Tag: SDPI

  • ನಾಳೆ ಎಸ್ ಡಿ ಪಿ ಐ ಕಾಪು ಕ್ಷೇತ್ರ ಸಮಿತಿ ವತಿಯಿಂದ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ

    ಕಾಪು ಮೇ 31, 2025: ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ರಕ್ತ ಸಂಗ್ರಹ ನಿಧಿಗಳಲ್ಲಿ ತೀವ್ರ ರಕ್ತದ ಕೊರತೆ ಇರುವುದನ್ನು ಮನಗಂಡು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾಪು ಕ್ಷೇತ್ರ ಸಮಿತಿ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆ ರಕ್ತ ಸಂಗ್ರಹ ನಿಧಿಯ ಸಹಯೋಗದೊಂದಿಗೆ ದಿನಾಂಕ 01/06/2025 ರ ಆದಿತ್ಯವಾರ ಬೆಳಿಗ್ಗೆ 9:00 ಗಂಟೆಯಿಂದ ಮಧ್ಯಾಹ್ನ 1:30 ರ ವರೆಗೆ ಕಾಪುವಿನ ಮಜೂರ್ ಪಂಚಾಯತ್ ಸಭಾಂಗಣದಲ್ಲಿ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿದ್ದೇವೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಾಮಾನ್ಯವಾಗಿ ಉಡುಪಿ ಜಿಲ್ಲೆಯಲ್ಲಿ ಬೇಡಿಕೆಗೆ ತಕ್ಕಹಾಗೆ ರಕ್ತದ ಪೂರೈಕೆಯಾಗುತ್ತಿತ್ತು, ಆದರೆ ಇತ್ತೀಚಿನ ದಿನಗಳಲ್ಲಿ ರಕ್ತದಾನಿಗಳ ಕೊರತೆಯಿಂದಾಗಿ ಬೇಡಿಕೆಯಷ್ಟು ರಕ್ತ ಪೂರೈಕೆಯಾಗುತ್ತಿಲ್ಲ. ಉಡುಪಿ ಜಿಲ್ಲೆಯಲ್ಲಿ ದಿನಂಪ್ರತಿ 40-60 ಯೂನಿಟ್ ರಕ್ತದ ಅವಶ್ಯಕತೆ ಇದ್ದು ಆದರೆ ರಕ್ತಸಂಗ್ರಹ ನಿಧಿಯಲ್ಲಿ ಅಷ್ಟು ಪ್ರಮಾಣದ ರಕ್ತದ ಸಂಗ್ರಹವಿಲ್ಲ. ಇದನ್ನು ಗಮನದಲ್ಲಿಟ್ಟುಕೊಂಡು ಎಸ್ ಡಿ ಪಿ ಐ ಕಾಪು ಕ್ಷೇತ್ರ ಸಮಿತಿ ವತಿಯಿಂದ ನಾಳೆ ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿದ್ದೇವೆ. ಸಾರ್ವಜನಿಕರು ಈ ರಕ್ತದಾನ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ರಕ್ತದ ಕೊರತೆಯನ್ನು ನೀಗಿಸಲು ಕೈಜೋಡಿಸಬೇಕೆಂದು ಎಸ್ ಡಿ ಪಿ ಐ ಕಾಪು ಕ್ಷೇತ್ರ ಸಮಿತಿ ಅಧ್ಯಕ್ಷರಾದ ಸಾದಿಕ್ ಕೆ ಪಿ ಯವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ

  • ಬಂಟ್ವಾಳ: ಅಬ್ದುಲ್ ರಹೀಮ್ ಹತ್ಯೆ: ಕುಟುಂಬಕ್ಕೆ ಭೇಟಿ ನೀಡಿದ ಎಸ್‌ಡಿಪಿಐ; ಸರ್ಕಾರಕ್ಕೆ ಮೂರು ಬೇಡಿಕೆ

    ಮಂಗಳೂರು, ಮೇ 30, 2025: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೊಳತ್ತಮಜಲುವಿನಲ್ಲಿ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾದ ಅಬ್ದುಲ್ ರಹೀಮ್ ಅವರ ಕುಟುಂಬಕ್ಕೆ ಎಸ್‌ಡಿಪಿಐ (ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ) ಕರ್ನಾಟಕ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರು ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರು ಕುಟುಂಬಕ್ಕೆ ಸಾಂತ್ವನ ಹೇಳಿದ್ದು, ರಾಜ್ಯ ಸರ್ಕಾರದಿಂದ ಮೂರು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.

    ಅಬ್ದುಲ್ ಮಜೀದ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿಕೊಂಡು, ಈ ಹತ್ಯೆ ಪ್ರಕರಣದ ತನಿಖೆಗಾಗಿ ಐಪಿಎಸ್ ಅಧಿಕಾರಿಯ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (SIT) ರಚಿಸಬೇಕು ಎಂದು ಒತ್ತಾಯಿಸಿದ್ದಾರೆ. ಜೊತೆಗೆ, ಬಜಪೆ ಕಾರ್ಯಕ್ರಮದಲ್ಲಿ ಈ ಘಟನೆಗೆ ಪ್ರಚೋದನೆ ನೀಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಅಬ್ದುಲ್ ರಹೀಮ್ ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಗಮನಕ್ಕೂ ತಂದಿದ್ದಾರೆ.

    ಇದೇ ಸಂದರ್ಭದಲ್ಲಿ, ಹಂತಕರ ತಂಡದಿಂದ ತಲ್ವಾರ್ ದಾಳಿಗೊಳಗಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖಲಂದರ್ ಶಾಫಿಯನ್ನು ಭೇಟಿ ಮಾಡಿದ ಅಬ್ದುಲ್ ಮಜೀದ್ ಮತ್ತು SDPI ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದಾತ್ ಬಜೆತೂರ್, ಅವರು, ಆತನ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ.

  • ಮಂಗಳೂರು: ಅಮಾಯಕ ಮುಸ್ಲಿಂ ಯುವಕನ ಹತ್ಯೆಗೆ ಸರಕಾರ ಮತ್ತು ಪೊಲೀಸ್ ಇಲಾಖೆ ನೇರ ಹೊಣೆ: ಅನ್ವರ್ ಸಾದತ್ ಎಸ್

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೌಡಿಶೀಟರ್ ಹಾಗೂ ಕೀರ್ತಿ, ಫಾಝಿಲ್ ಹಂತಕ ಸುಹಾಸ್ ಶೆಟ್ಟಿ ಎಂಬಾತನ ಹತ್ಯೆಯ ಪ್ರತಿಕಾರವಾಗಿ ಜಿಲ್ಲೆಯ ವಿವಿಧೆಡೆಗಳಲ್ಲಿ ಹದಿನೈದಕ್ಕೂ ಹೆಚ್ಚಿನ ಕಡೆಗಳಲ್ಲಿ ಅಮಾಯಕ ಮುಸ್ಲಿಮರ ಮೇಲೆ ದಾಳಿಗಳಾಗಿದ್ದು, ಇದೀಗ ಅದರ ಮುಂದುವರಿದ ಭಾಗವಾಗಿ ಬಂಟ್ವಾಳದ ಕೊಳತ್ತಮಜಲು ಎಂಬಲ್ಲಿ ಇಬ್ಬರು ಯುವಕರ ಮೇಲೆ ತಲ್ವಾರ್ ದಾಳಿ ನಡೆಸಿದ್ದಾರೆ.

    ಅದರಲ್ಲಿ ಓರ್ವ ಮೃತಪಟ್ಟಿದ್ದು, ಓರ್ವ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲೆಯಲ್ಲಿ ಪೋಲಿಸ್ ಇಲಾಖೆ ಸಂಪೂರ್ಣವಾಗಿ ಸಂಘಪರಿವಾರದ ಜೊತೆ ಶಾಮೀಲಾಗಿರುವುದೇ ಈ ಎಲ್ಲಾ ಘಟನೆಗಳಿಗೆ ಕಾರಣ. ಮೇ ಒಂದರಂದು ನಡೆದ ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಯ ನಂತರ ಒಂದು ತಿಂಗಳ ಒಳಗೆ ಹದಿನೈದಕ್ಕೂ ಹೆಚ್ಚಿನ ಕಡೆಗಳಲ್ಲಿ ಅಮಾಯಕ ಮುಸ್ಲಿಮರ ಮೇಲೆ ತಲ್ವಾರ್ ದಾಳಿ ಆಗಿದೆ.

    ಬಜರಂಗದಳದ ನಾಯಕರಾದ ಭರತ್ ಕುಮ್ಡೇಲ್, ಶರಣ್ ಪಂಪ್ವೆಲ್, ನರಸಿಂಹ ಮಾಣಿ, ಶ್ರೀಕಾಂತ್ ಶೆಟ್ಟಿ, ಶಿವಾನಂದ ಮೆಂಡನ್ ಸಹಿತ ಹಲವರು ಸುಹಾಸ್ ಶೆಟ್ಟಿ ಹತ್ಯೆಗೆ ನಾವು ಪ್ರತಿಕಾರ ತೀರಿಸುತ್ತೇವೆ ಎಂದು ಹೇಳಿದರೂ ಸಹ ಪೊಲೀಸ್ ಇಲಾಖೆ ಕೇವಲ ಎಫ್ಐಆರ್ ದಾಖಲಿಸಿ ಮೌನವಾಗಿದ್ದಾರೆ.

    ಮುಂದುವರಿದು ಬಜ್ಪೆಯಲ್ಲಿ ಮೇ 25ರಂದು ಶ್ರದ್ಧಾಂಜಲಿ ಸಭೆಯ ಹೆಸರಲ್ಲಿ ಪ್ರತಿಕಾರದ ಹತ್ಯೆಗೆ ಸಂಚು ರೂಪಿಸಲು ಪೋಲಿಸ್ ಇಲಾಖೆ ಅನುಮತಿ ನೀಡಿರುವುದು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗವಾಗಿ ಪ್ರತಿಕಾರದ ಬಗ್ಗೆ ಸಂದೇಶಗಳು ಬರುತ್ತಿದ್ದರೂ ಸಹ ಪೋಲಿಸ್ ಇಲಾಖೆ ಹತ್ಯೆ ನಡೆಯುವವರೆಗೂ ಮೌನ ಸಮ್ಮತಿ ನೀಡಿದೆ.

    ಸುಹಾಸ್ ಶೆಟ್ಟಿ ಹತ್ಯೆಯ ನಂತರ ಗೃಹ ಸಚಿವರು ಜಿಲ್ಲೆಗೆ ಭೇಟಿ ನೀಡಿ, ಜಿಲ್ಲೆಯಲ್ಲಿ Anty communal Force ಸ್ಥಾಪನೆಯ ಬಗ್ಗೆ ಹೇಳಿಕೆ ನೀಡಿ ಹೋಗಿದ್ದಾರೆ. ನಂತರದ ದಿನಗಳಲ್ಲಿ ಸಂಘಪರಿವಾರದ ಅಟ್ಟಹಾಸ ಹೆಚ್ಚಾದರೂ ಸಹ ಗೃಹ ಇಲಾಖೆ ಸಂಪೂರ್ಣವಾಗಿ ಮೌನವಾಗಿರುವುದೇ ಈ ಹತ್ಯೆಗೆ ಕಾರಣ ಎಂದು ಎಸ್‌ಡಿಪಿಐ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಆರೋಪಿಸಿದ್ದಾರೆ.

  • ಬೆಳ್ತಂಗಡಿ: ಎಸ್ ಡಿ ಪಿ ಐ ಯಿಂದ ಮನೆ ಹಸ್ತಾಂತರ

    ಬೆಳ್ತಂಗಡಿ: ಒಂದು ವರ್ಷದ ಹಿಂದೆ ನಿಧಿಯ ವ್ಯವಹಾರದ ಮೋಸಕ್ಕೆ ಬಲಿಯಾಗಿ ತುಮಕೂರಿನಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೊಳಗಾಗಿದ್ದ ಸಾಹುಲ್ ಹಮೀದ್ ಉಜಿರೆ ರವರ ಕುಟುಂಬಕ್ಕೆ ಎಸ್ಡಿಪಿಐ ಬೆಳ್ತಂಗಡಿ ಮತ್ತು ಕುಟುಂಬದ ದಾನಿಗಳ ಸಹಾಯದಿಂದ ನಿರ್ಮಿಸಿರುವ ಮನೆಯನ್ನು ಇಂದು ಹಸ್ತಾಂತರಿಸಲಾಯಿತು.

    ಮನೆ ಹಸ್ತಾಂತರ ಕಾರ್ಯಕ್ರಮದಲ್ಲಿ ಪಕ್ಷದ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು, ಸ್ಥಳೀಯ ಮಸೀದಿ ಖತೀಬರಾದ ಖಾದರ್ ಹಿಕಾಮಿ, ಮಸೀದಿ ಅಧ್ಯಕ್ಷರಾದ ಹುಸೈನ್ ತಂಙಳ್, ಇಂಜಿನಿಯರ್ ಹಮೀದ್, ಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ, ಜಿಲ್ಲಾ ಕಾರ್ಯದರ್ಶಿಗಳಾದ ನವಾಝ್ ಕಟ್ಟೆ, ಅಶ್ರಫ್ ತಲಪಾಡಿ, ಉಜಿರೆ ಬ್ಲಾಕ್ ಸಮಿತಿ ಅಧ್ಯಕ್ಷರಾದ ಮಹಮ್ಮದ್ ಅಲಿ ಕುಂಟಿನಿ ಮತ್ತು ಇತರರು ಉಪಸ್ಥಿತರಿದ್ದರು.

  • ಉಡುಪಿ: ಬಾಡಿಗೆ ನೆಪದಲ್ಲಿ ರಿಕ್ಷಾ ಚಾಲಕನ ಕೊಲೆ ಯತ್ನ, SDPI ಜಿಲ್ಲಾಧ್ಯಕ್ಷರಿಂದ ಕಠಿಣ ಕ್ರಮಕ್ಕೆ ಅಗ್ರಹ

    “ಸುಹಾಸ್ ಶೆಟ್ಟಿ ಕೊಲೆ ನೆಪವನ್ನ ಇಟ್ಟುಕೊಂಡು ಸಂಘಪಾರಿವಾರಾ ಉಡುಪಿ ಜಿಲ್ಲೆಯ ಶಾಂತಿಯನ್ನು ಕಡಡಲು ಪ್ರಯತ್ನಿಸುತ್ತಿದ್ದು, ನಿನ್ನೆ ರಾತ್ರಿ ಅಮಾಯಕ ರಿಕ್ಷಾ ಚಾಲಕಾರೊಬ್ಬರ ಕೊಲೆಗೆ ವಿಫಲ ಯತ್ನ ನಡೆಸಿದ್ದಾರೆ. ಪೊಲೀಸ್ ಇಲಾಖೆ ಈ ಸಂಚಿನ ಹಿಂದೆ ಇರುವ ಕಾಣದ ಕೈಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು“ ಎಂದು ಎಸ್.ಡಿ.ಪಿ.ಐ ಉಡುಪಿ ಜಿಲ್ಲಾಧ್ಯಕ್ಷರು ಆಸೀಫ್ ಕೋಟೇಶ್ವರ ಹೇಳಿದ್ದಾರೆ.

    ಆಟೋ ರಿಕ್ಷಾ ಚಾಲಕನೋರ್ವರಿಗೆ ಕರೆ ಮಾಡಿ ಬಾಡಿಗೆ ಇದೆ ಕರೆಯಿಸಿಕೊಂಡು ದುಷ್ಕರ್ಮಿಗಳು ಕೊಲೆ ಮಾಡಲು ಯತ್ನಿಸಿರುವ ಘಟನೆ ಆತ್ರಾಡಿ ಗ್ಯಾಸ್‌ ಪೆಟ್ರೋಲ್‌ ಬಂಕ್‌ ಬಳಿ ಗುರುವಾರ ರಾತ್ರಿ ನಡೆದಿದೆ.

    ಆಟೋ ರಿಕ್ಷಾ ಚಾಲಕ ಬಡಗಬೆಟ್ಟು ನಿವಾಸಿ ಅಬುಬಕ್ಕರ್‌ (50), ಎನ್ನುವರರಿಗೆ ಅವರ ಪರಿಚಯದ‌ ದಿನೇಶ್ ಎನ್ನುವವರು ಕರೆ ಮಾಡಿ ಮದಗದಿಂದ ಆತ್ರಾಡಿಗೆ ಬಾಡಿಗೆ ಬರಲು ತಿಳಿಸಿದ್ದಾರೆ. ಈ ಹಿನ್ನೆಲೆ ಅಬುಬಕ್ಕರ್‌ ರಿಕ್ಷಾದಲ್ಲಿ ಆತ್ರಾಡಿ ಪೆಟ್ರೋಲ್‌ ಬಂಕ್‌ ಬಳಿ ಮೋಟಾರ್‌ ಸೈಕಲ್‌ ನಲ್ಲಿ ಹಿಂದಿನಿಂದ ಬಂದ ಇಬ್ಬರು ದುಷ್ಕರ್ಮಿಗಳು ರಿಕ್ಷಾ ಹಿಂಬಾಲಿಸಿಕೊಂಡು ಬಂದು ಗಾಡಿಯನ್ನು ನಿಲ್ಲಿಸುವಂತೆ ಅವ್ಯಾಚ್ಯ ಶಬ್ದಗಳಿಂದ ಬೈದಿದ್ದಾರೆ.

    ಈ ವೇಳೆ ಅಬುಬಕ್ಕರ್‌ ಗಾಡಿಯನ್ನು ನಿಲ್ಲಿಸದೇ ಮುಂದೆ ಬಂದು ಶೇಡಿಗುಡ್ಡೆ ಬಳಿ ರಸ್ತೆಯಲ್ಲಿ ಆಟೋವನ್ನು ನಿಲ್ಲಿಸಿ ಓಡಲು ಪ್ರಯತ್ನಿಸಿದ್ದಾರೆ. ಈ ವೇಳೆ ಮೋಟಾರ್‌ ಸೈಕಲ್‌ನಲ್ಲಿದ್ದ ಓರ್ವ ವ್ಯಕ್ತಿ ತನ್ನ ಕೈಯಲ್ಲಿದ್ದ ತಲವಾರಿನಿಂದ ಅಬುಬಕ್ಕರ್‌ ತಲೆಗೆ ಬೀಸಿದ್ದು, ತಲವಾರಿನ ಹೊಡೆತದಿಂದ ಅಬುಬಕ್ಕರ್‌ ತಪ್ಪಿಸಿಕೊಂಡಿದ್ದಾರೆ.

    ಬಜರಂಗದಳ ಕಾರ್ಯಕರ್ತ ಹಾಗೂ ರೌಡಿ ಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಹಿನ್ನಲೆಯೆಲ್ಲಿ ಜಿಲ್ಲೆಯ ಭಾಗಗಳಲ್ಲಿ ಹಲ್ಲೆ ಮತ್ತು ಕೊಲೆ ಯತ್ನ ಸುದ್ದಿ ಬರ್ತಾ ಇವೆ.