕೊಲೆಯಾದ ವ್ಯಕ್ತಿ ರೌಡಿಶೀಟರ್ ಆಗಿದ್ದ ಎಂದು ತಿಳಿದುಬಂದಿದ್ದು, ಕೊಲೆಯ ತನಿಖೆ ಪ್ರಗತಿಯಲ್ಲಿದೆ ಎಂದರು. ಯಾವುದೇ ಮಾನವ ಜೀವವು ಮೌಲ್ಯಯುತವಾಗಿದೆ ಎಂದು ಅವರು ಹೇಳಿದರು.

    ಮಂಗಳೂರಿನ ಸುಹಾಸ್ ಶೆಟ್ಟಿ ಕೊಲೆಯ ಸ್ಥಳಕ್ಕೆ ಬಿಜೆಪಿಯ ಭೇಟಿಯ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿ ಯಾವಾಗಲೂ ಇಂತಹ ಘಟನೆಗಳನ್ನು ರಾಜಕೀಯಗೊಳಿಸಲು ಅವಕಾಶಗಳನ್ನು ಹುಡುಕುತ್ತದೆ ಎಂದು ಆರೋಪಿಸಿದರು.

    ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ಕಳವಳ

    ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ, ಭದ್ರತಾ ವೈಫಲ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಪ್ರಧಾನಮಂತ್ರಿಗಳು ಆ ಸ್ಥಳಕ್ಕೆ ಭೇಟಿ ನೀಡದಿರುವುದೇಕೆ ಎಂದು ಪ್ರಶ್ನಿಸಿದರು. ಪಹಲ್ಗಾಮ್‌ಗೆ ಭೇಟಿ ನೀಡಿದ ಒಬ್ಬ ಪಕ್ಷದ ನಾಯಕರಿಂದ ತಿಳಿದಂತೆ, ಅಲ್ಲಿ ಪೊಲೀಸ್ ಅಥವಾ ಭದ್ರತಾ ಸಿಬ್ಬಂದಿ ಇರಲಿಲ್ಲ ಎಂದು ಅವರು ಹೇಳಿದರು. “ಇಷ್ಟೊಂದು ಪ್ರವಾಸಿಗರು ಭೇಟಿ ನೀಡುವ ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಬಾರದೇ?” ಎಂದು ಪ್ರಶ್ನಿಸಿದರು.

    ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಬೆದರಿಕೆ ಕರೆಗಳು ಬಂದಿರುವ ಬಗ್ಗೆ ಪತ್ರಕರ್ತರು ಗಮನ ಸೆಳೆದಾಗ, ಸಿದ್ದರಾಮಯ್ಯ ಅವರೂ ಸಹ ಬೆದರಿಕೆ ಕರೆಗಳನ್ನು ಸ್ವೀಕರಿಸಿದ್ದೇವೆ ಎಂದರು. ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದ್ದು, ಕರೆ ಮಾಡಿದವರನ್ನು ಪತ್ತೆಹಚ್ಚಿ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.