Tag: results

  • ಕುಂದಾಪುರ ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆ: ಎಸ್ಎಸ್ಎಲ್‌ಸಿ ಶೇ. 99.05 ಫಲಿತಾಂಶ  

    ಅಪ್ಡೇಟ್:

    • ಕುಂದಾಪುರ ಎಜುಕೇಶನ್‌ ಸೊಸೈಟಿ ಪ್ರವರ್ತಿತ ಎಚ್‌.ಎಮ್‌.ಎಮ್‌. ಮತ್ತು ವಿ. ಕೆ. ಆರ್‌. ಶಾಲೆಯ ಎಸೆಸೆಲ್ಸಿ ಪರೀಕ್ಷೆ-1ರ ಮರುಮೌಲ್ಯಮಾಪನದಲ್ಲಿ ಸಾಯಿಸ್ಪರ್ಶ ಕೆ. 625ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ರ್‍ಯಾಂಕ್‌ ಗಳಿಸಿದ್ದಾರೆ.
    • ಈಕೆಗೆ 623 ಅಂಕಗಳು ಬಂದಿದ್ದವು. ಬಿ. ವಿ. ಜಯಸೂರ್ಯ 623 ಅಂಕಗಳೊಂದಿಗೆ 3ನೇ, ಭಕ್ತಿ ಶೆಟ್ಟಿ ಹಾಗೂ ಪ್ರಿಯಾ 622 ಅಂಕಗಳೊಂದಿಗೆ 4 ನೇ, ವಿನ್ಯಾಸ ಅಡಿಗ ಹಾಗೂ ನಿರೀಕ್ಷಾ ಎನ್‌. ಶೆಟ್ಟಿಗಾರ್‌ 621 ಅಂಕಗಳೊಂದಿಗೆ ಐದನೇ, ಸನ್ವಿತ್‌ ಶೆಟ್ಟಿ 620 ಅಂಕಗಳೊಂದಿಗೆ 6ನೇ , ಸಮನ್ವಿ ಎಸ್‌. 618 ಅಂಕಗಳೊಂದಿಗೆ 8 ನೇ, ಮತ್ತು ಅನ್ವಿತ್‌ ಕೆ. 616 ಅಂಕಗಳೊಂದಿಗೆ 10 ನೇ ರ್‍ಯಾಂಕ್‌ ಗಳಿಸಿದ್ದಾರೆ.
    • ಶಾಲೆಗೆ ಒಟ್ಟು ರಾಜ್ಯಮಟ್ಟದ 9 ರ್‍ಯಾಂಕ್‌ಗಳು ಲಭಿಸಿವೆ ಎಂದು ಶಾಲಾ ಅಧ್ಯಕ್ಷ ಹಾಗೂ ಸಂಚಾಲಕ ಬಿ. ಎಂ. ಸುಕುಮಾರ ಶೆಟ್ಟಿ ಮತ್ತು ಕಾರ್ಯದರ್ಶಿ ಕೆ. ಸೀತಾರಾಮ ನಕ್ಕತ್ತಾಯ, ಪ್ರಾಂಶುಪಾಲೆ ಡಾ| ಚಿಂತನಾ ರಾಜೇಶ್‌ ತಿಳಿಸಿದ್ದಾರೆ.

    ಕುಂದಾಪುರ: ಎಜ್ಯುಕೇಶನ್‍ ಸೊಸೈಟಿ ರಿ. ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಈ ಬಾರಿ ಎಸ್. ಎಸ್. ಎಲ್‍. ಸಿ ಪರೀಕ್ಷೆಗೆ 106 ವಿದ್ಯಾರ್ಥಿಗಳು ಹಾಜರಾಗಿದ್ದು, 56 ವಿದ್ಯಾರ್ಥಿಗಳು ವಿಶಿಷ್ಟ ದರ್ಜೆಯಲ್ಲಿ ಮತ್ತು 41 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಶಾಲೆಗೆ ಶೇಕಡಾ 99.05 ಫಲಿತಾಂಶ ಲಭಿಸಿರುತ್ತದೆ.

    ವಿದ್ಯಾರ್ಥಿಗಳಾದ  ಸಾಯಿಸ್ಪರ್ಶ ಕೆ. 623 (99.68%), ಬಿ.ವಿ. ಜಯಸೂರ್ಯ 622 (99.52%), ಪ್ರಿಯಾ 622 (99.52%), ಭಕ್ತಿ ಶೆಟ್ಟಿ 621 (99.36%), ನಿರೀಕ್ಷಾ ಎನ್‌. ಶೆಟ್ಟಿಗಾರ್‌ 621 (99.36%), ಸನ್ವಿತ್‌ ಶೆಟ್ಟಿ 619 (99.04%), ವಿನ್ಯಾಸ್‌ ಅಡಿಗ (619 (99.04%), ಸಮನ್ವಿ ಎಸ್‌ 616 (98.56%) ಅನ್ವಿತ್‌ ಕೆ. 615 (98.405) ಸಿಂಚನಾ ಎಸ್‌. ಶೆಟ್ಟಿ  614( 98.24%)  ನಿಹಾಲ್‌ ಅಮಿನ್‌  610 ( 97.60%) ರವಿನಾ ಬಿ. 610 ( 97.60%)  ಅದ್ವೈತ್‌ ಟಿ 609 (97.44%)  ರಾಘವೇಂದ್ರ  ಅಡಿಗ 609 (97.44%) ಆಶ್ಲೇಷ್‌ ಎನ್‌. 607 (97.12%), ಪ್ರೀತಿ 606 (96.96%) ಅದಿತಿ ಅಡಿಗ 605 (96.80%) ಲಹರಿ 605 (96.80%), ಸುಭಿಕ್ಷಾ 605 (96.80%), ಕೀರ್ತನಾ ವಿ. ಶೆಟ್ಟಿ 604 (96.64%) ಸೃಜನಿ ಎಸ್. 603, ತನ್ಮಯಿ ಹೊಳ್ಳ 603, ಸುಮುಖ 601, ಪೂರ್ವಿಕಾ ರಾವ್‍ 601, ಶ್ರೀನಂದನ್‍ ಉಪಾಧ್ಯಾಯ 599, ವರೇಣ್ಯ ಶರ್ಮಾ ಎನ್‍. ವಿ. 599, ಭುವಿ ಆರ್. ಗಾಣಿಗ 599, ಮನ್ವಿತ್‍ ಜೆ. ಶೆಟ್ಟಿ 598, ರಿತೇಶ್‍ 598, ಐಶಾತುಲ್‍ ಬುಶ್ರಾ 596, ರಿಶಿತಾ ಎಸ್‍. 596, ಬ್ರಾಹ್ಮೀ ಉಡುಪ 594, ಧನ್ಯ ರಾಯ್ಕರ್‍ 594 ಅಂಕ ಗಳಿಸಿದ್ದಾರೆ.  

  • ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ, ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ

    ಬೆಂಗಳೂರು, ಮೇ. 02:ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಮುಕ್ತಾಯಗೊಂಡು, ಇದೀಗ ಮೌಲ್ಯಮಾಪನ ಕೂಡ ಮುಕ್ತಾಯಗೊಂಡಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಿದೆ.

    ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬೆಳಗ್ಗೆ 11.30ಕ್ಕೆ ಸುದ್ದಿಗೋಷ್ಠಿ ನಡೆಸಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಿದ್ದಾರೆ . ಮಧ್ಯಾಹ್ನ 12.30ರ ನಂತರ ವೆಬ್‌ಸೈಟ್‌ನಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಲಭ್ಯವಾಗಲಿದೆ. https://karresults.nic.in/ ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.

    ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ https://kseab.karnataka.gov.in/ ಅಥವಾ https://karresults.nic.in/ ನಲ್ಲಿ ಪ್ರಕಟಿಸಲಿದೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ಫಲಿತಾಂಶ ಪಡೆಯಬಹುದಾಗಿದೆ.

    ದಕ್ಷಿಣ ಕನ್ನಡ ಮತ್ತು ಉಡುಪಿ ಕ್ರಮವಾಗಿ 91.12% ಮತ್ತು 89.96% ಫಲಿತಾಂಶದೊಂದಿಗೆ ರಾಜ್ಯದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದಿದೆ.

    ಮಾರ್ಚ್, ಏಪ್ರಿಲ್ ತಿಂಗಳಲ್ಲಿ ನಡೆಸಲಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 8,96,447 ವಿದ್ಯಾರ್ಥಿಗಳು ಹಾಜರಾಗಿದ್ದರು. 15,881 ಶಾಲೆಗಳ ವಿದ್ಯಾರ್ಥಿಗಳು 2,818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದಾರೆ.

    2024-25 ಸಾಲಿನ ಫಾಲಿತಾಂಶ 65.14% ರೆಗ್ಯುಲರ್ ಫ್ರೆಷೆರ್ಸ್ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಎಲ್ಲಾ ವಿದ್ಯಾರ್ಥಿಗಳು ಸೇರಿ (ಮರು ಪರೀಕ್ಷೆ, ಪ್ರೈವೇಟ್ ) 62.34% ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

    2024-2025 ಸಾಲಿನಲ್ಲಿ 22 ವಿದ್ಯಾರ್ಥಿಗಳು 625/625 ಮಾರ್ಕ್ಸ್ ತಕೊಂಡಿದ್ದಾರೆ.

    ಮರು ಪರೀಕ್ಷಣೆ (re-evaluvation) ಗೆ ಅರ್ಜಿ ಈ ಬಾರಿ android ಆಪ್ ಮೂಲಕ ಸ್ಕ್ಯಾನ್ ಮಾಡಿ ಸಲ್ಲಿಸಬಹುದಾಗಿದೆ.

    ಮರು ಎಕ್ಸಾಮ್ (2nd re-exam) 26-05-2025 – 02-06-2025 ವರೆಗೆ ನಡೆಯಲಿದೆ .

    ಮೂರನೇ ಎಕ್ಸಾಮ್ (3rd re-exam) 23-06-2025 – 03-06-2025 ವರೆಗೆ ನಡೆಯಲಿದೆ ಅಂತ ಮಧು ಬಂಗಾರಪ್ಪ ಪತ್ರಿಕಾಘೋಷ್ಟಿಯೆಲ್ಲಿ ಹೇಳಿದ್ದಾರೆ.

    ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ, ದ್ವಿತೀಯ ಸ್ಥಾನ ಪಡೆದ ಉಡುಪಿ ಜಿಲ್ಲೆ

    625 ಮಾರ್ಕ್ಸ್ ತಕೊಂಡವರು – 22 ವಿದ್ಯಾರ್ಥಿಗಳು