Tag: Kollur

  • Udupi: National Green Tribunal Orders Action to Stop River Pollution Near Mookambika Temple

    Udupi, July 13, 2025: The National Green Tribunal (NGT) has ordered action to stop hotels and shops near Mookambika Temple in Kollur from polluting the Agni Theertha and Souparnika rivers with sewage. This decision came after a hearing on July 9.

    Sri Harish Tholar filed a complaint against the Karnataka government, asking to stop the dirty water from going into the rivers. The temple’s Executive Officer reported on December 18, 2024, that an underground drainage (UGD) system is in place in Kollur. This system was set up by the Karnataka Urban Water Supply and Drainage Board (KUWSDB) following a government order on June 26, 2015, costing ₹19.97 crore, paid by the temple. It was completed on June 19, 2020, and has been running since July 1, 2020.

    The UGD system carries sewage from the temple, lodges, schools, and public toilets. However, some houses and shops are not yet connected to it. The Udupi Deputy Commissioner’s report on December 19, 2024, said the temple has permission for a 1.5 MLD Sewage Treatment Plant (STP), but the Karnataka Pollution Control Board (KSPCB) found issues during an inspection on April 25, 2023. The STP was running without proper approval and not using treated water for farming as required.

    The Kollur Gram Panchayat officer said sewage from houses isn’t going into the river, but the UGD system’s technical problems are causing pollution. A joint inspection on June 28, 2024, showed some houses and shops still aren’t connected to the UGD, and their waste is blocking the pipes. Some lodges are also sending sewage into stormwater drains.

    NGT has now asked KSPCB to take action against those polluting the drains. The Udupi Deputy Commissioner must work with other departments to fix the STP and connect all houses and shops to the UGD within four weeks. The next hearing is set for September 3, 2025.

  • ಕೊಲ್ಲೂರಿನಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಜಾಗೃತಿ

    ಕೊಲ್ಲೂರು, ಜೂನ್ 05, 2025: ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಸೇಕ್ರೆಡ್ ಹಾರ್ಟ್ ಇಂಗ್ಲಿಷ್ ಮೀಡಿಯಂ ಸ್ಕೂಲ್‌ಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಕಾನೂನು ಮಾಹಿತಿ, ಸೈಬರ್ ಅಪರಾಧಗಳು, ಸೋಶಿಯಲ್ ಮೀಡಿಯಾ ಸಂಬಂಧಿತ ಅಪರಾಧಗಳು ಮತ್ತು 112 ತುರ್ತು ಸೇವೆಯ ಕುರಿತು ವಿವರವಾಗಿ ತಿಳಿಸಿದರು.

  • ಕೊಲ್ಲೂರು: ಭಾರೀ ಮಳೆಯಿಂದ ಸೌಪರ್ಣಿಕಾ ನದಿಯ ನೀರಿನ ಮಟ್ಟ ಏರಿಕೆ; ಭಕ್ತರಿಗೆ ನದಿಗಿಳಿಯಲು ನಿಷೇಧ

    ಕೊಲ್ಲೂರು, ಮೇ 28, 2025: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಬಳಿಯಿಂದ ಹರಿಯುವ ಸೌಪರ್ಣಿಕಾ ನದಿಯ ನೀರಿನ ಮಟ್ಟ, ಕೊಲ್ಲೂರು ಸುತ್ತಮುತ್ತಲಿನ ಘಟ್ಟ ಪ್ರದೇಶಗಳಲ್ಲಿ ನಿರಂತರ ಭಾರೀ ಮಳೆಯಿಂದಾಗಿ ಗಣನೀಯವಾಗಿ ಏರಿಕೆಯಾಗಿದೆ.

    ಕಳೆದ ಮೂರು ದಿನಗಳಿಂದ ದಾಖಲೆ ಮಳೆಯಿಂದಾಗಿ ಕೊಲ್ಲೂರು ಮತ್ತು ಸುತ್ತಮುತ್ತಲಿನ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ನದಿಯ ನೀರಿನ ಮಟ್ಟ ತೀವ್ರವಾಗಿ ಏರಿರುವುದರಿಂದ, ದೇವಾಲಯದ ಆಡಳಿತ ಮಂಡಳಿಯು ಭಕ್ತರಿಗೆ ಧಾರ್ಮಿಕ ಸ್ನಾನಕ್ಕಾಗಿ ನದಿಯ ದಡಕ್ಕೆ ಇಳಿಯದಂತೆ ನಿಷೇಧಿಸಿದೆ.

    ಈ ಆದೇಶವನ್ನು ದೇವಾಲಯದ ಆಡಳಿತ ಸಮಿತಿಯ ಅಧ್ಯಕ್ಷ ಬಾಬು ಶೆಟ್ಟಿ ಮತ್ತು ಕಾರ್ಯನಿರ್ವಾಹಕ ಅಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಜಾರಿಗೊಳಿಸಿದ್ದಾರೆ.

  • ಕೊಲ್ಲೂರು ಗಂಗೆ ಕೊರಗ ಮನೆ ಧ್ವಂಸ ಪ್ರಕರಣ- ಕುಟುಂಬಕ್ಕೆ 10 ಸೆಂಟ್ಸ್ ಜಾಗ ಮಂಜೂರು: ಡಿಸಿ ಆದೇಶ

    ಕುಂದಾಪುರ, ಮೇ 24: ಕೊಲ್ಲೂರು ಗ್ರಾಮದ ಕಲ್ಯಾಣಿಗುಡ್ಡೆ ಎಂಬಲ್ಲಿ ಎ.17ರಂದು ನಡೆದ ಮನೆ ಧ್ವಂಸ ಪ್ರಕರಣದ ಸಂತ್ರಸ್ತ ಕೊರಗ ಕುಟುಂಬಕ್ಕೆ ಪುನರ್ವಸತಿಗಾಗಿ 10 ಸೆಂಟ್ಸ್ ಜಾಗವನ್ನು ಮಂಜೂರು ಮಾಡಲು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಆದೇಶಿಸಿದ್ದಾರೆ.

    ಕಳೆದ 40ವರ್ಷಗಳಿಂದ ಕಲ್ಯಾಣಿಗುಡೆಯಲ್ಲಿ ವಾಸವಾಗಿದ್ದ ಗಂಗೆ ಕೊರಗ ಅವರ ಮನೆಯನ್ನು ಕೊಲ್ಲೂರು ಶ್ರೀಜಗದಂಭಾ ಸೇವಾ ಟ್ರಸ್ಟ್‌ನವರು ಏಕಾಏಕಿ ನ್ಯಾಯಾಲಯದ ಆದೇಶ ಇದೆ ಎಂದು ಹೇಳಿ ಧ್ವಂಸಗೊಳಿಸಿದ್ದರು. ಇದರ ವಿರುದ್ಧ ಹಾಗೂ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ದಲಿತ ಸಂಘಟನೆಗಳು ಹಾಗೂ ಕೊರಗಾಭಿವೃದ್ಧಿ ಸಂಘಟನೆಗಳು ತೀವ್ರ ಹೋರಾಟ ನಡೆಸಿದ್ದವು. ಈ ಸಂಬಂಧ ಟ್ರಸ್ಟ್ ವಿರುದ್ಧ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು.

    ಆದೇಶದಲ್ಲಿ ಏನಿದೆ?: ಗಂಗೆ ಕೊರಗ ಹಲವು ವರ್ಷಗಳಿಂದ ಮನೆ ಕಟ್ಟಿಕೊಂಡು ಮಕ್ಕಳೊಂದಿಗೆ ವಾಸ ಮಾಡಿಕೊಂಡಿದ್ದು ಅವರ ವಾಸ್ತವ್ಯದ ಮನೆಯನ್ನು ಧ್ವಂಸ ಮಾಡಿರುವುದರಿಂದ ಭೂ ರಹಿತರಾಗಿದ್ದು, ಅವರಿಗೆ ಪುನರ್ ವಸತಿ ಸೌಕರ್ಯ ಕಲ್ಪಿಸಿಕೊಡಲು 10 ಎಕ್ರೆ ಸೆಂಟ್ಸ್ ದರ್ಖಾಸ್ತು ಮಂಜೂರು ಮಾಡುವ ಬಗ್ಗೆ ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರು ಪ್ರಸ್ತಾವನೆಯನ್ನು ಸಲ್ಲಿಸಿದ್ದರು.

    ಅದರಂತೆ ಕರ್ನಾಟಕ ಭೂ ಮಂಜೂರಾತಿ ನಿಯಮಗಳು, 1969 ರ ನಿಯಮ 5(ಎ)ರಡಿ ತಾಲ್ಲೂಕಿನಲ್ಲಿ ಶೇ.50ಕ್ಕಿಂತ ಕಡಿಮೆಯಾಗದ ರೀತಿಯಲ್ಲಿ ಅನುಸೂಚಿತ ಜಾತಿಯ ಮತ್ತು ಅನುಸೂಚಿತ ಬುಡಕಟ್ಟುಗಳಿಗೆ ಭೂಮಿಗಳನ್ನು ಮಂಜೂರಾತಿಗೆ ಮೀಸಲಿಡಲು ಅವಕಾಶ ಕಲ್ಪಿಸಿರುವಂತೆ ವಿಶೇಷ ಪ್ರಕರಣ ಎಂದು ಪರಿಗಣಿಸಿ ಕರ್ನಾಟಕ ಭೂ ಕಂದಾಯ ಮಂಜೂರಾತಿ ನಿಯಮಗಳು, 1969 ರ ನಿಯಮ 12(4) ರಂತೆ ಭೂ ಮೌಲ್ಯವನ್ನು ವಿನಾಯಿತಿಗೊಳಿಸಿ ಷರತ್ತುಗಳಿಗೆ ಒಳಪಟ್ಟು ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ 10 ಸೆಂಟ್ಸ್ ಜಮೀನನ್ನು ಪರಿಶಿಷ್ಟ ಪಂಗಡದ ಗಂಗೆ ಅವರಿಗೆ ಪುನರ್ ವಸತಿ ಸೌಕರ್ಯ ಕಲ್ಪಿಸಲು ಮಂಜೂರು ಮಾಡಿ ಆದೇಶಿಸಿದೆ ಎಂದು ಜಿಲ್ಲಾಧಿಕಾರಿ ಗಳ ಆದೇಶದಲ್ಲಿ ಉಲ್ಲೇಖಿಸಲಾಗಿದೆ

  • ಕೊಲ್ಲೂರು: ಕಾರು-ಮಿನಿ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ, ಒಬ್ಬ ಸಾವು, ಇಬ್ಬರಿಗೆ ಗಾಯ

    ಕೊಲ್ಲೂರು, ಮೇ 21, 2025: ಕುಂದಾಪುರ ತಾಲೂಕಿನ ಇಡೂರು ಕುಂಜಾಡಿ ಗ್ರಾಮದ ಜನ್ನಲ್‌ ಎಂಬಲ್ಲಿ ದಿನಾಂಕ 19/05/2025 ರಂದು ಮಧ್ಯಾಹ್ನ 3:45 ಗಂಟೆಗೆ ಘೋರ ರಸ್ತೆ ಅಪಘಾತವೊಂದು ಸಂಭವಿಸಿದೆ. ಚಿತ್ತೂರು ಕಡೆಯಿಂದ ಕೊಲ್ಲೂರು ಕಡೆಗೆ ಅತಿವೇಗ ಹಾಗೂ ಅಜಾಗರೂಕತೆಯಿಂದ KA-20-N-2119ನೇ ಅಲ್ಟೋ ಕಾರನ್ನು ಚಲಾಯಿಸಿಕೊಂಡು ಬಂದ ಜೋಸ್‌ ಪಿಟಿ ಎಂಬುವವರು, ಜಡ್ಕಲ್‌ ಕಡೆಯಿಂದ ಚಿತ್ತೂರು ಕಡೆಗೆ KA-51-AE-7503ನೇ ಮಿನಿ ಗೂಡ್ಸ್ ವಾಹನವನ್ನು ಚಲಾಯಿಸಿಕೊಂಡು ಹೋಗುತ್ತಿದ್ದ ಶಬರೀಶ (29), ಚಿತ್ತೂರು ಗ್ರಾಮ, ಕುಂದಾಪುರ ಇವರಿಗೆ ಎದುರುಗಡೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.

    ಈ ಡಿಕ್ಕಿಯ ಪರಿಣಾಮ ಶಬರೀಶ ಅವರ ತಲೆಗೆ ರಕ್ತಗಾಯವಾಗಿದ್ದು, ಕಾರಿನ ಚಾಲಕ ಜೋಸ್‌ ಪಿಟಿ ಹಾಗೂ ಕಾರಿನಲ್ಲಿದ್ದ ಮಹಿಳೆಗೂ ರಕ್ತಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣ ಕುಂದಾಪುರದ ಆದರ್ಶ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆಸ್ಪತ್ರೆಯಲ್ಲಿ ಶಬರೀಶ ಅವರಿಗೆ ಚಿಕಿತ್ಸೆ ನೀಡಿ ಒಳರೋಗಿಯಾಗಿ ದಾಖಲಿಸಿಕೊಳ್ಳಲಾಗಿದೆ. ಆದರೆ, ಕಾರಿನ ಚಾಲಕ ಜೋಸ್‌ ಪಿಟಿ ಅವರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಮಹಿಳೆಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಕಳುಹಿಸಲಾಗಿದೆ.

    ಈ ಘಟನೆಯ ಕುರಿತು ಕೊಲ್ಲೂರು ಪೊಲೀಸ್‌ ಠಾಣೆಯಲ್ಲಿ ಅಪರಾಧ ಕ್ರಮಾಂಕ 41/2025ರಂತೆ ಕಲಂ 281, 125(b), 106 BNS ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ.