Tag: Karkala

  • ಕಾರ್ಕಳ ಪರಶುರಾಮ ಮೂರ್ತಿ ಕಂಚಿನದ್ದಲ್ಲ: ತನಿಖೆಯಿಂದ ಸಾಬೀತು

    ಉಡುಪಿ, ಜುಲೈ 14, 2025: ಕಾರ್ಕಳ ತಾಲೂಕಿನ ಉಮ್ಮಿಕಲ್ ಬೆಟ್ಟದ ಪರಶು ರಾಮ್ ಥೀಮ್ ಪಾರ್ಕ್‌ನಲ್ಲಿ ಶಿಲ್ಪಿಕೃಷ್ಣ ನಾಯ್ಕ ಹಿತ್ತಾಳೆಯಿಂದ ಪರಶು ರಾಮ ಮೂರ್ತಿ ನಿರ್ಮಿಸಿರುವುದೇ ಹೊರತು ಕಂಚಿನಿಂದ ಅಲ್ಲ ಎಂಬುದು ತಜ್ಞರ ಪರಿಶೀಲನಾ ವರದಿ ಹಾಗೂ ತನಿಖೆಯಿಂದ ಸಾಬೀತಾಗಿದೆ.

    ಶಿಲ್ಪಿ ಕೃಷ್ಣ ನಾಯಕ್ ಕ್ರಿಶ್ ಆರ್ಟ್ ವರ್ಲ್ಡ್ ಎಂಬ ಸಂಸ್ಥೆಯ ಮೂಲಕ ಪರಶುರಾಮ್ ಥೀಮ್ ಪಾರ್ಕ್‌ನಲ್ಲಿ ಕಂಚಿನ ಪರಶುರಾಮ್ ಮೂರ್ತಿಯನ್ನು ಸ್ಥಾಪಿಸಲು ಉಡುಪಿ ನಿರ್ಮಿತಿ ಕೇಂದ್ರದಿಂದ ಹಣ ಪಡೆದು ಕೊಂಡು ಕಾಮಗಾರಿ ನಡೆಸುತ್ತಿದ್ದು, ನಂತರ ಕೃಷ್ಣ ನಾಯ್ಕ ಕಂಚಿನ ಮೂರ್ತಿಯನ್ನು ಮಾಡದೇ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚನೆ ಮಾಡಿರುವುದಾಗಿ 2024ರ ಜೂ.21ರಂದು ಕಾರ್ಕಳದ ಕೃಷ್ಣ ಶೆಟ್ಟಿ ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಈ ಬಗ್ಗೆ ತನಿಖೆ ನಡೆಸಿದ್ದು, ಶಿಲ್ಪಿಕೃಷ್ಣ ನಾಯ್ಕ ಕಂಚಿನ ಲೋಹದಿಂದ ಪರಶುರಾಮ ಮೂರ್ತಿಯ ಬದಲು ಹಿತ್ತಾಳೆ ಲೋಹದಿಂದ ನಿರ್ಮಾಣ ಮಾಡಿರುವುದು ತಜ್ಞರ ಪರಿಶೀಲನಾ ವರದಿ ಹಾಗೂ ತನಿಖೆಯಿಂದ ಸಾಬೀತಾಗಿದೆ. ಅದೇ ರೀತಿ ಉಡುಪಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಹಾಗೂ ಇಂಜಿನಿಯರ್ ಸಚಿನ್ ವೈ.ಕುಮಾರ್ ವರ್ಕ್ ಆರ್ಡರ್‌ನಲ್ಲಿದ್ದ ಷರತ್ತುಗಳನ್ನು ಪಾಲಿಸದೆ, 2023ರ ಅ.12ರಂದು ಪರಶುರಾಮ ಮೂರ್ತಿಯ ಸೊಂಟದಿಂದ ಮೇಲ್ಭಾಗವನ್ನು ಉಮ್ಮಿಕಲ್ ಬೆಟ್ಟದಿಂದ ತೆಗೆದುಕೊಂಡು ಹೋಗಿ ಅಲೆವೂರು ಗ್ರಾಮದ ಪ್ರಗತಿ ನಗರ ಎಂಬಲ್ಲಿರುವ ನಿರ್ಮಿತಿ ಕೇಂದ್ರಕ್ಕೆ ಸಂಬಂಧಿಸಿರುವ ಶೆಡ್‌ನಲ್ಲಿ 2024ರ ಫೆ.25ರ ತನಕ ಇರಿಸಿಕೊಂಡಿದ್ದರು.

    ಆದರೆ ಮೂರ್ತಿಯ ಸೊಂಟದಿಂದ ಮೇಲ್ಭಾಗವನ್ನು ಶಿಲ್ಪಿ ಕೃಷ್ಣ ನಾಯ್ಕಗೆ ಹಸ್ತಾಂತರ ಮಾಡಿದ್ದು, ಆತ ಅದನ್ನು ಬೆಂಗಳೂರಿಗೆ ಸಾಗಾಟ ಮಾಡಿರುವುದಾಗಿ ಅರುಣ್ ಕುಮಾರ್ ತಪ್ಪು ಮಾಹಿತಿಯನ್ನು ನೀಡಿದ್ದಾರೆ. ಈ ಮೂಲಕ ಆರೋಪಿಗಳಾದ ಶಿಲ್ಪಿ ಕೃಷ್ಣ ನಾಯ್ಕ ಉಡುಪಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಹಾಗೂ ಇಂಜಿನಿಯರ್ ಸಚಿನ್ ವೈ.ಕುಮಾರ್ ಅಪರಾಧಿಕ ಒಳಸಂಚು ಮತ್ತು ನಂಬಿಕೆ ದ್ರೋಹ ಮತ್ತು ವಂಚನೆ ಎಸಗಿ, ಸಾಕ್ಷಿ ನಾಶ ಮಾಡಿರುವುದು ಕಂಡುಬಂದಿದೆ. ಅವರ ವಿರುದ್ಧ ಕಲಂ. 420, 409, 201, 120 (ಬಿ) ಜೊತೆಗೆ 34 ಐಪಿಸಿ ಯಂತೆ 1231 ಪುಟಗಳ ದೋಷಾರೋಪಣಾ ಪಟ್ಟಿಯನ್ನು ತಯಾರಿಸಿ ಪೊಲೀಸರು ಕಾರ್ಕಳದ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

  • ಕಾರ್ಕಳ: ಹಾಸ್ಟೆಲ್ ಶೌಚಾಲಯದಲ್ಲಿ ಅಶ್ಲೀಲ, ಕೋಮು ಪ್ರಚೋದನಕಾರಿ ಬರಹ- ವಿದ್ಯಾರ್ಥಿನಿ ಬಂಧನ

    ಕಾರ್ಕಳ, ಜುಲೈ 14, 2025: ಖಾಸಗಿ ಕಾಲೇಜಿನಲ್ಲಿ ನಡೆದ ಘಟನೆಯೊಂದರಲ್ಲಿ, ಕೋಮು ದ್ವೇಷವನ್ನು ಸೃಷ್ಟಿಸುವ ಉದ್ದೇಶದಿಂದ ಹಾಸ್ಟೆಲ್ ಶೌಚಾಲಯದ ಗೋಡೆಯ ಮೇಲೆ ಅಶ್ಲೀಲ ಪದಗಳನ್ನು ಬರೆದ ಆರೋಪದ ಮೇಲೆ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ.

    ಬಂಧಿತಳನ್ನು ಫಾತಿಮಾ ಶಬ್ನಾ (21) ಎಂದು ಗುರುತಿಸಲಾಗಿದೆ, ಈಕೆ ಕಾಲೇಜು ವಿದ್ಯಾರ್ಥಿನಿ.

    ಈ ಘಟನೆ ಮೇ 7, 2025 ರಂದು ಸಂಜೆ 6 ಗಂಟೆ ಸುಮಾರಿಗೆ ನಡೆದಿದ್ದು, ಕೆಲವು ವಿದ್ಯಾರ್ಥಿಗಳು ಹಾಸ್ಟೆಲ್‌ನ ಮೊದಲ ಹಂತದಲ್ಲಿ ಶೌಚಾಲಯದ ಗೋಡೆಯ ಮೇಲೆ ಅಶ್ಲೀಲ ಮತ್ತು ಕೋಮು ಪ್ರಚೋದನಕಾರಿ ಪದಗಳನ್ನು ಬರೆದಿರುವುದನ್ನು ಗಮನಿಸಿದರು. ಇದರ ನಂತರ, ಕಾಲೇಜು ಮುಖ್ಯ ಮಹಿಳಾ ಹಾಸ್ಟೆಲ್‌ನ ವ್ಯವಸ್ಥಾಪಕಿ ಕಾರ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ದೂರಿನ ಆಧಾರದ ಮೇಲೆ, ಪ್ರಕರಣ ದಾಖಲಿಸಲಾಗಿದೆ. ಸಮಗ್ರ ತನಿಖೆಯ ನಂತರ, ಕಾರ್ಕಳ ಗ್ರಾಮೀಣ ಪೊಲೀಸರು ಜುಲೈ 14 ರಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿದ್ದಾರೆ.

    ಅದೇ ದಿನ ವಿದ್ಯಾರ್ಥಿಯನ್ನು ಕಾರ್ಕಳ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.

  • ಕಾರ್ಕಳ: ನಿರ್ಜನ ಪ್ರದೇಶದಲ್ಲಿ ಹಸುವಿನ ತಲೆ, ದೇಹದ ಭಾಗಗಳು ಪತ್ತೆ- ಪ್ರಕರಣ ದಾಖಲು

    ಕಾರ್ಕಳ, ಜುಲೈ 14, 2025: ಇತ್ತೀಚೆಗೆ ಬ್ರಹ್ಮಾವರ ಸಮೀಪದ ಕುಂಜಾಲು ಎಂಬಲ್ಲಿ ದನದ ರುಂಡ ಪತ್ತೆಯಾಗಿದ್ದು ಸಾಕಷ್ಟು ಸುದ್ದಿಯಾಗಿತ್ತು. ಇದೀಗ ಕಾರ್ಕಳ ತಾಲೂಕಿನಲ್ಲೂ ಇಂತಹದ್ದೇ ಪ್ರಕರಣ ಪುನರಾವರ್ತನೆ ಯಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಲೆಬೆಟ್ಟು ಎಂಬಲ್ಲಿ ಹಸುವಿನ ದೇಹದ ಭಾಗಗಳು ಪತ್ತೆಯಾಗಿವೆ.

    ಇಲ್ಲಿನ ಸ್ವರ್ಣಾ ನದಿಯಲ್ಲಿ ತೇಲಿ ಬಂದಿರುವ ಸಾಧ್ಯತೆ ಇದೆ.ಕಾರ್ಕಳ ತಾಲೂಕಿನ ಮಲೆಬೆಟ್ಟು, ದುರ್ಗಾ ಗ್ರಾಮ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕಾರ್ಕಳ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

  • ಉಡುಪಿ: ಗಾಳಿಗೆ ಕಾರ್ಕಳ, ಕುಂದಾಪುರದಲ್ಲಿ ಅಡಿಕೆ ತೋಟಕ್ಕೆ ಹಾನಿ

    ಉಡುಪಿ, ಜುಲೈ 7, 2025: ಭಾರೀ ಮಳೆ, ಗಾಳಿಗೆ ಕಾರ್ಕಳ, ಕುಂದಾಪುರದಲ್ಲಿ ಅಡಿಕೆ ತೋಟಕ್ಕೆ ಹಾನಿಕಳೆದ 24 ಗಂಟೆಗಳಲ್ಲಿ ಮಳೆಯ ಪ್ರಮಾಣದಲ್ಲಿ ಗಣನೀಯ ಇಳಿಮುಖ ಕಂಡು ಬಂದಿದ್ದರೂ, ಆಗಾಗ ಮಳೆಯೊಂದಿಗೆ ಬೀಸುವ ಗಾಳಿಗೆ ಜಿಲ್ಲೆಯಲ್ಲಿ ಮನೆಗಳಿಗೆ ಹಾಗೂ ಸೊತ್ತುಗಳಿಗೆ ಆಗುವ ಹಾನಿ ಹೆಚ್ಚುತ್ತಿದೆ.

    ರವಿವಾರ ಬೀಸಿದ ಗಾಳಿಗೆ ಕಾರ್ಕಳ ಹಾಗೂ ಕುಂದಾಪುರ ತಾಲೂಕುಗಳಲ್ಲಿ ಅನೇಕ ತೋಟಗಾರಿಕಾ ಬೆಳೆಗಳಿಗೆ 3 ಹಾನಿಯುಂಟಾಗಿದ್ದರೆ, ಉಳಿದಂತೆ ಕನಿಷ್ಠ ಆರು ಮನೆಗಳಿಗೆ ಹಾನಿಯುಂಟಾಗಿದ್ದು 3.5 ಲಕ್ಷ ರೂ.ಗಳಿಗೂ ಅಧಿಕ ನಷ್ಟದ ವರದಿಗಳು ಬಂದಿವೆ.ಕಾರ್ಕಳ ತಾಲೂಕು ಈದು ಗ್ರಾಮದ ದಿನೇಶ್ ಹಾಗೂ ಕುಂದಾಪುರ ತಾಲೂಕು ಸೇನಾಪುರದ ಶ್ರೀಧರ ಶೆಟ್ಟಿ ಎಂಬವರ ತೋಟಗಳಿಗೆ ಗಾಳಿಯಿಂದ ಅಪಾರ ಹಾನಿಯಾಗಿದೆ. ತೋಟದ ಅಡಿಕೆ ಮರಗಳು ಧರಾಶಾಯಿಯಾಗಿದ್ದು 50ಸಾವಿರ ರೂ.ಗಳಿಗೂ ಅಧಿಕ ನಷ್ಟದ ಅಂದಾಜು ಮಾಡಲಾಗಿದೆ.

  • ಹಿಂಜಾವೇ ನಾಯಕ ಸತೀಶ್ ಪೂಜಾರಿ ಉಡುಪಿ ಜಿಲ್ಲೆ ಪ್ರವೇಶಿಸದಂತೆ ನಿಷೇಧ: ಜಿಲ್ಲಾಧಿಕಾರಿ ಆದೇಶ

    ಉಡುಪಿ, ಜುಲೈ 6, 2025: ಉಡುಪಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಹಿಂದೂ ಜಾಗರಣ ವೇದಿಕೆಯ ಮುಖಂಡ, ರೌಡಿ ಶೀಟರ್ ಸತೀಶ್ ಪೂಜಾರಿ ದಾವಣಗೆರೆ ಎಂಬಾತನಿಗೆ ಜು.7ರಿಂದ ಸೆ.7 ರವರೆಗೆ 2 ತಿಂಗಳ ಕಾಲ ಉಡುಪಿ ಜಿಲ್ಲೆಯಾದ್ಯಂತ ಪ್ರವೇಶವನ್ನು ನಿರ್ಬಂಧಿಸಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ ಹೊರಡಿಸಿದ್ದಾರೆ.

    ಹಿಂದೂ ಜಾಗರಣ ವೇದಿಕೆ ಉಡುಪಿ ಜಿಲ್ಲೆ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಜು.7ರಂದು ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರತಿಭಟನೆಗೆ ರೌಡಿ ಶೀಟರ್ ಸತೀಶ್ ಪೂಜಾರಿಯನ್ನು ಪ್ರಮುಖ ಭಾಷಣಕಾರನಾಗಿ ಕರೆಸಿ ಸಮಾಜದ ಸ್ವಾಸ್ತ್ಯ ಕದಡುವ ಸಾಧ್ಯತೆ ಇರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ.

    ಅಲ್ಲದೆ ಕಾರ್ಕಳ, ಕುಂದಾಪುರ ತಾಲೂಕುಗಳಲ್ಲಿಯೂ ಮುಂದಿನ ದಿನಗಳಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡು ಅಲ್ಲಿಯೂ ಸತೀಶ ಪೂಜಾರಿಯನ್ನು ಕರೆಸಿ ಕೋಮು ಪ್ರಚೋಚಕ ಭಾಷಣ ಮಾಡಿಸಿ ಗಲಾಬೆ ಎಬ್ಬಿಸುವ ಹುನ್ನಾರ ಮಾಡಿರುವುದು ತಿಳಿದು ಬಂದಿದೆ.

    ಇವರ ಕೋಮು ಪ್ರಚೋದಕ ಭಾಷಣಗಳಿಂದ ಇನ್ನೊಂದು ಸಮುದಾಯದ ಜನರನ್ನು ಕೆರಳಿಸಿ ಶಾಂತಿ ಕದಡುವ ಸಾಧ್ಯತೆಗಳು ಇರುವುದರಿಂದ ಸತೀಶ್ ಪೂಜಾರಿಗೆ ಉಡುಪಿ ಜಿಲ್ಲೆಯಾದ್ಯಂತ ಪ್ರವೇಶವನ್ನು ನಿರ್ಬಂಧಿಸುವಂತೆ ಜಿಲ್ಲಾ ಪೊಲೀಸ್‌ ಅಧೀಕ್ಷಕರು ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಿದ್ದರು.

    ಉಡುಪಿ ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಗಣನೆಗೆ ತೆಗೆದುಕೊಂಡು, ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತಾ ಕ್ರಮವನ್ನು ತೆಗೆದುಕೊಳ್ಳುವುದು ಅತೀ ಅವಶ್ಯಕವಾಗಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಎಡೆಮಾಡಿಕೊಡದಂತೆ ಸೂಕ್ತ ಮುಂಜಾಗೃತಾ ಕ್ರಮ ತೆಗೆದುಕೊಳ್ಳಲು ಎಸ್ಪಿಯ ವರದಿಯನ್ನು ಆಧರಿಸಿ ಮುಂಜಾಗೃತ ಕ್ರಮವಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ಆದೇಶ ಹೊರಡಿಸಿದ್ದಾರೆ.

    ಈತನ ವಿರುದ್ಧ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 19 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

  • ಉಡುಪಿ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷನ ಆಡಿಯೋ ವೈರಲ್; ಸುಮೋಟೋ ಪ್ರಕರಣ ದಾಖಲಿಸಿ ಬಂಧಿಸಿ, ಇಲ್ಲವಾದಲ್ಲಿ ಬೃಹತ್ ಪ್ರತಿಭಟನೆ : ಸೂರಜ್ ಶೆಟ್ಟಿ ನಕ್ರೆ ಆಗ್ರಹ

    ಜನಪ್ರತಿನಿಧಿ (ಕಾರ್ಕಳ) : ಕಾರ್ಕಳದ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಸುಹಾಸ್ ಶೆಟ್ಟಿ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ಮಾತನಾಡಿದ ಆಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು ಇದೊಂದು ಅಘಾತಕಾರಿ ಬೆಳವಣಿಗೆಯಾಗಿದೆ, ಪೋಲಿಸ್ ಇಲಾಖೆ ತಕ್ಷಣ ಈತನ ಮೇಲೆ  ಸುಮೋಟೋ ಕೇಸು ದಾಖಲಿಸಿ ತನಿಖೆ ನಡೆಸಬೇಕೆಂದು ಯುವ ಕಾಂಗ್ರೆಸ್ ಆಗ್ರಹಿಸುತ್ತದೆ ಎಂದು ಕಾರ್ಕಳ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸೂರಜ್ ಶೆಟ್ಟಿ ನಕ್ರೆ ಆಗ್ರಹಿಸಿದ್ದಾರೆ.

    ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷನಾಗಿದ್ದು ಕಾರ್ಕಳದ ಪ್ರತಿಷ್ಠಿತ ಕಾಲೇಜೊಂದರಲ್ಲಿ  ಉಪನ್ಯಾಸಕನಾಗಿರುವ ಸುಹಾಸ್ ಶೆಟ್ಟಿ,  ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ಮಾತನಾಡಿ ತಾನು ಹೇಳಿದ ಜಾಗಕ್ಕೆ ಬಾ ಎನ್ನುತ್ತಾ ತನ್ನೊಂದಿಗೆ ಸಹಕರಿಸುವಂತೆ ಪೀಡಿಸಿ ಮಾತನಾಡಿದ ಆಡಿಯೊ ವೈರಲ್ ಆಗುತ್ತಿರುವುದು ಸಭ್ಯ ನಾಗರಿಕರು ತಲೆ ತಗ್ಗಿಸುವಂತಾಗಿದೆ. ವಿದ್ಯಾರ್ಥಿನಿಯರ ಸುರಕ್ಷತೆಯ ದೃಷ್ಟಿಯಿಂದ ಈ ವ್ಯಕ್ತಿಯನ್ನು ಕಾಲೇಜಿನ ಆಡಳಿತ ಮಂಡಳಿ ತಕ್ಷಣ ಈತನ ಉಪನ್ಯಾಸಕ ಹುದ್ದೆಯಿಂದ ವಜಾಗೊಳಿಸಬೇಕು ಹಾಗೂ ಉಡುಪಿ ಜಿಲ್ಲಾ ಬಿಜೆಪಿ ಇಂತಾ ಹೆಣ್ಣುಬಾಕ ವ್ಯಕ್ತಿಯನ್ನು ಹುದ್ದೆಯಿಂದ ಮತ್ತು ಪಕ್ಷದಿಂದ ಉಚ್ಚಾಟಿಸಿ ತನ್ನ ಸಾರ್ವಜನಿಕ ಹಿತಾಸಕ್ತಿಯನ್ನು ಕಾಪಾಡಬೇಕು ಎಂದು ಯುವ ಕಾಂಗ್ರೆಸ್ ಒತ್ತಾಯಿಸುತ್ತದೆ ಎಂದವರು ಹೇಳಿದ್ದಾರೆ.

    ವಿದ್ಯಾರ್ಥಿನಿಯರೊಂದಿಗೆ ಈತನ ವರ್ತನೆ ಅಘಾತಕಾರಿಯಾಗಿದೆ, ಕಾರ್ಕಳದಲ್ಲಿ ಇಷ್ಟರವರೆಗೆ ಶಿಕ್ಷಕರು ಈ ರೀತಿಯ ವರ್ತನೆ ತೋರಿದ ಇತಿಹಾಸವಿಲ್ಲ, ಈತನ ವರ್ತನೆಯಿಂದ ಶಿಕ್ಷಕ ವರ್ಗಕ್ಕೂ ಕಳಂಕವಾಗಿದೆ. ಈ ಹಿಂದೆಯೂ ಈತ ಇಂತದ್ದೇ  ಅಸಭ್ಯ ಚಟುವಟಿಕೆ ನಡೆಸಿದ ಕಾರಣಕ್ಕೆ ಕಾರ್ಕಳದ ಪ್ರತಿಷ್ಠಿತ ಕಾಲೇಜಿನ ಉದ್ಯೋಗದಿಂದ ವಜಾಗೊಂಡಿದ್ದ.  ಹೆಣ್ಣುಮಕ್ಕಳಿಗೆ, ವಿದ್ಯಾರ್ಥಿನಿಯರಿಗೆ ಪೀಡಿಸುವ ಈತನ ಆಡಿಯೊದಿಂದ ಹೆತ್ತವರು ಮತ್ತು ವಿದ್ಯಾರ್ಥಿನಿಯರು ಆತಂಕಕ್ಕೆ ಒಳಗಾಗಿದ್ದು ಈ ರೀತಿಯ  ಅನಾಚಾರದ ಕೆಲಸ ಮಾಡುವ ವ್ಯಕ್ತಿಯನ್ನು  ಬಿಜೆಪಿ ಇನ್ನೂ ಪಕ್ಷದ ಹುದ್ದೆಯಲ್ಲಿ ಮುಂದುವರಿಸಿರುವುದು ಶೋಭೆಯಲ್ಲ,  ಬಿಜೆಪಿಯ ನಾಯಕರು ಇನ್ನಾದರೂ ಎಚ್ವೆತ್ತು ಈತನನ್ನು ಪಕ್ಷದಿಂದ ವಜಾ ಮಾಡಬೇಕು ಮತ್ತು ಸಂಭಂದಪಟ್ಟ ಕಾಲೇಜಿನ ಆಡಳಿತ ಮಂಡಳಿ ಈತನನ್ನು ಉದ್ಯೋಗದಿಂದ ವಜಾ ಮಾಡಬೇಕು ಮತ್ತು ಪೋಲಿಸ್ ಇಲಾಖೆ ಈತನ ವಿರುದ್ದ ಸುಮೋಟೋ ಕೇಸು ದಾಖಲಿಸಿ ಈತನನ್ನು ಬಂಧಿಸಿ ತನಿಖೆ ನಡೆಸಬೇಕು. ಇಂತಾ ಗೋಮುಖ ವ್ಯಾಘ್ರ ಸ್ತ್ರೀ ಪೀಡಕರನ್ನು ಕಾನೂನಿನ ಕುಣಿಕೆಗೆ ಒಪ್ಪಿಸದಿದ್ದರೆ ಹೆಣ್ಣುಮಕ್ಕಳಿಗೆ, ವಿದ್ಯಾರ್ಥಿನಿಯರಿಗೆ ಅಪಾಯವಿದೆ, ಹಾಗಾಗಿ ಈತನ ವಿರುದ್ದ ಪೋಲಿಸ್ ಇಲಾಖೆ ತಕ್ಷಣ ಕೇಸು ದಾಖಲಿಸಿ ಬಂಧನ ಮಾಡಬೇಕು ತಪ್ಪಿದಲ್ಲಿ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಕಾರ್ಕಳ ಯುವ ಕಾಂಗ್ರೆಸ್ ಅಧ್ಯಕ್ಷರಾದ  ಸೂರಜ್ ಶೆಟ್ಟಿ ನಕ್ರೆ ಒತ್ತಾಯಿಸಿದ್ದಾರೆ.

    ಬಿಜೆಪಿ ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷ, ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಸುನೀಲ್ ಕುಮಾರ್ ಅವರ ಆಪ್ತ ಎಂದು ಹೇಳಲಾಗುತ್ತಿರುವ ಸುಹಾಸ್ ಶೆಟ್ಟಿ, ವಿದ್ಯಾರ್ಥಿಯೋರ್ವಳೊಂದಿಗೆ ಫೋನ್ ಸಂಭಾಷಣೆಯಲ್ಲಿ ಅಶ್ಲೀಲವಾಗಿ ಮಾತನಾಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶ ಕೇಳಿ ಬರುತ್ತಿದೆ.

  • One killed, three injured in bus-autorickshaw collision on Karkala-Padubidri Highway

    Karkala: In a tragic incident, one person was killed in a head-on collision between a autorickshaw and a bus on the Karkala-Padubidri highway on Thursday, June 12 morning.

    An accident occurred between a private bus coming from Mangaluru to Karkala and an auto rickshaw near Adve, Kanjarkatte junction. As a result, One died on the spot and two were severely injured in the incident.

    Pratap, a native of North India, died on the spot. The rickshaw driver is seriously injured.

    The victims were immediately rushed to the hospital.

  • ಕಾರ್ಕಳ: ರಾಜ್ಯ ಹೆದ್ದಾರಿಯಲ್ಲಿ ವಾಹನ ಸವಾರರ ಸುರಕ್ಷತೆಗಾಗಿ ಕ್ಯಾಟ್ಸ್ ಐ ಅಳವಡಿಕೆ

    ಕಾರ್ಕಳ, 27 ಮೇ 2025: ಕಾರ್ಕಳ ನಗರ ಠಾಣಾ ವ್ಯಾಪ್ತಿಯ ಕಾರ್ಕಳ-ಉಡುಪಿ ರಾಜ್ಯ ಹೆದ್ದಾರಿಯ ಜೋಡುರಸ್ತೆಯಿಂದ ಬೈಲೂರು ಮಾರ್ಗದವರೆಗಿನ ರಸ್ತೆಯ ಪ್ರಮುಖ ತಿರುವುಗಳು ಮತ್ತು ಒಡ್ಡುರಸ್ತೆಗಳಲ್ಲಿ ವಾಹನ ಸವಾರರ ಸುರಕ್ಷತೆ ಮತ್ತು ಅನುಕೂಲಕ್ಕಾಗಿ ಕ್ಯಾಟ್ಸ್ ಐ (Cats Eye) ಗಳನ್ನು ಅಳವಡಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ.

    ರಸ್ತೆಯ ಇಕ್ಕೆಲದ ಡೀಪ್ ಟರ್ನಿಂಗ್ ಪಾಯಿಂಟ್‌ಗಳಲ್ಲಿ ಈ ಕ್ಯಾಟ್ಸ್ ಐ ಗಳನ್ನು ಸ್ಥಾಪಿಸಲಾಗಿದ್ದು, ರಾತ್ರಿಯ ಸಮಯದಲ್ಲಿ ವಾಹನ ಚಾಲಕರಿಗೆ ರಸ್ತೆಯ ಗೋಚರತೆಯನ್ನು ಹೆಚ್ಚಿಸಿ, ಸುರಕ್ಷಿತ ಚಾಲನೆಗೆ ಸಹಾಯಕವಾಗಲಿದೆ. ಈ ಕ್ರಮವು ರಸ್ತೆ ಸಂಚಾರ ಸುರಕ್ಷತೆಯನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ಒಂದು ಮಹತ್ವದ ಹೆಜ್ಜೆಯಾಗಿದೆ.

  • ಕಾರ್ಕಳ: ಮಟ್ಕಾ ಜೂಜಾಟ ಆರೋಪಿಗಳ ಬಂಧನ; ಸೊತ್ತುಗಳು ವಶಕ್ಕೆ

    ಕಾರ್ಕಳ, ಮೇ 25, 2025: ಕಾರ್ಕಳ ತಾಲೂಕಿನ ಕೆದಿಂಜೆ ಗ್ರಾಮದ ಮಂಜರಪಲ್ಕೆಯ ಶೇಷಗಿರಿ ಎಂಬವರಿಗೆ ಸೇರಿದ ಕಟ್ಟಡದ ಪಕ್ಕದ ಅಂಗಡಿಗಳ ಶೆಡ್‌ನ ಹಿಂಭಾಗದಲ್ಲಿ ಕೆಲವು ವ್ಯಕ್ತಿಗಳು ಸಾರ್ವಜನಿಕರಿಂದ ತಮ್ಮ ಸ್ವಂತ ಲಾಭಕ್ಕಾಗಿ ಮಟ್ಕಾ ಜುಗಾರಿ ಆಟವಾಡಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿಯನ್ನು ಕೆದಿಂಜೆ-ನಂದಳಿಕೆ ಗ್ರಾಮದ ಬೀಟ್ ಕರ್ತವ್ಯದ ಸಿಬ್ಬಂದಿಯಿಂದ ಪಡೆದ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕ ಸುಂದರ್ ಅವರು ತಮ್ಮ ಸಿಬ್ಬಂದಿ ಮತ್ತು ಪಂಚರೊಂದಿಗೆ ದಿನಾಂಕ 25/05/2025 ರಂದು ಮಧ್ಯಾಹ್ನ 1:45 ಗಂಟೆಗೆ ದಾಳಿ ನಡೆಸಿದ್ದಾರೆ.

    ಈ ದಾಳಿಯಲ್ಲಿ ಆಪಾದಿತರಾದ ಸಾಜನ್ ಮತ್ತು ಅಜಿತ್ ಕುಮಾರ್ ಎಂಬಿವರನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿತರ ಬಳಿಯಿಂದ 2 ಖಾಲಿ ಕಾಗದದ ಹಾಳೆಗಳು, ಒಂದು ನಂಬರ್ ಬರೆದ ಕಾಗದದ ಹಾಳೆ, ಅಂಕಿಗಳನ್ನು ಬರೆಯಲು ಇಟ್ಟಿದ್ದ ಬಿಳಿ ಬಣ್ಣದ ಕಾಗದದ ಸಣ್ಣ ಸ್ಲಿಪ್‌ಗಳು, 2 ಪೆನ್‌ಗಳು, 2 ಪ್ಲಾಸ್ಟಿಕ್ ಕುರ್ಚಿಗಳು, ಒಂದು ಮರದ ಟೇಬಲ್ ಹಾಗೂ ಮಟ್ಕಾ ಜುಗಾರಿಗೆ ಬಳಸಲು ತಂದಿದ್ದ 2,930 ರೂಪಾಯಿ ನಗದನ್ನು ಮಹಜರು ಮೂಲಕ ವಶಕ್ಕೆ ಪಡೆಯಲಾಗಿದೆ.

    ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ 78(iii) KP Act & 112(1), R/w 3(5) ಭಾರತೀಯ ನ್ಯಾಯ ಸಂಹಿತೆ 2023 ರ ಅಡಿಯಲ್ಲಿ ಪ್ರಕರಣ ಸಂಖ್ಯೆ 72/2025 ರಂತೆ ದಾಖಲಿಸಲಾಗಿದೆ.

    ತನಿಖೆ ಮುಂದುವರೆದಿದೆ.

  • ಕಾರ್ಕಳ: ಶಸ್ತ್ರಚಿಕಿತ್ಸೆ ವೇಳೆ ಮಹಿಳೆ ಮರಣ; ಆಸ್ಪತ್ರೆ ಎದುರು ಸಂಬಂಧಿಕರಿಂದ ಪ್ರತಿಭಟನೆ

    ಕಾರ್ಕಳ, ಮೇ 15, 2025: ಕಾರ್ಕಳದ ಖಾಸಗಿ ಆಸ್ಪತ್ರೆಯೊಂದರಲ್ಲಿ ಹೊಟ್ಟೆಯಲ್ಲಿ ಗಂಟು ತೆಗೆಯಲು ನಡೆದ ಶಸ್ತ್ರಚಿಕಿತ್ಸೆ ವೇಳೆ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಈ ಘಟನೆಯಿಂದ ಕುಪಿತಗೊಂಡ ಮೃತರ ಸಂಬಂಧಿಕರು ಆಸ್ಪತ್ರೆಯ ಎದುರು ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರ ಮಧ್ಯಪ್ರವೇಶಕ್ಕೆ ಕಾರಣವಾಯಿತು.

    ಈ ಘಟನೆ ಬುಧವಾರ ಸಂಜೆ ನಡೆದಿದೆ. ಮೃತ ಮಹಿಳೆಯನ್ನು ಸಾನೂರಿನ ನಿವಾಸಿ ಜುಬೇದಾ (54) ಎಂದು ಗುರುತಿಸಲಾಗಿದೆ.

    ಆಸ್ಪತ್ರೆಯ ಸಮೀಪದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಜುಬೇದಾ ಅವರು ತೀವ್ರವಾದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ವೈದ್ಯರು ಅವರ ಹೊಟ್ಟೆಯಲ್ಲಿ ಗಂಟು ರೂಪುಗೊಂಡಿರುವ ಶಂಕೆ ವ್ಯಕ್ತಪಡಿಸಿದ್ದರು. ಈ ಗಂಟು ತೆಗೆಯಲು ನಡೆಸಿದ ಶಸ್ತ್ರಚಿಕಿತ್ಸೆಯ ವೇಳೆ ಜುಬೇದಾ ಮೃತಪಟ್ಟಿದ್ದಾರೆ.

    ಜುಬೇದಾ ಅವರ ಸಾವಿನ ಬಳಿಕ, ಕೋಪಗೊಂಡ ಸಂಬಂಧಿಕರು ಮತ್ತು ಸ್ಥಳೀಯ ನಿವಾಸಿಗಳು ಆಸ್ಪತ್ರೆಯ ಎದುರು ಪ್ರತಿಭಟನೆ ನಡೆಸಿ, ಆಸ್ಪತ್ರೆ ಆಡಳಿತದಿಂದ ಉತ್ತರ ಕೋರಿದ್ದಾರೆ.

    ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ, ಕಾರ್ಕಳ ಟೌನ್ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.