Tag: Farmers

  • ನೀರಾವರಿ ಜಾಕ್ವೆಲ್ ಕಾಮಗಾರಿ ವಿರೋಧಿಸಿ ಪ್ರತಿಭಟನೆ

    ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ 72 ಕೋಟಿ ರೂ. ಅನುದಾನದ ಗುಡೇ ದೇವಸ್ಥಾನ ಏತ ನೀರಾವರಿ ಜಾಕ್ವೆಲ್ ಕಾಮಗಾರಿ ವಿರೋಧಿಸಿ ಗುಡೇ ಮಹಾಲಿಂಗೇಶ್ವರ ಏತನೀರಾವರಿ ಸಂತ್ರಸ್ಥ ರೈತರ ಒಕ್ಕೂಟ ಹೆರಂಜಾಲು, ಹಳಗೇರಿ, ನೂಜಾಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

    ಅವೈಜ್ಞಾನಿಕವಾಗಿರುವ ಈ ಕಾಮಗಾರಿಯನ್ನು ಕೂಡಲೇ ಸ್ಥಳಾಂತರ ಮಾಡ ಬೇಕೆಂದು ಆಗ್ರಹಿಸಿ ಗ್ರಾಮಸ್ಥರು ನೀರಿನ ಕೊಡ ಹಿಡಿದುಕೊಂಡು ಬೈಂದೂರಿನ ಸೇನೇಶ್ವರ ದೇವಸ್ಥಾನದಿಂದ ಆಡಳಿತ ಸೌಧದವರೆಗಿನ ಪ್ರತಿಭಟನಾ ಮೆರವಣಿಗೆ ನಡೆಸಿದರು. ಬೈಂದೂರು ಆಡಳಿತ ಸೌಧದ ಎದುರು ತಹಶೀಲ್ದಾರ್ ಭೀಮಸೇನ ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಲಾಯಿತು