Tag: WIM

  • Udupi: Independence Day celebration by Womens’ India Movement

    Udupi, August 17, 2025: The Women India Movement (WIM) Udupi district unit marked the 79th Independence Day on August 15, 2025, with a series of programs under the theme “Women’s Safety is the Measure of Freedom.” Flag-hoisting ceremonies were organized across various locations, including Udupi, Hoode, Adi Udupi, Kandlur, Gangolli, Kapu, Kombagudde, Malpe, Mulur, and Kundapura.

    The events featured educational sessions on “The Role of Women in the Freedom Struggle and the Current Status of Women in India,” highlighting their contributions and challenges. Additionally, sports and competitive activities were held for women and children to foster community engagement and empowerment.

    The programs were attended by key WIM Udupi district leaders, including President Naziya Nasrulla, General Secretary Rahamatunnisa, Vice President Naseem Mubeen, and field committee leaders Haseena Udupi, Farzana Kapu, Naseema Fatima, Nousheen Kandlur, Nasira Kundapur, and Ayisha Nahreen Gangolli, along with other members.

  • ಪುತ್ತೂರು: ಲವ್ ಸೆಕ್ಸ್ ದೋಖಾ ಪ್ರಕರಣದ ಸಂತ್ರಸ್ತೆಯ ಮನೆಗೆ ಭೇಟಿ ನೀಡಿದ ಎಸ್ ಡಿಪಿಐ ಹಾಗೂ ವಿಮೆನ್ ಇಂಡಿಯಾ ಮೂವ್ ಮೆಂಟ್ ನಿಯೋಗ

    ಪುತ್ತೂರು: ಪುತ್ತೂರಿನಲ್ಲಿ ಲವ್ ಸೆಕ್ಸ್ ದೋಖಾ ಪ್ರಕರಣಕ್ಕೆ ಸಂಬಂಧಿಸಿ ಇಂದು ಸಂತ್ರಸ್ತೆಯ ಮನೆಗೆ ಎಸ್ ಡಿಪಿಐ ಹಾಗೂ ವಿಮೆನ್ ಇಂಡಿಯಾ ಮೂವ್ ಮೆಂಟ್ ನಿಯೋಗವು ಭೇಟಿ ನೀಡಿದರು.

    ಈ ವೇಳೆ ಸಂತ್ರಸ್ತೆ ಹಾಗೂ ಮಗುವನ್ನು ನೋಡಿದ ಬಳಿಕ ನಿಮಗೆ ನ್ಯಾಯ ಸಿಗುವ ವರೆಗೂ ನಿಮ್ಮ ಜೊತೆ ಎಸ್ ಡಿಪಿಐ ಇರುವುದಾಗಿ ಸಂತ್ರಸ್ತೆಯ ತಾಯಿಗೆ ಧೈರ್ಯ ಹೇಳಿದರು. ಬಳಿಕ ಮಾಧ್ಯಮದ ಜೊತೆ ಎಸ್ ಡಿಪಿಐ ರಾಜ್ಯ ಉಪಾಧ್ಯಕ್ಷೆ ಶಾಹಿದ ತಸ್ಲೀಮ್ ಅವರು ಮಾತನಾಡಿ ಬೇಟಿ ಬಚಾವೋ ಬೇಟಿ ಪಡಾವೋ ಅಂತೆಲ್ಲ ಹೇಳ್ತಾರೆ. ಆದ್ರೆ ಮಹಿಳೆಗೆ ಅನ್ಯಾವಾದಾಗ ನ್ಯಾಯದ ಪರವಾಗಿ ಇರದೆ ಪ್ರಭಾವಿಗಳ ಪರ ನಿಂತು ಬೆಂಬಲ ನೀಡೋದು ಈಗಿನ ಕೆಲ ವರ್ಷಗಳಿಂದ ನಡೀತಾ ಬರ್ತಾ ಇದೆ. ಆರೋಪಿಗಳ ಪರವಾಗಿ ಬಿಜೆಪಿ ಸಂಘಪರಿವಾರ ನಿಲ್ಲೋದ್ರಿಂದ ಇಂತಹ ಘಟನೆಗಳು ಮರಕಳುಹಿಸುತ್ತಾ ಇದೆ ಎಂದು ಅವರು ಕಿಡಿಕಾರಿದರು.

    ಭೂಮಾತೆ, ಗೋತಾಯಿ, ಮಾತೆಯ ಸಂಸ್ಕೃತಿ ನಮ್ಮದು ಅಂತೆಲ್ಲ ಹೇಳಿ ನೈಜ ಮಾತೆಗೆ ಅನ್ಯಾವಾದಾಗ ಬೆಂಬಲವಾಗಿ ನಿಲ್ಲದೆ, ಪ್ರಭಾವಿಗಳಿಗೆ ಬೆಂಬಲ ನೀಡುತ್ತಾ ಬಂದಿದ್ದಾರೆ. ಎಲ್ಲಿಯವರೆಗೂ ಇದು ಮುಂದುವರಿದಿದೆ ಅಂದ್ರೆ ಸಂತ್ರಸ್ತೆಯ ತಾಯಿ ವಿವಿಧ ಹಿಂದುತ್ವ ನಾಯಕರ ಭೇಟಿ ಮಾಡಿದರೂ ಕೂಡ ಬೆಂಬಲ ಸಿಕ್ಕಿಲ್ಲ. ಕೊನೆಗೆ ಎಸ್ ಡಿಪಿಐ ಸಂತ್ರಸ್ತೆಯ ಪರವಾಗಿ ಪ್ರತಿಭಟಿಸಿದರ ಪರಿಣಾಮ ಎಲ್ಲರೂ ಎಚ್ಚೆತ್ತುಕೊಂಡಿದ್ದಾರೆ.

    ಆದ್ರೆ ಕೆಲವರು ಈ ವಿಚಾರವನ್ನ ರಾಜಕೀಯ ಮೈಲೇಜ್ ಪಡೆಯಲು ಬಂದಿದ್ದಾರೆ. ಎಸ್ ಡಿಪಿಐ ಇಂತಹ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ. ಯಾರಿಗೆ ಅನ್ಯಾಯವಾಗುತ್ತೋ ಅವರ ಪರವಾಗಿ ನಿಲ್ಲುತ್ತೆ ಎಂದು ಹೇಳಿದರು. ಇನ್ನು ಇಂತಹ ಘಟನೆಗಳು ನಡೆದಾಗ ಇಡೀ ಸಮಾಜ ಒಂದಾಗಿ ಯಾರಿಗೆ ಅನ್ಯಾಯ ಆಗಿದೋ ಅವರ ಪರವಾಗಿ ನಿಲ್ಲಬೇಕು. ಬ್ರಾಹ್ಮಣ್ಯವನ್ನ ಸಂರಕ್ಷಿಸಲು ಸಂಘ ಪರಿವಾರ ಮತ್ತು ಬಿಜೆಪಿ ಕೆಲಸ ಮಾಡುತ್ತಿದೆ.

    ಇಲ್ಲಿ ಜಾತಿ, ಧರ್ಮ ನೋಡಿಕೊಂಡು ಮೇಲ್ವರ್ಗಕ್ಕೊಂದು ನ್ಯಾಯ ಕೆಲ ವರ್ಗಕ್ಕೊಂದು ನ್ಯಾಯದ ರೀತಿ ಇದೆ. ಅದು ನಿಲ್ಲಬೇಕು. ಹಿಂದುತ್ವ ಬೇರೆ ಹಿಂದೂ ಧರ್ಮ ಬೇರೆ. ಹಿಂದೂ ಧರ್ಮ ಅಂದ್ರೆ ಸರ್ವೋ ಜನ ಸುಖಿನೋ ಭವಂತೋ, ವಸುದೈವ ಕುಟುಂಬಕಂ ಅಂತ ಹೇಳುವ ಧರ್ಮ. ಅದನ್ನ ಈ ಹಿಂದುತ್ವವಾದಿಗಳು ಜಾತಿ ನೋಡಿಕೊಂಡು ಬ್ರಾಹ್ಮಣ್ಯವನ್ನು ಸಂರಕ್ಷಿಸುವ ಸಲುವಾಗಿ ಈ ರೀತಿ ಮಾಡುತ್ತಾ ಇದ್ದಾರೆ ಎಂದು ಆರೋಪಿಸಿದರು. ನಿಜವಾಗಿ ಈ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆಯಾಗಬೇಕು. ಸಂತ್ರಸ್ತೆಗೆ ನ್ಯಾಯ ಒದಗಿಸಿಕೊಡಬೇಕು. ಇದನ್ನ ರಾಜಕೀಯವಾಗಿ ನೋಡುವುದು ಬೇಡ. ಓರ್ವ ಮಹಿಳೆಗೆ ಆದ ಅನ್ಯಾಯ ಅಂತ ತಿಳಿದುಕೊಂಡು ಎಲ್ಲರೂ ಬೆಂಬಲವಾಗಿ ನಿಂತು ನ್ಯಾಯ ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು.

    ಈ ಸಂದರ್ಭದಲ್ಲಿ ಎಸ್.ಡಿ.ಪಿ.ಐ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ಸದಸ್ಯರಾದ ಹನೀಫ್ ಪುಂಜಾಲಕಟ್ಟೆ, ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಜೊತೆ ಕಾರ್ಯದರ್ಶಿ ರಹಿಮಾನ್ ಪುತ್ತೂರು, ಪುತ್ತೂರು ನಗರಸಭೆ ಸದಸ್ಯೆ ಝುಹರಾ ಬನ್ನೂರು, ವಿಮೆನ್ ಇಂಡಿಯಾ ಮೂವ್ ಮೆಂಟ್ ಮಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷೆ ಝಹನ, ವಿಮ್ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ಸದಸ್ಯೆಯರಾದ ಝೀನತ್ ಬಂಟ್ವಾಳ, ಶಿನೀರ, ಝೈನಬ ಹಾಗೂ ಫೌಝಿಯಾ ಉಪಸ್ಥಿತರಿದ್ದರು.

  • ಬಿಡದಿಯಲ್ಲಿ ಸಾಮೂಹಿಕ ಅತ್ಯಾಚಾರಗೈದು ಕೊಲೆಗೈದ ದಲಿತ ಬಾಲಕಿಗೆ ನ್ಯಾಯ ದೊರಕಲಿ: ವಿಮೆನ್ ಇಂಡಿಯಾ ಮೂವ್ಮೆಂಟ್ ಆಗ್ರಹ

    ರಾಜ್ಯ ರಾಜಧಾನಿಗೆ ತಾಗಿರುವ ಬಿಡದಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಪೋಲೀಸರ ನಿರ್ಲಕ್ಷ್ಯದ ನಡೆಯನ್ನು ವಿರುದ್ಧ ವಿಮೆನ್ ಇಂಡಿಯಾ ಮೂವ್ಮೆಂಟ್ ರಾಜ್ಯ ಸಮಿತಿಯು ತೀವ್ರವಾಗಿ ಖಂಡಿಸಿದೆ .

    ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ವಿಮೆನ್ ಇಂಡಿಯಾ ಮೂವ್ಮೆಂಟ್ ರಾಜ್ಯಾಧ್ಯಕ್ಷೆ ಫಾತಿಮಾ ನಸೀಮಾ , ಇತ್ತೀಚಿಗೆ ರಾಜ್ಯದಲ್ಲಿ ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಮತ್ತು ಹೆಚ್ಚಾಗಿ ಮಹಿಳೆಯರ ಮೇಲೆ ಭೀಕರವಾಗಿ ನಡೆಯುತ್ತಿರುವ ಹಿಂಸಾತ್ಮಕ ಪ್ರಕರಣಗಳನ್ನು ನೋಡುವಾಗ ಸುಸಂಸ್ಕೃತಿ, ನೈತಿಕ ಮೌಲ್ಯಗಳ ತಳಹದಿಯ ಮೇಲೆ ನೆಲೆಗೊಂಡು, ಸುಸಭ್ಯ ಸಮಾಜವಾಗಿ ಗುರಿತಿಸಲ್ಪಡುತ್ತಿದ್ದ ಕರ್ನಾಟಕದ ಕಾನೂನು ಸುವ್ಯವಸ್ಥೆ ಕುಸಿದು ಬಿದ್ದು, ಒಂದು ಅನಾಗರಿಕರ ತಾಣದಂತಾಗಿದೆ ಎಂದು ಹೇಳಿದರು .

    ಜನರು ಸದಾ ಭಯ ಭೀತಿಯಲ್ಲಿ ಬದುಕುವಂತಾಗಿದೆ. ಅತ್ಯಾಚಾರ ನಡೆದರೂ ಪ್ರಕರಣ ದಾಖಲಿಸಲು ಹಿಂದೇಟು ಹಾಕಿದ ಪೋಲೀಸರ ನಡೆ ಪ್ರಶ್ನಿಸಿದರೆ ಪೊಲೀಸರು ಹಲ್ಲೆ ಮಾಡುತ್ತಾರೆ ಎನ್ನುವುದಾದರೆ ಈ ವ್ಯವಸ್ಥೆ ಅತ್ಯಾಚಾರಿಗಳ ರಕ್ಷಣೆಗೆ ನಿಂತಿರುವ ಹಾಗೆ ಭಾಸವಾಗುತ್ತಿದೆ. ಸಮಾಜದಲ್ಲಿ ನ್ಯಾಯ ,ನೀತಿ, ನೈತಿಕತೆ ಸ್ಥಾಪಿಸಲು ಪಣತೊಡಬೇಕಾದ ಆರಕ್ಷಕರು ಭಕ್ಷಕರಾಗಿ ವರ್ತಿಸುತ್ತಿದ್ದಾರೆ.

    ಅತ್ಯಂತ ದಾರುಣವಾಗಿ ಅತ್ಯಾಚಾರಕ್ಕೆ ಒಳಗಾಗಿ ಸಾವನ್ನಪ್ಪಿದ ಬಿಡದಿಯ ಈ 14 ವರ್ಷದ ಮೂಗ ಬಾಲಕಿಗಾಗಿ ಧ್ವನಿಯೆತ್ತಲು ಮಾಧ್ಯಮಗಳಿಗೆ ಸಮಯವೇ ಸಿಕ್ಕಿಲ್ಲ . ಟಿ.ಆರ್.ಪಿ ಗಾಗಿ ಒಂದು ಕ್ಷುಲ್ಲಕ ವಿಚಾರವನ್ನು ಮುಂದಿಟ್ಟುಕೊಂಡು ತಾಸುಗಟ್ಟಲೆ ಕುಳಿತು ಡಿಬೆಟ್ ನಡೆಸುವ ಮಾಧ್ಯಮಗಳು ಈ ಪ್ರಕರಣದ ಕುರಿತು ಚರ್ಚಿಸುವ ಗೋಜಿಗೆ ಹೋಗುವುದಿಲ್ಲ.

    ಸ್ವಘೋಷಿತ ಧರ್ಮ ರಕ್ಷಕರಿಗೆ ಬೀದಿಗಿಳಿದು ಹೋರಾಡಲು ಈ ಮುಗ್ಧ ಹೆಣ್ಣಿನ ಆರ್ತನಾದ ಕೇಳಿಸಲೇ ಇಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

    ಸರ್ಕಾರವು ಅತ್ಯಂತ ಬರ್ಬರವೆನಿಸಿದ ಈ ಅತ್ಯಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಉನ್ನತ ಅಧಿಕಾರಿಗಳ ಅಧೀನತೆಯಲ್ಲಿ ಈ ಪ್ರಕರಣದ ತನಿಖೆ ನಡೆಸಿ, ನಿರ್ಲಕ್ಷ್ಯ ತೋರಿದ ಪೋಲೀಸರ ವಿರುದ್ಧ ಕಾನೂನು ಕ್ರಮ ಜರುಗಿಸಿ ರಾಜ್ಯದಲ್ಲಿ ಇಂತಹ ಪ್ರಕರಣಗಳನ್ನು ನಿಯಂತ್ರಿಸಲು ಅಗತ್ಯ ಕ್ರಮಗಳನ್ನು ಕೈಗೊಂಡು ಹೆಣ್ಣುಮಕ್ಕಳ ಸುರಕ್ಷತೆಯನ್ನು ಖಾತಾರಿಪಡಿಸಬೇಕು ಎಂದು ಅವರು ಆಗ್ರಹಿಸಿದರು.