Tag: Drugs

  • ಮಂಗಳೂರಿನಲ್ಲಿ ಡ್ರಗ್ಸ್ ಸಪ್ಲೈ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿ ಅರೆಸ್ಟ್

    ಮಂಗಳೂರು, ಜುಲೈ 12, 2025:  ಮಾದಕ ವಸ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂದ ಮಾಹಿತಿ ಪ್ರಕಾರ ಡ್ರಗ್ಸ್ ಚೈನ್ ಲಿಂಕ್ ಹಿಂದೆ ಮಂಗಳೂರು ಪೊಲೀಸರು ಬಿದ್ದಿದ್ದು, ಇದೀಗ ಮಹಾರಾಷ್ಟ್ರ ಮತ್ತು ಮದ್ಯಪ್ರದೇಶದಿಂದ ಮಾದಕವಸ್ತುಗಳನ್ನು ಖರೀದಿಸಿ ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಯನ್ನು ಅರೆಸ್ಟ್ ಮಾಡಿದ್ದಾರೆ.

    ಬಂಧಿತನನ್ನು ಮೂಲತಃ ಬೀದರ್‌ನ ಪ್ರಸಕ್ತ ಕೋಡಿಪಾಳ್ಯ ನಿವಾಸಿ ಪ್ರಜ್ವಲ್ ಪೀಣ್ಯಾಸ್ ಎಂದು ಗುರುತಿಸಲಾಗಿದೆ. ಜುಲೈ 2 ರಂದು ಮಂಗಳೂರಿನಲ್ಲಿ ದಾಖಲಾಗಿದ್ದ ಮಾದಕವಸ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದುವರಿದ ತನಿಖೆಯ ಭಾಗವಾಗಿ ಈ ಆರೋಪಿ ಅರೆಸ್ಟ್ ಆಗಿದ್ದಾನೆ.

    ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿಗೆ ಮಾದಕವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ 9 ಜನರನ್ನು ಅರೆಸ್ಟ್ ಮಾಡಲಾಗಿದೆ. ಇನ್ನು ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ರಾಜ್ಯದಿಂದ ಮಾದಕ ವಸ್ತುವನ್ನು ಪಡೆದುಕೊಂಡು ಮಂಗಳೂರು ನಗರಕ್ಕೆ ಪೂರೈಕೆ ಮಾಡುತ್ತಿದ್ದವರ ಪೈಕಿ ಪ್ರಮುಖ ಆರೋಪಿ ಪ್ರಜ್ವಲ್ ಪೀಣ್ಯಾಸ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

    ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಅರೆಸ್ಟ್ ಆದ ಆರೋಪಿ ಈ ಹಿಂದೆ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ವೈದ್ಯಕೀಯ ವಿದ್ಯಾರ್ಥಿಯಾಗಿ ವ್ಯಾಸಂಗ ಮಾಡಿದ್ದು, ಆತನ ಮೇಲೆ ಮಂಗಳೂರು ನಗರದ ವಿವಿಧ ಠಾಣೆಗಳಲ್ಲಿ 03 ಮಾದಕ ವಸ್ತು ಮಾರಾಟ ಪ್ರಕರಣಗಳು ದಾಖಲಾಗಿರುತ್ತವೆ.

  • ಕುಂದಾಪುರದಲ್ಲಿ ಡ್ರಗ್ಸ್ ದಂಧೆ : ಇಬ್ಬರ ಬಂಧನ

    ಕುಂದಾಪುರ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡ್ರಗ್ಸ್ ದಂಧೇ ನಡೆಯುತ್ತಿರುವುದು ಬಹಿರಂಗಗೊಂಡಿದೆ. ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಕುಂದಾಪುರ ಪೊಲೀಸರು ವಶಕ್ಕೆ ಪಡೆದು ಲಕ್ಷಾಂತರ ಮೌಲ್ಯದ ಡ್ರಗ್ಸ್ ಹಾಗೂ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮುದಾಸ್ಸಿರ್ (23) ಹಾಗೂ ಉಡುಪಿ ಜಿಲ್ಲೆಯ ಉದ್ಯಾವರ, ಬೋಳಾರಗುಡ್ಡೆಯ ಅಡೆನ್ ಲೋಬೋ (18) ಎಂದು ಗುರುತಿಸಲಾಗಿದೆ.

    ಜೂನ್ 4ರ ಬುಧವಾರ ಸಂಜೆ ಕುಂದಾಪುರ ಕಸಬಾ ಗ್ರಾಮದ ಕೋಡಿ ಚಕ್ರೇಶ್ವರಿ ದೇವಸ್ಥಾನದ ಸಮೀಪ ಇಬ್ಬರು ವ್ಯಕ್ತಿಗಳು ಮಾದಕ ವಸ್ತುವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಕುಂದಾಪುರ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿದಾಗ ಆರೋಪಿಗಳಾದ ಮುದಾಸ್ಸಿರ್ ಹಾಗೂ ಆಡೆನ್ ಲೋಬೋ ಇಬ್ಬರು ಗಿರಾಕಿಗಳಿಗಾಗಿ ಕಾಯುತ್ತಿದ್ದರು. ಪೊಲೀಸರನ್ನು ನೋಡೊದ ಆರೋಪಿಗಳನ್ನು ತಪ್ಪಿಸಿಕೊಳ್ಳಲು ಯತ್ನಿಸಿದಾಗ ಅವರನ್ನು ಬಂಧಿಸಲಾಯಿತು. ಬಳಿಕ ವಿಚಾರಿಸಿದಾಗ ಎಂಡಿಎಂಎ ಎಂಬ ಡ್ರಗ್ಸ್ ಮಾರಾಟ ಮಾಡುತ್ತಿರುವ ಬಗ್ಗೆ ಒಪ್ಪಿಕೊಂಡಿದ್ದಾರೆ.

    ಬಂಧಿತ ಆರೋಪಿಗಳಿಂದ ಅಂದಾಜು ಎರಡು ಲಕ್ಷದ ನಲವತ್ತೊಂಭತ್ತು ಸಾವಿರದ ನಾನೂರ ನಲವತ್ತೊಂಭತ್ತು ರೂಪಾಯಿ ಮೌಲ್ಯದ 124.72 ಗ್ರಾಂ ಎಂಡಿಎಂಎ, ಪಿ. ಒರಾಕಲ್ ಎಂಬ ಹೆಸರಿನ ಪ್ಲಾಸ್ಟೀಕ್ ಬಾಕ್ಸ್, ಒಂಭತ್ತು ಇನ್ಸುಲಿನ್ ಸಿರಿಂಜ್, ENER-MECH ಎಂಬ ಕಪ್ಪು ಬ್ಯಾಗ್, Fresh ಎಂಬ ಪ್ಲಾಸ್ಟೀಕ್ ಬಾಕ್ಸ್, 2 ವೇಯಿಂಗ್ ಮೇಶಿನ್, 20 ಸಣ್ಣ ಸಣ್ಣ ಸ್ಟೀಲ್ ಡಬ್ಬ ಮತ್ತು 2 ಸ್ಟೀಲ್ ಚಮಚ ಇರುವ ಒಂದು ಪ್ಲಾಸ್ಟೀಕ್ ಬಾಕ್ಸ್, 36 ಪ್ಲಾಸ್ಟೀಕ್ ಜಿಪ್ ಲಾಕ್ ಕವರ್, ಒಂದು Allen Solly Exclusive ಮೆಟಲ್ ಬಾಕ್ಸ್, 4540/ ರೂ ನಗದು, 1 ಡ್ರಾಗನ್ ಚೂರಿ, 1 OPPO ಮೊಬೈಲ್, 2 ಸ್ಯಾಮ್ಸಂಗ್ ಮೊಬೈಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಹೆಚ್ಚಿನ ತನಿಖೆ ಆರಂಭಿಸಿದ್ದಾರೆ.

  • ಜಿಲ್ಲೆಯ ಯುವಕರಲ್ಲಿ ಗಾಂಜಾ ಸೇವನೆ ಹೆಚ್ಚಳ, ಮತ್ತೊಬ್ಬ ಯುವಕ ವಶಕ್ಕೆ

    ಉಡುಪಿ, ಮೇ 29, 2025: ಉಡುಪಿ ಜಿಲ್ಲೆಯಲ್ಲಿ ಯುವಕರಲ್ಲಿ ಮಾದಕ ವಸ್ತು ಸೇವನೆಯ ಪ್ರಕರಣಗಳು ಕಳೆದ ಒಂದು ತಿಂಗಳಲ್ಲಿ ಗಣನೀಯವಾಗಿ ಏರಿಕೆಯಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಈ ಹಿನ್ನೆಲೆಯಲ್ಲಿ, ಅಜ್ಜರಕಾಡಿನ ಭುಜಂಗ ಪಾರ್ಕ್‌ನ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆಯ ಆರೋಪದ ಮೇಲೆ 23 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

    ಮೂಡನಿಡಂಬೂರು ಗ್ರಾಮದ ನಿವಾಸಿ ಅಕ್ಷಯ್ (23) ಎಂಬಾತನನ್ನು ಮೇ 28, 2025 ರಂದು ಸಂಜೆ 5:00 ಗಂಟೆ ಸುಮಾರಿಗೆ ಸೆನ್ ಪೊಲೀಸ್ ಠಾಣೆಯ ಪ್ರಭಾರ ನಿರೀಕ್ಷಕ ರಾಮಚಂದ್ರ ನಾಯಕ್ ಅವರು ವಶಕ್ಕೆ ಪಡೆದಿದ್ದಾರೆ. ಆರೋಪಿಯು ಮಾದಕ ವಸ್ತು ಸೇವಿಸಿರುವ ಶಂಕೆಯ ಮೇಲೆ, ಆತನ ಸಮ್ಮತಿಯೊಂದಿಗೆ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಯಿತು. ವೈದ್ಯರ ವರದಿಯ ಪ್ರಕಾರ, ಆರೋಪಿಯು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ.

    ಉಡುಪಿ ಜಿಲ್ಲಾ ಪೊಲೀಸರಿಂದ ಜಾಗೃತಿ ಅಭಿಯಾನ – ಮೇ 15, 2025

    ಈ ಸಂಬಂಧ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಕ್ರಮಾಂಕ 23/2025ರ ಅಡಿಯಲ್ಲಿ ಕಲಂ 27(b) ಎನ್‌.ಡಿ.ಪಿ.ಎಸ್ ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ. ಯುವಕರಲ್ಲಿ ಗಾಂಜಾ ಮತ್ತಿತರ ಮಾದಕ ವಸ್ತುಗಳ ಸೇವನೆಯ ಈ ಚಟುವಟಿಕೆಯು ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದು, ಉಡುಪಿ ಜಿಲ್ಲಾ ಪೊಲೀಸರು ಜಿಲ್ಲೆಯಾದ್ಯಂತ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸುತ್ತಿದ್ದಾರೆ.

    • ಮಾದಕ ವ್ಯಸನದಿಂದ ಮುಕ್ತರಾಗಲು ಸಹಾಯ ಬಯಸುವವರು ರಾಷ್ಟ್ರೀಯ ಟೋಲ್-ಫ್ರೀ ಹೆಲ್ಪ್‌ಲೈನ್ ಸಂಖ್ಯೆ 14446ಗೆ ಸಂಪರ್ಕಿಸಿ ಸಲಹೆ ಪಡೆಯಬಹುದು. – ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ
  • ಬೈಂದೂರು: ಶಿರೂರು ಮಾರ್ಕೆಟ್‌ ಬಳಿ ಗಾಂಜಾ ಸೇವನೆ; ಯುವಕನ ವಿರುದ್ಧ ಪ್ರಕರಣ ದಾಖಲು

    ಬೈಂದೂರು, ಮೇ 17, 2025: ಶಿರೂರು ಮಾರ್ಕೆಟ್‌ನ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿ ಅಮಲಿನ ಸ್ಥಿತಿಯಲ್ಲಿದ್ದ 23 ವರ್ಷದ ಯುವಕನ ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಮೇ 15, 2025 ರಂದು ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ಬೈಂದೂರು ಪೊಲೀಸ್ ಠಾಣೆಯ ಉಪನಿರೀಕ್ಷಕ ತಿಮ್ಮೇಶ್ ಬಿ.ಎನ್. ಅವರಿಗೆ ಶಿರೂರು ಮಾರ್ಕೆಟ್‌ನಲ್ಲಿ ಓರ್ವ ವ್ಯಕ್ತಿ ಅಮಲಿನ ಸ್ಥಿತಿಯಲ್ಲಿ ಕುಳಿತಿರುವ ಬಗ್ಗೆ ಮಾಹಿತಿ ಲಭಿಸಿತು. ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಒಬ್ಬ ವ್ಯಕ್ತಿ ಕುಳಿತಿರುವುದು ಕಂಡುಬಂದಿತು. ಆತನೊಂದಿಗೆ ಮಾತನಾಡಿದಾಗ, ತೊದಲುವ ರೀತಿಯಲ್ಲಿ ಮಾತನಾಡಿದ್ದು, ಅವನು ಯಾವುದೋ ಅಮಲು ಪದಾರ್ಥ ಸೇವಿಸಿರುವ ಶಂಕೆಯಾಯಿತು.

    ಸೂಕ್ಷ್ಮ ಪರಿಶೀಲನೆಯಿಂದ ಆತ ಮಾದಕ ವಸ್ತು ಸೇವಿಸಿರುವ ಅನುಮಾನ ಬಂದಿದ್ದು, ಆತನ ಹೆಸರು ವಿಚಾರಿಸಿದಾಗ ಬಾತ್ಯಾ ಸುಪೇಲ್ (23) ಎಂದು ತಿಳಿಸಿದ. ಆತನನ್ನು ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ವೈದ್ಯಾಧಿಕಾರಿಗಳು ಆತ ಗಾಂಜಾ ಸೇವಿಸಿರುವುದನ್ನು ದೃಢಪಡಿಸಿ ವರದಿ ನೀಡಿದ್ದಾರೆ.

    ಈ ಘಟನೆಯ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 100/2025ರಡಿ ಕಲಂ 27(b) NDPS ರಂತೆ ಪ್ರಕರಣ ದಾಖಲಾಗಿದೆ. ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

    ಕಳೆದ ವಾರ ಶಿರೂರು, ಮಾರ್ವಂತೆ ಮತ್ತು ನೆಜಾರ್ ಪ್ರದೇಶಗಳಲ್ಲಿ ಯುವಕರಲ್ಲಿ ಗಾಂಜಾ ದುರುಪಯೋಗದ ಹಲವು ಪ್ರಕರಣಗಳು ಬೆಳಕಿಗೆ ಬಂದಿವೆ.

    ಮಾದಕ ವಸ್ತು ಸೇವನೆಯ ಸಮಸ್ಯೆಯಿಂದ ಬಿಡುಗಡೆಗೆ ಸಹಾಯ ಬೇಕಿದ್ದರೆ, ಹತ್ತಿರದ ನಶಾ ಮುಕ್ತಿ ಕೇಂದ್ರವನ್ನು ಸಂಪರ್ಕಿಸಿ.

  • ಮರವಂತೆ: ಗಾಂಜಾ ಸೇವನೆ, ಇಬ್ಬರು ಪೊಲೀಸ್ ವಶಕ್ಕೆ

    ಮರವಂತೆ, ಮೇ.10: ಮರವಂತೆ ಕಡಲ ತೀರದಲ್ಲಿ ಗಾಂಜಾ ಸೇವನೆ ಮಾಡಿದ ಇಬ್ಬರು ಯುವಕರ ಮೇಲೆ ಪ್ರಕರಣ ದಾಖಲಾಗಿದೆ.

    10ರಂದು ಬೆಳಿಗ್ಗೆ ಗಂಗೊಳ್ಳಿ ಠಾಣೆ  ಪೊಲೀಸ್ ಉಪನಿರೀಕ್ಷಕರಾದ ಬಸವರಾಜ ಕನಶೆಟ್ಟಿ ಅವರು ರೌಂಡ್ಸ್ ಕರ್ತವ್ಯದಲ್ಲಿರುವಾಗ ಮರವಂತೆ ಗ್ರಾಮದ ಮರವಂತೆ ಬೀಚ್ ಬಳಿ ಇಬ್ಬರು ಯುವಕರು ಗಾಂಜಾ ಸೇವಿಸುತ್ತಿರುವುದಾಗಿ ಮಾಹಿತಿ ಬಂದಂತೆ ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ಇಬ್ಬರೂ ಯುವಕರು ತೊದಲುತ್ತಾ ಮಾತನಾಡುತ್ತಿದ್ದು, ಅಮಲಿನಲ್ಲಿರುವುದು ಕಂಡುಬಂದಿದೆ.

    ಶರ್ಪುದ್ದೀನ್ (22ವ), ಮಹಮ್ಮದ್ ಸುಹೇಬ್ (21ವ) ಈ ಯುವಕರು ಗಾಂಜಾದಂತಹ ಅಮಲು ಪದಾರ್ಥ ಸೇವನೆ ಮಾಡಿರುವ ಬಗ್ಗೆ ಅನುಮಾನ ಬಂದಿದ್ದು ಅವರನ್ನು ಕುಂದಾಪುರ ಶ್ರೀ ಮಾತಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಅವರು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಬಗ್ಗೆ ಗಂಗೊಳ್ಳಿ  ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಉಡುಪಿ: ಗಾಂಜಾ ಸೇವನೆ ಪ್ರಕರಣ; ಯುವಕನ ವಿರುದ್ಧ ಕೇಸ್

    ಉಡುಪಿ, ಮೇ 07, 2025: ಉಡುಪಿ ತಾಲೂಕಿನ ನೇಜಾರು ತೃಪ್ತಿ ಲೇಔಟ್‌ನ ಪೆಟ್ರೋಲ್ ಪಂಪ್ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿರುವ ಶಂಕೆಯ ಮೇಲೆ ಮಹಮ್ಮದ್ ಸಾಲಿಕ್ (19) ಎಂಬ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ, ಗಾಂಜಾ ಸೇವನೆಯ ದೃಢೀಕರಣವಾಗಿದೆ ಎಂದು ವೈದ್ಯಕೀಯ ವರದಿ ತಿಳಿಸಿದೆ.

    ಈ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 16/2025ರ ಅಡಿಯಲ್ಲಿ ಕಲಂ 27(b) NDPS ಕಾಯ್ದೆಯಂತೆ ಪ್ರಕರಣ ದಾಖಲಿಸಲಾಗಿದೆ. ಮುಂದಿನ ತನಿಖೆ ನಡೆಯುತ್ತಿದೆ.